ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶುಭ ವೀರಾಂಜನೇಯಾಯ ಜಯ ಮಂಗಳಂ ಪ ಮಣಿ ಪುಂಜ ರಂಜಿತಾಯ ಶುಭಾಂಗಯ ಮಂಜುಳಾಯ 1 ಲಕ್ಷ್ಮಣ ಪ್ರಾಣ ಸಂರಕ್ಷಣಾಯ ಪಕ್ಷೀಂದ್ರ ಗಂಧವಹ ಗತಿ ಲಕ್ಷಿತಾಯ 2 ಪಂಚಾನನಾದಿ ಮುಖ ಪಂಚಕಾಯ ಪಂಚತಾಪ ಹರಾಯ ಪÀಂಚಾಕ್ಷರಾಯ 3 ಕಂದರ್ಪ ನವವರವ್ಯಾಕರಣ ನವಪಂಡಿತಾಯ ನವಪಂಚಕೋಟಿ ಯೂಧಪ ಸೇವಿತಾಯ 4 ಮಹಾಕಾಂಡ ಬೃಂದಾರಕಾಯ ಗಂಧರ್ವವೇದೇಷು ಘನ ಪಂಡಿತಾಯ 5 ಸರ್ವಮಂತ್ರಾವಳೀ ಸನ್ನುತಾಯ ಸರ್ವಭೀತಿ ಹರಾಯ ಸರ್ವಾತ್ಮಕಾಯ 6 ಶತಕೋಟಿ ಭಯವರ್ಜಿತಾಯ ಬೇಟೆರಾಯಾಖ್ಯ ದೀಕ್ಷಿತ ರಕ್ಷರಾಯ 7 ಪರಯಂತ್ರ ವಿದ್ವಂಸಕಾಯ 8
--------------
ಬೇಟೆರಾಯ ದೀಕ್ಷಿತರು
ಸುವ್ವಿ ಪದ ಪಂಚಶರ ಪಿತನೆ ಅಹಿಮಂಚದಲಿ ಮಲಗಿಹನೆ |ಪಂಚಾನನಾದಿ ಸುರವಂದ್ಯ | ಸುರವಂದ್ಯ ದುರಿತಾರಿ |ಪಂಚಾಸ್ಯ ವದನ ಸಲಹೆಮ್ಮ 1 ಅಂಬುಜಾಸನ ವಾಯು ಶಂಭುಸುರಮುಖ ಪೂಜ್ಯ |ಅಂಬುಜಾನಾಭಿ ಅರ್ಕಾಭಾ | ಅರ್ಕಾಭಾ ಎನ್ನ ಕು- |ಟುಂಬ ಸಲಹುವದೊ ನರಸಿಂಹ 2 ಘೋರ ದುರಿತಗಳ ಪರಿಹಾರ ಮಾಳ್ಪರ ಕಾಣೆ |ನಾರಸಿಂಹನೆ ನಿನ್ನ ವ್ಯತಿರಿಕ್ತ | ವ್ಯತಿರಿಕ್ತ |ಕಾರುಣ್ಯಸಿಂಧು ಸಂಸಾರಾಬ್ಧಿಯಿಂದ ಕಡೆಗೆತ್ತೊ 3 ಕಲಿಕಲುಷದಿಂ ಮನಸು ಮಲಿನವಾಗಿದೆ ದೇವಉಳಿವ ಬಗಿ ಕಾಣೆ ಕಲಿಕಾಲ | ಕಲಿಕಾಲ ಕರುಣ |ದಲಿ ಸಲಹುವದು ನೀನೆ ಬಲ್ಲಿ 4 ನೀನೊಲಿದು ಕೊಟ್ಟದ್ದು ಏನಾದರೂ ಇರಲಿ |ಸಾನುರಾಗದಲಿ ಸವಿವಂಥ | ಸವಿವಂಥ ಮತಿ | ಇತ್ತು ಗುರು ಪ್ರಾಣೇಶ ವಿಠಲಾ ಪೊರಿಯಮ್ಮಾ5
--------------
ಗುರುಪ್ರಾಣೇಶವಿಠಲರು