ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಂಕಜನಯನ ಪಾವನ್ನ ಸುಖ ಸಂಕೂಲ ಮೂರುತಿ ಲಾಲಿಸು ಚಿನ್ನಾ ವೆಂಕಟ ನಿಲಯಾ ಹಸೆಗೇಳು ಪ ಕಮಲ ಸಂಭವಗಿತ್ತ ಕಮನೀಯ ಕಾಯ ಸುಮನಸ ಜನತೆ ಸುಧೆಯನುಣಿಸಿ ಭೂಮಿ ಚೋರನ ಕೊಂದ ಮುನಿಗಳೊಡೆಯ ವಿಮಲ ಮೂರುತಿ ಹಸೆಗೇಳೋ 1 ನರಹರಿ ರೂಪದಿ ಬಂದು ದೈತ್ಯ ನುರವ ಬಗೆದು ವಟು ರೂಪದಿ ನಿಂದ್ಯೋ ದುರುಳ ರಾಯರನೆಲ್ಲ ಕೊಂದು ಲಂಕಾ ಪುರದಾಧಿಪತಿಯ ಸದೆದ ದಯಸಿಂಧೋ ಕರುಣಾಸಾಗರನೆ ಹಸೆಗೇಳೋ 2 ಯದುಜನೆನಿಸಿ ಎಲ್ಲಾ ಖಳರ ಜಯಿಸಿ ಸುದತೇರ ವ್ರತವ ಕೆಡಿಸಿದತಿ ಧೀರ ಕುದುರೆನೇರಿದ ಮಾಧಾರಾ ನಿನ್ನ ಅದುಭೂತ ಬಲ್ಲಿದಕ್ಕೆಣೆಗಾಣೆನುದಾರಾ ಉದಧಿ ಶಯನನೆ ಹಸೆಗೇಳು 3 ಅಪ್ರತಿಮಲ್ಲ ಅನಂತಾ ಸುಹಜ ನ ಪ್ರೀಯಾ ಸುರಪತಿ ಸಿರಿದೇವಿ ಕಾಂತಾ ಸ್ವ ಪ್ರಕಾಶಿತನೆ ಧೀಮಂತಾ ಅತಿ ಕ್ಷಿಪ್ರದಿ ಭಕ್ತರ ಪೊರೆವತಿ ಶಾಂತಾ ಸುಪ್ರದಾಯಕನೆ ಹಸೆಗೇಳೋ 4 ಪರಮ ಪುರುಷ ಪುಣ್ಯನಾಮಾ ಪರ ಪುರಷೋತ್ತಮ ಪರಿಪೂರ್ಣ ಕಾಮಾ ಶರಣರ ಭವವನ ಧೂಮಾ ಕೇತು ಕರಿಯ ಬಲ್ಲೆನೆ ಕಾಮಿತರ ಕಲ್ಪದ್ರುಮಾ ಕರಿರಾಜವರದಾ ಹಸೆಗೇಳೋ 5 ನಿತ್ಯ ಅತ್ಯಂತ ಮಹಿಮನೆ ಆಪ್ತ ಜನರ ಕ್ಲೇಶ ಕಳೆವ ಸುಕೀರ್ತೀ ಚಿತ್ತಜ ಜನಕ ಹಸೆಗೇಳೋ 6 ಕ್ಷೀರಾಬ್ಧಿವಾಸಾ ಚಿನ್ಮಯನೆ ನಿನ್ನ ಪಾರ ಮಹಿಮೆ ತಿಳಿವವನಿಹನೆ ಮೂರು ಗುಣ ರಹಿತನೆ ದೋಷ ದೂರ ವಿದೂರ ಶಿರಿದೇವಿಯೊಡನೆ ಬಾರಯ್ಯ ಹಸೆಯ ಜಗುಲಿಗೆ7 ವ್ಯಾಳಮರ್ದನನೆ ವಿಗಮನಾ ತ್ರಿ ಶೂಲ ಪಾಣಿಯ ಓಡಿಸಿದ ಖಳನಾ ಸೋಲಿಸಿದಪ್ರತಿಸುಗುಣ ಹೇಮ ಲಲಿತಾಂಗ ಹಸೆಗೇಳೋ 8 ಅಗಣಿತ ಜೌದಾರ್ಯ ಸಾರಾ ನಿನ್ನ ಪೊಗಳ ಬಲ್ಲೆನೆ ಪಾತಕದೂರಾ ನಗರಾಜನುತ ನಿರಾಧಾರ ಭವಾದಿಗಳಿಂದ ವಂದ್ಯನೆ ನವನೀತ ಚೋರ ಜಗನ್ನಾಥ ವಿಠಲ ಹಾಸೆಗೇಳೋ9
--------------
ಜಗನ್ನಾಥದಾಸರು
ದೂತೆ ಕೇಳ ದ್ರೌಪತಿಯ ಖ್ಯಾತಿ ಕೇಳಿದ ಮನುಜರಿಗೆಪಾತಕದೂರಾಗೊದೆಂಬೋ ಮಾತು ನಿಜವಮ್ಮಪ.ಉಮಾಶಚಿ ಶಾಮಲಾ ಉಷೆ ತಮ್ಮ ಪತಿಗಳ ಬೆರೆದು ರಮಿಸೆಬೊಮ್ಮಕಂಡುಕೋಪಿಸಿ ಶಾಪ ಝಮ್ಮನೆ ಕೊಟ್ಟಾನು1ಪರಮಮದದ ಬಾಲೆಯರಿವರುಪರಪುರುಷನ ಬೆರೆಯಲ್ಯಾ ್ಹಂಗೆನರದೇಹ ಬರಲೆಂದು ಬೊಮ್ಮಗೆ ನಾಲ್ವರು ನುಡಿದರು 2ಚಂದಾಗಿ ನಾಲ್ವರ ದೇಹ ಒಂದೇ ಮಾಡಿ ತೋರೆ ಬೊಮ್ಮಗಬಂದವು ಮೂರು ನರದೇಹಗಳ ಲೊಂದಾಗಿರಲೆಂದು 3ತಪ್ಪು ನಮ್ಮದೆಂದು ಶಾಪ ಒಪ್ಪಿಕೊಂಡು ನಾಲ್ವರುಜಪಿಸಿ ಸಾವಿರ ವರುಷ ಗೌಪ್ಯದಿ ಭಾರತಿಯ 4ಬಂದು ಮೊರೆಯ ಪೊಕ್ಕವರ ಚಂದಾಗಿ ದೇಹದಲ್ಲಿಟ್ಟುಅನಂದದಿಂದ ವಿಪ್ರಕನ್ಯೆ ಎಂದು ಜನಿಸಿದಳು 5ಎಲ್ಲರಕರ್ಮಒಂದಾಗಿ ಎಲ್ಲೆಲ್ಲೆ ಭಿನ್ನ ತೋರದ್ಹಾಂಗೆಫುಲ್ಲನಾಭನ ದಯವ ಪಡೆದಳು ಅಲ್ಲೆ ಆ ಬಾಲೆ 6ಮುದ್ಗಲ ನೆಂತೆಂಬೊ ಋಷಿಯು ಬಿದ್ದು ನಕ್ಕ ಬ್ರಹ್ಮನ ಕಂಡುಮುದ್ದು ಮಗಳ ರಮಿಸಿದಾತಗೆ ಬುದ್ಧಿಯಿಲ್ಲವೆಂದು 7ತ್ವರೆಯಿಂದಬೊಮ್ಮಮುನಿಗೆ ಬೆರಿಯೆ ಭಾರತಿಯ ಕಂಡುಕರವಮುಗಿದು ಎರಗಿ ಮುನಿಯು ಮೊರೆಯ ಹೊಕ್ಕಾನು8ಮಾರುತನ ದೇಹದಲ್ಲೆ ಭಾರತಿಯು ರಮಿಸುವಾಗಹಾರಿತಯ್ಯ ಸ್ಮøತಿಯು ಸುಖವು ತೋರದು ನಮಗಿನ್ನು 9ಮಂದಗಮನೆಯರಿಂದಭಾರತಿಇಂದ್ರ ಸೇನಳಾಗಿ ಜನಿಸೆಬಂದ ಮರುತ ದೇಹದ ಮುನಿಯು ಚಂದದಿ ಮದುವ್ಯಾದ 10ಮರುತ ಅಕೆÉಯಿಂದ ರಮಿಸ ಮಾರುತದೇಹದ ಮುನಿಯು ಏನುಗುರುತು ಇಲ್ಲಧಾಂಗೆ ಆತ ಇರುತಲಿದ್ದನು 11ಬಾಲೆಯ ಸಂತೋಷ ಪಡಿಸಿ ಮೂಲರೂಪಕಂಡುವಾಯುಮ್ಯಾಲ ವನಕೆ ನಡೆದ ಮುನಿಯು ಆ ಕಾಲದಲೆಚ್ಚತ್ತು12ಇಂದ್ರಸೇನ ಬಂದು ಆಗ ಇಂದಿರೇಶನದಯವ ಪಡೆಯೆನಂದಿವಾಹನ ನಮ್ಮ ಪತಿಯ ವಂದಿಸೆಂದಾರು 13ಪತಿಯ ಬಯಸಿದ ಬಾಲೆಯರಿಗೆ ಚತುರ್ವಾಹ ನುಡಿದನು ಶಿವನುಅತಿಶಯ ರೋದನವ ಮಾಡೆ ಮಿತಿ ಇಲ್ಲದಲೆ ಅಂಜಿ 14ಮಂದಗಮನೆಯ ಧ್ವನಿಯಕೇಳಿ ಬಂದ ಇಂದ್ರ ಬಹಳದಯದಿಬಂದಿತೆನಗೆ ಇಂಥಕ್ಲೇಶಎಂದು ನುಡಿದಳು15ಬಂದು ವರವ ಬೇಡಿ ಪತಿಗಳ ಹೊಂದಿರೆಂದು ನಾಲ್ಕುಬಾರಿಬಂದಿತೆಮಗೆ ಇಂಥಕ್ಲೇಶಎಂದು ನುಡಿದಳು16ಇಂಥ ಅನ್ಯಾಯ ಯಾಕೆಂದು ನಿಂತ ಒಟುಗೆ ನುಡಿದ ಇಂದ್ರಭ್ರಾಂತ ನರನ ನಿಂದೆ ಶಚಿಯ ಕಾಂತೆಗೆ ಶಿವನು 17ನಾನು ಸೃಷ್ಟಿ ಮಾಡಿದವನು ನೀನು ಏನು ನುಡಿದ ಶಿವನುಮಾನವನಾಗೊ ಬೊಮ್ಮಗ ತಾನು ಆತಗೆ 18ಉಮಾ ಮೊದಲಾದವರಿಗೆಲ್ಲ ತಮ್ಮ ಪತಿಗಳ ಹೊಂದಿರೆಂದಉಮಾ ನಿಮ್ಮ ಬೆರಿಯ ಬ್ಯಾಡ ಸುಮ್ಮನೆ ಹೋಗೆಂದ 19ಎತ್ತು ಗಿರಿಯ ಕೆಳಗ ಇದ್ದ ಮತ್ತÀ ನಾಲ್ವರ ನೋಡೆಸತ್ತ ಎಂದು ತಿಳಿಯೋ ನಿನ್ನ ಚಿತ್ತಕತಾ ಎಂದು 20ಕೇಳಿದ ಬೊಮ್ಮನ ನುಡಿಯು ತಾಳಿದ ಬಾಲಿಯರು ಬೆರೆದುಬಹಳ ಪ್ರೇಮದಿಂದಭಾರತಿಇಳಿದಳು ಬಂದು21ರಾಮೇಶನಕ್ಲುಪ್ತತಿಳಿದು ಭೀಮಸೇನನಾದ ವಾಯುಕಾಮಿನಿಯರ ಸಹಿತ ದ್ರೌಪತಿ ಪ್ರೇಮದಿ ಜನಿಸಿದಳು 22
--------------
ಗಲಗಲಿಅವ್ವನವರು