ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲೆ ಎಲೆ ಎಲೆ ಥೂ ಪರದೇಸಿ ನೀ ಸುಳ್ಳೆ ಸುಳ್ಳೆ ಮಾಡಬೇಡ ಚೌಕಾಸಿ ಪ ತಿಳಕೊಂಡು ನೋಡು ನೀನು ಸುಧಾರಿಸಿ ಬಲವಾಗಿ ಬರದೇನು ಹಿಂಬಾಲಿಸಿ ಅ.ಪ ಎಷ್ಟು ದುಡಿದಿ ಸತಿಸುತರಿಗಾಗಿ ಗಂಟು ಕಟ್ಟಿಕಟ್ಹ್ಹೂಳಿಟ್ಟಿ ಇವರಿಗಾಗಿ ಅಷ್ಟು ಬಿಟ್ಟು ನಡೀತಿದ್ದಿ ಹಾಳಾಗಿ ನಿನ್ನ ಇಟ್ಟು ಬಂದು ಉಣುತಾರೋ ಹೋಳಿಗಿ 1 ಕಣ್ಣು ಮುಚ್ಚ್ಯಾಟವನಾಡುತಿದ್ದಿ ನೀ ಬಣ್ಣಗೆಟ್ಟು ಖರೆಯೆನುತಿದ್ದಿ ಸುಣ್ಣದ್ಹರಳ್ಹೊತ್ತ ಕೋಣ ಹೋಗಿ ಭರದಿ ಕಂಡು ತಣ್ಣೀರಿನೊಳು ಬಿದ್ದು ಸತ್ತ ಗಾದಿ2 ಘಟ ಇದು ಪುಸಿಯು ಬರಿದೆ ಗಾಳಿಯ ಮಟ್ಟ ವಸುಧೇಯೊಳಧಿಕೆಂದು ತೊಡು ನಿಷ್ಠೆ ನಮ್ಮ ಅಸಮ ಶ್ರೀರಾಮನ ಪಾದ್ಹಿಡಿ ಗಟ್ಟಿ 3
--------------
ರಾಮದಾಸರು
ಭವ ಬಂಧವೂ ಪಗಂಗಾಜನಕ ಖಗೊತ್ತುಂಗ ತುರಗನೆ ದೇವ ರಂಗಾಪುರಾಗಾರನೆ ಸ್ವಾ'ು ಅ.ಪದುರಿತ ಕೋಟಿಗಳ ಪರಿಹರಿಸಿ ರಕ್ಷಿಪ ನಿನ್ನ ಬರಿನಾಮಸ್ಮರಣೆಯೊಂದುಪರಿಪರಿಯ ಭವದ ಕೋಟಲೆಯ ಬಿಡಿಸುವ ನಿನ್ನ ಚರಿತೆಯ ಶ್ರವಣವೊಂದುಅರಿತರಿಯದೆಸಗಿದಘರಾಶಿಯ ದ'ಸಿ ನಿನ್ನ ಶರಣಜನ ಸಂಗವೊಂದುಇರಲಿವನು ಬಯಸಿ ಬೇಡುವೆನೆಂದು ನಿನ್ನ ಸಿರಿಚರಣದೆಡೆಗೈದಿ ಸಂತಸದಳೆದುನಿಂದೂ 1ಆವಜನ್ಮಾರ್ಜಿತದ ಸುಕೃತ ಪರಿಪಾಕವೊ ದೇವ ನಿನ್ನಯ ಕರುಣವೋಸಾವಧಾನದಿ ನಿನ್ನ ನೆನೆದು ಪೂಜಿಸಿ ನುತಿಪ ಸೇವಕರ ಪ್ರೇಮದೊಲವೋಜೀವರಾಶಿಗಳೊಳುದುಸಿ ಮಡಿಯೆ ಪುಟ'ಟ್ಟ ಭಾವಬಂದೀ ಬಣ್ಣವೋಆವುದನು ತಿಳಿಯದಜ್ಞನನು ನಿನ್ನವರೊಯ್ದು ಪಾವನಕ್ಷೇತ್ರವನು ಪೊಗಿಸಿದತಿಶಯವೋ 2ಗುರು ವಾಸುದೇವಾರ್ಯನಾಗಿ ಚಿಕನಾಗಾಖ್ಯಪುರದಿ ಮ'ಮೆಯ ತೋರ್ದೆಯೈಕರೆದಜ್ಞರಜ್ಞತೆಯ ಪರಿದು ಸುಜ್ಞಾನ ಸುಧೆಯೆರೆದು ನೀನೆ ಪೊರೆದೆಯೈಪರದೇಸಿ ವೇಷದಿಂ ಮೂಢ ಜನರಿಗೆ ಭಕ್ತಿುರವ ಕೈಸಾರಿಸಿದೆಯೈಮರೆಯೊಕ್ಕೆ ನಾನು ತಿಮ್ಮದಾಸ ದೇವ ಪರಾಕು ಕರ'ಡಿದು ಕಾಯಬೇಕೆನ್ನ ವೆಂಕಟರಮಣ 3
--------------
ತಿಮ್ಮಪ್ಪದಾಸರು