ಒಟ್ಟು 28 ಕಡೆಗಳಲ್ಲಿ , 17 ದಾಸರು , 25 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಭಜಕರಿಗೆ ದುರಿತ ಕರ್ಮ ಉಂಟೆ || ಆಗಮದಿ ನಡೆವವಗೆ ಅನ್ಯ ಮಾರ್ಗವುಂಟೆ | ರೋಗವಿಲ್ಲದವನಿಗೆ ಪಥ್ಯ ಉಂಟೆ 1 ವೇದಾಂತ ತಿಳಿದವಗೆ ಭೇದಬುದ್ಧಿಗಳುಂಟೆ | ಸಾಧು ಸಂಗದಲಿ ದುರ್ವಾದವುಂಟೆ | ಬೋಧ ನೆಲೆಗೊಂಡವಗೆ ಕ್ರೋಧ ಜನಿಸುವದುಂಟೆ | ನಾದ ಬಿಂದು ಕಳಾತೀತಗೆಣೆಯುಂಟೆ 2 ತಂದೆ ಭವತಾರಕನ ಹೊಂದಿರಲು ಭಯವುಂಟೆ | ಇಂದುಧರನಲ್ಲಿ ಸಂದೇಹವುಂಟೆ | ಕುಂದು ಹೆಚ್ಚೆಂಬೋದು ಅಲ್ಲಿ ಜನಿಸುವದುಂಟೆ | ಒಂದೆ ಬ್ರಹ್ಮವ ಕಂಡ ಮಹಿಮಗೆರಡುಂಟೆ ? 3
--------------
ಭಾವತರಕರು
ಅಧ್ಯಾಯ ಎರಡು ಸ್ವಾತ್ಮಾನಾಪಿ ವರಾಹೇಣ ದತ್ತಾವಾಸ ಸ್ಥಳೋsಚ್ಯುತಃ ಮಾಯಾವೀ ಬಕುಲಾಲಾಭ ತುಷ್ಟೋ ವ್ಯಾsದ್ವೇಂಕಟೇಶ್ವರ ಅರುಣೋದಯದಲೆದ್ದನು ಅಂದಿಗಲ್ಲೆ ಭೂ ವರಾಹನು ಬಂದು ಗರ್ಜನೆ ಮಾಡುತೆದುರಿಗೆ ಮುಂದಕಲ್ಲೆ ಅಡಗಿದನು ಭಯದಿಂದ ವೇಂಕಟನು 1 ಪಿಡಿದನು ಭೂವರಾಹನು ಮಂದ ಜನರನೆ ಮೋಹಿಸುತ ಹೀಗೆಂದ ವೇಂಕಟಗೆ ಇಂದು ನೀನ್ಯಾರೆಲೊ ಪೋಗುವಿಯೆಲ್ಲಿ ನೀ ಎನ್ನ ಮುಂದೆ ನುಡಿಬೇಗ 2 ಮಾತಾಡಿದನು ವೇಂಕಟನು ಆತುರನ ಪರಿಯ ಕೂತುಪೇಳಿದನಾಗ ತನ್ನ ಪುರಾತನ ಕಥೆಯಲ್ಲ ಆತಗೆ ಈ ತಲೆಯ ಔಷಧಕೆ ಬಂದೆನುನೀ ತಿಳಿಯೋ ಎಂದ 3 ಅಪ್ಪಿಕೊಂಡೀ ಮಾತಿಗವನಾ ಮುಪ್ಪಿನವ ತಾ ಕ್ರೋಢರೂಪಿಯು ತಪ್ಪದಲೇ ಅಪ್ಪಿಕೊಂಡಿಹ ಭೂವರಾಹನು ಹಾಲಿಗೆ ಹೆಪ್ಪು ಕೊಟ್ಟಂತೆ 4 ದುಃಖಗಳ ಪೇಳುತ ಸುಮ್ಮನಾಗದೆ ನಿಮ್ಮಾ ಭೆಟ್ಟಿ ಇದು ಸಂಭ್ರಮವು ರಮ್ಯಗಿರಿಯಲ್ಲಿ 5 ಮಾತಾಡಿದನುನಂದೊಂದು ಇಂದು ನಮ್ಮಿಬ್ಬರೊಳಗೆ ಒಂದು ಮಾತು ಉಳಿಯಲಿಲ್ಲಾ ನಿಂದೊಂದು ಮಾತೇನು ಪೇಳೊ ಶ್ರೀ ಲಕ್ಷ್ಮೀಕಾಂತಾ1 ಇರವೆ ಸ್ಥಳ ಒಂದಿಷ್ಟು ಸುದ್ದಿ ಒಂದು ಬಿಟ್ಟು ನಿನ್ನ ಬುದ್ಧಿ ಶ್ರೀ ಲಕ್ಷ್ಮೀಕಾಂತಾ2 ನಿನ್ನವನಾಗಿರುವೆÀ ಒಳ್ಳಿತು ನಿನ್ನಿಂದ ಫಲ ಪೇಳೊ ಶ್ರೀ ಲಕ್ಷ್ಮೀಕಾಂತಾ 3 ಮಡದಿಯ ಕಳೆದು ಮೇಲೆ ಕೊಡು ನೀ ಲಕ್ಷ್ಮೀಕಾಂತಾ 4 ಪದುಮಾವತಿಯ ಶ್ರೀಧರಣಿಕಾಂತಾ ಋಣಮುಕ್ತನಾಗಿ ಅದರಮೇಲೆ ಕೊಟ್ಟೀಯೇನೋ ಶ್ರೀ ಲಕ್ಷ್ಮೀಕಾಂತಾ 5 ಋಣಮುಕ್ತನಾನಾದಮೇಲೆ ಕ್ಷಣಮಾತ್ರ ಇಲ್ಲಿರುವವನಲ್ಲಾ ಒಣಮಾತೇನೋ ಸ್ಥಳ ಪೇಳೆನಗೆ ಶ್ರೀ ಧರಣಿಕಾಂತಾ ಗುಣಗಳುನಿನ್ನಲ್ಲೆ ಇಲ್ಲಹಣವು ಕೊಡಲಾಗುದು ಮತ್ತೆ ಒಣಸ್ನೇಹಕ್ಕೆ ಸ್ಥಳ ಬಂದೀತೆ ಲಕ್ಷ್ಮೀಕಾಂತಾ 6 ಇಲ್ಲೆ ಚಂಚಲ ನಾಗ ಬೇಡಾ ಶ್ರೀ ಧರಣಿಕಾಂತಾ ವಂಚಕ ನೀಸರಿಯೋ ಒಂದಕು ಕೊಡದ ಲೋಭಿ ಒಳ್ಳೆಹಂಚಿಕೆಯನೋ ನೀನು ಶ್ರೀ ಲಕ್ಷ್ಮೀಕಾಂತಾ7 ಕಡೆಗೆ ಚನ್ನಾಗಿ ಪೇಳೊ ನೀನು ಲಕ್ಷ್ಮೀಕಾಂತಾ8 ನಿನ್ನ ಅಭಿಷೇಕವು ಗೆಲಿಸುವಿಯೊ ಧನ್ಯ ಶ್ರೀ ಲಕ್ಷ್ಮೀಕಾಂತಾ 9 ಸ್ವಾಮಿ ಪುಷ್ಕರಣೆಯ ಮೂರು ಪಾದದಿಂದ ಪಾದಕಂತು ಎಷ್ಟೊ ಲಕ್ಷ್ಮೀಕಾಂತಾ 10 ಮತ್ಯಾಕೀಪರಿ ಮಾತಾಡುವಿ ಹೊತ್ತು ಬಹಳಾಯಿತು ಎನಗೆ ಪಥ್ಯಕ್ಕೆ ತಡವಾಯಿತೇಳೋ ಶ್ರೀಧರಣಿಕಾಂತಾ ಸತ್ಯ ನೂರುಪಾದ ಸ್ಥಳವ ಕ್ಲಿಪ್ತ ಮಾಡಿಕೊಟ್ಟೆ ನಿನಗೆ ಸ್ವಸ್ಥದಿಂದ ಇರುಹೋಗೋನೀ ಲಕ್ಷ್ಮೀಕಾಂತಾ 11 ಸ್ವಸ್ಥದಿಂದ ಇರುವೆನ್ಹ್ಯಾಂಗೆ ಪಥÀ್ಯದಡಿಗೆ ಮಾಡುವಂಥ ಹೆತ್ತತಾಯಿ ಇಲ್ಲವೋ ಎನಗೆ ಶ್ರೀ ಧರಣಿಕಾಂತಾ ಹೆತ್ತಾಯಿಯ ಪರಿಯಾಗಿ ನಿನಗೆ ಪಥÀ್ಯದಡಿಗೆ ಮಾಡುವದಕೆ ಮತ್ತ ಬಕುಲಾವತಿಯ ಕೊಡುವೆ ಶ್ರೀ ಲಕ್ಷ್ಮೀಕಾಂತಾ 12 ಇಂಥ ಘಾಯ ಮಾಯುವತನಕ ಜೇನ್ತುಪ್ಪಸಾಮೆಯ ಅನ್ನ ಸಂತತ ಬೇಕಲ್ಲಾ ಎನಗೆ ಶ್ರೀಧರಣಿಕಾಂತಾ ಚಿಂತಾಮಣಿಗೆ ಸರಿಯಾದಂಥ ನಂ ತಾದ್ರಿಯಲ್ಲಿದ್ದ ಮೇಲೆ ಚಿಂತೆಯಾಕೆ ಅದನು ಕೊಡುವೆ ಶ್ರೀ ಲಕ್ಷ್ಮೀಕಾಂತಾ 13 ವಚನ ಧರಣಿಯ ರಮಣ ಈ ಪರಿಯು ಬೇಡಿದ್ದುಕೊಟ್ಟು ತಿರುಗಿದನು ಸ್ವಾಮಿ ಪುಷ್ಕರಣೀಯ ತೀರಕ್ಕೆ ಸರಸದಲಿ ಮುಂದಲ್ಲೆ ಇರುವ ನಿತ್ಯದಲಿ ಪರಮ ಭಕುತಳು ಆಗಿ ಇರುವ ಬಕುಲಾವತಿಯ ಕರದಿಂದ ಪಥ್ಯ ಸ್ವೀಕರಿಸುತಲೇ ನಿತ್ಯದಲಿ ಸುರತಾನಂತಾಖ್ಯ ಗಿರಿಯಲ್ಲಿ ಇರುವವನ ಕರುಣದಲಿ ಮುಗಿಯಿತೆರಡು ಅಧ್ಯಾಯ1
--------------
ಅನಂತಾದ್ರೀಶ - ಕಥನಕಾವ್ಯಗಳು
ಕಂಡೆವಯ್ಯ ಗುರುನಿಮ್ಮ ಶ್ರೀಪಾದ ಸಂದಿಸಿತು ಎನ್ನ ಭೇದಾಭೇದ ಮಂಡಲದೊಳಾಯಿತಯ್ಯ ಸುಬೋಧ ಕೊಂಡಾಡುವೆ ಕೀರ್ತಿ ಅಖಂಡವಾದ 1 ಸ್ಮರಿಸುವೆ ನಿಮ್ಮ ಕ್ಷಣ ಕ್ಷಣ ಸ್ಮರಿಸುವೆ ನಿಮ್ಮ ಶ್ರೀಚರಣ ಸ್ಮರಿಸುವೆ ನಿಮ್ಮ ಸಗುಣ ನಿರ್ಗುಣ ಅನುದಿನ 2 ಸ್ಮರಿಸದೆ ನಿಮ್ಮ ಸ್ವರೂಪ ನಿರ್ವಾಣ ಅರಘಳಿಗಿರಲಾರದೆನ್ನ ಪ್ರಾಣ ಪಥ ನಿಮ್ಮ ವಿನಾ ಮೊರೆ ಹೊಕ್ಕಿದೆ ನಾ ಪರಿಪೂರ್ಣ 3 ಆವಾವ ಪರಿಯಲಿನಿಮ್ಮ ಕೀರ್ತಿ ದಿವಾರಾತ್ರೆಯಲಿ ಕೇಳುವ ಸುವಾರ್ತಿ ಭಾವಿಸುವೆ ನಿಮ್ಮ ನಿಜಾನಂದ ಮೂರ್ತಿ ಜೀವನ ಮಾಡುವೆÀ ನಾ ಮಂಗಳಾರ್ತಿ 4 ಬಾಹ್ಯಾಂತ್ರ ನಿಮ್ಮ ಧ್ಯಾನಿಸುವೆ ನಿತ್ಯಾ ಮಹಾಗುರು ನಿಮ್ಮ ಕೃಪೆವಿದು ಸತ್ಯ ಗುಹ್ಯ ಮಹಾವಾಕ್ಯವಾಯಿತು ಪಥ್ಯ ಮಹಿಪತಿ ಆದ ನೋಡಿ ತಾ ಕೃತಕೃತ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯಬೇಕೆನ್ನ ಕರುಣದಲಿ ಧನ್ವಂತ್ರಿ ಶ್ರೀಯರಸ ನರಹರಿಯೆ ಪ್ರಾರ್ಥಿಸುವೆ ನಿನ್ನ ಪ. ಸುರರಿಗೆ ಮರಣ ಕಾಲವು ಪ್ರಾಪ್ತವಾಗಲು ಗಿರಿಯಿಂದ ಶರಧಿಯನು ಮಥಿಸೆ ಪೇಳಿ ಕರುಣದಿಂದಮೃತ ಕರದಿಂದ ಸುರರಿಗೆ ಎರೆದು ಜರೆ ಮೃತ್ಯು ಬಿಡಿಸಿದಗೆ ಇದು ಒಂದು ಘನವೆ 1 ಸಕಲ ನಾಡಿಗಳಲ್ಲಿ ಚೇಷ್ಟಪ್ರದ ನೀನಾಗಿ ಸಕಲ ವ್ಯಾಪಾರಗಳ ನಡೆಸುತಿರಲು ಯುಕುತಿಯಿಂದಲಿ ನಾಡಿ ನೋಡಿ ತಿಳಿಯುವನ್ಯಾರೊ ಮುಕುತಿದಾಯಕ ನಿನಗೆ ಇದು ಒಂದು ಘನವೆ 2 ಅನಾದಿಯಿಂದ ಅಪಥ್ಯದಲಿ ನರಳುವೆನೊ ಈಗ ಪಥ್ಯವ ಮಾಳ್ಪ ಬಗೆ ಯಾವುದೊ ಶ್ರೀನಿವಾಸನೆ ನಿನ್ನ ಧ್ಯಾನವೆ ಔಷಧವೊ ಶ್ರೀ ಗುರುಗಳಾಜ್ಞೆಯೆ ಪಥ್ಯವೆನಗಿನ್ನು 3 ಭಕ್ತಪ್ರಹ್ಲಾದನನು ಯುಕ್ತಿ ಶಕ್ತಿಗಳಿಂದ ಮುಕ್ತಿಮಾರ್ಗವ ತೋರಿ ಸಲಹಲಿಲ್ಲೇ ಭಕ್ತಿಹೀನರನೆ ಕಂಡು ಎನ್ನ ರಕ್ಷಿಸದಿರಲು ಯುಕ್ತವೇ ನಿನಗಿನ್ನು ಭಕ್ತಪಾಲಕನೆ 4 ನಿನ್ನ ದಾಸತ್ವದಲಿ ನೆಲಸಬೇಕಾದರೆ ಬಿನ್ನಣದ ರೋಗಗಳ ಪರಿಹರಿಸಿ ಸಲಹೊ ನಿನ್ನವರಾದ ಮೇಲಿನ್ನು ಕಾಯದೆ ಇಹರೆ ಘನ್ನ ಶ್ರೀ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಕೃಪೆಯಿರಲಿ ಸ್ವಾಮಿ ಕೃಪೆಯಿರಲಿ ಅಪರಿಗಣ್ಯ ಸುಗುಣಾಂಬುಧಿ ಹರಿ ನಿನ್ನ ಪ. ಬೇರಿಗೆ ದಿವ್ಯ ಕಾವೇರಿ ನದಿಯ ಜಲ ಧಾರೆಯಿರಲು ಕೊಂಬೆಗಳುಬ್ಬಿ ಸಾರಭರಿತ ಫಲದೋರುವ ತರುವಂತೆ ಧಾರುಣಿಪರು ಕೈ ಸೇರುವರು 1 ಶತ್ರುಗಳಂಜಿ ಬಗ್ಗುವರು ಕಾಳ ಕೂಟ ಪಥ್ಯವಾಗುವುದು ನಿನ್ನಣುಗರಿಗೆ ನಿತ್ಯ ಮಾಡುವಾ ದುಷ್ಕøತವೆಲ್ಲವು ಪರ- ಮೋತ್ತಮ ಧರ್ಮಕರ್ಮಗಳಾಹಲೂ 2 ಕನಸು ಮನಸಿನಲ್ಲಿ ನೆನೆಸುವ ಕಾರ್ಯಗ- ಳನುಕೂಲವಾಗುವದನುದಿನವು ಮನಸಿಜನಯ್ಯ ನೀನನುವಾಗಿರೆ ಸರ್ವ ಜನರೆಲ್ಲರು ಬಹು ಮನ್ನಿಸುವರು 3 ಋಗ್ಯಜುಸ್ಸಾಮಾಥರ್ವಣಗಳೆಂಬ ವೇದ ಸ- ಮಗ್ರ ನೀ ಕರುಣಿಸಿ ಒಲಿದಿರಲು ಸುಜ್ಞಾನ ಭಕ್ತಿ ವೈರಾಗ್ಯ ಸಹಿತವಾಗಿ ಭಾಗ್ಯದೇವತೆ ಕೈ ಸೇರುವಳು 4 ಈ ಕಾರಣದಿಂದನೇಕರ ಬಯಸದೆ ಶ್ರೀಕರ ನೀ ಕರುಣಿಸಿದರಿಂದು ಸಾಕೆಂದೊದರುವೆನೇಕಮನದಲಿ ದ- ಯಾಕರ ವೆಂಕಟರಮಣನಿಂದು 5
--------------
ತುಪಾಕಿ ವೆಂಕಟರಮಣಾಚಾರ್ಯ
ಖಾದಿ ಧರಿಸುವ ಜನಕೆ ಕ್ರೋಧವುಂಟೇ ಪ ಕ್ರೋಧ ಜೈಸಿದ ನರಗೆ ಕಲಹಗಳುಂಟೇ ಪಥ್ಯದಿಂದಿರುವವಗೆ ವ್ಯಾಧಿ ಭಯವೇ ನಿತ್ಯ ಉಪವಾಸಿಗೆ ಭತ್ತದಾ ವ್ಯಥೆಯುಂಟೇ ಚಿತ್ತ ಶುದ್ಧಿದ್ದವಗೆ ಮೈಲಿಗೆಯ ಪರವೇ 1 ಆಶೆ ಬಿಟ್ಟವನಿಗೆ ಅರಸರಾಭಯವುಂಟೆ ದಾಸನಾದವನಿಗೆ ದೋಷವುಂಟೆ | ದೇಶ ಉದ್ಧಾರಕಗೆ ಸೆರೆಮನೆಯ ಭಯವುಂಡೆ ಪೂಶರನ ಗೆದ್ದವಗೆ ಕಾಮಿನಿಯ ಭಯವೇ 2 ಗೀತಾರ್ಥ ತಿಳಿದವಗೆ ಪಾತಕದ ಭಯವುಂಟೆ ಶೀತೋಷ್ಣ ಸಹಿಸುವವಗೆ ಛಳಿ ಬಿಸಿಲು ಭಯವೆ | ನೀತಿ ಕೋವಿದರಿಗೆ ಜಾತಿ ಪಕ್ಷಗಳುಂಟೆÉ ದಾತನಿಗೆ ದುರ್ಭಿಕ್ಷು ಭೀತಿ ತಾವುಂಟೆ 3 ವಿದ್ಯಾಭಿಲಾಶೆಗೆ ತೇರ್ಗಡೆಯ ಭಯವುಂಡೆ ಉದ್ಯೋಗವಿದ್ದವಗೆ ಉದರ ಭಯವೇ ಯುದ್ಧ ಶೂರರಿಗೆಲ್ಲ ಮದ್ದುಗುಂಡಿನ ಭಯವೇ ಬುದ್ಧಿವಂತರಿಗೆಂದಿಗಪಮಾನ ಭಯವೇ 4 ನೇಮದಿಂದಲಿ ನಡೆವವಗೆ ಸೋಮಾರಿತನವುಂಟೆ ಭೂಮಾತೆ ಮಕ್ಕಳಿಗೆ ಕ್ಷಾಮವುಂಟೆ ಸಾಮಗಾನವಿಲೋಲ ಶಾಮಸುಂದರವಿಠಲ ನಾಮ ನೆನವವಗೆ ಯಮಧಾಮದಂಜಿಕೆಯೇ 5
--------------
ಶಾಮಸುಂದರ ವಿಠಲ
ಗಣಾಧೀಶ ಗೌರೀಶ್ ವಾಗೀಶ ಶ್ರೀಶಾನ'ುಸಿ ಬೇಡುವ ಪ್ರಸಾದವನು ಜಗದೀಶಾನೆಲಸಿ ಹೃದಯದಿ ಬಂದು ನುಡಿಸು ದಯದಿಂದಾನೀ ನುಡಿಸಿದಂತೆ ನುಡಿಯುವೆ ಸ್ಪೂರ್ತಿುಂದಾ 1ದೇಹ ದೇವಾಲಯವು ದೇವರೊಳಗಿಹನುಮನದ ಗರ್ಭಾಲಯದಿ ಮಲಗಿಕೊಂಡಿಹನುನಾಲಿಗೆಯ ನಾಮಗರ್ಜನೆಯ ಬಲದಿಂದಾಮನದ ಕದ ತೆಗೆಯೆ ಕಾಣುನನು ಗೋ'ಂದಾ 2ಮನವೆ ಕಾರಣವು ಬಂಧಮೋಕ್ಷಗಳಿಗೆಮನವೆ ಕಾರಣ'ಲ್ಲಿ ಸುಖದುಃಖಗಳಿಗೆಮನಸು ಬಿಗಿ'ಡಿದ್ಹಿಡಿದು 'ಷಯಗಳ ತ್ಯಜಿಸುಮನತು ನಾಮಸ್ಮರಣೆಯೊಳು ಸದಾ ಇರಿಸು 3ಯಾವಾಗಲೂ ರಾಮ ನಿನ್ನೊಳಗೆ ಇರುವಾಭಾವದಿಂದಲಿ ಕರೆಯೆ 'ಒ' ಎಂದು ಬರುವಾದೇವರನು ನಂಬಿದರೆ ಸರ್ವದಾ ಕಾವಾಯಾವ ಅಂಜಿಕೆಯು ನಿನಗಿಲ್ಲ ತಿಳಿ ಜೀವಾ 4ನಿನ್ನೊಳಗೆ ನೀ ನಿನ್ನ ರಾಮನನು ನೋಡುನಿನ್ನ ಬೇಡಿಕೆಗಳನು ರಾಮನಲಿ ಬೇಡುಅನ್ಯರನು ಅಲಕ್ಷಿಸದೆ ಭಜನೆಯನು ಮಾಡುಪುಣ್ಯವಂತರ ಸಂಗದೊಳು ಸದಾ ಕೂಡು 5ಶ್ರವಣ ಭಕ್ತಿಯು ಬೇಕು ಮೊದಲು ಚೆನ್ನಾಗಿಶ್ರವಣವಾಗುವವರೆಗೆ ನಾದತಾನಾಗಿಭವ ಸಮುದ್ರವನು ದಾಟುವಡೆ ಸುಖವಾಗಿಶ್ರವಣವೇ ಮುಖ್ಯ ಸಾಧನವು ನಿಜವಾಗಿ 6ನಾದ ಹುಟ್ಟಿದ ಮೇಲೆ ನಾಮ ಕೀರ್ತನವುನಾಮ ಕೀರ್ತನದಿ ಅಸ್ಪಷ್ಟ ದರುಶನವುನೇಮ ಹೆಚ್ಚಾದಂತೆ ಸ್ಮರಣೆ ಶಾಶ್ವತವುಸ್ಮರಣೆಯೊಳು ಸಂಪೂರ್ಣ ವಸ್ತುದರುಶನವು 7ಅನನ್ಯ ಭಕ್ತಿಯ ಬಲವ ಬಣ್ಣಿಸುವದೇನುಕಣ್ಮುಂದೆ ಸರ್ವದಾ ಹರಿಯು ಕುಣಿಯುವನುಕಣ್ಣು ಮುಚ್ಚಣಿಕೆಯಾಟವನು ಆಡುವನುಅಣುರೇಣು ಪರಿಪೂರ್ಣನಾಗಿ ತೋರುವನು 8ಕುಣಿಯುವನು ಕುಣಿಸುವನು ನಗುತ ನಲಿಸುವನುದಣಿಯುವನು ದಣಿಸುವನು ಉಣುತ ಉಣಿಸುವನುಜನರಿಗದ್ಭುತ ಚಮತ್ಕಾರ ತೋರುವನುಕ್ಷಣ ಬಿಡದೆ ಕೆಳಗಿಳಿಯದಂತೆ ಕಾಯುವನು 9ದೇವರನು ನಂಬಿ ಕೆಡಕಾದವರು ಇಲ್ಲಜದೇವರನು ಬಿಟ್ಟು ಸುಖಹೊಂದಿದವರಿಲ್ಲಾದೇವರನು ಒಲಿಸುವೆಡೆ ಭಾವ'ರಬೇಕುಭಾವ'ಲ್ಲದ ಢೋಂಗಿನರ್ಚನೆಯು ಸಾಕು 10ಚಿನ್ನ ಬೆಳ್ಳಿಗಳ ಮಂಚಪವು ಬೇಕಿಲ್ಲಾಸಣ್ಣಕ್ಕಿ ಅನ್ನ ಪಕ್ವಾನ್ನ ಬೇಕಿಲ್ಲಮಣ್ಣು ಕುಳ್ಳಿಯೊಳು ಒಣ ಅಂಬಲಿಯು ಸಾಕುಘನ್ನ ಮ'ಮನಿಗೆ ನಿರ್ಮಲ ಭಕುತಿ ಬೇಕು 11ಶ್ರವಣ ಭಕ್ತಿಯ ದಾಟದವನು 'ಸಾಧಕ' ನುಪಾದಸೇವನದಿಂದ 'ಸಾಧು' ಆಗುವನುದಾಸ್ಯ ಭಕ್ತಿಯ ಮುಂದೆ 'ಸಿದ್ಧ' ನಾಗುವನುಸಖ್ಯಭಕ್ತಿಯ ಮುಂದೆ 'ಗುರು'ವು ಆಗುವನು 12ಭಕ್ತಿ ಮಾರ್ಗವು ಬಹಳ ಸುಲಭ ಸಾಧನವುಭಕ್ತಿ ಸರ್ವರಿಗೆ 'ಷಯದೊಳು ಪರಿಚಿತವು'ಷಯದೊಳಗಿನ ಪ್ರೀತಿ ಎಳೆದೆಳೆದು ತೆಗೆದುಪರಮಾತ್ಮನೊಳು ಇಡಲು ಭಕ್ತಿಯಾಗುವದು 13ಉಂಡದ್ದು ಶ್ರೀ ಹರಿಗೆ ನೈವೇದ್ಯವೆನ್ನುಕಂಡದ್ದು ಶ್ರೀ ಹರಿಯ ಪ್ರತಿರೂಪವೆನ್ನುಮಲಗಿದ್ದು ಶ್ರೀ ಹರಿಗೆ ಸಾಷ್ಟಾಂಗವೆನ್ನುಸುಲಭ ಪೂಜೆಯ ಮರ್ಮವೆನು ತಿಳಿದು ನೀನು 14ಸಾಲವನು ಮಾಡಿ ಹೋಳಿಗೆ ಹೊಡಿಯಬೇಡಾಜೇಲಿಗಂಜುತ ದೇಶಕಾರ್ಯ ಬಿಡಬೇಡಾಆಲಸ್ಯದಲಿ ಕಾಲವನು ಕಳಿಯಬೇಡಾಕೆಲಸದಲಿ ಕೀಳು ಮೇಲೆಂದು ಅನಬೇಡಾ 15ಸ್ವಚ್ಛ'ರಬೇಕು ಮನಬುದ್ಧಿ ದೇಹದೊಳುಅಚ್ಚುಕಟ್ಟಿರಬೇಕು ಸರ್ವಕಾರ್ಯದೊಳುಎಚ್ಚರಿರಬೇಕು ಜನಪಾತ್ರೆ ರಾತ್ರಿಯೊಳುಬಿಚ್ಚು ಮನ'ರಬೇಕು ಸ್ವಜನ 'ುತ್ರರೊಳು 16ಬಡತನವು ಬಂದಾಗ ಧೈರ್ಯ ಬಿಡಬೇಡ'ಡಿದು ನೆಂಟರ ಮನೆಯ ನೀ ಕೂಡಬೇಡದುಡಿದು ತಿನ್ನಲು ಸ್ವಲ್ಪ ಸಹ ನಾಚಬೇಡಮಡದಿ ಹುಟ್ಟಿದ ಮನೆಯ ನೀ ಸೇರಬೇಡಾ 17ಗಾಜಕಾರಣದೊಳು ' ಮುಚ್ಚುಮನ' ಬೇಕುಧರ್ಮಕಾರಣದೊಳಗೆ 'ಸ್ವಚ್ಛಮನ' ಬೇಕುಅರ್ಥಕಾರಣದೊಳಗೆ ' ಮೆಚ್ಚುಮನ'' ಬೇಕುಕಚ್ಚೆಕೈಗಳು ಸದಾ ಸ್ವಚ್ಛ'ರಬೇಕು 18ಸಂಸಾರ ಮಾಡುವಡೆ ಧನವ ಸಂಗ್ರ'ಸುಸನ್ಯಾಸಿಯಾಗುವೆಡೆ ವೈರಾಗ್ಯ ಬೆಳೆಸುಸರ್ವಕರ್ಮಗಳಲ್ಲಿ ಶ್ರೀಹರಿಯ ಸ್ಮರಿಸುಸರ್ವದಾ ಸಂತ ಸಂಗದೊಳು ಸಂಚರಿಸು19ಸಂತ ಸಂಗದೊಳು ಸಂಚರಿಸುವುದು ಸ್ನಾನಾಸಂತ ವಚನಾಮ್ರತದ ಪಾನವೇ ಸ್ನಾನಾಸಂತರನು ಸಂತೋಷಪಡಿಸುವುದು ಸ್ನಾನಾಶಾಂತಮನದಿಂ ಹರಿಯ ಚಿಂತಿಪುದ ಸ್ನಾನಾ 20ಬಾಲ್ಯದಲಿ ಬ್ರಹ್ಮಚರ್ಯದಿ ಬಲವ ಬೆಳೆಸುತಾರುಣ್ಯದಲಿ ದುಡಿದು ಧನವ ನೀ ಗಳಿಸುವೃದ್ಧಾಪ್ಯದೊಳು ಸದಾ ಶ್ರೀಹರಿಯ ಸ್ಮರಿಸುಶ್ರೀಹರಿಯ ಸ್ಮರಣೆಯೊಳು ಆಯುಷ್ಯ ಸವೆಸು 21ಮೊದಲು ನಿನ್ನ ಪ್ರಯತ್ನ ತಪ್ಪದೆಲೆ ಮಾಡುಅದು ನೀಗದಿರೆ ಮುಂದೆ ದೈವವನು ನೋಡುಮದುವೆಯಾಗುವ ಮೊದಲು ತಿಳಿತಿಳಿದು ನೋಡುದುಡಿದು ಧನ ಗಳಿಸಿ ಸುಖದಿಂದ ಬಾಳುವೆ ಮಡು 22ಧನ'ಲ್ಲದವನ ಸಂಸಾರ ಸುಖವಲ್ಲಾಮನೆಯೊಳಗೆ ನಿತ್ಯ ಕಿರಿಕಿರಿಯು ತರವಲ್ಲಾದನದಂತೆ ಹೆಣ್ಣು ನುಡಿಯುವುದು ಸರಿಯಲ್ಲಾಎಣಿಕೆುಲ್ಲದೆ ಮಕ್ಕಳಾಗುವುದು ಸಲ್ಲಾ23ನೆಂಟರೊಳು ಬಹುದಿನ ಕೆಳಗಿರಬೇಡಾ'ಫ್ರಂಟಸೀಟಿ'ನ ಮೇಲೆ ನೀ ಕೂಡಬೇಡಾಒಂಟಿಯಲಿ ಹೆಂಡತಿಯ ಬಿಟ್ಟು ಇರಬೇಡಾಗಂಟು ಒಬ್ಬರ ಕೈಗೆ ಕೊಟ್ಟು ಆಳಬೇಡಾ 24ನಿನ್ನಂತೆ ತಿಳಿ ಪರರ ಸುಖ ದುಃಖಗಳನುಅನ್ಯಥಾ ನೋಡದಿರು ಅಣ್ಣ ತಮ್ಮರನುಸರ್ವಥಾ ಸ'ಸದಿರು ಅನ್ಯಾಯಗಳನುತಿಳಿಯದೇ ಹಳಿಯದಿರು ಭಿನ್ನ ಮತಗಳನು 25ಅತಿ ಮತುಗಳು ಬೇಡ ಅತಿ ಮೌನ ಬೇಡಾಅತಿ ತಿನಸು ಬೇಡ ಅತಿ ಉಪವಾಸ ಬೇಡಾಅತಿ 'ಹಾರವು ಬೇಡ ಅತಿ 'ನಯ ಬೇಡಾಅತಿ ಉದಾರತೆ ಬೇಡ ಜೀನತನ ಬೇಡಾ 26ಭೂ'ುಂಗೆ ಭಾರವಾಗುತ ತಿರುಗಬೇಡಾಕೂಳಿಂಗೆ ಕಾಳಾಗಿ ನೀ ಕೂಡಬೇಡಸಾಲ ಸಿಗುವಾಗ ಸಂತೋಷ ಪಡಬೇಡಾಸಾಲವೇ ಶೂಲವೆಂಬುದು ಮರೆಯಬೇಡಾ 27ಹನಿಗೆ ಹನಿ ಕೂಡಿದರೆ ಹಳ್ಳದಾಗುವುದುತೆನಿಗೆ ತೆನಿ ಕೂಡಿದರೆ ರಾಶಿಯಾಗುವುದುಕ್ಷಣಬಿಡದೆ ಕಂಡಲ್ಲಿ 'ದ್ಯೆಯನು ಗಳಿಸುಕಣಬಿಡದೆ ಧನ ಧಾನ್ಯಗಳನು ಸಂಗ್ರ'ಸು 28ಮಾತು ಕೃತಿಗಳಿಗೆ ಬಲು ಮೇಳ'ರಬೇಕುನೀತಿಯೊಳು ತನ್ನ ಮನಸಾಕ್ಷಿ ಇರಬೇಕುಮಾತು ಬಲು ಸ'ುದ್ದು ಸತ್ಯ'ರಬೇಕುಸತ್ಯ'ಲ್ಲದ ಸುಳ್ಳು ಸ' ಮಾತು ಸಾಕು 29ಐಕ್ಯ'ದ್ದರೆ ಸೌಖ್ಯ ಭೇದದೊಳು ಬೇದಾಐಕ್ಯ'ದ್ದರೆ ಬಲವು ಕ್ಷಯಬೇನೆ ಭೇದಾಐಕ್ಯ'ದ್ದರೆ 'ಗ್ಗು ಭೇದದೊಳು ಕುಗ್ಗುಐಕ್ಯದಿಂದ ಸ್ವಾತಂತ್ರ್ಯ ರಥವನ್ನು ಜಗ್ಗು 30ತನ್ನ ಅಭಿಮಾನ ತನ್ನವರ ಅಭಿಮಾನತನ್ನ ಕುಲಗೋತ್ರ ಜಾತಿಯ ಸ್ವಾಭಿಮಾನತನ್ನ ಭಾಷಾರಾಷ್ಟ್ರ ಧರ್ಮಾಭಿಮಾನಮಾನವನಿಗಿರಬೇಕು ಇಲ್ಲದವ 'ಶ್ವಾನಾ' 31ತನ್ನತನ ಬಿಡಬೇಕು ತನ್ನವರಿಗಾಗಿತನ್ನವರ ಕುಲಗೋತ್ರ ಜಾತಿಗಳಿಗಾಗಿ ಕುಲಗೋತ್ರ ಜಾತಿಗಳ ತಾಯ್ನಾಡಿಗಾಗಿತಾಯ್ನಾಡು ನುಡಿಧರ್ಮ ಪರಮಾತ್ಮಗಾಗಿ 32ತನ್ನ ಉದ್ಯೋಗ ಮನಮುಟ್ಟಿ ಮಾಡುವರುಉಣಲು ಅಧಿಕಾರ ಆಮೇಲೆ ದೊರಕುವದುಉಣುವಾಗ ಶ್ರೀಹರಿಯ ಸ್ಮರಣೆ ಮಾಡುವದುಮನೆಯೊಳಗೆ ಶಿಸ್ತು ಶಾಂತಿಗಳ ಕಾಯುವದು33ಹರಿಕಥಾ ಕೀರ್ತನ ಪುರಾಣ ಪಠಿಸುವದುಸರಸ ವಾಙ್ಮಯದ ಅಭ್ಯಾಸ ಮಡುವದುತರು ಬರುವ ತನ್ನ ವ್ಯವಹಾರ ನೋಡುವದುಪರ ಪರಿಸ್ಥಿತಿಗಳನು ತೂಗಿ ನೋಡುವದು 34'ಶ್ರಾಂತಿ ಅಭ್ಯಾಸಿ ಸರಸ ಸಲ್ಲಾಪನಿಶ್ಚಿಂತೆುಂದ ನಿದ್ರೆಯು ಸೌಖ್ಯರೂಪನಿತ್ಯ ಮಾನವನ ದಿನಚರಿಯ ಈ ರೂಫನಿಶ್ರೇಯಸಕೆ ಸುಲಭ ಸಾಧನವು ಭೂಪಾ 35ಸ್ವಚ್ಛ ಹವೆ ನೀರು ವ್ಯಾಯಾಮ 'ಶ್ರಾಂತಿಸಾತ್ವಿಕ ಸಸತ್ವಾನ್ನ ಪಾನಗಳ ಪ್ರೀತಿಉಚ್ಚತಮ ಧ್ಯೇಯ ಆಚರಣೆಗಳ ರೀತಿಮೋಕ್ಷಕ್ಕೆ ಸಾಧನವು ಇಹದಿ ಸಂತೃಪ್ತಿ 36ದೇಹ ಬಿದ್ದರೆ 'ಂದೆ ಕೀರ್ತಿುರಬೇಕುಕೀರ್ತಿ ಬರುವಂಥ ಕಾರ್ಯವ ಮಾಡಬೇಕುಕಾರ್ಯದೊಳು ಕುಶಲತನ ದಕ್ಷತೆಯು ಇರಬೇಕುಫಲವು ಪರಮಾತ್ಮನಾಧೀನವೆನಬೇಕು 37ಸರ್ವದಾ ಸುಖವೆ ಇದ್ದವರು ಯಾರುಂಟುಅವರವರ ಕರ್ಮ ಫಲವೇ ಅವರ ಗಂಟುಬೆಳತು ಕತ್ತಲೆಯಂತೆ ಚಕ್ರ ಆರುಗುವದುಸುಖ ದುಃಖ ಬರುವಾಗ ಬಂದು ಹೋಗುವುದು 38ಅನುಭವದಿ ಹೆಚ್ಚು ಸಾಧನ ಬೆಳೆಯಬೇಕುಅನುಭವದ ಮಾತುಗಳು ಬಚ್ಚಿಡಲು ಬೇಕುಅನುಭವವು ಬಂತೆಂದು ಗರ್ವ ಪಡಬೇಡಾಗರ್ವದಿಂದಲಿ ಮತ್ತೆ ಕೆಳಗಿಳಿಯ ಬೇಡಾ 39ಅಡಗಿ ಅಂಬಲಿ ಅರ' ಅಂಚಡಿಯ ಕಡೆಗೆಹುಡುಗರ ಬಲಾರೋಗ್ಯ ನಡೆನುಡಿಯ ಕಡೆಗೆಕಡು ಚಾಣ್ಮೆುಂದ ನೋಡುವದು ಸತಿ ಪತಿ ಕೆಲಸಾ 40ಪತಿುಂದಲೇ ಸತಿಯು ಸತಿುಂದ ಪತಿಯುಸತಿಪತಿಯ ಪ್ರೇಮದಿಂದಾತ್ಮದುನ್ನತಿಯುಪತಿಯ ಕೋಪದಿ ಕಲ್ಲು ಆಗುವಳು ಸತಿಯುಸತಿಯ ಶಾಪದಿ ಕತ್ತೆಯಾಗುವನು ಪತಿಯು 41ಸಾ'ಗಂಜಲು ಬೇಡ ಸಾ'ಗಳಬೇಡಾಸಾವು ಅಂದರೆ ಭಯಂಕರ ತಿಳಿಯಬೇಡಾದೇಹಕ್ಕೆ ಬಾಲ್ಯ ಯೌವನ ಮುಪ್ಪಿನಂತೆದೇಹಾಂತರ ಪ್ರಾಪ್ತಿಯೇ ಮರಣಗೀತೆ 42'ದ್ಯಾರ್ಥಿ ಬಡವನಿದ್ದರೆ ಭಿಕ್ಷೆನೀಡುಅಶನಾರ್ಥಿ ಟೊಣಪನಿದ್ದರೆ ದೂರ ಮಾಡುಹಸಿವೆ ಚೆನ್ನಾಗಿ ಇದ್ದರೆ ಊಟ ಮಾಡುಹಸಿಯು ಸಾಕಷ್ಟು ಇದ್ದರೆ ಬಿತ್ತಿನೋಡು43ಶುದ್ಧ ಆಚರೆಣೆುದ್ದರೆ ಮಾತನಾಡುಬುದ್ಧಿ ಬಲು ಚುರುಕು ಇದ್ದರೆ ವಾದ ಮಡುದುಡ್ಡು ರಗಡಿದ್ದರೆ ಘಡಾಮೋಡ ಮಾಡುಜಡ್ಡು ಇದ್ದರೆ ಪಥ್ಯದುಪವಾಸ ಮಾಡು 44ಹಾಳುಹರಟೆಯ ಬಿಟ್ಟು ಶ್ರೀ ಹರಿಯ ಸ್ಮರಿಸುಕಾಲುವನು ನೋಡಿ ಸತ್ಕರ್ಮ ಆಚರಿಸುನಾಳೆ ಮಾಡುವೆನೆಂಬ ಮಾತು ದೂರಿರಿಸುನಾಳೆ ಮಾಡುವ ಧರ್ಮ ಇಂದು ನೀ ಮುಗಿಸು 45ಮನ ಮುಟ್ಟಿ ಸ್ಮರಣೆ ಸಂತತ ಮಾಡಬೇಕುಮನಸು ಓಡಲು ಮತ್ತೆ ಜಗ್ಗಿ ತರಬೇಕುಅನುಭವವು ಬಂದಂತೆ ಮನಸು ಕರಗುವದುಮನಸು ಕರಗಿದರೆ ವಾಸನೆಯು ಅಳಿಯುವದು 46ಎಲ್ಲ ಕಡೆಯಲಿ ಇರುವನೊಬ್ಬನೇ ದೇವಎಲ್ಲ ನಾಮಗಳಿಂದಲೂ ಕರೆಸಿಕೊಳುವಾಯಾವ ಬೇಕಾದ ಹೆಸರಿನ ದೇವರನ್ನುಭಕ್ತಿುಂ ಭಜಿಸಿದರೆ ಬಂದು ಪೊರೆಯುವನು47ಧನಕನಕದಾಶೆಯನು ತೊರೆದವನು ಸಂತವನಿತೆಯರ ಬಲೆಯೊಳಗೆ ಸಿಗದವನು ಸಂತಮನದಿ ಮಹಾದೇವನನು ಕಂಡವನು ಸಂತಜನರೊಳು ಜನಾರ್ಧನನ ನೋಡುವನು ಸಂತ 48ಘೋರ ಯುದ್ಧದಿ ನರನ ರಥವ ನಡೆಸಿಹನುಸೀರೆಯಾಗುತ ಸತಿಯ ಮಾನ ಉಳಿಸಿದನುನೀರಿನವನಾಗಿ ಎಂಜಲವ ಬಳಿದಿಹನುಪರಮ ಪುರುಷನ ಕರುಣೆಗೆಣಿಯು ಉಂಟೇನು 49ಹೃದಯ ದೊಳಗಿದ್ದ ಶ್ರೀಹರಿಯ ಮರೇತುಕಡುದ್ಯೆನ್ಯ ಬಿಡಬೇಡ 'ಷಯದೊಳು ಬೆರೆತುಕಾಮಧೇನು'ನ ಕೆಚ್ಚಲೊಳಿದ್ದ ನೀನುಅಮೃತವನು ಬಿಟ್ಟು ರತ್ನವನು ಕುಡಿವೆಯೇನು 50ಸರ್ವ ದುಃಖಗಳು ನಿರ್ಮೂಲವಾಗುವದುಸಂಸಾರ ಪರಮಾರ್ಥ ಕೂಡಿ ನಡೆಯುವವುಪ್ರಭು ರಾಮಚಂದ್ರನ ಪ್ರಸಾದ ಮ'ಮೆಯನುಪಠಿಸಿ ಆಚರಿಸಿದರೆ ಸುಖದಿ ಬಾಳುವನು 51ಜಯಜಯತು ಆರ್ಯ ಭೂಮತೆ 'ಖ್ಯಾತೆಜಯತು ಭಾರತಮಾತೆ ಸರ್ವಜನ ತ್ರಾತೆಜಯಜಯತು ಜಯ'ಂದ ಜನನಿ ಕಡು ಕರುಣಿಜಯ ಜಯತು ಸರ್ವ ಸಂಸ್ಕøತಿಯ ಮುಕುಟಮಣಿ 52ಅತಿಥಿ ಬಂದರೆ ಮನ ದೊಡ್ಡದಿರಲಿಒಣಹೆಮ್ಮೆ ಬೇಡ ಆದರದ ಮಾತಿರಲಿಮಾತು ಕೃತಿ ನಿಜ ಪ್ರೇಮ ತುಂಬಿರಲಿಊಟ ಉಪಚಾರದಿಂದ ಸಂತೋಷಗೊಳಲಿ 53ಗುಡಿಯೇಕೆ ಬೇಕು ಮನದೊಳಗೆ ಹರಿಯುಂಟುಅದರ ಕದ ತೆಗೆಯ ಪ್ರತಿಬಂಧವೇನುಂಟುಗುಡಿಯೊಳಗೆ ಹೊಗಿಸಬೇಕೆಂಬುವುದು ಛಲವುಛಲ 'ದ್ದರೇನದಕೆ ಆಧ್ಯಾತ್ಮ ಬೆಲೆಯು54ಮನ ಪ'ತ್ರ'ದ್ದರೆ ದೇವ ಒಲಿವಾಮನಸು ಅಪ'ತ್ರ'ದ್ದರೆ ದೇವ ಕುದಿವಾಮನ ಸುಪ್ರಸನ್ನ'ದ್ದರೆ ದೇವ ಒಲಿವಾಮನಸು ಧುಸುಮುಸು ಇದ್ದರೆ ದೇವ ಕುದಿವಾ 55ಮನಸು ನಿರ್ಭಯ'ದ್ದರಾ ದೇವ ಒಲಿವಾಮನಸು ನಿರ್ಮಲ'ದ್ದರಾ ದೇವ ಒಲಿವಾಮನಸು ನಿರಹಂಕಾರವಾದಾಗ ಬರುವಾಮನಸು ನಿಷ್ಕಪಟವಾದರೆ ಬಂದು ಪೊರೆವಾ 56ಅನ್ಯರಿಗೆ ನಿನ್ನ ಭಾರವ ಹಾಕಬೇಢನಿನ್ನ ಯೋಗ್ಯತೆ'ುೀರಿ ಭಾರ ಹೊರಬೇಡನಿನ್ನ ಮನೆತನದ ಜಗಳ ಬೈಲಿಗಿಡಬೇಡಹೆಣ್ಣು ಮಕ್ಕಳ ಮೇಲೆ ಕ್ಕೆ-ಎತ್ತಬೇಡ 57ನಿನ್ನ 'ರಿಮೆಯನು ನೀ ಹೇಳಬೇಡಅನ್ಯರನು ಕೀಳೆಣಿಸಿ ಮಾತಾಡಬೇಡಕಣ್ಮುಚ್ಚಿ ಇನ್ನೊಬ್ಬರನುಕರಣೆ ಬೇಡನಿನ್ನ ಸಂಸ್ಕøತಿಯ ವೈಶಿಷ್ಟ್ಯ ಬಿಡಬೇಡ 58ಸು'ಚಾರದಿಂದ ಧ್ಯೇಯವ ಗೊತ್ತುಪಡಿಸುಗೊತ್ತುಪಡಿಸಿದ ಧ್ಯೇಯವನ್ನು ನಿತ್ಯಸ್ಮರಿಸುಮುಟ್ಟಲಾ ಧ್ಯೇಯವನು ಶಕ್ತಿ ಸಂಗ್ರ'ಸುಶಕ್ತಿಯನು ಚಾತುರ್ಯದಿಂದ ನೀ ಬಳಿಸು 59ಸಮಯ ಪ್ರತಿಕೂಲ'ರೆ ವೈರಿಗಳ ನ'ುಸುನ'ುಸಿ ಒಳಹೊಕ್ಕವರ ಬಲವ ಹದಗೆಡಿಸುಶ್ರಮಪಟ್ಟು ಅ'ುತಬಲ ಗುಪಿತದಿಂ ಬೆಳಿಸುಸಮಯ ಸಾಧಿಸಿ ದುಷ್ಟಜನರನು ಸಂಹರಿಸು60ದೇಹದೊಳು ನೀನುಂಟು ದೇಹ ನೀನಲ್ಲನಾ ಎಂಬ ಜ್ಞಾನ ನಿನಗುಂಟು ಆದಕಿಲ್ಲನೀನು ಈ ದೇಹದಿಂದ ಹೊರಬೀಳಲಾಗಹೆಣವೆಂದು ಕರೆಯುವರು ದೇಹವನು ಬೇಗ 61ಹುಟ್ಟುವವ ನೀನಲ್ಲ ಹುಟ್ಟುವದು ದೇಹಬೆಳೆಯುವವ ನೀನಲ್ಲ ಬೆಳೆಯುವದು ದೇಹಸಾಯುವವ ನೀನಲ್ಲ ಸಾಯುವದು ದೇಹರೂಢಿಯೊಳು ನಿನಗಿದನು ಹಚ್ಚುವದು ಮೋಹ62ಖೋಡಿ ಮನವನು 'ಡಿದು ಸಾಧು ಮಡುವದುಸಾಧು ಮಾಡುತ ನಾಮ - ಘೋಷ ಹಚ್ಚುವದುಓಡಿ ಹೋಗಲು ಮತ್ತೆ ಎಳೆದೆಳೆದು ತಂದುಬೋಧಿಸುತ ನಾಮ ಜಪದೊಳು ಸೇರಿಸೆಂದು 63ಒಮ್ಮೆ ಹರಿನಾಮದೊಳು ಮನಸು ಸೇರಿದರೆಅದಕೆ ಆಗುವ ಸುಖವು ಆ ರುಚಿಯು ಬೇರೆಆ ರುಚಿಯ ಆ ಸುಖವು ಹತ್ತಿದರೆ ಮನಕೆತಿರುಗಿ ಎಂದಿಗೂ ಅದು ಹೋಗದದು 'ಷಯಸುಖಕೆ64ಚಿತ್ತ ಸ್ಥಿರ'ಲ್ಲದಿರೆ ಬುದ್ಧಿ ಸ್ಥಿರ'ಲ್ಲಬುದ್ಧಿ ಸ್ಥಿರ'ಲ್ಲದಿರೆ ಭಾವನೆಯು ಇಲ್ಲಭಾವನೆಯು ಇಲ್ಲದಿದ್ದರೆ ಶಾಂತಿುಲ್ಲ ಶಾಂತಿಯೇ ಇಲ್ಲದವ ಸುಖವೇನು ಬಲ್ಲ 65ಅನುಕೂಲ ಮತ ಮಾತ್ರ ನೀ ಎಣಿಸಬೇಡಪ್ರತಿಕೂಲ ಮತ ಉಪೇಕ್ಷೆಯ ಮಾಡಬೇಡಅನುಕೂಲ ಪ್ರತಿಕೂಲಗಳನು ತಿಳಿ ತಿಳಿದುಏನಾದರೊಂದು ಸಾಹಸ ಕಾರ್ಯ ಮಾಡು 66ಉದ್ಯೋಗದೊಳು ಸದಾ ಆನಂದ ಉಂಟುಉದ್ಯೋಗದೊಳಗೆ ಲಕ್ಷ್ಮಿಯ ವಾಸವುಂಟುಉದ್ಯೋಗವನು ಮಾಡಿ ದೇವರನು ಬೇಡುಉದ್ಯೋಗ ಬಿಟ್ಟು ಕುಳಿತರೆ ನಿನಗೆ ಕೇಡು 67ದೀರ್ಘ ಯೋಚನೆಯ ಮಾಡುತ ನೀ ಕೂಡಬೇಡಯೋಗ್ಯ ಮುಂಬೆಳಕು ಇಲ್ಲದೆ ಧುಮುಕಬೇಡ'ಗ್ಗಿ ಮೈಮರೆಯದಿರು ದೈವ ತೆರೆದಾಗಕುಗ್ಗಿ ಎದೆ ಒಡೆಯದಿರು 'ಧಿ ಕಾಡುವಾಗ 68ದೈವವನಕೂಲ'ದ್ದಾಗ ಎಚ್ಚರಿಕೆಗರ್ವ ಸೇರುವದು ತಿಳಿಯದಲೆ ಎಚ್ಚರಿಕೆಗರ್ವದಿ ಸ್ಮøತಿಗೆ ಸಮ್ಮೋಹವೆಚ್ಚರಿಕೆಸಮ್ಮೋಹದಿಂದ ಸರ್ವನಾಶ ಎಚ್ಚರಿಕೆ 69ದೈವ ಯತ್ನಗಳ ಗತಿ ಗಹನವಾಗಿಹುದುಒಬ್ಬೊಬ್ಬರನುಭವವು ಒಂದೊಂದು ಇಹುದುವಾದದಿಂ ಬಗೆಹರಿಯದಂಥ 'ಷಯ'ದುಇದರ ಹದ ತಿಳಿದು ಯತ್ನವಂ ಮಾಡುವದು 70ಜೋಲು ಮೋರೆಯ ಹಾಕಿ ನೀ ಕೂಡಬೇಡಕಾಲು ಅಪ್ಪಳಿಸಿ ಕೆಲಸಕೆ ಹತ್ತಬೇಡಸ್ಟೈಲು ಉಡುಗೆಯ ಉಟ್ಟುಕೊಂಡೋಡಬೇಡಮೈಲಿಗೆಯ ಮನದಿಂದ ಜಪ-ಮಾಡಬೇಡ 71ಕಾರ್ಯ ಮಾಡುವ ಜನಕೆ ಮರ್ಯಾದೆ ಮಡುಬಾಯಬಡುಕ ಜನರ ಕೃತಿಯನು ತಿಳಿದು ನೋಡುಧೈರ್ಯದಿಂ ದುರ್ಜನರ ಕೂಡ ಹೋರಾಡುಆರ್ಯ ಸಂಸ್ಕøತಿಯ ಸಂರಕ್ಷಣೆಯ ಮಾತು 72ಗುಣ ಕರ್ಮಗಳ ನೋಡಿ ಮಾನವನು ಮಾಡುಒಣ ಜನ್ಮ ಜಾತಿ ತುಸು ದುರ್ಲಕ್ಷ ಮಾಡುಗುಣ ಕರ್ಮದಿಂದ ಅತಿ ನೀಚನಾದವನುಜನುಮ ಮಾತ್ರದಿ ಹೇಗೆ ಶ್ರೇಷ್ಠನಾಗುವನು73ತಪ್ಪು ಇಲ್ಲದೆ ಕ್ಷಮೆಯ ಬೇಡುವವ ಮೂರ್ಖತಪ್ಪಿದರು ಒಪ್ಪಿದವನು ಕಡುಮೂರ್ಖತಪ್ಪು ಆಗುವದು ಮಾನವನ ಸಹಜಗುಣತಪ್ಪು ಒಪ್ಪುತ ತಿದ್ದಿಕೊಳ್ಳುವದು ಸುಗುಣ 74ನಿನ್ನ ಬಂಧುಗಳೆ ನಿನಗಾಗುವರು ಕೊನರೆಗೆಅನ್ಯರಿಗೆ ಆ ಕರುಳು ಬರುವದು ಹೇಗೆನಿನ್ನ ಬಂಧುಗಳೆಲ್ಲ ಮೂರ್ಖರೆನಬೇಡಅನ್ಯರಿಂದ ನೀ ಮೂರ್ಖನೆನಿಸಿಕೊಳಬೇಡ 75ಜನರ ಮನೆಗಳು ಬಹಳ ದಿವಸ ಇರಬೇಡಇರುವದೇ ಆದರವರಿಗೆ ಭಾರ ಬೇಡಅರಿತವರ ಕೆಲಸಗಳ ಮನೆಯಂತೆಮಡುಗೃಹದ ರೀತಿರಿವಾಜು ಕೆಡದಂತೆ ನೋಡು 76ದುಡ್ಡು ಇದ್ದಾಗ ಎಲ್ಲರ ಪ್ರೀತಿಯುಂಟುದುಡ್ಡು ಕಳಕೊಂಡು ಹೋದರೆ ಮೋರೆಗಂಟುದುಡ್ಡಿನಿಂದಲೆ ಜನರ ಬೆಲೆ ಕಟ್ಟಬೇಡದೊಡ್ಡ ಗುಣಗಳನರಿತು ನ'ುಸದಿರಬೇಡ 77ಧನದ 'ಷಯದಿ ಖಂಡ ತುಂಡ ಇರಬೇಕುಮನಬಿಚ್ಚಿ ಮೊದಲಿಗೆ ಮಾತಾಡಬೇಕುಒಣ ಮಬ್ಬುತನ ಮನದಮಂಡಿಗೆಯು ಬೇಡಕೊನೆಗೆ ಗುಣಗುಟ್ಟುತಲಿ ಹಳಹಳಿಸಬೇಡ 78ಯಂತ್ರಮಯ ಜೀವನದ ಯುಗವು ನಡೆದಿಹುದುಸ್ವಾತಂತ್ರ್ಯವೆಲ್ಲಿ ಬಡವರಿಗೆ ಉಳಿದಿಹುದುದ್ರವ್ಯಮಯವಾದ ವ್ಯವಹರ ಸಾಗಿಹುದುದೇವ ಧರ್ಮಕೆ ಅರ್ಧಚಂದ್ರ ಬಂದಿಹುದು 79ತಾಯ್ತನದ ಸುಖಕೆ ಸರಿಯಾದ ಸುಖ'ಲ್ಲತಾಯ್ತನದ ಕರುಳಿಂಗೆ ಬೆಲೆಯಂಬುದಿಲ್ಲತಾುಗಿಂದಧಿಕ ದೈವತವು ಬೇರಿಲ್ಲತಾಯ್ - ಸೇವೆಗಿಂದಧಿಕ ಪುಣ್ಯಾವೆ ಇಲ್ಲ 80ಚನ್ನಾಗಿ ಸಂಸಾರ ಮಾಡಬಲ್ಲವನುಸುಲಭದಿಂ ಪರಮಾರ್ಥವನು ಸಾಧಿಸುವನುಸಂಸಾರದೊಳಗಿದ್ದು ಸನ್ಯಾಸಿಯೆನಿಸುಸನ್ಯಾಸಿಯಾಗಿ ಸಂಸಾರದೊಳು ಈಸು81ಮನೆಯಲ್ಲಿಯೇ ಸ್ವರ್ಗ ಮನೆಯಲ್ಲಿಯೇ ನರಕಜಾಣರಿಗೆ ತಿಳಿಯುವದು ನೋಡಿದರೆ ಗಮಕಜಾಣ ಪ್ರೇಮಳ ಪತಿಯಮನೆ ಸತಿಗೆ ಸ್ವರ್ಗಕೋಣ ಕರ್ದಮ ಕಟುಕ ಪತಿುರಲು ನರಕ 82ಪತಿಯ ಮನ ಒಲಿಸಿ ಕೋತಿಯ ತೆರದಿ ಕುಣಿಸಿಅತ್ತೆ ಮಾವರು ಬಂಧುಬಳಗವನು ಹೊರನುಗಿಸಿಸ್ವೇಚ್ಛೆುಂ ಎದೆಮೆಟ್ಟಿ ಬೇರಿರುವ ಸೊಸೆಸೊಸೆಯಲ್ಲ ರಕ್ಕಸಿಯು ಕಿ'ಹೊಕ್ಕ ತೊಣಸಿ83ಸರ್ವದಾ ಸತ್ವಗುಣಿ ಶಾಂತ ನಿರುತಿಹನುರಾಜಸನ ಶಾಂತಿುಂ ಧಡಪಡಿಸುತಿಹನುಕಿರಿಕಿರಿಯು ತಾಮಸಿಗೆ ಬಿಟ್ಟುರುವದಿಲ್ಲಾತ್ರಿಗುಣಗಳ ದಾಟದಿದ್ದರೆ ಮೋಕ್ಷ'ಲ್ಲಾ 84ಅನ್ನದೊಳು ಮುಖ್ಯ ಸಾತ್ವಿಕ ಗುಣವು ಬೇಕುಸಂಪಾದನೆಯ ಮಾರ್ಗ ಸರಳ'ರಬೇಕುಸಂಸರ್ಗ ಸಂಸ್ಕಾರ ಸುಷ್ಟ'ರಬೇಕುಸಾತ್ವಿಕಾನಂದ ಮನದಿಂದ ಉಣಬೇಕು 85ಮೂಲ ಮನ'ಹುದು ಮೂರರೊಳೊಂದು ಪಾಲುಸನ್ನಿವೇಶಗಳಿಂದ ಮತ್ತೊಂದು ಪಾಲುತಿನ್ನುವಾ ಅನ್ನದಿಂದ ಉಳಿದೊಂದು ಪಾಲುಮೂರು ಕೂಡಿದ ಮನವೆ ನಿನಗೆ ಹರಿಗೋಲು86ಪ್ರಾರಬ್ಧವನುಭ'ಸಿ ತೀರಿಸಲು ಬೇಕುಅಪರೋಕ್ಷದಿಂದ ಸಂಚಿತ ಕಳಿಯಬೇಕುಸರ್ವದಾ ನಿರಪೇಕ್ಷ ಸತ್ಕರ್ಮ ಬೇಕುನಿರಭಿಮಾನದಿ ಕರ್ಮದ ಬೀಜ ಸುಡಬೇಕು87ದಯೆಯು ಧರ್ಮದಮೂಲ ದಯವಂತನಾಗುಭಯವು ದುಃಖದಮೂಲ ನಿರ್ಭಯನು ಆಗುಲೋಭ ಪಾಪದ ಮೂಲ ನಿರ್ಲೋಭಿಯಾಗುತ್ಯಾಗ ಪುಣ್ಯದ ಮೂಲ ತ್ಯಾಗಿ ನೀನಾಗು 88ನಿನ್ನ ಉದ್ಧಾರವನು ನೀ ಮೊದಲ ಮಾಡುಮನೆತನದ ಉನ್ನತಿಯಕಡೆಗೆ ನೀ ನೋಡುನಿನ್ನ ನೆರೆಹೊರೆ ಜನರ ಕಲ್ಯಾಣಮಾಡುಆಮೇಲೆ 'ಶ್ವದದ್ಧಾರ ಮಾತಾಡು 89ಹಳೆಯದಿದ್ದರೆ ಎಲ್ಲ ಒಳಿತು ಎನಬೇಡಹೊಸದೆಂಬ ಮಾತ್ರದಿಂದಲೆ ಹಳಿಯಬೇಡಒಳಿತು ಕೆಡಕುಗಳು ಎಲ್ಲದರಲ್ಲಿ ಇಹವುತಿಳಿದು ಉಪಯೋಗಿಸಿದರದು ಜಾಣತನವು 90ಕಾಲಮ'ಮೆಯ ಕಷ್ಟ ಬಂದಿತೆನಬೇಡಕಾಲಕ್ಕೆ ಹೆಚ್ಚಿನ ಮಹತ್ವ ಕೊಡಬೇಡಕಾಲ ನಿರ್ಮಾಣ 'ರಿಯರ ಕೈಯ್ಯೊಳಿಹುದುಎಂಥ 'ರಿಯರು ಅಂಥ ಕಾಲ ಬರುತಿಹುದು 91'ರಿಯರಾಚರಣಿಯಂ ಮನೆತನದ ಬೆಳಕು'ರಿಯರಾಚರಣೆುಂ ಮನೆತನಕೆ ಹುಳುಕು'ರಿಯರೇ ಕಾರಣರು ಮನೆಯ ಸುಸ್ಥಿತಿಗೆ'ರಿಯರೇ ಕಾರಣರು ಮನೆಯ ದುಸ್ಥಿತಿಗೆ 92ದೇಹವೇ ರಥವು ಸಾರಥಿಯು ಪರಮಾತ್ಮಜೀವ ಅರ್ಜುನ ಧರ್ಮ ಸಮ್ಮೂಡ ಆತ್ಮಸರ್ವ ಭಾವದಿ ಶರಣುಹೊಗು ಸಾರಥಿಗೆಸಾರಧಿಯು ಮುಟ್ಟಿಸುವ ನಿನ್ನ ಸದ್ಗತಿಗೆ 93ಜ್ಞಾನಪೂರ್ವಕ ''ತ ಕರ್ಮಗಳ ಮಾಡುಚಿತ್ತಶುದ್ಧಿಗೆ ಕರ್ಮಸಾಧನವು ನೋಡುಉದ್ದೇಶ ಪರಿಣಾಮಗಳ ತೂಕ ಮಾಡುಮೂಢತನ ರೂಢಿಗಳನರಿತು ಬಿಟ್ಟುಬಿಡು 94ಬಾಲಭಾವದಿ ದೇವರೊಳು ಹಟವಮಾಡುಬಾಲಭಾವದಿ ದೇವರೊಳು ಮಮತೆಮಾಡುಬಾಲಭಾವದಿ ದೇವರಿಗೆ ಬೇಡಿಕಾಡುಬಾಲಭಾವದಿ ನಿನ್ನ ಸರ್ವಸ್ವ ನೀಡು 95ಮಾತೃಭಾವದಿ ಅವನ ತೊಡೆಯ ಮೇಲಾಡುಮಾತೃಭಾವದಿ ನೀನು ವಾತ್ಸಲ್ಯ ಮಾಡುಮತೃಭಾವದಿ ತೂಗಿ ತೊಟ್ಟಿ ಮುದ್ದಾಡುಮಾತೃಭಾವದಿ ಬಿದ್ದು ಕಿರಿಕಿರಿಯಮಾಡು 96ಸಖ್ಯಭಾವದಿ ಹಾಲು ಮೊಸರೆರೆಯ ಬೇಕುಸಖ್ಯಭಾವದಿ ಬೆಣ್ಣೆ ಬಾಯ್ತುಂಬ ಬೇಕುಸಖ್ಯಭಾವದಿ ಕೊಳಲಿನೊಳು ಕುಣಿಯಬೇಕುಸಖನೆಂದು ಗೋಪಿಯಂದದಿ ಕುಣಿಸಬೇಕು 97ನಿನ್ನೊಳಗೆ ಆತನನು ನೀ ನೋಡಬೇಕುಅವನೊಳಗೆ ಸರ್ವವನು ನೀ ಕಾಣಬೇಕುತನ್ನತನ ಮರೆತು ಅವನೊಳು ಬೆರೆಯಬೇಕುಅವನ ಸೂತ್ರದ ಬೊಂಬೆ ನೀನಾಗಬೇಕು 98'ುೀನನಾದರೆ ಅವನ ಕಣ್ಣು ನೀನಾಗು ಕೂರ್ಮನಾದಾಗವನ ಬೆನ್ನು ನೀನಾಗುವರಾಹರೂಪದ ಹರಿಯ ಕೋರೆ ನೀನಾಗುನರಹರಿಗೆ ನೀ ಹದನವಾದ ನಖವಾಗು 100ವಟುವಾಮನಗೆ ಪಾದರಕ್ಷೆ ನೀನಾಗುದುಷ್ಟ ಸಂಹಾರಕನ ಪರಶು ನೀನಾಗುಅಟ'ವಾಸಗೆ ಬಿಲ್ಲುಬಾಣ ನೀನಾಗುದಿಟ್ಟ ಗೊಲ್ಲನ ಕರೆದ ಕೊಳಲು ನೀ ನಾಗು 101ಬುದ್ಧನಾದರೆ ಬುದ್ಧಿವಂತ ನೀನಾಗುಕಲ್ಕಿಯಾದರೆ ಚಲುವ ಕುದುರೆ ನೀನಾಗುಎಲ್ಲಿದ್ದರೂ ಅವನ ನೆರಳು ನೀನಾಗುಪ್ರಹ್ಲಾದ ದ್ರುವ ಅಂಬರೀಷ ನೀನಾಗು 102ಧನದೊಳಗೆ ಧನ ತವೋಧನನು ನೀನಾಗುಭಾಗ್ಯದೊಳು ವೈರಾಗ್ಯ ಭಾಗ್ಯವಂತನಾಗುಇಂದ್ರಿಯಂಗಳ ಜಯದಿ ನೀ ಶೂರನಾಗುಪಂಡಿತನು ತತ್ವದಾಚರಣೆಯೊಳು ಆಗು103ಸ್ವಾತಂತ್ರವೇ ಸ್ವರ್ಗ ಪರತಂತ್ರ ನರಕಮಾತೃಭೂ'ುಯ ಸೇವೆ ಮಡದವ ಶುನಕಪತಿತರುದ್ಧಾರ ಮಾಡುವದು ಸದ್ಧರ್ಮಪತಿತರನು ತುಳಿಯುವದು ಸೈತಾನಕರ್ಮ 104ಸಂಸಾರ ಸಾಗರವ ದಾಟಿಸಲು
--------------
ಭೂಪತಿ ವಿಠಲರು
ಜೀವನ್ಮುಕ್ತನೆ ಇದ ಮಾಡು ನಿನಗುಂಟೆ ಜೋಡುದಿವಸದಿಂದಲಿ ದೃಢನಾಗಿ ಸಾಧಿಸುಕೇವಲ ಶಿವನೀನಾಗುವಿ ಆಗುವಿ ಪ ಏರಿಸು ವಾಯುವನು ಏರಿಸಿದ ಬಳಿಕಪೂರಿಸು ಕುಂಭವನು ಘಳಿಗಿಂತಿರಲಲ್ಲಿಭೇರಿಯ ಕಹಳಾರವ ಮೃದಂಗವಸಾರಿಯೆ ಕೇಳುತ ಶ್ರಮವನು ಹರಿಸುತ 1 ಆರು ನೆಲೆಗೆ ಮುಟ್ಟಿನಿಲ್ಲು ನಿಂತ ಬಳಿಕಕಾರಣ ಮೃಡನಾಳಪೊಕ್ಕು ಮರವೆಂದು ಕಳೆದಿಕ್ಕುವಾರಿಯಮೃತಧಾರೆ ತ್ರಿವೇಣಿಯಸಾರಸನದಿಯಲಿ ಮುಳುಗುತ ಮುಳುಗುತ 2 ಚಂದ್ರಮಂಡಲ ಎದುರಲಿ ಇರಲು ನೋಡುತಲಿಮುಂದೆ ಜೋತಿರ್ಮಯವಿರಲು ಬ್ರಹ್ಮವೆ ತಾನಿರಲುಇಂದ್ರಾದಿಗಳಿಗಳವಡದಿಹ ಸ್ಥಾನವಾನಂದದೆ ಎರೈ ಗುರು ಕೃಪೆಯಿಂದಲಿ 3 ಕರ್ಮ ಅವಿದ್ಯೆಯನುಳಿದುತಾಮರ ಸಾಧಿಪ ನಂದದಿ ಬೆಳಗುತ4 ನಿತ್ಯ ಆಗುವುದು ತಥ್ಯಾಯೋಗಿ ಜನಕೆ ಇದು ಪಥ್ಯಾ ಸತ್ಯವಿದು ಸತ್ಯಭೋಗೈಶ್ವರ್ಯದ ಮುಕ್ತಿಗಧಿಪತಿಯಾಗು ಚಿದಾನಂದ ಗುರು ನೀನಾಗಿಯೆ5
--------------
ಚಿದಾನಂದ ಅವಧೂತರು
ದೇವ ಗುರುಸ್ತುತಿ ಅಂಗವೇ ಶ್ರೀ ಮಹಾಂಗಿರೀಶ ಲಿಂಗವಾದುದು ಸಂಗ ಸುಖದ ದುರಿತವೆಲ್ಲ ಹಿಂಗಿ ಪೋದುದು ಪ ನಿರ್ಮಲಾತ್ಮ ಗುರುಕಟಾಕ್ಷ ಮರ್ಮಸಿಕ್ಕಿತು ಕರ್ಮ ಹರಿದು ಜ್ಞಾನಜ್ಯೋತಿ ಬೆಳಕು ಮಿಕ್ಕಿತು ಧರ್ಮ ತತ್ವದಮೃತವೆಂಬ ಶರಧಿಯುಕ್ಕಿತು ಪ್ರೇಮದಿಂದ ಪ್ರಕಟವಾದ ಬ್ರಹ್ಮ ದಕ್ಕಿತು 1 ಮಾಯೆಯಿಂದ ಮಮತೆಯೆಲ್ಲ ಸತ್ಯವಾದುದು ನ್ಯಾಯಪಥವ ತಿಳಿಯೆ ಸರ್ವ ಮಿಥ್ಯವಾದುದು ಸಾಯುತೊಡನೆ ಹುಟ್ಟುವುದರ ಭೀತಿಪೋಪುದು ಕಾಯದೊಳಗೆ ದಿವ್ಯಜ್ಯೋತಿ ಪಥ್ಯವಾದುದು 2 ಪರಶಿವಾತ್ಮಲಿಂಗವೆನ್ನ ಮನಕೆ ಸಾರಿತು ತುಂಬಿ ತುಳುಕಿ ಬೀರಿತು ಪರಮಾನಂದರಸದ ಲಹರಿ ಉಕ್ಕಿ ಹರಿಯಿತು 3
--------------
ಭಟಕಳ ಅಪ್ಪಯ್ಯ
ನಾಲ್ಕನೆಯ ಸಂಧಿ ಶಶಿಹಾಸ ಕಾಳಿಯನೊಲಿಸಿ ಪೊಸತಾಗಿ ತೋರಿತಾಶ್ಚರ್ಯ ಮಿಥ್ಯದ ವಿಷವನು ಉಣಿಸಿ ಕೃತ್ಯವೆ ಪಥ್ಯವಾದುದನು 1 ಕರುಣದ ಬಗೆಯ ತನುಜೆಯು ವಿಷಯು 2 ವಿಷಯೆ ಇದ್ದೆಡೆಗೆ ತಲೆಯ ತಗ್ಗುವಳು 3 ಪನ್ನಗಧರನ ಕೃಪೆಯಿಂದ ಸನ್ಮಾನವನೆ ಮಾಡಿದರು 4 ಜಾರಿದ ಕುರುಳನೋಸರಸಿ ಚಾರುಮಾಣಿಕಖಚಿತ ಪೀಠಕ್ಕೆ 5 ಹರಸಿ ಅಕ್ಷತೆಗಳನಿಟ್ಟು ಅರಸಿನಗಳ ತಿವರಿದರು 6 ಮಜ್ಜನ ತಂಬಿಗೆಯ ಲೋಕುಳಿಯ ಬೆನ್ನಲೋಕುಳಿಯನೆರೆದರು 7 ಮುಡಿಮೈಗಳನೋಸರಿಸಿ ದುಕೂಲವ ಬಡನಡುವಿಗೆ ಅಳವಡಿಸಿ ಜಡಿತದಾಭರಣಕರಡಿಗೆಯನು ತಂದಿಡುವರು ಇಕ್ಕೆಲದಲ್ಲಿ8 ಪಾಟಿಸಿ ತುರುಬನೋಸರಿಸಿ ಮಧ್ಯದಲಿ ಇಡುವರು 9 ಬೆಳಗುವ ಮೂಗುತಿಯ ಮಂದ ಗಮನೆಯರು ಹರುಷದಲಿ 10 ಮೂಗುತಿಯನಿಕ್ಕುವರು ಕೋಕಿಲಗಾನೆ ಕುಟಿಲಕುಂತಳದಾನೆ ಬಾಗಿದ ಬಾವುಲಿಗಳಲಿ11 ಇಟ್ಟರು ತೋಳ ಚಳರಕ್ಷೆ ಮಣಿಗಳ ಗಟ್ಟಿಕಂಕಣ ಚಳಕಗಳ ಬೆರಳ ಮುದ್ರಿಕೆಯು 12 ಕಡಗ ಮುತ್ತಿನ ಹತ್ತೆ ಕಡಗ ಎಡೆಪಣಿಚಿಂತಾಕದ ಸರಿಗೆಯ ತಂದಿಡುವರಂಗನಗೆ ನಾರಿಯರು 13 ಕಂಠೀಸರ ಬಿಲ್ಲಸರವು ಸರಸಿಜ ಗಂಧಿಯರೊಲಿದು 14 ಕಣಕಾಲುಗಳೆಸೆವ ಭಾವಕಿಯ ಸಾಲುಗಂಟೆ ಗೆಜ್ಜೆ ಸರಪಳಿ ಘಲಿರೆಂಬ ಕಾಲಂದಿಗೆಯನಿಡುವರು15 ಉಂಗುರ ಮುದ್ರಿಕೆಯಿಟ್ಟು ಮಂದಗಮನೆಗೆ ಒಪ್ಪಿದವು 16 ಸಾರಿಸಿ ಅಂಗಕ್ಕೆ ತಿಗುರಿ ಹಾವುಗೆಯನೆ ಮೆಟ್ಟಿಸಿದರು 17 ನಾರಿಯರೆಡಬಲದಲಿ ಕರವಿಡಿಯಲು ಚಾರುವದನೆ ಚಂಚಲಾಕ್ಷಿ ಬಂದೇರಿದಳೊಜ್ರದಂದಣವ 18 ಹೊತ್ತರು ಕಳಸ ಕನ್ನಡಿಯ ಹೊತ್ತಿದ ಕಾಳಂಜಿಯವರು 19 ಜಗಜಗ ಬೆಳಕುಗಳು ತುಂಬಿ ಜಗಜಗಿಸುವ ಜೊ‑ಂಪಿನ ಸುರೆಪಾನವು ನೆಗಪಿದವಗಣಿತವಾಗ20 ಉದುರು ಬಾಣ ಪುಷ್ಪಬಾಣ ಸದನದಿ ನಡೆತಂದಳಬಲೆ 21 ಹೊನ್ನಂದಣವನೆ ಇಳಿಸುವರು ಬಂದಳು ವಿವಾಹ ಮಂಟಪಕೆ 22 ಪಿಡಿದಳು ಮದನನರ್ಧಾಂಗಿ23 ಮುಕುಂದಗರ್ಪಿತವಾಗಲೆಂದು ಮಂದಾರಮಾಲೆ ಹಾಕಿದರು 24 ಪೊರೆಯಲಿ ತಂದು ನಿಲ್ಲಿಸಿದರು ಅರುಹಬೇಕೆಂದು ಕೇಳಿದರು 25 ಎನ್ನ ಪರಮ ಗುರುವೆಂದ 26 ಸಮಯವು ಲಗ್ನವೆಂದೆನುತ ಬ್ರಾಹ್ಮಣೋತ್ತಮರು ಹೇಳಿದರು 27 ಸಮಯವು ಲಗ್ನವೆಂದೆನುತ ಮೇಲೆ ಸೂಸಿದನು 28 ಶತಪತ್ರನಯನೆ ಸಮಗಾತ್ರೆ ಚಮತ್ಕಾರದಿಂದ ಸೂಸಿದಳು 29 ಸೊಡರುಗಳನೆ ಹಚ್ಚುವರು ಪಿಡಿದರು ಇತ್ತಂಡದಲ್ಲಿ 30 ಮುತ್ತೈದೆಯರೆಲ್ಲ ಅಲಂಕರದಿ ವಿಷಯೆ ಸಂಭ್ರಮದಿ 31 ಕೈಯಿಂದ ತೋರುವರು ಸುತ್ತ ನಕ್ಷತ್ರದ ಮಧ್ಯದಿ ಕಂಡಳು ಪ್ರತ್ಯಕ್ಷದಿಂದರುಂಧತಿಯ 32 ದಿನಕರ ಪ್ರತಿಬಿಂಬದಂತೆ ಅನುಕೂಲಗಳನೆ ಮಾಡಿದರು 33 ಮಾಡಿದನು ಶ್ರೀಪತಿಯ ಆಜ್ಯತಂಡುಲ ಆಪೋಶನೆ ಮಾಡಿದ ನಿರ್ಜರಪತಿ ಮೆಚ್ಚುವಂತೆ34 ಎಡೆಮಾಡಿ ಚಪ್ಪರದೊಳಗೆ ಭೋಜನಕೆ ಕುಳ್ಳಿರಿಸಿ 35 ಉಪ್ಪಿನೆÀಸರುಕಾಯಿ ಪರಿಪರಿ ಶಾಕವು ಹಪ್ಪಳ ಬಾಳಕಗಳನು ಅಪ್ಪಲು ಅತಿರಸ ಸೂಪಾಕ್ಷತಶಾಲ್ಯನ್ನ ಚಪ್ಪರದಲಿ ಬಡಿಸುವರು 36 ಕಾಮಿನಿಯರು ಕನಕದ ಹರಿವಾಣದಿ ಶಾವಿಗೆ ಪರಮಾನ್ನಘೃತವ ಭೂಮಕ್ಕೆ ಬಡಿಸಿದರಾಗ 37 ರಾಜೀವ ಮುಖಿ ತನ್ನ ಪತಿಗೆ ಮ- ಹಾಜನರೆಲ್ಲ ಉಂಡು ಕೈತೊಳೆದರು ಹೂಜಿಯಲ್ಲುದಕವ ಪಿಡಿದು38 ಸಂಭ್ರಮದಿಂದ ಸೂಸಿದರು39 ವಾಸುದೇವ ಕೃಷ್ಣ ಎನುತ ಮದನ ವಿಲಾಸದಿಂದಲಿ ನಿದ್ರೆಗೈದ 40
--------------
ಹೆಳವನಕಟ್ಟೆ ಗಿರಿಯಮ್ಮ
ನಿತ್ಯ ನಿಜ ಘನ ಸದಾ ಪಾದ ಧ್ರುವ ನಿತ್ಯ ಅರಿಯಬೇಕಗತ್ಯ ಶರಣ ಜನರಿಗೆ ಸತ್ಯ ಪರಮಪಥ್ಯ 1 ಗುರುಭಜನಿಯ ಕೀಲು ಅರಿತರೊಂದೇ ಮೇಲು ಸಾರಸುಪಥಸಲ್ಲು ತ್ವರಿತಗೆಲ್ಲು 2 ಮುಕ್ತಿಗಿಂತಧಿಕ ಭಕ್ತಿ ಪರಮ ಸುಖ ನಿತ್ಯ ಮಹಿಪತಿಗಿದೆ ಪ್ರಾಣಪದಕ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪರಮಾನುಗ್ರಹ ಮಾಡು -ಈ ತರಳನ ದಯದಿಂ ನೋಡು ಪ ನರಹರಿ ನೀನಲ್ಲವೆ ಕರುಣಾಳು ಅ.ಪ ಅನ್ನ ಸೇರಲಿಲ್ಲವಂತೆ -ಮಲಗಿ ನಿನ್ನಿಂದಲಿ ಹೀಗಿಹನಂತೆ ಘನ್ನಮಹಿಮ ನಿನ್ನವರಿಗೆಲ್ಲ -ಈ ಬನ್ನ ನ್ಯಾಯವೆ ಪ್ರಸನ್ನ ನೃಸಿಂಹ 1 ತುಡುಗಾಟಗಳಾಡಿ ಬಳಲಿ -ಈ ಹುಡುಗ ಮನೆ ಮನೆಯ ತೊಳಲಿ ಕಡುಭೀತಿಯ ಹೊಂದಿರುವ ನಾವು ನಿ- ನ್ನೊಡವೆಯಲ್ಲವೆ ಒಡೆಯ ನರಹರಿಯೆ 2 ಔಷಧ ಪಥ್ಯಗಳೇಕೆ -ನಿ ರ್ದೋಷ ನೀನೊಳಗಿರಲಿಕ್ಕೆ ಶೇಷಶಯನ ಗುರುರಾಮವಿಠಲ ಪÉೂೀಷಿಸುವನು ನೀನೆ ನೀನೆ ನಿಜ3
--------------
ಗುರುರಾಮವಿಠಲ
ಪ್ರಸನ್ನ ಶ್ರೀ ನರಸಿಂಹ (ಪ್ರಹ್ಲಾದ ಚರಿತೆ)] ಪ್ರಥಮ ಅಧ್ಯಾಯ - ಹಿರಣ್ಯಕಶಿಪು ಪೂರ್ವ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ತೋಯಸ್ಥ ಪತ್ರಸ್ಥ ತೋಯಜಾಲಯಾ ಸ್ತುತ್ಯ ಅಂಡ ಸ್ರಷ್ಟಾ ಸರ್ವಸ್ಥ ಅಚ್ಯುತಾನಂತ ಗೋವಿಂದ ನೀ ಸಜ್ಜನರ ಭಯ ನಿವಾರಣ ಮಾಳ್ಪಿ ತೋರಿ ಆಗಾಗ 1 ಪ್ರಳಯ ಜಲಚರ ಶೈಲಧರ ಧರೋದ್ಧರ ನಮೋ ಬಾಲಕಗೆ ಒಲಿದು ಬಲಿಯಲಿ ದಾನ ಕೇಳಿ ಖಳ ಕುಪಾಲರ ಸದೆದು ಜಲಧಿಯ ಬಂಧಿಸಿದ ಲಲನೇರ ರಂಜಿತ ಶಿಶು ಶಂಭಳದಿ ತೋರ್ವಿ 2 ಏಕಾತ್ಮ ಶ್ರೀ ವಿಷ್ಣುಲೋಕಕ್ಕೆ ಬರಲು ದಿಗ್ವಾಸಸ ಶಿಶುರೂಪ ಆ ಮುನಿವರರ ಲೆಕ್ಕಿಸದೇ ತಡೆದರು ದ್ವಾರಪಾಲಕರು 3 ಜಯವಿಜಯರೆಂಬ ಆ ದ್ವಾರಪಾಲಕರಿಗೆ0 ಮಾಯೇಶ ಹರಿ ಪ್ರಿಯತರರು ಮುನಿವರರು ಈಯಲು ಶಾಪವ ಆ ವಿಷ್ಣು ಪಾರ್ಶದರು0 ದೈತ್ಯಜನ್ಮವ ಹೊಂದಿದರು ಪತನವಾಗಿ 4 ಸುತಪೋನಿಧಿ ಕಶ್ಯಪ ತೇಜೋಲ್ಬಣದಿಂ ದಿತಿದೇವಿ ಜಠರದಲಿ ವಿಷ್ಣು ಪಾರ್ಶದರು ಪತಿತ ಆ ಜಯ ವಿಜಯರು ಪ್ರವೇಶಿಸಿದರು ದಿತಿ ಹಡೆದಳು ಗಂಡು ಮಕ್ಕಳೀರ್ವರನು 5 ದಿತಿದೇವಿ ಅಗ್ರಸುತ ಹಿರಣ್ಯಕಶಿಪು ಜಯ ದಿತಿ ಅವರಸುತ ವಿಜಯನೇ ಹಿರಣ್ಯಾಕ್ಷ ಉಪಟಳ ಕೊಟ್ಟನು ಈ ಧರೆಯ ಅಬ್ಧಿಯ ಕೆಳಗೆ ಅಡಗಿಸಿದ 6 ಸುರಸುಜನ ಕ್ಷೇಮಾರ್ಥ ಪದುಮಜ ಪ್ರಾರ್ಥಿಸಲು ಕರದಿಂದ ಹೊಡೆದು ಹಿರಣ್ಯಾಕ್ಷನ ಕೊಂದು ಧರೆಯ ಲೀಲೆಯಿಂದ ಮೇಲೆತ್ತಿತಂದಿ ವರಾಹ ಹರಿ ನೀನು 7 ಜಯ ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 -ಇತಿ ಪ್ರಥಮಾಧ್ಯಾಯ ಸಂಪೂರ್ಣಂ - ದ್ವಿತೀಯ ಅಧ್ಯಾಯ ಹಿರಣ್ಯಕಶಿಪು ವರ ವೃತ್ತಾಂತ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಮೂರ್ಜಗದ ದೊರೆ ಹರೇ ನೀ ತನ್ನ ತಮ್ಮನ ಭಂಜಿಸಿದೆ ಎಂದು ಕಡುಕೋಪಗೊಂಡು ದುರ್ಜನ ದಾನವ ವಂದಿತ ಹಿರಣ್ಯಕನು ರಜಸ್ತಮೋಚ್ಛದಿ ದ್ವೇಷ ಮಾಡಿದನು ನಿನ್ನಲ್ಲಿ 1 ಶೂಲದಿಂ ಅಚ್ಯುತನ ಕುತ್ತಿಗೆ ಕತ್ತರಿಸಿ ಗಳರುಧಿರ ತರ್ಪಣ ಕೊಡುವೆ ಎನ್ನುತ್ತ ಖಳ ದೈತ್ಯ ಪ್ರಮುಖರಿಗೆ ಹೇಳಿದನು ವೈಷ್ಣವ ಸ್ಥಳ ದ್ವಿಜ ಗೋ ಭಕ್ತರನ್ನ ತರಿ ಎಂದ 2 ಗರ್ಜಿಸುತ ದೈತ್ಯರು ಪುರ ಗ್ರಾಮ ಆಶ್ರಮ ವ್ರಜಕ್ಷೇತ್ರ ದಹಿಸÀಲು ಹಿರಣ್ಯಕಶಿಪು ಅಜೇಯಾಜರಾಮರತ್ವವ ಅಪ್ರತಿ ಮುಖ್ಯ ರಾಜತ್ವ ಹೊಂದಲು ತಪಸ್ಸು ಮಾಡಿದನು 3 ಊಧ್ರ್ವದಲಿ ಬಾಹುಗಳ ನಭದಲಿ ದೃಷ್ಟಿಯು ಪಾದಾಂಗುಷ್ಟ ಮಾತ್ರದಿ ನಿಂತು ತಪವ ಗೈದನು ಆ ತಪೋಧೂಮಾಗ್ನಿ ಪೀಡಿತ ತ್ರಿದಿವರು ಮೊರೆ ಇಟ್ಟರು ಬ್ರಹ್ಮನಲ್ಲಿ 4 ಪದುಮಭವ ಭೃಗು ದಕ್ಷಾದಿಗಳೊಡೆಯೈದು ದೈತ್ಯೇಶ್ವರ ಹಿರಣ್ಯಕನ ಆಶ್ರಮವ ಭದ್ರಂತೇ ತಪಸಿದ್ಧಿ ಆಯಿತು ವಶೀಕೃತನಾದ ಉತ್ತಿಷ್ಠೋತ್ತಿಷ್ಠ ವರ ಕೊಡುವೆನು ಎಂದ 5 ಬ್ರಹ್ಮನ್ನ ನೋಡಿ ಹಿರಣ್ಯಕನು ಸನ್ನಮಿಸಿ - ಬ್ರಹಾಂತರ್ಗತ ಹರಿ ವಿವಕ್ಷಿತ ಗುಣಗಳ ಬ್ರಹ್ಮ ಹರುಷದಿಂದಲಿ ಸಮ್ಯಕ್ ಕೀರ್ತನೆ ಮಾಡಿ ಆ ಹಂಸವಾಹನನ ವರಗಳ ಬೇಡಿದನು 6 ಸರೋರುಹಾಸನ ಸೃಷ್ಟ ಸರ್ವಭೂತಂಗಳು ಮೃಗ ಪ್ರಾಣ ಉಳ್ಳವು ಇಲ್ಲದವು ಹೊರ ಒಳಗೆ ಭೂಮ್ಯಾಂಬರ ದಿವಾ ರಾತ್ರಿಯು ಸುರಾಸುರ ಮೃತ್ಯು ಮಾ ಭೂನ್ಮ್‍ಮ ಎಂದ 7 ಏಕಪಥ್ಯವು ಅಪ್ರತಿ ಶಕ್ತಿಮತ್ಯವವು ಲೋಕಪಾಲಕರಂತೆ ಬಲವು ಮಹಿಮೆಗಳು ಯೋಗಿ ತಪಸ್ವಿಗಳಂತೆ ಸಿದ್ಧಿಗಳು ಸರ್ವವು ಬೇಕು ತನಗೆಂದು ವರ ಬೇಡಿದ ಬ್ರಹ್ಮನ್ನ 8 ಶತಧೃತಿಯು ಈ ದುರ್ಲಭ ವರಗಳನ್ನಿತ್ತು ತಾ ತೆರಳಿದನು ದೈತ್ಯನಿಂ ಪೂಜೆಗೊಂಡು ಭ್ರಾತೃವಧ ಅನುಸ್ಮರಿಸಿ ಹರಿದ್ವೇಷ ಬೆಳಸಿದನು ಲಬ್ಧವರ ದೈತ್ಯೇಶ ಇನ್ನೂ ಹೆಚ್ಚಾಗಿ 9 ನರಸುರಾಸುರ ಋಷಿ ಗರುಡೋರಗ ಸಿದ್ಧ ಚಾರಣ ವಿದ್ಯಾಧರ ಯಕ್ಷ ಗಂಧರ್ವ ಪಿತೃ ಪ್ರೇತ ಭೂತಪತಿ ರಾಕ್ಷಸ ಪಿಶಾಚೇಶ ಸರ್ವರನು ಜೈಸಿ ತನ್ನವಶ ಮಾಡಿಕೊಂಡ 10 ಮೂರ್ಲೋಕಂಗಳಲ್ಲಿ ದಶದಿಕ್ಕುಗಳಲ್ಲಿ ಈ ಹಿರಣ್ಯಕಶಿಪು ತನ್ನ ಜಯಭೇರಿ ಹೊಡೆದ ಸರ್ವಲೋಕಪಾಲರ ತೇಜಃಸ್ಥಾನಗಳ ಅಪ - ಹರಿಸಿ ತ್ರಿವಿಷ್ಟಪ ಭೋಗದಲಿ ಮನಸ್ಸಿಟ್ಟ 11 ಅಜಿತೇಂದ್ರಿಯ ಹೇಯ ಭೋಗರತ ಅಹಂಕಾರಿ ಮೂರ್ಜಗಾರಿಯು ಧರ್ಮ ಆಚಾರ ದ್ವೇಷಿ ನಿರ್ಜರರು ಅವನಿಂದ ಹಿಂಸೆ ತಾಳದೆ ವಿಷ್ಣೋ ತ್ರಿಜಗದೀಶನೇ ಮೊರೆ ಹೊಕ್ಕರು ನಿನ್ನಲ್ಲಿ 12 ಅಚ್ಯುತ ಈಶ್ವರ ನಿನ್ನ ಭದ್ರವಾಣಿ ಅಭಯ ಹೊಂದಿ ಸುರವರರು ನಿರೀಕ್ಷಿಸಿದರು ಪ್ರಶಾಂತ ಮಹಾತ್ಮಾ ನಿರ್ವೈರ ಪ್ರಹ್ಲಾದ ಹುಟ್ಟುವ ಕಾಲವನು 13 ಜಯತು ಜಯತು ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ನರಸಿಂಹ ಜಯ ಗುಣಾರ್ಣವ ಭೂಮಾನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 13 -ಇತಿ ದ್ವಿತೀಯ ಅಧ್ಯಾಯ ಸಂಪೂರ್ಣಂ - ತೃತೀಯ ಅಧ್ಯಾಯ - ಬಾಲಕ ಪ್ರಹ್ಲಾದ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ಯುಕ್ತ ಕಾಲದಿ ಹೇಮಕಶಿಪುಗೆ ಐದು ಮಕ್ಕಳು ಹುಟ್ಟಿದರು ನಾಲ್ವರು ಗಂಡು ಮಕ್ಕಳು ನಾಲ್ವರಲ್ಲಿ ಪ್ರವರ ಪ್ರಹ್ಲಾದನು ಅಕಳಂಕ ಗುಣಶ್ರೇಷ್ಠ ಮಹದುಪಾಸಕನು 1 ಸತ್ಯಸಂಧನು ಶೀಲಸಂಪನ್ನ ಬ್ರಹ್ಮಣ್ಯ ಜಿತೇಂದ್ರಿಯ ಸಮದರ್ಶಿ ಆರ್ಯರ ವಿಧೇಯ ಸ್ನಿಗ್ಧರಿಗೆ ಭ್ರಾತೃವತ್ ಯಥಾದೇವೋ ತಥಾಗುರೋ ಭೂತಪ್ರಿಯ ಸುಹೃತ್ತಮ ದೀನವತ್ಸಲನು 2 ವಿಧ್ಯಾರ್ಥಿ ರೂಪಾದಿಗಳ ಗರ್ವ ಇವಗಿಲ್ಲ ಶ್ರುತ ದೃಷ್ಟ ವಿಷಯದಲಿ ಗುಣಗ್ರಾಹಿಯು ಶಾಂತನು ದಾಂತನು ಸಾಧುಗಳಲಿ ಪ್ರಿಯ ಸದಾ ಸ್ವಭಾವದಿ ಶ್ರೀ ವಿಷ್ಣುಭಕ್ತಿ 3 ವಾಸುದೇವ ನಿನ್ನಲ್ಲೇ ಸರ್ವದಾ ಮನವನು ನೆಲಸಿ ಈ ಬಾಲ ಸರ್ವ ನಡೆನುಡಿ ಊಟ ಶಯನ ಪರ್ಯಟನ ಸರ್ವಾವಸ್ಥೆಯಲೂ ನಿನ್ನ ಸ್ಮರಿಸುವನು 4 ಅಂಬುಜೋದ್ಭವ ತ್ರ್ಯಿಂಬಕ ಮುಖ್ಯವಿನುತ ನಿನ್ನ ಅಂಬುಜಾಂಘ್ರಿಗಳನ್ನ ಧ್ಯಾನಿಪ ಈ ಬಾಲಕನ ಅಂಬಕದಿ ಸುಜ್ಞಾನ ಭಕ್ತಿ ಪುಳಕಾಂಬುವು ತುಂಬಿ ತುಳುಕಾಡುವುದು ಕಂಡಿಹರು ಅಂದು 5 ಒಮ್ಮೆ ನಗುವನು ಒಮ್ಮೆ ರೋದಿಸುವನು ಒಮ್ಮೆ ಸುಮ್ಮನಿರುವ ಹರಿ ಪ್ರೇಮಾನಂದದಲಿ ಅಮ್ಮಮ್ಮ ಭಕ್ತಿಯಲಿ ಕೂಗಿ ಕುಣಿವನು ಮಹಾನ್ ರಮೆಯರಸ ನಿನ್ನ ದಾಸಾಗ್ರಣಿಯು ಪ್ರಹ್ಲಾದ 6 ಮಹಾತ್ಮನು ಮಹಾಭಾಗ ಮಹಾಭಾಗವತನು ಮಹಾಕಾರುಣಿಕ ಪ್ರಹ್ಲಾದಗೆರಗುವೆನು ಅಹರ್ನಿಶಿ ಧೃತಿಸ್ಥ ಹರಿ ನಿನ್ನಲ್ಲಿ ಭಕ್ತಿ ಇಹಪರದಿ ಸೌಭಾಗ್ಯ ಎಮಗೀಯಲೆಂದು 7 ಜಯ ಗುಣಾರ್ಣವ ಭೂಮನ್ ಲಕ್ಷ್ಮೀಸಮೇತ ಜಯ ಅಜನಪಿತ ನಮೋ ಶರ್ವಾದಿ ಸುರವಂದ್ಯ ಜಯತು ಭಕ್ತೇಷ್ಟಪ್ರದ ಪ್ರಹ್ಲಾದ ಪಾಲ 8 - ಇತಿ ತೃತಿಯಾ ಅಧ್ಯಾಯ ಸಂಪೂರ್ಣಂ - ಚತುರ್ಥ ಅಧ್ಯಾಯ ಪ್ರಹ್ಲಾದರ ವಿಧ್ಯಾಭ್ಯಾಸ ಜಯತು ಜಯ ನರಸಿಂಹ ಅಮಿತಪೌರುಷ ವಿಷ್ಣೋ ಜಯತು ಶ್ರೀಪತಿ ಅನಘ ಬ್ರಹ್ಮ ಶಿವವಂದ್ಯ ಜಯ ಗುಣಗಣಾರ್ಣವನೇ ಪ್ರಹ್ಲಾದ ರಕ್ಷಕನೇ ಜಯ ಸ್ವಜನತೇಷ್ಟ ಚಿಂತಾಮಣಿಯೇ ಶರಣು ಪ ದೈತ್ಯರಾಜನು ಪ್ರಿಯಪುತ್ರ ಪ್ರಹ್ಲಾದನಿಗೆ ವಿದ್ಯೆಕಲಿಸಲು ಶಂಡಾಮರ್ಕರು ಎಂಬ ಬೋಧಕರ ಏರ್ಪಾಡು ಮಾಡಿಸಲು ಆ ಮಹಾನ್ ಇತರ ಬಾಲಕರೊಡೆ ಕೂಡಿ ಓದಿದನು 1 ವಿದ್ಯೆ ಕಲಿಯುವಾಗ ಇತರ ಬಾಲರ ಮೀರಿ ಪ್ರತಿಭೆ ತೋರಿಸಿದನು ಬಾಲಪ್ರಹ್ಲಾದ ಕೇಳ್ದ ಕಲಿತದೆÀ್ದಲ್ಲಿ ಸಾಧು ಹೇಳೆಂದು 2 ಸಂಸಾರಿ ಜೀವರುಗಳು ಸದಾ ಐಹಿಕ ನಿಸ್ಸಾರ ವಿಷಯಂಗಳಲ್ಲಿ ಮುಳುಗಿ ತಮಃಸಿಲಿ ಬೀಳದಿರೆ ಸಾಧು ಜನಸಂಗ ಶ್ರೀಶ ಹರಿ ಸರ್ವವಂದ್ಯನ ಆಶ್ರಯಿಪುದು 3 ಹೀಗೆ ಪ್ರಹ್ಲಾದ ಪೇಳಲು ಹಿರಣ್ಯಕ ಕೇಳಿ ಪರ ಬೋಧಿತನಾಗಿಹನೆಂದು ನೆನೆದು ಶುಕ್ರ ಸುತರು ತಮ್ಮ ಮನೆಯಲ್ಲೇ ಇಟ್ಟುಕೊಂಡು ತಕ್ಕ ವಿಧದಲಿ ಬುದ್ಧಿ ತಿದ್ದಿಸುವುದು ಎಂದ 4 ಗುರುಗಳು ಮನೆಯಲ್ಲಿ ಒಳ್ಳೆಮಾತಿಂದಲಿ ಪರಕೃತವೋ ಸ್ವತಃ ಕೃತವೋ ಈ ಹರಿಪಕ್ಷಬುದ್ದಿ ಅನೃತವಾಡದೆ ಸತ್ಯ ಪೇಳೆಂದು ಕೇಳಿದರು ಭಾಗವತ ಪ್ರಹ್ಲಾದ ಬಾಲನ್ನ 5 ಸತ್ತಾ ಪ್ರವೃತ್ತಿ ಪ್ರತೀತ್ಯಾದಿಪ್ರದ ಸರ್ವ - ಚಕ್ರಧರ ವಿಷ್ಣು ವಿಧಿ ಶಿವಾದೀಡ್ಯನಲಿ ರತತಾನು ಕಾಂತವು ಅಯಸ್ಸನ್ನು ಸೆಳೆವಂತೆ ಎಂದು 6
--------------
ಪ್ರಸನ್ನ ಶ್ರೀನಿವಾಸದಾಸರು
ಬಿಡದೆ ಭಜಿಸೊ ಮನವೆ ದೃಢಭಾವದಿ ಪೂರಿಸೊ ಶ್ರೀಪಾದಾರಾಧಿಸೊ ಧ್ರುವ ನಿತ್ಯಾನಿತ್ಯ ಆವದೆಂದುದ್ದಿತ್ಯರ್ಥ ಶೋಧಿಸೊ ಪಥ್ಯವಾಗುವ ಸತ್ಯಶಾಖತ್ವಪಥವ ಸಾಧಿಸೊ ಕೃತ್ಯಾಕೃತ್ಯವಾಗುವ ನಿತ್ಯನಿಜವು ಭೇದಿಸೊ ಉತ್ತಮೋತ್ತಮವಾದ ವಸ್ತುಮಯದೊಳು ನೀ ಸಂಧಿಸೊ 1 ಇದೆ ನೋಡು ಹಿತವು ನಿನ್ನು ಸುಪಥಸಾಧÀನ ಸಾಧಿಸಿಗೊಡುವ ಸ್ವಾಮಿ ಸದ್ಗುರು ಪತಿತಪಾವನ ಭೇದಿಸಿ ನೋಡಲಕ್ಕೆ ನಿನ್ನೊಳಗಾಗುವದು ಉನ್ಮನ ತಾಂ ನಿಧಾನ 2 ಬೆರಿಯೊ ಭಾವಭಕುತಿವಿಡಿದು ಹಿಡಿಯೊ ಹರಿ ಪಾದವ ಸಾರ ಸವಿಯೊ ಸುಖವ ಅನಭವಾಮೃತವ ಹರಿಯೊ ಪಾಶ ಬೀಳುವ ಭವಜನ್ಮಮೃತ್ಯುವ ನೆರಿಯೊ ಮಹಿಪತಿಸ್ವಾಮಿ ವಸ್ತು ಪರಾತ್ಪರವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬೇಡವೀಗ ಬಾಲೆ ಸಂಗ ಕೆಟ್ಟುಹೋಗುವೆ ಇದುಪಾಡಲ್ಲ ಭಂಗವನು ಅನುಭವಿಸುತಕಾಡ ಹಿಡಿಯುವೇ ಹುಟ್ಟುಗೆಡುವೆಯಲ್ಲೊ ಪ ಸತ್ಯವದು ನಾರಿದೋಷ ಮೃತ್ಯುವಲ್ಲೋ ಯಮನಿತ್ಯದಲಿ ಎತ್ತಿರುವ ಕತ್ತಿಯಲ್ಲೋ ಆತ್ಮ-ಹತ್ಯವಲ್ಲೋ ಅಪಥ್ಯವಲ್ಲೋ 1 ಸರಕು ಎಲ್ಲೋ 2 ಶಿಷ್ಟಾಶಿಷ್ಟರೆಂಬವರು ಕೆಟ್ಟರಲ್ಲೋ ಬಲುಗಟ್ಟಿ ತವಸಿಗಳು ಮತಿಗೆಟ್ಟರಲ್ಲೊ ಕಂ-ಗೆಟ್ಟರಲ್ಲೋ ಘಾಸಿಪಟ್ಟರಲ್ಲೋ 3 ಧಾರಣೆಯು ಧ್ಯಾನಮೌನ ಹಾರಿತೆಲ್ಲೋ ಕಾಮಕೂರ್ಗಣೆಗಳು ಮೊನೆದೋರಿತಲ್ಲೋ ಮನೆಹಾರಿತಲ್ಲೋ ಧೈರ್ಯತೂರಿತೆಲ್ಲೋ 4 ನಾರಿಯವಳು ನಿನ್ನ ಗತಿಗೆ ಮಾರಿಯಲ್ಲೋ ಗುರುವೀರ ಚಿದಾನಂದನನ್ನು ಸೇರು ಎಲ್ಲೋಪರಿಹಾರವೆಲ್ಲೊಲ್ಲೋ ಮುಕ್ತಿ ಸಾರೆ ಎಲ್ಲೋ 5
--------------
ಚಿದಾನಂದ ಅವಧೂತರು