ಒಟ್ಟು 10 ಕಡೆಗಳಲ್ಲಿ , 5 ದಾಸರು , 10 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಪನ್ನ ರಕ್ಷಕ ಎನ್ನ ಪಾಲಿಸೊ ಪ. ಪನ್ನಗಾದ್ರಿನಿವಾಸ ಸಂಪನ್ನ ಶ್ರೀಶಾ ಶ್ರೀನಿವಾಸ ಅ.ಪ. ಆದಿ ಮೂರುತಿ ವೇದ ವಂದ್ಯ ಪಾದ ನಂಬಿದೆ ಅಗಾಧರೂಪ ನಾರಸಿಂಹ ಆದರದಿಂದ ಮೋದ ಕೊಡುತ ಎನ್ನ ಪಾಲಿಸು 1 ನೊಂದೆನಯ್ಯ ಈ ಭವದಿ ಸಿಲುಕಿ ತಂದೆ ಎನ್ನ ಕಾವರಿಲ್ಲ ಬಂಧ ಬಿಡಿಸಿ ಈ ಭವದಿಂದ ನಿನ್ನ ಸಂದರುಶನವಿತ್ತು ಸಲಹಿ ಎನ್ನ 2 ನಿನ್ನ ನಂಬಿದ ಭಕ್ತರ ಪೊರೆಯೆ ಇನ್ನು ಸಂಶಯವ್ಯಾಕೊ ದೇವಾ ಚೆನ್ನಗಿರಿಯ ವೆಂಕಟೇಶಾ ಮನ್ನಿಸೆನ್ನ ಶ್ರೀ ಶ್ರೀನಿವಾಸ ಎನ್ನ 3
--------------
ಸರಸ್ವತಿ ಬಾಯಿ
ಇಷ್ಟುದಯ ಮಾಡಿದ್ದೆ ಅತಿ ಸೋಜಿಗ ಶೀಷ್ಟೇಷ್ಟದಾತ ಭ್ರಷ್ಟಮಾನವನಲ್ಲಿ ಪ. ಉದಯಕಾಲದಲೆದ್ದು ಪದುಮಸಂಭವ ಪಿತನ ವದನದಲಿ ನೆನೆಯದಲೆ ಮಾನುನಿಯರ ಚದುರತೆಗೆ ಮೆಚ್ಚುತಲೆ ಉದರ ಪೊರೆದನ ಮೇಲೆ ಚದುರ ಶ್ರೀಕೃಷ್ಣ ಬದಿಗನಾಗಿದ್ದು 1 ಕರುಣಾಸಮುದ್ರನ ಸ್ಮರಣೆ ಸಾಲದೆ ಎಂಬ ಪರಮ ಗುರುಗಳ ವಚನ ಮರೆತು ನಿನ್ನ ಸ್ಮರಿಸದೆಲೆ ನಿರುತದಿ ಪರರ ಬಾಗಿಲಿಗ್ಹೋಗಿ ಚರಣ ಧಣಿವುತ ಮನದಿ ಮರುಗಿದೆನೋ ಕೃಷ್ಣಾ 2 ಇನ್ನಾದರೆನಮನದಿ ಪನ್ನಗಾದ್ರಿನಿವಾಸ ನಿನ್ನ ಸ್ಮರಣೆಯ ಕೊಟ್ಟು ಮನ್ನಿಸೆನ್ನ ಘನ್ನ ಅಪರಾಧಗಳ ವರ್ಣಿಸಲಳವಲ್ಲ ಚೆನ್ನಿಗ ಶ್ರೀ ಶ್ರೀನಿವಾಸ ಘನ್ನ ಸಂಪನ್ನ ಸರಿಯಾರೋ 3
--------------
ಸರಸ್ವತಿ ಬಾಯಿ
ಏನನಿತ್ತಪೆ ನಿನಗೆ ಶ್ರೀನಿವಾಸ ಶ್ರೀನಿಧಿಯು ನೀನಾಗಿರಲು ಸರ್ವೇಶ ಪ. ಅನುದಿನದಿ ನಿನ್ನ ಪದ ಅನುವಿನಲಿ ಸ್ತುತಿಪೆನೆನೆ ಅನುದಿನದಿ ನಿನ್ನಾದಿಶೇಷ ಸ್ತುತಿಪ ಘನಮಹಿಮ ನಿನ್ನನರ್ಚಿಪೆನೆಂದೊಡೆ ಆ ಘನ ಮಹಾ ಶ್ರೀದೇವಿ ನಿನ್ನರ್ಚಿಸಿ ಮೆಚ್ಚಿಸಿಹಳರಿಯೆ 1 ಭಕ್ತಿರಸವನು ಭಕ್ತ ಪ್ರಹ್ಲಾದ ನಿನಗಿಂತಧಿಕ ಭಕ್ತಿಯನು ಮಾಡಲರಿಯನೋ ದೇವ ದೇವ ಯುಕ್ತಿಯಲಿ ನಿನ್ನ ಸ್ತುತಿ ಮಾಳ್ಪೆನೆಂದರೆ ನಿನ್ನ ಭಕ್ತ ನಾರದ ಮಾಳ್ಪ ಸ್ತುತಿಗಧಿಕವೇ ಕೃಷ್ಣ 2 ನಿನ್ನ ಪದ ಸೇವಿಪೆನೆನೆ ನಿನ್ನ ಭಕ್ತ ಹನುಮ ಇನ್ನು ನಿನ್ನಡಿ ಬಿಡನೊ ನಿನ್ನರಿವತನಕ ಪನ್ನಗಾದ್ರಿನಿವಾಸ ಸಂಪನÀ್ನ ಶ್ರೀ ಶ್ರೀನಿವಾಸ ನಿನ್ನ ಕೃಪೆಯನೆ ತೋರೋ ಶ್ರೀ ರಮೇಶ 3
--------------
ಸರಸ್ವತಿ ಬಾಯಿ
ಏನು ಸುಕೃತದ ಫಲವೋ ಶ್ರೀನಿವಾಸನೆ ಹೇಳು ಹಾನಿಯಾಗಿಯೆ ಅವಮಾನ ತೋರುತಿದೆ ಪ ವಾಸುದೇವನೆ ಎನ್ನ ಈಸು ದಿನ ಪರಿಯಂತ ಬೇಸರಿಲ್ಲದೆ ಕಾಯ್ದೆ ಲೇಸ ಕರುಣಿಸಿದೆ ಈಸಾಡಿದೆನು ನಾನು ಈ ಗೃಹದೊಳೀಗೇನು- ದಾಸಿನವು ನಿನಗಾಯಿತು ಮೋಸ ಯೋಚಿಪರೆ 1 ಹಗಲುಗತ್ತಲೆಯಾಗಿ ಮೊಗವು ಕಾಣದೆ ಎನಗೆ ಜಗದುದರ ನಿನ್ನಾಣೆ ನಗೆಯಾಯ್ತು ಜಗಕೆ ಹಗಯ ಮಧ್ಯದಿ ಸಿಲುಕಿ ಮೃಗವು ಬಾಯ್ಬಿಟ್ಟಂತೆ ಮಿಗ ಕ್ಲೇಶಬಟ್ಟು ನರಮೃಗವು ತಾನಾದೆ 2 ಆರು ಹಿತವರು ಇಲ್ಲ ಧಾರುಣಿಯ ಬಲವಿಲ್ಲ ಪಾರಾಗಿ ನಾಚಿಕೆಯು ಬೇರೂರಿತು ಘೋರ ಅಡವಿಯೊಳಗೆ ಗಾರುಗತ್ತಲೆ ಸುತ್ತಿ ಮಾರಿದೆಯ ಚೋರರಿಗೆ ದಾರಿಗಾಣಿಸದೆ 3 ದೊರೆಯು ಮನ್ನಿಸಿ ಕೊಡಲು ನೆರೆಹೊರೆಯ ಕರೆಕರೆಯು ಹರದಿಯೊಳು ನಂಬಿಗೆಯು ಕಿರಿದಾಯಿತು ನೆರವಾಗಿ ತೋರುತಿದೆ ಬರಿಯ ವೃಕ್ಷದ ತೆರದಿ ಮರುಳು ಕಣ್ಣಿಗೆ ಇರುವೆ ಕರಿಯ ತೆರನಂತೆ 4 ಇನ್ನು ಬಂಧಿಸಬೇಡ ಎನ್ನಿಂದ ಅಳವಲ್ಲ ಬನ್ನಬಡುವುದು ಎಲ್ಲ ನಿನ್ನ ಮನಕರುಹು ಕರ್ಮ ಬೆನ್ನು ಬಿಡುವಂದದಲಿ ಪನ್ನಗಾದ್ರಿನಿವಾಸ ಪಾಲಿಸೈ ಲೇಸ 5 ದಾಸ ಬಳಲಿದನೆಂಬ ಹೇಸಿಕೆಯ ಮಾತುಗಳ ಕಾಸಕೊಟ್ಟೇಕೆ ನಿರಾಸೆ ಮಾಡುವಿಯೊ ಬೇಸರಾಗದೆ ಪಂಥವಾಸಿಯಿಲ್ಲವೆ ನಿನಗೆ ಸಾಸಿರಾಕ್ಷನೆ ಎನಗೆ ಲೇಸಿತ್ತು ಸಲಹೊ 6 ಪಡೆದ ತಂದೆಯು ನೀನೆ ಕೊಡುವ ಒಡೆಯನು ನೀನೆ ಕಡೆಗೆ ಕೈವಿಡಿದು ಎನ್ನ ರಕ್ಷಿಪನು ನೀನೆ ಮಡದಿ ಮಕ್ಕಳನೆಲ್ಲ ಬಿಡದೆ ಸಲಹುವ ನೀನೆ ಪೊಡವಿಗಧಿಪತಿಯಾದ ವರಾಹತಿಮ್ಮಪ್ಪ 7
--------------
ವರಹತಿಮ್ಮಪ್ಪ
ತತ್ವಮತವೇ ಮತವು ಸಾತ್ತಿ ್ವಕರಿಗೆ ಪ ನಿತ್ಯ ನಿರ್ಮಲರಾದ ಮುಕ್ತಿಜೀವರಿಗೇ ಅ.ಪ ಶ್ರೀವನಿತೆ ಮತಿಗೆ ವಾರಿಜಸಂಭವಾ ಆವಂಗಜರಿಪು ಮನಕೆ ಅಹಂಕಾರದಲಿ ಯೀವಿಧ ದಶೇಂದ್ರಿಯಕೆ ಸೂರ್ಯಾದಿಗಳು ಎಂಬೋ 1 ಪಂಚಭೇದವನು ತರತಮಗಳನು ತಿಳಿಯುತಂ ವಂಚನಾದಿಗಳಿಂದ ರಹಿತರಾಗಿ ಪಂಚ ಸಂಸ್ಕಾರದಿಂ ಪರಿಶುದ್ಧರಾಗುತೆ ಪ್ರ- ಪಂಚವನು ದಾಟಿರುವ ಪರಮ ಭಕ್ತರಿಗೆ 2 ವನ್ನು ಒಂದೇ ಬಗೆಯ ಗೈದು ಮುದದಿ ಪನ್ನಗಾದ್ರಿನಿವಾಸ ಗುರುರಾಮ ವಿಠಲನ ಅ- ಹರ್ನಿಶಿಯು ಬಿಡದೆ ಪೂಜಿಸುವ ಸುಜನರಿಗೆ 3
--------------
ಗುರುರಾಮವಿಠಲ
ನಿನ್ನ ನಂಬಿದವರಿಗೆ ಇನ್ನು ಕೊರತೆಗಳುಂಟೆ ಪನ್ನಗಾದ್ರಿನಿವಾಸ ಶ್ರೀ ವೆಂಕಟೇಶ ಪ. ಬನ್ನ ಬಡಿಸದೆ ಎನ್ನ ಧ್ಯಾನವನ್ನು ಮರೆವರು ಭಕ್ತರಂದು ಬನ್ನ ಬಿಡಿಸಿ ಪೊರೆವೆ ಕರುಣದಿ ಅ.ಪ. ಅಧಿಕ ಸಂಸಾರದಿ ಪದೆಪದೆಗೆ ತೊಡರುಗಳ ಬದಿಗನಾಗಿದ್ದವರಿಗೆ ಕೊಟ್ಟು ಸದಮಲಾನಂದ ಪರೀಕ್ಷಿಸುವೆ ತವಕದಿ ಚದುರಿಸುತ ಮನವನ್ನು ಅದುಭುತನೆ ನಸುನಗುತ ನೀನೋಡುತ್ತ ಹೆದರಿ ಬೆದರಿ ನಿನ್ನ ಧ್ಯಾನಕ್ಕೊದಗಲಿ ಮನವೆಂಬೆಯಲ್ಲದೆ ಮಧುರವಾಣಿಯ ತೋರಿ ಸಲಹಲು ವದಗಿ ಕಾಯುವೆ ಭಕ್ತರನ್ನು (ಚದುರ ನಿನಗೆಣೆಗಾಣೆ ಜಗದೊಳು) 1 ಜಾಣರೊಳತಿ ಜಾಣತನ ತೋರುತ್ತ ಕಾಣಿಸಿ ಕಾಣದಂತಿರುತ ಭಕ್ತರೊಳು ಗಾಣಕೆ ಸಿಲ್ಕಿದ ಎಳ್ಳು ಸಚ್ಛದೆಣ್ಣೆ ಮಾಣದೆ ಬರುವ ತೆರ ತೋರುವೆ ಜನಕೆ ಕಾಣದಿಹ ಕಾಮಕ್ರೋಧದ್ಹಿಂಡಿಯ ಮಾಣದೆ ಬೇರ್ಪಡಿಪೆಯಲ್ಲದೆ ಇದು ಕಾಣ್ವರು ನಿನ್ನ ಚರಣದಂಘ್ರಿಯ ಕಾಣುತಲೆ ಸ್ತುತಿಮಾಡಿ ಹಿಗ್ಗುತಲಿಹರು 2 ದಿಟ್ಟಮೂರುತಿ ಕೇಳೊ ಕೊಟ್ಟರೊಳ್ಳಿತು ಕಷ್ಟ ಉತ್ಕøಷ್ಟವಾಗಲಿ ಹರಿಯೆ ಎನ್ನ ದೊರೆಯೆ ಕಟ್ಟಕಡೆ ನಿನ ಧ್ಯಾನ ಕೊಟ್ಟು ಕಾಯುವ ಭಾರ ಘಟ್ಟಿ ಕಂಕಣ ಕಟ್ಟಿ ನಿಂತಿಹೆ ಶ್ರೀ ಶ್ರೀನಿವಾಸ ಎನ್ನ ದುಷ್ಟತನವೆಲ್ಲ ಕುಟ್ಟಿ ಕೆಡಹುವೆ ಕಟ್ಟಕಡೆಗೆ ನಿನ್ನ ಪಾದಾಂಗುಷ್ಠ ಸೇರಲಿಯೆಂದಾ ಭಕ್ತರ ಬೆಟ್ಟದೊಡೆಯನೆ ಸಲಹುತಿರುವೆ ಉತ್ಕøಷ್ಟ ಮೂರುತಿ ಭಕ್ತರಿಷ್ಟದಾಯಕ 3
--------------
ಸರಸ್ವತಿ ಬಾಯಿ
ನಿನ್ನ ಪದ ಧ್ಯಾನಿಪರು ಪಗಲಿರುಳು ನಿನ್ನ ಭಕ್ತರು ಹರಿ ನಿನ್ನ ರೂಪ ನೆನೆನೆನೆದು ಸ್ಮರಿಸಿ ಮನದಲಿ ನಿಲಿಸಿ ಸ್ತುತಿಸಿ ಪಾದ ಧೂಳು ಶಿರದಲ್ಲಿ ಧರಿಸುವರು ಭಕ್ತರು ನಿನ್ನ ರೂಹವ ಮನಸಿನ ಜಗಲಿಯಲಿ ನಿಲಿಸುವರು ಭಕ್ತರು ನಿನ್ನ ನಂಬಿ ಸಕÀಲಕಾರ್ಯ ನಿರ್ವಹಿಸುವರು ಭಕ್ತರು ಹರಿ ನಿನ್ಹೊರತು ಅನ್ಯರನು ನೆನೆಯರೊ ಪನ್ನಗಾದ್ರಿನಿವಾಸ ಶ್ರೀ ಶ್ರೀನಿವಾಸ ನಿನ್ನ ಭಕ್ತರ ಸಂಗಕೊಡೊ ಎನಗೆ ಸರ್ವೇಶ
--------------
ಸರಸ್ವತಿ ಬಾಯಿ
ನಿನ್ನನಲ್ಲದೆ ಯಾರ ಸನ್ನುತಿಸಿ ಫಲವೇನೋ ಪನ್ನಗಾದ್ರಿನಿವಾಸ ಶ್ರೀವೆಂಕಟೇಶ ಪ ಮನ್ನಣೆಯು ಬೇಡಯ್ಯ ಎನ್ನ ತಪ್ಪುಗಳನ್ನು ಮನ್ನಿಸೆಂದೊರಲುವೆನು ಶ್ರೀವೆಂಕಟೇಶ ಅ.ಪ ತಪ್ಪುಹಾದಿಯ ಹಿಡಿದು ಬೆಪ್ಪನಾಗಿರುವೆನ್ನ ಒಪ್ಪಿ ಪರಿಪಾಲಿಸುವ ಅಪ್ಪ ನೀನೋ ತಪ್ಪೊಪ್ಪುಗಳನೆಲ್ಲಾ ಒಪ್ಪಿಸಿದೆ ನಿನಗೆ ತಿಮ್ಮಪ್ಪ ಮಾಂಗಿರಿವಾಸ ಕೈಹಿಡಿದು ಕಾಯೋ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಾರೆಲೋ ಬೇಗನೆ ಭಾರತೀಪತಿ ಪ್ರಿಯ ಸಾರುತ ಬೇಗ ಶ್ರೀ ನಾರಾಯಣ ಪ. ನಾರದಾದಿ ವಂದ್ಯ ಪಾರುಗಾಣಿಸೆ ಭವ ಗಾರು ಮಾಡದೆ ಶ್ರೀಶ ಸರ್ವೇಶ ಅ.ಪ. ಸುಮನಸರೊಡೆಯನೆ ನೀನಾಗಮಿಸಲು ಸಕಲವು ಸುಗಮವಹುದೆ ಕಮಲೆಯ ಪ್ರೀಯನೆ ನಿನ್ನಾಗಮನವನೆ ಬಯಸುವೆ 1 ಭಕ್ತರ ಕಾಯುವ ಯುಕ್ತಿ ನಿನಗೆ ಸರಿ ಭಕ್ತವತ್ಸಲನೆಂಬೊ ಬಿರುದಿನ ದೇವ ಶಕ್ತಿ ಸ್ವರೂಪನೆ ಅಶಕ್ತರ ಪೊರೆವಾ ಸಕ್ತಿಯ ತೋರಿಸೆ ಭಕ್ತರಿದ್ದೆಡೆಗೆ 2 ಎನ್ನಪರಾಧ ಎಣಿಸಲೆನ್ನಳವೆ ಪನ್ನಗಾದ್ರಿನಿವಾಸ ಕೃಪೆತೋರೊ ಸನ್ನುತಚರಿತ ನಿನ್ನ ಪೊರತು ಎನ ಗನ್ಯರ ಕಾಣೆನಾ ಶ್ರೀ ಶ್ರೀನಿವಾಸ ದೊರೆ 3
--------------
ಸರಸ್ವತಿ ಬಾಯಿ
ಶೇಷ ಅತಿ ಶೋಭಿಸುತಿದೆ ಶ್ರೀಪತಿವಾಹನ ಪ ಚತುರದಶ ಲೋಕದಲಿ ಅಪ್ರತಿವಾಹನ ಅ.ಪ. ವಿನುತಕಶ್ಯಪ ಮುನಿಗೆ ತನಯನೆನಿಸಿದ ವಾಹನ ಅನುಜರನು ಕದ್ದೊಯ್ದ ಅತ್ಯಾಢ್ಯ ವಾಹನ ವನಧಿ ಮಧ್ಯಧಿ ನಾವಿಕರ ಭಕ್ಷಿಸಿದ ವಾಹನ ಜನಪನಾಜ್ಞದಿ ಕೂರ್ಮಾಗಜರ ನುಂಗಿದ ವಾಹನ1 ಕುಲಿಶಪಾಣಿಯ ಕೂಡೆ ಕಲಹ ಮಾಡಿದ ವಾಹನ ಒಳಹೊಕ್ಕು ಪೀಯೂಷ ತಂದ ವಾಹನ ಮಲತಾಯಿ ಮಕ್ಕಳನು ಮರುಳುಗೊಳಿಸಿದ ವಾಹನ ವಾಹನ 2 ಕಾಲನಾಮಕನಾಗಿ ಕಮಲಭವನಲಿ ಜನಿಸಿ ಕಾಲಾತ್ಮಹರಿಯ ಸೇವಿಪ ವಾಹನ ಕಾಳಗದಿ ಕಪಿವರರ ಕಟ್ಟುಬಿಡಿಸಿದ ವಾಹನ ವಾಲಖಿಲ್ಲರ ಪಿಡಿದ ವರವಾಹನ 3 ವಾಹನ ನಿಜ ರೂಪದಿ ಹರಿಸೇವೆಗೈವ ವಾಹನ ಆ ಪಿತೃಗಳಿಗಮೃತ ಪ್ರಾಪ್ತಿಸಿದ ವಾಹನ ವಾಹನ 4 ಪನ್ನಗಾಶನವಾಹನ ಪತಿತ ಪಾವನ ವಾಹನ ಸನ್ನುತಿಪ ಭಕ್ತರನು ಸಲಹುವ ವಾಹನ ಪನ್ನಗಾದ್ರಿನಿವಾಸ ಜಗನ್ನಾಥ ವಿಠ್ಠಲಗೆ ಉನ್ನತ ಪ್ರಿಯವಾದ ಶ್ರೀ ಗುರುಡವಾಹನ 5
--------------
ಜಗನ್ನಾಥದಾಸರು