ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕುಂಡಲಿಶಯನನ ಕೋದಂಡಧರನಾ ಮಂಡಲಾಧಿಪ ತ್ರಿ------- ಬಲವಂತನ ಪ ಪುಂಡರೀಕ ವರದನ ಪುರಾಣ ಪುರುಷನ ಪಂಡರಪುರ ನಿಲಯ ಭಕ್ತರ ಚಲನ 1 ದಂಡಿ ದಾನವರನ ಛೇದನ ಮಾಡಿದನ -------ಕರುಣಿಸಿ ಕಾಯ್ದನ 2 ಪುಂಡರಾವಣನ ಶಿರಗಳ ತರಿದನ ಅಂಡಸೇರಿ ಶರಣಂದನ ಕಾಯ್ದನ 3 ಮಾನವ ದಯಮಾಡಿ ಕಾಯ್ದನ ಕವಿಜನ ರಕ್ಷಕ ಘನ ಶ್ರೀಕೃಷ್ಣನ 4 ಭುವಿನಾಯಕನ ಪೂರ್ಣ ಪ್ರಭಾಕರನ ರಾಜೀವ ನೇತ್ರನ 5 ಲವಕುಶ ಜನಕನ ರಘುಕುಲ ಶ್ರೇಷ್ಠನ -------------------- 6 ಭವಸುರ ವಂದ್ಯನ ಪರಮಾನಂದನ ಕಲೆಯುಕ್ತ ಶಿರಸೂರನ 7 -----ನಾಭನ ಪಾಂಡವ ಪಕ್ಷನ ಮುದನೂರ ವಾಸನ ಮುನಿಜನವಂದ್ಯನ 8 ಯದುಕುಲ ಭೂಷಣನ ------- ವೇದಾಂತ ವೇದ್ಯನ ವಿಶ್ವರೂಪನ 9 ಹೆನ್ನಪುರನಿಲವಾಸ 'ಹೆನ್ನೆವಿಠ್ಠಲನ’ ನಿನ್ನ ------ ಶ್ರೀತ ಜನಪೋಷಕನ 10
--------------
ಹೆನ್ನೆರಂಗದಾಸರು
ಆತ್ಮನಿವೇದನೆ ಯಾವಾಗಲೂ ನಿನ್ನ ಸೇವೆಯೊಳಿರುವಂತೆ ಕಾವುದೆನ್ನಯ ನಿಜದೀ ಕೃಪಾನಿಧೇ ಈ ಪರಿಯಿಂದನಾ ಭಾರಿ ಭವದಿ ನೊಂದೆ ತೋರೋ ನಿನ್ನಯ ಚರಣಾ ನಾರಾಯಣ ಪ ಆಶಾಪಾಶದಲಿ ನಾ ಘಾಸಿಯಾದೆನು ದೇವಾ ವಾಸನೆಯೊಳು ತೊಳಲಿ ಬಹು ಬಳಲಿ ವಾಸುದೇವನೆ ನಿನ್ನ ಪಾದದೊಳಗೆನ್ನಯ ಬೇಸರದಲೆ ರಕ್ಷಿಸೋ ನಿಜಪಾಲಿಸೋ 1 ನೀರಮೇಲಿನ ಗುಳ್ಳೆಯಂತೆ ತೋರುವ ಕಾಯ ಸೇರಿ ನಂಬಿದೆ ಭರದಿ ಬಹು ವಿಧದಿ ದೂರನಾದೆನು ನಿಜದರಿವುನಾನರಿಯದೇ ಸೇರಿಸೊ ನಿಜ ಸುಖದಿ ಪ್ರಬೋಧದಿ 2 ನಂಬಿದವರ ಕಾಯ್ವ ಸಂಭ್ರಮ ಪೊತ್ತವ ಶಂಭು ಶಂಕರ ಪ್ರಿಯನೇ ಸರ್ವೇಶನೇ ಇಂಬು ದೋರೆನ್ನಾ ಚಿದಂಬರ ನಿಜಪದ ನಂಬಿ ನಿಲ್ಲುವ ತೆರದಿ ಸದೃಢದೀ 3 ತತ್ವಮಸಿ ಮಹಾ ವಾಕ್ಯವ ಶೋಧಿಸಿ ನಿಸ್ತರಿಸುವ ಭವವಾ ಉಪಾಯವಾ ಚಿತ್ತಚೈತನ್ಯವಾಗಿ ನಿತ್ಯಶಾಂತಿಸ್ವಸುಖ ಸತ್ಯ ಸದ್ಗುರು ಸ್ವಾನಂದಾ ಸಹಜಾನಂದಾ4 ಕಡಹದಾ ಮರನೇರಿ ಮಡುವಾ ಧುಮ್ಮಿಕೃಇದ್ಯೋ ಪಿಡಿದು ಕಾಳಿಂಗನಾ ಹೆಡೆ ಕುಳಿದು ಕುಣಿದ್ಯೋ ಸಡಗರದಿಂದಲಿ ಮಾತೆಯ ತೊಡೆಯ ಮೇಲೆ ಬಂದು ಕುಳಿತೆ5 ದುರುಳ ದುಷ್ಟರ ಶಿರವ ಶರದಿಂದಾ ಕಡಿದೆಯೊ ಶರಣ ಬಂದ ದೀನರನು ಸಲಹಿದೆಯೊ ಪರಮ ಪುರುಷನೇ ನಿನ್ನ ಸ್ಮರಣೆಯೊಳಿರಿಸೆನ್ನಾ 6 ಅನ್ಯಾಯದಲಿ ಕುರುಪತಿಯ ಮಡುಹಿದೆಯೊ ಕರ್ಣನ ಕಂಠವ ಕತ್ತರಿಸಿದೆಯೊ ಧನ್ಯಧರ್ಮಾರ್ಜುನರ ಶಿರವಾ ಸನ್ಮತದಿಂದಲಿ ಕಾಯ್ದೆ 7 ಪುಂಡಲೀಕನ ಭಕ್ತಿಗೆ ಮೆಚ್ಚಿ ಪಂಡರಪುರದಲ್ಲಿ ನಿಂತೆನಿ ಹೆಚ್ಚಿ ತಂಡತಂಡದಲ್ಲಿ ಬರುವ ಹಿಂಡುಭಕ್ತರುಗಳ ಕೂಡುವ 8 ಕಂತು ನಾರಾಯಣ ಶಾಂತಿ ಪದದಲಿ ವಿಶ್ರಾಂತಿಯ ಕೊಟ್ಟಿನ್ನಾ ಭ್ರಾಂತಿಗಳನೆಲ್ಲ ತೋರಿಸಿ ಸಂತ ಸಂಗದೊಳಿರಿಸೆನ್ನಾ 9
--------------
ಶಾಂತಿಬಾಯಿ
ಕುದುರೆ ಕಂಡೀರ್ಯಾ ಬಿಳಿ ಕುದುರೆ ಕಂಡೀರ್ಯಾ ಚೆಲುವ ಕುದುರೆ ಕಂಡೀರ್ಯಾ ಮಧ್ವರಾಯರಿಗೊಲಿದ ಕುದುರೆ ವಾದಿರಾಜರ ಪೊರೆದ ಕುದುರೆ ಇಂದಿರಾ ದೇವಿಯನಪ್ಪಿದ ಕುದುರೆ ಬಂದರೆ ನರರು ಬೆದರದಂಥ ಕುದುರೆ 1 ಮಂದರಗಿರಿಯನ್ನೆತ್ತಿದ ಕುದುರೆ ಚಂದಿರನಂತೆ ಪೊಳೆಯುವ ಕುದುರೆ ಸೋದೆಯ ಪುರದೊಳಿರುವ ಕುದುರೆ ಮೋದದಿಂದ ಮೆರೆಯುವ ಕುದುರೆ 2 ನರನ ರಥವನು ಏರಿದ ಕುದುರೆ ಸ್ಮರನ ತಾತನೆನಿಪ ಕುದುರೆ ಸುರತರುವನೆ ಭೂಮಿಗೆ ತಂದ ಕುದುರೆ 3 ಕಡಲೆ ಹೂರಣ ಮೆಲುವ ಕುದುರೆ ಪಂಡರಪುರದಿ ಮೇದ ಕುದುರೆ ಪುಂಡರೀಕನಿಗೆ ಒಲಿದಿಹ ಕುದುರೆ ಪಾಂಡವರನೆ ಪೊರೆದ ಕುದುರೆ 4 ರಾಜನಾಥನೆನಿಪ ಕುದುರೆ ವಾಜಿವದನ ತಾನೆನಿಪ ಕುದುರೆ ಕಂಜಸುತಗೆ ಶ್ರುತಿಯನ್ನಿತ್ತ ಕುದುರೆ ಕಂಜನಾಭನೆನಿಪ ಕುದುರೆ 5
--------------
ವಿಶ್ವೇಂದ್ರತೀರ್ಥ
ನೋಡಯ್ಯಾ ಹರಿಯೆ ಪ ಪಂಡರಪುರ ನಿಲಯನೆ ಕುಂಡಲಿಶಯನನೆ ಅ.ಪ. ಪುಂಡರೀಕಗೊಲಿದವನೆ | ಅಂದು ಶುಂಡಾಲವ ಪೊರೆದವನೆ ಅಂಡಜ ವರ ವಾಹನನೆ | ಎನ್ನ ಮಂಡೆಯ ಮೇಲ್ಕರವಿಡುತಲಿ 1 ವಿಜಯಗೆ ಸಾರಥಿಯಾದಿ | ಅವನ ಭುಜಗ ಶರದಿಂದ ಪೊರೆದಿ ನಿಜ ಭಕುತಗೆ ನೀ ಒಲಿದ | ದೇವ ಕುಜನಮರ್ದನ ಹರಿ ಮುದದಿ 2 ಪಟುತರ ದೇಹ ಪ್ರಕಾಶ | ದಿಂದ ವಟುವಂತೆ ಮೆರೆವ ಶ್ರೀಶ ಕುಟಿಲ ರಹಿತ ರಂಗೇಶ | ವಿಠಲ ಹಟಮಾಡದೆ ಕಣ್ತೆರದು 3
--------------
ರಂಗೇಶವಿಠಲದಾಸರು