ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈಗಿದ್ದ ಇರವೇ ಮನುಜರಿಗೆ ಈಗಿದ್ದ ಇರವೇ ? ಪ ಮಾಯಾಪ್ರಪÀಂಚದ ಬಲೆಯ ಪಾಶಕ್ಕೆ ಸಿಕ್ಕಿ ಕಾಯದೊಳಿಹ ಪರಮಾತ್ಮನನರಿಯದೆ ಅ.ಪ. ನರರ ಯೋನಿಗೆ ಬಂದು ನಡತೆ ಸಜ್ಜನರೆಂದು ಬರಿಯ ಬನ್ನಣೆಯೊಳು ಬೆರೆತಿಹರಲ್ಲದೆ ಶರೀರ ಸುಖವನ್ನೆಲ್ಲ ಮರೆತು ತನ್ನಾತ್ಮನೊಳಿರುವ ಸುಖವು ತಾನು ಬಯಸಬೇಕಲ್ಲದೆ ಈಗಿದ್ದ 1 ಮಂದಮತಿಗಳಾಗಿ ಮಮತೆಮಾರ್ಗಕೆ ತಾಗಿ ಅಂದಣದೈಶ್ವರ್ಯ ಬಯಸುವವರಲ್ಲದೆ ಹೊಂದಿಸಿ ಸಚ್ಚಿದಾನಂದ ಬ್ರಹ್ಮದಿಮನ ಬಂದಾಗಿ ನಲಿಸಿ ವಿರಕ್ತಿಯ ಬಂದಿಯೊಳ್ಬಲಿಸಿ ನಿಂದು ನಿಜದ ನಿರುಪಮನೆ ನಿತ್ಯಾತ್ಮನೆ ಎಂದು ಕುಂದದೆ ಸಹಜಾನಂದನಾಗದ ಮೇಲೆ ಈಗಿದ್ದ 2 ಪರಮಪುರುಷರಾದ ಪ್ರಹುಢ ಸಂತರ ಪಾದ ಸ್ಮರಣೆಯ ನಿರುತ ಮಾಡಿರಬೇಕಲ್ಲದೆ ಪರತತ್ವಮಯನಾದ ಗುರುಮಹಾರಾಯನ ಕರುಣವ ಪಡೆದು ಕಣ್ಣಿನೊಳು ಶ್ರೀ ಚರಣವ ಪಿಡಿದು ಬರಿಯಮಾತಲ್ಲವೆಂದರಿತು ಪೂರ್ಣ ಬ್ರಹ್ಮ ಗುರುವಿಮಲಾನಂದ ಭರಿತನಾಗದ ಮೇಲೆ ಈಗಿದ್ದ 3
--------------
ಭಟಕಳ ಅಪ್ಪಯ್ಯ
ಏನಿದೇನಿದನ್ಯಾಯ ಕೇಳಲಾಗದಯ್ಯ ಧ್ಯಾನದಿಂದಾನೆಂಬ ಹೀನ ಜನರ್ವಚನ ಪ ಪರಮಪುರುಷರ ಚರಿತ ಪರಮ ಭಕ್ತಿಯಲಿಂದ ಬರೆದೋದಿಕೇಳಿದರೆ ಪರಮಪದವೆನುತ ವರವೇದ ಸ್ಮøತಿವಾಕ್ಯ ಅರಿದರಿದು ಸಚ್ಚರಿತ ಬರೀಬಾರದೆನ್ನುವ ನರಗುರಿಗಳ ವಚನ 1 ಕನಸುಮನಸಿನೊಳೊಮ್ಮೆ ಜನಕಜೆಯವರನಂಘ್ರಿ ನೆನೆವರ್ಗೆ ಭವಬಂಧವಿನಿತಿಲ್ಲವೆನುತ ಮನುಮುನಿಗಳ್ಬರೆದಿಟ್ಟ ಘನತರದ ವಚನಗಳನು ಮನನ ಮಾಡಳಿವ ಬಿನಗುಜನರ್ವಚನ 2 ಬೀಳುತೇಳುತಲೊಮ್ಮೆ ನೀಲಶ್ಯಾಮನ ದಿವ್ಯ ಮೇಲು ಮಹಿಮೆಯ ಮನದಾಲಿಸಲು ಜವನ ದಾಳಿ ಸೋಂಕದು ಎಂದು ಶೀಲದೊರೆದ್ವಚನಗಳ ಕೇಳಿ ತಿಳಿಯದ ಮಹ ಕೀಳುಜನರ್ವಚನ 3 ಹರಿನಾಮ ಕೀರ್ತನೆಯಿಂ ಜರಾಮರಣ ಕಂಟಕª À ಕಿರಿದು ಮಾಡಿ ದಾಟಿದರು ಗುರುಹಿರಿಯರೆಲ್ಲ ನಿರುತ ನಿಜ ತಿಳಿಯದೆ ಹರಿಸ್ಮರಣೆ ಸ್ಮರಿಸದೆ ಬರಿದೆ ಬ್ರಹ್ಮೆಂಬ ಮಹನರಕಿಗಳ ವಚನ 4 ಪರಮ ಶ್ರೀಗುರುರೂಪ ವರದ ಶ್ರೀರಾಮನಂ ನೆರೆನಂಬಿ ಒಲಿಸದೆ ಗುರುವಾಗಿ ಜಗದಿ ಅರಿವಿತ್ತು ಆತ್ಮನ ಕರುಹು ತೋರಿಸಿ ಪರಮ ಪರತರದ ಮೋಕ್ಷಮಂ ಕರುಣಿಸುಯೆಂತು 5
--------------
ರಾಮದಾಸರು
ನಿನ್ನ ನಾ ಬಿಡುವನಲ್ಲಾ ಗೋಪಾಲಾ ನಿನ್ನ ಬಿಡುವನಲ್ಲ ಎನ್ನ ರಕ್ಷಿಸದಿರೆ ಪನ್ನಗಾದ್ರಿಯವಾಸ ಪರಮಪುರುಷರಂಗಾ ಪ ನಾಗಾರಿ ರೂಪನಾದ ಪರಮಾನಂದ ಭೋಗಿಶಯನ ವಿನೋದ ಭಕ್ತವತ್ಸಲ ಸಾಗರನಳಿಯ ಭೂಸುರಧೇನು ಪೋಷಕ ಭಾಗವತರ ಪ್ರಿಯಾ ಯೋಗಿಗಳರಸ1 ಜಲಜಾಕ್ಷ ನಳಿನನಾಭ ಜಾನಕೀರಮಣ ಜಲನಿಧಿಶಯನ ದೇವಾ ಜಗದೋದ್ಧಾರ ಜಲಜಬಾಂಧವ ಕುಲ ಶ್ರೇಷ್ಠಾದಿ ಮೂರುತಿ ಒಲಿದೆನ್ನ ದುಷ್ಕರ್ಮನಳಿದು ಪೋಷಿಸದಿರೆ 2 ಶಂಬರಾರಿಯ ಪಿತನೆ ಜಗನ್ನುತ ಕುಂಭಿನೀಧವನಾದನೇ ಗೋವಿಂದ ಶ್ರೀ ಕಂಬುಕಂಧರ ಕೃಷ್ಣಾ ಅಂಬುಧಿ ಬಂಧಿಸಿ ಅಂಬುಜಾಕ್ಷಿಯ ತಂದ ಹರಿ 'ಹೆನ್ನ ವಿಠ್ಠಲಾ’ 3
--------------
ಹೆನ್ನೆರಂಗದಾಸರು