ಒಟ್ಟು 11 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದುಶೇಖರಾ ಮನ್ನಿಸೋ ದಯದಿಂದ ಶಂಕರಾ ಪಪಂಚವಕ್ತ್ರನೆ ಪಾಲಿಪುದು ತ್ರಿಪಂಚನೇತ್ರನೆಪಂಚಭೂತ ತನು'ದೆನಗೆ ಪಗೆಯಾಗಿದೆ ನೋಡಯ್ಯಾವಂಚಕನು ನೀನೆಂದೆನ್ನ ವಾರೆನೋಡಬೇಡಯ್ಯಾಸಂಚರಿಪ ಮನಕೆ ಮನುವ ತೋರಿ ನೋಡಬೇಡಯ್ಯಾಪಂಚಶಿರದ ನಾಮಾಧೀಶ ಪರಮ ಕೃಪೆಮಾಡಯ್ಯಾ 1ವ್ಯಾಳಭೂಷಣನೆ ಬಿನ್ನಪವನ್ನು ಕೇಳು ಈಶನೆಏಳು 'ಷಯ ವ್ಯಸನಾದಿಗಳಿಂದೇಳಿಗೆಯ ಘನವಾದಾಳಿವರಿದಾ ಕರಣಾತಡಿಗೆ ಧೈರ್ಯ ಕಲಿತನವಾತಾಳಲಾರೆನಯ್ಯಾ ಎನ್ನ ತನು'ನವಗುಣವಾಫಾಲನೇತ್ರ ಬಿಡಿಸೊ ನಿನ್ನ ನೆನ'ಗಿತ್ತಭಯವಾ 2ಕಾಮನಾಶನೆ ಕರುಣಿಸಯ್ಯಾ ವ್ಯೋಮಕೇಶನೆಹೇಮ ಭೂ'ು ಹೆಣ್ಣಿಗಾಗಿ ಹೇಳಲೇನ ನೊಂದೆನೈತಾಮಸಗುಣಂಗಳಿಂದ ತಾಪಹೆಚ್ಚಿ ಬೆಂದೆನೈಕಾ'ುನಿಯರೆಡೆಯೊಳೆನ್ನ ಕಾಡಬೇಡವೆಂದೆನೈನಾಮರೂಪಕ್ರಿಯಾರ'ತ ನೀನೆ ಗತಿಯೆಂದೆನೈ 3
--------------
ತಿಮ್ಮಪ್ಪದಾಸರು
ನೋಡಯ್ಯಾ ನಿತ್ಯಾತ್ಮನನ್ನು ನಿಜವಾಗಿ ನಿನ್ನೊಳಗೆ ನೀನು ನೋಡಯ್ಯಾ ನಲಿನಲಿದಾಡಯ್ಯಾ ಎರಡುದಿನಸಂಸಾರಾ ಎರವಾಗಿ ತಂದ ಶರೀರಾ ಸ್ಥಿರವಲ್ಲ ಸ್ವಾಮಿ ಗುರುಬಲ್ಲಾ ನೋಡಯ್ಯಾ 1 ಶರೀರ ಅರ್ಥಪ್ರಾಣ ಮೂರು ಗುರುಮೂರ್ತಿಗರ್ಪಿಸಿ ತೋರು ದೃಢಭಾವಾ ಆತ್ಮಸುಖವೀವಾ ನೋಡಯ್ಯಾ 2 ನರದೇಹಕ್ಕೆ ಬಂದು ನೀನು ಇರುವಂಥಾ ಸಾರ್ಥಕವೇನು ದೃಢ ಭಕ್ತಿಮಾಡಿ ಪಡೆ ಮುಕ್ತಿ ನೋಡಯ್ಯಾ3 ದೊರಕುವುದು ಪರಿಕರ ಸರ್ವಾ ಗುರುಮೂರ್ತಿ ಸಿಕ್ಕುವುದಪೂರ್ವಾ ಬಿಡಬೇಡಾ ವ್ಯರ್ಥ ಕೆಡಬೇಡಾ ನೋಡಯ್ಯಾ 4 ಭಕ್ತಿಯಲಿ ಕೈವಿಡಿದು ಹೋಗು ಭಜಿಸಿ ಜೀವನ್ಮುಕ್ತನಾಗು ಸಾರಿದೆ ಮರ್ಮವ ತೋರಿದೆ ನೋಡಯ್ಯ5 ಯುಕ್ತಿಯಲಿ ಸಾಧಿಸಲು ಬೇಕು ಇಷ್ಟೊಂದು ಸಿಕ್ಕಿದರೆ ಸಾಕು ಚಂದದಿ ಗುರುವಿಮಲಾನಂದದಿ ನೋಡಯ್ಯಾ 6
--------------
ಭಟಕಳ ಅಪ್ಪಯ್ಯ
ನೋಡಯ್ಯಾ ಹರಿಯೆ ಪ ಪಂಡರಪುರ ನಿಲಯನೆ ಕುಂಡಲಿಶಯನನೆ ಅ.ಪ. ಪುಂಡರೀಕಗೊಲಿದವನೆ | ಅಂದು ಶುಂಡಾಲವ ಪೊರೆದವನೆ ಅಂಡಜ ವರ ವಾಹನನೆ | ಎನ್ನ ಮಂಡೆಯ ಮೇಲ್ಕರವಿಡುತಲಿ 1 ವಿಜಯಗೆ ಸಾರಥಿಯಾದಿ | ಅವನ ಭುಜಗ ಶರದಿಂದ ಪೊರೆದಿ ನಿಜ ಭಕುತಗೆ ನೀ ಒಲಿದ | ದೇವ ಕುಜನಮರ್ದನ ಹರಿ ಮುದದಿ 2 ಪಟುತರ ದೇಹ ಪ್ರಕಾಶ | ದಿಂದ ವಟುವಂತೆ ಮೆರೆವ ಶ್ರೀಶ ಕುಟಿಲ ರಹಿತ ರಂಗೇಶ | ವಿಠಲ ಹಟಮಾಡದೆ ಕಣ್ತೆರದು 3
--------------
ರಂಗೇಶವಿಠಲದಾಸರು
ರಾಮಚಂದ್ರನೇ ಪರದೈವನೋ ನಮ್ಮ | ಶಾಮ ಸುಂದರ ಕೃಷ್ಣ ಪರದೈವನಯ್ಯ ಪ ರಾಮಭಕ್ತ ನಿದ್ದೆಡೆಗಾಗಿ ಯದುಕುಲ | ಸ್ವಾಮಿಯ ಶರಣನು ಬಂದ ಕೀರ್ತಿಸುತ | ಪ್ರೇಮದಲೀರ್ವರ ಭಕ್ತಿಯವಾದವು | ನೇಮದಿ ಬೆಳೆಯಿತು ಕೇಳಿ ಸಜ್ಜನರು1 ಚಿಕ್ಕ ತನದಿ ತಾಟಿಕೆಯನು ಕೊಂದು ಮುನಿಮುಖ | ಅಖರದಲಿ ಕಾಯದನಾರು ಹೇಳಯ್ಯ | ಠಕ್ಕಿಸಿ ಬಂದ ಪೂತನಿಅಸುಹೀರಿಜ | ನಕ್ಕಭಯ ನಿತ್ತ ಕೃಷ್ಣ ನೋಡಯ್ಯ2 ಚರಣ ಸೋಕಿಸಿ ಶಿಲೆ ಹೆಣ್ಣವ ಮಾಡುತ | ಹರಧನು ಮುರಿದವ ನಾರು ಹೇಳಯ್ಯಾ | ಮರಗಳಾದವರ ನುದ್ಧರಿಸುತ ಕಂಸಾ | ಸುರಧನು ಹಬ್ಬವ ಗೆದ್ದ ರಂಗೈಯ್ಯಾ3 ನೆರದಿಹ ದೇವ ದಾನವರೋಳುದ್ದಂಡದಿ | ಧರಣಿ ಜೆಯ ತಂದನಾರು ಹೇಳೈಯ್ಯಾ | ವರಚೈದೈ ಘೋಷರ ಭಂಗಿಸಿ ರುಕ್ಮಿಣಿ | ಕರವಿಡಿದೊಯ್ದಿದ ಕೃಷ್ಣ ನೋಡಯ್ಯಾ 4 ವನದೊಳು ಹಣ್ಣವ ನಿತ್ತಂ ಶಬರಿಗೆ | ಚಿನುಮಯ ಪದವಿತ್ತ ನಾರು ಹೇಳಯ್ಯಾ | ಅನುವರದಲಿ ದ್ರೌಪದಿಯ ಶಾಕದಳ | ವನೆ ಕೊಂಡು ಸುಖವಿತ್ತ ಕೃಷ್ಣ ನೋಡಯ್ಯಾ5 ಜಲ ನಿಧಿಯೊಳಗ ಸೇತುಗಟ್ಟಿಸಿ ವಾನರ | ದಳನಡಿಸಿದ ವೀರನಾರು ಹೇಳಯ್ಯಾ | ಗಳಿಗಿಯೊಳರಿಯದಂದದಿ ಮಧುರ ಜನ | ನೆಲೆಮಾಡಿ ನೀರೋಳಗಿಟ್ಟ ರಂಗೈಯ್ಯಾ6 - ಅಪೂರ್ಣ
--------------
ಕಾಖಂಡಕಿ ಶ್ರೀ ಕೃಷ್ಣದಾಸರು