ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದೇ ಸೀತಾ ಮಹಾಮಂತ್ರ ಭವಾಬ್ದಿ ದಾಂಟುವಾ ಮಂತ್ರಾ ನಿತ್ಯ ಅನುದಿನಾ ಪಠಿಸುತಿರುವಾತಾ ಮುಕುತಿಪಂಥ ಪಡೆವ ನಿರುತಾ ಇದೇ ದೇಹದಲಿ ತಾನಿರುತಾ 1 ವಿರಾಗಿಯಾಗಿ ಮನದಲ್ಲಿ ಪರಾನಂದಾತ್ಮರೂಪವನು ತಿಳಿಯುವಾ ಚೈತನ್ಯರೂಪವನು ಇದೇ ಗೀತಾಪರಣಫಲ ತಾ ಪ್ರಶಾಂತಾಕಾಮನಾಗಿರುತಾ 2 ನಿಧಾನಾ ನೊಂದಮನನಿಗಿದೆ ಪ್ರಧಾನಾ ಶಾಸ್ತ್ರ ಸಂಚಯ ದೇ ಪ್ರಧಾನಾ ಷಟ್‍ಶಾಸ್ತ್ರ ಸಂಚಯದೇ ಸದಾ ಧ್ಯಾನಾ ಇದೇ ಮನನಾ ಮನುಜನೇ ಇದುವೆ ಸುಖತಾಣಾ 3 ತಿಳಿ ನೀ ಗೀತೆಯಾ ಬೋಧಾ ಅಳಿ ನೀ ಜೀವಪರ ಬೇಧಾ ತಿಳಿ ನೀ ಪರಮಾತ್ಮಪದ ಬೋಧಾ ಪಡೆವ ಮೋದಾ ಶ್ರವಣದಿಂದಾ ಇದೇ ಶ್ರೀ ಶಂಕರನ ಬೋಧಾ 4
--------------
ಶಂಕರಭಟ್ಟ ಅಗ್ನಿಹೋತ್ರಿ
ನೀವೆಲ್ಲ ಪರಮಾತ್ಮನೆ ಏಳಿ ಸಾರುವೆ ಈ ನುಡಿ ಕೇಳಿ ಪ ತುಂಬಿಹ ಜಗವನು ನಿಮ್ಮೊಳಗಿರನೇ ಅಲೋಚಿಸಿರೀನುಡಿಯಾ ನಂಬಿರಿ ಶ್ರುತಿಶಿರ ಸಾರಿತು ಪರಮನು ಹೃದಯದ ಗುಹೆಯೊಳಗಿರುವಾ ಕಾಂಬನು ಗುಹೆಗಳ ಕಳೆದುಳಿದಾ ನಿಜ ಸಂಪೂರ್ಣಪದವೇ ಪರಾನಂದಾ 1 ಸ್ಥೂಲದೇಹಮೊದಲಾಗಿಹ ಗುಹೆಗಳ ನೈದನು ಕಳೆಯಲು ಉಳಿವಾ ಮೂಲರೂಪ ಪರಮಾತ್ಮನೆ ತಾನೆಂ ದರಿಯುತ ತಿಳಿಯಿರಿ ನಿಜವಾ ತಿಳಿಯಿರಿ ನಿರುತದಿ ನೀವೇ ಆ ಪದ ಮಾಯಾ ಶಂಕರಾರ್ಯ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಶಿವಸ್ತುತಿ ಶಂಕರನೇ ಸೌಖ್ಯದಾತ ಸಂಕಟ ನಿವಾರಣ ಶಿವ ಪ ತನುಮನಕಾಧಾರನಾದ ಘನಪರಾನಂದಾರ್ತ ವಿನಂಯದಿಂದ ನೋಡಲಕ್ಷ ಚಿನುಮಯಾತ್ಮನೇ ನೀ 1 ಚಿದ್ದಿಲಾಸ ಜಗವಿದೆಲ್ಲಾ ಅದ್ವಯಾನಂದಾಖ್ಯನೇ ಸಿದ್ಧನಾಗಿ ತೋರುತಿರುವಬಿದ್ರೂಪಾರ್ತನೇ ನೀ 2 ವಾಗ್ಮನಗೋಚರನೇ ಸಂಗರಹಿತ ಸ್ವಪ್ರಕಾಶ ಮಂಗಳಾತ್ಮ ಜ್ಯೋತಿರ್ಮಯ ಗಂಗಾಧರನೇ ನೀ 3 ಅಂತರಾನಂದಾರ್ತ ಜ್ಞಾನ ಸಂತ ಸಾದು ಸಾಧ್ಯನೇ ಶಾಂತಿ ಪದವನಿತ್ತ ಗುರು ಶಾಂತರೂಪನೇ ನೀ 4
--------------
ಶಾಂತಿಬಾಯಿ