ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಲವು ನಿನ್ನಾಧೀನ | ನಾ ಬಲ್ಲೆನೆಂಬುದಜ್ಞಾನ ಪ ವಿಧಿ ಪರಿಯಂತವು ನೀ- ನಿಲ್ಲದೆ ಕದಲದು ನಿಜವಿದು ನಿಜವಿದು ಅ.ಪ ಸುಖವನಪೇಕ್ಷಿಸುತಿಹರು | ದು- ಸಖ ನೀನೆನ್ನದೆ ದಾರಾ ಪುತ್ರಾ- ದ್ಯಖಿಳ ಸಂಪದವ ಬಯಸಿ ಕೆಡುವರು 1 ಹಣ ಸಂಪಾದಿಸುವದಕು | ಸ- ದ್ಗುಣ ವಂತನೆನಿಸುವದಕೂ ಹೆಣಕೆ ಸಮಾನನು ಇವನೆಂಬುವದಕೂ | ಹಿರಿಯ- ನೆನಿಸಿ ಪೂಜಿಸಿ ಕೊಂಬುವುದಕೂ 2 ನೀನೊಲಿದರೆ ವಿಷವಮೃತ | ಬರಿ- ಜ್ಞಾನಿಗಳರಿಯುವರೀ ನಾನಾ ಬಗೆ 3 ಜ್ಞಾನ ಭಕ್ತಿಯು ವಿರಾಗ | ವೆಂ- ಬೀನಿದಾನವೇ ಯೋಗ ಆನಂದ ಪಡುವುದೇ ಬಲು ತ್ಯಾಗ 4 ಕ್ಷೇಮದಿಂದಲಿರುವದಕೂ | ನಿ- ರ್ನಾಮವೈದಿ ಕೆಡುವುದಕೂ ಪಾಮರ ಜೀವರು ತಾವರಿಯರು ಗುರು ರಾಮ ವಿಠಲ ನೀನಾ ಮಮತೆ ಕೊಡದಿರೆ 5
--------------
ಗುರುರಾಮವಿಠಲ
ಯಾತರ ಭಯ ಶ್ರೀನಾಥನ ಪರಮ ಸುಪ್ರೀತಿಯ ಪಡೆದವಗೆ ಪ ವಿಧಿ ನಿಜಸುಖದಾತ ನೆಂದರಿತವಗೆ ಅ.ಪ ಬಂಧು ಜನರು ತನಗೊಂದಿಸಿದಾಕ್ಷಣ ಬಂದ ಭಾಗ್ಯವೇನೊ ಹಿಂದೆ ಮುಂದೆ ತನ್ನ ನಿಂದಿಸಿ ನುಡಿಯಲು ಕುಂದಾದದ್ದೇನೊ ಮಂದಿರದಲಿ ತಂದಿಟ್ಟಿರುವವಗೆ 1 ದುಸುಮುಸುಗುಟ್ಟುವ ಸತಿಸುತರಿಂದಲಿ ಹಸಗೆಟ್ಟದ್ದೇನೋ ಅಶನಾಚ್ಛಾದನ ತರಲಿಲ್ಲವೆನುತಲಿ ವ್ಯಸನ ಪಡುವುದೇನೊ ವಸುದೇವನಸುತನೊಶದೊಳಗಿರುವವಗೆ 2 ಘಾಸಿಯಿಂದಲಾಯಾಸ ಪಡುತ ಅವಾಸದೊಳಿದ್ದೇನೋ ಕಾಶಿ ಕಂಚಿ ಕಾಳಹಸ್ತಿ ಮೊದಲಾದ ದೇಶ ತಿರುಗಲೇನೋ ಸಂತೋಷದಲ್ಲಿರುವವನಿಗೆ 3
--------------
ಜಗನ್ನಾಥದಾಸರು