ಒಟ್ಟು 24 ಕಡೆಗಳಲ್ಲಿ , 17 ದಾಸರು , 24 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ಇಂದು ಸೂಕರ ಕ್ರೂರರೂಪವತಾಳ್ದನಾ ಪೋರ, ಜನನಿಶಿರಹಾರಿ, ವನಚರ, ನಾರಿಜನರಿಗೆ ಒಲಿದನಾ 1 ನಾರಿವ್ರತ ಪರಿಹಾರ ಮಾಡಿ ಹಯವನೇರಿ ಮೆರೆದನಾ ಧಾರುಣಿಯೊಳು ಸಮೀರಗಿರಿವಾಸ ವೀರಪುರದೊಳು ತೋರೊನಾ 2 ವೀತಶೋಕ ವಿಧಾತಜನಕನ ದೂತಜನ ಪರಿಪಾಲನಾ ಖ್ಯಾತಮಹಿಮನ ದಾತಗುರುಜಗ ನ್ನಾಥವಿಠಲ ರಾಯನಾ 3
--------------
ಗುರುಜಗನ್ನಾಥದಾಸರು
2. ಶನೀಶ್ವರ ದಂಡಕ ಮಾಸ ಮಾನಿನಿ ಒಡಲು ಹಿಂಡು ನೆಟ್ಟನೆ ಹಗೇವದಲ್ಲಿದ್ದ ನಿಜಧಾನ್ಯ ಪಟ್ಟೆಂದು ಚಲಿಪುದು ಪರಿಪರಿಯ ವಸನಗಳು ಇಟ್ಟಲ್ಲಿ ನೆಲೆಸಿಹವಾಗಿಕಾಣಿಸದು ಅಟ್ಟೀವಹುಲಿಕರಡಿಉರಿಬಿಸಿಲು ಘನವಾಗಿ ಮಟ್ಟ ಮಧ್ಯಾಹ್ನದಲಿ ನೀರಡಿಸಿ ಕುಳಿತಿರಲು ಆರಿ[ಹ] ರೈ[ಕಾ]ವರಿಲ್ಲೆಂದು ಸಾರಸಂ [ಬಡುತ] ಕಾಡಿ [ಮೊರೆ]ಯಿಡೆ ನಿನ್ನ ಮೋಡಿ [ಮೆರೆವುದು] ಜರ್ಝರಿ ಭೂತ[ಂಗಳೆಲ್ಲಂ] ಬಿಟ್ಟು ಈ ದಂಡಕಂ ಹನ್ನೊಂದು ಬಾರಿ ಶನಿವಾರವೈದರಲಿ ಪಠಿಪರ್ಗೆ ಹನ್ನೊಂದನೆ ರಾಶಿಯೊಳಿರ್ದ ಫಲವನಿತ್ತು ಚೆಲುವ ವೇಲಾಪುರದ ವೈಕುಂಠ ವಿಠಲನ ಭಕ್ತನೆಂದೆನಿಸಿ ನಿನ್ನ ಪೆತ್ತ ಮಾತೆಯ ಪೆಸರನೆನಿತ ಧನ್ಯರಂ ಮಾಡಿಸದೆ ಅನ್ಯಾಯ[ಹಂ] ಕಾರಗಳಿಗಂಜಿ ನೀ ಬಿಡದೆ ನಿನ್ನ ಮನಬಂದ ರೀತಿಯಲಿ ಬಾಧಿಸದೈಯಾ ಸನ್ಮುನಿವಂದ್ಯ ಸರ್ವೇಶ್ವರಾನಂದ ಸಂಚಾರಿರವಿಸೂನು ಯಮ ಸಹೋದರ ವೀರಧರ್ಮ ಪರಿಪಾಲನೆ ಶನೈಶ್ವರ ಮಹಾರಾಯನೆ ತ್ರಾಹಿ ತ್ರಾಹಿ ನಮಸ್ತೆ ನಮಸ್ತೆ ನಮಃ ಶ್ರೀ ಕೃಷ್ಣಾರ್ಪಣಮಸ್ತುಃ
--------------
ಬೇಲೂರು ವೈಕುಂಠದಾಸರು
ಅನಿರುದ್ಧ ನೀಯನ್ನ ಮಾಧವ ಕೃಷ್ಣಾ ಪ ಪಾಂಡುತನಯ ಪರಿಪಾಲನ ಹರಿ ವೆತಂಡ ವರದ ಶ್ರೀಕುಂಡಲಿ±ಯÀನ 1 ಅಂಡಜಗಮನ ಪ್ರಂಚಂಡ ಮಹಿಮಾ ಭವ ಖಂಡನ ಮುನಿನುತ ಮಂಡನಭೀಮ 2 ನವನೀತ ಚೋರ ಗೋ ಪಾಲ ಮುರಾರಿ ದಯಾಲು ರಮೇಶ 4 ಕಂಬುಕಂಠ ಕನ ಕಾಂಬರಧರ ಶಶಿ ಬಿಂಬ ವಿಜಿತ ಮುಖ ಅಂಬುರುಹಾಕ್ಷ 5 ಪಾಪರಹಿತ ನಿರ್ಲೇಪ ನಿರಂಜನ ಶ್ರೀಪತಿ ಘನ ಹೆನ್ನೆಪುರನಿಲಯ 6
--------------
ಹೆನ್ನೆರಂಗದಾಸರು
ಇಂದು ನೋಡಿದೆ ನಂದಕರ ಯೋ- ಗೀಂದ್ರ ವಂದಿತ ಚರಣನಾ ಪ ವಂದನೀಯ ಶುಭೋರು ಗುಣ ಗಣ ಸಾಂದ್ರಗುರುರಾಘವೇಂದ್ರನಾ ಅ.ಪ ವೇದತತಿ ಶತಮೋದಗಿತ್ತ(ನ) - ಆದಿ ಮತ್ಸ್ಯನ ತೆರದಲಿ ವೇದವಾದವ ಶೋಧಮಾಡಿ ಮೇದಿನೀಸುರಗಿತ್ತನಾ 1 ಕಮಠರೂಪದಲಮರ - ತತಿಗೆ ಅಮೃತ ನೀಡಿದ - ತೆರದಲಿ ಸ್ವಮತ ಸುಧೆಯನು ಪ್ರಮಿತಗಿತ್ತಿಹ ಅಮಿತ ಸುಮಹಾಮಹಿಮನ 2 ಧರಣಿಮಂಡಲ ಧುರುದಿ ದಾಡಿಲಿ ಧರಿಸಿ ತಂದನ ತೆರದಲಿ ಧರಣಿ - ಜನರಿಗೆ ಧರೆಯ ಮೊದಲಾದ ಪರಮಭೀಷ್ಟೆಯನಿತ್ತು ಪೊರೆವನ 3 ತರುಳಪಾಲನ ತೆರದಲಿ ದುರಿತರಾಶಿಯ ತರಿದು ತನ್ನಯ ಶರಣಜನಪರಿಪಾಲನ 4 ಬಲಿಯ ಯಙ್ಞದÀ ಸ್ಥಳದಿ ಭೂಮಿಯ ನಳೆದರೂಪನÀತೆರದಲಿ ಖಳರ ವಂಚಕÀ ತನ್ನ ತಿಳಿವಗೆ ಸುಲಭದಿಂದಲಿ ಒಲಿವನ 5 ಕೆಟ್ಟರೋಗವು ಶ್ರೇಷ್ಠಭೂತದ ಅಟ್ಟುಳಿಯನೆ ಕಳೆವನ 6 ಜನಕನಾಜ್ಞದಿ ವನವ ಚರಿಸಿದ ಇನಕುಲೇಶನ ತೆರದಲಿ ಜನರಿಗೀಪ್ಸಿತ ತನಯ ಮೊದಲಾದ ಮನದಪೇಕ್ಷೆಯ ನೀಡೊನ 7 ಕನಲಿ ದ್ರೌಪದಿ ನೆನೆಸಲಾಕೆಯ ಕ್ಷಣಕೆ ಬಂದನ ತೆರದಲಿ ಮನದಿ ತನ್ನನು ನೆನೆವ ಜನರನು ಜನುಮ ಜನುಮದಿ ಪೊರೆವನ 8 ಮುದ್ದು ಸತಿಯರ ಬುದ್ಧಿ ಕೆಡಿಸಿ(ದ) ಗೆದ್ದು - ಬಂದನ ತೆರದಲಿ ಮದ್ದು ಮತಿಯನು ತಿದ್ದಿ ಭಕುತಗೆ ಶುದ್ಧ ಙÁ್ಞನವ ನೀಡೊನ 9 ಕಂಟಕ ಕಲಿಯವೈರಿ ಕಲಿಕಿರೂಪನ ತೆರದಲಿ ಹುಳುಕು ಮನವನು ಕಳೆದು ತನ್ನಲಿ ಹೊಳೆವ ಮನವನು ಕೊಡುವನಾ 10 ನೀತ ಗುರುಜಗನ್ನಾಥ ವಿಠಲ ಭೂತಳಕ್ಕಧಿನಾಥನು ಆತನಂತ್ಯತಿನಾಥ ಜಗಕೆ ಪ್ರೀತಿಶುಭಫಲದಾತನ 11
--------------
ಗುರುಜಗನ್ನಾಥದಾಸರು
ಇನಿತೆಂದು ಶಾಸ್ತ್ರ ಪೇಳುವವು ಪ ಪುನಹ ಪುನಹ ಭಗವತ್ಪ್ರಾಪ್ತಿ ಬೇಕೆಂಬುವರಿಗೆ ಅ.ಪ. ಅನುಬಂಧಿಗಳಲಿ ಮಮತೆಯನೆ ಬಿಡು ವಿಷಯ ವಾ ಸನೆಯನೀಡಾಡು ಸುಜ್ಞಾನ ಭಕ್ತಿಯ ಬೇಡು ಮನದಲ್ಲಿ ಹರಿಯ ಮೂರ್ತಿಯನೆ ನೆರೆ ನೋಡು ಸುಜ್ಞ ರನು ಕೊಂಡಾಡು ಅಜ್ಞಾನಿಗಳ ಸಹವಾಸ ಸುಡು ವನಜನಾಭನ ಪೂಜೆ ಮಾಡು ಪ್ರತಿ ಕ್ಷಣ ಬಿಡದೆ ಭಗವದ್ಗುಣಗಳ ಕೊಂಡಾಡು 1 ಪರಮಾಣು ಮೊದಲ್ಗೊಂಡು ವ್ಯಕ್ತ ತತ್ತ್ವದೊಳ ಹೊರಗೆ ವ್ಯಾಪಕನಾಗಿ ತದ್ರೂಪ ನಾಮದಿಂ ಕರೆಸುತಲಿ ತದ್ವಿಕಾರಗಳಿಲ್ಲದಲೆ ಸೃಷ್ಟಿ ಪರಿಪಾಲನೆ ಲಯಗಳನೆ ಮಾಡಿ ಮೋದಿಸುತಾ ಪರಮಾತ್ಮನೊಬ್ಬನಿಹನೆಂದು ಹರಿಗೆ ಮರೆಯದಲೆ ಮಹಿಮೆಗಳ ಪೊಗುಳುತಿರು ಮನುಜಾ 2 ಹರಿಭಕ್ತರಿದ್ದೆಡೆಗೆ ಹರಿದು ಹೋಗಲಿ ಬೇಕು ತಿರಿಯ ಕ್ಪುಂಡ್ರಗಳ ನಿಂದಿಸಬೇಕು ಹರಿಯ ನಾಮತ್ರಯಾಂಕಿತರಿಗೆರಗಲು ಬೇಕು ಗುರು ಹಿರಿಯರ ವಗುಣಗಳೆಣಿಸದಿರ ಬೇಕು ಮ ತ್ಸರವ ಬಿಡಬೇಕು ಭಕ್ತರಲಿ ಹೀಗೆ ಒರೆದೊರೆದು ಪೇಳುವರು ಬುಧರು ನಿತ್ಯದಲಿ 3 ನಿತ್ಯ ನೈಮಿತ್ತಿಕ ಸುಕರ್ಮ ಮಾಡಲು ಬೇಕು ಕೃತ್ಯವಲ್ಲದೆ ಲೋಕವಾರ್ತೆಗಳ ಬಿಡಬೇಕು ಚಿತ್ತದಲಿ ಹರಿಪಾದ ಚಿಂತಿಸುತಲಿರಬೇಕು ವಿತ್ತದೇಹಾಗಾರ ಭಗವಂತನದೆಂದು ದೇ ಪರಿಯಂತ ಮಾಳ್ಪ ಕರ್ಮ ಸತ್ಯಸಂಕಲ್ಪಕಿವು ಪೂಜೆ ಎನಬೇಕು 4 ಸೀತೋಷ್ಣ ಸುಖ ದುಃಖ ಮಾನಾಪಮಾನ ಜಯ ಭೀತಿ ನಿರ್ಭೀತಿ ಅಪಜಯ ಜ್ವರಾಪಸ್ಮಾರ ಭೂತ ಬಾಲ ಗ್ರಹ ಮೃಗಸರ್ಪ ನೃಪ ಚೋರ ಯಾತನೆಗೆ ಭಯಪಡದೆ ಸರ್ವತ್ರದಲಿ ಜಗ ನ್ನಾಥವಿಠ್ಠಲನ ಸ್ಮರಿಸುತಿರು ಮಹಾ ಪಾತಕವ ಪರಿಹರಿಸಿ ಪೊರೆವ ದಯದಿಂದಾ 5
--------------
ಜಗನ್ನಾಥದಾಸರು
ಎಚ್ಚರಿಕೆ ಎಚ್ಚರಿಕೆ ಎಲೋ ದೇವ | ಎಚ್ಚರಿಕೆ ಎಚ್ಚರಿಕೆ | ಅಚ್ಚ ಕಲ್ಯಾಣ ಮೂರುತಿ ತಿರುವೆಂಗಳಾ ಪ ಅಜ ದ್ವಿಜಗಜ ಅಜಾಮಿಳ ಪರಿಪಾಲನೆಯಾ | ದ್ವಿಜ ರಾಜಾಂಗಾ ಗಂಗಜ ಭಕ್ತವರದನೆಯಾ | ಗಜ ಕುಜ ದನುಜ ಭೂ ಭುಜರ ಸಂಹಾರನೆಯಾ | ಪಂಕಜ ಹೃದಯಾರ್ಕನೆಯಾ1 ಪರಮೇಷ್ಠಿ ವಂದನೆಯಾ | ಶರಧಿ ತಾರಾ ಕರುಗಳ ಕಾಯಿದನೇಯಾ | ಎರಡೇಳು ಲೋಕ ಪೊರೆವಾ ಭಾರಣ ಹರಿಯಾ | ಶರಣು ಹೊಕ್ಕೆನು ಎನ್ನ ಮೊರೆ ವಿಚಾರಿಸೊಯಾ 2 ಜಯ ಜಯಾ ಚಿತ್ತಾವಾಧಾರು ಪರಾಕ್ರಮಯಾ | ಭಯ ನಿವಾರಣ ನಿಜ ಭಂಟರಿಗೆ ಬಂಟಯಾ | ನಯ ಮೂರುತಿ ನಮ್ಮ ವಿಜಯವಿಠ್ಠಲರೇಯಾ ಯಾ | ತ್ರಿಯಗುಣ ವಿರಹಿತ ಶೇಷಗಿರಿವಾಸಯಾ 3
--------------
ವಿಜಯದಾಸ
ಎಲ್ಲಮ್ಮ ದಯಮಾಡಮ್ಮ ಕಾಡಬೇಡ ಎನ್ನಮ್ಮ ಪ ಇಲ್ಲದೆ ಪೋದರೆ ನಿಲ್ಲದೆ ಏನನು ಬಲ್ಲಿದನ ಕರೆತಂದು ಕೊಲ್ಲಿಸಿಬಿಡುವೆನೆ ಅ.ಪ ಕೊಡಲಿ ಹೊತ್ತು ಬರುತಾನ ತಾಯಿ ಗಡನೆ ಹೊರಳಿ ನೋಡಿನ್ನ ಬಡವರ ದಯಾನಿಧಿ ಕಡುಬಾಧೆ ಕಂಡರೆ ತಡೆಯದೆ ನಿನ್ನನು ಕಡಿಯದೆ ಬಿಡನವ್ವ 1 ತಂದೆವಚನ ಪರಿಪಾಲನು ಅವ ಬಂದರೆ ನಿನ್ನನು ಕೊಂದಾನು ಕಂದನ ಬಂಧನ ಚಂದದಿ ಕಳೆದಾ ನಂದವ ಕೊಡು ಕೊಡು ಸುಂದರಮುಖಿಯೆ 2 ಕಾರ್ತವೀರ್ಯ ತಂದಾನೇ ಈ ವಾರ್ತೆ ಕೇಳಲು ನಿನ್ನ ಬಿಟ್ಟಾನೇ ಅರ್ತುಭಜಿಪೆ ನಿನ್ನ ಗುರ್ತಿಟ್ಟೀಬಾಧೆ ತುರ್ತು ಕಳೆಯೆ ತಾಯಿ ಅರ್ತು ಶ್ರೀರಾಮನ 3
--------------
ರಾಮದಾಸರು
ಗಿರಿಜಾಪತಿ ಮಾಂ ಪರಿಪಾಲನೆ ವೋ ಪ ಧರೆಜನರೊಳು ಬಂದ ದುರತಾಂತಕನೆ ಶಂಭೋ ಅ.ಪ ಭವದೂರನೆ ಓಂ ಶಿವ ಶಂಕರನೆ ತವಪಾದನ ತೋರೋ ಭುವನೇಶ್ವರಗೌರೀಶ 1 ಮದನಾರಿಯೊ ನೀಂ ಮಧುಸೂದನನೇ ಬುಧಜನವಿನುತಾ ತತ್ಪದ ಭಜನೆಯೊಳಗಿರಿಸೊ 2 ಪರಮಾರ್ಯನೆ ಶ್ರೀ ತುಲಸಿರಾಮಾ ಗುರುವೇನ್ನಮಃ ಪರಮೋಪಾಯಾ 3
--------------
ಚನ್ನಪಟ್ಟಣದ ಅಹೋಬಲದಾಸರು
ದಶರಥರಾಮಹರೆ ಸೀತಾಪತೆ ದಶರಥರಾಮ ಸುಧಾಕರವದನ ¥ರಶುರಾಮ ಬಾಹುಪರಾಕ್ರಮ ಜಿತಶ್ರೀ ಪ ಸುರಮುನಿ ಸೇವಿತ ಶುಭಕರ ಚರಿತ ಕೌಸ್ತುಭ ಶೋಭಿತ ವರ ವಿಶ್ವಾಮಿತ್ರಾಧ್ವರ ಪರಿಪಾಲನ ಖರ ದೂಷಣ ರಾಕ್ಷಸ ಬಲ ಖಂಡನ 1 ವಾಲಿ ಮರ್ದನ ಭಕ್ತವತ್ಸಲ ಮಾಧವ ವಿನುತ ಪಾದ ಪದ್ಮ ನೀಲ ನೀರದ ಸನ್ನಿಭಗಾತ್ರ ಪರಮ ದಯಾಳು ನಾರಾಯಣ ಲೀಲಾ ಮಾನುಷ ವೇಷ 2 ಸಿಂಧು ಬಂಧನ ಪಂಕ್ತಿ ಕಂಧರಾಂತಕ ಗೋವಿಂದ ಮುಕುಂದಾರ ವಿಂದೋದರ ಇಂದಿರಾಧಿಪ ಶ್ರೀ ಹೆನ್ನೆಪುರ ನಿಲಯಾ ನಂದ ವಿಗ್ರಹ ಜಗದ್ವಂದ್ಯ ಮಂದಹಾಸ 3
--------------
ಹೆನ್ನೆರಂಗದಾಸರು
ಪಾಂಡುರಂಗ ಹರಿ ವಿಠಲ | ಕಾಪಾಡೊ ಇವನಾ ಪ ತೊಂಡ ವತ್ಸಲ ನೆಂಬ | ಬಿರಿದುಳ್ಳೊ ದೇವಾ ಅ.ಪ. ದಾಸವತ್ಯರ ಕರುಣ | ಲೇಸಾಗಿ ಪಡೆದಿಹಗೆಆಸುಪ್ತಿಪತಿ ಸೂಚ್ಯ | ಮೀಸಲುಪದೇಶದಾಸದೀಕ್ಷಾರೂಪ | ಆಶೆಯುಳ್ಳವಗಿತ್ತುಆಶಿಷವನಿತ್ತಿಹೆನೊ | ಹೃಷೀ ಕಪನ ಮೂರ್ತೇ 1 ಪಾದ ಮಹಿಮಾನುಭವಸಾಧಿಸೊ ಇವನಲ್ಲಿ | ಶ್ರೀ ದ ಶ್ರೀ ಹರಿಯೇ 2 ಊರ್ಮ ಷಟ್ಕಳವಕಳೆಯೆ | ಕರ್ಮನಿಷ್ಕಾಮಕದಿಪೇರ್ಮೆಯಲ್ಲಾ ಚರಿಪ | ಸನ್ಮಮನವ ನೀಯೋನಿರ್ಮಲಾತ್ಮನೆ ದೇವ | ಹಮ್ರ್ಯ ಗಹ್ವರದಲ್ಲಿಪರ್ಮ ನಿನ್ನಯರೂಪ | ತೋರಿಸೋ ಹರಿಯೇ 3 ಭವ | ಅಂಬುಧಿಯ ಕಳೆಯೋ 4 ಕೈವಲ್ಯಪ್ರದ ಹರಿಯೆ | ಭಾವುಕರ ಪರಿಪಾಲನೋವಿಲ್ಲದಾ ಸ್ಥಳಕೆ | ಬಯ್ವದೋ ಇದನಾಈ ವಿಧದ ಭಿನ್ನಪವ | ಸಲಿಸೆಂದು ಪ್ರಾರ್ಥಿಸುವೆಧೀವರನೆ ಹರಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮಂಗಳಂ ರಾಮಕೃಷ್ಣಾರ್ಯ ದಿವ್ಯಮಂಗಳ'ಗ್ರಹ ಸದ್ಗುರುವರ್ಯ ಪವಾದಿ ಜನರ ಮನೋಬಾಧೆಯ ಬಿಡಿಸುತಬೋಧೆಯ ಬಲಿಸಿ ಬ್ರಹ್ಮಾನಂದದಹಾದಿಯ ತೋರಿಸಿಯಾದರಿಸಿಯೆ ಕಾಯ್ವಬೋಧ'ಗ್ರಹ ನಿನ್ನ ಪಾದಪದ್ಮಗಳಿಗೆ 1ಭೂರಿ ಜನ್ಮಗಳೆತ್ತಿ ಸೇರಲು ತಡಿಯನುದಾರಿಗಾಣದೆ ಭವ ವಾರಿಧಿಯಹಾರೈಸಿದವರಿಗೆ ತೋರಿ ಜ್ಞಾನದ ನಾವೆಯೇರಿಸಿ ತಡಿಗೈದಿಸಿದ ಮೂರ್ತಿಗೆ 2ಕರುಣದಿಂ ಧರಣಿಯೊಳವತರಿಸಿಯೆ ಭಕ್ತಪರಿಪಾಲನಾರ್ಥದಿ ಯುಗಯುಗಕೂನರಹರಿ ರಾಮ ಶ್ರೀಕೃಷ್ಣ ರಾಮಕೃಷ್ಣಾರ್ಯತಿರುಪತಿ ವೆಂಕಟರಮಣನಿಗೆ3ಓಂ ಲೀಲಾಮಾನುಷ 'ಗ್ರಹಾಯ ನಮಃ
--------------
ತಿಮ್ಮಪ್ಪದಾಸರು
ಮಂಗಳಂ ಶ್ರೀರಾಮಚಂದ್ರಗೆ ಮಂಗಳಾಂಗಗೆ ಪ ಭೃಂಗವೇಣಿ ಜನಕಜಾಂತರಂಗ ಲೋಲಗೆಅ.ಪ. ರಾವಣಾದಿ ದನುಜಮಥನ ಕಾಲರೂಪಗೆ ಪಾವಮಾನಿ ಹೃದಯ ಕಾಮುದ ಪೂರ್ಣ ಚಂದ್ರಗೆ 1 ದೇವತಾಳಿ ಗೀಯಮಾನ ದಿವ್ಯ ಚರಿತೆಗೆ ಭೂ ವಧೂ ಪರಿಪಾಲನೈಕ ದರ್ಮನಿರತಗೆ2 ಕಮಲ ಹಂಸ ರೂಪಗೆ ಧೇನುನಗರ ನಾಥ ವೇಂಕಟೇಶ ರೂಪಗೆ 3
--------------
ಬೇಟೆರಾಯ ದೀಕ್ಷಿತರು
ರಕ್ಷಿಸೋಯನ್ನ ರಕ್ಷಿಸೋ ರಕ್ಷಿಸೋ ಬೇಗ ಉಪೇಕ್ಷಿಸದಲೆ ಜಲ ಜಾಕ್ಷ ಯನ್ನ ಮೊರೆ ಪಕ್ಷಿವಾಹನ ದೊರೆ ಪ ವಾರಿಧಿ ಮತ್ಸ್ಯಾವತಾರದಿ ಧರಿಸಿ ಪೊಕ್ಕು ಘೋರದೈತ್ಯನ ಕೊಂದು ಇನ್ನು ಚಾರು ಚರಿತ ವಿಸ್ತಾರ ಶೃತಿಗಳನು ವಾರಿಜಾಸನಗಿತ್ತ ವರದ ಜಗನ್ನಾಥ 1 ವರಕೂರ್ಮನಾಗಿ ಮಂದರಗಿರಿ ಪೊತ್ತು ನಿರ್ಜರರಿಗೆ ಸುಧೆಯನುಣಿಸಿ ಹರುಷದಲಿ ಕರುಣಿಸೋಯಂದರೆ ಕಠಿಣತ್ವ ವಹಿಸುವರೇ ಪರಮ ಪುರುಷ ನೀನು ಭಜಕರ ಕಾಮಧೇನು 2 ಧರೆಯ ಕದ್ದು ಒಯ್ದವನ ಕೋಪದಿ ಘನತರ ಕೋರೆಯಲಿ ಸೆಳದೆ ದನುಜಹರ ವರಾಹನಾದ ಶ್ರೀ ವತ್ಸಲಾಂಛನ ದೇವ ಶರಣಜನ ಮಂದಾರ ಶರನಿಧಿ ಗಂಭೀರ 3 ಗರುಡಗಮನ ಶ್ರೀ ಹರಿ ಸರ್ವೋತ್ತಮನೆಂಬ ತರುಳನ ತಂದೆಯ ತಾಮಸದಿ ಪರಿಪರಿಹಿಂಸೆಯ ಪಡಿಸುತಿರಲು ನರಹರಿ ರೂಪತೋರಿ ಪ್ರಹ್ಲಾದಗೊಲಿದ ಧೊರೆ 4 ಬಲಿಯದಾನವು ಬೇಡಿ ಬ್ರಹ್ಮಾಂಡ ಭಾಂಡವು ಅಳೆದು ಮೂರು ಪಾದದೊಳಗೆ ಮಾಡಿ ತುಳಿದವನ ಪಾತಾಳಕಿಳಿಯಲು ವಾಮನ ಬಲಭೇದಿ ಸನ್ನತ ಪಾಲಿಸೋ ಪ್ರಖ್ಯಾತ 5 ಪರಶುರಾಮ ಬಾಹು ಬಲದಿ ಸಕಲ ರಾಜರನೆಲ್ಲ ಗೆದ್ದು ಸುಸ್ಥಿರ ಮೂರ್ತಿ ಧುರದಿಂದ ಭೂಮಿ ಭೂಸುರರಿಗೇ ಧಾರೆಯ ನೆರೆದ ಶ್ರೀಮದನಂತ ನಿರತದಿ ಭಗವಂತ 6 ಅನಿಮಿಷರೊಡೆಯ ಶರಣು ಶರಣೆನುತ ರಾವಣನನು ಜನು ವಿಭೀಷಣನು ಬರಲು ಘನದಿ ಪಂಕ್ತಿ ಕಂಧರನ ಜಯಿಸಿ ಲಂ- ಇನಕುಲ ಪಾವನ 7 ಬಲದು:ಶಾಸನ ಸೀರಿಸೆಳಿಯೇ ದ್ರೌಪದಿ ಮನದಲಿ ಕಾಮಿತಾರ್ಥ ಫಲದಾಯಕ ಮಾನವ ರಕ್ಷಿಸೆಂದು ಸ್ತುತಿಸಲು ಪೊರೆದೆ ಹಲಧರಾನುಜ ಮುದದಿ 8 ಅಂಗಜ ಪಿತ ತ್ರಿಪುರಾಂಗನೆಯರ ವ್ರತ ಭಂಗಮಾಡಿದೆ ಹಿಂಗದಲೇ ಮಂಗಳಮಹಿಮ ಕೃಪಾಂಗ ಗಂಗೆಯನು ಪಾದ 9 ಚಲುವ ಕುದುರೆಯನೇರಿ ಕಲ್ಕಿಕಯ್ಯೊಳು ಖಂಡೆಯ ಪಿಡಿದು ಝಳಪಿಸುತ ಕಲುಷಾತ್ಮರೆಲ್ಲರ ಖಂಡಿಸಿ ಧರ್ಮವು ಪರಿಪಾಲನೆಮಾಳ್ಪ ಶ್ರೀ ಭೂದುರ್ಗಾಧಿಪಾ 10 ಪಾವನಚರಿತ ಕೃಪಾವನ ರಾಶಿ ಶ್ರೀ ದೇವಕೀಸುತ `ಹೆನ್ನೆಪುರೀಶ’ ದೀನ ದೇವೋತ್ತಮ ದೀನ ಬಾಂಧವ ವೃಂದಾವನ ನಿಲಯಾನಂದ ಸುಂದರಕಾಯಾ 11
--------------
ಹೆನ್ನೆರಂಗದಾಸರು
ರಂಗ ಬಂದನೋ ಮೋಹನಾಂಗ ಬಂದನೋ ರಂಗ ಬಂದ ನೋಡಿ ಹೆನ್ನೆರಂಗ ದೇವೋತ್ತುಂಗ ಕೃಷ್ಣ ಪ ಭೋಗಿಶಯನ ಭವರೋಗಹರಣ ನಿಗಮಾ ಗಮಗನುತ ಶರಣಾಗತ ಪೋಷ 1 ಮಂದರಧರ ಮುಚುಕುಂದವರದ ರಾಕೇಂದುವದನ ಗೋವಿಂದ ಮುಕುಂದ 2 ತಾಪಸವಂದಿತ ಶ್ರೀಪತಿ ಘನ ಹೆನ್ನೆಪುರ ನರಹರಿ ಭೂಪರಿಪಾಲನ 3
--------------
ಹೆನ್ನೆರಂಗದಾಸರು
ರಂಗ ಬಾರೊ ನರಸಿಂಗ ಬಾರೊ ಪ. ಸಾಸಿರ ಮೂರುತಿ ವಾಸವವಂದ್ಯನೆಸಾಸಿರನಾಮದೊಡೆಯನೆಸಾಸಿರನಾಮದೊಡೆಯನೆ ನರಹರಿಕೇಶವ ನಮ್ಮ ಮನೆದೈವ 1 ವಾರಣವಂದ್ಯನೆ ಕಾರುಣ್ಯರೂಪನೆಪುರಾಣಗಳಲ್ಲಿ ಪೊಗಳುವಪುರಾಣಗಳಲ್ಲಿ ಪೊಗಳುವ ನರಹರಿನಾರಾಯಣ ನಮ್ಮ ಮನೆದೈವ2 ಯಾದವಕುಲದಲ್ಲಿ ಸಾಧುಗಳರಸನೆಭೇದಿಸಿ ದನುಜರ ಗೆಲಿದನೆಭೇದಿಸಿ ದನುಜರ ಗೆಲಿದನೆ ನರಹರಿಮಾಧವ ನಮ್ಮ ಮನೆದೈವ 3 ದೇವೆಂದ್ರ ಮಳೆಗರೆಯೆ ಗೋವರ್ಧನ ಗಿರಿಯೆತ್ತಿಆ ಗಿರಿಯ ಶ್ರೀಕೃಷ್ಣ ಕೊಡೆಮಾಡಿಆ ಗಿರಿಯ ಶ್ರೀಕೃಷ್ಣ ಕೊಡೆಮಾಡಿ ಕಾಯಿದನೆಗೋವಿಂದ ನಮ್ಮ ಮನೆದೈವ 4 ಸೃಷ್ಟಿಗೆ ಕರ್ತನೆ ದುಷ್ಟಕಂಸನ ಗೆಲಿದುಶಿಷ್ಟಪರಿಪಾಲನೆನಿಸಿದಶಿಷ್ಟಪರಿಪಾಲನೆನಿಸಿದ ನರಹರಿವಿಷ್ಣುವೆ ನಮ್ಮ ಮನೆದೈವ5 ಮಧುವೆಂಬೊ ದೈತ್ಯನ ಮುದದಿಂದ ಗೆಲಿದನೆವಿದುರನ ಮನೆಯಲಿ ನಲಿದುಂಡವಿದುರನ ಮನೆಯಲಿ ನಲಿದುಂಡ ನರಹರಿಮಧುಸೂದನ ನಮ್ಮ ಮನೆದೈವ 6 ಚಕ್ರವ ಪಿಡಿದನೆ ಭೂಚಕ್ರವ ಗೆಲಿದನೆಅಕ್ರೂರನೊಡನೆ ಮಧುರೆಗೆಅಕ್ರೂರನೊಡನೆ ಮಧುರೆಗೆ ಪೋದ ತ್ರಿ-ವಿಕ್ರಮ ನಮ್ಮ ಮನೆದೈವ7 ಸಾಮವನೋದುತ್ತ ದಾನವ ಬೇಡುತ್ತನಾಮದ ಮಹಿಮೆ ಪೊಗಳುತ್ತನಾಮದ ಮಹಿಮೆ ಪೊಗಳುತ್ತ ನರಹರಿವಾಮನ ನಮ್ಮ ಮನೆದೈವ8 ಶ್ರೀಧರ ಎಸಿಸಿದ ಶ್ರೀವತ್ಸ ಲಾಂಛನಶ್ರೀಧರ ಗೋಪೀತನಯನೆ ಶ್ರೀಧರ ಗೋಪೀತನಯನೆ ನರಹರಿಶ್ರೀಧರ ನಮ್ಮ ಮನೆದೈವ 9 ಋಷಿಜನ ವಂದ್ಯನೆ ಬಿಸಜನಾಭನೆ ದೇವಋಷಿಜನರಿಗೆಲ್ಲ ಅಭಯವಋಷಿಜನರಿಗೆಲ್ಲ ಅಭಯವ ಕೊಡುವೋನೆಹೃಷಿಕೇಶನೆ ನಮ್ಮ ಮನೆದೈವ10 ಪದುಮಸಂಭವಪಿತ ಪದುಮದಾಮೋದರ[ಪದುಮ]ದಿಂದಭಯವ ಕೊಡುವೋನೆ[ಪದುಮ]ದಿಂದಭಯವ ಕೊಡುವೋನೆ ನರಹರಿಪದುಮನಾಭನೆ ನಮ್ಮ ಮನೆದೈವ 11 ನಾಮದ ಮಹಿಮೆಯ ಪ್ರೇಮದಿ ಪೊಗಳಲುಕಾಮಿತಾರ್ಥಗಳ ಕೊಡುವೋನೆಕಾಮಿತಾರ್ಥಗಳ ಕೊಡುವೋನೆ ನರಹರಿದಾಮೋದರ ನಮ್ಮ ಮನೆದೈವ 12 ಸಂಕಟಗಳ ತರಿವೋನೆ ಪಂಕಜನಾಭನೆಶಂಕೆಯಿಲ್ಲದೆ ಅಸುರರಶಂಕೆಯಿಲ್ಲದೆ ಅಸುರರ ಸಂಹರಿಸಿದಸಂಕರ್ಷಣ ನಮ್ಮ ಮನೆದೈವ 13 ವಸುದೇವತನಯನೆ ಶಿಶುಪಾಲನ ಗೆಲಿದನೆವಶವ ಮಾಡಿದೆಯೊ ತ್ರಿಪುರರವಶವ ಮಾಡಿದೆಯೊ ತ್ರಿಪುರರ ನರಹರಿವಾಸುದೇವ ನಮ್ಮ ಮನೆದೈವ14 ಶುದ್ಧಸ್ವರೂಪನೆ ಶುದ್ಧ ಭಕ್ತರನು ಸಲಹಯ್ಯಹದ್ದುವಾಹನನಾದ ದೇವನೆಹದ್ದುವಾಹನನಾದ ದೇವನೆ ನರಹರಿಪ್ರದ್ಯುಮ್ನ ನಮ್ಮ ಮನೆದೈವ 15 ವನಜಲೋಚನ ಹರಿ ವಿನಯ ಉಳ್ಳವನೆಧ್ವನಿಕೇಳಿ ಬಂದ ಕುಬುಜೆಯ ಧ್ವನಿಕೇಳಿ ಬಂದ ಕುಬುಜೆಯ ನರಹರಿಅನಿರುದ್ಧ ನಮ್ಮ ಮನೆದೈವ 16 ಪಾರಿಜಾತದ ಹೂವ ನಾರಿಗೆ ಇತ್ತನೆವೀರ ದಾನವರ ಗೆಲಿದನೆವೀರ ದಾನವರ ಗೆಲಿದನೆ ನರಹರಿಪುರುಷೋತ್ತಮ ನಮ್ಮ ಮನೆದೈವ 17 ಅಕ್ಷಯಪದವೀವ ಪಕ್ಷಿವಾಹನಸ್ವಾಮಿಕುಕ್ಷಿಯೊಳೀರೇಳು ಭುವನವಕುಕ್ಷಿಯೊಳೀರೇಳು [ಭುವನವನಾಳಿದ] ನರಹರಿ ಅ-ಧೋಕ್ಷಜ ನಮ್ಮ ಮನೆದೈವ18 ನರಕಾಸುರನ ಕೊಂದು ಹಿರಣ್ಯನ ಮರ್ದಿಸಿಕರುಳ ಬಗೆದು ವನಮಾಲೆ ಹಾಕಿಕರುಳ ಬಗೆದು ವನಮಾಲೆ ಹಾಕಿದ ಹರಿನರಸಿಂಹನೆ ನಮ್ಮ ಮನೆದೈವ19 ಅಚ್ಚ್ಚುತಾನಂತನೆ ಸಚ್ಚಿದಾನಂದನೆ[ಮಚ್ಚಾವತಾರದಿ] ನಲಿದನೆ[ಮಚ್ಚಾವತಾರದಿ] ನಲಿದನೆ ನರಹರಿಅಚ್ಚುತ ನಮ್ಮ ಮನೆದೈವ 20 ಜಾನಕಿರಮಣನೆ ದಾನವಾಂತಕನೆದೀನರಕ್ಷಕನೆ ಸಲಹಯ್ಯದೀನರಕ್ಷಕನೆ ಸಲಹಯ್ಯ ನರಹರಿಜನಾರ್ದನ ನಮ್ಮ ಮನೆದೈವ 21 ಅಪರಿಮಿತಮಹಿಮನೆ ವಿಪರೀತ ಚರಿತನೆ[ಗುಪಿತವೇಷಗಳ] ತಾಳಿದನೆ[ಗುಪಿತವೇಷಗಳ] ತಾಳಿದ ನರಹರಿಉಪೇಂದ್ರ ನಮ್ಮ ಮನೆದೈವ 22 ಹರನ ಭಸ್ಮಾಸುರನು ಮರಳಿ ಬೆನ್ನ್ಹತ್ತಲುತರುಣಿರೂಪವನು ತಾಳಿದÀನೆತರುಣಿರೂಪವನು ತಾಳಿದ ನರಹರಿ ಶ್ರೀ-ಹರಿಯೆ ನಮ್ಮ ಮನೆದೈವ 23 ಕೃಷ್ಣಾವತಾರದಲಿ ದುಷ್ಟರ ಗೆಲಿದನೆವೃಷ್ಣಿಯರ [ಕುಲತಿಲಕನೆ]ವೃಷ್ಣಿಯರ [ಕುಲತಿಲಕನೆ] ನರಹರಿ ಶ್ರೀ-ಕೃಷ್ಣನೆ ನಮ್ಮ ಮನೆದೈವ 24 ಇಪ್ಪತ್ತು ನಾಲ್ಕು ನಾಮಂಗಳ ಪಾಡುವೆನುಅಪ್ಪ ಕೇಶವನ ಚರಿತೆಯನುಅಪ್ಪ ಕೇಶವನ ಚರಿತೆಯನು ಪಾಡಲುಒಪ್ಪಿಸಿಕೊಳ್ಳುವ ಹಯವದನ25
--------------
ವಾದಿರಾಜ