ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಹಿಷಿ ಎನಿಸಿಹಳೇ ಪ ವಸುದೇವ ಭಗಿನಿ ಕೈಕೆಯೀ ಉದರದಲಿಅಸುವ ನೀಧರಿಸುತ್ತ ಅವತರಿಸುತಾ |ವಸುಧೆಯೊಳು ಸುಗುಣ ಗಣಯುತೆಯು ನೀನಾಗಿಪೆಸರಾಂತೆ `ಭದ್ರೆ` ಎಂದೆನುತ ಅವನಿಯಲೀ 1 ಪಿತನು ನಳನೆಂಬನಿಗೆ ಪ್ರೀತಿಯಲಿ ನೀ ಪೇಳ್ದೆಹಿತವು ಶ್ರೀ ಹರಿಗೆಂದು ನುತಿಸುವ ಸುಕರ್ಮ |ಅತಿಶಯದೆ ಪೂಜೆಯಿಂದಧಿಕದಲಿ ಶ್ರೀ ಹರಿಯುನುತಿಗೆ ಪ್ರೀತಿಸುವನೆಂದೊರೆದೆ ಭಕುತಿಯಲೀ2 ಹರಿನಾಮ ಸ್ಮರಿಸುತ್ತ ಹರಿ ಚರಣ ನಮಿಸುವರದುರಿತರಾಶಿಗಳಿರದೆ ಪರಿಹಾರವೆನುತಾ |ಒರೆಯುತೀಪರಿ ನಮನ ಭಕ್ತಿಗೇ ಪ್ರಾಶಸ್ತ್ಯಪರಿಪರಿಯ ಪೇಳಿಹಳೆ ನಮಿಪೆ ನಿನ್ನಡಿಗೇ3 ಈ ಪರಿಯ ತಪಗೈದು ದ್ವಾಪರದ ಯುಗದಲ್ಲಿಶ್ರೀ ಪತಿಯ ದರ್ಶನದಿ ತಾಪತ್ರಯ ಕಳೆದೂ |ಆ ಪರಮ ಪುರುಷನ್ನ ಕೈ ಪಿಡಿದ ಮಹ ಭದ್ರೆಕಾಪುರುಷನಾದೆನ್ನ ಪಾಪ ಪರಿಹರಿಸೇ 4 ಭದ್ರಾಣಿ ಪತಿಗಿನ್ನು ಕಾದ್ರವೇಯನು ಮತ್ತೆಆದ್ರಿ ಮಂದಿರ ತಂದ ಅವಿಕಾರಿ ವಿಪಗೇ |ಸಿದ್ಧೈದು ಗುಣದಿಂದ ಹೀನಳೆಂದೆನಿಸುತ್ತಭದ್ರ ಗುರು ಗೋವಿಂದ ವಿಠಲ ಪ್ರಿಯೆ ಪಾಹೀ 5
--------------
ಗುರುಗೋವಿಂದವಿಠಲರು
ಶ್ರೀ ಪಾರ್ವತೀ ಸ್ತೋತ್ರ ಅಂಬಾ ಅಚಲಸುತೆ ಅನಲಾಕ್ಷಸತಿ ನಿನ್ನ ಅಂಬುಜ ಅಡಿಗಳಿಗೆ ಎರಗಿದೆ ಅಮ್ಮ ಪ ಕಾರ್ತಿಕೇಯನ ಮಾತೆ ಕಾತ್ಯಾಯಿನೀ ದೇವಿ ಕಲುಷ ಪರಿಹರಿಸೇ 1 ಗಜಮುಖನತಾಯೆ ನೀ ಗಿರಿರಾಜ ಆತ್ಮಜೆ ವಜ್ರಿ ಮನ್ಮಥನುತೆ ಭಜಕಗೇ ಶುಭದೆ 2 ಉದಕಜಾಸನ ಪಿತ ಪ್ರಸನ್ನ ಶ್ರೀನಿವಾಸನ ಭಕ್ತಾಗ್ರಣೀ ಸದಾಶಿವನ ಅರ್ಧಾಂಗಿ ನಮೋ 3
--------------
ಪ್ರಸನ್ನ ಶ್ರೀನಿವಾಸದಾಸರು