ಒಟ್ಟು 16 ಕಡೆಗಳಲ್ಲಿ , 10 ದಾಸರು , 14 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಉ) ತಾತ್ತ್ವಿಕ ಕೃತಿಗಳು ಪಾರಾಯಣ ಮಾಡಿರೋ ಭವ ಪಾರಾವಾರದೊಳು ತಾರ ಕವಿದು ನೋಡಿರೋ ಪ ನೀರ ಬೊಬ್ಬುಳಿಕೆಯು ತೋರುವ ರೀತಿ ಶ ರೀರ ನಚ್ಚಿರಬೇಡಿರೋ ಧಾರಣಿಯಲಿ ಪೇಳಿರೋ 1 ಸಾಹಸ ಪಡಬೇಡಿರೋ ಬಾಹವೆಂದಿರ ಬೇಡಿರೋ 2 ನೇಹದಿ ನಾರಿಯೊಳು ದೇಹಿ ಸಂಸಾರದೊಳು 3 ಮಾರಿಯಲ್ಲವೆ ಕೇಳಿರೋ ನಾರಿಯಾರಿಗೆ ಮಕ್ಕಳಾರಿಗೆ ಜೀವಿತ ದಾರಿಯೆಲ್ಲಿಗೆ ಪೇಳಿರೋ 4 ಮಿಂಚಬಾರದು ತನ್ನ ಮಡದಿಯ ಬಾಲರ ಕಂಚು ಕನ್ನಡಿ ಭಾರದೀ ಸಂಚಿತ ದ್ರವ್ಯದಿ ಕೊಂಚವು ಬಾರುದು ಉಗಿ ಸಂಚಿಗೆ ದೇಹವಿದ 5 ಒಲಿದು ಕೊಂಡಾಡುವರು 6 ಅರ್ಥವಿದ್ದವನ ಸಮರ್ಥನೀತನ ಜನ್ಮ ಸಾರ್ಥಕವೆಂಬುವರು ಆರ್ಥವ ಕಳಕೊಂಡು ಸಾರ್ಥನಾಗಲು ಜನ್ಮಸು ವ್ಯರ್ಥವೆಂದುಸುರುವರು 7 ರೊಕ್ಕವಿದ್ದರೆ ಕೈಲಿ ಸಿಕ್ಕರೆ ಮಾತಿನೊಳಕ್ಕರೆ ಪಡಿಸುವರು ರೊಕ್ಕವಿಲ್ಲದವನ ಮಕ್ಕಳು ಮಡದಿಯರು ಲೆಕ್ಕಿಸದಿರುತಿಹರು8 ಮರಣ ಪೊಂದುವರು ಕೊರಳನು ಕೊಯ್ಸುವರೋ 9 ಬಂಧುಗಳನು ಕೊಲ್ವರು ಒಂದಿಗೆ ಜನಿಸಿದರೆಂದು ನೋಡರು ನಿಜ ದಂದುಗಕ್ಕೊಳಗಹರು 10 ಗಂಟು ಕಟ್ಟಿರೆ ಮನದಿ ಗಂಟಲ ಬಿಗಿವಾಗ ನಂಟರಿಲ್ಲವು ಜಗದಿ 11 ತಾಪದಿ ನೆನೆಯುತಿರೆ ಭೂಪನು ನಮ್ಮ ದೊರೆ12
--------------
ವೆಂಕಟವರದಾರ್ಯರು
ಅತ್ಯಾಸೆಪಡಬೇಡ ಅಸ್ಥಿರ ಸಂಸಾರ ಮತ್ತನಾಗದಿರೆಲವೊ ಪ ವೆತ್ಯಸ್ತ ಸ್ಥಿತಿಯಿಂದಾನಿತ್ಯಾ ಶರೀರವಿದು ಅ.ಪ ಜನರಾಡುವುದು ಕೇಳಿ ಮನಕೆ ಬಂದುದ ಕೋರಿ ಅನುಮಾನ ಚಿತ್ತನಾಗಿ ವನಿತೆಯರ ಬಲೆಯೊಳು ಸಿಲುಕಿ ಮೋಹಭ್ರಾಂತಿ ವಶನಾಗಿ ಧರ್ಮಾಧರ್ಮಗಳ ತಿಳಿಯದೆ 1 ಹೇಯ ಸುಖವ ಬಯಸಿ ಆಯಾಸ ಪಡುತಲಿ ಬಾಯ ಬಿಡುತ ಸತತ ನೋಯುತಾ ನುಡಿಯುತ ಕ್ರೋಧ ಲೋಭದಿ ಮುಳುಗಿ ನಾಯಿಯಂದದಿ ತಿರಿಗಿ ನಾನಾ ವಿಧದಲಿ 2 ದಾನಧರ್ಮಗಳಿಲ್ಲ ಜ್ಞಾನಸತ್ಯಗಳಿಲ್ಲ ಧ್ಯಾನವು ಮೊದಲೇ ಇಲ್ಲ ಮಾನಾಭಿಮಾನ ಅಜ್ಞಾನದಿ ಮುಳುಗಿ 3 ಪರರೊಡೆವೆಯ ತಂದು ಒಡಲ ಹೊರೆಯುತಲ- ನೆರೆಹೊರೆ ನೋಡಿ ಅವರಂತೆ ನಾನಿರಬೇಕೆಂದ 4 ಕರ್ಮ ಭಿನ್ನಇವರಿಗೆಲ್ಲ ಮುನ್ನಿನ ಕರ್ಮದಿ ಫಲ ಬೆನ್ನಬಿಡದು ಎಂದು ಪೇಳುವ ಶಾಸ್ತ್ರಗ- ಳನ್ನು ನಂಬದಲೆ ನಿನ್ನನ್ನೆ ನೀ ಪೊಗಳಿ ಕೊಂಡು 5 ನ್ಯಾಯಾರ್ಜಿತ ದ್ರವ್ಯದಿಂದ ಕಾರ್ಯಗಳವು- ಪಾಯದಂದಲಿ ನಡೆಸಿ ತಾಯಿ ಮಕ್ಕಳ ನೋಡುವಂತೆ ದೀನರಿಗೆ ಸ- ಹಾಯ ಮಾಡುತ ಜ್ಞಾನಿಗಳ ಸೇವಿಸುತಿಹರು 6 ಪೊರೆವೊ ಭಾರಕರ್ತ ಗುರುರಾಮವಿಠಲ ತಾ ಶರಣಾದವರಿಗೆ ಭಯವೇನು ಸ್ವಾಮಿ ಸರ್ವರ ಪಾಲಿಸುವನು ನಿನ್ನನು ಮಾತ್ರ ಬಿಡುವನೆ 7
--------------
ಗುರುರಾಮವಿಠಲ
ಆನಂದತೀರ್ಥರ ಆರಾಧನೆಯಿದು ಆನಂದಪೂರಿತ ಮಹೋತ್ಸವ ಪ ನಾವಿಂದು ನಿರ್ಮಲ ಮಾನಸದಿಂದ ಗೋವಿಂದ ಭಕುತರ ಪೂಜಿಸುವ ಅ.ಪ ಜೀವನ ಚರಿತೆಯ ಕೇಳಿ ಮಹಾತ್ಮರ ಜೀವನ ಮಾದರಿ ಎಮಗಿರಲಿ ಜೀವನದಲಿ ಬೇಸರ ಪಡಬೇಡಿರಿ ಜೀವೋತ್ತಮರೇ ರಕ್ಷಿಸಲಿ 1 ಎಮ್ಮ ಮತಕೆ ಸಮಮತವಿಲ್ಲವು ಪರ ಬೊಮ್ಮನ ಸಮ ದೇವತೆ ಇಲ್ಲ ಎಮ್ಮ ನುಡಿಗೆ ಸಮ ಹಿತನುಡಿಯಿಲ್ಲವು ಹಮ್ಮಿನಲೀಪರಿ ಬೋಧಿಸುವ 2 ನಿನ್ನಯ ವಿಷಯವ ವರ್ಣಿಪುದೆಲ್ಲ ಪ್ರ ಸನ್ನ ಹೃದಯದಲಿ ಧೈರ್ಯದಲಿ ಇನ್ನು ವೀರ ವೈಷ್ಣವನಾಗುವೆ ವೆನ್ನುವ ವಚನ ಕುಸುಮವೆರಚಿ 3
--------------
ವಿದ್ಯಾಪ್ರಸನ್ನತೀರ್ಥರು
ಆಸೆಪಡಬೇಡ ಮನುಜ ತಿಳಿಯದೆ ದುರಾಸೆ ಪಡಬೇಡ ಪ ಮೋಸ ಮಾರ್ಗಪಿಡಿದು ಮೂಢರನ್ನು ನೋಡಿ ನೋಡಿ ಅ.ಪ ಚಿಂತಿಸಿ ಭ್ರಾಂತನಾಗಿ ಸಂತೋಷವಿಲ್ಲದೆ ಸದಾ ಶಾಂತಚಿತ್ತರ ಕೂಡದೆ ಸಂತೆ ಕೂಟವನ್ನು ನಂಬಿ 1 ಮುಂದಿನ ಗತಿ ಗೋತ್ರವು ಸಂದೇಹವಾಗುವದೆಲೊ 2 ಶರಣರನಾಶ್ರಯಸದೆ ಕರೆ ಕರೆ ಸಂಸಾರದಿ3
--------------
ಗುರುರಾಮವಿಠಲ
ಏನು ಇಲ್ಲದ ಎರಡು ದಿನದ ಸಂಸಾರಜ್ಞಾನದಲಿ ದಾನಧರ್ಮವ ಮಾಡಿರಯ್ಯ ಪ ಹಸಿದು ಬಂದವರಿಗೆ ಅಶನವೀಯಲು ಬೇಕುಶಿಶುವಿಗೆ ಪಾಲ್ಬೆಣ್ಣೆಯನುಣಿಸಬೇಕುಹಸನಾದ ಭೂಮಿಯನು ಧಾರೆಯೆರೆಯಲು ಬೇಕುಪುಸಿಯಾಡದಲೆ ಭಾಷೆ ನಡೆಸಲೇ ಬೇಕು1 ಹೊರೆಯಲು ಬೇಡಕುಳ್ಳಿರ್ದ ಸಭೆಯೊಳಗೆ ಕುತ್ಸಿತವು ಬೇಡಒಳ್ಳೆಯವ ನಾನೆಂದು ಬಲು ಹೆಮ್ಮೆಪಡಬೇಡಬಾಳ್ವೆ ಸ್ಥಿರವೆಂದು ನೀ ನಂಬಿ ಕೆಡಬೇಡ 2 ದೊರೆತನವು ಬಂದಾಗ ಕೆಟ್ಟುದ ನುಡಿಯಬೇಡಸಿರಿ ಬಂದ ಕಾಲಕ್ಕೆ ಬಲು ಮೆರೆಯಬೇಡಸಿರಿವಂತ ಶ್ರೀ ಕಾಗಿನೆಲೆಯಾದಿಕೇಶವನಚರಣ ಕಮಲವ ಸೇರಿ ಸುಖಿಯಾಗು ಮನುಜ 3 * ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.
--------------
ಕನಕದಾಸ
ಕೂಗಿತು ತಾಮ್ರದ ಚೂಡ ಪರ ಇಲ್ಲ್ಲೆಂದು ಪ ಪಕ್ಕಗಳೆರಡು ಚಪ್ಪರಿಸಿ ಡಂಗುರುವ ಹೊಯ್ಯೆ ಸೂಕ್ಕಿದವರ ಎದೆ ಜರ್ಝರಿಸೆ ರೆಕ್ಕಿಯ ಮುಖವೆತ್ತಿ ಹರಿಸರ್ವೋತ್ತಮನೆಂದು ಕೊಕ್ಕಟೆ ಕೊಕ್ಕಟೆ ಕೊಕ್ಕಟ್ಟೆ ಕೋ ಎಂದು1 ಒಂದು ಝಾವದಿ ಓಂಕಾರನೆಂದು ಕೂಗೆ ಇಂದಿರಾಪತಿ ವಿಧಿಜನಕನೆಂದೂ ಸಂದೇಹಪಡಬೇಡಿ ಸಕಲಾಂತರ್ಯಾಮಿ ಶ್ರೀ ಬಿಂದುಮಾಧವನಲ್ಲದಿಹಪರವಿಲ್ಲವೆಂದು 2 ಎರಡು ಝಾವದಿ ಪುರುಷೋತ್ತಮನೆಂದು ಗರುಡಾಚಲ ನರಸಿಂಹನೆಂದು ಮೂರನೆ ಝಾವಕ್ಕೆ ವೀರನಾರಾಯಣ ಹÀರಿಗಯಾಗದಾಧರನಲ್ಲದಿಲ್ಲವೆಂದು3 ಏಕೋ ನಾರಾಯಣ ದೇವನೆಂದು ಗೋಕುಲಪತಿಯಲ್ಲದಿಹಪರ ಇಲ್ಲವೆಂದು 4 ಯಾಮ ಆರರೊಳು ವ್ಯಾಸಮೂರ್ತಿ ಎಂದು ರೋಮಕೋಟಿ ಬ್ರಹ್ಮರುದ್ರರೆಂದು ಸಾಮಗಾಯನ ಕಾವೇರಿ ರಂಗೇಶ ಸ್ವಾಮಿ ಅಳಗಿರಿ ತಿಮ್ಮನಲ್ಲದಿಲ್ಲವೆಂದು 5 ಏಳು ಝಾವದಿ ವೇಣಿಮಾಧವನೆಂದು ಮೇಲಗೋಟೆ ಚಳ್ಳಾಬಳ್ಳನೆಂದು ಶ್ರೀಲೋಲ (ಆಯೋಧ್ಯಾ) ರಘುರಾಮ ಗಂಡಕಿ ಪರ ಇಲ್ಲೆಂದು6 ಶ್ವೇತ ವರಾಹನೆಂದು ಮಾವ ಮರ್ದನ ಜನಾದರ್Àನನೆಂದು ಶ್ರೀ ಉಡುಪಿಯ ಕೃಷ್ಣ ವಿಜಯವಿಠ್ಠಲ ತಿಮ್ಮ ದೇವನಲ್ಲದೆ ಬೇರೆ ಇಹಪರ ಇಲ್ಲವೆಂದು 7
--------------
ವಿಜಯದಾಸ
ಕೇಳವ್ವ ತಂಗಿ ಕೇಳವ್ವ ಕೇಳಿ ತಿಳಿದು ನೀ ಬಾಳವ್ವ ಪ ನೀಲವರ್ಣನ ಕೃಪೆಯ ಪಡೆಯಲಿಕ್ಕೆ ನಾಳೆಂದರೆ ಮನೆಹಾಳವ್ವ ಅ.ಪ ಅಂಬುಜಾಕ್ಷನ ಪಾದಪಕಮಲವ್ವ ನೀ ನಂಬಿದ್ದಿ ಬಿಡಬೇಡ ಸಂಗವ್ವ ನಂಬಿದ ಭಕ್ತರ ಬೆಂಬಲಿಸಾತನು ಇಂಬುಗೊಟ್ಟು ಕಾಯ್ವ ಸಂಭ್ರಮ ಕೀರ್ತೆವ್ವ 1 ಒಂದೆ ಮನಸಿನ ಬಾಗವ್ವ ಗೋ ವಿಂದನ ವರಪಡಿ ಚೆಂದವ್ವ ಮಂದರಧರನ ಹೊಂದಿಕೊಳ್ಳಲಿಕ್ಕೆ ಹಿಂದು ಮುಂದು ನೋಡಬೇಡ ಮುಕ್ತ್ಯವ್ಯ 2 ಒಂದಿನ ಹೋಗ್ವುದು ಸತ್ಯವ್ವ ತಂಗಿ ಸಂದೇಹ್ಯ ಪಡಬೇಡ ಹುಚ್ಚವ್ವ ತಂದೆ ಶ್ರೀರಾಮ ಗತಿಯೆಂದು ನಂಬಲು ನಿನಗೆ ಬಂಧನವೆಲ್ಲ ಬೈಲವ್ವ 3
--------------
ರಾಮದಾಸರು
ಗಣಾಧೀಶ ಗೌರೀಶ್ ವಾಗೀಶ ಶ್ರೀಶಾನ'ುಸಿ ಬೇಡುವ ಪ್ರಸಾದವನು ಜಗದೀಶಾನೆಲಸಿ ಹೃದಯದಿ ಬಂದು ನುಡಿಸು ದಯದಿಂದಾನೀ ನುಡಿಸಿದಂತೆ ನುಡಿಯುವೆ ಸ್ಪೂರ್ತಿುಂದಾ 1ದೇಹ ದೇವಾಲಯವು ದೇವರೊಳಗಿಹನುಮನದ ಗರ್ಭಾಲಯದಿ ಮಲಗಿಕೊಂಡಿಹನುನಾಲಿಗೆಯ ನಾಮಗರ್ಜನೆಯ ಬಲದಿಂದಾಮನದ ಕದ ತೆಗೆಯೆ ಕಾಣುನನು ಗೋ'ಂದಾ 2ಮನವೆ ಕಾರಣವು ಬಂಧಮೋಕ್ಷಗಳಿಗೆಮನವೆ ಕಾರಣ'ಲ್ಲಿ ಸುಖದುಃಖಗಳಿಗೆಮನಸು ಬಿಗಿ'ಡಿದ್ಹಿಡಿದು 'ಷಯಗಳ ತ್ಯಜಿಸುಮನತು ನಾಮಸ್ಮರಣೆಯೊಳು ಸದಾ ಇರಿಸು 3ಯಾವಾಗಲೂ ರಾಮ ನಿನ್ನೊಳಗೆ ಇರುವಾಭಾವದಿಂದಲಿ ಕರೆಯೆ 'ಒ' ಎಂದು ಬರುವಾದೇವರನು ನಂಬಿದರೆ ಸರ್ವದಾ ಕಾವಾಯಾವ ಅಂಜಿಕೆಯು ನಿನಗಿಲ್ಲ ತಿಳಿ ಜೀವಾ 4ನಿನ್ನೊಳಗೆ ನೀ ನಿನ್ನ ರಾಮನನು ನೋಡುನಿನ್ನ ಬೇಡಿಕೆಗಳನು ರಾಮನಲಿ ಬೇಡುಅನ್ಯರನು ಅಲಕ್ಷಿಸದೆ ಭಜನೆಯನು ಮಾಡುಪುಣ್ಯವಂತರ ಸಂಗದೊಳು ಸದಾ ಕೂಡು 5ಶ್ರವಣ ಭಕ್ತಿಯು ಬೇಕು ಮೊದಲು ಚೆನ್ನಾಗಿಶ್ರವಣವಾಗುವವರೆಗೆ ನಾದತಾನಾಗಿಭವ ಸಮುದ್ರವನು ದಾಟುವಡೆ ಸುಖವಾಗಿಶ್ರವಣವೇ ಮುಖ್ಯ ಸಾಧನವು ನಿಜವಾಗಿ 6ನಾದ ಹುಟ್ಟಿದ ಮೇಲೆ ನಾಮ ಕೀರ್ತನವುನಾಮ ಕೀರ್ತನದಿ ಅಸ್ಪಷ್ಟ ದರುಶನವುನೇಮ ಹೆಚ್ಚಾದಂತೆ ಸ್ಮರಣೆ ಶಾಶ್ವತವುಸ್ಮರಣೆಯೊಳು ಸಂಪೂರ್ಣ ವಸ್ತುದರುಶನವು 7ಅನನ್ಯ ಭಕ್ತಿಯ ಬಲವ ಬಣ್ಣಿಸುವದೇನುಕಣ್ಮುಂದೆ ಸರ್ವದಾ ಹರಿಯು ಕುಣಿಯುವನುಕಣ್ಣು ಮುಚ್ಚಣಿಕೆಯಾಟವನು ಆಡುವನುಅಣುರೇಣು ಪರಿಪೂರ್ಣನಾಗಿ ತೋರುವನು 8ಕುಣಿಯುವನು ಕುಣಿಸುವನು ನಗುತ ನಲಿಸುವನುದಣಿಯುವನು ದಣಿಸುವನು ಉಣುತ ಉಣಿಸುವನುಜನರಿಗದ್ಭುತ ಚಮತ್ಕಾರ ತೋರುವನುಕ್ಷಣ ಬಿಡದೆ ಕೆಳಗಿಳಿಯದಂತೆ ಕಾಯುವನು 9ದೇವರನು ನಂಬಿ ಕೆಡಕಾದವರು ಇಲ್ಲಜದೇವರನು ಬಿಟ್ಟು ಸುಖಹೊಂದಿದವರಿಲ್ಲಾದೇವರನು ಒಲಿಸುವೆಡೆ ಭಾವ'ರಬೇಕುಭಾವ'ಲ್ಲದ ಢೋಂಗಿನರ್ಚನೆಯು ಸಾಕು 10ಚಿನ್ನ ಬೆಳ್ಳಿಗಳ ಮಂಚಪವು ಬೇಕಿಲ್ಲಾಸಣ್ಣಕ್ಕಿ ಅನ್ನ ಪಕ್ವಾನ್ನ ಬೇಕಿಲ್ಲಮಣ್ಣು ಕುಳ್ಳಿಯೊಳು ಒಣ ಅಂಬಲಿಯು ಸಾಕುಘನ್ನ ಮ'ಮನಿಗೆ ನಿರ್ಮಲ ಭಕುತಿ ಬೇಕು 11ಶ್ರವಣ ಭಕ್ತಿಯ ದಾಟದವನು 'ಸಾಧಕ' ನುಪಾದಸೇವನದಿಂದ 'ಸಾಧು' ಆಗುವನುದಾಸ್ಯ ಭಕ್ತಿಯ ಮುಂದೆ 'ಸಿದ್ಧ' ನಾಗುವನುಸಖ್ಯಭಕ್ತಿಯ ಮುಂದೆ 'ಗುರು'ವು ಆಗುವನು 12ಭಕ್ತಿ ಮಾರ್ಗವು ಬಹಳ ಸುಲಭ ಸಾಧನವುಭಕ್ತಿ ಸರ್ವರಿಗೆ 'ಷಯದೊಳು ಪರಿಚಿತವು'ಷಯದೊಳಗಿನ ಪ್ರೀತಿ ಎಳೆದೆಳೆದು ತೆಗೆದುಪರಮಾತ್ಮನೊಳು ಇಡಲು ಭಕ್ತಿಯಾಗುವದು 13ಉಂಡದ್ದು ಶ್ರೀ ಹರಿಗೆ ನೈವೇದ್ಯವೆನ್ನುಕಂಡದ್ದು ಶ್ರೀ ಹರಿಯ ಪ್ರತಿರೂಪವೆನ್ನುಮಲಗಿದ್ದು ಶ್ರೀ ಹರಿಗೆ ಸಾಷ್ಟಾಂಗವೆನ್ನುಸುಲಭ ಪೂಜೆಯ ಮರ್ಮವೆನು ತಿಳಿದು ನೀನು 14ಸಾಲವನು ಮಾಡಿ ಹೋಳಿಗೆ ಹೊಡಿಯಬೇಡಾಜೇಲಿಗಂಜುತ ದೇಶಕಾರ್ಯ ಬಿಡಬೇಡಾಆಲಸ್ಯದಲಿ ಕಾಲವನು ಕಳಿಯಬೇಡಾಕೆಲಸದಲಿ ಕೀಳು ಮೇಲೆಂದು ಅನಬೇಡಾ 15ಸ್ವಚ್ಛ'ರಬೇಕು ಮನಬುದ್ಧಿ ದೇಹದೊಳುಅಚ್ಚುಕಟ್ಟಿರಬೇಕು ಸರ್ವಕಾರ್ಯದೊಳುಎಚ್ಚರಿರಬೇಕು ಜನಪಾತ್ರೆ ರಾತ್ರಿಯೊಳುಬಿಚ್ಚು ಮನ'ರಬೇಕು ಸ್ವಜನ 'ುತ್ರರೊಳು 16ಬಡತನವು ಬಂದಾಗ ಧೈರ್ಯ ಬಿಡಬೇಡ'ಡಿದು ನೆಂಟರ ಮನೆಯ ನೀ ಕೂಡಬೇಡದುಡಿದು ತಿನ್ನಲು ಸ್ವಲ್ಪ ಸಹ ನಾಚಬೇಡಮಡದಿ ಹುಟ್ಟಿದ ಮನೆಯ ನೀ ಸೇರಬೇಡಾ 17ಗಾಜಕಾರಣದೊಳು ' ಮುಚ್ಚುಮನ' ಬೇಕುಧರ್ಮಕಾರಣದೊಳಗೆ 'ಸ್ವಚ್ಛಮನ' ಬೇಕುಅರ್ಥಕಾರಣದೊಳಗೆ ' ಮೆಚ್ಚುಮನ'' ಬೇಕುಕಚ್ಚೆಕೈಗಳು ಸದಾ ಸ್ವಚ್ಛ'ರಬೇಕು 18ಸಂಸಾರ ಮಾಡುವಡೆ ಧನವ ಸಂಗ್ರ'ಸುಸನ್ಯಾಸಿಯಾಗುವೆಡೆ ವೈರಾಗ್ಯ ಬೆಳೆಸುಸರ್ವಕರ್ಮಗಳಲ್ಲಿ ಶ್ರೀಹರಿಯ ಸ್ಮರಿಸುಸರ್ವದಾ ಸಂತ ಸಂಗದೊಳು ಸಂಚರಿಸು19ಸಂತ ಸಂಗದೊಳು ಸಂಚರಿಸುವುದು ಸ್ನಾನಾಸಂತ ವಚನಾಮ್ರತದ ಪಾನವೇ ಸ್ನಾನಾಸಂತರನು ಸಂತೋಷಪಡಿಸುವುದು ಸ್ನಾನಾಶಾಂತಮನದಿಂ ಹರಿಯ ಚಿಂತಿಪುದ ಸ್ನಾನಾ 20ಬಾಲ್ಯದಲಿ ಬ್ರಹ್ಮಚರ್ಯದಿ ಬಲವ ಬೆಳೆಸುತಾರುಣ್ಯದಲಿ ದುಡಿದು ಧನವ ನೀ ಗಳಿಸುವೃದ್ಧಾಪ್ಯದೊಳು ಸದಾ ಶ್ರೀಹರಿಯ ಸ್ಮರಿಸುಶ್ರೀಹರಿಯ ಸ್ಮರಣೆಯೊಳು ಆಯುಷ್ಯ ಸವೆಸು 21ಮೊದಲು ನಿನ್ನ ಪ್ರಯತ್ನ ತಪ್ಪದೆಲೆ ಮಾಡುಅದು ನೀಗದಿರೆ ಮುಂದೆ ದೈವವನು ನೋಡುಮದುವೆಯಾಗುವ ಮೊದಲು ತಿಳಿತಿಳಿದು ನೋಡುದುಡಿದು ಧನ ಗಳಿಸಿ ಸುಖದಿಂದ ಬಾಳುವೆ ಮಡು 22ಧನ'ಲ್ಲದವನ ಸಂಸಾರ ಸುಖವಲ್ಲಾಮನೆಯೊಳಗೆ ನಿತ್ಯ ಕಿರಿಕಿರಿಯು ತರವಲ್ಲಾದನದಂತೆ ಹೆಣ್ಣು ನುಡಿಯುವುದು ಸರಿಯಲ್ಲಾಎಣಿಕೆುಲ್ಲದೆ ಮಕ್ಕಳಾಗುವುದು ಸಲ್ಲಾ23ನೆಂಟರೊಳು ಬಹುದಿನ ಕೆಳಗಿರಬೇಡಾ'ಫ್ರಂಟಸೀಟಿ'ನ ಮೇಲೆ ನೀ ಕೂಡಬೇಡಾಒಂಟಿಯಲಿ ಹೆಂಡತಿಯ ಬಿಟ್ಟು ಇರಬೇಡಾಗಂಟು ಒಬ್ಬರ ಕೈಗೆ ಕೊಟ್ಟು ಆಳಬೇಡಾ 24ನಿನ್ನಂತೆ ತಿಳಿ ಪರರ ಸುಖ ದುಃಖಗಳನುಅನ್ಯಥಾ ನೋಡದಿರು ಅಣ್ಣ ತಮ್ಮರನುಸರ್ವಥಾ ಸ'ಸದಿರು ಅನ್ಯಾಯಗಳನುತಿಳಿಯದೇ ಹಳಿಯದಿರು ಭಿನ್ನ ಮತಗಳನು 25ಅತಿ ಮತುಗಳು ಬೇಡ ಅತಿ ಮೌನ ಬೇಡಾಅತಿ ತಿನಸು ಬೇಡ ಅತಿ ಉಪವಾಸ ಬೇಡಾಅತಿ 'ಹಾರವು ಬೇಡ ಅತಿ 'ನಯ ಬೇಡಾಅತಿ ಉದಾರತೆ ಬೇಡ ಜೀನತನ ಬೇಡಾ 26ಭೂ'ುಂಗೆ ಭಾರವಾಗುತ ತಿರುಗಬೇಡಾಕೂಳಿಂಗೆ ಕಾಳಾಗಿ ನೀ ಕೂಡಬೇಡಸಾಲ ಸಿಗುವಾಗ ಸಂತೋಷ ಪಡಬೇಡಾಸಾಲವೇ ಶೂಲವೆಂಬುದು ಮರೆಯಬೇಡಾ 27ಹನಿಗೆ ಹನಿ ಕೂಡಿದರೆ ಹಳ್ಳದಾಗುವುದುತೆನಿಗೆ ತೆನಿ ಕೂಡಿದರೆ ರಾಶಿಯಾಗುವುದುಕ್ಷಣಬಿಡದೆ ಕಂಡಲ್ಲಿ 'ದ್ಯೆಯನು ಗಳಿಸುಕಣಬಿಡದೆ ಧನ ಧಾನ್ಯಗಳನು ಸಂಗ್ರ'ಸು 28ಮಾತು ಕೃತಿಗಳಿಗೆ ಬಲು ಮೇಳ'ರಬೇಕುನೀತಿಯೊಳು ತನ್ನ ಮನಸಾಕ್ಷಿ ಇರಬೇಕುಮಾತು ಬಲು ಸ'ುದ್ದು ಸತ್ಯ'ರಬೇಕುಸತ್ಯ'ಲ್ಲದ ಸುಳ್ಳು ಸ' ಮಾತು ಸಾಕು 29ಐಕ್ಯ'ದ್ದರೆ ಸೌಖ್ಯ ಭೇದದೊಳು ಬೇದಾಐಕ್ಯ'ದ್ದರೆ ಬಲವು ಕ್ಷಯಬೇನೆ ಭೇದಾಐಕ್ಯ'ದ್ದರೆ 'ಗ್ಗು ಭೇದದೊಳು ಕುಗ್ಗುಐಕ್ಯದಿಂದ ಸ್ವಾತಂತ್ರ್ಯ ರಥವನ್ನು ಜಗ್ಗು 30ತನ್ನ ಅಭಿಮಾನ ತನ್ನವರ ಅಭಿಮಾನತನ್ನ ಕುಲಗೋತ್ರ ಜಾತಿಯ ಸ್ವಾಭಿಮಾನತನ್ನ ಭಾಷಾರಾಷ್ಟ್ರ ಧರ್ಮಾಭಿಮಾನಮಾನವನಿಗಿರಬೇಕು ಇಲ್ಲದವ 'ಶ್ವಾನಾ' 31ತನ್ನತನ ಬಿಡಬೇಕು ತನ್ನವರಿಗಾಗಿತನ್ನವರ ಕುಲಗೋತ್ರ ಜಾತಿಗಳಿಗಾಗಿ ಕುಲಗೋತ್ರ ಜಾತಿಗಳ ತಾಯ್ನಾಡಿಗಾಗಿತಾಯ್ನಾಡು ನುಡಿಧರ್ಮ ಪರಮಾತ್ಮಗಾಗಿ 32ತನ್ನ ಉದ್ಯೋಗ ಮನಮುಟ್ಟಿ ಮಾಡುವರುಉಣಲು ಅಧಿಕಾರ ಆಮೇಲೆ ದೊರಕುವದುಉಣುವಾಗ ಶ್ರೀಹರಿಯ ಸ್ಮರಣೆ ಮಾಡುವದುಮನೆಯೊಳಗೆ ಶಿಸ್ತು ಶಾಂತಿಗಳ ಕಾಯುವದು33ಹರಿಕಥಾ ಕೀರ್ತನ ಪುರಾಣ ಪಠಿಸುವದುಸರಸ ವಾಙ್ಮಯದ ಅಭ್ಯಾಸ ಮಡುವದುತರು ಬರುವ ತನ್ನ ವ್ಯವಹಾರ ನೋಡುವದುಪರ ಪರಿಸ್ಥಿತಿಗಳನು ತೂಗಿ ನೋಡುವದು 34'ಶ್ರಾಂತಿ ಅಭ್ಯಾಸಿ ಸರಸ ಸಲ್ಲಾಪನಿಶ್ಚಿಂತೆುಂದ ನಿದ್ರೆಯು ಸೌಖ್ಯರೂಪನಿತ್ಯ ಮಾನವನ ದಿನಚರಿಯ ಈ ರೂಫನಿಶ್ರೇಯಸಕೆ ಸುಲಭ ಸಾಧನವು ಭೂಪಾ 35ಸ್ವಚ್ಛ ಹವೆ ನೀರು ವ್ಯಾಯಾಮ 'ಶ್ರಾಂತಿಸಾತ್ವಿಕ ಸಸತ್ವಾನ್ನ ಪಾನಗಳ ಪ್ರೀತಿಉಚ್ಚತಮ ಧ್ಯೇಯ ಆಚರಣೆಗಳ ರೀತಿಮೋಕ್ಷಕ್ಕೆ ಸಾಧನವು ಇಹದಿ ಸಂತೃಪ್ತಿ 36ದೇಹ ಬಿದ್ದರೆ 'ಂದೆ ಕೀರ್ತಿುರಬೇಕುಕೀರ್ತಿ ಬರುವಂಥ ಕಾರ್ಯವ ಮಾಡಬೇಕುಕಾರ್ಯದೊಳು ಕುಶಲತನ ದಕ್ಷತೆಯು ಇರಬೇಕುಫಲವು ಪರಮಾತ್ಮನಾಧೀನವೆನಬೇಕು 37ಸರ್ವದಾ ಸುಖವೆ ಇದ್ದವರು ಯಾರುಂಟುಅವರವರ ಕರ್ಮ ಫಲವೇ ಅವರ ಗಂಟುಬೆಳತು ಕತ್ತಲೆಯಂತೆ ಚಕ್ರ ಆರುಗುವದುಸುಖ ದುಃಖ ಬರುವಾಗ ಬಂದು ಹೋಗುವುದು 38ಅನುಭವದಿ ಹೆಚ್ಚು ಸಾಧನ ಬೆಳೆಯಬೇಕುಅನುಭವದ ಮಾತುಗಳು ಬಚ್ಚಿಡಲು ಬೇಕುಅನುಭವವು ಬಂತೆಂದು ಗರ್ವ ಪಡಬೇಡಾಗರ್ವದಿಂದಲಿ ಮತ್ತೆ ಕೆಳಗಿಳಿಯ ಬೇಡಾ 39ಅಡಗಿ ಅಂಬಲಿ ಅರ' ಅಂಚಡಿಯ ಕಡೆಗೆಹುಡುಗರ ಬಲಾರೋಗ್ಯ ನಡೆನುಡಿಯ ಕಡೆಗೆಕಡು ಚಾಣ್ಮೆುಂದ ನೋಡುವದು ಸತಿ ಪತಿ ಕೆಲಸಾ 40ಪತಿುಂದಲೇ ಸತಿಯು ಸತಿುಂದ ಪತಿಯುಸತಿಪತಿಯ ಪ್ರೇಮದಿಂದಾತ್ಮದುನ್ನತಿಯುಪತಿಯ ಕೋಪದಿ ಕಲ್ಲು ಆಗುವಳು ಸತಿಯುಸತಿಯ ಶಾಪದಿ ಕತ್ತೆಯಾಗುವನು ಪತಿಯು 41ಸಾ'ಗಂಜಲು ಬೇಡ ಸಾ'ಗಳಬೇಡಾಸಾವು ಅಂದರೆ ಭಯಂಕರ ತಿಳಿಯಬೇಡಾದೇಹಕ್ಕೆ ಬಾಲ್ಯ ಯೌವನ ಮುಪ್ಪಿನಂತೆದೇಹಾಂತರ ಪ್ರಾಪ್ತಿಯೇ ಮರಣಗೀತೆ 42'ದ್ಯಾರ್ಥಿ ಬಡವನಿದ್ದರೆ ಭಿಕ್ಷೆನೀಡುಅಶನಾರ್ಥಿ ಟೊಣಪನಿದ್ದರೆ ದೂರ ಮಾಡುಹಸಿವೆ ಚೆನ್ನಾಗಿ ಇದ್ದರೆ ಊಟ ಮಾಡುಹಸಿಯು ಸಾಕಷ್ಟು ಇದ್ದರೆ ಬಿತ್ತಿನೋಡು43ಶುದ್ಧ ಆಚರೆಣೆುದ್ದರೆ ಮಾತನಾಡುಬುದ್ಧಿ ಬಲು ಚುರುಕು ಇದ್ದರೆ ವಾದ ಮಡುದುಡ್ಡು ರಗಡಿದ್ದರೆ ಘಡಾಮೋಡ ಮಾಡುಜಡ್ಡು ಇದ್ದರೆ ಪಥ್ಯದುಪವಾಸ ಮಾಡು 44ಹಾಳುಹರಟೆಯ ಬಿಟ್ಟು ಶ್ರೀ ಹರಿಯ ಸ್ಮರಿಸುಕಾಲುವನು ನೋಡಿ ಸತ್ಕರ್ಮ ಆಚರಿಸುನಾಳೆ ಮಾಡುವೆನೆಂಬ ಮಾತು ದೂರಿರಿಸುನಾಳೆ ಮಾಡುವ ಧರ್ಮ ಇಂದು ನೀ ಮುಗಿಸು 45ಮನ ಮುಟ್ಟಿ ಸ್ಮರಣೆ ಸಂತತ ಮಾಡಬೇಕುಮನಸು ಓಡಲು ಮತ್ತೆ ಜಗ್ಗಿ ತರಬೇಕುಅನುಭವವು ಬಂದಂತೆ ಮನಸು ಕರಗುವದುಮನಸು ಕರಗಿದರೆ ವಾಸನೆಯು ಅಳಿಯುವದು 46ಎಲ್ಲ ಕಡೆಯಲಿ ಇರುವನೊಬ್ಬನೇ ದೇವಎಲ್ಲ ನಾಮಗಳಿಂದಲೂ ಕರೆಸಿಕೊಳುವಾಯಾವ ಬೇಕಾದ ಹೆಸರಿನ ದೇವರನ್ನುಭಕ್ತಿುಂ ಭಜಿಸಿದರೆ ಬಂದು ಪೊರೆಯುವನು47ಧನಕನಕದಾಶೆಯನು ತೊರೆದವನು ಸಂತವನಿತೆಯರ ಬಲೆಯೊಳಗೆ ಸಿಗದವನು ಸಂತಮನದಿ ಮಹಾದೇವನನು ಕಂಡವನು ಸಂತಜನರೊಳು ಜನಾರ್ಧನನ ನೋಡುವನು ಸಂತ 48ಘೋರ ಯುದ್ಧದಿ ನರನ ರಥವ ನಡೆಸಿಹನುಸೀರೆಯಾಗುತ ಸತಿಯ ಮಾನ ಉಳಿಸಿದನುನೀರಿನವನಾಗಿ ಎಂಜಲವ ಬಳಿದಿಹನುಪರಮ ಪುರುಷನ ಕರುಣೆಗೆಣಿಯು ಉಂಟೇನು 49ಹೃದಯ ದೊಳಗಿದ್ದ ಶ್ರೀಹರಿಯ ಮರೇತುಕಡುದ್ಯೆನ್ಯ ಬಿಡಬೇಡ 'ಷಯದೊಳು ಬೆರೆತುಕಾಮಧೇನು'ನ ಕೆಚ್ಚಲೊಳಿದ್ದ ನೀನುಅಮೃತವನು ಬಿಟ್ಟು ರತ್ನವನು ಕುಡಿವೆಯೇನು 50ಸರ್ವ ದುಃಖಗಳು ನಿರ್ಮೂಲವಾಗುವದುಸಂಸಾರ ಪರಮಾರ್ಥ ಕೂಡಿ ನಡೆಯುವವುಪ್ರಭು ರಾಮಚಂದ್ರನ ಪ್ರಸಾದ ಮ'ಮೆಯನುಪಠಿಸಿ ಆಚರಿಸಿದರೆ ಸುಖದಿ ಬಾಳುವನು 51ಜಯಜಯತು ಆರ್ಯ ಭೂಮತೆ 'ಖ್ಯಾತೆಜಯತು ಭಾರತಮಾತೆ ಸರ್ವಜನ ತ್ರಾತೆಜಯಜಯತು ಜಯ'ಂದ ಜನನಿ ಕಡು ಕರುಣಿಜಯ ಜಯತು ಸರ್ವ ಸಂಸ್ಕøತಿಯ ಮುಕುಟಮಣಿ 52ಅತಿಥಿ ಬಂದರೆ ಮನ ದೊಡ್ಡದಿರಲಿಒಣಹೆಮ್ಮೆ ಬೇಡ ಆದರದ ಮಾತಿರಲಿಮಾತು ಕೃತಿ ನಿಜ ಪ್ರೇಮ ತುಂಬಿರಲಿಊಟ ಉಪಚಾರದಿಂದ ಸಂತೋಷಗೊಳಲಿ 53ಗುಡಿಯೇಕೆ ಬೇಕು ಮನದೊಳಗೆ ಹರಿಯುಂಟುಅದರ ಕದ ತೆಗೆಯ ಪ್ರತಿಬಂಧವೇನುಂಟುಗುಡಿಯೊಳಗೆ ಹೊಗಿಸಬೇಕೆಂಬುವುದು ಛಲವುಛಲ 'ದ್ದರೇನದಕೆ ಆಧ್ಯಾತ್ಮ ಬೆಲೆಯು54ಮನ ಪ'ತ್ರ'ದ್ದರೆ ದೇವ ಒಲಿವಾಮನಸು ಅಪ'ತ್ರ'ದ್ದರೆ ದೇವ ಕುದಿವಾಮನ ಸುಪ್ರಸನ್ನ'ದ್ದರೆ ದೇವ ಒಲಿವಾಮನಸು ಧುಸುಮುಸು ಇದ್ದರೆ ದೇವ ಕುದಿವಾ 55ಮನಸು ನಿರ್ಭಯ'ದ್ದರಾ ದೇವ ಒಲಿವಾಮನಸು ನಿರ್ಮಲ'ದ್ದರಾ ದೇವ ಒಲಿವಾಮನಸು ನಿರಹಂಕಾರವಾದಾಗ ಬರುವಾಮನಸು ನಿಷ್ಕಪಟವಾದರೆ ಬಂದು ಪೊರೆವಾ 56ಅನ್ಯರಿಗೆ ನಿನ್ನ ಭಾರವ ಹಾಕಬೇಢನಿನ್ನ ಯೋಗ್ಯತೆ'ುೀರಿ ಭಾರ ಹೊರಬೇಡನಿನ್ನ ಮನೆತನದ ಜಗಳ ಬೈಲಿಗಿಡಬೇಡಹೆಣ್ಣು ಮಕ್ಕಳ ಮೇಲೆ ಕ್ಕೆ-ಎತ್ತಬೇಡ 57ನಿನ್ನ 'ರಿಮೆಯನು ನೀ ಹೇಳಬೇಡಅನ್ಯರನು ಕೀಳೆಣಿಸಿ ಮಾತಾಡಬೇಡಕಣ್ಮುಚ್ಚಿ ಇನ್ನೊಬ್ಬರನುಕರಣೆ ಬೇಡನಿನ್ನ ಸಂಸ್ಕøತಿಯ ವೈಶಿಷ್ಟ್ಯ ಬಿಡಬೇಡ 58ಸು'ಚಾರದಿಂದ ಧ್ಯೇಯವ ಗೊತ್ತುಪಡಿಸುಗೊತ್ತುಪಡಿಸಿದ ಧ್ಯೇಯವನ್ನು ನಿತ್ಯಸ್ಮರಿಸುಮುಟ್ಟಲಾ ಧ್ಯೇಯವನು ಶಕ್ತಿ ಸಂಗ್ರ'ಸುಶಕ್ತಿಯನು ಚಾತುರ್ಯದಿಂದ ನೀ ಬಳಿಸು 59ಸಮಯ ಪ್ರತಿಕೂಲ'ರೆ ವೈರಿಗಳ ನ'ುಸುನ'ುಸಿ ಒಳಹೊಕ್ಕವರ ಬಲವ ಹದಗೆಡಿಸುಶ್ರಮಪಟ್ಟು ಅ'ುತಬಲ ಗುಪಿತದಿಂ ಬೆಳಿಸುಸಮಯ ಸಾಧಿಸಿ ದುಷ್ಟಜನರನು ಸಂಹರಿಸು60ದೇಹದೊಳು ನೀನುಂಟು ದೇಹ ನೀನಲ್ಲನಾ ಎಂಬ ಜ್ಞಾನ ನಿನಗುಂಟು ಆದಕಿಲ್ಲನೀನು ಈ ದೇಹದಿಂದ ಹೊರಬೀಳಲಾಗಹೆಣವೆಂದು ಕರೆಯುವರು ದೇಹವನು ಬೇಗ 61ಹುಟ್ಟುವವ ನೀನಲ್ಲ ಹುಟ್ಟುವದು ದೇಹಬೆಳೆಯುವವ ನೀನಲ್ಲ ಬೆಳೆಯುವದು ದೇಹಸಾಯುವವ ನೀನಲ್ಲ ಸಾಯುವದು ದೇಹರೂಢಿಯೊಳು ನಿನಗಿದನು ಹಚ್ಚುವದು ಮೋಹ62ಖೋಡಿ ಮನವನು 'ಡಿದು ಸಾಧು ಮಡುವದುಸಾಧು ಮಾಡುತ ನಾಮ - ಘೋಷ ಹಚ್ಚುವದುಓಡಿ ಹೋಗಲು ಮತ್ತೆ ಎಳೆದೆಳೆದು ತಂದುಬೋಧಿಸುತ ನಾಮ ಜಪದೊಳು ಸೇರಿಸೆಂದು 63ಒಮ್ಮೆ ಹರಿನಾಮದೊಳು ಮನಸು ಸೇರಿದರೆಅದಕೆ ಆಗುವ ಸುಖವು ಆ ರುಚಿಯು ಬೇರೆಆ ರುಚಿಯ ಆ ಸುಖವು ಹತ್ತಿದರೆ ಮನಕೆತಿರುಗಿ ಎಂದಿಗೂ ಅದು ಹೋಗದದು 'ಷಯಸುಖಕೆ64ಚಿತ್ತ ಸ್ಥಿರ'ಲ್ಲದಿರೆ ಬುದ್ಧಿ ಸ್ಥಿರ'ಲ್ಲಬುದ್ಧಿ ಸ್ಥಿರ'ಲ್ಲದಿರೆ ಭಾವನೆಯು ಇಲ್ಲಭಾವನೆಯು ಇಲ್ಲದಿದ್ದರೆ ಶಾಂತಿುಲ್ಲ ಶಾಂತಿಯೇ ಇಲ್ಲದವ ಸುಖವೇನು ಬಲ್ಲ 65ಅನುಕೂಲ ಮತ ಮಾತ್ರ ನೀ ಎಣಿಸಬೇಡಪ್ರತಿಕೂಲ ಮತ ಉಪೇಕ್ಷೆಯ ಮಾಡಬೇಡಅನುಕೂಲ ಪ್ರತಿಕೂಲಗಳನು ತಿಳಿ ತಿಳಿದುಏನಾದರೊಂದು ಸಾಹಸ ಕಾರ್ಯ ಮಾಡು 66ಉದ್ಯೋಗದೊಳು ಸದಾ ಆನಂದ ಉಂಟುಉದ್ಯೋಗದೊಳಗೆ ಲಕ್ಷ್ಮಿಯ ವಾಸವುಂಟುಉದ್ಯೋಗವನು ಮಾಡಿ ದೇವರನು ಬೇಡುಉದ್ಯೋಗ ಬಿಟ್ಟು ಕುಳಿತರೆ ನಿನಗೆ ಕೇಡು 67ದೀರ್ಘ ಯೋಚನೆಯ ಮಾಡುತ ನೀ ಕೂಡಬೇಡಯೋಗ್ಯ ಮುಂಬೆಳಕು ಇಲ್ಲದೆ ಧುಮುಕಬೇಡ'ಗ್ಗಿ ಮೈಮರೆಯದಿರು ದೈವ ತೆರೆದಾಗಕುಗ್ಗಿ ಎದೆ ಒಡೆಯದಿರು 'ಧಿ ಕಾಡುವಾಗ 68ದೈವವನಕೂಲ'ದ್ದಾಗ ಎಚ್ಚರಿಕೆಗರ್ವ ಸೇರುವದು ತಿಳಿಯದಲೆ ಎಚ್ಚರಿಕೆಗರ್ವದಿ ಸ್ಮøತಿಗೆ ಸಮ್ಮೋಹವೆಚ್ಚರಿಕೆಸಮ್ಮೋಹದಿಂದ ಸರ್ವನಾಶ ಎಚ್ಚರಿಕೆ 69ದೈವ ಯತ್ನಗಳ ಗತಿ ಗಹನವಾಗಿಹುದುಒಬ್ಬೊಬ್ಬರನುಭವವು ಒಂದೊಂದು ಇಹುದುವಾದದಿಂ ಬಗೆಹರಿಯದಂಥ 'ಷಯ'ದುಇದರ ಹದ ತಿಳಿದು ಯತ್ನವಂ ಮಾಡುವದು 70ಜೋಲು ಮೋರೆಯ ಹಾಕಿ ನೀ ಕೂಡಬೇಡಕಾಲು ಅಪ್ಪಳಿಸಿ ಕೆಲಸಕೆ ಹತ್ತಬೇಡಸ್ಟೈಲು ಉಡುಗೆಯ ಉಟ್ಟುಕೊಂಡೋಡಬೇಡಮೈಲಿಗೆಯ ಮನದಿಂದ ಜಪ-ಮಾಡಬೇಡ 71ಕಾರ್ಯ ಮಾಡುವ ಜನಕೆ ಮರ್ಯಾದೆ ಮಡುಬಾಯಬಡುಕ ಜನರ ಕೃತಿಯನು ತಿಳಿದು ನೋಡುಧೈರ್ಯದಿಂ ದುರ್ಜನರ ಕೂಡ ಹೋರಾಡುಆರ್ಯ ಸಂಸ್ಕøತಿಯ ಸಂರಕ್ಷಣೆಯ ಮಾತು 72ಗುಣ ಕರ್ಮಗಳ ನೋಡಿ ಮಾನವನು ಮಾಡುಒಣ ಜನ್ಮ ಜಾತಿ ತುಸು ದುರ್ಲಕ್ಷ ಮಾಡುಗುಣ ಕರ್ಮದಿಂದ ಅತಿ ನೀಚನಾದವನುಜನುಮ ಮಾತ್ರದಿ ಹೇಗೆ ಶ್ರೇಷ್ಠನಾಗುವನು73ತಪ್ಪು ಇಲ್ಲದೆ ಕ್ಷಮೆಯ ಬೇಡುವವ ಮೂರ್ಖತಪ್ಪಿದರು ಒಪ್ಪಿದವನು ಕಡುಮೂರ್ಖತಪ್ಪು ಆಗುವದು ಮಾನವನ ಸಹಜಗುಣತಪ್ಪು ಒಪ್ಪುತ ತಿದ್ದಿಕೊಳ್ಳುವದು ಸುಗುಣ 74ನಿನ್ನ ಬಂಧುಗಳೆ ನಿನಗಾಗುವರು ಕೊನರೆಗೆಅನ್ಯರಿಗೆ ಆ ಕರುಳು ಬರುವದು ಹೇಗೆನಿನ್ನ ಬಂಧುಗಳೆಲ್ಲ ಮೂರ್ಖರೆನಬೇಡಅನ್ಯರಿಂದ ನೀ ಮೂರ್ಖನೆನಿಸಿಕೊಳಬೇಡ 75ಜನರ ಮನೆಗಳು ಬಹಳ ದಿವಸ ಇರಬೇಡಇರುವದೇ ಆದರವರಿಗೆ ಭಾರ ಬೇಡಅರಿತವರ ಕೆಲಸಗಳ ಮನೆಯಂತೆಮಡುಗೃಹದ ರೀತಿರಿವಾಜು ಕೆಡದಂತೆ ನೋಡು 76ದುಡ್ಡು ಇದ್ದಾಗ ಎಲ್ಲರ ಪ್ರೀತಿಯುಂಟುದುಡ್ಡು ಕಳಕೊಂಡು ಹೋದರೆ ಮೋರೆಗಂಟುದುಡ್ಡಿನಿಂದಲೆ ಜನರ ಬೆಲೆ ಕಟ್ಟಬೇಡದೊಡ್ಡ ಗುಣಗಳನರಿತು ನ'ುಸದಿರಬೇಡ 77ಧನದ 'ಷಯದಿ ಖಂಡ ತುಂಡ ಇರಬೇಕುಮನಬಿಚ್ಚಿ ಮೊದಲಿಗೆ ಮಾತಾಡಬೇಕುಒಣ ಮಬ್ಬುತನ ಮನದಮಂಡಿಗೆಯು ಬೇಡಕೊನೆಗೆ ಗುಣಗುಟ್ಟುತಲಿ ಹಳಹಳಿಸಬೇಡ 78ಯಂತ್ರಮಯ ಜೀವನದ ಯುಗವು ನಡೆದಿಹುದುಸ್ವಾತಂತ್ರ್ಯವೆಲ್ಲಿ ಬಡವರಿಗೆ ಉಳಿದಿಹುದುದ್ರವ್ಯಮಯವಾದ ವ್ಯವಹರ ಸಾಗಿಹುದುದೇವ ಧರ್ಮಕೆ ಅರ್ಧಚಂದ್ರ ಬಂದಿಹುದು 79ತಾಯ್ತನದ ಸುಖಕೆ ಸರಿಯಾದ ಸುಖ'ಲ್ಲತಾಯ್ತನದ ಕರುಳಿಂಗೆ ಬೆಲೆಯಂಬುದಿಲ್ಲತಾುಗಿಂದಧಿಕ ದೈವತವು ಬೇರಿಲ್ಲತಾಯ್ - ಸೇವೆಗಿಂದಧಿಕ ಪುಣ್ಯಾವೆ ಇಲ್ಲ 80ಚನ್ನಾಗಿ ಸಂಸಾರ ಮಾಡಬಲ್ಲವನುಸುಲಭದಿಂ ಪರಮಾರ್ಥವನು ಸಾಧಿಸುವನುಸಂಸಾರದೊಳಗಿದ್ದು ಸನ್ಯಾಸಿಯೆನಿಸುಸನ್ಯಾಸಿಯಾಗಿ ಸಂಸಾರದೊಳು ಈಸು81ಮನೆಯಲ್ಲಿಯೇ ಸ್ವರ್ಗ ಮನೆಯಲ್ಲಿಯೇ ನರಕಜಾಣರಿಗೆ ತಿಳಿಯುವದು ನೋಡಿದರೆ ಗಮಕಜಾಣ ಪ್ರೇಮಳ ಪತಿಯಮನೆ ಸತಿಗೆ ಸ್ವರ್ಗಕೋಣ ಕರ್ದಮ ಕಟುಕ ಪತಿುರಲು ನರಕ 82ಪತಿಯ ಮನ ಒಲಿಸಿ ಕೋತಿಯ ತೆರದಿ ಕುಣಿಸಿಅತ್ತೆ ಮಾವರು ಬಂಧುಬಳಗವನು ಹೊರನುಗಿಸಿಸ್ವೇಚ್ಛೆುಂ ಎದೆಮೆಟ್ಟಿ ಬೇರಿರುವ ಸೊಸೆಸೊಸೆಯಲ್ಲ ರಕ್ಕಸಿಯು ಕಿ'ಹೊಕ್ಕ ತೊಣಸಿ83ಸರ್ವದಾ ಸತ್ವಗುಣಿ ಶಾಂತ ನಿರುತಿಹನುರಾಜಸನ ಶಾಂತಿುಂ ಧಡಪಡಿಸುತಿಹನುಕಿರಿಕಿರಿಯು ತಾಮಸಿಗೆ ಬಿಟ್ಟುರುವದಿಲ್ಲಾತ್ರಿಗುಣಗಳ ದಾಟದಿದ್ದರೆ ಮೋಕ್ಷ'ಲ್ಲಾ 84ಅನ್ನದೊಳು ಮುಖ್ಯ ಸಾತ್ವಿಕ ಗುಣವು ಬೇಕುಸಂಪಾದನೆಯ ಮಾರ್ಗ ಸರಳ'ರಬೇಕುಸಂಸರ್ಗ ಸಂಸ್ಕಾರ ಸುಷ್ಟ'ರಬೇಕುಸಾತ್ವಿಕಾನಂದ ಮನದಿಂದ ಉಣಬೇಕು 85ಮೂಲ ಮನ'ಹುದು ಮೂರರೊಳೊಂದು ಪಾಲುಸನ್ನಿವೇಶಗಳಿಂದ ಮತ್ತೊಂದು ಪಾಲುತಿನ್ನುವಾ ಅನ್ನದಿಂದ ಉಳಿದೊಂದು ಪಾಲುಮೂರು ಕೂಡಿದ ಮನವೆ ನಿನಗೆ ಹರಿಗೋಲು86ಪ್ರಾರಬ್ಧವನುಭ'ಸಿ ತೀರಿಸಲು ಬೇಕುಅಪರೋಕ್ಷದಿಂದ ಸಂಚಿತ ಕಳಿಯಬೇಕುಸರ್ವದಾ ನಿರಪೇಕ್ಷ ಸತ್ಕರ್ಮ ಬೇಕುನಿರಭಿಮಾನದಿ ಕರ್ಮದ ಬೀಜ ಸುಡಬೇಕು87ದಯೆಯು ಧರ್ಮದಮೂಲ ದಯವಂತನಾಗುಭಯವು ದುಃಖದಮೂಲ ನಿರ್ಭಯನು ಆಗುಲೋಭ ಪಾಪದ ಮೂಲ ನಿರ್ಲೋಭಿಯಾಗುತ್ಯಾಗ ಪುಣ್ಯದ ಮೂಲ ತ್ಯಾಗಿ ನೀನಾಗು 88ನಿನ್ನ ಉದ್ಧಾರವನು ನೀ ಮೊದಲ ಮಾಡುಮನೆತನದ ಉನ್ನತಿಯಕಡೆಗೆ ನೀ ನೋಡುನಿನ್ನ ನೆರೆಹೊರೆ ಜನರ ಕಲ್ಯಾಣಮಾಡುಆಮೇಲೆ 'ಶ್ವದದ್ಧಾರ ಮಾತಾಡು 89ಹಳೆಯದಿದ್ದರೆ ಎಲ್ಲ ಒಳಿತು ಎನಬೇಡಹೊಸದೆಂಬ ಮಾತ್ರದಿಂದಲೆ ಹಳಿಯಬೇಡಒಳಿತು ಕೆಡಕುಗಳು ಎಲ್ಲದರಲ್ಲಿ ಇಹವುತಿಳಿದು ಉಪಯೋಗಿಸಿದರದು ಜಾಣತನವು 90ಕಾಲಮ'ಮೆಯ ಕಷ್ಟ ಬಂದಿತೆನಬೇಡಕಾಲಕ್ಕೆ ಹೆಚ್ಚಿನ ಮಹತ್ವ ಕೊಡಬೇಡಕಾಲ ನಿರ್ಮಾಣ 'ರಿಯರ ಕೈಯ್ಯೊಳಿಹುದುಎಂಥ 'ರಿಯರು ಅಂಥ ಕಾಲ ಬರುತಿಹುದು 91'ರಿಯರಾಚರಣಿಯಂ ಮನೆತನದ ಬೆಳಕು'ರಿಯರಾಚರಣೆುಂ ಮನೆತನಕೆ ಹುಳುಕು'ರಿಯರೇ ಕಾರಣರು ಮನೆಯ ಸುಸ್ಥಿತಿಗೆ'ರಿಯರೇ ಕಾರಣರು ಮನೆಯ ದುಸ್ಥಿತಿಗೆ 92ದೇಹವೇ ರಥವು ಸಾರಥಿಯು ಪರಮಾತ್ಮಜೀವ ಅರ್ಜುನ ಧರ್ಮ ಸಮ್ಮೂಡ ಆತ್ಮಸರ್ವ ಭಾವದಿ ಶರಣುಹೊಗು ಸಾರಥಿಗೆಸಾರಧಿಯು ಮುಟ್ಟಿಸುವ ನಿನ್ನ ಸದ್ಗತಿಗೆ 93ಜ್ಞಾನಪೂರ್ವಕ ''ತ ಕರ್ಮಗಳ ಮಾಡುಚಿತ್ತಶುದ್ಧಿಗೆ ಕರ್ಮಸಾಧನವು ನೋಡುಉದ್ದೇಶ ಪರಿಣಾಮಗಳ ತೂಕ ಮಾಡುಮೂಢತನ ರೂಢಿಗಳನರಿತು ಬಿಟ್ಟುಬಿಡು 94ಬಾಲಭಾವದಿ ದೇವರೊಳು ಹಟವಮಾಡುಬಾಲಭಾವದಿ ದೇವರೊಳು ಮಮತೆಮಾಡುಬಾಲಭಾವದಿ ದೇವರಿಗೆ ಬೇಡಿಕಾಡುಬಾಲಭಾವದಿ ನಿನ್ನ ಸರ್ವಸ್ವ ನೀಡು 95ಮಾತೃಭಾವದಿ ಅವನ ತೊಡೆಯ ಮೇಲಾಡುಮಾತೃಭಾವದಿ ನೀನು ವಾತ್ಸಲ್ಯ ಮಾಡುಮತೃಭಾವದಿ ತೂಗಿ ತೊಟ್ಟಿ ಮುದ್ದಾಡುಮಾತೃಭಾವದಿ ಬಿದ್ದು ಕಿರಿಕಿರಿಯಮಾಡು 96ಸಖ್ಯಭಾವದಿ ಹಾಲು ಮೊಸರೆರೆಯ ಬೇಕುಸಖ್ಯಭಾವದಿ ಬೆಣ್ಣೆ ಬಾಯ್ತುಂಬ ಬೇಕುಸಖ್ಯಭಾವದಿ ಕೊಳಲಿನೊಳು ಕುಣಿಯಬೇಕುಸಖನೆಂದು ಗೋಪಿಯಂದದಿ ಕುಣಿಸಬೇಕು 97ನಿನ್ನೊಳಗೆ ಆತನನು ನೀ ನೋಡಬೇಕುಅವನೊಳಗೆ ಸರ್ವವನು ನೀ ಕಾಣಬೇಕುತನ್ನತನ ಮರೆತು ಅವನೊಳು ಬೆರೆಯಬೇಕುಅವನ ಸೂತ್ರದ ಬೊಂಬೆ ನೀನಾಗಬೇಕು 98'ುೀನನಾದರೆ ಅವನ ಕಣ್ಣು ನೀನಾಗು ಕೂರ್ಮನಾದಾಗವನ ಬೆನ್ನು ನೀನಾಗುವರಾಹರೂಪದ ಹರಿಯ ಕೋರೆ ನೀನಾಗುನರಹರಿಗೆ ನೀ ಹದನವಾದ ನಖವಾಗು 100ವಟುವಾಮನಗೆ ಪಾದರಕ್ಷೆ ನೀನಾಗುದುಷ್ಟ ಸಂಹಾರಕನ ಪರಶು ನೀನಾಗುಅಟ'ವಾಸಗೆ ಬಿಲ್ಲುಬಾಣ ನೀನಾಗುದಿಟ್ಟ ಗೊಲ್ಲನ ಕರೆದ ಕೊಳಲು ನೀ ನಾಗು 101ಬುದ್ಧನಾದರೆ ಬುದ್ಧಿವಂತ ನೀನಾಗುಕಲ್ಕಿಯಾದರೆ ಚಲುವ ಕುದುರೆ ನೀನಾಗುಎಲ್ಲಿದ್ದರೂ ಅವನ ನೆರಳು ನೀನಾಗುಪ್ರಹ್ಲಾದ ದ್ರುವ ಅಂಬರೀಷ ನೀನಾಗು 102ಧನದೊಳಗೆ ಧನ ತವೋಧನನು ನೀನಾಗುಭಾಗ್ಯದೊಳು ವೈರಾಗ್ಯ ಭಾಗ್ಯವಂತನಾಗುಇಂದ್ರಿಯಂಗಳ ಜಯದಿ ನೀ ಶೂರನಾಗುಪಂಡಿತನು ತತ್ವದಾಚರಣೆಯೊಳು ಆಗು103ಸ್ವಾತಂತ್ರವೇ ಸ್ವರ್ಗ ಪರತಂತ್ರ ನರಕಮಾತೃಭೂ'ುಯ ಸೇವೆ ಮಡದವ ಶುನಕಪತಿತರುದ್ಧಾರ ಮಾಡುವದು ಸದ್ಧರ್ಮಪತಿತರನು ತುಳಿಯುವದು ಸೈತಾನಕರ್ಮ 104ಸಂಸಾರ ಸಾಗರವ ದಾಟಿಸಲು
--------------
ಭೂಪತಿ ವಿಠಲರು
ಮಟ್ಟುದೊರಿತು-ನಿನ್ನ ಗುಟ್ಟು ಹಾರಿತು ಪ ಸಿಟ್ಟುಗೊಳ್ಳಬೇಡವೆನ್ನ ದೃಷ್ಟಿಯಿಂದ ನೋಡಿ ಕಂಡೆ ಅಷ್ಟಸಿದ್ಧಿಗಳಿದ್ದರೂ ವೊಂದಿಷ್ಟುಕೊರತೆ ಕೃಷ್ಣನೆಂಬ 1 ಹೇಯ ಗುಣವಿಲ್ಲ ಮುನಿ-ಗೇಯ ನಿನ್ನೊಳೆಂಬ ಜನರ ಬಾಯ ಮುಚ್ಚಿಸುವೆನೆಂದತ್ಯಾಯಸಪಡುವನೆಂಬ ||ಮಟ್ಟು|| 2 ಸತ್ಯಕಾಮನಹುದು ನೀನು ಸತ್ಯಸಂಕಲ್ಪನು ನಿನಗೆ ದತ್ಯಧಿಕ-ಕೊರತೆಯೆಂಬ ||ಮಟ್ಟು|| 3 ಜ್ಞಾನವಂತನೆಂದು ಬಹುಮಾನವಂತನಾದರೂ ಅ ಜ್ಞಾನ ಶೂನ್ಯನೆಂಬ ದೊಡ್ಡ ಹಾನಿಯೊಂದಿರುವದೆಂಬ4 ಎಲ್ಲ ವಸ್ತುಗಳುಂಟು ನಿನಗೆ ಪುಲ್ಲನಾಭ ನಿನ್ನ ಬಳಿಯೋ ಳಿಲ್ಲವೆಂಬ ಶಬ್ದಮಾತ್ರವಿಲ್ಲವೆಂಬ ಮಾತು ಬಂದಿಹ5 ಪಾಪವೆಂಬ ಕತ್ತಲೆಗೆ ದೀಪನಾಗಿದ್ದರು ಜನರ ಪಾಪಗಳ ನಪಹರಿಪ ದೀಪನಾ ಬಿಡದು ಎಂಬ ||ಮಟ್ಟು||6 ಜ್ಯೋತಿಗಳಿಗೆಲ್ಲ ಪರಂಜ್ಯೋತಿಯಾಗಿರುವ ನಿನಗೆ ಆ ಜ್ಯೋತಿಗಳೆತ್ತಿದಾರತೀ ಪ್ರೀತಿಯೆಂದು ಜನರು ಪೇಳ್ವ ||ಮಟ್ಟು||7 ಹಾನಿವೃದ್ಧಿ ಶೋಕಮೋಹ ಜ್ಞಾನ ನಿನ್ನೊಳಿಲ್ಲವೆಂಬ ಹೀನವಾಕ್ಯವ ಪೇಳ್ವರೆಲ್ಲ ಮಾನನಿಧಿಗಳೆಂತೆಂಬ ||ಮಟ್ಟು||8 ನಿತ್ಯ ತೃಪ್ತನಾದರೂ ನಿಜ-ಭೃತ್ಯರನ್ನು ಪಾಲಿಸುವ ನಿತ್ಯ ಕರ್ಮದಲ್ಲಿ ಕೃತಕೃತ್ಯನು ನೀನಲ್ಲವೆಂಬ 9 ಕಷ್ಟಪಡಬೇಡವೆನ್ನೊ-ಳೆಷ್ಟು ದುರ್ಗುಣಂಗಳಿಹ ವಷ್ಟನು ವೊಪ್ಪಿಸಿ ನಿನಗಿಷ್ಟನಾಗಬೇಕೆಂಬ ||ಮಟ್ಟು|| 10 ಕ್ಷೀರದಧಿನವನೀತ-ಚೋರನಾಗಿರಲಿ ಗೋಪೀ ಜಾರನಾಗಿರಲಿ ಸಂಸಾರವೈರಿಯು ನೀನೆಂಬ ||ಮಟ್ಟು||11 ಕೊರತೆಯೆಂಬಾಜನರಿಗೆಲ್ಲ-ವರವನಿತ್ತು ಪೊರೆವೆನೆಂಬ ವರದವಿಠಲನೆಂಬ ||ಮಟ್ಟು|| 12
--------------
ಸರಗೂರು ವೆಂಕಟವರದಾರ್ಯರು
ಮುಟ್ಟು ದೋರಿತು ನಿನ್ನ ಗುಟ್ಟು ಹಾರಿತು ಪ ಸಿಟ್ಟುಗೊಳ್ಳಬೇಡವೆನ್ನ ದೃಷ್ಟಿಯಿಂದ ನೋಡಿ ಕಂಡೆ ಅಷ್ಟಸಿದ್ಧಿಗಳಿದ್ದರೂ ಒಂದಿಷ್ಟು ಕೊರತೆ ಕೃಷ್ಣನೆಂಬ ಅ.ಪ ಹೇಯಗುಣವಿಲ್ಲ ಮುನಿಗೇಯ ನಿನ್ನೊಳೆಂಬ ಜನರ ಬಾಯ ಮುಚ್ಚಿಸುವೆನೆಂದತ್ಯಾಯಸಪಡುವನೆಂಬ 1 ಸತ್ಯಕಾಮನಹುದು ನೀನು ಸತ್ಯಸಂಕಲ್ಪನು ನಿನಗೆ ಮಿಥ್ಯಾವಚನಿಲ್ಲವೆಂಬೊಂದಿತ್ಯಧಿಕ ಕೊರತೆಯೆಂಬ 2 ಜ್ಷಾನವಂತನೆಯ ಬಹುಮಾನವಂತನಾದರೂ ಅ ಜ್ಞಾನಶೂನ್ಯನೆಂಬ ದೊಡ್ಡ ಹಾನಿಯೊಂದಿರುವುದೆಂಬ3 ಎಲ್ಲ ವಸ್ತುಗಳುಂಟು ನಿನಗೆ ಪುಲ್ಲನಾಭ ನಿನ್ನ ಬಳಿಯೋ ಳಿಲ್ಲವೆಂಬ ಶಬ್ದಮಾತ್ರವಿಲ್ಲವೆಂಬ ಮಾತು ಬಂದಿಹ 4 ಪಾಪವೆಂಬ ಕತ್ತಲೆಗೆ ದೀಪನಾಗಿದ್ದರು ಜನರ ಪಾಪಗಳನಪಹರಿಪ ದೀಪನಾ ಬಿಡದು ಎಂಬ 5 ಜ್ಯೋತಿಗಳಿಗೆಲ್ಲ ಪರಂಜ್ಯೋತಿಯಾಗಿರಿವ ನಿನಗೆ ಆ ಜ್ಯೋತಿಗಳೆತ್ತಿದಾರತೀ ಪ್ರೀತಿಯೆಂದು ಜನರು ಪೇಳ್ವ 6 ಹಾನಿವೃದ್ಧಿ ಶೋಕಮೋಹ ಜ್ಞಾನ ನಿನ್ನೊಳಿಲ್ಲವೆಂಬ ಹೀನವಾಕ್ಯವ ಪೇಳ್ವರೆಲ್ಲ ಮಾನನಿಧಿಗಳೆಂತೆಂಬ 7 ನಿತ್ಯತೃಪ್ತನಾದರೂ ನಿಜ ಭೃತ್ಯರನು ಪಾಲಿಸುವ ನಿತ್ಯ ಕರ್ಮದಲ್ಲಿ ಕೃತಕೃತ್ಯನುನೀನಲ್ಲವೆಂಬ 8 ಕಷ್ಟಪಡಬೇಡವೆನ್ನೊಳೆಷ್ಟು ದುರ್ಗುಣಂಗಳಿಹ ವಷ್ಟನು ಒಪ್ಪಿಸಿ ನಿನಗಿಷ್ಟ ನಾಗಬೇಕೆಂಬ 9 ಕ್ಷೀರದಧಿನವನೀತ ಚೋರನಾಗಿರಲಿ ಗೋಪೀ ಜಾರನಾಗಿರಲಿ ಸಂಸಾರವೈರಿಯು ನೀನೆಂಬ 10 ಕೊರತೆಯೆಂಬಾ ಜನರಿಗೆಲ್ಲಾ ವರವನಿತ್ತು ಪೊರೆವೆನೆಂಬ ಸ್ಥಿರವಾಗಿ ಶ್ರೀ ವ್ಯಾಘ್ರಗಿರಿಯೊಳಿರುವ ವರದ ವಿಠಲನೆಂಬ11
--------------
ವೆಂಕಟವರದಾರ್ಯರು
ಸುಮ್ಮನೆ ತೊಲಗು ಕಂಡೆಲೆ ಮಾಯಿ ನೀನು ನಮ್ಮಯ್ಯ ಬಂದರೆ ಉಳಿಲಾರಿ ಇನ್ನು ಪ ಉರಗ ತಾ ಬೆನ್ನ್ಹತ್ತಿ ಗರುವದಿಂ ಬಂದು ಮಹ ಗರುಡನಂ ಕಂಡಕ್ಷಣದ್ಹರಣ ತೊರೆವಂತೆ ಹರಿದಾಸರೆನ್ನದೆ ಪರಿಪರಿ ಕಾಡಿ ನೀ ಶರಣಜನಪ್ರಿಯನ ಕಂಡುರಿದ್ಹೋಗಬೇಡ 1 ಲಕ್ಷಿಸೆ ಮಂಡೂಕ ಮಕ್ಷಕನ ಬೆನ್ನ್ಹತ್ತಿ ತಕ್ಷಕಗೆ ಸಿಕ್ಕು ತಾ ಭಕ್ಷವಾದಂತೆ ಲಕ್ಷ್ಮೀಪತಿದಾಸರ ಲಕ್ಷಿಸದೆ ಕಾಡಿ ಭಕ್ತ ಪಕ್ಷಕನ ಕರಕೆ ಸಿಕ್ಕು ಶಿಕ್ಷೆಪಡಬೇಡ 2 ಕ್ಷೇಮದಿಂ ದೂರಿರೋ ಹೇ ಮಾಯಿ ನೀನು ನಾಮವೇ ಉಳಿಸನೀ ಭೂಮಿಯ ಮೇಲೆ 3
--------------
ರಾಮದಾಸರು
ಙ್ಞÕನವೊಂದೇ ಸಾಕು ಮುಕ್ತಿಗೆ - ಇ - |ನ್ನೇನು ಬೇಕು ಹುಚ್ಚುಮರುಳು ಮಾನವನೆ ಪ.ಪಿತ ಮಾತೆಸತಿ ಸುತರನಗಲಿರಬೇಡ |ಯತಿಯಾಗಿ ಆರಣ್ಯ ಚರಿಸಲು ಬೇಡ ||ವ್ರತ - ನೇಮವ ಮಾಡಿ ದಣಿಯಲು ಬೇಡ |ಸತಿಯಿಲ್ಲದವಗೆ ಸದ್ಗತಿಯಿಲ್ಲೋ ಮೂಢ 1ಜಪತಪವನೆ ಮಾಡಿ ಸೊರಗಲುಬೇಡ |ಕಪಿಯಂತೆ ಅಡಿಗಡಿಗೆ ಹಾರಲುಬೇಡ ||(ಉಪವಾಸಪಾಶಕ್ಕೆ) ಸಿಕ್ಕಲುಬೇಡ |ಚಪಲತನದಲೇನು ಫಲವಿಲ್ಲೋ ಮೂಢ 2ಜಾಗರದಲಿ ನಿದ್ರೆ ಕೆಡಿಸಲು ಬೇಡ |ಓಗರವನು ಬಿಟ್ಟು ಒಣಗಲು ಬೇಡ ||ಸೋಗುಮಾಡಿ ಹೊತ್ತು ಕಳಿಯಲು ಬೇಡ |ಗೊಗೆ ಹಾಗೆ ಕಣ್ಣು ತಿರುಗಿಸಬೇಡ 3ಹೊನ್ನು - ಹೆಣ್ಣು - ಮಣ್ಣು ಜರೆದಿರಬೇಡ |ಅನ್ನ - ವಸ್ತ್ರಗಳನ್ನು ತೊರೆದಿರಬೇಡ ||ಬಣ್ಣದ ದೇಹವ ನೆಚ್ಚಲುಬೇಡ |ತಣ್ಣೀರೊಳಗೆ ಮುಳುಗಿ ನಡುಗಲು ಬೇಡ 4ಮಹಾವಿಷ್ಣುಮೂರ್ತಿಯ ಮರೆತಿರಬೇಡ |ಸಾಹಸದಿಂದಲಿ ಶ್ರಮ ಪಡಬೇಡ ||ಕುಹಕ ಬುದ್ಧಿಯಲಿ ಕುಣಿದಾಡಬೇಡ |ಮಹಿಮ ಪುರಂದರವಿಠಲನ ಮರೆಯದಿರೊ ಮೂಢ 5
--------------
ಪುರಂದರದಾಸರು
ನಾಚಿಕೆಪಡಬೇಡ - ಮನದೊಳು -ಯೋಚಿಸಿ ಕೆಡಬೇಡ ಪ.ನಿಚ್ಚ ನೆನೆಯೊ ನಮ್ಮಚ್ಯುತನಾಮವ |ಮೆಚ್ಚಿ ಕೊಟ್ಟರೆ -ಅಚ್ಯುತಪದವೀವಅಪಹರಿಹರಿಯೆಂದೊದರೋ - ಹತ್ತಿದ - |ದುರಿತಗಳಿಗೆ ಬೆದರೋ ||ವಾರಿಜಾಕ್ಷನ - ವೈಕುಂಠಪುರವ |ಸೇರಿಸೇರಿ ನೀ ಕುಣಿಕುಣಿದಾಡೊ 1ಆರಗೊಡವೆ ಏನೋ - ನರಕದ |ದಾರಿ ತಪ್ಪಿಸುವರೆ ||ನೀರಜಾಕ್ಷ ನಮ್ಮನಿರ್ಜರ ಪತಿಯಲಿ |ಸೇರಿ - ಸೇರಿಸಿ ಮನ ನಲಿನಲಿದಾಡೊ 2ಭಕ್ತಜನರ ಕೂಡೊ - ಭವಭಯ |ಬತ್ತಿಪೋಪುದು ನೋಡೊ ||ಮುಕ್ತಿದಾಯಕ ಶ್ರೀ ಪುರಂದರವಿಠಲನ |ಭಕ್ತಿಯಿಂದ ನೀ ಹಾಡಿ ಕೊಂಡಾಡೊ 3
--------------
ಪುರಂದರದಾಸರು
ಪ್ರಸನ್ನ ಶ್ರೀಕೂರ್ಮ5ಪ್ರಥಮ ಅಧ್ಯಾಯಶ್ರೀಕೂರ್ಮಪ್ರಾದುರ್ಭಾವಲೀಲಾವತಾರನೇ ಸರ್ವ ಲೋಕಾಧಾರಮಾಲೋಲ ಸುಖಚಿತ್ ತನು ಕೂರ್ಮರೂಪಪಾಲಾಬ್ಧಿಜಾಪತಿಅನಘಅಜಿತ ಧನ್ವಂತರಿಲೀಲಾ ಮೋಹಿನಿಅನಘಶರಣು ಮಾಂಪಾಹಿಪವೇದಾದಿ ಸಚ್ಛಾಶ್ರ(ಪ್ರ)ಮೇಯ ವೇದವತೀಶಪದುಮಜಾಂಡವ ಪಡೆದ ಜಗದೇಕಭರ್ತಾಅದ್ವಿತೀಯನು ಸ್ವಾಮಿ ಸಮರಧಿಕರಿಲ್ಲದವವೇಧಮುಕ್ಕಣ್ಣಾದಿ ಸುರಸೇವ್ಯಪಾಹಿ1ಸತ್ಯ ಜ್ಞÕನಾನಂತ ಭೂಮಾದಿ ಗುಣನಿಧಿಯೇಸತ್ಯಸೃಷ್ಟಿ ಮಾಳ್ಪಿ ಸತ್ಯನಾಮಾಪ್ರತ್ಯಕ್ಷ ಪ್ರಮಾಣ ಸಿದ್ಧವು ಈ ಜಗತ್ತುತತ್ಸøಷ್ಟಿ ಪಾಲನಾದಿಗಳೆಲ್ಲ ಸತ್ಯ 2ಸೃಷ್ಟಿ ಪ್ರವಾಹವು ಅನಾದಿಯೂ ನಿತ್ಯವೂಘಟಾದಿ ಕಾರ್ಯಗಳ ಉಪಾದಾನ ಕಾರಣಮೂಲ ಜಡಪ್ರಕೃತಿಯೂ ಅನಾದಿಯೂ ನಿತ್ಯವೂಸೃಷ್ಟ್ಯಾದಿಕರ್ತಾ ನಿನ್ನಾಧೀನವು ಎಲ್ಲಾ 3ಕಾರ್ಯಕಾರಣಾತ್ಮಕ ಜಗತ್ತು ಸರ್ವಕ್ಕೂತೋಯಜಾಕ್ಷನೇ ನೀನು ನಿಮಿತ್ತ ಕಾರಣನುನಿಯಾಮಕನು ನೀನೇವೇ ಚಿದಚಿತ್ ಅಖಿಳಕ್ಕೂಅನ್ಯರಿಗೆ ಸ್ವಾತಂತ್ರ್ಯ ಸಾಮಥ್ರ್ಯವಿಲ್ಲ 4ವಿಧಿಶಿವಾದಿ ಸರ್ವ ಸುರಾಸುರರುಗಳಿಗೆಸತ್ತಾಪ್ರತೀತಿ ಪ್ರವೃತ್ತಿಪ್ರದ ಹರಿಯೇಭೂತಭವ್ಯ ಭವತ್ಪ್ರಭುವು ವಿಷ್ಣು ನೀನೇವೇಚೇತನಾ ಚೇತನಾಧಾರ ಸರ್ವತ್ರ 5ದೂರ್ವಾಸರ ಶಾಪ ನಿಮಿತ್ತದಿ ಸ್ವರ್ಗದಐಶ್ವರ್ಯವು ಕ್ಷಿಣವು ಆಗಿ ಬಹುವಿಧದಿದೇವಶತೃಗಳ ಬಲ ಉನ್ನಾಹವಾಗಲುದೇವರಾಜನು ಬ್ರಹ್ಮನಲ್ಲಿ ಪೋದ 6ವಾಸವವರುಣಾದಿ ಸುರರ ಮೊರೆಕೇಳಿಬಿಸಜಸಂಭವ ಶಿವ ಶಕ್ರಾದಿಗಳ ಕೂಡಿಶ್ರೀಶನೇ ರಕ್ಷಕನು ಎಂದು ನಿನ್ನಲ್ಲಿ ಬಂದುಸಂಸ್ತುತಿಸಿದನುಪರಮಪೂರುಷ ನಿನ್ನನ್ನ7ಅವ್ಯಯನೇ ಸತ್ಯನೇ ಅನಂತನೇ ಅನಘನೇಶ್ರೀವರನೇ ಪೂರ್ಣೈಶ್ವರ್ಯ ಮಹಾಪುರುಷದೇವವರೇಣ್ಯ ನಿನ್ನಲ್ಲಿ ಸ್ತುತಿ ಬ್ರಹ್ಮಸುವಿನಯದಿ ಮಾಡಿದ ವೇದಾರ್ಥಸಾರ 8ಸಹಸ್ರಾರ್ಕೋದಯ ದ್ಯುತಿ ಸುಂದರರೂಪಮಹಾರ್ಹ ಭಗವಂತಹರಿಈಶ್ವರನೇ ನೀನುಬ್ರಹ್ಮಾದಿಗಳ ಸ್ತುತಿಗೆ ಪ್ರಸನ್ನನು ಆಗಿಮಹಾನುಭಾವ ನೀ ಒಲಿದಿ ಕೃಪೆಯಿಂದ 9ಪದುಮನಾಭನೇನಿರ್ವಾಣಸುಖಾರ್ಣವನೇಪದುಮಭವ ಸನ್ನಮಿಸಿ ಪೇಳಿದ್ದಕೇಳಿಸಿಂಧುವಮಥನಮಾಡಲಿಕೆ ಬೇಕು ಎಂದಿಅದರ ಬಗ್ಗೆ ಉಪಾಯವ ಅರುಹಿದಿ ವಿಭುವೇ 10ಕ್ಷೀರಾಬ್ಧಿಯಲಿ ವೀರು ತೃಣ ಲತೌಷಧಿ ಇಟ್ಟುಗಿರಿಶ್ರೇಷ್ಠ ಮಂದರವ ಕಡೆಗೋಲು ಮಾಡಿವರಸರ್ಪ ವಾಸುಕಿಯ ಹಗ್ಗ ಮಾಡಿ ಮಥಿಸಿಅಮೃತೋತ್ಪಾದನ ಯತ್ನಿಪುದು ಎಂದಿ 11ದೈತ್ಯ ದಾನವರೆಲ್ಲ ಶತೃಗಳು ಆದರೂಸಂಧಿಯ ಅವರೊಡೆ ಮಾಡಿ ಕೂಡಿಮಂದರವ ಸಿಂಧುವಲಿ ತಂದಿಟ್ಟು ಮಥಿಸುವುದುಸುಧೆಯ ಉತ್ಪಾದನಕೆ ಉಪಾಯ ಇದು ಎಂದಿ 12ದೈತ್ಯರ ಸಹಕಾರ ಬಗೆ ಯುಕ್ತಿಗಳ ಪೇಳಿಭೀತಿ ಪಡಬೇಡ ವಿಷ ಉಕ್ಕಿ ಬರುವಾಗಅದಿತಜರಿಗೇವೇ ಫಲ ಲಭಿಸುವುದು ಎಂದುದಿತಿಜರಿಗೆಕ್ಲೇಶಭವಿಸುವುದು ಎಂದಿ13ಪುರುಷೋತ್ತಮ ಜಗತಃಪತಿ ಅಜಿತನಾಮಾಸುರರಿಗೆ ಬೋಧಿಸಿದ ರೀತಿ ಅನುಸರಿಸಿಶಕ್ರಾದಿಗಳು ವೈರೋಚನಾದಿಗಳೊಡೆತ್ವರಿತ ಯತ್ನಿಸಿದರು ಕಡಲ ಮಥನಕ್ಕೆ 14ದೂರದಲ್ಲಿ ಇದ್ದ ಆ ಅತಿಭಾರ ಗಿರಿಯನ್ನಸುರರುದಾನವರೆತ್ತಿ ಸಮುದ್ರ ತಟಕೆತರಲು ಬಹು ಯತ್ನಿಸಿದರು ವ್ಯರ್ಥದಿಗಿರಿಯ ಭೂ ಮೇಲೆತ್ತೆ ಅಸಮರ್ಥರು 15ಮೇರುಗಿರಿ ಬದಿ ಇದ್ದ ಮಂದರಾಚಲವುರುದ್ರ ರುದ್ರವರ ಬಲಯುತವು ಎತ್ತಲು ಅಶಕ್ಯಸುರದಾನವರು ಬೆರಗಾಗೇ ಒಂದೇ ಕರದಿಂಗಿರಿಯ ನೀ ಎತ್ತಿ ಗರುಡನ ಮೇಲೆ ಇಟ್ಟಿ 16ಗರುಡನಿಂದ ತಮ್ಮ ಮೇಲೆ ಇರಿಸೆ ಪರಿಕ್ಷಾರ್ಥಭಾರತಾಳದೇ ಸುರಾಸುರರು ಹತರಾಗೇಕಾರುಣ್ಯ ನೋಟದಿ ಬದುಕಿಸಿದಿ ಮೃತರನ್ನತೀವ್ರ ಗಾಯಗಳನ್ನ ಸೌಖ್ಯ ಮಾಡಿದಿಯೋ 17ಲೀಲೆಯಿಂದಲಿ ಪುನಃ ಒಂದೇ ಹಸ್ತದಿ ಗಿರಿಯಮೇಲೆತ್ತಿ ಗರುಡನ ಹೆಗಲಲಿಟ್ಟು ಕುಳಿತುಪಾಲಸಾಗರದಲ್ಲಿ ಸ್ಥಾಪಿಸಿ ಮಥನಕ್ಕೆವ್ಯಾಳನ ಹಗ್ಗದಂದದಿ ಸುತ್ತಿಸಿದಿಯೋ 18ಪುಚ್ಛಭಾಗವು ಅಮಂಗಳವು ಬೇಡವೆಂದುಅಸುರರ ವಾದಾ ಮುಖಭಾಗ ಹಿಡಿಯೇವಾಸುಕಿಯ ಪುಚ್ಛಾಂಗ ದೇವತೆಗಳು ಹಿಡಿದುಶ್ರೀಶ ನೀ ಸಹಕರಿಸೆ ಮಥನವ ಮಾಡಿದರು 19ಪರಮಯತ್ನದಿ ಅಮೃತಾರ್ಥ ಪಯೋನಿಧಿಯಗಿರಿಯಿಂದ ಮಂಥನ ಸುರಾಸುರರು ಮಾಡೆಪರಮಗುರುತರಅದ್ರಿಆಧಾರವಿಲ್ಲದೆಸರಿದು ಮುಳುಗಿ ಬೇಗ ಕೆಳಗಡೆ ಹೋಯಿತು 20ಶೈಲವು ಮುಳುಗಲು ಸುಧಾಕಾಂಕ್ಷಿಗಳ ಮನವ್ಯಾಕುಲದಿ ಮುಖಕಾಂತಿ ಮ್ಲೌನವು ಆಯಿತುಎಲ್ಲಾ ಶ್ರಮವು ವ್ಯರ್ಥ ಎಂದು ಬೆರಗಾಗಿರೆಬಲು ಕೃಪೆಯಲಿ ನೀನು ಒದಗಿದಿ ಆಗ 21ಅದ್ಭುತ್ ಮಹತ್ ಕಚ್ಛಪ ರೂಪದಲಿ ನೀಅಬ್ಧಿಯಲಿ ಬೇಗನೇ ಬಂದು ಮೇಲೆಎಬ್ಬಿಸಿದಿ ಆ ಮಂದರಾಚಲಗಿರಿಯಸುಬಲ ಪೂರುಷ ನಮೋ ಚಿನ್ಮೋದಗಾತ್ರ 22ಚನ್ಮೋದಮಯ ಮಹಾಕೂರ್ಮರೂಪನೇ ನಿನ್ನಅಮಿತ ಸುಬಲ ಲಕ್ಷ ಯೋಜನ ವಿಸ್ತಾರಸುಮಹಾ ದ್ವೀಪದಂದಿರುವ ಪೃಷ್ಠದ ಮೇಲೆಆ ಮಹಾದ್ರಿಯ ಹೊತ್ತಿ ಪುನರ್ ಮಥಿಸಲೊದಗಿದಿ 23ಜ್ಞಾನ ಸುಖಪೂರ್ಣ ಸ್ವತಂತ್ರ ಸರ್ವಾಧೀಶಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀಪ್ರಸನ್ನ ಶ್ರೀನಿವಾಸಧನ್ವಂತರೀ ಶರಣು ಅಜಿತ ಸ್ತ್ರೀಕೂರ್ಮ24-ಇತಿ ಪ್ರಥಮಾಧ್ಯಾಯ ಸಂಪೂರ್ಣಂ-ದ್ವಿತೀಯ ಅಧ್ಯಾಯನೀಲಕಂಠವೃತ್ತಾಂತಲೀಲಾವತಾರನೇ ಸರ್ವಲೋಕಾಧಾರಮಾಲೋಲ ಸುಖಚಿತ್ ಕೂರ್ಮರೂಪಪಾಲಾಬ್ಧಿಜಾಪತಿ ಅಜಿತ ಧನ್ವಂತರೀಲೀಲಾ ಮೋಹಿನಿಅನಘಶರಣು ಮಾಂಪಾಹಿಪಸಿರಿವರಹರಿಕೂರ್ಮನ ಪೃಷ್ಠೋಪರಿನಿಂತಗಿರಿಯಿಂದ ಅಸುರರುಸುರರುಪುನರ್ಮಥಿಸೆಗಿರ್ಗಿರಿ ಗಿರಿ ಗಿರಿ ಎಂದು ಭ್ರಮಿಸಿತು ಗಿರಿಯುಪರಿಮಳ ಪೂ ಸುರಿಸಿದರು ಬ್ರಹ್ಮಾದಿಗಳು 1ವಾಸುಕಿತಾಳದೇ ಬುಸು ಬುಸು ಎಂದು ಮೇಲ್ಶ್ವಾಸದಿ ವಿಷಜ್ವಾಲೆ ಹೊರಗೆ ಬಿಡಲುಅಸುರಬಲಿಇಲ್ವಾದಿಗಳು ಬಿಸಿ ಸಹಿಸದೇಘಾಸಿಹೊಂದಿದರುದಾವಾಗ್ನಿಪೀಡಿತರ ಪÉೂೀಲ್2ದಿತಿಜರು ಅದಿತಿಜರು ಎಷ್ಟೇ ಯತ್ನಿಸಿದರೂಸುಧಾ ಇನ್ನೂ ಪುಟ್ಟದೇ ಇರುವುದ ಕಂಡುದಂತ ಶೂಕವ ಆಗ ಸ್ವಯಂ ನೀನೇ ಹಿಡಿದುಮಥನಮಾಡಿದಿ ಸ್ವಾಮಿ ಕಾರುಣ್ಯದಿಂದ3ಪೀತಾಂಬರಿ ಸುಖ ಚಿನ್ಮಾತ್ರ ಚಾರ್ವಾಂಗಸದಾ ನಮೋ ಶರಣಾದೆ ಲೋಹಿತಾಕ್ಷದಿತಿಜಾ ಅದಿತಿಜಾರೊಡೆ ನೀನು ಸಹಮಥಿಸಲುಲತಾ ಓಷಧಿ ಕಲುಕಿ ಉಕ್ಕಿತುಸಿಂಧು4ಹಾಹಾ ಭಯಂಕರವು ಇದೇನು ಲೋಕಗಳದಹಿಸುವಂದದಿ ಫೇಣ ಉಕ್ಕಿ ಬರುತಿದೆಯುಮಹಾ ವೀರ್ಯತರ ಹಾಲಾಹಲವೆಂಬ ವಿಷ ಇದುಮಹೀಭರ್ತಾ ಮಹಾದೇವ ಮಹಾದ್ರಿದೃತ್ಪಾಹಿ5ಅಸಮ ಸ್ವಾತಂತ್ರ್ಯ ನಿಜಶಕ್ತಿ ಪರಿಪೂರ್ಣವಿಶ್ವರಕ್ಷಕ ನೀ ವಿಷಭಯ ನಿವಾರಿಸೆಸ್ವಸಮರ್ಥನಾದರೂ ಭೃತ್ಯರ ಕೀರ್ತಿಯಪ್ರಸರಿಸೆ ಒದಗಿದಿ ಮಹಾದೇವ ಶಾಸ್ತ 6ಮಹತ್ ಎಂಬ ಬ್ರಹ್ಮನ ಸ್ವಾಮಿ ಆದುದರಿಂದಮಹಾದೇವ ಎಂಬುವ ನಾಮ ನಿನ್ನದೇವೇಮಹಾದೇವ ಶಿವ ಈಶ ರುದ್ರಾದಿ ಶಬ್ದಗಳುಮಹಾಮುಖ್ಯ ವೃತ್ತಿಯಲಿ ನಿನಗೇವೇ ವಾಚಕವು 7ಭಸ್ಮಧರ ದೇವನಿಗೆ ಮಹಾದೇವ ಎಂಬುವನಾಮ ಔಪಚಾರಿಕದಲ್ಲೇವೇ ರೂಢಬ್ರಹ್ಮನಾಮನು ನೀನೇ ಬ್ರಹ್ಮಾಂತರ್ಯಾಮಿಯುಬ್ರಹ್ಮನೊಳು ಇದ್ದು ನೀ ಭುವನಂಗಳ ಪಡೆವಿ 8ರುದ್ರ ನಾಮನು ನೀನೇ ರುದ್ರಾಂತರ್ಯಾಮಿಯುರುದ್ರನೊಳು ಇದ್ದು ನೀ ಸಂಹಾರವ ಮಾಡುವಿತತ್‍ತತ್ರಸ್ಥಿತೋ ವಿಷ್ಣುಃ ತತ್‍ಚ್ಛಕ್ತಿ ಪ್ರಬೋಧÀಯನ್ರುದ್ರನಿಂ ವಿಷಪಾನ ನಿನ್ನ ನಿಯಮನವೇ 9ಶಕ್ರಾದಿ ಸರ್ವರಿಗೂಗುರುಆಶ್ರಯನು ಶಂಕರನುಶಂಕರನಿಗೆ ಆಶ್ರಯನು ಗುರುಮುಖ್ಯವಾಯುಮುಖ್ಯವಾಯುಗಾಶ್ರಯ ಶ್ರೀಕಾಂತ ನೀನುಶ್ರೀಕಾಂತ ನೀನೇವೇ ಸರ್ವಾಶ್ರಯ ಅನೀಶ 10ಯಾವ ಮಹಾದೇವನೊಲಿಯದೇ ವಾಯು ಒಲಿಯಆ ವಾಯು ಒಲಿಯದೇಹರಿತಾನೂ ಒಲಿಯಆ ವಾಯು ಹರಿಒಲಿಯದಿರೆ ಬೇರೆ ಗತಿಇಲ್ಲಆ ವಾಯು ಹರಿಧಾಮ ಮಹಾದೇವ ಸ್ತುತ್ಯ 11ಸರ್ವಾಂತರ್ಯಾಮಿ ಯಾವನಲಿ ಪ್ರಸನ್ನನು ಆಗಿಯಾವನ ಮೂಲಕ ಶಕ್ರಾದಿಗಳ ಕಷ್ಟತೀವ್ರದಿ ಪೋಗುವುದೋ ಆ ಮಹಾದೇವನ ಸ್ತುತಿಸಿದರುಸುರರುಶಿವಾಂತರ್ಯಾಮಿ ಶ್ರೀಹರಿ ಮಹಿಮೆಗಳ ಕೂಡಿ 12ಕರತಲೀಕೃತ್ಯಹಾಲಾಹಲವಿಷವಶಕ್ರಾದಿ ಜನರಲ್ಲಿ ಕೃಪೆ ಮಾಡಿ ಉಂಡುಕರುಣಾಳು ಮಹಾದೇವ ಭೂತದಯಾಪರನು ಈಹರಿಭಕ್ತಾಗ್ರಣಿ ಶಿವ ಉಮೇಶನಿಗೆ ಶರಣು 13ಹರಿಬ್ರಹ್ಮ ಪಾರ್ವತಿ ಪ್ರಜೇಶ್ವರರುಹರನ ಈ ಮಹತ್ಸೇವೆ ಬಹು ಶ್ಲಾಘಿಸಿದರುಕರದಿಂದ ಕೆಳಗೆ ಪ್ರಸ್ಕನ್ನ ಗರವಾದ್ದುಸರೀಸೃಪ ವೃಶ್ಚಿಕಾದಿಗಳೊಳು ಸೇರಿತು 14ಗರವು ಭೂಷಣವಾಯಿತು ವೈರಾಗ್ಯಾಧಿಪ ಶಿವಗೆಸುಪ್ರಸಿದ್ಧನು ಆದ ನೀಲಕಂಠನೆಂದುಧೀರ ಕರುಣಾಂಬುನಿಧಿ ನಂಜುಂಡೇಶ್ವರನು ಈಗಿರಿಜೇಶನಿಗೆ ನಾ ನಮಿಪೆ ಶರಣೆಂದು 15ಈ ಕೃಪಾಕರ ನೀಲಕಂಠ ಕರತಲೀಕೃತ್ಯಆ ಕಾಲಕೂಟವಿಷ ಉಂಡ ಮಹತ್ಕಾರ್ಯಸಂಕೀರ್ತಿ ಪೇಳಿರುವುದು ಶ್ರೀ ಭಾಗವತದಿಬಾಕಿ ಬಹು ಮಹೋಲ್ಪಣ ವಿಷ ವಿಷಯ ಶೃತಿ ವೇದ್ಯ 16ಉರಗಭೂಷಣ ವಿಪ ಉರಗಪರುಗಳಿಗಿಂತನೂರುಗುಣ ಎಂಬುದಕೆ ಅತ್ಯಧಿಕ ಬಲಿಯುವರಮುಖ್ಯ ಪ್ರಾಣ ಜಗತ್ ಪ್ರಾಣಗೆ ಸಮರಿಲ್ಲನೀರಜಜಾಂಡದಿ ಎಲ್ಲೂ ಶರಣೆಂಬೆ ಇವಗೆ 17ಜ್ಞಾನ ಸುಖಪೂರ್ಣ ಸ್ವತಂತ್ರ ಸರ್ವಾಧಾರಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸಧನ್ವಂತರಿ ಶರಣು ಅಜಿತ ಸ್ತ್ರೀಕೂರ್ಮ18-ಇತಿ ದ್ವಿತೀಯಾಧ್ಯಾಯಂ ಸಂಪೂರ್ಣಂ -ತೃತೀಯ ಅಧ್ಯಾಯಶ್ರೀ ಇಂದಿರಾ ಆವಿರ್ಭಾವಸಾರಲೀಲಾವತಾರನೇ ಸರ್ವ ಲೋಕಾಧಾರಮಾಲೋಲ ಸುಖಚಿತ್ ಕೂರ್ಮರೂಪಪಾಲಾಬ್ಧಿಜಾಪತಿ ಅಜಿತ ಧನ್ವಂತರೀಲೀಲಾ ಮೋಹಿನಿಅನಘಶರಣು ಮಾಂಪಾಹಿಪಗರಪಾನವ ವೃಷಾಂಕನು ಮಾಡೆ ಇಂದ್ರಾದಿಸುರರುದಾನವರು ಪುನರ್‍ಮಥನವ ಚರಿಸೆಕ್ಷೀರಸಾಗರದಿಂದ ಉತ್ಪನ್ನವಾದವುಪರಿಪರಿ ವಸ್ತುಗಳ್ ಒಂದರ ಮೇಲೊಂದು 1ಯಜÉೂÕೀಪಯೋಗಿಗಳಪ್ರದ ಕಾಮಧೇನುಉಚ್ಛೈಶ್ರವನಾಮ ಸುಲಕ್ಷಣ ಅಶ್ವಸಚ್ಛಕ್ತಿ ಶ್ರೇಷ್ಠತರ ಐರಾವತನಾಮಗಜೇಂದ್ರ ನಾಲ್ಕು ಚಂದದಂತ ಭೂಷಿತವು 2ಸರಸಿಜೋದ್ಭವಸೇವ್ಯಶ್ರೀಶವರಾಹಹರಿನಿನ್ನ ವಕ್ಷ ಸಂಬಂಧದಿ ಹೊಳೆವಸುಶ್ರೇಷ್ಠ ಕೌಸ್ತುಭರತ್ನ ಎಂಬುವಂತಹಸುಭ್ರಾಜಮಣಿ ಬಂತು ಆ ಸಿಂಧುವಿನಿಂದ 3ಸುರಲೋಕ ವಿಭೂಷಣವು ಸರ್ವವಾಂಛಿತ ಪ್ರದವುಪಾರಿಜಾತವು ಉದ್ಭವವಾಯಿತು ತರುವಾಯಸ್ಫುರದ್ರೂಪ ರಮಣೀಯ ಸುಂದರಾಂಗಿಗಳುಹಾರವಸನಭೂಷಿತ ಅಪ್ಸರಸರು 4ಸೌದಾಮಿನಿಗಮಿತ ವಿದ್ಯುತ್ ಕಾಂತಿಯಿಂದದಿಕ್‍ವಿದಿಕ್ಕುಗಳ ರಂಜಿಸುವರೂಪ -ದಿಂದ ಆವಿರ್ಭವಿಸಿದಳು ಸಾಕ್ಷಾತ್ ಶ್ರೀಇಂದಿರೆಅಲೌಕಿಕ ಸೌಂದರ್ಯಪೂರ್ಣೆ5ಸರ್ವದಾ ಸರ್ವವಿಧದಿ ನಿನ್ನ ಸೇವಿಸಿ ನುತಿಪಸರ್ವಜಗಜ್ಜನನಿಯೇಸಿಂಧುಕನ್ಯಾದೇವ ದೇವೋತ್ತಮ ರಾಜರಾಜೇಶ್ವರ ನಿನಗೆದೇವ ಶ್ರೀ ರಾಜರಾಜೇಶ್ವರಿನಿತ್ಯನಿಜಸತಿಯು6ಇಂದ್ರಾದಿ ದೇವತೆಗಳು ಮುನಿಜನರುಇಂದಿರೆಯನ್ನು ವಿಧಿಯುಕ್ತ ಪೂಜಿಸಿದರುಸಿಂಧುರಾಜನು ವರುಣ ಏನು ಧನ್ಯನೋ ಜಗನ್ -ಮಾತೆ ನಿರ್ದೋಷೆ ರಮಾ ಮಗಳಾಗಿ ತೋರಿಹಳು 7ಅಲೌಕಿಕ ಮುತ್ತು ನವರತ್ನದ ಮುಕುಟಒಳ್ಳೇ ಪರಿಮಳ ಹೂವು ಮುಡಿದ ತುರುಬುಪಾಲದಲಿ ಶ್ರೇಷ್ಠತಮ ಕಸ್ತೂರಿತಿಲಕವುಪೊಳೆವ ಪೂರ್ಣೇಂದು ನಿಭ ಮೂಗುಬಟ್ಟು 8ಅಂಬುಜಾಕ್ಷಗಳು ದಿವ್ಯ ಮುತ್ತಿನ ತೋಡುಗಳುಗಂಭೀರ ಸೌಭಾಗ್ಯಪ್ರದ ಕೃಪಾನೋಟಕಂಬುಕಂಠದಿ ಮಂಗಳಸೂತ್ರ ಕರಯುಗದಿಅಂಬುಜಾವರಕೊಡುವ ಅಭಯಹಸ್ತಗಳು9ಕಂದರದಿ ಎಂದೂ ಬಾಡದಕಮಲಮಾಲಾಪೀತಾಂಬರ ದಿವ್ಯ ಕುಪ್ಪಸ ಮೇಲ್ಪಟ್ಟಿವಸ್ತ್ರ ರಾಜಿಸುವಂತಹ ಸ್ವರ್ಣಹಾರಗಳುಕಾಂತಿಯುಕ್ ಭಂಗಾರ ಸರ್ವಾಭರಣಗಳು 10ಆನಂದಮಯಅಜಿತನಾಮಾ ನಿನ್ನನು ಮನ-ಮಂದಿರದಿ ಪೂಜಿಸುತ ಇಂದಿರಾದೇವಿಬಂದು ಸಭೆಯಲಿ ಸಾಲು ಸಾಲಾಗಿ ಕುಳಿತಿದ್ದವೃಂದಾರಕರನ್ನ ಮಂದಹಾಸದಿ ನೋಡಿದಳು 11ಒಬ್ಬೊಬ್ಬ ದೇವತೆಯಲೂ ಗುಣವಿದ್ದರೂಅಬ್ಬಬ್ಬ ಏನೆಂಬೆ ದೋಷಗಳೂ ಉಂಟುಅದ್ಭುತ ಗುಣನಿಧಿನಿರ್ದೋಷಸರ್ವೇಶ-ಅಂಬುಜನಾಭ ನೀನೇವೇ ಎಂದು ನಮಿಸಿದಳು 12ಕ್ಷರರಿಗೂ ಅಕ್ಷರರಿಗೂ ಎಂದೆಂದೂ ಆಶ್ರಯನುಪುರುಷೋತ್ತಮಹರಿವಿಷ್ಣು ಸ್ವತಂತ್ರಸರಿ ಅಧಿಕರು ಇಲ್ಲದ ಅನಘನು ಸರ್ವಗುಣಪರಿಪೂರ್ಣನಿಗೇವೇ ಅರ್ಪಿಸಿದಳು ಮಾಲೆ 13ಉತ್ತಮ ಸುತೀರ್ಥಗಳಿಂದ ಅಘ್ರ್ಯ ಚಮನಪಾದ್ಯಾದಿ ಅರ್ಚನೆ ವಿಧಿಯುಕ್ತವಾಗಿಸುತಪೂನಿಧಿ ವಸಿಷ್ಠಾದೀಯರು ವೇದೋಕ್ತಮಂತ್ರ ಪಠಿಸೆ ವರುಣ ಹರಿಯ ಪೂಜಿಸಿದ 14ಆನಂದಪೂರ್ಣಅಜನಿತ್ಯಮುಕ್ತೆ ಮಗಳುಇಂದಿರೆಯಆನಂದಮಯಹರಿನಿನಗೆಸಿಂಧುಧಾರೆ ಎರೆದು ಮದುವೆ ಮಾಡಿಕೊಟ್ಟಆನಂದ ನಿತ್ಯದಂಪತಿ ರಮಾ ಮಾಧವರು 15ಪೀತಾಂಬರ ದಿವ್ಯ ಆಭರಣ ಪೊಳೆಯುತ್ತಮೋದಮಯ ನೀ ಸಿಂಧುಜಾ ಸಹ ದಿವ್ಯರತ್ನ ಖಚಿತ ಮಂಟಪದಲಿ ಕುಳಿತರೆಮುದದಿ ವರ್ಷಿಸಿದರು ಪೂಮಳೆಸುರರು16ಸಂಭ್ರಮದಿ ಮಂಗಳವಾದ್ಯ ಸುಧ್ವನಿಗಳುತುಂಬಿತುಅಂಬರಅಂಬುಧಿಎಲ್ಲೂಗಂಭೀರ ಸುಸ್ವರ ವೇದಘೋಷಗಳುತುಂಬರ ನಾರದಾದಿಗಳ ಗಾಯನವು 17ದೇವಗಾಯಕರುಗಳ ದಿವ್ಯ ಕೀರ್ತನೆಗಳುದೇವನರ್ತಕ ನರ್ತಕಿಯರ ನರ್ತನವುದೇವತೆಗಳ ಆಭರಣಾದಿ ಕಾಣಿಕೆಗಳದೇವಿ ರಮೆಗೂ ನಿನಗೂ ಅರ್ಪಿಸಿದರು ಮುದದಿಂ 18ವನಜಭವ ರುದ್ರಾದಿಗಳು ಮುನಿವೃಂದವುಸನ್ನುತಿಸುತ ಸರ್ವ ಕೀರ್ತನವನ್ನುಆನಂದ ಭಕ್ತಿಯಂ ಶ್ರೀ ಲಕ್ಷ್ಮೀಯನ್ನು ನೋಡಿಧನ್ಯರಾದರು ನಮೋ ವಿಷ್ಣುಗೆ ಶ್ರೀರಮೆಗೆ 19ಜ್ಞಾನ ಸುಖಪೂರ್ಣ ಸ್ವತಂತ್ರ ಸರ್ವಾಧಾರಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸಧನ್ವಂತರಿ ಶರಣು ಅಜಿತ ಸ್ತ್ರೀಕೂರ್ಮ20- ಇತಿ ತೃತೀಯ ಅಧ್ಯಾಯ ಪೂರ್ಣಂ -ಚತುರ್ಥ ಅಧ್ಯಾಯಶ್ರೀ ಧನ್ವಂತರಿ ಹಾಗೂ ಮೋಹಿನಿವೃತ್ತಾಂತಸಾರಲೀಲಾವತಾರನೇ ಸರ್ವಲೋಕಾಧಾರಮಾಲೋಲ ಸುಖಚಿತ್ ಕೂರ್ಮರೂಪಪಾಲಾಬ್ಧಿಜಾಪತಿ ಅಜಿತ ಧನ್ವಂತರೀಲೀಲಾ ಮೋಹಿನಿಅನಘಶರಣು ಮಾಂಪಾಹಿಪವಿಸ್ತಾರವಾಗಿ ಫೇಣವು ವ್ಯಾಪಿಸಿರುವಆ ಸಮುದ್ರದಿಂದ ವಾರುಣಿಯು ಬರಲಾಗಅಸುರರನು ತಮಗೇವೆ ಬೇಕೆಂದು ಕೊಂಡರುಈಶ ನೀ ಅವರಿಗೆ ಅನುಮತಿ ಕೊಡಲು 1ಸುಧೆಗಾಗಿ ಸಿಂಧುವ ಮತ್ತೂ ಮಥನಮಾಡೆಉದಿಸಿದನುಪರಮಅದ್ಭುತ ಪುರುಷನುಸುಂದರ ವಿಗ್ರಹ ಕಂಬುಗ್ರೀವ ಅರುಣೇಕ್ಷಣಅಂದ ಸುದೀರ್ಘ ಪೀವರದೋರ್ದಂಡ 2ಸಗ್ನಧರ ಶ್ಯಾಮಲಸ್ತರುಣ ಸರ್ವಾಭರಣ -ದಿಂದ ಒಪ್ಪುವ ರತ್ನಖಚಿತ ಕುಂಡಲವುಪೀತವಾಸ ಮಹಾಸ್ಕಂಧ ಸುಶುಭಾಂಗನುಸ್ನಿಗ್ದ ಕುಂಚಿತ ಕೇಶ ಸಿಂಹ ವಿಕ್ರಮನು 3ಅನುಪಮಾದ್ಭುತ ಈ ಮಹಾಪುರುಷ ಸಾಕ್ಷಾತ್ವಿಷ್ಣು ನೀನೇವೆ ಮತ್ತೊಂದವತಾರಆನಂದ ಚಿನ್ಮಾತ್ರ ಹಸ್ತದಲಿ ಹಿಡಿದಿರುವಿಪೂರ್ಣವಾಗಿ ಅಮೃತ ತುಂಬಿರುವ ಕಳಸ 4ಆಯುರ್ವೇದ ಮಹಾಭಿಷಕ್ ಶ್ರೀ ಧನ್ವಂತರಿ ನೀನುಕೈಯಲ್ಲಿ ಪಿಡಿದ ಪಿಯೂಷ ಕುಂಭವನುದೈತ್ಯರು ನೋಡಿ ಬಹು ಇಚ್ಛೈಸಿ ಅಪಹರಿಸೆಶ್ರೀಯಃಪತಿಯೇಸುರರುನಿನ್ನಲ್ಲಿ ಮೊರೆಇಟ್ಟರು5ದೇವತಾವೃಂದವಿಷ್ಣಮನಸ್ಸಿಂದಲಿದೇವವರೇಣ್ಯಹರಿನಿನ್ನ ಶರಣು ಹೋಗಲುಯಾವ ಮನಖೇದವೂ ಬೇಡ ಅನುಕೂಲವನೇಮಾಡುವಿ ಎಂದು ನೀ ಅಭಯವನ್ನಿತ್ತಿ 6ಅಮೃತಕಲಶವು ಎಂದು ನೆನೆದು ಆ ಅಸುರರುನಾಮುಂಚಿ(ಚೆ) ನಾಮುಂಚಿ (ಚೆ) ನೀ ಮುಂಚಿ (ಚೆ) ಅಲಲ್ತಮ್ಮೊಳಗೆ ಈ ರೀತಿ ಪರಸ್ಪರ ಕಾದಾಡೇನೀ ಮೋಹಿನಿ ರೂಪದಲಿ ತೋರಿ ನಿಂತಿ 7ಪರಮಅದ್ಭುತ ಅನಿರ್ದೇಶ್ಯ ಸ್ತ್ರೀರೂಪವಧರಿಸಿ ನಿಂತಿಯೋ ಆ ಅಸುರರ ಮುಂದೆಅರಳಿದಮಲ್ಲಿಗೆ ಮುಡಿದ ಕುಂತಳವುವರಾನನ ಕರ್ಣಕುಂಡಲಕಪೋಲ8ಸುಗ್ರೀವ ಕಂಠಾಭರಣ ಸುಭುಜಾಂಗದಸ್ಫುರತ್ ನವ ಯೌವನಗಾತ್ರ ಸೌಂದರ್ಯಉರದಿ ಪೊಳೆಯುವ ನವರತ್ನಪದಕಗಳುಭಾರಿ ಪೀತಾಂಬರವುದಿವ್ಯಒಡ್ಯಾಣ9ಸರ್ವಅವಯವಗಳು ಅನುಪಮ ಸುಂದರವುಸರ್ವಾಭರಣ ವಿಭೂಷಿತ ಸೊಬಗುಸರ್ವಾಕರ್ಷಕ ಮಂದಗತಿ ನೋಟವುಸರ್ವ ಆ ದೈತ್ಯರೊಳು ಕಾಮ ಪುಟ್ಟಿಸಿತು 10ಅಮರರೊಳು ದೈತ್ಯರೊಳು ಗಂಧರ್ವ ನರರೊಳುಈ ಮಹಾ ಸೌಂದರ್ಯರೂಪ ಕಂಡಿಲ್ಲಸುಮೋಹಿತ ದೈತ್ಯರು ಸುಧಾ ವಿಷಯದಲಿತಮಗೂ ಸುರರಿಗೂ ನ್ಯಾಯಮಾಡೆ ಕೋರಿದರು 11ಮಾಯಾಯೋಷಿದ್ವಪುಷಅಮೃತ ವಿನಿಯೋಗನ್ಯಾಯವೋ ಸರಿಯೋ ಸರಿಯಲ್ಲವೋನೀ ಹ್ಯಾಗಾದರೂ ಮಾಡಲಿಕೆ ಒಪ್ಪಿದರುಮಾಯಾಮೋಹವೃತ ಆ ದೈತ್ಯಜನರು12ಉಪವಾಸ ಸ್ನಾನ ಹೋಮಾದಿಗಳು ಆಗಿದೀಪಾವಳಿಗಳ ಹಚ್ಚಿಟ್ಟು ಮುದದಿತಪ್ಪದೇಮುಕ್ತಆಚರಣೆ ತರುವಾಯಸುಪವಿತ್ರ ಸುಧೆಗೆ ಕಾದರು ಸುರಾಸುರರು 13ಸುಧೆಗೆ ಕಾದಿರುವ ಸುರಾಸುರರ ನೋಡಿಸುಧಾ ಕಲಶ ನಿಜವಾದ್ದನ್ನ ಹಿಡಿದಿಮಂದಗಜ ಗತಿಯಲ್ಲಿ ಶೃಂಗಾರ ಸುರಿಸುತ್ತಬಂದಳು ಮೋಹಿನಿ ಚಂದ ನವಯುವತಿ 14ಅಸುರರು ಅರಿಯರು ಯೋಷಿದ್ ವಪುಹರಿಯೇವೇಆ ಸ್ಫುರದ್ರೂಪಿಣಿ ಮೋಹಿನಿ ಎಂತಅಸುರರು ಲೋಲುಪಮರು ಸುಧಾ ಅನರ್ಹರು ಎಂದುಶ್ರೀಶ ನೀ ನಿಶ್ಚಯಿಸಿದಿ ದೇವ ದೇವ 15ದೇವತೆಗಳ ಪಂಕ್ತಿ ಒಂದು ಸಾಲು ಮತ್ತುದೇವಶತೃಗಳ ಪಂಕ್ತಿ ಮತ್ತೊಂದು ಸಾಲುದೇವತೆಗಳಿಗೇವೇ ನೀ ಸುಧ ಉಣಿಸಿದಿದೇವಶತೃಗಳಿಗೆ ಸುಧಾ ಉಣಿಸಲಿಲ್ಲ 16ಕೂರ್ಮರೂಪದಲಿ ನೀ ಮಂದರಾಗಿರಿ ಪೊತ್ತುಅಮರರ ಸಹಿತಸಿಂಧುಮಥಿಸಿದಿ ಅಜಿತಅಮೃತ ಕಲಶವ ತಂದಿ ಶ್ರೀಶ ಧನ್ವಂತರಿಸುಮನಸಸುಧಾಪ್ರದ ಮೋಹಿನಿರೂಪ17ಹರಿಪಾದಾಶ್ರಿತರಾಗಿರುವ ಸುರರಿಗೆ ಅಮೃತಹರಿಪರಾನ್ಮುಖ ದ್ವೇಷಿ ದೈತ್ಯರಿಗೆ ಇಲ್ಲಸುರಾಸುರಗಣಕೆ ಸಮ ಕರ್ಮೋಪಕರಣಗಳುಆದರೂ ಯೋಗ್ಯತೆಯಿಂದ ಫಲ ಬೇರೆ ಬೇರೆ 18ಜ್ಞಾನಸುಖಪೂರ್ಣ ಸ್ವತಂತ್ರ ಸರ್ವಾಧಾರಪೂರ್ಣ ಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸಧನ್ವಂತರಿ ಶರಣು ಅಜಿತ ಸ್ತ್ರೀಕೂರ್ಮ19- ಇತಿ ಚತುರ್ಥ ಅಧ್ಯಾಯ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು