ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಪ್ಪ ಕೇಳೋ ಬೇಡಿಕೊಂಬೆ ನಿನ್ನ ತಿಳಿಯಪ್ಪಒಪ್ಪಿ ಮಾತನ್ನಾಡಿಸಿದರೆ ನೀನೆ ಜಗದಪ್ಪ ಪ ನಾನದಾರು ಬಂದೆನೆಲ್ಲಿಗೆ ಎನ್ನುತ ನೀನಪ್ಪನಾನು ಹೋಗುವೆ ಎಲ್ಲಿಗೆ ಎಂದು ಚಿಂತಿಸು ನೀನಪ್ಪನೀನು ಸುಳಿಗಾಳಿಯ ಶಾವದ ತೆರದಂದದಿ ಇಹೆಯಪ್ಪನಾನಾ ಭವವಾಚರಿಸುತಿಹೆ ಆದಿ ಅಂತ್ಯವಿಲ್ಲಪ್ಪತನುವ ನೆಚ್ಚಬೇಡ ಮೊದಲಿನ ತನುವದೇನಾಯಿತಪ್ಪತನಯ ಸತಿಯರನೆಲ್ಲ ಬಿಟ್ಟುಬಂದೆ ನೀನುಮನೆ ಕಟ್ಟುವೆ ನೀನು ಮೊದಲಿನ ಮನೆ ಏನಾಯಿತಪ್ಪಾನಿನಗೆ ಕುಲವು ಎಷ್ಟಾದವು ಎಣಿಸಿಕೊಳ್ಳಪ್ಪ2 ಹಿಂದೆ ಮುಂದೆ ಕಾಣದಂತೆ ತಿರುಗಿ ತಿರುಗಿ ಅಪ್ಪಬೆಂದು ಬೆಂದು ಓಡಾಡುತಿಹೆ ಸ್ವರ್ಗ ನರಕಕಪ್ಪಎಂದೆಂದಿಗೂ ಅರಿವಾಗದ ಮರೆವು ಮುಚ್ಚಿ ಅಪ್ಪಅಂಧಕಾರ ಸಂಸಾರದಿ ಕಳವಳಿಸುತ ಅಪ್ಪ3 ಕಣ್ಣುಯಿದ್ದು ಕಣ್ಣಿಗೀಗ ಬೀಳಬೇಡವಪ್ಪನಿನ್ನ ನರಿವುದಕ್ಕೆ ಮನುಜ ಜನ್ಮ ಸಾಧನವಪ್ಪಹೊನ್ನು ಹೆಣ್ಣು ಮಣ್ಣು ಎನಗೆ ಬೇಡ ಬೇಡಪ್ಪಎನ್ನ ಬೋಧೆ ಕೇಳದಿರಲು ಕೆಟ್ಟುಹೋದೆಯಪ್ಪ 4 ವಾಸನದಿಂದ ತಿರುಗುವೆ ರಾಟಾಳರಂತಪ್ಪದೇಶಿಕ ಸದ್ಗುರು ಹೊಂದು ದೇವನಹೆಯಪ್ಪನಾಶವಹವು ನಾನಾ ಗುಣಗಳು ಜೀವನ ತನುವು ಅಪ್ಪಈಶ ಚಿದಾನಂದನಹೆ ಜನ್ಮವಳಿದು ಅಪ್ಪ 5
--------------
ಚಿದಾನಂದ ಅವಧೂತರು
ದಯಮಾಡಿ ಪಿಡಿ ಎನ್ನಕೈಯ್ಯಾ ಗುರುರಾಯಾ ಪಕರುಣಾಸಾಗರನೆಂಬ ಬಿರುದು ನಿನಗೆ ಉಂಟು ಅ.ಪನಾನು ನನ್ನದು ಎಂಬ 'ೀನ ಬುದ್ದಿಯ ಬಿಡಿಸುಸಾನುರಾಗದಿ ಮನಸನು ಧರ್ಮದಲ್ಲಿರಿಸುಮಾನಾಪಮಾನಕ್ಕೆ 'ಗ್ಗದೆ ಕುಗ್ಗದೆಧ್ಯಾನಾನಂದದೊಳೆನ್ನ ಇರಿಸಯ್ಯಾ ಸ್ವಾ'ು 1ದೇಹ ನನ್ನದು ಎಂಬ ದುರಭಿಮಾನವ ಬಿಡಿಸುದೇಹಾನುಬಂಧುಗಳ ಮೋಹಬಿಡಿಸುದೇಹಗೇಹಗಳೆಲ್ಲ ದೇವರ ಸ್ವತ್ತೆಂಬಸುಜ್ಞಾನವನು ಕೊಟ್ಟು ಸಲುಹಯ್ಯಾ ಸ್ವಾ'ು 2ದುಷ್ಟ ಬುದ್ಧಿಯು ಎನಗೆ ಹುಟ್ಟದಂತೆ ಮಾಡುಕೆಟ್ಟಜನರ ಗಾಳಿ ತಟ್ಟದಿರಲಿಎಷ್ಟು ಬೇಕಾದಷ್ಟು ಕಷ್ಟಬಂದರು ಸಹಗಟ್ಟ್ಯಾಗಿ ನಿನ್ನಲ್ಲಿ ಭಕ್ತಿಹುಟ್ಟಲಿ ಸ್ವಾ'ು 3ಭೇದ ಅಭೇದದ ಮರ್ಮವ ತಿಳಿಸಯ್ಯಾಸಾಧು ಸಜ್ಜನರ ಸಂಗದೊಳೆನ್ನ ಇರಿಸುಮೋದತೀರ್ಥರ ಮತದ ಸುಜ್ಞಾನವನು ಕೊಟ್ಟುಭೂದೇವ ವಂದ್ಯ ಭೂಪತಿ 'ಠ್ಠಲನ ತೋರು 4
--------------
ಭೂಪತಿ ವಿಠಲರು
ನಿತ್ಯ ನಿತ್ಯದಲಿ ಧೂಪ ಪ ನಾನದಾರಿಹೆನೆಂದು ತಿಳಿದವಗೆ ಧೂಪನಾನು ಆತ್ಮವು ಎಂದು ಕಂಡವಗೆ ಧೂಪನಾನಾ ಜೀವ ಭ್ರಾಂತಿಯಳಿದವಗೆ ಧೂಪತಾನೆ ತಾನಾಗಿಹೆನೆಂದವಗೆ ಧೂಪ 1 ಸಂಸಾರದೊಳು ಇದ್ದು ಇಲ್ಲದವನಿಗೆ ಧೂಪಸಂಸಾರ ಸಂತೆಂದು ಕಂಡವಗೆ ಧೂಪಸಂಸಾರ ಲೇಪ ಅಂಟದವನಿಗೆ ಧೂಪಸಂಸಾರದೊಳು ಮುಕ್ತನಾದವಗೆ ಧೂಪ2 ಸೂರ್ಯ ಚಂದ್ರ ಸ್ವರದಿ ನಡೆದವಗೆ ಧೂಪಆರು ಚಕ್ರದಿ ನಡೆದವಗೆ ಧೂಪಭೋರೆನಿಪ ಓಂಕಾರ ಕೇಳ್ದವಗೆ ಧೂಪಧೀರ ಚಿದಾನಂದ ಗುರುವಾದವಗೆ ಧೂಪ 3
--------------
ಚಿದಾನಂದ ಅವಧೂತರು