ಒಟ್ಟು 8 ಕಡೆಗಳಲ್ಲಿ , 8 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಕೆ ಬೇಕಾಗಿತ್ತೊ ನಿನಗೆ ಈ ಆಟಲೋಕೇಶ ಸಾಕಯ್ಯ ಇಲಿ ಬೆಕ್ಕಿನಾಟಾ ಪ ಸುಷ್ಟು ಜಲಧಿಶಯನ ಬಿಸುಟಿ ಬಿಸಲ್ಯಾಕೆಸೃಷ್ಟಿಪುದು ಮೊದಲ್ಯಾಕೆ ಸೃಷ್ಟಿಸಲು ಪ್ರಾಣಿಗಳಕಷ್ಟ ಪಡಿಸುವುದ್ಯಾಕೆ ಕಷ್ಟವನು ನೋಡಿತುಷ್ಟಪಡುವುದು ಯಾಕೆ ಇಷ್ಟಕೆ ಬಯಕೆ 1 ಸ್ವರ್ಗ ನರಕಗಳೇಕೆ ಜನ್ಮ ಜನ್ಮಾಂತರಕೆವರ್ಗ ಮಾಡುವುದೇಕೆ ಪಾಪಪುಣ್ಯಗಳೇಕೆದುರ್ಗಮದ ವೈಕುಂಠದಾಸೆ ತೋರುವುದೇಕೆನಿರ್ಗುಣನೆ ಸಲ್ಲದಿ ಉದ್ಯೋಗವ್ಯಾಕೆ 2 ಉದಧಿಶಯನದೊಳಾತ್ಮಾನಂದದಲಿ ಮುಳುಗಿಹೃದಯದೊಳು ನೀನೊಂದು ನೀನೇಯೇ ನೀನಾಗಿಮೋದ ಪಡುವುದು ಬಿಟ್ಟು ವೀರನಾರಾಯಣನೆಗದುಗಿನೊಳು ಬಂದಿಲ್ಲಿ ನಿಂತಿರುವುದೇಕೇ 3
--------------
ವೀರನಾರಾಯಣ
ಕರುಣವೇಕೆ ಬಾರದಯ್ಯಾ ಕರಿವರದನೆ ಪ ಶರಣ ರಕ್ಷಕನೆಂದು ನಿನ್ನ ಮೊರೆಯ ಹೊಕ್ಕೆನೊ ಸರಸಿಜಾಕ್ಷ ಮರಣ ಕಾಲದಿ ಮಗನ ಕರೆದ ಪುರುಷ ಪುಣ್ಯ ಶರಧಿಯೇನೊ ಅ.ಪ. ತುತಿಸಸಲಿಲ್ಲವೆಂದು ಎನ್ನ ಹಿತವಗೈಯದೆ ಜರಿಪರೇನೊ ತುತಿಸಲಾಪವೇ ಶ್ರುತಿಗಳನ್ನು ಮಿತಿಗೆ ಸಿಲ್ಕದ ನಿನ್ನ ಮಹಿಮೆ 1 ಏನು ಸಾಧನವವÀ ಮಾಡಲಿಲ್ಲವೆಂದು ಕೈಬಿಡುವೆಯೇನೊ ನೀನು ದಯಮಾಡಿದಲ್ಲದೆ ಏನು ಸಾಧನ ಮಾಡಲಾಪೆನೊ 2 ಪಾಪಪುಣ್ಯ ಕರ್ಮಗಳಿಗೆ ನೀನೆ ಪ್ರೇರಕನಲ್ಲವೇನೊ ಶ್ರೀ ಪರಾತ್ಪರ ನೀ ಸ್ವತಂತ್ರ ನಾ ಪರಾಧೀನನಲ್ಲವೆ 3 ಪುಣ್ಯಗೈದವರಲಿ ಕರುಣವನು ಗೈವುದೇನು ಮಹಿಮೆ ಘನ್ನ ಪಾಪಿಗಳಲಿ ನೀ ಪ್ರಸನ್ನನಾಗಲು ಖ್ಯಾತಿಯಲ್ಲವೆ 4 ಪತಿತಪಾವನ ದೀನರಕ್ಷಕ ಶ್ರಿತ ಜನಮಂದಾರನೆಂಬ ವಿತತ ಬಿರುದು ಬರಿದೆ ಪೇಳೋ ಗತಿ ಪ್ರದಾಯಕನಲ್ಲವೇನೊ 5 ದುರಿತ ರಾಶಿ ನೋಡಿ ಬೆದರಿ ನಿಂತೆಯೇನೊ ನೀನು ದುರಿತ ದೂರನಲ್ಲವೇ ನಿನ್ನ ಸ್ಮರಣೆ ನೋಡದ ದುರಿತವಿಹುದಿ 6 ತರಳತನದ ಸಲಿಗೆಯಿಂದ ಪರಿಪರಿಯಲ್ಲಿ ನುಡಿದೆನಯ್ಯಾ ಪರಮ ತತ್ವವರಿಯೆ ನಾನು ಪೊರೆಯೊ ಎನ್ನ ಕರಿಗೀರೀಶ 7
--------------
ವರಾವಾಣಿರಾಮರಾಯದಾಸರು
ಧ್ಯಾನಿಸಿ ಆತ್ಮನ ಧ್ಯಾನಿಸಿ ಬ್ರಹ್ಮನ ಧ್ಯಾನಿಸಿ ಸಂತತ ಗುರುವರ್ಯನ ಪ ದುರಿತ ಮೋಹ ದುಃಖ ದೂರ ನೂಂಕಿ ಕಾಯ್ವ ಪರಮ ಪಾವನಮೂರ್ತಿಯ 1 ಕಾಮಿತಾರ್ಥಗಳನು ಪ್ರೇಮದಿಕೊಡುವನ ಭೀಮಮಿತ್ರನ ನೀವು 2 ಪಾಪಪುಣ್ಯವೆಲ್ಲ ಶ್ರೀಪತಿಗರ್ಪಿಸಿ ಗೋಪತಿಯನು ನಂಬಿ ಧ್ಯಾನಿಸಿ 3 ಧರೆಯೊಳು ಮಹದೇವಪುರದ ಶ್ರೀರಂಗನ ಮರೆಯದೆ ಭಾವ[ಶುದ್ಧ]ದೊಳ್ 4
--------------
ರಂಗದಾಸರು
ಪಾಪಾತ್ಮನಾನಲ್ಲ ಪಾಪವೆನಗಿನಿತಿಲ್ಲ ಶ್ರೀಪತಿಯೆ ನಿನಗೆ ನೀನೇ ಮಾಡಿಕೊಂಡೆ ಪ ಅಂದು ಭೃಗುಮುನಿಯೆದೆಯಲೊದೆಯಲವನಿಗೆ ಪಾಪ ಬಂದುದೇ ಮೂದಲಿಸಿ ಬೈದವನಿಗಾ ದೋಷವು ನಿಂದುದೇ ಹಣೆಯೊಡೆಯಲೆಸೆದ ಭೀಷ್ಮಂಗಘವು ಹೊಂದೀತೆ ಪಾಂಡವರ್ಗೆ ಕುಂದು ಬಂದೀತೆ ದೇವಾ 1 ವರದನಾಕಾರದೊಳಗುಷ್ಣಜಲ ಮೃತ್ತಿಕೆಯ ತರಲು ಕೈಸುಡಲು ಹಣೆಯನು ಟೊಣದು ಬೈದೇ ಮರಳಿ ನಾಚಿಕೆಯಿಲ್ಲದೆ ಚರಣಕ್ಕೆ ಪಾವುಗೆಯ ನಿರಿಸಿದಪರಾಧ ನಿನ್ನದೋ ಯೆನ್ನದೋ ದೇವಾ 2 ಕುರುಡನಿಗೆ ದಾರಿಯನು ತೋರುವಾಪ್ತನು ಮುಳಿದು ಜರಿದು ನೂಕಿದೊಡಾತನೇನ ಮಾಡುವನೂ ಗುರಿಯನಿಡುವವನು ತಪ್ಪೆಸೆಯೆ ಸರಳಿನದೇನು ಅರಸಾಳಕೊಂದಡವನೇನು ಮಾಡುವನೂ 3 ಕುಣಿಸಿದಂತಾಡುವುದು ಬೊಂಬೆಯು ಸ್ವತಂತ್ರವದ ಕಿನಿತುಂಟೆ ಕಪಟನಾಟಕ ಸೂತ್ರಧಾರೀ ಎನಿತಾಡಿಸಿದೊಡಾಡುವೆನು ಪಾಪಪುಣ್ಯವೆಂ ಬೆಣಿಕೆಗಾನಲ್ಲ ನೀನಲ್ಲದೆಲೆ ದೇವಾ4 ತಂದೆ ತಾಯ್ಗಳು ತಮ್ಮ ಕಂದನನು ಸರ್ಪಮುಖ ದಿಂದ ಕಚ್ಚಿಸಲು ತರಳನಲಿ ತಪ್ಪೇನೂ ಮುಂದರಿಯದಜ್ಞಾನಿಯೆಂದು ನೀಕ್ಷಮಿಸಿಕೋ ತಂದೆ ವೈಕುಂಠ ವೇಲಾಪುರಾಧೀಶಾ 5
--------------
ಬೇಲೂರು ವೈಕುಂಠದಾಸರು
ಪ್ರಾಣ ಸಂಕರುಷಣಭವ ಜಗತ್ರಾಣ ಮುಖ್ಯಪ್ರಾಣ ಪ ತೃಣಜೀವರಾದಿ ಜಂಗಮಜಡದೊಳು ಪೂರ್ಣನಹುದೊ ಶ್ರೀಹರಿಪ್ರೇರಣೆಯಿಂದ ಅ.ಪ ಪ್ರಾಣ ನಿನ್ನಿಂದಲೆ ಸರ್ವರತ್ರಾಣ ಪ್ರವೃತ್ತಿಯೂ ನಿನ್ನಯ ಆಣತಿಯಂತಿರ್ಪುದಯ್ಯಾ ಮುಖ್ಯ ಪ್ರಾಣನೆ ತ್ರಿವಿಧಜೀವರೊಳನವರತದಿ ನೀ ನೆಲೆಸಿ ಏನೇನು ಮಾಳ್ಪಕರ್ಮಂಗಳೆಲ್ಲವು ನಿನ್ನಿಂದೈಯ್ಯಾ ಪ್ರಾಣೋಪಾನವ್ಯಾನೋದಾನಸಮಾನರ ತ್ರಾಣ ನಿನ್ನದೊ ಮುಖ್ಯಪ್ರಾಣದೇವನೆ ಪ್ರಾಣಿಗಳಲಿ ಪಂಚಪ್ರಾಣರೂಪದಲಿಹೆ ಪ್ರಾಣಿಕಾರ್ಯಕ್ಕೆಲ್ಲ ನೀನಾಧಾರನೋ 1 ಸ್ಥೂಲಶರೀರದೊಳು ಪಾಯೂಪಸ್ಥದಿ ಸ ಕಲಮಲಗಳಾದ್ಯಪಸರಣಾದಿಗಳಿಂದ ರಕ್ಷಣೆ ಎಲ್ಲಪಾನನಿಂದಲಿ ಮಾಡಿಸಬಲ್ಲೆ ಮುಖನಾಸಿಕನೇತ್ರದಿ ಎಲ್ಲಶ್ವಾಸಾದಿಗಳಾಡಿಸಬಲ್ಲೆ ಕಾಲಕಾಲಕುಶ್ವಾಸಪ್ರಣಯದಿಂದಲಿ ಎಲ್ಲಕಾಲದೊಳು ಪ್ರಾಣನೆಂಬರೋ ಎಲ್ಲ ಜೀವರೊಳು ನಿಂತು ನಡೆವೆ ಶ್ರೀ- ನಲ್ಲನಾಜ್ಞೆಯಂತನುವರ್ತಿಸುವೆಯೊ 2 ಎಪ್ಪತ್ತೆರಡು ಸಾವಿರವಿಹ ನಾಡಿ ಒಡಗೂಡಿ ಅನುದಿನ ಇಪ್ಪ ಈ ಜಡದೇಹವನೇ ನೋಡಿ ವ್ಯಾಪಿಸಿ ವ್ಯಾನನಿಂದ ರಸಗಳಾ ನಾಡಿಗೆ ಕೊಂಡೋಡಿ ತಪ್ಪದೆ ನಾಡಿಕಾರ್ಯವನೆಲ್ಲ ಕ್ರಮದಿ ಮಾಡಿ ಒಪ್ಪೆ ಉದಾನಸುಷುಮ್ನನಾಡಿಯೊ ಒಪ್ಪಿಸುವೆ ಸುಖದುಃಖಫಲವನು ಪಾಪಪುಣ್ಯದಂತೆ ಜೀವರಿಗೆ ಲೋಕವ ಪ್ರಾಪಿಸಿಕೊಡುವಿಯೊ ಆಜ್ಞೆಯಿಂ 3 ಭುಕ್ತವಾದನ್ನವೆ ಮೊದಲಾದ್ದೆಲ್ಲ ತತ್ತಸ್ಥಳಗಳಿಗೊಯ್ವಪ್ರಯುಕ್ತ ಪ್ರಾಣಾಪಾನರಮಧ್ಯಪ್ರಾದೇಶವಾದ ನಾಡಿಯಲಿದ್ದ ಸಮಾನವಾಯುವಿಂ ಶಕ್ತಿಯಸಕಲಾವಯವಕೀವ ಶಕ್ತಿಯಿಲ್ಲದತ್ಯಲ್ಪಜೀವರಿಗೆ ಶಕ್ತಿಯಿತ್ತು ಜ್ಞಾನೇಂದ್ರಿಯ ವೃತ್ತಿಯ ವ್ಯಕ್ತಮಾಡಿ ಫಲವಿತ್ತು ಪೊರೆವೆಯೋ ಮುಕ್ತರೊಡೆಯನಿಗೆ ಅತ್ಯಂತ ಹಿತಕರ 4 ಪ್ರಾಣಾ ನೀ ಬಾಹ್ಯಾದಿತ್ಯನೊಳಿದ್ದು ಅಧ್ಯಾತ್ಮನೆನಿಸಿ ಕಣ್ಣೀನೊಳಾದಿತ್ಯನಲಿ ಬಂದು ಅಧಿಭೂತನೆನಿಸಿ ಕಣ್ಣೀನಭಿಮಾನಿಪ್ರಾಣನ ಸೇರಿ-ಅಧಿದೈವವೆಂದು ಎಣಿಪರೊ ಈ ವಿಧ ತ್ರಯಗತನೆಂದು ತೃಣ ಮೊದಲಾದ ಸರ್ವಜೀವರ ಪ್ರಾಣಪಂಚರೊಳು ಮುಖ್ಯಪ್ರಾಣನೆ ಫಣಿಗಿರೀಶ ಶ್ರೀ ವೆಂಕಟೇಶನ- ಪ್ಪಣೆಯಂತೆ ನೀ ನಿಯಾಮಕನಾಗಿಹೆ 5
--------------
ಉರಗಾದ್ರಿವಾಸವಿಠಲದಾಸರು
ಸ್ಥಿರವೆಂದು ನಂಬಿ ಕೆಡಬೇಡ ಮನುಜಾ ಧರಣಿ [ಬಾಳು] ಕರುಣೆಯಿಹುದು ಮಾ[ಂಗಿರೀಶನ] [ನಂಬಿದರೆ] ಪ ಕ್ಷೀರಾಬ್ಧಿಗೈದು ಮುದದಿ ಪೊರೆವನು ಸ್ತನ್ಯದಿಂ ಹೀರಿ ತೇಲುತ ಬೆಳೆದು ತೋರಮುತ್ತುಗಳಾ ಹಾರ ಪದಕಗಳಿಂದ ಚಾರುಭೂಷಣದಿಂದ ಮಾರಸುಂದರನೆನಿಪ | ಮೂರು ದಿನದ ಬಾಲ 1 ಬಾಲತನ ಪೋಗಲು ಮೇಲೆ ಯೌವನವೊದಗಿ ಬಾಲೆಯೋರ್ವಳಕರವ ಘಳಿಲದೊಳು ಹಿಡಿದು ಮೇಲಾದ ಸೌಭಾಗ್ಯವಲ್ಪಕಾಲವಿರುವಾಗ ಕಾಲದೂತರು ಪಿಡಿಯಲೊಡನೆ ಬ[ರುವ]ವರಿಲ್ಲ 2 ಉಕ್ಕುವ ಯೌವನದ ಸೊಕ್ಕಿಲ್ಲ ಮರುದಿನ ಉಕ್ಕುಕ್ಕಿ ಬಸವಳಿದು ಶಕ್ತಿಗುಂದಿ ಸುಕ್ಕು ಸುಕ್ಕಿನ ದೇಹ[ಭಾ]ವವಿಲ್ಲದ ಬಾಳ ಭಕ್ತಿಗೆ ಮನಮರೆಯೆ ಭಕ್ತಗತಿಯದರಿಂದ 3 ಧನವ ದಾಯಾದಿಗಳು ಮನವ ಕಾಮಾದಿಗಳು ಸನುಮತ ಜ್ಞಾನವನ್ನು ದುರಿತಕಾರ್ಯ ತನುಜ ತನುಜೆಯರೆಲ್ಲರವರವರ ಸೌಖ್ಯವನು ಸನಿಹದಿಂ ಸೂರೆಗೈವರಿನ್ನೇತರಾಸೆ 4 ಕುಂಟು ಜೀವವಿರುವನಕ ನೆಂಟರಿಷ್ಟರು ಹಣವ ಗಂಟನುಂಗಲು ಬರುತಲೆಂಟೆಂಟುದಿನವಿಹರು ಗಂಟು ತೀರಿದ ಬಳಿಕ ಪಾಪಪುಣ್ಯಗಳ ಹೊರತು [ಏ ನುಂಟು ಈಭವದ ನಂಟಿನಲಿ ಯದರಿಂದ 5 ಜೀವ ತಾ ಜನಿಪಂದು ರವೆಯಷ್ಟು ತರಲಿಲ್ಲ ಅವನಿಯಾ ಬಿಡುವಂದು ಜವೆಯಷ್ಟ ಹೊರಲಿಲ್ಲ ಭಾವಶುದ್ಧಿ ಬೇಕನಿಶ ಮಾವಿನಾಕೆರೆರಂಗನ ಸೇವಿಸಿದೊಡಾ ರಂಗ ಭವವೆಲ್ಲ ಕಳೆವಾ 6
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪಾಲಿಸೋ ಪಾಲಿಸೋ || ಕರುಣಾಲಯ ವರದೇಂದ್ರ ಮುನಿ ಸುಖ ಸಾಂದ್ರ ಪಪುಣ್ಯ ಮಂದಿರ ವಾಸ |ಸನ್ನುತಜನಪಾಲ ||ಬನ್ನಪಡಿಸದಲೆ | ಯನ್ನನುದ್ಧರಿಸೋ 1ದೀನ ಸುರದ್ರುಮ | ಹೀನಪಂಕಜಸೋಮ||ಮಾನಿ ಸುಜ್ಞಾನಿ ನಿ | ನ್ನೇನು ಬಣ್ಣಿಪೆನೋ 2ತ್ರುಟಿಮಾತ್ರ ಬಿಡದಲೆ | ಘಟನೆಯ ಮಾಡಿಸೊ ||ಸಟೆಯಲ್ಲ ಪ್ರಾಣೇಶ | ವಿಠಲನ ಸ್ಮರಣೆ 3
--------------
ಪ್ರಾಣೇಶದಾಸರು
ಹರಿಯಲ್ಲಿ ಧನ್ಯರು ಪೊರೆಯರು ಸತ್ಯಸ್ಥಿರವೀ ಮಾತಿಗೆ ಸದ್ಭಕ್ತರು ಸಾಕ್ಷಿಯಿಹರು ಪಪುಣ್ಯಾತ್ಮ ಪ್ರಿಯ ವೃತ ಸಾಕ್ಷಿ ಜಗನ್ಮಾನ್ಯ ನಾರದ ದೇವ ಋಷಿ ಶ್ರೇಷ್ಠ ಸಾಕ್ಷಿಧನ್ಯ ಧೃವರಾಯನು ಸಾಕ್ಷಿ ಹರಿಯಪೂರ್ಣ ವ್ಯಾಪ್ತಿಯ ತೋರ್ದ ಪ್ರಲ್ಹಾದ ಸಾಕ್ಷಿ 1ದೊರೆ ಅಂಬರೀಷನು ಸಾಕ್ಷಿಹರಿಗುರುಭಕ್ತಿ ನಾಮಕೆ ದ್ರೌಪದಿ ಸಾಕ್ಷಿಸ್ಥಿರ ವಿಭೀಷಣ ರಾಜ ಸಾಕ್ಷಿ ತನ್ನಮರಣ ಕಾಲದಿ ನೆನೆದ ಅಜಮಿಳ ಸಾಕ್ಷಿ 2ದೊರೆ ಧರ್ಮ ದೇವರು ಸಾಕ್ಷಿ ಜಗದ್ಗುರುವಾದ ಮಹ ರುದ್ರದೇವರು ಸಾಕ್ಷಿಗರಳಕಾಳಿಂಗನು ಸಾಕ್ಷಿ ಪ್ರಾಣಾತುರದಿಹರಿಯ ಕರೆದ ಗಜರಾಜ ಸಾಕ್ಷಿ 3ಶಿಲೆಯಾದ ಅಹಲ್ಯೆಯ ಸಾಕ್ಷಿ ಗರ್ವವರ್ತಿಸಿದ ನಹುಷನೃಗರು ಸಾಕ್ಷಿಚೆಲುವೆ ಗಂಡಿಕಾ ವೇಶ್ಯ ಸಾಕ್ಷಿ ಭಕ್ತಿಗೊಲಿದುನಲಿದಜ್ಞಾನಿವಿದುರನು ಸಾಕ್ಷಿ 4ಮೊರೆ ಹೊಕ್ಕ ಸುಗ್ರೀವ ಸಾಕ್ಷಿ ಬಾಲ್ಯಪರಮಮಿತ್ರನಾದ ಕುಚೇಲ ಸಾಕ್ಷಿಶರಬಿಟ್ಟ ಭೃಗುವಾದ ಸಾಕ್ಷಿ ಶ್ರೇಷ್ಠಹರಿದಿನ ವೃತದ ರುಗ್ಮಾಂಗ ಸಾಕ್ಷಿ 5ಪುಂಡಲೀಕ ಋಷಿಸಾಕ್ಷಿ ಆ ಮೃಕಂಡಮುನಿಜ ಮಾರ್ಕಾಂಡೇಯ ಸಾಕ್ಷಿಪಂಡಿತಸಾಂದೀಪ ಸಾಕ್ಷಿ ಕುರುಪಾಂಡವರ ಪಿತಾಮಹ ಭೀಷ್ಮನು ಸಾಕ್ಷಿ 6ಪಿರಿದು ಕಷ್ಟದ ನಳ ಸಾಕ್ಷಿ ಕೃಷ್ಣಕರುಣಿಕೆ ಪಾತ್ರಪರೀಕ್ಷಿತಸಾಕ್ಷಿನಳಕೂಬರು ಸಾಕ್ಷಿ ಸತ್ಯದ್ಹರಿಶ್ಚಂದ್ರಾದಿ ಪುಣ್ಯ ಶ್ಲೋಕರು ಸಾಕ್ಷಿ 7ನಿದ್ದೆಯ ಮುಚುಕುಂದ ಸಾಕ್ಷಿ ಆತ್ಮಬದ್ಧಭಕ್ತಿಯಲರ್ಪಿಸಿದಬಲಿಸಾಕ್ಷಿಶುದ್ಧಜ್ಞಾನಿಶುಕಸಾಕ್ಷಿ ಹರಿಯಸದ್ಯದಣನಾದ ಬಲಭದ್ರ ಸಾಕ್ಷಿ 8ಅರ್ಕಾದಿ ಋಷಿಗಳು ಸಾಕ್ಷಿ ವಿಶ್ವಾಮಿತ್ರದಕ್ಷ ಪ್ರಜೇಶ್ವರೆಲ್ಲ ಸಾಕ್ಷಿಮಿತ್ರೆ ಕುಬ್ಜಾ ತ್ರಿಜಟಿ ಸಾಕ್ಷಿ ಮಹಾಮೈತ್ರೇಯ ಪರಾಶರ ಮುನಿಶರು ಸಾಕ್ಷಿ 9ಇಂದ್ರಾದಿದಿವಿಜರುಸಾಕ್ಷಿ ಕೃಷ್ಣನ್ಹೊಂದಿ ಸೇವಿಸಿದುದ್ಧವಕ್ರೂರ ಸಾಕ್ಷಿಸುಂದರ ಗೋಪಿಯರು ಸಾಕ್ಷಿ ಪಾಪಸಂದೋಹದ್ಯುದೃತ ವಾಲ್ಮೀಕಿ ಸಾಕ್ಷಿ 10ಸರ್ವಮುಕ್ತಜೀವರು ಸಾಕ್ಷಿಯಾ ದೇವರು ವಸುದೇವ ದೇವಕಿಯರು ಸಾಕ್ಷಿಹರಿದಾಸರೆಲ್ಲರು ಸಾಕ್ಷಿ ಫಲಸಿರಿವಿಠಲಗೆ ಕೊಟ್ಟ ಶಬರಿಯ ಸಾಕ್ಷಿ 11
--------------
ಸಿರಿವಿಠಲರು