ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಿಪಾಲಿಸೈ ವರ ವೆಂಕಟೇಶ ಚರಣಾಬ್ಜಯುಗ ಸ್ಮರಣೆಯನಿತ್ತು ಪ ದುರಿತಾಧಿದೂರ ಪರತತ್ವಸಾರ ಪರಮಾತ್ಮನೆ ಪೊರೆ ಎನ್ನುತ ಕರಿರಾಜ ಮೊರೆಯಿಡುತಿರಲು ನೀ ಗರುಡನ ಏರಿ ತ್ವರೆಯಿಂದ ಬಂದೆ ಪರಮ ದಯಾಕರ ಶ್ರೀನಿವಾಸ 1 ಪಾಪಿಷ್ಠನು ಅಜಾಮಿಳನೆಂದು ಕೋಪದಿ ಯಮ ಭಟರೆಳೆಯುತಿರೆ ತಾಪಕೆ ತನ್ನ ಪುತ್ರನ ಕೂಗುತಲಿರೆ ಕೃಪೆಯಿಂದ ನಿಜಪುರಕೆ ಒಯ್ದೆ 2 ಕನಕಾಚಲನಿಧಿ ಲಕ್ಷ್ಮೀಕಾಂತ ಪ್ರಣತಾರ್ಥಿಹರ ಆನಂದಕರ ವನಜಾಸನಾದಿ ಅಮಿಷಪಾಲ ಯೋಗಿ ಮನ ಕುಮುದಲೋಲ 3
--------------
ಲಕ್ಷ್ಮೀನಾರಯಣರಾಯರು
ಬೇಡುವೆನು ಇದನೊಂದ ಕರುಣಿಸೋ ಹರಿಯೇ ಬೇಡವೆಂಬುದನೆಲ್ಲ ಏಕೀವೆ ಹರಿಯೇ ಪ ಒಪ್ಪಿಡಿಯ ಅವಲಕ್ಕಿಗೊಲಿದವನು ನೀನಂತೆ ಒಪ್ಪದಿಂದೆಲೆಯ ತಿಂದು ತೇಗಿದೆಯಂತೆ ತಪ್ಪುನೂರೆಂಟುಗಳು ಮನ್ನಿಸಿದೆ ನೀನಲ್ತೇ ಸರ್ಪಶಯನನೆ ನಿನ್ನ ನಾಮಭಜನೆಯ ಮಾತ್ರ 1 ಘೋರ ಪಾಪಿಯು ಮಗನ ಕರೆದಾಗ ಕರುಣಿಸಿದೆ ನಾರಿ ಹೊರದೂಡಿದ ತರಳನನು ಕಾಯ್ದೆ ಭಾರಿ ಮಕರಿಯ ಸೀಳಿ ಕರಿಯನೊಂದನು ಕಾಯ್ದೆ ನೀರಜಾಸನಪಿತನೆ ನಿನ್ನ ಸ್ಮರಣೆಯ ಮಾತ್ರ 2 ನಿನ್ನ ನಾಮದ ಭಜನೆ ಎನ್ನ ರಸನೆಯೊಳಿರಲು ಇನ್ನಾವ ಭಾಗ್ಯಗಳ ಬೇಡಲಾರೆನೋ ದೇವ ಪನ್ನಗೇಂದ್ರ ವಿಭೂಷಣ ಪರಿಪಾಲಿಸೈ ಶ್ರೀಶಾ ನಿನ್ನ ಧ್ಯಾನವ ಮಾತ್ರ ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀನಿವಾಸನೆ ಗಾನಲೋಲನೆ ಸಾನುರಾಗದೊಳೀಕ್ಷಿಸೈ ಜ್ಞಾನಪೂರ್ಣನೆ ಸೂನುವೆಂಬಭಿಮಾನದಿಂ ಪರಿಪಾಲಿಸೈ ಪ. ದೀನಪಾಲಕ ದಾನವಾಂತಕ ದೈನ್ಯದಿಂ ಮೊರೆಹೊಕ್ಕೆನೈ ಜ್ಞಾನಗಮ್ಯನೆ ಭಾನುತೇಜನೆ ನೀನೇ ಗತಿಯೆಂದೆಂಬೆವೈ ಅ.ಪ. ಸಾರಸಾಕ್ಷನೆ ಶ್ರೀರಮೇಶನೆ ಸಾರಿ ಬಾ ಭವದೂರನೇ ಗಾರುಗೊಂಡೆವು ಪಾರುಗಾಣಿಸು ನೀರಜೋದ್ಭವ ಜನಕನೆ ಕಾರ್ಯಕಾರಣ ಕರ್ತೃ ನೀನಹುದಾರಯಲ್ ಜಗದೀಶನೆ ಬೇರೆ ಕಾಣೆವದಾರ ನಿನ್ನನೆÉೀ ಸಾರೆ ಬೇಡುವೆ ದೇವನೆ 1 ಸಾರ ಸಂಗ್ರಹ ಮಾಡುತೆ ಆರ್ಯಕೀರ್ತಿಯ ಸಾರಿಪಾಡುತೆ ವೀರನಾದವ ಗೈಯುತೆ ಭೂರಿ ವೈಭವವೆಲ್ಲವಂ ಧೈರ್ಯದಿಂ ನಲವೇರೆ ಕೀರ್ತಿಸಿ ಕಾರ್ಯಸಿದ್ಧಿಯ ಪೊಂದುವೋಲ್2 ನಿರ್ಗುಣಾತ್ಮನೆ ನಿರ್ವಿಕಲ್ಪನೆ ನಿತ್ಯನಿರ್ಮಲಚರಿತನೆ ಮಾರ್ಗದರ್ಶಕನಾಗಿ ನಮ್ಮೊಳಗಾವಗಂ ಕೃಪೆ ಗೈವನೇ ಸಾರ್ವಭೌಮನೆ ಸರ್ವಶಕ್ತನೆ ಶೇಷಶೈಲ ನಿವಾಸನೇ ಸಾರ್ವಕಾಲದೊಳೋವುದೆಮ್ಮನು ಪಾರ್ವತೀಪತಿ ಮಿತ್ರನೆ 3
--------------
ನಂಜನಗೂಡು ತಿರುಮಲಾಂಬಾ
ಏಕೆನ್ನೊಳಿಂತು ಕೃಪೆಯಿಲ್ಲ ಹರಿಯೆಕಾಕಮಾಡದೆ ಕಾಯೊ ಸಂಗದೊಳು ಬಳಲಿದೆನು ಪಕಂದರ್ಪಬಾಧೆಯಿಂ ಮಾನಿನಿಯ ವಶನಾಗಿಮಂದಮತಿಯಿಂದ ನಾ ಮರುಳಾದೆನೋ ||ಸಂದಿತೈ ಯೌವನವು ಬುದ್ದಿ ಬಂದಿತು ಈಗಸಂದೇಹಪಡದೆ ನೀ ಕರುಣಿಸೈ ಎನ್ನ 1ಹೆಂಡತಿಯು ಕಡೆಗಣ್ಣಿನಿಂದ ನೋಡುವಳೀಗಹಿಂಡುಮಕ್ಕಳು ಎನ್ನ ತಿನ್ನುತಿಹರು ||ಮುಂಡಮೋಚಿದೆ ನಾನು ಇನ್ನಾರು ಗತಿಯೆನಗೆಪುಂಡರೀಕಾಕ್ಷನೀ ಪಾಲಿಸೈ ಎನ್ನ2ಅಟ್ಟಮೇಲೊಲೆಯುರಿಯುವಂತೆಹರಿಎನಗೀಗಕೆಟ್ಟ ಮೇಲರಿವು ತಾ ಬಂದಿತಯ್ಯ ||ನೆಟ್ಟನೇಪುರಂದರವಿಠಲನೆ ಕೈ ಬಿಡದೆದಿಟ್ಟಿಯಲಿ ನೋಡಿ ಪರಿಪಾಲಿಸೈ ಎನ್ನ 3
--------------
ಪುರಂದರದಾಸರು