ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯೆ ನಿನ್ನ ಪದ ತೋಯಜಕೆರಗುವೆ |ಮಾಯದೇವಿಹರಿಕಾಯನಿವಾಸೇ ||ಕಾಯೇ | ಕಾಯೇ ಪಬುದ್ಧಿಯ ಪ್ರೇರಿಸೆ | ಪ್ರದ್ಯುಮ್ನನಸತಿ||ಕರ್ದಮಜಾಲಯ | ಭದ್ರ ಶರೀರೆ 1ಇಂಗಡಲಾತ್ಮಜೆ| ಅಂಗನಾಕುಲಮಣಿ||ರಂಗನ ಪದಕಂಜ | ಭೃಂಗೆ ಕರುಣದಿ 2ಪ್ರಾಣೇಶ ವಿಠಲನ | ಮಾನಿನೀ ಯನ್ನಯ ||ಹೀನತೆಯೆಣಿಸದೆ | ಪೋಣಿಸಿ ಮತಿಯ 3
--------------
ಪ್ರಾಣೇಶದಾಸರು
ನಿನ್ನ ಸೇರಿದೆ ಮಹಾಲಿಂಗ ಎನ-ಗಿನ್ಯಾರುಗತಿಕಾಣೆ ಕರುಣಾಂತರಂಗ ಪಾರ್ವತಿ ಮೋಹನಾಂಗಪ.ನಿನ್ನಂತೆ ಕೊಡುವ ಉದಾರ ತ್ರಿಭು-ವನ್ನದೊಳಿಲ್ಲದಕ್ಯಾವ ವಿಚಾರಮುನ್ನ ಮಾರ್ಕಾಂಡೇಯ ಮುನಿಯ ಭಯವನ್ನು ಪರಿಹರಿಸಿದೆಯೊ ಸದುಪಾಯ ನಮೋ ಶಿವರಾಯ 1ಸರ್ವಾಪರಾಧವ ಕ್ಷಮಿಸು ಮಹಾ-ಗರ್ವಿತರಾಶ್ರಯಕ್ಕೊಲ್ಲದು ಮನಸುಶರ್ವರೀಶಭೂಷ ನಿನ್ನ ಹೊರ-ತೋರ್ವರಿಲ್ಲ ರಣಮಲ್ಲ ಮುಕ್ಕಣ್ಣ ಕಾಯೊ ಸುಪ್ರಸನ್ನ 2ಅಂತರಂಗದ ದಯದಿಂದ ಯುದ್ಧ-ಮಂ ತೊಡಗಿದೆ ಪಾರ್ಥನೊಳತಿಚಂದಪಂಥದ ನೆಲೆಯನ್ನು ತಿಳಿದು ಸರ್ವ-ಮಂತ್ರಾಸ್ತ್ರಗಳನಿತ್ತೆಯೊ ಭಕ್ತಗೊಲಿದುದೊಡ್ಡದು ನಿನ್ನ ಬಿರುದು 3ಸಿದ್ಧಿಸು ಸರ್ವಸಂಕಲ್ಪ ಅಡ್ಡ-ಬಿದ್ದು ಬೇಡುವೆ ನಿನಗ್ಯಾವದನಲ್ಪಬುದ್ಧಿಯ ನಿರ್ಮಲಮಾಡು ನಿನ್ನಹೊದ್ದಿದವರಿಗಿಲ್ಲೆಂದಿಗು ಕೇಡು ದುಷ್ಟರದ್ಯಾವ ಪಾಡು 4ಅಂಜಿಕೆ ಬಿಡಿಸಯ್ಯ ಹರನೆ ಪಾ-ವಂಜಾಖ್ಯವರಸುಕ್ಷೇತ್ರಮಂದಿರನೆಸಂಜೀವನ ತ್ರಿಯಂಬಕನೆ ನವ-ಕಂಜಾಕ್ಷ ಲಕ್ಷುಮಿನಾರಾಯಣಸಖನೆಸಲಹೊ ಪಂಚಮುಖನೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ