ಒಟ್ಟು 12 ಕಡೆಗಳಲ್ಲಿ , 8 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಏ) ವಿಶೇಷ ಸಂದರ್ಭದ ಹಾಡುಗಳು ಬರಗಾಲ ಮತ್ತು ಯುದ್ಧವನ್ನು ಕುರಿತು ನಿರ್ದಯನಾಗಬೇಡವೋ ಭಗವಂತ ದುರ್ದಿನ ದೂರಮಾಡೋ ದೇಶಕ್ಕೆ ಪ್ರಶಾಂತ ಪ ಮಳೆಗಾಲ ಮರೆತುಹೋಗಿ ಬೇಸಗೆ ಬೆಳೆದು ಬಂದು ನೆಲವೆಲ್ಲ ದುರ್ಭಿಕ್ಷ ತಾಂಡವವಾಡುತಿದೇ 1 ಕೆರೆಕಟ್ಟೆತೊರೆಭಾವಿ ಹೊಳೆಯಲ್ಲಿ ನೀರಿಲ್ಲ ಧರೆಯಲ್ಲಿ ತೃಣವಿಲ್ಲ ಬರಿಗಾಡಾಯ್ತೋ 2 ಹೊಲಗದ್ದೆ ತೋಟಗಳ ಬೆಳೆಯೆಲ್ಲ ಒಣಗಿತು ಫಲವಿಲ್ಲ ಜನವೆಲ್ಲ ಗೋಳಾಡುತಿಹರೋ 3 ಅನ್ನಾಹಾರಗಳಿಲ್ಲ ಗೋಗಳಿಗೆ ಗ್ರಾಸವಿಲ್ಲ ಚಿನ್ನದಂಥ ಮಕ್ಕಳೆಲ್ಲ ಉಣಿಸಿಲ್ಲದಿಹರೋ4 ಧನಿಕರ್ಗೆ ಧನದಾಸೆ ಬಡವರ್ಗೆ ಕೂಳಿಲ್ಲ ದಿನಕಳೆವುದು ಕಷ್ಟವಾಗಿ ಬರಗಾಲ ಬಂತೋ 5 ಕಳವು ಕೊಲೆಯು ದಂಗೆ ದಾರಿದರೋಡೆಯು ಉಳಿಗಾಲ ಬರಲಿಲ್ಲ ಯುದ್ಧದ ಭಯವು6 ಒಂದೊಂಬತ್ತಾರೈದು ಹತ್ತು ಹನ್ನೊಂದರ ಮಧ್ಯೆ ಬಂದು ಜಗದ ಕುತ್ತು ಕತ್ತಿಯಂತೆ ಕಂಡಿತು 7 ಬೆಳಗುಪೂರ್ವ ಆಶ್ವಿಜ ಕಾರ್ತಿಕದೆ ಧೂಮಕೇತು ಇಳೆಗಂಡಕಳೆ ಯಮದ್ವಾರವ ಮುಚ್ಚಿ 8 ಅವಿಶ್ವಾಸದ ವಿಶ್ವವಸುವ ಪರಾಭವದಿಂ ಪ್ರೀತಿತೋರಿ ಭಂಗ ಹರಿಸೋ 9 ಪಾಕಿ-ಚೀನಾ ಪತನಗೈದು ಜೋಕೆಯಿಂ ಭಾರತವ ರಕ್ಷಿಸಿ ಲೋಕಕ್ಕೆ ಕ್ಷಾಮಹರಿಸಿ ಕ್ಷೇಮಕೊಟ್ಟು ಪೊರೆಯೋ10 ನಗೆಯಿಲ್ಲ ಸಂತೋಷ ಸುದ್ಧಿ ಕೇಳುತಲಿಲ್ಲ ಮಿಗಿಲಾಗಿ ಜನರೆಲ್ಲ ಸೊರಗಿ ಸುತ್ತುವರೋ11 ಕನ್ನಡದ ನಾಡಿಗೆ ಹೊನ್ನಿನ ಬಿರುದಿದೆ ಖಿನ್ನತೆ ತಾರದೆ ಉನ್ನತಿ ಕಾಪಾಡು 12 ಮುಂದೆಮಗೆ ಗತಿಯೇನು ಬಾಳುವಬಗೆಯೆಂತು ಬಂಧು ನೀನಿದ್ದುಕೊಂಡು ಅನ್ಯಾಯವಾಗಿದೆ13 ತಂದೆ ತಾಯಿಯು ನೀನು ಹೊಂದಿದ ಬಳಗ ನೀನು ಕುಂದಿಲ್ಲದೆಮ್ಮನ್ನು ಕಾವ ಪ್ರಭು ನೀನು 14 ಸುವೃಷ್ಟಿ ಸಸ್ಯವೃದ್ಧಿ ಜೀವನ ಸಮೃದ್ಧಿಯು ಸುವೃತ್ತಿ ಕರುಣಿಸಿ ಪೊರೆ ಜಾಜಿಶ್ರೀಶ 15
--------------
ಶಾಮಶರ್ಮರು
ಎನ್ನ ಮೋಹನ ತುಪಾಕಿಯನು ಪಿಡಿದು ಹಸ್ತದಲಿ ಚೆನ್ನಾಗಿ ಶೃಂಗರಿಸುವೆ ಪ ಭಿನ್ನಭಾವನೆಯ ಕಳಿದುಳಿದು ಕೋವಿಗೆ ಮತ್ತೆ ಇನ್ನು ಜೋಡಿಲ್ಲವೆಂದು ಇಂದುಅ.ಪ. ಪ್ರೇಮರಸವೆಂಬ ಜಲದಲಿ ತೊಳೆದು ಶುಚಿಮಾಡಿ ನೇಮವೆಂದೆಂಬ ನಿರ್ಮಲವಾಗಿಹ ಆಮಹಾಕನಕ ರಜತದ ಭೂಷಣವ ತೊಡಿಸಿ ಕಾಮವನು ಸುಟ್ಟು ಮಸಿಮಾಡಿ ತುಂಬುವೆನದಕೆ ಎನ್ನೆ 1 ಹಮ್ಮಮತೆಯೆಂಬ ಗುಂಡನು ಅದರಮೇಲಿರಿಸಿ ಒಮ್ಮನಸು ಎಂಬ ಗಜದಿಂದ ಜಡಿದು ಒಮ್ಮೆ ಗುರುವಾಕ್ಯರಂಜಿಕೆಯ ಕಿವಿಯೊಳಗರದು ಬಿಮ್ಮನೇ ಬಿಗಿದು ಈಕ್ಷಿಸಿ ನೋಡುವೆ ಎನ್ನ 2 ಮೆರೆವ ಸುಜ್ಞಾನ ಜ್ಯೋತಿಯ ಬತ್ತಿಯನು ಕೊಳಿಸಿ ಭರದಿ ಬರುತಿಹ ಅಷ್ಟಮದ ಕರಿಗಳಾ ತರಿದಾರು ವೈರಿವರ್ಗಕೆ ಕೆಡಹಿ ಗುರಿಯಿಂದ ಗುರುವಿಮಲಾನಂದ ರಸಭರಿತನಾಗಿರುವಂಥ 3
--------------
ಭಟಕಳ ಅಪ್ಪಯ್ಯ
ಏನು ಗಳಿಸಿದ್ಯೊ ಪ್ರಾಣಿ ಜ್ಞಾನಕ ಮಾಡಿ ನೀ ಹಾನಿ ಧ್ರುವ ಶಬ್ಧಜ್ಞಾನದ ಅಂಗಡಿನೀ ಹಾಕಿ ಲುಬ್ದಿಸಿದೊ ಬಲು ಪಾಕಿ ಲಬ್ದಾಲಬ್ಧಿಯು ತಿಳಿಯದೆ ಡೊಂಕಿ ಸ್ತಬ್ಧನಾದ್ಯೊ ವಿಶ ಸೋಂಕಿ 1 ವಿದ್ಯಾ ವ್ಯುತ್ಪತ್ತಿ ತೋರಿ ನೀ ಬಹಳ ಸದ್ಯಮಾಡಿದ್ಯೊ ತಾಳ ಮೇಳ ಸಿದ್ಧಾಂತನುಭವ ನೀ ಮಾಡಿ ಹಾಳ ಕೋಳ 2 ಗಳಿಸುವದೇನೆಂದರಿಯದೇ ಖೂನ ಬಾಳಿ ಬದುಕಿ ಪಡದೇನ ಬೆಳಗು ಬೀರುತಿರೆ ಮಹಿಪತಿ ಗುರುಜ್ಞಾನ ತಿಳಕೊಬಾರದೆ ನಿಜಖೂನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತುಪಾಕಿ ಬಾರೊ ಮಾಡೊ ಮನುಜ ತುಪಾಕಿ ಬಾರೊ ಮಾಡೊ ಪ ತುಪಾಕಿ ಬಾರೊ ಮಾಡೊ ಸೊಬಗಿನಿಂದ ನೀ ಭುಜಗಶಯನ ಶ್ರೀಹರಿಯ ಧ್ಯಾನವೆಂಬ ಅ.ಪ ಚಿತ್ತಶುದ್ಧಿಯೆಂಬ ಮದ್ದು ತುಂಬಿ ಭರ್ತಿಮಾಡಿಕೊಳವೆಯ ಸತ್ಯಗುಣವೆಂಬ ಛಡಿ ಪಿಡಿ ದೊತ್ತಿ ಜಡಿಯೊ ಭಕ್ತಿ ಬಾಹ್ವಿನಿಂದ ಎತ್ತಿ ಸಾಮಥ್ರ್ಯದಿ ಮಿಥ್ಯದೇಹವನು ಹತ್ತಿ ಬೇಂಟೆನಾಡೊ 1 ಅಂಟಿಕೊಂಡು ಬರುವ ಬೇಗ ತಿಳಿ ಎಂಟು ಕೋಣನ ಸುಳಿವ ಗಂಟಲಕ್ಕೆ ಹಾರುತಿರುವ ಆರುಹುಲಿ ಬಂಟನಾಗಿ ತರಿಯೆಲವೊ ವೈ ಕುಂಠನ ಕೃಪೆಯೆಂಬ ಬಂಟಬಲವು ಕೂಡಿ ಬೇಂಟೆನಾಡೆಲೊ 2 ಮೂರುಮಂದಿರವ ಕಟ್ಟಿಕೊಂಡು ಧೀರನಾಗಿ ನಲಿಯೊ ಸಾರಿಬರುವ ಏಳು ಕೊಳ್ಳಗಳ ಹಾರಿ ಮುಂದಕೆ ನಡೆಯೊ ಘೋರ ದುರ್ಗುಣ ಮೃಗ ಸೂರೆಮಾಡಿ ಮಹಧೀರ ಶ್ರೀರಾಮನ ಚಾರುಚರಣ ಸೇರು 3
--------------
ರಾಮದಾಸರು
ತುಪಾಕಿ ಸಾಧನವನು ತ್ವರಿಯ ಬಿದ್ದು ಮಾಡುತಿರುವೆಶಾಬಾಸು ಶಿವನೇ ನೀನಣ್ಣ ಪೇಳುವೆನಣ್ಣ ಪ ಮೌನವೆಂದೆನಿಪ ಮುಸೈದೆ ಸಹಿತಾಗಿಜ್ಞಾನ ಪಡೆದಳವ ಬಗಿಯಣ್ಣಾ ಸಾಧಿಸು ಅಣ್ಣಧ್ಯಾನವೆಂದೆನಿಪ ತಲೆಕಟ್ಟನೆ ಕಟ್ಟಿಆನಂದವನೆ ಆಡಣ್ಣ ಸಾಧಿಸು ಅಣ್ಣ 1 ಆರು ಚಕ್ರವೆಂಬ ಆರು ಕಟ್ಟಿನ ತುಪಾಕಿಧೀರತನದಿಂದ ಪಿಡಿಯಣ್ಣಾ ಸಾಧಿಸು ಅಣ್ಣಮೂರಾವಸ್ಥೆಯೆಂಬ ಮೂವೆರಳ ಮದ್ದ ಹೊಯ್ದಪೂರಾಯದವನ ಮಾಡಣ್ಣ ಸಾಧಿಸು ಅಣ್ಣ2 ಇಡಾಪಿಂಗಳವೆಂಬ ಎರಡು ಗುಂಡನೆ ಹಾಕಿರೂಢಿ ಎಂಬ ಗಜವ ಜಡಿಯಣ್ಣ ಸಾಧಿಸು ಅಣ್ಣಕೂಡಿಹ ಸತ್ವನೆಂಬ ಕೂರಿ ರಂಜಕವರೆದುಗೂಡು ಗುರು ಜಾವಿಗೆ ಒತ್ತಣ್ಣ ಸಾಧಿಸು ಅಣ್ಣ 3 ಆಸನ ನಳಿಕೆಯೆಂಬ ಆಧಾರವನೆ ಆಂತುವಾಸರ ಹೊಗ್ಗೊಡಬೇಡಣ್ಣ ಸಾಧಿಸು ಅಣ್ಣನಾಸಿಕಾಗ್ರವು ಎಂಬ ನೊಣನ ದಿಟ್ಟಿಸಿ ನೋಡಿಸೂಸದೆ ಏರಿಸಿ ನಿಲ್ಲಣ್ಣ ಸಾಧಿಸು ಅಣ್ಣ4 ಬರಿಯ ಪ್ರಣವವೆ ಎಂಬ ಬೆರಳ ಬೊಬ್ಬೆಯನಿಟ್ಟುಭರದಿ ಭೀತಿಯನಳಿಯಣ್ಣಾ ಸಾಧಿಸು ಅಣ್ಣಗುರು ಚಿದಾನಂದನು ಎಂಬ ಗುರಿ ಭ್ರೂಮಧ್ಯವೆ ಇರೆಗುರಿಯ ತಾಗುವಂತೆ ಇಡಣ್ಣ ಸಾಧಿಸು ಅಣ್ಣ5
--------------
ಚಿದಾನಂದ ಅವಧೂತರು
ಪಾದ ವನಜ | ಸೂಸಿ ಭಜಿಸಿರೋ |ವ್ಯಾಸ ತೀರ್ಥ ಶಿಷ್ಯರೆಂದು | ಭಾಸಿಸಿದ್ದರೋ ಪ ಪುರಂದರ ಗಡದಿ | ವಾಸರಿದ್ದರಾಪರಮ ಲೋಭಿ ನವ ಕೋಟಿ | ದ್ರವ್ಯವಿದ್ದರಾ 1 ಬಂದ ಕಾರ್ಯ ಮರೆತನೆಂದು | ಹರಿಯು ಚಿಂತಿಸೀಇಂದಿರೇಶ ದ್ವಿಜನಾಗಿ | ಹುಡುಗನಾವೆರಸೀ ||ಬಂದು ಮಗನ ಮುಂಜಿಗಾಗಿ | ಧನವನು ಬಯಸೀ ||ನಂದ ಕಂದ ತಿರುಗುತ್ತಿದ್ದ | ಅಂಗಲಾಚಿಸೀ 2 ಭಿಕ್ಷುಕನ್ನ ಬಿಡದಂತೆ | ಅಂಗಡಿಯಲ್ಲಿಶಿಕ್ಷಿಸೀದ ಆಳುಗಳ | ಲೋಭಿ ತಾನಲ್ಲಿ ||ತ್ರ್ಯಕ್ಷಸೇವ್ಯ ತಿಂಗಳಾರು | ತಿರುಗಿದನಲ್ಲೀಲಕ್ಷಿಸಾದೆ ಮೆರೆಯುತಿದ್ದ | ಕಾಣದಂತಲ್ಲಿ3 ಕಟ್ಟಕಡೆಗೆ ಸವೆದ ನಾಣ್ಯ | ಚೀಲ ವೆಸೆಯುತ್ತಕಟ್ಟು ಮಾಡ್ದ ದುಡ್ಡೊಂದನ್ನು | ಕೊಳ್ಳೆಂದೆನುತ್ತ ||ಅಟ್ಟುಗಳಿಗೆ ಬೇಸರಿಸಿ | ಮುಂದೆ ಹೋಗುತ್ತ |ಥಟ್ಟನ್ಹೋದ ಹಿತ್ತಲಿನ | ಕದವ ಸಾರುತ್ತ 4 ಅಲ್ಲಿನಿಂತ ಲೋಭಿ ಸತಿಯ | ಬಳಿಗೆ ಪೋಗುತ್ತಬಲ್ಲ ಹರಿಯ ಧನವ ಬೇಡ್ದ | ಮುಂಜಿಗೆನ್ನುತ್ತ ||ನಲ್ಲ ಬೈವನೆಂದು ಬೆದರಿ | ಇಲ್ಲವೆನ್ನುತ್ತಚೆಲ್ವ ಸತಿಯು ಪೇಳೆ ಅವಳ | ಮೂಗ್ತಿ ನೋಡುತ್ತ 5 ತವರು ಮನೆಯ ದ್ರವ್ಯದಾನ | ಮಾಡು ನೀನೆಂದಅವಳು ತನ್ನ ಮೂಗುತಿಯ | ಕೊಟ್ಟುದೆ ಛಂದ ||ಇವನು ಅದನ ಸಾಹುಕಾರ್ನ | ಮುಂದಾಕಿ ಅಂದಜವದಿ ನಾನೂರ್ಪಾಕಿ ಹಣ | ತನಗೆ ಬೇಕೆಂದ 6 ನಾಯಕನು ಕೈಲಿ ತೆಗೆದು ನೋಡುತ್ತಲಿರೇಶ್ರೀಯರಸ ಪೋದತಾನು | ಕಣ್ಣಿಗೆ ಮರೇ ||ಕಾಯುತ್ತಿದ್ದ ಆಳು ಹಿಡುಕಿ | ಸಿಗದೆತಾಬರೇನಾಯಕನದ ಭದ್ರಮಾಡಿ | ಸತಿಬಳಿಗೆ ಬರೇ 7 ಬರಿಯ ನಾಸಿಕವ ನೋಡಿ | ಮೂಗ್ತಿ ಎಲ್ಲೆನಲುಸರಿಯ ಪಡಿಸಲಿಕ್ಕೆ ಕೊಟ್ಟು | ಇರುವೆ ನೆನ್ನಲುತ್ವರದಿ ತೋರದಿರೆ ನಿನ್ನ | ಅರೆವೆ ನೆನ್ನಲು |ಬರುವೆ ಬೇಗ ಎಂದು ಪೋಗಿ | ಗರದ ಬಟ್ಟಲು 8 ಕರದಿ ಪಿಡಿದು ತುಳಸಿ ಮುಂದೆ | ಮೊರೆಯ ನಿಡುತಿರೇಗರದ ಬಟ್ಟಲೊಳು ಬಿದ್ದ | ಶಬ್ದವು ಬರೇ ||ಹರುಷದಿ ದಿಗ್ಗನೆ ಎದ್ದು | ಪತಿಗೆ ತಾತೋರೇಗರ ಹೊಡೆದಂತವನಾಗಿ | ಮೋರೆಯ ತೋರೇ 9 ಹೆಂಡತಿಯ ಕೇಳಿ ತಿಳಿದ | ಆದ ಪರಿಯಾಮಂಡೆ ಬಾಗಿ ತಾನು ಆದ | ಹೊಸ ಪರಿಯಾ ||ಕೊಂಡಾಡಿದ ಪತ್ನಿ ಚರ್ಯ | ಹರಿಯ ಭಕ್ತಿಯಬಂಡುಣಿ ಹರಿಪಾದಾಬ್ಜದಿ | ತೊರೆದ ಮನೆಯ 10 ಪಾದ ನಮಿಸೀಬಾರಿ ಬಾರಿ ಹರಿಯ ತತ್ವ | ಕೇಳಿ ಸುಖಿಸೀ 11 ಪುರಂದರ ಸಾರ ಭಾಷೆ | ಪ್ರಾಕೃತ ವೆನಿಸೀ 12 ಮೂರ್ತಿ ಸುಂದರತೊಂಡನಾದ ಮೇಲೆ ತನ್ನ | ಹೃದಯ ಮಂದಿರ ||ಪಿಂಡ ಅಂಡದೊಳಗೆ ಕಂಡು | ಹಿಗ್ಗಿದ ವಿವರ |ಕಂಡವನೆ ಪೇಳ ಬಲ್ಲ | ಅದರ ವಿಸ್ತಾರ 13 ಪೊಂದಿ ಅಪರೋಕ್ಷವನ್ನು | ಸುಜನರುದ್ಧಾರಛಂದದಿಂದ ಮಾಡಿದಂಥ | ದಾಸವರ್ಯರ ||ಅಂದ ಚರಿತೆ ಕೇಳಿ ತೋಷ | ಪೊಂದಿದವರನಂದ ಕಂದ ಪಾಲಿಸುವ | ಬಿಡದೆ ಅವರಾ 14 ಗೋವ ಕಾವ ಗೊಲ್ಲರೊಡೆಯ | ಗೋಪಿಯ ಬಾಲತಾವಕ ಭಕ್ತರ ಪೊರೆವ | ಪಾಂಡವ ಪಾಲಆವ ದಾಸರ ಪೊರೆದಂತೆ ಮೈದುನ ಪಾಲದೇವ ದೇವ ಪೊರೆವ ಗುರು | ಗೋವಿಂದ ವಿಠಲ 15
--------------
ಗುರುಗೋವಿಂದವಿಠಲರು
ಪುರಂದರ ದಾಸರಾಯರ ಪೋಷಿಸುವ ಸಂತೋಷದಿಂದಲಿ ಪ ಪುರಂದರಗಡಾದ ಒಳಗೆ ಹಿರಿಯ ಸಾವುಕಾರನೆನಸಿ ಪರಿಪರಿಯ ಸೌಖ್ಯಗಳ ಸುರಿಸುತ್ತ ಇರುತಿರಲು ನರಹರಿ ತ್ವರಿತದಿಂ ಬ್ರಾಹ್ಮಣನಾಗುತ್ತ ಪೋಗುತ್ತ ಯಜಮಾನ ಕಂಡು ಜರಿದು ಬ್ರಾಹ್ಮಣನ್ಹೊರಗೆ ಹಾಕಲು ಮರುದಿವಸ ಮತ್ಹೋಗಿ ನಿಂತ 1 ಭಾರಿಭಾರಿಗೆ ಸಾವುಕಾರನ ಮೋರೆಗ್ಹೊತ್ತಿ ಮೇರೆಯಿಲ್ಲದೆ ಆರು ತಿಂಗಳು ಬೆನ್ನು ಬೀಳುತ್ತ ನಾಯಕರು ಈತನ ಆರು ಅಟ್ಯಾರೆಂದು ಬೈಯುತ್ತ ಬೇಸತ್ತು ಎರಡು ಹೇರು ರೊಕ್ಕಾ ಮುಂದೆ ಸುರಿಯುತ್ತ ಅದರೊಳಗೊಂದು ಡ್ಡಾರಿಸಿಕೋ ಎಂದು ಹೇಳಲು ನಾರಾಯಣ ಬಿಟ್ಹೋದ ನಗುತ2 ಹಿತ್ತಲಾ ಬಾಗಿಲಿಗೆ ಹೋಗಿ ಮತ್ತೆ ಆತನ ಮಡದಿಗಾಗಿ ವಿತ್ತ ತಾ ಯೆನುತ ತನ ಮಗನ ಮುಂಜ್ಯೆಂ ದೆತ್ತಿ ಕರದಿಂ ಬಾಯಿ ತೆರೆಯುತ್ತ ಆ ಪ್ರಾಣಿ ನುಡಿದಳು ಎತ್ತಣ ದ್ರವ್ಯವು ತನಗೆನುತ ನಿನ್ನ ಮೂಗಿನ ಮುತ್ತಿನ ಮೂಗುತಿಯ ಕೊಡು ಎನೆ ಉತ್ತುಮಳು ತೆಗೆದಿತ್ತಳಾಕ್ಷಣ 3 ಆಕಿ ಗಂಡನ ಕಣ್ಣೆದುರಿಗೆ ಹಾಕಿದನು ತಾ ಪಾಕಿ ಕೊಡೆಯೆನುತ ಅದು ಕಂಡು ಇದು ನ ಮ್ಮಾಕಿದೆಂದು ಈತ ನುಡಿಯುತ್ತ ಅನ್ಯರದು ಯಿಂಥಾ ದ್ಯಾಕೆ ಯಿರಬಾರದೆನ್ನುತ್ತಾ ಬೆಲೆ ಹೇಳು ಎನಲು ಎಂದಾಕೆ ಹೋದನು ತಿರೂಗಿ ಬಾರದೆ 4 ತಿರುಗಿ ಬ್ರಾಹ್ಮಣ ಬಾರದಿರಲು ಕರೆದು ತನ್ನ ಹೆಂಡತಿಯ ಬರಿಯ ನಾಶಿಕವನ್ನೆ ಕಂಡುನು ಮೂಗುತಿಯ ಎಲ್ಲೆನೆ ಮುರಿದಿಹುದು ಯೆಂದಾಕೆ ಹೇಳಲು ಒಳಗ್ಹೋಗಿ ನೀ ತಾರದಿರೆ ಅರೆವೆ ನಿನ್ನಯ ಜೀವವೆಂದನು ವಿಷಕೊಂಬೆನೆಂದು ಕರದಿ ಬಟ್ಟಲು ಧರಿಸಲಾಕ್ಷಣ ತ್ವರಿತದಲಿ ಹರಿ ಅದರೊಳಾಕಿದ 5 ಪುರುಷನಾ ಕೈಕೊಳಗೆಯಿಡಲು ತರಿಸಿ ತನ್ನಲ್ಲಿದ್ದ ಪೆಟ್ಟಿಗೆಯಾ ಅದು ಕಾಣದಿರಲು ಬೆರಗಾಗಿ ನೋಡಿದನು ಮಡದಿಯ ನಿಜ ಪೇಳುಯೆನಲು ಅರಸಿ ಪೇಳ್ದಳು ಕೊಟ್ಟ ಸುದ್ದಿಯಾ ಅಭಿಮಾನಕಂಜಿ ಅರದು ವಿಷವನು ಕುಡಿವೆನಲು ಸಿರಿರಮಣಾ ಕೊಟ್ಟ ಖರಿಯಾ 6 ಬಂದಿದ್ದ ಪರಿಪಕ್ವವೆನಗೆ ನ್ನಾವ ಕಾಲಕೆ ಆಗಬೇಕೆಂದ ವೈರಾಗ್ಯಭಾವದಿ ಜೀವಿಸಿಕೊಂಡಿರುವುದೇ ಛಂದ ಹೀಗೆನುತ ಮನೆ ಧನ ಕೋವಿದರ ಕರೆದಿತ್ತ ಹರುಷದಿ ಕಾವನಯ್ಯನ ದಾಸನಾದ 7 ಲಕ್ಷ್ಮಿಪತಿಯ ಪಾದದಲ್ಲಿ ಲಕ್ಷ್ಯವಿಟ್ಟು ವ್ಯಾಸರಾಯರ ಶಿಕ್ಷೆಯಿಂದಲಿ ಅಂಕಿತವ ಕೊಳುತ ತಿರಿಪಾದ ಐದು ಲಕ್ಷಪದ ಸುಳಾದಿ ಪೇಳುತ್ತ ಪ್ರತಿದಿವಸದಲ್ಲು ಅಪರೋಕ್ಷ ಪುಟ್ಟಲು ಮೋಕ್ಷಸ್ಥಾನಕ್ಕೆ ಕರೆದೊಯ್ದು ಅ ಧೋಕ್ಷಜನು ಸಂರಕ್ಷಿಸಿದ 8 ಘೊರ ನರಕದೊಳಗೆ ಬಿದ್ದಾ ಪಾರ ಜನರು ಚೀರುತಿರಲು ದ್ಧಾರ ಮಾಡಿದ ನಾರದಾರಿವರು ಅವ ತಾರ ಮಾಡಿ ಧಾರುಣಿಯಲಿ ಮತ್ತೆ ಬಂದರು ಸರುವೋತ್ತಮ ಹರಿ ನಾರಾಯಣನೆ ಎಂದು ಸಾರಿದರು ಹೀಗೆಂದು ತಿಳಿಯಲು ಮಾರ ಜನಕ ವಿಜಯವಿಠ್ಠಲ ಆರಿಗಾದರು ಒಲಿವ ಕಾಣಿರೊ 9
--------------
ವಿಜಯದಾಸ
ಶ್ರೀವರನೆ ದಯ ಮಾಡೋ ನಿನ್ನ | ಸೇವಕ ಸೇವಕನ ನೋಡೋ ಪ ಭವ ಕೂಪಾಕಿ ದಾಟಿಪ | ಮೋಚಕೇಚ್ಛೆಯ ನೀ ಮಾಡಿಸೊ1 ಹೆತ್ತ ತಾಯಿಗೆ ತೊತ್ತು ಭಾರವೇ | ಪೆತ್ತು ಈ ಜಗವನ್ನೆಲ್ಲ ಪೊತ್ತುಕರ್ತನೆಂದೆನಿಸಿದವಗೆ ನಿನ್ನ | ಭೃತ್ಯನ ಪಾಲಿಪ ಕೃತ್ಯ ನಿನದಲ್ಲೇ 2 ಪರಿ ಭವ | ನೋವ ಕಳೆವುದೆಂದು ಬಿನ್ನವಿಪೆ 3
--------------
ಗುರುಗೋವಿಂದವಿಠಲರು
ಏನು ಭ್ರಮೆ ಮನುಜ ನಿನಗ್ಯಾಕೆ ಹರಿಭಟರಹಗೆಪರಮಾನಿನಿಯ ಸಂಗ ನರಕದೊಳು ಬಲುಭಂಗಪ.ಮಬ್ಬು ಮುಸುಕಿದ ಪರಿಯ ನಿಜಸತಿಯ ನೋಡದೆ ಮತ್ತೊಬ್ಬಳ ಕುಚಕೆ ಕಮಲವ ಹೋಲಿಸಿಕೊಬ್ಬು ಮೈಯವಳ ಸಖವಿಡಿದರದು ಮಹಾಶೋಕತಬ್ಬಿಬ್ಬುಗೊಳುತ ನಿರಯಂಗಳುಂಬೆ 1ಇಂದುಮುಖಿಯಳ ಸಂಗ ಎನಗಿಂದು ಕೈಗೂಡಲೆಂದೊಬ್ಬ ಕುಂಟಣಿಗೆ ಧನವಿತ್ತೆ ನಿನ್ನಸಂದುಗಳ ಕಡಿದು ವೈತರಣಿ ಸಲಿಲದಿ ದೇಹಹೊಂದಿಸುವರುಂಟು ಕಾಲನ ಕುಂಟಣಿಗರು 2ಚಿಕ್ಕಬಲೆಯರ ಕಂಡು ಚಂಚಲಿತನಾಗ್ಯವರವಕ್ರನೋಟದಿ ಹಲವು ಸನ್ನೆಯಿಂದತರ್ಕೈಸಬೇಕೆಂಬ ಲಂಪಟದಿ ತಪ್ತಾದಶರ್ಕರಾಯಸ ಸ್ತಂಭವಪ್ಪಿ ಪೊರಳೇಳುವೆ 3ಹರಿದಾಸರಾಚಾರ ಕೇಳಲಸಿ ಪಳಿದೊರೆದುಒರಟು ಮಾತಿನ ಸರಕಲಾಯುಗಳಿದೆವಿರತಿಜ್ಞಾನಾನ್ವಿತರ ವೆರಸದಂಧಕನಾದೆತರಣಿಯೊಳು ಹೊಂಬುಳವು ಗರುವಿಸಿದ ತೆರದಿ 4ಜಂಬುಕವು ಹರಿಯೊಡನೆ ಸರಸವಾಡಿದ ಪರಿಯೊಳಂಬುಜಾಕ್ಷನ ದಾಸನಿಂದೆ ಮಾಡಸಲ್ಲಕುಂಭಿಪಾಕಿನಿಯಲ್ಲಿ ಮರಳಿಸುವ ಭಯವರಿತುನಂಬು ಪ್ರಸನ್ವೆಂಕಟೇಶನಂಘ್ರಿಯ 5
--------------
ಪ್ರಸನ್ನವೆಂಕಟದಾಸರು