ಒಟ್ಟು 389 ಕಡೆಗಳಲ್ಲಿ , 72 ದಾಸರು , 352 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನ ಬಿನ್ನಪ ಕೇಳೊ ಘನ್ನ ಮಹಿಮನೆ ಭವ ಬನ್ನ ಬಡಿಸುತಲಿಹುದೋ ಸ್ವಾಮಿ ಪ ಇನ್ನು ನೀ ಪೊರೆಯೊ ಅಪನ್ನಜನರಾಪಾಲ ಮನ್ನಿಸಿ ಕಾಯೊ ಸ್ವಾಮೀ ಪ್ರೇಮೀ ಅ.ಪ ಆಗಾಮಿಸಂಚಿತಭೋಗಂಗಳು ಎನ್ನ ಯೋಗ ಮಾರ್ಗಕೆ ಪೋಗದಂತೆ ಹೇಗೆ ಮಾಡಿ ಙÁ್ಞನನೀಗೆ ನಿನ್ನಲಿ ಮನಸು ಯೋಗವನು ಮಾಡಗೊಡದೇ ಜಾಗುಮಾಡುತ ಪರಮಭಾಗವತರಲಿಸದಾ ಆಗಮಗಳ ತಿಳಿಯದೇ ಹೀಗಾಗಿ ನಾನು ಅಯೋಗ್ಯನೆನಿಸೀ ಜಗದಿ ಕಾಗಿಯಾಗಿ ತಿರುಗಿದೇ ಸ್ವಾಮಿ 1 ಹೆತ್ತ ಈ ಮೊದಲು ಮತ್ತಾರು ಜನರಿಲ್ಲ ಹೊತ್ತಿಗೇ ಕರೆದನ್ನವೀವರಿಲ್ಲಾ ಗೊತ್ತು ಸ್ಥಳಗಳು ಇಲ್ಲ ವೃತ್ತಿ ಸ್ವಾಸ್ಥ್ಯಗಳಿಲ್ಲ ಚಿÉತ್ತ ಶುದ್ಧಿಯು ಮೊದಲೆ ಇಲ್ಲಾ ಎತ್ತ ಪೋದರೆನ್ನ ಇತ್ತ ಬಾಯೆಂತೆಂದು ಹತ್ತಿರ ಕರೆವೊರಿಲ್ಲ ಎತ್ತ ಪೋದರೆನ್ನ ಮತ್ತೆ ಪಾಲಿಪರ್ಯಾರೊ ಉತ್ತಮನೆ ನೀನೆ ಕಾಯೋ ಸ್ವಾಮೀ 2 ಗರ್ಭವಾಸದಕಿಂತ ದುರ್ಭರಾಭವತಾಪ ನಿರ್ಭರಾವಾಗಿಹುದೋ ಅರ್ಭಕಾಮತಿಯಿಂದ ಅಭರ್Àಟಾ ಕಾರ್ಯವನು ನಿರ್ಭಯದಿ ಮಾಡಿದೆನೊ ಗರ್ಭ ನಾ ದೂತ ನೀ ನಿರ್ಭಯವ ಕೊಡದಿರಲು ಲಭ್ಯವೇ ಸರ್ವಕಾರ್ಯಾ ಲಭ್ಯ ಶ್ರೀಪತಿ ನೀನು ಲಭ್ಯನಾಗದಿರೆ ವೈ ದÀರ್ಭಿರಮಣಾ ಕಷ್ಟವೋ ಸ್ವಾಮಿ 3 ಉಡುವ ವಸ್ತ್ರಗಳಿಲ್ಲ ಒಡಲಿಗಶನವು ಇಲ್ಲ ಕೊಡುವ ಧನ ಮೊದಲೆ ಇಲ್ಲ ಪೊಡವಿಯೊಳು ನಾನತೀ ಬಡವನಲ್ಲದೆ ಮಹಾ ಕಡು ಪಾಪಿಯಾದೆನಲ್ಲೋ ತುಡುಗುತನದಲಿ ಪರರ ಮಡದಿಯರ ನಾ ಬಲು ದೃಢಮನಸಿನಿಂದ ಬಯಸಿ ಧೃಢ ಭಕುತಿಯಿಂದ ಅಡಿಗೆರಗದಲೆ ನಾನು ಪೊಡವಿಭಾರಾದೆನಲ್ಲೋ ಸ್ವಾಮೀ 4 ಓದಿ ಬರೆಯಾಲಿಲ್ಲ ವೇದ ಪಠಿಸಾಲಿಲ್ಲ ಮೋದತೀರ್ಥರ ಶಾಸ್ತ್ರ ತಿಳಿಯಲಿಲ್ಲಾ ವಾದಶಾಸ್ತ್ರಗಳಿಲ್ಲ ಭೇದಪಂಚಕವಿಲ್ಲ ಸಾಧನದ ಮಾರ್ಗವಿಲ್ಲ ಖೇದಗೊಳಿಸುವ ಭವದ ಹಾದಿ ತಿಳಿಯದೆ ನಾನು ಮೋದಕÀರವೆಂದು ಅಲ್ಲೀ ಸಾದರದಿ ಬಿದ್ದು ಆಮೋದಬಡುತಲಿ ದ್ವಿ ಪಾದಪಶು ನಾನಾದೆನಲ್ಲೋ ಸ್ವಾಮೀ 5 ಸತಿಸುತ ಮೊದಲಾದ ಅತಿಹಿತ ಜನರೆನ್ನ ಸತತ ಸಂತ್ಯಜಿಸಿಹರೋ ವಿತತವಾಗಿಹ ಮಹಾಪತಿತದಾರಿದ್ರ್ಯನ್ನ ಅತಿಬಾಧೆ ಬಡಿಸುತಿಹದೋ ಇತರ ಜನರೂ ಎನ್ನ ಅತಿದÀೂರದಲಿ ನೋಡಿ ಅತಿಹಾಸ್ಯ ಮಾಡುತಿಹರೋ ವ್ರತತಿಜಾಂಬಕÀ ನಿನ್ನ ನತಿಸಿ ಬೇಡಿಕೊಂಬೆ ಸತತ ನೀ ಪಾಲಿಸೆಂದೂ ಸ್ವಾಮೀ 6 ತಂದೆ ತಾಯಿಯೂ ನೀನೆ ಬಂಧು ಬಳಗವು ನೀನೆ ಇಂದು ಸಿಂಧು ಒಳಗೆ ಬಿದ್ದೆ ಮುಂದಕ್ಕೆ ಕರೆದು ಕಾಯೋ ಸುಂದರಾಂಗನೆ ಕೃಪಾಸಿಂಧು ನೀ ಬಿಡೆ ಎನ್ನ ನೊಂದದಲೆ ಸಲಹೊರ್ಯಾರೋ ಸ್ವಾಮಿ 7 ಹೊಟ್ಟೆಗಿಲ್ಲದೆ ನಾನು ಬಟ್ಟೆ ಹಾಸೀ ನರರಿ ಗ್ವಟ್ಟರಿಸಿ ಒದರುತಿಹೆನೋ ಪುಟ್ಟದಿರಲೂ ಅನ್ನ ಸಿಟ್ಟಿನಿಂದಾ ನಾಯಿ ಬೆಟ್ಟಕ್ಕೆ ಒದರಿ ತಾನೂ ಹೊಟ್ಟೆಯುಬ್ಬೀ ಕೊನೆಗೆ ಹೊರಳಿ ಹೊರಳಿ ತಾನು ಸುಟ್ಟ ಬೂದಿಲಿ ಬೀಳ್ವ ತೆರದೀ ಒಟ್ಟು ಮಾತಿದು ಕೃಪಾವಿಟ್ಟು ನೀ ಎನ್ನನು ಥsÀಟ್ಟನೇ ಕರಪಿಡಿದು ಕಾಯೋ ಸ್ವಾಮೀ 8 ನಿನ್ನ ದಾಸನು ಆಗಿ ಅನ್ಯರನ ಬೇಡಿದರೆ ಘನ್ನತೆಯು ನಿನಗುಂಟೇ ಘನ್ನ ಜನಪನ ತನುಜ ಇನ್ನು ದೈನ್ಯದಿ ತಾನೆ ಅನ್ಯರನು ಬೇಡುವುದು ಉಂಟೇ ಚೆನ್ನ ಸುಮನಸ ಧೇನು ಮುನ್ನ ಮನೆಯೊಳಿರೆ ಗೋ ವನ್ನು ಬಯಸುವರುಂಟೇ ಇನ್ನು ಪೇಳುವದೇನು ಎನ್ನಭವಣೇ ತಿಳಿದು ಇನ್ನು ಕಾಯಲಿ ಬೇಕೋ ಸ್ವಾಮೀ ಶುದ್ಧಮಾರ್ಗವ ಬಿಟ್ಟು ಬದ್ಧ ಭವಸಾಗರವೆ ಉದ್ಧಾರ ಮಾಳ್ಪದೆಂದೂ ಶಿದ್ಧಜನರಾ ಸೇವೆಗೆ ಬದ್ಧನಾಗದೆ ದುರಾ ರಾಧ್ಯ ಜನರನ್ನು ಭಜಿಸೀ ಉದ್ಧರಿಸುವೊ ಶ್ರೀ ಮಧ್ವಸಿದ್ಧಾಂತದ ಸೂ ಪದ್ಧತಿಯನ್ನೆ ಬಿಟ್ಟೂ ಸಿದ್ಧಮೂರುತಿ ಎನ್ನ ¥ದ್ಧಗಳ ಎಣಿಸದಲೆ ಉದ್ಧಾರಮಾಡೊ ಸ್ವಾಮೀ ಪ್ರೇಮೀ 10 ದಾತ ನೀನೇ ಎನ್ನ ಮಾತುಲಾಲಿಸಿ ಭವದ ರತಿಯನ್ನೇ ಬಿಡಿಸಿ ಕಾಯೋ ಪೊತನಲ್ಲವೆ ನಿನಗೆ ಆತುರದಿ ನಾನೀ ರೀತಿಯಿಂದಲಿ ಪೇಳಿದೆ ಯಾತರಾ ಮಾತೆಂದು ನೀ ಪ್ರೀತಮನಕೇ ತರದೆ ತಾತನೂಕೀ ಬಿಟ್ಟರೆನ್ನಾ ಸೋತುಬಂದಾ ನಿನಗೆ ಆತುರಾವ್ಯಾಕೆಂದು ನೀತವಾಗೀ ಕಾಯ್ವರಾರೋ ಸ್ವಾಮೀ 11 ಮಾತೆ ಮಕ್ಕಳಿಗೆ ವಿಷದಾತೆಯಾಗೇ ತಂದೆ ಪೋತರ ಮಾರಿದಾರೆ ದಾತನಾದಾ ರಾಜ ಆತುರಾದಿಂದಲಿ ನಿಜ ದೂತರರ್ಥಪಹಾರಮಾಡೆ ನೀತಸತಿಯು ತನ್ನ ನಾಥನಾಯು ತಾನೆ ಘಾತವನೆ ಮಾಡಿದಾರೆ ನೀತವೇ ನಿನಗಿದಕೆ ಯಾತರಾ ಚಿಂತೆ ಈ ಮಾತಿನಂತೆ ನಿನಗೆ ಪ್ರೀತೇ ಸ್ವಾಮೀ ಎಷ್ಟು ಪೇಳಲಿ ಎನ್ನ ಕಷ್ಟರಾಶಿಗಳೆಲ್ಲ ಶ್ರೇಷ್ಟವಾಗಿರುತಿಹವೊ ಸ್ವಾಮೀ ದುಷ್ಟನಾದರು vನ್ನ ಭ್ರಷ್ಟಮಗನನು ತಾಯಿ ಅಟ್ಟೀಸೂವಳೆ ಅಡವಿಗೆ ಎಷ್ಟು ಕೆಟ್ಟವ ನಾನಾರಿಷ್ಟನಾದರು ಕೃಪಾ ದೃಷ್ಟಿಯಿಂದಲಿ ನೋಳ್ಪಳೋ ನಷ್ಟದೈವ ನಾನರಿಷ್ಟ ಅಙÁ್ಞನಿ ಕರುಣಾ 13 ದೃಷ್ಟಿ ಯಿಂದಲಿ ನೋಡಿ ಸಲಹೋ ಸ್ವಾಮೀ ಕುಟಿಲ ಖಳಮತಿಯು ನಟಿನೆಮಾಡುತ ಭವಲಂ ಪಟದೊಳಗೆ ಬಿದ್ದಿಹೆನೂ ಸ್ವಾಮೀ ಶಠÀತರನು ನಾನತಿಕಠಿಣಮನಸೀನಿಂದ ಧಿಟಜ್ನಾನಿದ್ರೋಹಗೈದೆ ದಿಟರಿಲ್ಲ ಎನಗೆಂದು ನಟಿಸುತ್ತ ಸರ್ವದ ಅಟನೆಮಾಡಿದೆ ಸರ್ವರಲ್ಲಿ ಪಟುತರನು ನಾನೆಂದು ಧಿಟಗುರುಜಗನ್ನಾಥ ವಿಠಲ ದೇವಾ ನಿನ್ನ ಮರೆದೆ ಸ್ವಾಮೀ 14
--------------
ಗುರುಜಗನ್ನಾಥದಾಸರು
ನಿನಗಿನ್ನ ನಾನಧಿಕ ಇಂದಿರೇಶಾ ಎನಗೆ ನಾಥನು ಉಂಟು ಅನಾಥನು ನೀನು ಪ ಕುಲಗೋತ್ರ ನಿನಗಿಲ್ಲ ಕುಲಗೋತ್ರ ಎನಗುಂಟು ಲಲಿತರೂಪನು ನಾನು ಅರೂಪ ನೀನೂ ಚೆಲುವ ಸುಗುಣಿಯು ನಾನು ಅಗುಣರೂಪನು ನೀನು ಬಲಹೀನನು ನೀನು ಸಬಲ ನಾನು ದೇವಾ 1 ನಾಮಧೇಯನು ನಾ ಅನಾಮಧೇಯನು ನೀನು ಕಾಮಕಾಮುಕ ನಾ ಅಕಾಮಿ ನೀನು ಪಾರನು ನಾ ಅಪಾರನು ನೀನಯ್ಯಾ ನೇಮಬದ್ಧನು ನಾ ಅನೇಮಿ ನೀನು 2 ಗತಿಯು ನೀನೆಗೈಯ್ಯ ಸದ್ಗತಿಯು ನಿನಗಾರಯ್ಯ ವ್ರತನೇಮ ಎನಗುಂಟು ನಿನಗಾವುವೋ ಸತತಮಾನಿಯು ನಾನು ಅಮಾನಿ ನೀನಯ್ಯ ವಿತತಕರ್ಮಿಯು ನಾನು ಕರ್ಮಹೀನನು ನೀನು 3 ಪತಿತಪಾತಕಿ ನಾನು ಪತಿತಪಾವನನು ನೀನು ರತಿಬದ್ಧನು ನಾ ವಿರತಿಯು ನೀನು ಶ್ರೀತಜನರಪಾಲ ಆಶ್ರಿತ ನಾನು ನಿನಗೈಯ್ಯ ಸತತಪಾಲಕ ನೀನು ಪಾಲ್ಯ ನಾನು 4 ದೂತರಾಧಮ ನಾನು ದೂತವತ್ಸಲ ನೀನು ಆತುರನು ನಾನು ನಿಜದಾತ ನೀನು ನೀತ ಗುರುಜಗನ್ನಾಥವಿಠಲರೇಯ ತಾತ ನೀ ಎನಗಯ್ಯ ನಿನಗಾವ ತಾತಾ 5
--------------
ಗುರುಜಗನ್ನಾಥದಾಸರು
ಶ್ರೀಹರಿ ಸಂಕೀರ್ತನೆ ವಾಸುದೇವ ನೀನೊಬ್ಬನಲ್ಲದೇ ಪ ಮಾತೆ ಇದ್ದರು ದೃಢವ್ರತನಾದ ಧ್ರುವಗೆ ಶ್ರೀ- ಪತಿ ನೀನೆ ಗತಿಯಾದೆ ಆರಾದರಯ್ಯ ಪಿತನು ಹಿತನೆನ್ನೆ ಪ್ರಹ್ಲಾದಗಾದಂಥ ಗತಿ ನೋಡಿ ನರಹರಿ ಗತಿ ಪ್ರದ ನೀನಾದೆ 1 ಭ್ರಾತರಾವಣನ ಸಹಜಾತ ವಿಭೀಷಣನ ನಿ- ರ್ಭೀತನ ಮಾಡಿ ಕಾಯ್ದವÀರಾರಯ್ಯ ಪತಿಗಳೈವರು ಸತಿಯಾ ಅತಿ ಖೇದ ಹರಿಸಿದರೆ ಸಂತೈಸಿದಾನಾಥ ರಕ್ಷಕ ಹರಿಯಲ್ಲವೇ 2 ಬಂಧುಗಳಿರೆ ಗಜರಾಜನ ನಕ್ರವು ಬಂದು ಬಾಧಿಸೆ ಬಂಧ ಬಂದು ಹರಿಸಿದರ್ಯಾರೋ ಇಂದು ಎಂದನಿಮಿತ್ತ ಬಂಧು ನೀ ಬಂಧುವಲ್ಲದೆ ಎಲ್ಲರು ಬಂಧಕರಯ್ಯಾ3 ಸತಿಯಿಂದ ದಶರಥಪತಿಯು ಸುತನನಟ್ಟಿ ಗತಿಕಾಣದೆ ತಾನೇನಾದನೋ - ಸತತ ಕುರುಪತಿ ಅತಿಹಿತನಾದನೆ ಭೀಷ್ಮಗೆ ಪತಿತಪಾವನ ನೀ ಅಂತ್ಯಕಾಲಕ್ಕಾದೆ 4 ಸುತರು ರಕ್ಷಕರೇನೊ - ಶತಸೂನುಗಳಿಗೆ ಪಿತ ಧೃತರಾಷ್ಟ್ರಗೆ ಕೊನೆಗಾರಾದರಯ್ಯ ಇತರರ ಪಾಡೇನೊ ಶ್ರೀ ವೇಂಕಟೇಶನೆ ಗತಿ ಎಮಗೆ ಉರಗಾದ್ರಿವಾಸ ವಿಠಲನಲ್ಲವೆ 5
--------------
ಉರಗಾದ್ರಿವಾಸವಿಠಲದಾಸರು
(3) ರಂಗನಬೆಟ್ಟ(ಸೋಲೂರು ಸಮೀಪ)ರಂಗನಾಥ ತಟ್ಟೇಕೆರೆಯಾ ರಂಗಾ ಜಯ ಮಂಗಳಾಂಗ ಪ ಪಾದ ಭಂಗ ಅ.ಪ ಲಕ್ಷ್ಮೀನಾಯಕ ಭಕ್ತವೃಂದ ರಕ್ಷಕ ಶಕ್ತ ರಕ್ಷಿಸು ಕಮಲಾಕ್ಷ ಕರುಣಾಕಟಾಕ್ಷ 1 ಪತಿತ ಪಾವನ ಪುಣ್ಯಧಾಮ ಮಹಿತಮಾನ್ಯ ಶ್ರುತಿನುತ ಗುಣಭೂಷಾ ಭವನಾಶಾ 2 ಗಾಂಗೇಯನುತನಾಮ ಹಿಂಗದೆನ್ನಲಿ ಪ್ರೇಮ ಸಾಂಗವೇದಸ್ತೋಮ ಸುತ್ರಾಮಾ 3 ಸುರಮುನಿವಂದ್ಯ ಭಾಗವತರ ವೃಂದ ಕರಿರಾಜ ಪರಿಪೋಷಾ ಹೆಜ್ಜಾಜೀಶ 4
--------------
ಶಾಮಶರ್ಮರು
(ಅಕ್ರೂರನ ಒಸಗೆ) ರಥವೋಗದಾ ಮುನ್ನ ಗೋಕುಲಕೆ ಮನ್ಮನೋ- ರಥ ಹೋಗಿರುವುದೇನೆಂಬೇ ಪ ಅತಿ ಕೌತುಕವದಾಯ್ತು ಖಳರಾಯನೊಲಿದು ಯದು- ಪತಿಯ ಕರೆತರುವುದೆಂದೆನಗೆ ಪೇಳಿರಲಿಕ್ಕೆ ಅ.ಪ. ಪತಿತರ್ಗೆ ನಾಮ ದುರ್ಲಭವಲಾ ಎನಗೆ ಶ್ರೀ- ಪತಿ ಸೇವೆ ತಾನಾಗಿ ದೊರೆತೂ ಶತಸಹಸ್ರಾನಂತ ಜನುಮಗಳ ಸು- ಕೃತಕೆ ಫಲವಾಯಿತೆಂದರಿತೂ ಗತ ಕಿಲ್ಬಿಷನಾದೆನೆಂಬುದಕಿದೇ ಸಾಕ್ಷಿ ಪಥದೊಳಗೆ ತಾವೆ ಮುಂದುವರಿದೂ ಮಿತಿಯಿಲ್ಲದಲೆ ಮಹಾ ಶಕುನಂಗಳಾಗುತಿವೆ ಪ್ರತಿ ಇಲ್ಲವೀ ಶುಭೋದಯಕೆ ಸೂರ್ಯೋದಯಕೆ 1 ಶ್ರೀ ಪದ್ಮಜಾದಿಗಳು ಸೇವಿಸುವ ಚರಣ ಯಮು- ನಾಪುಳಿನದಲಿ ಮೆರೆವ ಚರಣಾ ಗೋಪೀಯರ ಪೀನ ಕುಚಕುಂಕುಮಾಂಕಿತ ಚರಣಾ ತಾಪತ್ರಯಾವಳಿವ ಚರಣಾ ಗೋಪುರದ ಶಿಲತೃಣಾಂಕುರುಹ ತೋರುವ ಚರಣಾ ಆಪದ್ಬಾಂಧವನ ಚರಣಾ ಣಾ ಪೂರ್ಣಾ ಎನಗಭಯಕೊಡುವಾ ಪಿಡಿಲಾ 2 ನೋಡುವೆನು ನೀರದಶ್ಯಾಮಸುಂದರನ ಕೊಂ- ಡಾಡುವೆನು ಕವಿಗೇಯನೆಂದೂ ಮಾಡುವೆನು ಸಾಷ್ಟಾಂಗದಂಡ ಪ್ರಣಾಮ ಕೊಂ- ಡಾಡುವೆನು ಕೈ ಮುಗಿದು ನಿಂದೂ ಬೇಡುವೆನು ಭುವನೈಕದಾತನೆಂದಲ್ಲಿ ಕೊಂ ಡಾಡುವೆನು ದಾಸ್ಯ ಬೇಕೆಂದೂ ಈಡಿಲ್ಲದಿಂದಿನಾ ಮನಕೆನ್ನ ಬಯಕೆ ಕೈ- ಗೂಡುವುದು ನಿಸ್ಸಂದೇಹ ದೈವ ಸಹಾಯ 3 ಇರುವನೋ ಏಕಾಂತದೊಳಗಿರುವ ಕೇಳದಿರು ಬರುವನೋ ಬಂದವನ ಕಂಡೂ ಕರೆವನೋ ಕಿರಿಯಯ್ಯ ಬಾರೆಂದು ಬಿಗಿದಪ್ಪಿ ಬೆರೆವನೋ ಬೆರಸಿಯದನುಂಡೂ ಒರೆವನೋ ಒಡಲ ಧರ್ಮವನೆಲ್ಲ ವರಗಿನೇ ಜರಿಯನೋ ಜಗದೀಶ ಹಗೆಯವನೆನುತ ಬಗೆಯ 4 ಗೋಧೂಳಿಲಗ್ನಕೆ ಗೋಕುಲಕೆ ಬಂದು ಬೆರ- ಗಾಗಿ ಹೆಜ್ಜೆಗಳ ನೋಡಿ ಭೂದೇವಿಗಾಭರಣವೆನುತ ತೇರಿಳಿದು ಶ್ರೀ ಪಾದರಜದೊಳಗೆ ಪೊರಳಾಡೀ ಗೋದೋಹನದೊಳಿದ್ದ ರಾಮಕೃಷ್ಣರ ಕಂಡು ನಾ ಧನ್ಯ ಧನ್ಯನೆಂದಾಡೀ ಶ್ರೀದವಿಠಲ ಎರಗುವನಿತರೊಳು ಬಿಗಿದಪ್ಪಿ ಸಾದರಿಸಿದನು ಇದೆ ಸದನದಲಿ ಸ್ವಪ್ನದಲಿ 5
--------------
ಶ್ರೀದವಿಠಲರು
(ಋ) ಕ್ಷೇತ್ರವರ್ಣನೆ (1) ಮೇಲುಕೋಟೆ ಯತಿರಾಜ ಸಂಪತ್ಕುಮಾರಾ ಸ ತ್ಕøತದೊಳಗಿರಿಸೆನ್ನ ಧೀರಾ ಪ ಸತತ ಶ್ರೀಮದ್ವೈಷ್ಣವರನಾ ನುತಿಸುವಾನಂದ ದೊಳಗಿರಿಸೈ ಪತಿತಪಾವನ ಕಂಕಣಾಧ್ರುತ ಕ್ಷಿತಿಯ ಪಾಲ ಮಹಾನುಭಾವನೆ 1 ನೋಡಲಿಚ್ಚೈಸಿ ನಾಂ ಬಂದೆ ನನ್ನ ಮೂಢಾಕೃತದೊಳು ನಿಂದೆ ಕೇಡುಗಳು ಬಂದೆನ್ನ ವಿಧ ವಿಧ ಬಾಧೆ ಪಡಿಸುತ್ತಿರುವದಿದೆಕೊ ನೋಡಿ ಸುಜನರ ಕೂಡಿ ಭಜನೆಯ ಮಾಡುವೆನು ಶ್ರೀಮಾಧವಾಗ್ರಣಿ 2 ತುಲಶಿಮಣಿಹಾರ ಲೀಲಾ ಸ ತ್ಫಲತಂತ್ರ ದಾಸಾನುಕೂಲಾ ಕಾಲಕಲನಹುದೊ ಶ್ರೀಮನ್ ಬಾಲಬ್ರಹ್ಮಚಾರಿ ಮದ್ಗುರು ಮೇಲುಕೋಟೆಯೊಳಿರುವೊ ನಿಜವರ ಲೀಲಾಮಾನುಷವಿಗ್ರಹನೆ ನಿಜ ಯತಿರಾಜ ಸಂಪತ್ಕುಮಾರಾ 3
--------------
ಚನ್ನಪಟ್ಟಣದ ಅಹೋಬಲದಾಸರು
(ಮಹಿಷಿ ಅಶ್ವತ್ಥನಾರಾಯಣ ದೇವರು) ತಪ್ಪಾ ಕ್ಷಮಿಸು ಕಲ್ಪತರುರೂಪ ತವಪಾದ- ಕೊಪ್ಪಿಸಿದೆನು ಯೆನ್ನನು ಅಪ್ಪಳಿಸಖಿಳಾಂತರಾಯವತಿದಯದಿ ತಿ- ಮ್ಮಪ್ಪರಾಜನೆ ನೀನೆಂದರಿತು ಬಂದಿರುವೆನು ಪ. ಮಂಗಲ ಮಹಿಮೆ ಮಾತಂಗ ವರದ ಶುಭ ತುಂಗಾತೀರದಿ ನಿಂದು ತಾರಕನೆಂದು ಭವ ಭಯ ಭಂಗದ ಮಹಿಮನೆಂದರಿತು ಬಂದಿಹೆನಿಂದು ಅಂಗದಾದಿ ದೇವೇಂದ್ರ ಸಂಸ್ತುತ ತುಂಗಬಲ ಹನುಮತ್ಪ್ರತಿಷ್ಠಿತ ಅಂಗುಟಾಗ್ರದೊಳಖಿಳಪಾವನ ಗಂಗೆಯನು ಪಡದಾದಿ ಪುರುಷ 1 ಪಾವಕ ದಿಋಖ(?) ದೇವ ಸತ್ಸುಖಗಣ ಭಾವನ ಭಜಕೇಷ್ಟಸಿದ್ಧಿದನೇ ಮಾವನ ಮಗನೊಳಗುಸುರಿದ ನುಡಿಯನು ಕಾವೆನಿಂದಿರುವಿಲ್ಲಿ ಕರುಣಾವಾರಿಧಿ ಕೃಷ್ಣಾ ಈ ವಸುಂಧರೆಯಲ್ಲಿ ಘಟಿಸುವ ನೋವುಗಳ ಸಂಬಂಧಗೊಳಿಸದೆ ಶ್ರೀವನಿತೆಯೊಡಗೂಡಿ ನಿನ್ನ ಕ- ರಾವಲಂಬನವಿತ್ತು ಕರುಣಿಸು 2 ತ್ರಿವಿಧ ತಾಪಗಳು ಭರಿಸಲಾರದೆ ವಂದು ನೆವನದಿಂದಲಿ ಬಂದು ನುಡಿದೆನಿಂದು ಪವಮಾನವಂದಿತ ಪತಿತ ಪಾವನನೆ ನೀ- ವಹಿಸಿ ರಕ್ಷಿಪುದೆಂದು ಒರೆವೆನು ಗುಣಸಿಂಧು ವಿರಿಂಚಿ ರಮಾ ವರಪ್ರದ ಭಾರ ನಿನ್ನಲಿರಿಸಿದವನನು ತವಕದಲಿ ಕಾಪಾಡು ವೆಂಕಟ ಮಹಿಷಿ ಕ್ಷೇತ್ರ ಪಾಲನ3
--------------
ತುಪಾಕಿ ವೆಂಕಟರಮಣಾಚಾರ್ಯ
(ಶ್ರೀಪಾದರಾಯರ ಪ್ರಾರ್ಥನೆ) ಶ್ರೀಪಾದ ಭೂಪ ಶ್ರುತಿಸಲ್ಲಾಪ ಪಂಕಜ ಮಧುಪ ಪ. ವ್ಯಾಸ ಮುನೀಂದ್ರಾರ್ಪಿತ ಶುದ್ಧ ತಂದ್ರ ದಾಸನ್ನ ಮಾಡೆನ್ನ ಸರ್ವಸ್ವತಂತ್ರ 1 ಶುದ್ಧ ವೇದಾಂತಾಂಬುಧಿಯನ್ನು ಕಡೆದೀ ಮಧ್ಯ ನಾಮಾಮೃತ ಮೇಲೆತ್ತಿ ಸುರಿದೀ 2 ಪತಿತ ಪಾವನ ವೆಂಕಟೇಶನ ಬಹುವಿಧ ಸ್ತುತಿಯಿಂದ ಲೋಲಿಸಿದ ಯತಿ ಕುಲದೀಪ 3
--------------
ತುಪಾಕಿ ವೆಂಕಟರಮಣಾಚಾರ್ಯ
* ಶ್ರೀ ಪರಾತ್ಪರವಿಠಲ ಪಾಲಿಸಿವರ ಪ ಚರಾಚರಾತ್ಮಕದೇವ ಪರಮ ಪ್ರೀತಿಯಿಂದ ಅ.ಪ. ಮೂರ್ತಿ ಭಾಗವತ ಪ್ರಧಾನ ಸಾಗರೋಪಮ ಭಕ್ತಿ ಪ್ರದದೇವ ಬಾಗಿ ಬೇಡುವೆ ವಿಜ್ಞಾನರೂಪದಿ ನಿನ್ನ 1 ಭಾಗವತೋತ್ತಮರ ಪದ್ಧತಿಯಲಿ ಗುಪ್ತಸಾಧನ ಪಾಲಿಸು ಶುಕಾನುಬಂಧದಿ ಶುಕಪ್ರೇಮ ಪಾತ್ರನಾಗಿ ಸುಖಮಯನ ಭಜಿಸುತಿರಲಿ 2 ಆಪ್ತತಮ ಗುಣಸಮುದ್ರ ಶ್ರೀಜಯೇಶ- ವಿಠಲ ಪೂರ್ಣ ಪ್ರೀತಿಯಲಿ ನಿತ್ಯ ಭಾಗವತರ ಸಂಗದಲಿಟ್ಟು ನಿರುಪಮ ಸುಖನೀಡು 3 ಮರುತಾತ್ಮಜನು ನಿರುತದಿ ಭಜಿಪನು ಪರಿಪರಿ ಪಾಡಿ ಸುಖಗೂಡಿ 1 ಪತಿತ ಪಾವನ್ನ ಸತತ ಈ ನಾಮ ಗತಿಯಿಲ್ಲದವರಿಗೆ ಗತಿ ಈವ ನಾಮ ಹತವೆ ಮಾಡುತಲಿದ್ದ ಕಿತವನಿಗೊಲಿದು ಕ್ಷಿತಿಯೊಳು ಮುನಿಪತಿ ಎನ್ನಿಸಿತು ಪಥದಿ ಪಾಷಾಣವ ಪೆಣ್ಣನು ಮಾಡಿದ ಅತುಳ ಮಹಿಮನ ಹಿತನಾಮ 2 ಕುಲಶೀಲಗಳನ್ನು ಎಂದೊ ಎಣಿಸನೊ ಸುಲಭರೊಳಗೆ ಬಲು ಸುಲಭನು ಇವನು ಕಲುಷದಿ ದೂರನು ಶಬರಿಯ ಫಲವನು ಮೆಲ್ಲುತೆ ಮುಕ್ತಿಯನಿತ್ತಿಹನು ಲಲನೆಯ ಕದ್ದೊಯ್ದ ಖಳನ ತಮ್ಮನಿಗೆನೆಲವಿತ್ತ ದಯವಂತ ಶ್ರೀಕಾಂತ 3
--------------
ಜಯೇಶವಿಠಲ
2. ಶ್ರೀ ವೆಂಕಟೇಶ ಸ್ತೋತ್ರ 6 ಶರಣಾಗತರ ಕಲ್ಪತರುವೆ ವೆಂಕಟ ಧರಾ ಧರನಾಥ ನಿನ್ನ ಚರಣಾಬ್ಜ | ಚರಣಾಬ್ಜಯುಗಳ ಸಂ ದರುಶನವ ಈಯೊ ಎಂದೆಂದು 1 7 ಸ್ವಾಮಿ ತೀರ್ಥ ನಿವಾಸ ಸು ಭಯಹಾರಿ ಸುರರ ಸಾರ್ವ ಭೌಮ ನೀ ಸಲಹೆಮ್ಮೆ 2 8ವೆಂಕಟಾಚಲನಿಲಯ ಪಂಕಜೋದ್ಭವನಯ್ಯ ಕಿಂಕರನೆನಿಸೊ ಶುಭಕಾಯ 3 9 ಸತ್ಯಸಂಕಲ್ಪ ಜಗದತ್ಯಂತ ಭಿನ್ನಸ ರ್ವೋತ್ತಮ ಪುರಾಣ ಪುರುಷೇಶ | ಪುರುಷೇಶ ಸತತತ್ವ ದ್ಭೈತ್ಯನ್ನ ಕಾಯೊ ಕರುಣಾಳೊ 4 10 ದೇವಶರ್ಮನ ತುತಿಗೆ ನೀನೊಲಿದು ಪಾಲಿಸಿದೆ ದೇವಕೀಕಂದ ದಯದಿಂದ | ದಯದಿಂದ ಒಲಿದೆನ್ನ ತಾವಕರೊಳಿಟ್ಟು ಸಲಹಯ್ಯ 5 11 ಕೃತಿಪತಿಯೆ ನಿನ್ನ ಸಂಸ್ಮøತಿಯೊಂದಿರಲಿ ಜನ್ಮ ಮೃತಿ ನರಕ ಭಯವು ಬರಲಂಜೆ | ಬರಲಂಜೆ ಎನಗೆಕೃಸಂ ತತ ನಿನ್ನ ಸ್ಮರಣೆ ಕರುಣೀಸೊ 6 12ಶುಚಿಸದ್ಮನೆ ಮನೋವಚನಾತ್ಮಕೃತ ಕರ್ಮ ನಿಚಯ ನಿನಗೀವೆ ಸುಚರಿತ್ರ | ಸುಚರಿತ್ರ ಸುಗುಣಗಳ ರಚನೆ ಸುಖವೀಯೊ ರುಚಿರಾಗ 7 13ಹೃದಯದಲಿ ತವರೂಪ ವದನದಲಿ ತವನಾಮ ಉದರದಲಿ ನೈವೇದ್ಯ ಶಿರದಲ್ಲಿ | ಶಿರದಲ್ಲಿ ನಿರ್ಮಾಲ್ಯ ಪದಜಲಗಳಿರಲು ಭಯವುಂಟೆ 8 14ಸತತ ಸ್ಮರಿಸುತ ನಿನ್ನ ನುತಿಸಿ ಬೇಡಿಕೊಳುವೆ ಹಿತದಿಂದ ನಿನ್ನ ವಿಜ್ಞಾನ | ವಿಜ್ಞಾನ ನಿಜ ಭಾಗ ವತರ ಸಂಗವನ್ನೇ ಕರುಣೀಸೊ 9 15ಪ್ರಕೃತಿ ಗುಣಗಳ ಕಾರ್ಯ ಸುಖ ದುಃಖ ಮೂಲ ಜಡ ಪತಿ ನಿನ್ನ ಭಕುತ ನಾನಯ್ಯ ಎಂದೆಂದು 10 16ಪುಣ್ಯಪಾಪಾದಿಗಳು ನಿನ್ನಾಧೀನದೊಳಿರಲು ಎನ್ನದೆಂದರುಹಿ ದಣಿಸುವಿ | ದಣಿಸುವುದು ಧರ್ಮವೇ ನಿನ್ನರಿವ ಜ್ಞಾನ ಕರುಣೀಸೊ 11 17ಝಷಕೇತು ಜನಕ ದುರ್ವಿಷಯಕೊಳಗಾಗಿ ಸಾ ಹಸ ಪಡುವ ಚಿತ್ತ ಪ್ರತಿದಿನ | ಪ್ರತಿದಿನಗಳಲ್ಲಿ ನಿನ್ನ ವಶಮಾಡಿಕೊಳ್ಳೊ ವನಜಾಕ್ಷ 12 18ಇನಿತಿದ್ದ ಬಳಿಕ ಯೋಚನೆ ಯಾಕೆ ಗರುಡವಾ ಹನನೆ ಮಹಲಕ್ಷ್ಮಿ ನರಸಿಂಹ/ನರಸಿಂಹ ಬಿನ್ನೈಪೆ ಘನತೆ ನಿನಗಲ್ಲ ಕರುಣಾಳು 13 19ಸುಲಭರಿನ್ನುಂಟೆ ನಿನ್ನುಳಿದು ಲೋಕತ್ರಯದಿ ಬಲವಂತರುಂಟೆ ಸುರರೊಳು/ಸುರರೊಳು ನೀನು ಬೆಂ ಬಲವಾಗಿ ಇರಲು ಭಯವುಂಟೆ 14 20ಹಯವದನ ಸೃಷ್ಟಿ ಸ್ಥಿತಿಲಯ ಕಾರಣನುನೀನೆ ದಯವಾಗಲೆಮಗೆ ದುರಿತೌಘ / ದುರಿತೌಘರ್ಕಳು ಬಟ್ಟ ಬಯಲಾಗುತಿಹವೊ ಸುಕೃತಿಯಿಂದ 15 21ಕಲುಷವರ್ಜಿತನೆ ಮಂಗಳ ಚರಿತ ಭಕ್ತವ ತ್ಸಲ ಭಾಗ್ಯವ ಪುಷ ಬಹುರೂಪಿ /ಬಹುರೂಪಿ ಎನಗೆಚಂ ಚಲ ಬಿಡಿಸಿ ನೀ ಕರುಣೀಸೊ 16 22ಫಾಲಾಕ್ಷಪ್ರಿಯ ನಿನ್ನ ಲೀಲೆಗಳ ಮರೆಯದಲೆ ಕಾಲಕಾಲದಲಿ ಸ್ಮರಿಸುವ/ ಸ್ಮರಿಸಿ ಹಿಗ್ಗುವ ಭಾಗ್ಯ ಪಾಲಿಸೊ ಎನಗೆ ಪರಮಾತ್ಮ 17 23ಚತುರವಿಧ ಪುರುಷಾರ್ಥ ಚತುರಾತ್ಮ ನೀನಿರಲು ಇತರ ಪುರುಷಾರ್ಥ ನಾನೊಲ್ಲೆ | ನಾನೊಲ್ಲೆ ತ್ವತ್ಪಾದ ರತಿ ಭಾಗ್ಯ ನೀನೆ ಕರುಣೀಸೊ 18 24 ಜಯ ಮತ್ಸ್ಯ ಕೂರ್ಮ ವರಹ ನರಸಿಂಹ ಭೃಗುರಾಮರಘುರಾಮ ಜಯ ಬೌದ್ಧ ಕಲಿಹರ್ತಾ 19 25 ಜಯ ವಿಶ್ವತೈಜಸನೆ ಜಯ ಪ್ರಾಜ್ಞ ತುರ್ಯಾತ್ಮ ಜಯ ಅಂತರಾತ್ಮ ಪರಮಾತ್ಮ | ಪರಮಾತ್ಮ ಜ್ಞಾನಾತ್ಮ ಅನಿರುದ್ಧ ಪ್ರದ್ಯುಮ್ನ 20 26 ಜಯ ಸಂಕರುಷಣನೆ ಜಯ ವಾಸುದೇವನೆಜಯ ಜಯತು ಲಕ್ಷ್ಮೀನಾರಾಯಣಾ |ನಾರಾಯಣಾನಂತ ಜಯತು ಗೋವಿಂದಾಚ್ಯುತ ಶ್ರೀ ಕೃಷ್ಣ 21 27ಜಯ ಪೂರ್ಣ ಜ್ಞಾವಾತ್ಮ ಜಯ ಪೂರ್ಣೈಶ್ವರ್ಯ ಜಯ ಪ್ರಭಾ ಪೂರ್ಣ ತೇಜಾತ್ಮ | ತೇಜಾತ್ಮ ನಂದಾತ್ಮ ಜಯತು ಶಕ್ತ್ಯಾತ್ಮ ಕೃದ್ಧೋಲ್ಕ 22 28ಜಯ ಜಯತು ಮಹೋಲ್ಕ ಜಯತು ವೀರೋಲ್ಕ ಜಯ ಜಯತು ದ್ಯುಲ್ಕ ಸಹಸ್ರೊಲ್ಕ | ಸಹಸ್ರೊಲ್ಕ ಜಯ ಜಯ ಜಯತು ಜಗನ್ನಾಥ ವಿಠಲಾರ್ಯ 23 29 ಶ್ರೀನಿವಾಸನ ಪೋಲ್ವ ದೀನವತ್ಸಲರುಂಟೆ ದಾನಿಗಳುಂಟೆ ಜಗದೊಳು |ಜಗದೊಳು ನೀನೆ ಗತಿಯೆಂದನರರಿಗೆ ಆನಂದವೀವೆ ಅನುಗಾಲ 24 30ಒಪ್ಪಿಡಿ ಅವಲಕ್ಕಿಗೊಪ್ಪಿಕೊಂಡು ಮುಕುಂದ ವಿಪ್ರನಿಗೆ ಕೊಟ್ಟ ಸೌಭಾಗ್ಯ | ಸೌಭಾಗ್ಯ ಕೊಟ್ಟ ನ ಮ್ಮಪ್ಪಗಿಂತಧಿಕ ದೊರೆಯುಂಟೆ 25 31ಏನು ಕರುಣಾ ನಿಧಿಯೊ ಶ್ರೀನಿತಂಬಿನಿರಮಣ ತಾನುಮ್ಮನಗಲಿ ಸೈರಿಸ | ಸೈರಿಸದ ಕರುಣಿಯ ನಾನೆಂತು ತುತಿಸಿ ಹಿಗ್ಗಲಿ 26 32ಶ್ರೀನಿಧೆ ನಿನ್ನವರ ನಾನಾಪರಾಧಗಳ ನೀನೆಣಿಸದವರ ಸಲಹುವಿ | ಸಲಹುವಿ ಸರ್ವಜ್ಞ ಏನೆಂಬೆ ನಿನ್ನ ಕರುಣಕ್ಕೆ 27 33ಎನ್ನ ಪೋಲುವ ಭಕ್ತರನ್ನಂತ ನಿನಗಿಹರು ನಿನ್ನಂಥ ಸ್ವಾಮಿ ಎನಗಿಲ್ಲ | ಎನಗಿಲ್ಲವದರಿಂದ ಬಿನ್ನೈಪೆನಿನ್ನು ಸಲಹೆಂದು 28 34ಅಚ್ಯುತನೆ ನಿನ್ನಂಥ ಹುಚ್ಚು ದೊರೆಯನು ಕಾಣೆ ಕಚ್ಚಿ ಬಯದೊಡ್ಡೆ ಭಕುತರ | ಭಕುತರಪರಾಧಗಳ ತುಚ್ಛಗೈದವರ ಸಲಹೀದೆ 29 35ಎನ್ನ ಬಂಧುಗಳೆಲ್ಲ ನಿನ್ನ ದಾಸರು ಸ್ವಾಮಿ ಮನ್ನಿಸಬೇಕು ಮಹರಾಯ | ಮಹರಾಯ ನೀನಲ್ಲ ದನ್ಯರು ಸಾಕಲರಿಯರು 30 36 ತಂದೆ ತಾಯಿಯು ಭ್ರಾತ ಸಖ ಗುರು ಪುತ್ರ ಎಂದೆಂದು ನೀನೆ ಗತಿ ಗೋತ್ರ | ಗತಿಗೋತ್ರ ಇಹಪರಕೆ ಇಂದಿರಾರಾಧ್ಯ ಸಲಹೆಮ್ಮ 31 37 ಪತಿತ ನಾನಾದರೂ ಪತಿತ ಪಾವನ ನೀನು ರತಿನಾಥ ನಗಪಾಣಿ | ನಗಪಾಣಿ ನೀನಿರಲು ಇತರ ಚಿಂತ್ಯಾಕೊ ಎನಗಿನ್ನು 32 38 ನಡೆ ನುಡಿಗಳಪರಾಧ ಒಡೆಯ ನೀನೆಣಿಸಿದರೆ ಬಡವ ನಾನೆಂತು ಬದುಕಲಿ | ಬದುಕಲಿ ಕರುಣಿಯೆ ಕಡೆ ಬೀಳ್ವುದೆಂತೊ ಭವದಿಂದ 33 39ಏಸೇಸು ಜನ್ಮದಲಿ ದಾಸ ನಾ ನಿನಗಯ್ಯ ಈಶ ನೀನೆಂಬೊ ನುಡಿಸಿದ್ಧ | ನುಡಿಸಿದವಾಗಿರಲು ದಾಸೀನ ಮಾಡೋದುಚಿತಲ್ಲ 34 40ಆವ ಯೋನಿಯಲಿರಿಸು ಆವ ಲೋಕದಲಿರಿಸು ಆವಾಗ್ಯೆ ನಿನ್ನ ನೆನೆವಂತೆ | ನೆನೆವಂತೆ ಕರುಣಿಸೊ ದೇವಕೀಕಂದ ದಯದಿಂದ 35 41ಶಿಷ್ಟನೆಂದೆನಿಸೆನ್ನ ಭ್ರಷ್ಟನೆಂದೆನಿಸು ಸ ಜನರಿಂದ ನುಡಿಸಿದ್ದು
--------------
ಜಗನ್ನಾಥದಾಸರು
ಅಂತರಾತ್ಮಕ ವಿಠಲ | ಪೊರೆಯ ಬೇಕಿವಳಾ ಪ ಶಾಂತಮೂರುತಿ ಹೃದಯ | ಚಿಂತನೆಗೆ ವದಗೀ ಅ.ಪ. ಪತಿಸುತರು ಹಿತರಲ್ಲಿ | ವ್ಯಾಪ್ತನಾಗಿಹ ನಿನ್ನಾವಿತತ ಮಂಗಳರೂಪ | ಚಿಂತನೆಗೆ ಬರುತಾಮತಿ ಮತಾಂವರರಂಘ್ರಿ | ಶತಪತ್ರ ಸೇವಿಸುತಕೃತಕಾರ್ಯಳೆಂದೆನಿಸೊ | ಪತಿತ ಪಾವನ್ನ 1 ಜ್ಞಾನ ಸದ್ಭಕುತಿ ವೈ | ರಾಗ್ಯ ಭಾಗ್ಯಗಳಿತ್ತುನೀನಾಗಿ ಪೊರೆಯೊ ಹರಿ | ವತಾನಿ ಜನವಂದ್ಯವೇಣುಗಾನಪ್ರಿಯನ | ಗಾನಕಲೆ ತಿಳಿಸುತ್ತಾಧ್ಯಾನಾನು ಸಂಧಾನ | ಮಾಣದಲೆ ಈಯೋ 2 ಅದ್ವೈತ | ಭಾವಕ್ರಿಯ ದ್ರವ್ಯಗಳಓವಿ ತಿಳಿಸುತ ಹರಿಯೆ | ಭವಭಂಧ ಕಳೆಯೋ 3 ಕರ್ಮ | ಸಂಚಿತಗಳೆಲ್ಲಾ 4 ಸ್ಮøತಿಯೆ ವಿಧಿಯೆಂತೆಂದು | ವಿಸ್ಮøತಿಯೆ ನಿಷೇಧಮತಿಯ ಅಂಕೆಯ ಕೊಟ್ಟು | ಮಡಿ ಮೈಲಿಗೆಯೊಳುಗತಿಗೋತ್ರ ನೀನಾಗಿ | ಸತತ ಪೊರೆಯಲಿ ಬೇಕೋಹಿತಗುರು ಗೋವಿಂದ | ವಿಠಲ ಬಿನ್ನವಿಪೆ 5
--------------
ಗುರುಗೋವಿಂದವಿಠಲರು
ಅಥ ಹನುಮದ್ವ್ರತ ಕಥಾ ಸುಳಾದಿ ಧ್ರುವ ತಾಳ ವೃತವೆ ಉತ್ತಮ ವೃತವೆಂದು ಪೇಳಿಹರು ಅತುಳ ಜ್ಞಾನನಿಧಿ ವಿಜಯಾಖ್ಯ ಗುರುಗಳು | ಸತತ ಅಧ್ಯಾತುಮ ಅನಂತ ವೃತವೆಂದು | ಕ್ಷಿತಿಯೊಳು ಈ ವೃತಕೆÀ ಸರಿಗಾಣೆನೊ | ಪತಿತ ಮಾನವರ ಉದ್ಧಾರಗೋಸುಗವಾಗಿ ದ್ವಿತಿಯ ಉತ್ತಮ ವೃತವು ಹನುಮದ್ಪ್ರತವೂ | ಯತನ ಜ್ಞಾನೇಚ್ಛಾ ಶಕ್ತ್ಯಾದಿಗಳಿಗೆ ನಿರುತ | ಜತೆಯಾಗಿ ಕಾರ್ಯ ಮಾಳ್ಪ ಜ್ಞಾನಾಖ್ಯವೃತವೊ | ಅತಿಶಯವಾದ ಜ್ಞಾನ ಭಕ್ತಿ ವಿರಕ್ತಿವೀವುದು | ಮತಿವಂತರು ಮನಕೆ ತಂದು ತಿಳಿದು | ಕ್ಷಿತಿಪತಿ ಧರ್ಮರಾಜನೆಸಗಿದ ಮಹಾ ವೃತವೊ | ಪತಿಭಕುತಿಯುಕುತಳಾದ ದ್ರೌಪದಿಯು | ಪತಿ ಮೂರ್ಲೋಕದ ಶ್ರೀ ಕೃಷ್ಣನುಪದೇಶದಂತ್ಯೆ | ಮಿತ ಜ್ಯಾನದಿಂದ ಚರಿತ ವ್ರತವೊ | ಹಿತವಂತ ಹನುಮಂತ ಪಿತ ರಾಮನಿಗೆ ಪೇಳೆ ಆ | ಚ್ಯುತನಾದ ರಾಮನುಮತಿವಾನ್ ಹನು | ಮಂತನ ಭಕುತಿಗೊಲಿದು ಮಾಡ್ಡ ವೃತವೊ | ಸತತ ಸೂತರು ಶೌನಕಾದ್ಯರಿಗಿದರ ಮಹಿಮೆ | ಮಿತಿ ಇಲ್ಲದೇ ಪೇಳಿ ಮಾಡಿಸಿದ ವೃತವೊ | ವೃತತಿಜಾಸನ ಪ್ರಿಯ ಸುತ ಸುಂದರ ವಿಠಲನ ಭ | ಕುತಿ ಜ್ಞಾನವೀವ ಮಹಾ ಶ್ರೇಷ್ಠ ವೃತವೊ 1 ಮಟ್ಟತಾಳ ಜಾನ್ಹವೀ ತೀರದಲಿ ಶೌನಕಾದ್ಯ ಮುನಿಗಳು | ಧ್ಯಾನಿ ಸೂತರ ಕುರಿತು ಸಾನುರಾಗದಿ ನಮಿಸಿ | ಮೇಣು ಭಕುತಿಯಿಂದ ಙÁ್ಞನವಂತರೆ ನಿಮ್ಮಿಂ | ನಿತ್ಯ | ಧೇನಿಸುವೆವು ಹರಿಯಾ ಪುನೀತರ ಮಾಡುವಾ | ಕಾಣೋವನ್ಯ ವೃತವು ಆವುದುಪೇಳೆನಲು | ನಿತ್ಯ ಶೂದ್ರಾದಿ ನಾಲ್ಕು | ಜಾಣ ವರ್ಣರಿಂದ ಮಾಡ್ವದಕ್ಕೆ ಯೋಗ್ಯವೊ | ಏನು ಬೇಡಿದರೆ ತಡಿಯದೆ ಕೊಡುವುದೊ | ಜ್ಞಾನಿ ಜನಗಳಿಗೆಲ್ಲ ಮಂಗಳತಮ ವೃತವು | ಪುತ್ರಾದಿಗಳೀವುದು ಶ್ರೇಣಿ ದಿನ ಪ್ರತಿ ದಿನದಲ್ಲಿ ವರವಿದ್ಯ ಪ್ರದವೊ ಹಾನಿ ಲಾಭಗಳಲ್ಲಿ ಹನುಮಂತನ ನೆನಸೆ | ಮಾನನಿಧಿ ಸುತ ಸುಂದರ ವಿಠಲನ | ಧ್ಯಾನ ಧಾರಣವೀವ ಉತ್ತುಮಾಮಹವೃತವೊ 1 ರೂಪಕ ತಾಳ ಒಂದಾನೊಂದು ಸಮಯದಲ್ಲಿ ಶ್ರೀ ವ್ಯಾಸ ಶಿಷ್ಯ | ವೃಂದದಿಂದೊಡಗೂಡಿ ಯುಧಿಷ್ಠರನ ನೋಡಲು | ಅಂದುಳ್ಳ ದ್ವೈತ ವನಕೆ ನಡೆತಂದರು ಏನಂಬೆ | ಚಂದಾದ ನಿರ್ವೈರ ಮೃಗವೃಂದಗಳಿಂ ಕೂಡಿರುವ | ಕುಂದ ಮಂದಾರಾದಿ ಪುಷ್ಪಫಲ ವೃಕ್ಷಗಳಿಂ ಶೋಭಿಪ | ಕುಂದು ದೂರೋಡಿಸಿದ ಜ್ಞಾನಿಗಳ ಸಮೂಹವು | ಛಂದದಲಿ ಕಾವ್ಯಷಡಂಘ್ರಿ ನಿರತರಾಗಿ | ಮುಂದೆ ಅಧ್ಯಯನ ಶ್ರುತಸಂಪನ್ನರಾದವರು | ಒಂದೊಂದು ವೇದ ಋಗು ಯಜು:ಸಾಮಾಥರ್ವಣ ಒಂದೋಂದು ಶಾಖಾಶಾಸ್ತ್ರದಿ ಪ್ರವಚನಾಸಕ್ತರು | ಮಿಂದು ಹರಿಪದಜಲದಿ ಚತುರ ವೇದ ಘೋಷದಿ | ಸಂದೇಹವಿಲ್ಲದಲೇ ಭಗವದ್ಗೀತಾ ಲೀಲಾ | ಎಂದೆಂಬುವ ಹರಿಕಥಾಮೃತ ಪಾನ ಮಾಡುವ | ಸಂದೋಹ ಮುನಿಗಳಿಗೆ ನಿತ್ಯನ್ನದಾನವ ಮಾಡಿ | ಬಂಧುಗಳಿಂ ಸಹಿತ ಇರುವ ಯುಧಿಷ್ಟರನನ್ನು | ಸುಂದರ ವಿಠಲಾತ್ಮಕ ವ್ಯಾಸದೇವನು | ಅಂದು ದ್ವೈತವನದಲ್ಲಿ ಕೃಪಾ ದೃಷ್ಟಿಯಿಂದ ನೋಡಿದನು 3 ಕೃಷ್ಣದ್ವೈಪಾಯನಾ ಮುನಿಗಳಾಗಮ ಕೇಳಿ | ಕೃಷ್ಣೆ ಸಹಿತಾ ಅನುಜರೊಡನೆ ಕೂಡಿ | ಜೇಷ್ಠನಾದ ಯುಧಿಷ್ಠರನು ತಾ ದೂರ ನಡೆತಂದುವಾ | ಸಿಷ್ಟ ಕೃಷ್ಣಗೆ ಸಾಷ್ಟಾಂಗ ಪ್ರಣಾಮಗಳ ಮಾಡಿ ನಿ | ರ್ದಿಷ್ಟವಾದೆಕಾಂತ ಸ್ಥಳಕೆ ಕರೆತಂದು | ಶ್ರೇಷ್ಠವಾದಾಸನದ ಮೇಲೆ ಕುಳ್ಳಿರಿಸಿ | ಜೇಷ್ಟಾದಿಕೃಷ್ಣೇಯೊಡನೆ ಉತ್ಕøಷ್ಠ ಪೂಜೆಯ ಮಾಡೆ ಪರ ಮೇಷ್ಠಿ ಜನಕನು ತಾನು ತುಷ್ಟ ನಾಹೆ | ಶಿಷ್ಟಾಚಾರದಂತೆ ಕುಶಲ ಪ್ರಶ್ನೆಯು ಮಾಡ್ದ ನಿ | ರ್ದುಷ್ಟ ಭೀಮಾರ್ಜುನರೆ ಅಶ್ವಿನಿಯರೇ ಮನ | ಮುಟ್ಟಿ ಹರಿಪಾದ ಭಜನೆಯ ಮಾಡಿ ಸುಖಿಗಳಾಗಿಹ್ಯರೇ? ಧಿಟ್ಟತನದಲೆ ತಪವನೆಸಗಿ ಕಿರಿಟಯು | ನಿಷ್ಠಿಯಲಿ ಮಹರುದ್ರನೊಲಿಸಿ ಪಾಶುಪತವೆಂಬು | ತ್ಕøಷ್ಟಾಸ್ತ್ರ ಸಂಪಾದನೆಯ ಮಾಡಿದದು ಕೇಳಿ | ಹೃಷ್ಟನಾದೆನೊ ನಾನು ನಿಮ್ಮಿಂದಲಿ ಕೂಡಿ | ಕಷ್ಟಬಡುತಿರುವ ನಿನ ದುಃಖ ಶಾಂತ್ಯರ್ಥ | ಇಷ್ಟವೀವುದಕಾಗಿ ಬಂದಿಹನು ರಾಜಾಯು | ದ್ಯಿಷ್ಟರನೆ ಕೇಳುತ್ತಮ ವೃತವು ನಿನಗೋಸುಗ | ನಿಷ್ಠಿಯಿಂದಲಿ ಧರ್ಮತನಯ ನುಡಿದನು 4 ತ್ರಿವಿಡಿ ತಾಳ ನಮೊ ನಮೊ ತಾತ ಮಹಾ ಖ್ಯಾತವಂತರೆ ನಿಮಗೆ | ನಮೊ ನಮೊ ನಮೊ ಎಂದು ಬಿನ್ನೈಸುವೆ | ಶ್ರಮ ಪರಿಹರವೃತವಾವುದದÀರ ಮಹಿಮೆ | ಸುಮನಸರೊಡೆಯನೆ ಪೇಳಯ್ಯಾ ಜೀಯ್ಯಾ | ಕುಮತಿ ಪರಿಹರಿಸುವ ದೇವತೆ ಆರು ಉ | ತ್ತಮ ನಿಯಮ ಆವುದು ಪೂಜಾ ಕ್ರಮವು | ಶಮೆ ದಮೆವೀವ ನಿಯಮ ತಿಥಿ ಆವುದು | ರಮೆ ರಮಣನೆÉ ಆವ ಮಾಸದಲಿ ಮಾಡೋದು | ಶಮಲ ವಿವರ್ಜಿತ ವ್ಯಾಸದೇವನೆ ನಿಮ್ಮಾ | ಗಮನವು ಎಮ್ಮಯ ಕಷ್ಟ ದೊರೋಡಿಸಲು | ಸಮೀಚೀನ ಮತಿಯಿತ್ತು ಭಕ್ತರ ಪಾಲಿಪುದೆನುತ | ಸಮಚಿತ್ತ ಉಳ್ಳ ಮುನಿಗಳ ಕೂಡ ನಮಿಸಲು | ಭ್ರಮಣ ಮತಿಯ ಕಳೆವ ಹನುಮಾನ್ ಹ ನುಮನ್ನಾಮ ಪುನಃ ಪುನಃ ಸ್ಮರಿಸಿ ಶ್ರೀವ್ಯಾಸರು | ಆಮಮ ಪೇಳಲೇನೊ ಹನುಮದ್ವ್ರತವೋ | ಧೀಮಂತ ಹನುಮಂತನ ನಾಮೋಚ್ಚಾರಣೆಯಿಂದ | ಸಮಸ್ತ ಕಾರ್ಯ ಸಿದ್ದಿಪದು ಸಂಶಯ ಬ್ಯಾಡಿ | ಆ ಮಹಾ ದುಷ್ಟ ಗ್ರಹೋಚ್ಛಾಟನ ಜ್ವರಾದಿ | ತಾಮಸ ರೋಗ ನಿವರಣವಾಗುವದು | ಪ್ರೇಮದಿಂದಲಿ ಕೇಳು ಬಹು ವಾಕ್ಯಗಳಿಂದೇನು ? ಸೀಮೆಗಾಣದ ಅಭೀಷ್ಟಪ್ರದಾಯಕವೊ ನೀ ಮರೆಯದಿರು ಹಿಂದೆ ದ್ವಾರಕಿಯಲ್ಲಿ ಶ್ರೀ ಮದ್ವಿಷ್ಣುವೆ ಕೃಷ್ಣ ಪಾಂಚಾಲಿಯನಿ ಸ್ಸೀಮ ಭಕುತಿಗೆ ವೊಲಿದು ಈ ಮಹಾ ಹ ನುಮದ್ವ್ರತವನ್ನು ಉಪದೇಶಿಸಿ | ನೇಮದಿಂದಲೀ ವ್ರತವು ಮಾಡಿರೆನಲು ಕಾಮಿತಫಲವೀವಾ ವ್ರತದ ಮಹಿಮೆ ಆ | ಸ್ವಾಮಿ ಅನುಗ್ರಹದಿ ಸಂಪದೈಶ್ವರ್ಯದಿ ಆ ಮಹಾ ಸ್ತೋಮಗಳು ಪ್ರಾಪ್ತವಾಗಲು ನಿಮಗೆ | ಈ ಮಹಾ ವೃತ ಮಹಿಮೆ ತಿಳಿಯದ ಪಾರ್ಥನು ಪ್ರೇಮದಿಂ ದ್ರೌಪದಿ ಧರಿಸಿದ ದೋರವ ನೋಡಿ ಹೇ ಮಹಿಷಿಯೆ ಇದೆನೆನ್ನಲಾಗಿ | ತಾಮರಸನಯನೆ ಶ್ರೀ ಹನುಮದ್ದೋರವನ್ನೆ | ಆ ಮಹಾ ಐಶ್ವರ್ಯ ಗರ್ವಿಕೆ ಕ್ರೋಧಾದಿ ನಿ ಸ್ಸೀಮ ಪರಾಕ್ರಮಿ ನುಡಿದ ಅರ್ಜುನನು ಕಾಮಿನಿಯೆ ಕೇಳು ಆ ಹನುಮನೆಂಬೊ ಕಪಿ ನಾ ಮುದದಿ ಧ್ವಜದಲ್ಲಿ ಧರಿಸಿರುವೆನು ಈ | ಮರ್ಮವನು ತಿಳಿಯದೆ ಆ ವನಚರ ಶಾಖಾಮೃಗ | ಕಾಮಿತ ಫಲ ಕೊಡಬಲ್ಲದೆ ಕೇಳಿನ್ನು ಪಾಮರ ವ್ರತದಿಂದ ವಂಚಿಸಿದೆಲ್ಲದೇ ನೀನು ಕಾಮಿ ಜನರ ತೆರದಿಂದಲಿ ಅರ್ಜುನನು ಭಾಮೆ ದ್ರೌಪದಿ ಧರಿಸಿದ ತ್ರಯೋದಶ ಗ್ರಂಥಿಯುಕ್ತ ಆ ಮುದದ ದೋರವನು ಹರಿದು ಬಿಸಾಟಲು ಹೇಮಾದಿ ಸಕಲ ಸಂಪದೈಶ್ವರ್ಯ ರಾಜ್ಯವು ಭೂಮಿ ಸಹಿತ ಪ್ರಾಪ್ತವಾದುದೆಲ್ಲ ಪೋಗೆ | ಶ್ರಿಮದಾಂಧದಿಂದ ಪ್ರಾಪ್ತವ್ಯ ದುಃಖ ಫಲವು | ಪರಿಯಂತ | ರಾಮ ಮನೊರಮನು ಇನಿತು ನುಡಿಯೆ | ಸ್ವಾಮಿ ಆಜ್ಞವ ತಿಳಿದ ದ್ರೌಪದಿ ದೇವಿಯು | ಹೇ ಮಹತ್ಮರೆ ಶ್ರೀವ್ಯಾಸರ ನುಡಿ ನಿಜವೋ ನೇಮಗಳೆಲ್ಲಾ ತಿಳಿಯಲೋಶವೆ ಎಂದಿಗು 5 ಧ್ರುವ ತಾಳ ಕೇಳಯ್ಯಾ ಧರ್ಮರಾಜ ಆಲಸ ಮಾಡದೆ | ಪೇಳುವೆ ನಿನಗೊಂದು ಪುರಾತನ ಕಥೆಯು | ಆಲಿಸಿ ಮನಕೆ ತಂದು ಬಾಳು ಚನ್ನಾಗಿ ನೀನು | ಶೀಲೆ ಸೀತೆಯ ನೋಡುವ ಇಚ್ಛಾಉಳ್ಳ ಮಾ ನಿತ್ಯ ಲಕ್ಷ್ಮಣನೊಡಗೂಡಿ | ಮೇಲಾದ ಋಷ್ಯಮೂಕ ಗಿರಿಯ ಮಧ್ಯದಲ್ಲಿ ಶೀಲ ಭಕುತಿಯುಳ್ಳ ಹನುಮಂತನ ದರ್ಶನಾಗೆ ಆಳುವ ಕಪಿ ರಾಜ್ಯ ಸುಗ್ರೀವನ ಸಖ್ಯವನು ಬ ಹಾಳ ಮತಿಯುಳ್ಳ ವಾಯುಜ ಮಾಡಿಸೆ | ಮಾಸ ಮಳೆಗಾಲವು ವಾಸ ಮಾಡ್ಡ | ಕಾಲದಲಿ ಹನುಮನು ರಾಮದೇವಗೆ ನಮಿಸಿ | ನೀಲ ಮೇಘ ಶ್ಯಾಮ ಶ್ರೀ ರಾಮ ನೀನಿನ್ನ | ಬಾಲನ ಬಿನ್ನಪ ಮನಕೆ ತರಲು | ಪೇಳುವೆ ನಿಮ್ಮ ಸನ್ನಿಧಾನದಲೆನ್ನ ನಾಮ ಮಹಿಮೆ ಮೇಲುಸಿಲೆಯನದ್ಧರಿಸಿದ ಶ್ರೀರಾಮ ನೀನಙ್ಞನೆ | ಕಾಲ ಜನನದಲಿ ಇಂದ್ರನಿಂದಲಿ ಎನ್ನ ಮೇಲಾದ ವಜ್ರಾಯುಧದಿಂದ ಹನುಘಾತಿಸಲು ಭೂಲೋಕದಲ್ಲಿ ಅಂದಿನಾರಭ್ಯ ಹನುಮನೆಂದು ಖ್ಯಾತನಾಗಿ | ಕೇಳಯ್ಯಾ ಅಂಜನಾದ್ರಿಯಲ್ಲಿ ಸೂರ್ಯೋದಯ | ಕಾಲಕೆ ಪ್ರಕಟನಾದ ಬಾಲ ರವಿಯ ನೋಡಿ ಹಣ್ಣೆಂದು | ಮೇಲಾಗಿ ಭಕ್ಷಿಪುದಕೆ ಉಡ್ಡಾಣ ಮಾಡಲಾಗಿ | ಈ ಲೀಲೆಯ ತಿಳಿದು ಲೋಕ ಶಿಕ್ಷಣ ಗೋಸುಗ | ಕಾಲವಜ್ರಾಯುಧದಿಂದ ಹೊಡೆಯಲು ಮೂರ್ಛಿತ | ಬಾಲನಂತೆ ಬಿದ್ದವನೆನ್ನ ನೋಡಿ ಸ್ವಾಹಾ | ಲೋಲನ ಸಖನಾದ ವಾಯುದೇವನು ಎನ್ನ | ಮೇಲಿನ ಪ್ರೀತಿಯಿಂದ ಸರ್ವಜೀವರ ಶ್ವಾಸ | ಕಾಲನಾಮಕ ಭಗವಾನಿಚ್ಛೆಯಂತ ತೃಟಿ | ಕಾಲಬಿಡದೆ ಮಾಡ್ವ ಶ್ವಾಸ ನಿರೋಧಿಸೆ ಶಚಿ | ಲೋಲನಿಂದನ್ನ ಪುತ್ರನ ಕೆಡಹಿರಲವನನ್ನು ಈ | ಕಾಲಲವದಲ್ಲಿ ಕೆಡಹೆನೆನಲು ಆ | ಕಾಲದಲಿ ಬ್ರಹ್ಮಾದಿ ದೇವತೆಗಳು ಸಾಕ್ಷಾತ್ಕಾರರಾಗಿ | ಓಲೈಸಿ ಪೆಳ್ದ ಮಾತು ಎನಗೋಸುಗ ಆಂಜನೇಯಾ | ಬಾಲನೆ ಚಿರಜೀವಿಯಾಗು ನೀನೆ ಪರಾಕ್ರಮಿ | ಮೇಲೆನಿಪ ಶ್ರೀರಾಮನ ಕಾರ್ಯಸಾಧಕನಾಗೆನುತ | ಬಾಲ ಹನುಮನ ಪೂಜೆ ಮಾಡ್ಡರು ದೇವತೆಗಳು | ಮೇಲಾದ ಮಾರ್ಗಶಿರ ಶುದ್ಧ ತ್ರಯೋದಶಿ | ಕಾಲ ಅಭಿಜಿನ್ ಮೂಹೂರ್ತದಲ್ಲಿ ಆರು ಪೂಜಿಪರೊ | ಆಲಸವಿಲ್ಲದೆ ಪುರುಷಾರ್ಥ ಹೊಂದುವರೆಂದು | ತಾಳ ಮ್ಯಾಳರೊಡನೆ ವರವ ನೀಡಿ ಪೋದರು | ಆಲಯಾ ಸ್ವರ್ಗ ಸತ್ಯಾದಿ ಲೋಕಕೆ ಅಂದು ಹೀಗೆ | ಪೇಳೆ ಸುಂದರ ವಿಠಲ ರಘುರಾಮನು ನಸುನಗೆ | ಯಾಲಿ ಒಲಿದು ಹನುಮಗೆ ಹಸನ್ಮುಖನಾಗಿ ಇರಲು 6 ಮಟ್ಟತಾಳ ಭಕುತ ವತ್ಸಲ ನೀನು ಭಕುತರಿಚ್ಛವ ನೀನು | ಭಕುತ ಭಾಂಧವ ನೀನು ಭಕುತರೊಡಿಯ ನೀನು | ಭಕುತ ಪಾಲಕನೆಂಬ ಬಿರುದುಳ್ಳವ ನೀನು | ಭಕುತರಿಂದಲಿ ನೀನು ನಿನ್ನಿಂದಲೆ ಭಕುತರು | ಅಕಳಂಕ ಐಶ್ವರ್ಯ ಸತು ಚಿತು ಆನಂದಾತ್ಮಾ | ಮುಕುತಿ ಪ್ರದಾತನೆ ಸರ್ವ ಸ್ವಾಮಿ ನೀನು | ಸಕಲ ಲೋಕಗಳೊಡೆಯ ನಿನ್ನಿಂದಲೆ ಸರ್ವ ವ್ಯಕುತವಾಗ್ವದು ಸತ್ಯ ಸರ್ವಙ್ಞನು ನೀನು | ಭಕುತರ ಮನದಿಂಗಿತ ತಿಳಿಯದವನೆ ನೀನು | ಅಖಿಳ ಬ್ರಹ್ಮಾಂಡÀರಸನೆ ನಮೊ ನಮೊ ನಮೊ ನಮೊ | ಭಕುತರಿಂದಲೇ ನಿನ್ನ ಖ್ಯಾತಿ ಮೂರ್ಲೋಕಕ್ಕೆ ಭಕುತರೇ ನಿನ್ನಯಾ ಮಹಿಮೆಯ ಹೊಗಳುವರು | ಭಕುತರು ನಿನ್ನಿಂದಲೆ ಕೀರ್ತಿವಂತರÀಹರು | ಅಕುಟಿಲ ಪ್ರಭೋ ನೀನು ನಾ ನಿನ ನಿಜ ಭಕ್ತ | ಸಕಲ ಕಾಲದಲ್ಲಿ ನಿನ್ನನಾ ಮರೆಯದಲೇ | ಮಾಳ್ಪದು ನಿಜವಾಗೆ | ಶಕುತನೆ ಎನ ಕೀರ್ತಿ ನಿನ್ನಿಂದಾಗಲಿ ವಿಭೋ | ಉಕುತಿ ಲಾಲಿಸು ಪ್ರಭೋ ತವಚಿತ್ತವ ಧಾರೆ | ಭಕುತ ಹನುಮಂತ ಇನಿತು ವಿಙÁ್ಞಪಿಸಿ ನಿಲಲು | ಪ್ರಕಟಿತ ಅಶರೀರ ವಾಕ್ಯವು ಬಿಡದಲೆ | ಸಕಲ ನುಡಿ ಹನುಮಾ ಸತ್ಯನಾಡಿದನೆನಲು | ಸುಕರ ಏಕಮೇವ ದ್ವಿತಿಯ ಸುಂದರವಿಠಲ ತುಷ್ಟನಾಹೆ 7 ಝಂಪಿತಾಳ ಮಾಸಮಾರ್ಗಶೀರ್ಷ ಶುದ್ಧ ತ್ರೊಯೋದಶಿ | ಆ ಸುಮುಹೂರ್ತ ಜಯಾ ಅಭಿಜಿನ್ ಕಾಲಕೆ | ಶ್ರೀಶರಾಮನು ಹನುಮದ್ವ್ರತವ ಮಾಡ್ಡ ತ್ರಯೋ | ದಶ ಗ್ರಂಥಿüಯುತ ಹರಿದ್ರಾದೋರಗಳಲಿ | ಭಾಸುರಾಮತಿವೀವ ಹನುಮನಾವ್ಹಾನಿಸಿ | ಪೇಶಲಾಪೀತಗಂಧ ವಸ್ತ್ರ ಪುಷ್ಟಿಗಳಿಂದಲೀ | ಶ್ರೀಸೀತೆವಕ್ಷಸ್ಥಳದಿಪ್ಪ ನಿತ್ಯಾವಿಯೋಗಿನಿ | ಆ ಸುಗ್ರೀವ ಲಕ್ಷ್ಮಣಾದಿಗಳೊಡನೆ ನೆಸಗಿದನೇನೆಂಬೆ | ಲೇಶಬಿಡದೇ “ಓಂ ನಮೋಭಗವತೇ ವಾಯುನಂದನಾಯ” | ಈ ಸುಮಂತ್ರವ ಜಪಿಸಿ ತಾ ಸಹಸದಿ ಮಾಡ್ಡನೋ | ದೇಶಪರಿಮಿತ ಪ್ರಸ್ಥತ್ರಯೋಶಗೋಧೂಮವನು | ಆ ಸುದಕ್ಷಣೆ ತಾಂಬೂಲ ಸಹ ದ್ವಿಜರಿಗಿತ್ತದಾನ | ಮೀಸಲಾ ಮನದಿ ಈ ಸತ್ಕಥೆಯನು ಕೇಳಿ | ಭೇಶಮುಖಿ ಸೀತಿಯಳ ಕೊಡ್ದನೆಂಬದು ಖ್ಯಾತಿ | ಆ ಸತ್ಯಲೋಕರಿಗೆ ಆದುದು ಅಚ್ಚರವೆ ಪೂರ್ಣಕಾಮನಿಗೆ | ಕ್ಲೇಶನಾಶನವು ಸುಗ್ರೀವನಿಗೆ ವಿಶೇಷವಾದುದು ಸತ್ಯವೆನ್ನಿ | ತೋಷದಲಿ ವಿಭೀಷಣ ಶ್ರೀರಾಮನಾಙÉ್ಞಯಿಂ ಮಾಡ್ಡು | ದೇಶಲಂಕೆಯ ರಾಜ್ಯವನು ಪಡೆದನು | ಹೇ ಸುಮತಿಯೇ ಕೇಳಂದಿನಾರಭ್ಯ ಭೂಲೋಕಕೆ | ಲೇಸುವಿಶ್ರುತವಾದಿತೈ ಹನುಮದ್ವ್ರತವೂ | ಪರಿಯಂತ ಮಾಡ್ಡುದ ಕೀಸು ಉದ್ಯಾಪನೆಯಯ್ಯಾ ಆದಿ ಮಧ್ಯಾಂತಕೆ | “ಮಾಸಾನಾಂ ಮಾರ್ಗಶೀರ್ಷೋಹಂ” ಎಂದು ಗೀತೆÀಯಲಿ ಆ ಸ್ವಾಮಿ ದಿವ್ಯನುಡಿಯುಂಟು ಕೇಳ್ ಧರ್ಮಜನೆ | ಸ್ತ್ರೀಸಹಿತ ಅನುಜರೊಡನೇ ಈ ವ್ರತವನು | ಮೇಶನಾಜ್ಞೆಯಿದೆಂದು ಮಾಡಲು ನಿನಗೆ ರಾಜ್ಯ | ಕೋಶ ಭಾಂಡಾರಪ್ರಾಪ್ತಿಯಾಗುವದು | ಲೇಶ ಸಂಶಯ ಬ್ಯಾಡೆನಲು ಶ್ರೀ ವ್ಯಾಸ | ಆ ಸುಂದರ ವಿಠಲನ ಭಕುತರು ಮುದಭರಿತರಾಗೆ 8 ರೂಪತಾಳ ರವಿಯು ವೃಶ್ಚಿಕ ರಾಶಿಗೆ ಬರಲಾಗಿ | ಸವೆಯಾದ ಪದವೀವ ವ್ರತವಮಾಡುವದಕ್ಕೆ | ಕವಳಾ ಅಜ್ಞಾನಾಖ್ಯ ರಾತ್ರಿಕಳೆದು | ಸುವಿಮಲಾಜ್ಞಾನಾಖ್ಯ ಪ್ರಾತಃ ಕಾಲದಲೆದ್ದು | ಕವಿವ್ಯಾಸರ ಮುಂದೆ ಮಾಡಿ ಧರ್ಮಜನು | ಸುವಿವೇಕಬುದ್ಧಿಯಿಂ ಸ್ನಾನಾದಿಗಳ ಮಾಡಿ | ಹವಿಷಾದಿ ದ್ರÀ್ರವ್ಯಗಳಲಿ ಹರಿಯಚಿಂತಿಸಿ ಮಾ | ಧವÀನಾಜ್ಞೆಯಂತೆ ಉದ್ಯಾಪನವಂಗೈದು | ಕವ್ಯವಾಹನನಲ್ಲಿ ಮೂಲಮಂತ್ರದಿಂದ | ಲವಕಾಲ ಬಿಡದಲೆ ವೇದಸೂಕ್ತಗಳಿಂ ಹೋಮಿಸಿ | ನವಭಕುತಿಯಲಿ ಹನುಮಂತನ ವ್ರತಾಚರಿಸಲು | ಹವಣಿಸಿ ಸಂವತ್ಸರವು ಪೋಗಲು ಪಾಂಡವರು | ಬವರದಲ್ಲಿ ಕೌರವರಗೆ
--------------
ಸುಂದರವಿಠಲ
ಅಧ್ಯಾಯ ಐದು ಶ್ರೀ ಕಾಲಿಯ ಫಣಾರ್ಪಿತ ಪಾದಾಂಬುಜಾಯನಮ ಶ್ರೀ ಗುರುಭ್ಯೋನಮಃ ಪದ, ರಾಗ ಸೌರಾಷ್ಟ ತಾಳ ತಿವಿಡೆ ಸ್ವರ ಋಷಭ ಬಿಡದೆ ಕೃಷ್ಣನ ಅಪ್ಪಿ ತಾಯಿಯು ನಡದಳಾ ಗೃಹಕಾರ್ಯದಲ್ಲೆ ನಡೆದವನು ಜೋಡ್ಯರಡು ಮತ್ತೀ ಗಿಡಗಳಿದ್ದಲ್ಲೇ ನಡೆದವುಗಳ ಮತ್ತವು ತಡದು ಅಡ್ಡಾಯಿತು ಊಲೂಬಲ ಕಡಕಡೆನುತಲಿ ಕಡದು ಬಿದ್ದವುಗಿಡಗಳವು ಎರಡು|| 1 ಪತಿತ ವೃಕ್ಷಗಳಿಂದ ಹೊರಟರು ಅತಿಸುರೂಪರು ಅತಿ ಮದೋನ್ಮತ್ತರು ಕುಬೇರನ ಸುತರು ಮಂಚೆವರು| ಪೃಥಿವಿಯಲಿ ತರುಜನ್ಮಕೊಂಡರು ಪ್ರಥಮ ನಳಕೂಬರನು ಎನಿಸುವ ದ್ವಿತಿಯ ಮಣಿಗ್ರಿವಾ|| 2 ವೃಕ್ಷ ಜನ್ಮದಿ ಮುಕ್ತರಾದರಧೋಕ್ಷಜನ ದಯದಿಂದ ಇಬ್ಬರು ವೃಕ್ಷ ಶಬ್ದವ ಕೇಳಿ ನೆರೆದರು ಆ ಕ್ಷಣಕೆ ಜನರು ಲಕ್ಷ್ಮಿ ಇಲ್ಯಲ್ಲರಿಗೆ ಹರಿ ಪುತ್ಯಕ್ಷ ಅಲ್ಲಿರಲು|| 3 ತನ್ನ ಮಗನಾಟವನು ತಿಳಿಯದೆ ಚನ್ನಿಗನು ಆನಂದಗೋಪನು ಮುನ್ನವನು ಕರಕೊಂಡು ನಡಿದನು ಕಣ್ಣಿಯನು ಬಿಟ್ಟಿ|| ಆದಾವೆಂದು ಚಿಂತಿಸಿ ತನ್ನ ಮನದೊಳಗೆ 4 ಹೂಡಿ ಭಂಡಿಗಳನ್ನು ಮರುದಿನ ಮಾಡಿಸಿದ್ಧವು ಎಲ್ಲರಿಂದಲಿ ಕೂಡಿ ವೃಂದಾವನಕ ಪೋಗುತ ಮಾಡಿದಾಶ್ರಯವು | ನೋಡಿ ಆ ವೃಂದಾವನ ಸ್ಥಳ ಗಾಢ ಹರುಷದಲಿ ಬಾಲರೆಲ್ಲರು ಕೂಡಿದರು ಕುಣಿದಾಡಿದರು ಙಡ್ಯಾಡಿದರು ಅಲ್ಲೆ5 ಸ್ವಚ್ಛ ಯಮುನಾ ತೀರದಲಿ ತನ್ನಿಚ್ಛಿಯಿಂದ ವಿಚಾರ ಮಾಡುವ ವತ್ಸಗಳ ಕಾಯುವನು ತಾ ಶ್ರೀ ವತ್ಸಲಾಂಧನನು| ವಂತ್ಸರೂಪದಿ ಬಂದ ಅಸುರನ ಪುಚ್ಛ ಹಿಂಗಾಲ್ಹಿಡದು ತಿರಿಗಿಸಿ ಉತ್ಸವದಿ ಮ್ಯಾಲೊಗೆದ ಬಿದ್ದಾವತ್ಸಹತವಾಗಿ|| 6 ನಳಿನನಾಭನು ಮುಂದ ಆತರಗಳಿಗೆ ತಾ ನೀರಕುಡಿಸಿ ತೀರದ ಮಳಲಿನೂಳಗಾಡುವನು ಮತ್ತಾ ಗೆಳೆಯರನ ಕೂಡಿ| ಖಳ ಅಸುರ ಬಕಪಕ್ಷಿ ರೂಪದಿ ಸುಳದು ಮೆಲ್ಲನೆ ಬಂದು ಬಾಲಕರೂಳಗಿರುವ ಕೃಷ್ಣನ್ನ ತಾ ಬಾಯ್ವಳಗ ನುಂಗಿದನು||7 ಸುಡುವ ಕೃಷ್ಣನ ಉಂಡು ದಕ್ಕಿಸಿಕೊಳದೆ ಘಾಬರಿಗೊಂಡು ಕಾರಿದನು| ತುಂಡು ಮಾಡಿಯೊಗದಾ||8 ಘಾಸಿ ಆಗದೆ ಉಳದನೆಂದು ತೀಸವಾಗ್ಯಲ್ಲಾರು ಬಹಳುಲ್ಹಾಸವನು ಬಟ್ಟು ಏಸುಕಾಲಕೆ ಬಿಡದೆ ನಮ್ಮನ್ನು ಘಾಸಿಮಾಡದೆ ಗುರು ಅನಂತಾದ್ರೇಶ ರಕ್ಷಿಸುವೋನು ಎಂದು ಆ ಸಮಯದಲ್ಲಿ 9 ಪದ್ಯ ಸಾಧು ಹಿತಕರ ಕೃಷ್ಣಯಾದವರಲ್ಯವ ತರಿಸಿ ಐದು ವರ್ಷಾದ ಮ್ಯಾಲ್ಕಾಯ್ದನು ಆಕಳುಗಳನು ಆದರದಿ ಮತ್ತು ರಾಮಾದಿಗಳಕೂಡಿ ಬೇಕಾದ ಆಟಗಳಾಡಿ ಅನುಸರಿಸಿ ಆ ಧೇನುಕಗಳ ಕೂಡಿ ಸ್ವಾದು ಫಲಗಳು ಕೋಮಲಾದ ತೃಣ ಇದ್ದಲ್ಲೆ ಆದಿಯಲಿ ಬಲರಾಮ ಹಾದಿಯನು ಮಾಡಿ ಮುಂಧೋದ ಆ ಸ್ಥಳಕ್ಕೆ || 1 ನೋಡ್ಯಲ್ಲೆ ತಾಳಾಖ್ಯ ಪ್ರೌಢ ವೃಕ್ಷಗಳನ್ನು ಆ ಫಳಗಳನ್ನು ಪ್ರೌಢಫಲಗಳು ನೋಡಿ ಅಬ್ಬರದಿಂದ ಓಡಿ ಬಂದನು ಅಸುರ ಕೂಡಿ ತನ್ನವರಿಂದ ಕಾಡ ಖರರೂಪಿ ಅವ ಮಾಡಿ ಕ್ರೂರಧ್ವನಿಯ ಮಾಡಿದನು ಮೂಢಧೇನುಕನು 2 ಖಡುಕೋಪದಲಿ ರಾಮ ಹಿಡಿದು ಹಿಂಗಾಲುಗಳ ತಡಿಯದಲೆ ತಿರಿವ್ಯಾಡಿ ಗಿಡದ ಮ್ಯಾಲೊಗದ ಆ ಗಿಡಕ ಭಾರಾಗ್ಯವನು ಗಿಡಸಹಿತ ಪ್ರಾಣ ವನು ಬಿಡುತಲೆ ಬಿದ್ದನು ತೆಳಗೆ ತಡವು ಇಲ್ಲದಲೆ| ಬಿಡದೆ ವಸುದೇವಜರು ಬಿಡಿ ಮೆಂದಿಗಳ ಕೊಂಡು ಖಡು ಹರುಷದಿಂದಲ್ಲೆ ಬಿಡದೆ ಗೋಪಾಲರಿಂದೊಡಗೂಡಿ ಎಲ್ಲಾರು ಖಡು ರುಚಿಕರಾಗಿರುವ ಗಿಡದ ಫಲಗಳ ತಿಂದು ನಡದರಾಲಯಕೆ|| 3 ಬಂದು ದಿನದಲಿ ದಿವಿಜವಂದಿತನು ಶ್ರೀ ಕೃಷ್ಣವಂದಿಸ್ಯಗ್ರಜಗ ಅವನ ಮಂದಿರದಲಿಟ್ಟು ಬಹು ಛಂದವಾಗಿರುವ ಕಾಳಿಂದಿಯಾ ತೀರದಲಿ ಬಂದÀ ಗೋಗೋಪಾಲ ವೃಂದವನು ಕಾಲಂದಿಯಲಿ ವಿಷಜಲವು ಛಂದಾಗಿ ಕುಡದುಮರಣ ಬದಿಕಿಸಿದ ಗೋವಿಂದ ಎಲ್ಲಾರನಾ|| 4 ಚಾರು ಕಾಲಿಂದಿಯಲಿ ನೀರು ವಿಷವಾದಕ್ಕೆ ಕಾರಣ ಹುಡುಕುವೆನೆಂದ ಶೌರಿಸುತ ಶ್ರೀಕೃಷ್ಣಸಾರ ಕಡಹಾಲ ಮರನೇರಿ ಆ ಮಡಿವಿನಲಿ ಹಾರಿದಾಕ್ಷಣಕ್ಕೆ ಉಕ್ಕೇರಿದಳು ಸಾರ ಮದಗಜದಂತೆ ನೀರೊಳಗೆ ಗಡಬಡಿಸಿ ಸಾರ ಸರ್ಪನ ಹಿಡಿದ ಕ್ರೂರನವ ಮೈಮ್ಯಾಲೇರಿ ಕಚ್ಚುತ ತನ್ನ ಶರೀರಪಾಶದಿ ಹರಿ ಶರೀರ ಸುತ್ತಿದನು||5 ದುಷ್ಟಾಹಿಯಿಂದ ನಿಶ್ಚೇಷ್ಟನಾದನು ಕೃಷ್ಣದೃಷ್ಟಿಯಿಂದಲಿ ನೋಡಿ ಅಷ್ಟು ಗೋಗಳು ಮತ್ತೆ ಅಷ್ಟೆಗೋಪಾಲಕರು ಕಷ್ಟವನು ಬಟ್ಟು ಉತ್ಕøಷ್ಟ ತಾಪದಲೆ ನಿಶ್ಬೇಷ್ಟರಾದರು ಅಲ್ಲೆ ಕಾಷ್ಟಮೂರ್ತಿಗಳಂತೆ ಸ್ಪಷ್ಟತೋರಿದರು| ಗೋಷ್ಟದಲಿ ಮತ್ತೆಲ್ಲ ದುಷಚಿನ್ಹವು ಕಂಡು ಶೇಷ್ಠ ನಂದಾದಿಗಳು ಕÀಷ್ಟದನು ಬಟ್ಟಸಂತುಷ್ಟರಾಮನ ಕೂಡಿ ಅಷ್ಟೂರು ನಡದರಾ ವೃಷ್ಣಿಕುಲ ತಿಲಕ ಶ್ರೀಕೃಷ್ಣ ಇದ್ದಲ್ಲೆ||6 ಮುಂದವನ ತಾಯಿ ಆಕಂದನಾ ಕಂಡು ಕಾಳಿಂದಿಯಲಿ ಧುಮುಕಬೇಕೆಂದು ಧಾವಿಸಲಾಗಿ ಮಂದಗಮನಿಯರೆಲ್ಲ ಹಿಂದಕ್ಕ ಸರಿಸಿದರು ನಂದಗೋಪನ ಹಿಡಿದು ಹಿಂದಕ್ಕ ಸರಿಸಿದನು óಛಂದದಲಿ ರೋಹಿಣಿಯ ಕಂದ ಬಲರಾಮಾ| ಮುಂದೆರಡು ಫಳಿಗಿ ಮ್ಯಾಲೆ ಛಂದಾಗಿ ಎಚ್ಚÀ್ಚರಿಕಿಯಿಂದ ಸರ್ಪನ ಹಿಡಿದು ಹಿಂದೊತ್ತಿ ಹೆಡಿಮೇಲೆ ಛóಂದಾಗಿ ಮಂದ ಹಾಸ್ಯದಿ ನಗುತ ನಂದಸುತ ಕುಣಿದ ಆನಂದದಿಂದಾ|| 7 ಪದ, ರಾಗ:ಆನಂದ ಭೈರವಿ ಆದಿತಾಳ ರಂಗ ಕುಣಿದ ಕಾಳಿಂಗನ ಹೆಡಿಮ್ಯಾಲ ಕಂಗಳಿಂದಲಿ ನೋಡಿ ಹಿಂಗದೆ ಸುರಕಿಲ್ಲ ಸಂಗೀತ ಸಹಿತ ಸಾರಂಗ ಮೃದಂಗ ತಾಲಂಗಳ ನುಡಿಸಿದರು ಹಿಂಗದಲೆ||ಪ ಹಿಂಗದೆ ಯಮುನಿ ತರಂಗಗಳಿಂದಲೆ ಮಂಗಳಾಂಗನ ಪಾದಂಗಳ ತೊಳುವಳು | ಅಂಗಾಲಿಲ್ಯವನು ಕಾಳಿಂಗನ ಮರ್ದಿಸಿ ಮಂಗಳ ಕೂಡುವ ಜಗಂಗಳಿಗೆ | ಮಂಗಳಕರ ಪುಷ್ಟಂಗಳ ದೃಷ್ಟಿಯ ರಂಗಗ ಮಾಳ್ಪರು ಹಿಂಗದೆ ದಿವಿಜರು ಭೃಂಗಕೋಕಿಲ ಮಯೂರಂಗಳು ಮಾಳ್ಪವು ರಂಗನ ಸಂಗಾತ ಸಂಗೀತವು|| 1 ಮುನ್ನಾಗಿ ಬಹುವರ್ಷ ತನ್ನ ಸಂದರ್ಶನವನ್ನು ಬಯಸುವಂಥ ಮಾನ್ಯಾದ ಮುನಿಗಳಿಗೆ ಚೆನ್ನಾಗಿ ಶ್ರೀಹರಿ ತನ್ನ ಕೃಷ್ಣರೂಪವನ್ನು ತೋರಿಸುತ ಪ್ರಸನ್ನನಾಗಿ| ಉನ್ನತವಾಗಿಹ ಪನ್ನಗಾಧೀಶನ ಉನ್ನತವಾಗಿಹ ಘನ್ನ ಹೆಡಿಗಳಲ್ಲಿ| ರನ್ನದಂಥೊಳುವಂಥಾ ತನ್ನ ಪಾದಗಳಟ್ಟು ತನ್ನಂಗಡ ಧಿನ್ನಂ ಗಡ ಧಿಕ್ಕಡ ಥೌ ಎಂದು|| 2 ಎಂತು ವರ್ಣಿಸಲಿ ಅನಂತ ಮಹಿಮಿಯು ಎಂಥವರಿಗೆ ಬಹಿರಂತವ್ರ್ಯಾಪತನಾಗ್ಯನಂತ ಪ್ರಾಣಿಗಳಲ್ಲಿ ನಿಂತಿರುವಾ| ಅಂತ್ಹತ್ತಗುಡದೆ ತನ್ನಂತೆ ತಾ ಕುಣಿದಾಡುವಂಥದಗನ್ಯ ದೃಷ್ಟಾಂತವೆಂಬುದಿಲ್ಲ ಇಂಥ ಎಲ್ಲರು ಭ್ರಾಂತರಾಗಿ|| 3 ಆರ್ಯಾ ಪದ, ರಾಗ :ಜಾಂಗಲಾ ಶ್ರೀ ಪತಿಯೇ ನಮ್ಮ ಪ್ರಾಣಪತಿಯ ಪಾಲಿಸು ಶ್ರೀ ಪತಿಯೆ|| ಪ ಪತಿಯು ಪಾವಿತನಾದ ಹಿತವಾಯಿತು||1 ಫಣಿಯ ಫಣಗಳಲ್ಲಿ ಪ್ರಣಯದಲಿ ಕಾಲಿಟ್ಟ ಶುಣಿಕುಣಿ ದಾಡಿದ್ದು ಗುಣವಾಯಿತು|| 2 ಮುದ್ದು ಮುಖದ ಅನಂತಾದ್ರೀಶ ದುಃಖ ಸಮುದ್ರದಿಂದ ನಮ್ಮನ್ನು ಉದ್ಧಾರ ಮಾಡು 3 ಆರ್ಯಾ ಕೃಷ್ಣ ವೇಣಿಯರ ಕಷ್ಟನೋಡಿ ಶ್ರೀ ಕೃಷ್ಣ ಅವನ ಬಿಟ್ಟನುಬ್ಯಾಗೆ| ಕೃಷ್ಣನೇ ಸಾಕ್ಷಾದ್ದಿಷ್ಣುನೆಂದು ಆ ಕೃಷಸರ್ಪ ನುಡಿದನು ಹೀಂಗೆ|| 3 ಭಕುತಿಯ ಕೊಡು ಮೋಹನಾ|| ಪ ಚನ್ನಾಗಿಕೊಡು ನೀನಿನ್ನಲ್ಲಿ ಧ್ಯಾನಾ||1 ಲೋಕನಾಥನೆ ನಿನ್ನ ತೋಕನೆಂದರಿತು|| 2 ಹರಿಯೆ ಅನಂತಾದ್ರಿ ದೊರಿಯೆ ಎಂದೆಂದು|| 3 ಆರ್ಯಾ ಕಾಳಿಯ ನುಡಿಯನು ಕೇಳುತ ಶ್ರೀ ಪತಿ ಭಾಳ ಪ್ರೇಮದಲಿ ಹೀಗೆಂದಾ | ಹೇಳುವೆ ಕಾಳಿಯ ಕೇಳ್ಯನ್ನಯ ವಚನಾ ಏಳು ಶೀಘ್ರದಲಿ ಇಲ್ಲಿಂದಾ|| 1
--------------
ಅನಂತಾದ್ರೀಶ - ಕಥನಕಾವ್ಯಗಳು
ಅಯ್ಯಾಜಗದಯ್ಯಾ ಪ ಅಯ್ಯಾ ಜಗದಯ್ಯಾ ಜೀಯಾನಂದ ನಿಮ್ಮ ಮಹಿಮೆಯ ಅಜ ಭವಾದಿಗಳಿಗೆ ತಾಯಿಯ ಮರೆವ ಶಿಶುವಿನ ಪರಿದಣಿದೆನಾ ಪ್ರೀಯದಲಿ ಸಲಹವು ಅವಗುಣ ನೋಡದೇ 1 ಧರೆಯೊಳಗ ಸಕಲಪತಿತರನ್ನು ಉದ್ಧರಿಸಲ್ಕೆ ಪರಬೊಮ್ಮತಾನೊಂದು ರೂಪನಾಗಿ ಕರುಣದಿಂದಲಿ ಅವತರಿಸಿದನೆಂದೆನ್ನದೆ ನರನೆಂದು ಬಗೆವವನು ಗುರುತಲ್ಪಕಾ2 ಸಾಕಾರ ನಿಮೈಲನಾಗಿ ಕ್ರೀಡಿಸಿದರೆಯು ಏಕ ಮೇವಾದ್ವಿತಿಯು ಶೃತಿಯೆನುತಿರೇ ಕಾಕು ಬುದ್ದಿಯಲಿ ಪರತರ ವಸ್ತು ನಿಮಗೆಂದ ಧಿಕ ಉಂಟೆಂಬುವ ಸುರಾಪಾನಿಯು 3 ಗಗನದಂದಲಿ ಸಕಲಾತೀತನಾಗಿನೀ ಮಿಗಿಲೆನಿಸಿ ಸಂಸಾರ ಸ್ಥಿತಿಯಲಿರಲು ಅಗಣಿತತೆ ಗುಣಬಂದನವ ಕಲ್ಪಿಸುವ ಜಗದೊಳಗ ಬ್ರಹ್ಮತ್ಯಕಾರನವನು 4 ಎನಗ ತಾರಕ ವಸ್ತು ಇದೆಯೆಂದು ನಿಶ್ಚೈಸಿ ತನು ಮನರ್ಪಿಸಿ ನಿಮ್ಮ ಚರಣಾಬ್ಜಕೆ ಘನನಂಬಿ ಶರಣವನು ಪೊಕ್ಕುನೆಲೆಗೊಂಬುದಕೆ ಅನುಮಾನ ವಿಡಿವವನ ಸ್ವರ್ಣಸ್ತೇಯಾ5 ಇಂತು ಪರಿಯಾದಾ ನಾಲ್ವರ ಸಂಗಡದಲಿ ಅ ತ್ಯಂತ ಹರುಷದ ತಾವ ಬಾಳುತಿಹನು ಅಂತಿಜನ ಸಮನಾದ ಸರ್ವದ್ರೋಹಿಯವನು ಸಂತತ ಬುಧ ಜನರು ಯನುತಿರುವರು 6 ಎಂದೆಂದು ಈ ಪಂಚ ಮಹಾಪಾತಕಿಳಗಳ ಮುಖ ತಂದೆ ತೋರಿದಿರೆನ್ನ ನಯನಗಳಿಗೆ ಎಂದು ಬಿಡದೇ ಕಾಯೋ ಮಹಿಪತಿ ಸುತ ಪ್ರಾಣ ಛಂದದಲಿ ಮಂದಮತಿ ತನ ಹರಸಿಯನ್ನಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಲ್ಲೇನು ಇಲ್ಲವೋ ಪ ಸಿರಿಯು ಇರುವದೆಂದು ನೀನು ಗರುವದಿಂದ ಹರಿಯ ಮರೆತು ಉರುಳಿ ಪೋಪ ತನುವ ಪೋಷಿಸುತಲಿ ಬಹುತೋಷಿಸೂತಲಿ 1 ಮತಿಯ ತೊರೆದು ಪತಿತನಾಗಿ ಬಾಳ ಬೇಡೆಲೊ ಗತಿತೋರರವರೆಲೊ 2 ಧರಣಿಗೊಡೆಯನಾದ ನಿನ್ನ ಭರದಿ ಯಮನ ಚರರು ಕರೆಯೆ ನೀ ತಿಳಿದು ನೋಡಲೆ 3 ಬನ್ನ ಬಿಟ್ಟು ಲಜ್ಜೆ ಬಿಟ್ಟು ಬಲು ನೀಚನಾದೆಲೊ 4 ಮಂದಮತಿಯೆ ಕೇಳು ನೀನು ಮುಂದೆ ಹಿರಿದು ಬಳಲಬೇಡ ಪೊಂದಿ ಭಜಿಸೊ ರಂಗೇಶವಿಠಲನ ಸುಖವೀವ ದೊರೆಯನ 5
--------------
ರಂಗೇಶವಿಠಲದಾಸರು