ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಆ) ಶ್ರೀ ವೆಂಕಟೇಶ್ವರ ಅಭಯ ಗಿರಿಯವಾಸ ಶ್ರೀನಿವಾಸನು ನಮಗೆ | ಶುಭವೀವ ನಿರುತ ಮಂದಹಾಸನೊ ಪ ಧೇನಿಪರ ಮನಕೆ ಚಿಂತಾಮಣಿಯೋ ಸ್ವಾಮಿ | ನೀನೆ ಗತಿಯೆಂಬರಿಗೆ ಹೊಣೆಯೋ ಜ್ಞಾನಮಯ ಸಂದಣಿಯೊ ಪುಣ್ಯ ಕಾನನ ನಿವಾಸ ಸುರಖಣಿಯೊ 1 ವಜ್ರ ಪಂಜರನೋ ದುಷ್ಟ ದುರುಳ ದೈತ್ಯರಿಗೆ ಝರ್ಝರನೊ ದುರಿತ ಕದಳಿಗೆ ಕುಂಜರನೊ ಸ್ವಾಮಿ ಉರಗತಲ್ಪನಾದ ಸಿರಿವರನೊ 2 ಪರಮೇಷ್ಟಿ ಶಿವರೊಳಗಿಪ್ಪನೋ ಇಂದು ಮರುತನ ಪೆಗಲೇರಿ ಬಪ್ಪನೊ ಶರಣರಿಗೊರವೀಯೆ ತಪ್ಪನೋ ನಮ್ಮ ಸಿರಿ ವಿಜಯವಿಠ್ಠಲ ತಿಮ್ಮಪ್ಪನೊ 3
--------------
ವಿಜಯದಾಸ
ಶುಭವೀವ ನಿರುತದಲಿ ಮಂದಹಾಸಾ ಪ ಅಭಯಗಿರಿಯ ವಾಸಾ ಶ್ರೀ ಶ್ರೀನಿವಾಸ ಅ.ಪ. ಧೇನಿಪರ ಮನ ಚಿಂತಾಮಣಿಯೋ | ದೇವ | ನೀನೆ ಗತಿಯೆಂಬುವರ ಧಣಿಯೋ || ಜ್ಞಾನಮಯ ಸುಖದ ಸಂದಣಿಯೋ | ಪುಣ್ಯ | ಕಾನÀನವಾಸ ಸುರರ ಖಣಿಯೋ 1 ವಜ್ರ ಪಂಜರನೋ | ದೇವ | ದುರುಳರಿಗೆ ವೀರ ಜರ್ಝರನೋ || ದುರಿತಕದಳಿಗೆ ಕುಂಜರನೋ | ವರಕಲ್ಪ ಕಲ್ಪ ವಿಚಲನೋ 2 ಪರಮೇಷ್ಠಿ ಶಿವರೊಳಗೆ ಯಿಪ್ಪ | ದೇವ | ಮರುತನ್ನ ಹೆಗಲೇರಿ ಬಪ್ಪಾ || ಶರಣರಿಗೆ ವರವೀಯುತಿಪ್ಪಾ | ಸಿರಿ ವಿಜಯವಿಠ್ಠಲ ತಿಮ್ಮಪ್ಪಾ 3
--------------
ವಿಜಯದಾಸ