ಒಟ್ಟು 6 ಕಡೆಗಳಲ್ಲಿ , 6 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರಿಯೆನೋ ನಿನ್ಮಾಯ | ಸದ್ವಪುಷ ಚಿನ್ಮಯ ಪ ಪತಿ ಪರಿ ಮಿಗಿಲು ಇಲ್ಲವೊಚೆಲ್ವ ಹಯವೇರುತ್ತ ಮ್ಲೇಂಛರ ಸದೆವವನೆ ಅ.ಪ. ಪರಿ | ಪಂಥಿ ಬಾಧಕಕಂತುಹರ ಸಖ ಸೃಷ್ಟಿಕರ್ತನೆ | ಪ್ರಾಂತಗಾಣದ ಶಿರಿಸ್ತವನ ಕೊಂದನೆ 1 ಅಮಿತ ಮಹಿಮೋಪೇತ್ ಶಿರಿಹರಿ |ಸುಮತಿ ಸುಜನಾಂಬೋಧಿ ಚಂದಿರ | ಪ್ರಮಿತ ಜಗ ಸತ್ಕರ್ತ ಪ್ರಾಣನೇ 2 ಹರಿಯೆ ನಿನ್ನಯ ರೂಪ | ನೋಡುವುದಕೆ ಇರುವುದವು ಅಪರೂಪ |ದೇವಾದಿ ವರ್ಣಿಸೆ | ಇರುತಿರುವೆ ಬಹುರೂಪ | ಆರು ಅರಿಯದ ರೂಪ ನೀರೊಳಿರುತಿಹೆ | ಭಾರಪೊತ್ತಿಹೆ | ಕೋರೆದಂತನೆ ನಾರಸಿಂಹನೇ ಪೋರ ವಟುವೆ | ವೀರರಾಮನೆ | ಕ್ರೂರ ಖಳಹನ ನಾರಿಯರ ವ್ರತವಳಿದು ತೇಜಿಯನೇರ್ದ ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಫಣಿರಾಜಶಯನ ರುಕ್ಮಿಣೀ ದೇವಿಯೊಡಗೂಡಿ ಕುಳಿತಿರ್ದು ಸತಿಯೊಡನೆ ಅಣಕವಾಡಿದನು ಇನಿತೆಂದು 1 243 ಹೇ ರಾಜಕನ್ನಿಕೆ ಭೂರಮಣ ನಾನಲ್ಲ ನಾರದನ ನುಡಿಗೆ ನಳಿನಾಕ್ಷಿ 2 244 ಶಿಶುಪಾಲ ಮೊದಲಾದ ವಸುಧೆಪಾಲರ ಬಿಟ್ಟು ಸುಕುಮಾರಿ ಎನಲು ಪರ ವಶಳಾದಳಾಗ ಮಹಲಕ್ಷ್ಮಿ 3 245 ಈ ಮಾತ ಕೇಳಿ ಕೈ ಚಾಮರವನೀಡಾಡಿ ಭುಗಿಲೆಂದು ಮಲಗಿದಾ ಕಾಮಿನಿಯ ಕಂಡ ಕಮಲಾಕ್ಷ 4 246 ಕಂಗೆಟ್ಟಳೆಂದು ತನ್ನ ಅಂಗನೆಯ ಬಿಗಿದಪ್ಪಿ ಮುಂಗುರುಳ ತಿದ್ದಿ ಮುದ್ದಿಸಿ | ಮುದ್ದಿಸಿ ಮಾತಾಡ್ಡ ಕಂಗಳಶ್ರುಗಳ ಒರೆಸುತ್ತ5 247 ಸಲಿಗೆ ಮಾತಿನ ಬಗೆಯ ತಿಳಿಯದಲೆ ಹೀಗೆ ಚಂ ಚಲವನೈದುವರೆ ಚಪಲಾಕ್ಷಿ | ಚಪಲಾಕ್ಷಿ ಏಳೆಂದು ತÀಲೆಯ ಮೇಲಿಟ್ಟ ಕರಪದ್ಮ 6 248 ಶ್ರೀ ದೇವಿ ನಿನ್ನೊಳು ವಿನೋದ ಮಾಡಲಿಷ್ಟು ವಿ ಅನುದಿನ | ಅನುದಿನದಿ ಸ್ಮರಿಸುವರ ಕಾದುಕೊಂಡಿಹೆನು ಬಳಿಯಲ್ಲಿ 7 249 ಹಿಗ್ಗಿದಳು ಮನದಿ ಸೌಭಾಗ್ಯ ಭೂಮಿನಿಯು ಅಪ ವರ್ಗದನ ನುಡಿಗೆ ಹರುಷಾದಿ | ಹರುಷದಿಂದಲಿ ಪಾದ ಯುಗ್ಮಕೆರಗಿದಳು ಇನಿತೆಂದು 8 250 ಜಗದೇಕ ಮಾತೆ ಕೈ ಮುಗಿದು ಲಜ್ಜೆಯಲಾಗ ಮಾತಾಡಿದಳು ಪತಿಯ ಮೊಗವ ನೋಡುತಲಿ ನಳಿನಾಕ್ಷಿ 9 251 ಪರಿಪೂರ್ಣಕಾಮ ನಿನ್ನರಸಿ ನಾನಹುದು ಸ್ವೀ ಕರಿಸಿದೆಯೊ ಎನ್ನ ಸತಿಯೆಂದು | ಸತಿಯೆಂದ ಕಾರಣಾ ಕ್ಷರಳೆನಿಸಿಕೊಂಡೆ ಶ್ರುತಿಯಿಂದ10 252 ಭುವನಾಧಿಪತಿ ನೀನು ಅವಿಯೋಗಿ ನಿನಗಾನು ನೃಪರ ಪತಿಯೆಂದು | ಪತಿಯೆಂದು ಬಗೆವೆನೇ ಸವಿ ಮಾತಿದಲ್ಲ ಸರ್ವಜ್ಞ 11 253 ಭಗವಂತ ನೀನು ದುರ್ಭಗ ದೇಹಗತರವರು ತ್ರಿಗುಣವರ್ಜಿತವು ತವರೂಪ | ತವರೂಪ ಗುಣಗಳನು ಪೊಗಳಲೆನ್ನಳವೆ ಪರಮಾತ್ಮ12 254 ಭಾನು ತನ್ನಯ ಕಿರಣ ಪಾಣಿಗಳ ದೆಸೆಯಿಂದ ಪಾನೀಯಜಗಳನರಳಿಸಿ | ಆರಳಿಸಿ ಗಂಧ ಆ ಘ್ರಾಣಿಸಿದಂತೆ ಗ್ರಹಿಸೀದಿ13 255 ಬೈದವನ ಕುತ್ತಿಗೆಯ ಕೊಯ್ದು ಅಂಧಂತಮಸ್ಸಿ ಪರಿಪಂಥಿ ನೃಪರನ್ನು ಐದುವೆನೆ ನಿನ್ನ ಹೊರತಾಗಿ 14 256 ನಿಮ್ಮನುಗ್ರಹದಿಂದ ಬ್ರಹ್ಮರುದ್ರಾದಿಗಳ ನಿರ್ಮಿಸಿ ಸಲಹಿ ಸಂಹಾರ | ಸಂಹಾರ ಮಾಡುವೆನು ದುರ್ಮದಾಂಧರನಾ ಬಗೆವೇನೆ 15 257 ಮಂಜುಳೋಕ್ತಿಯ ಕೇಳಿ ಅಂಜಲ್ಯಾತಕೆಂದು ನವ ಕಂಜಲೋಚನೆಯ ಬಿಗಿದಪ್ಪಿ | ಬಿಗಿದಪ್ಪಿ ಮುದ್ದಿಸಿದ ಧ ನಂಜಯ ಪ್ರಿಯನು ಸಥೆಯಿಂದ16 258 ನಿನಗೆ ಎನ್ನಲಿ ಭಕುತಿ ಎನಿತಿಹುದೊ ಕಂಡೆ ಎಂದೆಂದು ಇಹುದು ಇದ ಕನುಮಾನವಿಲ್ಲ ವನಜಾಕ್ಷಿ 17 259 ದೋಷವರ್ಜಿತ ರುಕ್ಮಿಣೀಶನ ವಿಲಾಸ ತೋಷದಲಿ ಕೇಳಿ ಪಠಿಸಿದ | ಪಠಿಸಿದಂಥವರ ಅಭಿ ಲಾಷೆ ಪೊರೈಸಿ ಸಲಹೂವ 18 260 ನೀತಜನಕ ಶ್ರೀ ಜಗನ್ನಾಥ ವಿಠ್ಠಲ ಜಗ ನ್ಮಾತೆಯೆನಿಸುವಳು ಮಹಲಕ್ಷ್ಮಿ | ಮಹಲಕ್ಷ್ಮಿ ಸುತ ಬ್ರಹ್ಮ ಪಾತ್ರನೆನಿಸುವ ಗುರು ರುದ್ರ 19
--------------
ಜಗನ್ನಾಥದಾಸರು
ಛೀ ಛೀ ಛೀ ಛೀ ಪ ಬಿಟ್ಟು ಕೊಡೋ ನೀ ಸಂಸಾರ ಭ್ರಾಂತಿ | ಎಷ್ಟು ಸೋಸುವಿ ದುಃಖದ ಪಂಥಿ | ಅಷ್ಟು ಪಾಶದೀ ಬಿಗಿದಿಹ ಗ್ರಂಥಿ | ಕಷ್ಟ ಪಟ್ಟಿನ್ನು ಮಾಡುವಿ ಚಿಂತಿ 1 ಸತಿ ಸುತರೆಲ್ಲಾ | ಘನ್ನಸ್ನೇಹವ ಮಾಡುವರಲ್ಲಾ | ಧನ ಯೌವನ ಕೊರತ್ಯಾಗಿ ಸೊಲ್ಲಾ | ತೃಣ ಸಮಮಾಡಿ ಬಗೆವರು ಖುಳ್ಳಾ 2 ಹಳೆದಾಯಿತು ತಾಳಿದ ಕಂಥೀ | ಬಲವಿಂದ್ರಿಯ-ವಾದವು ಶಾಂತಿ | ಬಲು ನೆರೆಯಿತು ರೋಗದ ಸಂತಿ | ಕೆಳಗಾಯಿತು ಪೌರುಷ ಖಂತಿ 3 ಹಿರಿಕಿರಿಯರು ಸರಿಕರು ನಿನ್ನಾ | ಸರಿದ್ಹೋಗುದು ಕಾಣಲಿಲ್ಲÁ ಕಣ್ಣÁ | ಅರಿತು ವಿವೇಕವ ಪಡಿಯದೆ ಘನ್ನಾ | ಮರೆದಾಗುರೆ ನೀ ಮಸಿಮಣ್ಣಾ 4 ಒಂದಾಗಲು ಮತ್ತೊಂದಾಶೆ | ಸಂಧಿಸುವದು ವಾಸನೆ ಸೂಶಿ | ತಂದೆ ಮಹಿಪತಿ ನಂದನು ಹೇಸಿ | ಇಂದು ಸಾರಿದಾ ಹರಿನಾಮ ಸ್ಮರಿಸಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಶಾವತಾರ ಭವ ದೀನಾತ್ಮ ಜನಗಳಿಗೆ ಜ್ಞಾನಾರ್ಥವಾಗಿ ನದಿಯೋಳ್‍ಸ್ನಾನಾರ್ಥ ಮುಣಗಿರುವ ಶೋಣೀತ ಸತ್ಯವೃತ ಪಾಣೀಲಿ ಬಂದು ಭರದೀಮಾನವರಂತೆ ಮೃದು ವಾಣೀಲಿ ತನಗೆ ಭೂಸ್ಥಾನವಾಬೇಡಿ ಬೆಳೆದೂಪಾನೀಯ ಪಾತ್ರಸ್ವ ವಿಷಾಣಾದಿ ಧರಿಸಿ ರವಿ ಸೂನುನ ಮಾಡಿಹನು 1 ವೃಂದಾರಕಾರು ಬಲ ವೃಂದಾವ ಕೂಡಿ ಗಿರಿಯಿಂದಾಲೆ ಕ್ಷೀರಧಿಯನೂವಂದಾಗಿ ಮಥಿಸುತಿರೆ ಸಿಂಧೂವಿನೋಳ್ ಜರಿದು ಪೊಂದೀತು ತತ್ತಳವನೂಮಂದಾತ್ಮರಾದುಭಯ ಮಂದೀಯ ನೋಡಿ ಬೆನ್ನಿಂದಾಲೆಯೆತ್ತಿ ಸುಧೆಯಾತಂದ್ಯೋರು ರೂಪನಮರಿಂದ್ರಾರಿಗಿತ್ತು ದಿತಿಜೇಂದ್ರಾರಮೋಹಿಸಿದನು 2 ಕ್ಷೋಣೀಶ ಕ್ಷೋಣೀಯನೆತ್ತಿ ಪಥಿ ದಾನಾವತಡಿಯುತಿರಲೂನಾಸವಾತ್ಮನವನ್ಹಾನೀಯ ಮಾಡಿ ನಿಜ ಸೂನೂಗೆಒಪ್ಪಿಸಿದನುಣೇಶ ಜಾತ ನಿಜಮಾನಿನೀ ಸಹಿತ ಸಂಸ್ಥಾನಾದಿ ಕೂತುಸುಖದೀತಾನವರಾನ ಪಡಿಸಿದಾನಂದ ಭೋಗಿಸಲು ತಾ ನೋಡಿಮೋದಿಸಿದನು 3 ಶುಭ ಭರಾತೀಯ ತತ್ಸುತಗೆ ಪ್ರೀತೀಲಿಪಾಲಿಸಿದನೂ 4 ದುಷ್ಟಾತ್ಮರಿಂದ ಬಹು ದುಷ್ಟಾತ್ಮರಾಗಿ ಸುರರಿಷ್ಟಾವ ಸ್ವರ್ಗ ಸುಖವಾಬಿಟ್ಟಾವನಲ್ಲ ನಿಜ ಪೊಟ್ಟೀಯಗೋಸುಗದಿ ಕಷ್ಟಾದಿಸಂಚರಿಸಲೂದೃಷ್ಟಿಂದ ಕಂಡದಿತಿ ತುಷ್ಟೀಸುತಿರಲವಳ ಪೊಟ್ಟೀಯೊಳವತರಿಸಲೂಪುಟ್ಟಾತ್ಮ ಬಲಿಗೆ ಸುತಲಿಷ್ಟಾವ ನೀಡಿ ಸುರರಿಷ್ಟಾವಪಾಲಿಸಿದನೂ 5 ಭೂತೇಶನೊಬ್ಬ ತನ ತಾತಾನ ಕೊಂದುನವ ಮಾತೇಯನಪಹರಿಸಲೂಭೀತೀಲಿ ತಾಯಿಯುರ ಘಾತಕ್ಕ ಸದೃಶ ಭುವಿ ಧಾತ್ರೀಶದುಷ್ಕಲವನೂಘಾತೀಶಿ ಪೂರ್ವಜರ ಪ್ರೀತೀಯ ಪಡೆದು ಮುನಿ ಪೋತಾನ ರಕ್ಷಿಸುತಲೇಪಾಥೋದಿ ತಟದಿ ರಘುನಾಥೇಷ್ಟದಾತ ನಿಜ ಶಾಪಾವಭೋಗಿಸುವನೂ6 ತಾಪ ರಘುನಾಥಾನುನೋಡಿ ವಿಥಿಲಾಜಾತಾಸಮೇತ ಸಹಜಾತಾನ ಕೂಡಿ ವನಜಾತಾದಿಸಂಚರಿಸುತಾಘಾತೀಸಿ ರಾಕ್ಷಸರ ಪ್ರಿಯನಿತ್ತು ಮುನಿಪಾತ್ಮರಿಗೆಲ್ಲ ಪುರದೀಸೀತಾಸಮೇತ ಕಪಿ ಪೋತಾನ ಕೂಡಿ ನಿಜ ಭೂತಿಯಭೋಗಿಸಿದನು 7 ಕಾರಾಳಯಾದಿ ನಿಜ ನಾರೀಯ ಕೂಡುತಲೆಶೂರಾತ್ಮಜಾತನಿರಲೂನಾರಾಯಣಾತ್ಮತನು ತೋರೀಸಿ ಬಾಲವಪುಗೋರಾಜನಾಲಯದಲೀಶೀರೀಯ ಕೂಡಿ ಸುರವೈರಿಗಳಳಿದು ನದಿ ತೀರಾದಿಕೊಳಲನೂದಿನಾರೇರಿಗೆಲ್ಲ ನಿಜ ಜಾರಾಟ ಸೌಖ್ಯವನು ತೋರೀಸಿತೋಷಿಸಿದನು 8 ವೃಷ್ಣೀಯ ಮಧುರೆಯಲಿ ಪುಟ್ಟೂತ ಗಾರ್ಗಸುತನಟ್ಟೂಳಿಗಾಗಿಜಲದೀಪಟ್ಟಣ ನಿರ್ಮಿಸುತಲಿಷ್ಟಾಪ್ತ ಜನರುಗಳ ನಿಟ್ಟಲ್ಲೆ ಪಾಲಿಸಿದನುಸೃಷ್ಟೀಶಮಕ್ಕಳನು ಮುಟ್ಟೂತ ಕರದಿ ತದಭಿಷ್ಟಾರ್ಥಗಳನುಸುರಿದೂತೃಷ್ಣೇಶ ಪಾಂಡವರ ಕಷ್ಟಾವ ಕಳಿದು ಗಜಪಟ್ಟಣವಸಾಧಿಸಿದನು 9 ಪಾರ್ಥಾರ ಶಾಲೆಯೊಳು ಪೂತಾತ್ಮರಿಂದ ಹರಿ ಭೂತೀಶುಕೇಳಿ ಮನದೀಪ್ರಾತಃ ಸಮಾರಭಿಸಿ ರಾತ್ರೀಯತನಕ ಹರಿ ಮೂರ್ತೀಯಪೂಜಿಸುತಿಹಾದೈತ್ಯಾರ ನೋಡಿ ಸುರನಾಥರ ಜಯಿಸಿ ಜಿನ ಪೋತಾತ್ಮ ಮಲಗಿ ತೊಡಿಯೋಳ್‍ಶಾಸ್ತ್ರಾವ ಬೋಧಿಶ್ಚವರಾತ್ಮಾವ ಕೆಡಿಸಿ ಸುರವೈತಾವತೋಷಿಸಿದನೂ10 ಶುಭ ಸತಿ ಮಿಷ್ಟಾತ್ಮಹಯವ ಮಾಡಿಅಷ್ಟಾಷ್ಟ ಖಡ್ಗವನು ಮುಷ್ಟೀಲಿ ಪಿಡಿದು ಬಹು ಶಿಟ್ಟೀಲಿಸುತ್ಲೆ ಚರಿಸೀವಿಪ್ಲವಾತ್ಮಕ ಕಲ್ಕಿ ಖಳರ್ಹೊಟ್ಟೀಯವಡೆದು ಶುಭಪಾಲಿಸಿದನು11 ವೆಂಕಟನಾಥ ಭವಪರಿಕವ ಹರಿಸೂತ ಕಿಂಕರನಾಗಿರುವೆನೂಶಂಬಾಸುರೋದರಜ ಶಂಖಾವಪಿಡಿದು ಮುಖ ಪಂಕೇಜದಿಂದೂದುತಾಹುಂಕಾರ ಮಾಡುತಲೆ ಕಿಂಕಿರನೆಂದು ಭುವಿ ಸಂಕರ್ಷಣದಿಸುರರೂಶಂಕೀತರಾಗುತ ಭಯಂಕಾರವೆಂದು ಮಹಾತಂಕಾದಿಸಂಸ್ಮರಿಪರೂ 12 ದಂಷ್ಟ್ರೇಶ ಬ್ರಹ್ಮಾನಾಸಿ ಪುಟ್ಟೂತವಾರಿನಿಧಿ ಮೆಟ್ಟೂತಘರ್ಘವಿಸಲೂದೃಷ್ಟೀಲಿ ನೋಡಿ ಕಿವಿಗೊಟ್ಟಾಲಿಸೂತ ನಿಜಪೊಟ್ಟೀಯರಾಂತರದಲೀಯಷ್ಟೇನೊ ಸನ್ನಾವಿದು ಪುಟ್ಟೂತಲ್ಹಂದಿ ಮರಿಬೆಟ್ಟೇಶದಂತಿರುವದೂಧಿಷ್ಟ್ಯಾದಿ ಕೂತು ಪರಮೇಷ್ಠೀಯ ಮಹಿಮೆಯನು ತುಷ್ಟಿಸಿ ಪಾಡುತಿಹನು 13 ತರೂನ ಮೂಲದಿ ಕೂತು ಬೋರೆಯಾ ಹರಿಯ ಶಾಸ್ತ್ರವ ಪೇಳೆ ಮುನಿಪನ ಸ್ವರವ ಸ್ಮರಿಸಿರಿ ಮನುಜರೇ ಭವದರವು ಪೋಗುವದು 14 ಚಿಕ್ಕ ಹುಡುಗೆಯು ತನ್ನಾಗತ ಚಕ್ರದಲಿ ಬ್ರಹ್ಮಾಂಡ ಕಟಹವ ಟೊಕ್ಕ ವೆನಿಸುತ ಜೀವ ಸಂಸ್ಕಾರ ಮುಕ್ಕು ಮಾಡುವಳು ಮೋಘ ಸೌಖ್ಯ ನೀಡುವಳು 15 ಧ್ವಾನ ಮಾಡಲುಧರ್ಮರಾಜಗೆಮಾನವಾದಿಗಳೆಲ್ಲ ಮುಖಭವ ಶೋಣಿತಾಗುವದು 16 ತತ್ವ ದಿವಿಜರು ನಮ್ಮ ದೇಹದಿ ನಿತ್ಯದಲಿ ಹರಿಸ್ಮರಿಸಿ ತುತಿಸುತಸತ್ವ ದಿವಿಜರಿಗೆತ್ತುವೆನು ಕರವಾ17 ದುರಿತ ಹರಿಸುವನೂ 18 ಯಲ್ಲಿ ಬ್ರಹ್ಮಾಂಡದಲಿ ಶಿರಿ ವರವಲ್ಲಭವ ಸಂಸ್ಮರಿಸಿ ಹಿಗ್ಗುವಫುಲ್ಲನಾಭನ ಭಕ್ತರನು ಮನದಲ್ಲಿ ಸ್ಮರಿಸುವೆನೂ 19 ಶ್ರೀಶಾನು ಭಕ್ತಜನದಾಶೀಯ ಪೂರೈಸಲು ಕೂಸಾಗಿದೇವಕಿಸುತಾಯೇಷಾದಿಗಳ ದಿಶುಭರಾಶೀಲಿ ಪುಟ್ಟುತವನೀಶಾರ ವಂಶಬೆಳೆಸಿ 20 ದೋಷಾತ್ಮಾ ದೈತ್ಯಕುಲ ಘಾಶೀಶಿ ಭೂದೇವಿ ಕ್ಲೇಶಾವನೆಲ್ಲಕಳೆದೂ ದಾಶೀಜ ನಾಗಿ ನಿಜ ಕೋಶಾದಿ ಮೋಕ್ಷಾ ಪದಮೀರೇಶ ತೋರಿಸಿದನು ಇಂದಿರೇಶನ ಸಾಧಿಸಿದನು 21 ನಾರದರ್ಷಿಯ ಕರುಣದಲಿ ಶನಿವಾರ ಮಾಡೀದ ಪರಮತುತಿಯನುಭೂರಿ ಪಠಿಸಲು ಇಂದಿರೇಶನುದಾರ ನೋಡುವನು 22
--------------
ಇಂದಿರೇಶರು
ಮರೆಯ ಮಾಡುವರೆ ರಂಗಯ್ಯ ತೆರೆಯ ಹಾಕುವರೆ ವರದನು ಜಗಕೆಂದು ಎನಿಸಿದ ಬಳಿಕ ಪ ಕುರುಹ ನಾನರಿಯೆ ನಿನ್ನಯ ರಂಗಯ್ಯ ಸುರತವ ಬಲ್ಲೆ ಪರಿ ಮಾಡಿ ತೋರಿದೆ 1 ಗುರುತುಯೆಂದರಿಯಾ ಸರ್ವದಾ ಎನ್ನ ದೊರೆಯು ನೀನಲ್ಲೆ ತೆರೆಯು ನಿನ್ನದು ಲೋಕ ಪರಿಪಂಥಿಯಾಹುದೆ 2 ದುರಿತವು ಮೊದಲೆ ಪೋದವು ವಾಸುದೇವವಿಠಲನೆ ಪೊರೆಯೊ ದಯವು ನಿನ್ನ ಸಹಜ ಪೋಗುವುದೇ 3
--------------
ವ್ಯಾಸತತ್ವಜ್ಞದಾಸರು
ಕೊಡಬಹುದೇ ಮಗಳ - ಸಮುದ್ರರಾಜಕೊಡಬಹುದೇ ಮಗಳ ಪನಡೆದರೆ ಬಡವಹಳೆಂಬ ಕುಮಾರಿಯ |ಹಿಡಿಬಿಟ್ಟಿ ಮಾಡಿ ಹರಿಗೆ ಸಿಂಧುರಾಜನುಅ.ಪಕುರುಹಬಲ್ಲವರಾರು, ಕುಲಗೋತ್ರವಾವುದೊ |ಅರಿತ ರಾಯರೊಳಗೆ ಆರ ಮಗನೊ ಇವ |ವರುಶಭಾಂಗಿಗೆ ತಕ್ಕ ವರನಹುದೆ ಇವ |ಹಿರಿಯರೆಂಬುದ ನೆರೆಹೊರೆಯೂ ಕಾಣದನಿವ |ಪರಿಪಂಥಿಜನಕೆಲ್ಲ ಪ್ರಾಣಘಾತಕನಿವ |ನಿರುತ ಮೇಘವ ಪೋಲ್ವ ನೀಲಮೆಯ್ಯವನಿವ,ಹಿರಿದಾದ ನಾಲ್ಕು ಹಸ್ತಗಳುಳ್ಳವನಿವ |ಅರುಣಚ್ಛಾಯೆಯ ರೇಖೆ ಅರಳಿಸಿಹಾರುವ ||ಗರುಡಹಕ್ಕಿಯ ನೆಚ್ಚಿದ - ಎದೆಯ ಮೇಲೆ |ಭರದಿ ಒದೆಯ ಮೆಚ್ಚಿದ - ಘೋರರೂಪ |ಧರಿಸಿ ಕೋಪದಿ ಹೆಚ್ಚಿದ - ಕರೆವ ಗೋವ |ಕರುಗಳ ಕೊರಳುಚ್ಚಿದ - ಸಂಸಾರದೊಳ್ |ಇರುತಿಹ ನಾರಿಯರ ಮನವೆಲ್ಲ ಬಿಚ್ಚಿದ 1ಅಡಿಗಡಿಗೆ ಹತ್ತು ಅವತಾರವ ಮಾಡಿದ |ಕಡುಕಪತಿಯಲ್ಲದೆ ಭಾರಿ ಗುಣದವನಲ್ಲ |ಗಿಡದ ಮರೆಯಲಿದ್ದು ಕಪಿಯ ಕೊಂದನುಹೊಲ್ಲ |ನಡತೆಯಲಿ ಸಲೆ ಜನಲಜ್ಜೆ ಇವನಿಗಿಲ್ಲ |ಹಿಡಿದು ಪೂತನಿ ಮೊಲೆಯುಂಡ ಚೌಪಟಮಲ್ಲ |ಮಡುಹಿದ ಮಾವನ ಮಧುರೆಯೊಳಗೆಖುಲ್ಲ |ಕೊಡೆಮಾಡಿ ಬೆಟ್ಟವ ಗೋಕುಲದೊಳಗೆಲ್ಲ |ಮಡದಿಯರುಡುಗೆಯ ಕದ್ದದ್ದು ಹುಸಿಯಲ್ಲ ||ಕಡಹದ ಮರವೇರಿದ -ಅವರಮಾನ - |ಕೆಡಿಸಿ ಭಂಡರ ಮಾಡಿದ - ದಧಿಕ್ಷೀರ - |ಗಡಿಗೆ ಸೂರೆಯ ಮಾಡಿದ - ಕಾಳಿಂಗನ - |ಮಡುವ ಕಲಕಿ ನೋಡಿದ - ಸ್ಯಂದನವನು |ನಡೆಸುವ ಕಾರಣ ನರಗೆ ಸಾರಥಿಯಾದ 2ಊದುತ ಕೊಳಲನರಣ್ಯದೊಳ್ ಗೋಗಳ |ಕಾದು ಕುಂಚಿಗೆ ಮಾಡಿ ಕಂಬಳಿ ಪೊದೆವನು |ಓದನವನು ಬೇಡಿ ಹೊಟ್ಟೆಯ ಹೊರೆದನು |ಯಾದವರೊಳಗಾಡಿ ಎಂಜಲನುಂಡನು |ಕ್ರೋಧದಿಂದ ಸುರರ ಕೊಂದು - ಕೊಂದಿಡುವನು |ಪಾದರಿ ಪೆಣ್ಣುಗಳೊಳಗಿರುತಿಪ್ಪನುಆದಿಯೆ ಇವಗಿಲ್ಲ ಎಂದೆಂದಿಗಿಪ್ಪನು |ಭೂದಿವಿಜರ ಕೂಡ ಬಿಕ್ಷಕೆ ಪೋಪನು ||ಮೇದಿನಿಯೊಳಗಿರುವ - ಮಸ್ತಕವು ಬೋ - |ಳಾದವರೊಳಗಿರುವ - ನೋಡಲು ಭೇದಾ - |ಭೇದದಂದದಿ ತೋರುವ - ಸಭೆಯೊಳಗೆ |ಬೈದರೆ ಮೈದೋರುವ ಶೇಷಶಾಯಿ - |ಯಾದಂಥಪುರಂದರ ವಿಠಲನೆಂದರಿಯದೆ3
--------------
ಪುರಂದರದಾಸರು