ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈ ಧರಣಿಯೊಳ್ ಹದಿನಾರು ಸಾವಿರ ಮಂದಿ ಆಳುತ ದ್ವಾರಕೆಯಲ್ಲಿ ವಿನೋದದಿ ಕುಳಿತಿದ್ದ ಹರಿಯು 1 ಅಂಬುಜೋದ್ಭವನ ಅಂಕದಲುದಿಸಿದ ಸುತ ಚೆಂದ ಚೆಂದ ವೀಣೆ ಪಿಡಿದು ಕಂದರ್ಪಪಿತ (ನಲ್ಲಿಗೆ) ನಲಿನಲಿದಾಡುತ ಬಂದ ನಾರಂದ ಹರುಷದಲಿ2 ಬಂದ ನಾರಂದನ ಕಂಡು ಕಮಲನಾಭ ಚೆಂದದಿಂದಲಿ ಅಘ್ರ್ಯ ಪಾದಪೂಜೆಯ ಮಾಡಿ ನಾ- ರಂದಗೆ ಎರಗಿದನಾಗ3 ದೇವಾಧಿದೇವನೆ ದೇವಲೋಕದಿ ಸುತ್ತಿ ಈ ಪಾರಿಜಾತವ ತಂದೆ ದೇವಿ ರುಕ್ಮಿಣಿಗೀಗ ಮುಡಿಸೆಂದು ನಾರಂದ ಸ್ವಾಮಿಯ ಚರಣಕ್ಕರ್ಪಿಸಿದ 4 ತಕ್ಷಣದಿ ಜಗನ್ಮಾತೆ ಮಾಲಕ್ಷುಮಿ ಸಾಕ್ಷಾತ ಶ್ರೀನಾರಾಯಣನು ವಕ್ಷಸ್ಥಳದಲಿ ಹೊಂದಿರುವ ರುಕ್ಮಿಣಿಯನು ಸ್ತೋತ್ರ ಮಾಡಿದನು ನಾರದನು 5 ಕಡಲಶಯನ ಕಡೆಗಣ್ಣ ನೋಟಗಳಿಂದ ಕಡುಮುದ್ದು ಸುರಿವೊ ರುಕ್ಮಿಣಿಯ ಬಡನಡುವಿನ ಭಾಮಿನಿರನ್ನೆ ಬಾರೆಂದು ತೊಡೆಯ ಮ್ಯಾಲಿಟ್ಟ ಶ್ರೀಕೃಷ್ಣ 6 ದುಂಡುಮಲ್ಲಿಗೆ ಗೊಂಡ್ಯ ಚೌರಿ ರಾಗಟೆ ಜಡೆ- ಅಂಗನೆ ರುಗ್ಮಿಯಾಲಿಂಗನೆ ಮಾಡುತ ರಂಗ ತಾ ಮುಡಿಸಿದ ಸತಿಗೆ 7 ಸರಿಸವತೇರ ಬಿಟ್ಟು ಸುರಪಾರಿಜಾತವ ಗರುವಿಕೆಯಿಂದ ನೀ ಮುಡಿದೆ ಹರದಿ ಸತ್ಯಭಾಮೆ ಕೇಳಿ ಮುನಿದರಿನ್ನು ಅರಿಯೆನು ನಾ ಇದಕೆ ಉಪಾಯ 8 ಗಾಡಿಕಾರನು ಕೃಷ್ಣ ಆಡುವೊ ಮಾತನು ಕೇಳಿ ರುಕ್ಮಿಣಿ ನಗುತಿರಲು ಓಡುತ ಬಂದು ನಾರದ ಸತ್ಯಭಾಮೆ- ಗಲ್ಲದ ವಾರ್ತೆಗಳರುಹಿದನು 9 ಅಲ್ಲಿಂದ ದೇವಲೋಕವ ಸುತ್ತಿ ತಂದೇನೆ ಚೆಲ್ವೆನಗೆ ತಕ್ಕ ಕುಸುಮ ಗೊಲ್ಲ ಕೃಷ್ಣನ ಕೈಯಲ್ಲಿ ಕೊಟ್ಟರೆ ತನ್ನ ನಲ್ಲೆ ರುಕ್ಮಿಣಿಗೆ ಮುಡಿಸಿದನು 10 ಕೇಳುತ ಭಾಮೆ ತಲ್ಲಣಿಸಿ ಕೋಪಗಳಿಂದ ಹೇಮಮಾಣಿಕ್ಯದ್ವಜ್ರಾಭರಣ ಹಾರ ಪದಕ ಕಠಾಣಿಮುತ್ತನೆ ಚೆಲ್ಲಿ ಭೂಮಿಲಿ ಬಿದ್ದೊ ್ಹರಳಿದಳು 11 ಮಲ್ಲಿಗೆ ದವನ ಕ್ಯಾದಿಗೆ ಶಾವಂತಿಗೆ ಬಿಟ್ಟು ಒಲ್ಲೆನೆಂದೊರೆಸಿ ಕಸ್ತೂರಿಯ ವಲ್ಲಭನೊಲ್ಲದೀ ಸೊಗಸ್ಯಾತಕೆನುತಲಿ ಗಲ್ಲದ್ವಿಳ್ಯವನುಗುಳಿದಳು 12 ಸರ್ಪನಂದದಿ ಉಸುರ್ಹಾಕುತ ಭಾಮೆ ತಾ ನೇತ್ರದಿ ಜಲವ ಸುರಿಸುತಲಿ ಸರ್ಪಶಯನನೊಲ್ಲದೀ ದೇಹವ್ಯಾಕೆಂದು ಪಟ್ಟೆ ಮಂಚದಲೊರಗಿದಳು 13 ನಿಂತು ನೋಡುತ ಸತ್ಯಭಾಮೆ ಮಾಡುವೊದು ಇ- ನ್ನೆಂತು ಮಾಡಲಿಯಿದಕೆಂದು ಅಂತರಂಗದಲಿ ಯೋಚನೆ ಮಾಡಿ ನಾರಂದ ಶ್ರೀ- ಕಾಂತನ ಮನೆಮಾರ್ಗ ಹಿಡಿದ 14 ತಿರುಗಿ ಬಂದ್ಹರಿಯ ಮುಂದರುಹಿದ ನಾರಂದ ತೊರೆವೋಳು ತನ್ನ ಪ್ರಾಣವನು ಮರುಗುತ ಸೊರಗಿ ಬಿದ್ದಿರುವೊ ಭಾಮೆಯ ನೋಡಿ ಕರುಣವಿಲ್ಲೇನೊ ಶ್ರೀ ಕೃಷ್ಣ 15 ಮುನಿಯ ಮಾತನು ಕೇಳಿ ಮುಗುಳು ನಗೆಯ ನಕ್ಕು ಪರಿ ಬವಣೆಗೆ ಒಳಗಾದೆ ಧರೆಯ ಒಳಗೆ ಇಬ್ಬರ್ಹೆಂಡರಾಳುವೋರಿನ್ನು ಪರಮ ಮೂರ್ಖರು ಅವರೆಂದ 16 ಹೊದ್ದ ಪೀತಾಂಬರ ಅಲೆಯುತ ಶ್ರೀಕೃಷ್ಣ ಹದ್ದನೇರದೆ ನಡೆಯುತಲಿ ಮುದ್ದು ರುಕ್ಮಿಣಿಯ ಮುಂದಕೆ ಕರೆದ್ಹೇಳದೆ ಎದ್ದು ಬಂದನು ಭಾಮೆಮನೆಗೆ 17 ಅರ್ಕನಂತ್ಹೊಳೆಯುತ ಹೊಕ್ಕ ತನ್ನರಮನೆ ಕಕ್ಕಬಿಕ್ಕ್ಯಾಗಿ ನೋಡುತಲಿ ದಿಕ್ಕು ದಿಕ್ಕಿಗೆ ಬಿದ್ದಾಭರಣವಾರಿಸಿ ರತ್ನ ದೆಕ್ಕಿಲೇ(?) ಬಂದು ತಾ ಕುಳಿತ 18 ಮಿಂಚು ಸೂರ್ಯಗೆ ಮಿಗಿಲಾಗಿದ್ದ ಮುಖ ಬಾಡಿ ಸಂಪಿಗೆ ಸರವ ಈಡ್ಯಾಡಿ ಚಿಂತೆಮಾಡುವರೆ ಚಿನ್ನದ ಗೊಂಬೆ ಏಳೆಂದು ಮಂಚದ ಮ್ಯಾಲೆ ತಾ ಕುಳಿತ 19 ಬೆವರಿದ್ದ ಮುಖವ ಮುಂಜೆರಗಿಲಿಂದೊರೆಸುತ ಹ- ರವಿದ ಹಾರ ಹಾಕುತಲಿ ಪರಮ ಪ್ರೀತಿಲಿ ತನ್ನ ಕರಗಳಿಂದ್ಹಿಡಿದೆತ್ತೆ- ನ್ನರಗಿಳಿ ಏಳೆಂದೆಬ್ಬಿಸಿದ 20 ಸಿಟ್ಟಿಲಿಂದೆದ್ದು ಶ್ರೀ ಕೃಷ್ಣನ ಒಳೆಯಿಕ್ಕೆ ಬಿಟ್ಟವರಾರು ಈಗೆನುತ ದೃಷ್ಟಿ ತೆಗೆದು ಕೋಟಿಸೂರ್ಯ ಪ್ರಕಾಶನ ಇ- ಕ್ಕದ್ಹಾಗೆವೆಯ ನೋಡಿದಳು 21 ಇಷ್ಟು ಕ್ರೋಧಗಳ್ಯಾತಕೀ ಚಾಡಿ ನಾರಂದ ಹಚ್ಚಿ ಹೋದನೆ ಕದನವನು <ಈಔಓಖಿ size=
--------------
ಹರಪನಹಳ್ಳಿಭೀಮವ್ವ
ನಾರದ ಕೊರವಂಜಿ ಜಯ ಜಯ ದಯಾಕರನೆ ಹಯವದನ ಭಯಹರನೆ ಜಯ ಶೀಲಸಾಧ್ವರನೆ ಜಯ ದೀನೋದ್ಧರನೆ ಪ್ರಿಯಜನ ಮನೋಹರನೆÀ ಸುಯತಿ ಸಾಕಾರನೆ 1 ಹರಿಯೇ ಪತಿಯಾಗಬೇಕೆಂದು ರುಕುಮಿಣಿ ಪರದೇವತೆಯ ನೆನವುತಿರಲು ಕೊರವಂಜಿ ವೇಷದಿ ರುಕುಮಿಣಿದೇವಿಗೆ ಪರಮ ಹರುಷವೀವೆನೆಂದು ನಾರದ ಬಂದ 2 ಧರಣಿ ಮಂಡಲದಲ್ಲಿ ನಾರದ ಧರಿಸಿ ಕೊರವಂಜಿ ವೇಷವ ಸುರನರಾದಿಗಳೆಲ್ಲರಿಗೆ ತಾ ಪರಮ ಆಶ್ಚರ್ಯ ತೋರುತ್ತ 3 ಬಂದಳು ಕೊರವಂಜಿ ಚಂದದಿಂದಲಿ ಮಂದಹಾಸವು ತೋರುತ್ತ ಪಾದ ಧಿಂಧಿಮಿ ಧಿಮಿ- ಕೆಂದು ನಿಂದಭೀಷ್ಟವ ಪೇಳುತ 4 ಗಗನದಂತಿಹ ಮಧ್ಯವು ಸ್ತ- ನಘನ್ನ ಭಾರಕೆ ಬಗ್ಗುತ ಜಗವನೆಲ್ಲವ ಮೋಹಿಸಿ ಮೃಗ ಚಂಚಲಾಕ್ಷದಿ ನೋಡುತ 5 ಕನಕಕುಂಡಲ ಕಾಂತಿಯಿಂದಲಿ ಗಂಡಭಾಗವು ಹೊಳೆವುತ್ತ ಕನಕಕಂಕಣ ನಾದದಿಂದಲಿ ಕಯ್ಯ ತೋರಿ ಕರೆಯುತ್ತ 6 ಕುಂಕುಮಗಂಧದಿ ಮಿಂಚುವೈಯಾರಿ ಚುಂಗು ಜಾರಲು ಒಲವುತ್ತ ಕಿಂಕಿಣಿ ಸರಘಂಟೆ ಉಡಿಯೊಳು ಘಲ್ಲು ಘಲ್ಲೆಂದು ಬಂದಳು ಘಲ ಘಲ ಘಲ್ಲು ಘಲ್ಲೆಂದು ಬಂದಳು 7 ಕರೆದಾಳೆ ಸುಪಲ್ಲವ ಸುಪಾಣಿ ಕೀರವಾಣಿ ಪರಿಮಳಿಸುವ ಫಣಿವೇಣಿ 8 ಪರಿಪರಿ ಬೀದಿಯಲ್ಲಿ ನಿಂದು ಹಿಂದೂ ಮುಂದೂ ಸರಸವಾಡುತ್ತ ತಾನೆ ಬಂದು 9 ಕೊರವಂಜಿ ಯಾರೊಳಗೆ ನೋಡಿ ಕೂಡಿಯಾಡಿ ಸರಿಯಿಲ್ಲವೆಂದು ತನ್ನ ಪಾಡಿ 10 ಮನೆಮನೆಯಿಂದ ಬಂದಳು ಕೊರವಂಜಿ ತಾನು ಮನೆಮನೆಯಿಂದ ಬಂದಳು ರನ್ನವ ತೆತ್ತಿಸಿದ ಚಿನ್ನದ ದಿವ್ಯ ಬುಟ್ಟಿ ತನ್ನ ನೆತ್ತಿಯಲ್ಲಿಟ್ಟು ಬೆನ್ನಿಲಿ ಸಿಂಗಾನ ಕಟ್ಟಿ 11 ಗದ್ಯ : ಸುಗುಣಾಂಗಿಯರು ಪೇಳಲು ಮುದದಿಂದ ರುಕುಮಿಣಿದೇವಿ ತಾನೂ ಮುಗುಳು ನಗೆಯಂ ನಗುತ ಕೊರವಂಜಿಯನೆ ಅತಿಬೇಗ ಜಗವರಿಯೆ ಕರೆಯೆಂದಳು. ಶ್ರೀ ರುಗ್ಮಿಣಿ ತಾ ಬಂದಳು ಸ್ತ್ರೀಯರ ಕೂಡಿ ಚಾರುಹಾಸದಿಂದೊಪ್ಪುತ ಚೆಲ್ವ ದಿವ್ಯ ನೋಟಂಗಳಿಂದ ರಾಜಿಪ ಕಂಕಣದಿಂದ ರಮ್ಯ ನೂಪುರಗಳಿಂದ ರಾಜಚಿಹ್ನೆಗಳಿಂದ ರಾಜೀವನೇತ್ರೆ ಒಲವುತ್ತ12 ರಾಜಾಧಿರಾಜ[ರು]ಗಳಿಂದ ರಾಜಸಭೆಯಲ್ಲಿ ಪೂಜಿತಳಾದ ರಾಜಹಂಸಗ-ಮನೆಯು ಬರಲು ರಂಜಿತಳಾಗಿ ಒಲೆವುತ್ತ ಗದ್ಯ : ಆಗಲಾ ದೂತಿಕೆಯರು ಕೊರವಂಜಿಯನೆ ಅತಿ ಬೇಗ ಕರೆಯಲು ಬೇಕಾದ ವಜ್ರವೈಢೂರ್ಯ ರಾಗವಿಲಸಿತವಾದ ದ್ವಾರ ಭೂಭಾರದಿಂದೆಸೆವ ಭಾಗಧೇಯದಿಂ ರಾಜ ಸತ್ಕುಲವಾದ ದಿವ್ಯ ಮಂದಿರಕೆ ತ್ಯಾಗಿ ರುಕುಮಿದೇವಿ ನೋಡಲಾ ಶ್ರೀ- ರಾಗದಿಂ ಗಾನವಂ ಪಾಡುತ್ತ ಕೊರವಂಜಿಯು ಬಂದ ಚೆಂದ13 ಬಂದಾಳಂದದಲಿ ಬಾಗಿಲೊಳಗೆ ದಿಂಧಿಮಿಕೆನ್ನುತ 14 ಚೆಲುವ ತುರುಬಿನಿಂದಲಿ ಜಗುಳುವ ಚಲಿಸುವ ಪುಷ್ಪದಂದದಿ ನಲಿನಲಿ ನಲಿದಾಡುತ್ತ ಮಲ್ಲಿಗೆ ಝಲಝಲಝಲ ಝಲ್ಲೆಂದು ಉದುರುತ್ತ ಕಿಲಿಕಿಲಿ ಕಿಲಿ ಕಿಲಿ ಕಿಲಿಯೆಂದು ನಗುತ್ತ 15 ಗದ್ಯ :ಥಳಥಳನೆ ಹೊಳೆವುತ್ತ ನಿಗಿನಿಗೀ ಮಿಂಚುತ್ತ ರನ್ನದ ಬುಟ್ಟಿಯ ಕೊಂಕಳಲಿಟ್ಟು ಧಿಗಿಧಿಗಿಯೆಂದು ನೃತ್ಯವನ್ನಾಡುತ್ತ ಎತ್ತರದಲಿ ಪ್ರತಿಫಲಿಸುವ ಮುತ್ತಿನಹಾರ ಉರದೊಳಲ್ಲಾಡುತ ನಿಜಭಾಜ ಮಾರ್ತಾಂಡ ಮಂಡಲ ಮಂಡಿತಾ ಪ್ರಭು ಪ್ರತಿಮ ದಿಶದಿಶ ವಿಲಸಿತವಾದ ಭುಜಕೀರ್ತಿಯಿಂದೊಪ್ಪುವ ಆಕರ್ಣಾಂತ ಸುಂದರ ಇಂದೀವರದಳಾಯತ ನಯನ ನೋಟಗಳಿಂದ ಚಂಚಲಿಸುವÀ ಮಿಂಚಿನಂತೆ ಮಿಂಚುವ ಕಾಂತೀ ಸಂಚಯಾಂಚಿತ ಕಾಂಚನೋದ್ದಾಮ ಕಾಂಚೀ ಪೀತಾಂಬರಾವಲಂಬನಾಲಂಬಿತಾ ನಿತಂಬದಿಂದೊಪ್ಪುವ ಝೇಂಕರಿಸುವ ಭೃಂಗಾಂಗನಾಸ್ವಾದಿತ ಜಗುಳುವ ಜುಗುಳಿಸುವ ಪರಿಮಳಿಸುವ ಜಘನ ಪ್ರದೇಶಗಳಲ್ಲಿ ವಿವಿಧ ಪುಷ್ಪಗಳಿಂದ ಅಲಂಕೃತ ನಿತಾಂತಕಾಂತಿಕಾಂತಾ ಸುಧಾಕುಂತಳ ಸಂತತಭರದಿಂದೊಪ್ಪುವ ಪುಂಜೀಕೃತ ಮಂಜುಭಾಷಣ ಅಪರಂಜಿ ಬಳ್ಳಿಯಂತೆ ಮನೋರಂಜಿತಳಾದ ಕೊರವಂಜಿಯು ನಿಶ್ಶಂಕೆಯಿಂದ ಕಂಕಣಕ್ಷಣತೆಯಿಂದ ಕೊಂಕಳ ಬುಟ್ಟಿಯ ಪೊಂಕವಾಗಿ ತನ್ನಂಕದಲ್ಲಿಟ್ಟುಕೊಂಡು ಬೆನ್ನಸಿಂಗನ ಮುಂದಿಟ್ಟು ಚೆಂದವಾಗಿ ರುಕುಮಿಣಿ ದೇವಿಯ ಕೊಂಡಾಡಿದಳು. ಗದ್ಯ :ಅವ್ವವ್ವ ಏಯವ್ವ ಕೈಯ್ಯ ತಾರೆ ಕೈಯ್ಯ ತೋರೆ ನೀ ಉಂಡ ಊಟಗಳೆಲ್ಲ ಕಂಡ ಕನಸುಗಳೆಲ್ಲ ಭೂಮಂಡಲದೊಳಗೆ ಕಂಡ್ಹಾಗೆ ಪೇಳುವೆನವ್ವಾ. ಶಿಖಾಮಣಿ ಏನೇ ರುಕುಮಿಣಿ ನಿನ್ನ ಚೆಲುವಿಕೆಯನೇನೆಂತು ಬಣ್ಣಿಪೆ. ಮದನ ಶುಭ ಅಮಿತ ರಸಶೃಂಗಾರದಿಂದೊಪ್ಪುವ ನಿನ್ನ ಕೀರ್ತಿಯ ಕೇಳಿ ಬಂದೆನಮ್ಮಾ ಅಂಗ ವಂಗ ಕಳಿಂಗ ಕಾಶ್ಮೀರ ಕಾಂಭೋಜ ಸಿಂಧೂ ದೇಶವನೆಲ್ಲ ತಿರುಗಿ ಬಂದೆನಮ್ಮಾ 16 ಮಾಳವ ಸೌರಾಷ್ಟ್ರ ಮಗಧ ಬಾಹ್ಲೀಕಾದಿ ಚೋಳ ಮಂಡಲವನೆಲ್ಲ ಚರಿಸಿ ಬಂದೆನಮ್ಮಾ17 ಲಾಟ ಮರಾಟ ಕರ್ಣಾಟ ಸೌಮೀರಾದಿ ಅಶೇಷ ಭೂಮಿಯ ನಾನು ನೋಡಿ ಬಂದೆನಮ್ಮಾ 18 ಮಾಯಾ ಕಾಶೀ ಕಾಂಚಿ ಅವಂತಿಕಾಪುರೀ ದ್ವಾರಾವತೀ ಚೇದಿ|| ಮೆಚ್ಚಿ ಬಂದ ಕೊರವಿ ನಾನಮ್ಮ ಪುರಗಳಿಗೆ ಹೋಗಿ ನರಪತಿಗಳಿಗೆ ಸಾರಿ ಬರÀ ಹೇಳಿ ನಾ ಕಪ್ಪವ ತಂದೆ 19 ಸತ್ಯಮುಗಾ ಚೆಪ್ಪುತಾನಮ್ಮಾ ಸಂತೋಷಮುಗಾ ವಿನುವಮ್ಮ ಸತ್ಯ ಹರುಶ್ಚಂದ್ರನಿಕಿ ಚಾಲ ಚೆಪ್ಪಿತಿ 20 ಕನ್ನೆ ವಿನವೆ ನಾ ಮಾಟ ನಿನ್ನ ಕಾಲಂನೆ ನೇನಿಕ್ಕು(?) ಚಿನ್ನ ಸಿಂಗಾನೀ ತೋಡೂನೆ ಚೆಪ್ಪ್ಪೆಗಮ್ಮಾನೇ 21 ಗದ್ಯ :ಆಗ ರುಕುಮಿಣಿದೇವಿಯು ಚಿತ್ರವಿಚಿತ್ರ ಚಿತ್ತಾರ ಪ್ರತಿಮೋಲ್ಲಸಿತ ತಪ್ತ ರಜತರಂಜಿತಸ್ಫಟಿಕ ಮಣಿಗಣ ಪ್ರಚುರ ತಟಿಕ್ಕೋಟಿ ಜ್ವಾಲಾವಿಲಸಿತವಾದ ವಜ್ರಪೀಠದಲಿ ಕುಳಿತು ಚಿನ್ನದ ಮೊರಗಳಲ್ಲಿ ರನ್ನಗಳ ತಂದಿಟ್ಟುಕೊಂಡು ಕೊರವಂಜಿಯನೆ ಕುರಿತು ಒಂದು ಮಾತನಾಡಿದಳು. ವೊಲಿಸೀನ ಸೊಲ್ಮೂಲೆಲ್ಲ ವನಿತೆನೆ ನಿಂತೂ(?) 22 ಗದ್ಯ : ಆಗ ರುಕುಮಿಣಿದೇವಿಯಾಡಿದ ಮಾತ ಕೇಳಿ ಕೊರವಂಜಿಯುಯೇ-ನೆಂತೆಂದಳು. ನೆನೆಸಿಕೊ ನಿನ್ನಭೀಷ್ಟವ ಎಲೆ ದುಂಡೀ ನೆನೆಸಿಕೊ ವನಿತೆ ಶಿರೋಮಣಿಯೆ ಘನಮುದದಿಂದ ನೆನೆಸಿಕೊ 23 ರನ್ನೆ ಗುಣಸಂಪನ್ನೆ ಮೋಹನ್ನೆ ಚೆನ್ನಾಗಿ ಮುರುಹಿಯ ಮಾಡಿ ನೆನೆಸಿಕೊ 24 ಮಾಧವ ಸೇತುಮಾಧವ ವೀರರಾಘವ ಚಿದಂಬರೇಶ್ವರ ಅರುಣಾಚÀಲೇಶ್ವರ ಪಂಚನದೇಶ್ವರ ಶ್ರೀಮುಷ್ಣೇಶ್ವÀÀರ ಉಡುಪಿನ ಕೃಷ್ಣ ಮನ್ನಾರು ಕೃಷ್ಣ ಸೋದೆ ತ್ರಿವಿಕ್ರಮ ಬೇಲೂರು ಚೆನ್ನಪ್ರಸನ್ನ ವೆಂಕಟೇಶ್ವರ ಸೂರ್ಯನಾರಾಯಣ ಇವು ಮೊದಲಾದ ದೇವತೆಗಳೆಲ್ಲ ಎನ್ನ ವಾಕ್ಯದಲಿದ್ದು ಚೆನ್ನಾಗಿ ಸಹಕಾರಿಗಳಾಗಿ ಬಂದು ಪೇಳಿರಯ್ಯಾ ಮಂಗಳದ ಕೈಯ್ಯ ತೋರೇ ಎಲೆದುಂಡೀ ಕೈಯ ತೋರೆ ಕೈಯ ತೋರೆ 25 ಕೇಳೆ ರನ್ನಳೆ ಎನ್ನ ಮಾತ ಬೇಗ ಇಳೆಯರಸನಾದನು ಪ್ರಿಯ26 ಕಳಸಕುಚಯುಗಳೆ ಚಿಂತೆ ಬೇಡ ನಿನ್ನ ಕರೆದಿಂದು ಕೂಡ್ಯಾನು ರಂಗ 27 ನಾಡಿನೊಳಧಿಕನಾದ ನಾರಾಯಣನ ಪತಿ ನೀನು ಮಾಡಿ ಕೊಂಡೆನೆಂದು ಮನದಲ್ಲಿ ನೆನಸಿದೆ ಕಂಡ್ಯಾ ನಮ್ಮ ಕೃಷ್ಣ ಕುತೂಹಲದಿ 28 ಸುಂದರಶ್ಯಾಮ ಅಲ್ಲಿ ನÀಂದಾ ನಂದಾನಾಡುವಾನಂದಮುಗಾವಚ್ಚಿ ಕೂಡೇನಮ್ಮಾ 29 ಶಂಖಚಕ್ರಯುಗಲ ಪಂಕಜನಾಭುಂಡು ಪಂಕಜಮುಖೀ ನೀವು ಪ್ರಾಣಿಗ್ರಹಣಮು ಚೇಸಿ ಕೂಡೆನಮ್ಮಾ 30 ಚೆಲುವಾ ನಾ ಮಾಟಾ ನೀಕು ಪುಚ್ಚಾ ಚೆಲುವಾ ನಾ ಮಾಟ ಕಲ್ಲಗಾದು ನಾ ಕಣ್ಣೂಲಾನೂ ಪಿಲ್ಲ ವಿನುವಮ್ಮ ಪಲ್ಲವಪಾಣೀ ಚೆಲುವಾ ನಾ ಮಾಟ31 ದಮಯಂತೀಕೀನೇ ಚೆಪ್ಪಿತಿ ನಮ್ಮವೆ ಮಾಟ ಅಮರುಲಕೆಲ್ಲಾ ಅನುಮೈನವಾಡು ಚೆಪ್ಪೀ ಅಮಿತ ಬಹುಮಾನಾಮಂದೀತೀನಮ್ಮಾ ಚೆಲುವ ನಾ ಮಾಟ ಚೆಲುವ 32 ಬಂತೆ ಮನಸಿಗೆ ನಾ ಹೇಳಿದ್ದು ಚಿಂತೆ ಸಂತೋಷದಿ ನಾನಾಡಿದ ಶಾಂತ ಮಾತೆಲ್ಲ ಇದು ಪುಸಿಗಳಲ್ಲ ಬೇಗ ಬಂದಾನೋ ನಲ್ಲಾ ಆಹಾ ಆಹಾ ಬಂತೇ ಮನಸ್ಸಿಗೆ
--------------
ವಾದಿರಾಜ