ಒಟ್ಟು 8 ಕಡೆಗಳಲ್ಲಿ , 3 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಕಂಗಳಿದ್ಯಾತಕೋ........ ಎಂಬಂತೆ) ದಾಸನೆಂದೆನಿಸೊ ಎನ್ನಾ | ಶ್ರೀಶ ಹೇ ಸರ್ವೇಶ ಪ ಹೇಸಿ ವಿಷಯದಿ ಬಹು | ಕ್ಲೇಶಗಳಿಗೊಳಗಾಗಿಘಾಸಿ ಪಟ್ಟಿಹೆನೊ ಹರಿ | ಪೋಷಿಸೂವುದು ಧೊರಿಅ.ಪ. ಏಸು ಜನ್ಮದ ಸುಕೃತದಿಂದಲಿಲೇಸಾದ ಮಧ್ವ ಮತದಿ ಬಂದು ||ಭಾಸುರ ತತ್ವ ಪ್ರಕಾಶಿಸಿ ಮಹಿದಾಸ ದಾಸರ ಪ್ರೀಯ ಪಿಡಿಕೈಯ್ಯ 1 ಜ್ಞಾನ ದಾನವ ಬೇಡ್ವೆ | ಭಾವವನಜ್ಞಾನದಿಂದಲೆ ಕಡಿವೆ ಹರಿಯೆ ||ಮೌನಿಕುಲ ಸನ್ಮಾನ್ಯ ಮಾನವಜ್ಞಾನಾನಂದನೆ ವ ಪುಷ ಕಾಯೊ 2 ಬಾದರಾಯಣ ಭವ್ಯ ರೂಪಾಪಾದಕೆ ನಮಿಪೆನೊ ಶ್ರೀಪಾಮೋದಮುನಿಯ ನುತ | ಪ್ರಮೋದನೆಮೋದವೀಯೋ ಗುರು | ಗೋವಿಂದ ವಿಠಲ3
--------------
ಗುರುಗೋವಿಂದವಿಠಲರು
ಆನಂದ ಗಿರಿ ರಾಯನೆ ಪಿಡಿಕೈಯ್ಯಾ | ನಾ ನಿನ್ನ ಪಾದಕ್ಕಾನಮಿಸುವೆ ಶರಣರ ಪ್ರಿಯ | ಭಕುತರ ಭವಣೆಯನೀ ನೋಡುತಲಿಹುದೊಳಿತೇನಯ್ಯ | ಬಂಧನ ಬಿಡಿಸಯ್ಯ ಪ ಮಾನದ ಮಾನ್ಯ ಭೂದಾನವ ಬೇಡ್ವನೆಕಾಣಿಸೊ ಮನದೊಳು ದೀನನ ಮೊರೆಗೇಅ.ಪ. ಕಲ್ಯಾಣ ಪುರಿಯಿಂದಲಿ ಪೋಗೀ | ಸಜ್ಜನರವೆರಸೇ ಕಲ್ಯಾದಿಗಳೆಲ್ಲ ದೂರಿದೆ ಸಾಗೀ | ಪೋಗುತ್ತಲಿರಲೂ ಬಲ್ಯಾದಿಗಳೊಡೆಯನ ಪುರಕಾಗೀ | ಮೂಡಬಾಗಿಲಲಿರುವಾ ವೇಳ್ಯಾದರು ನರಹರಿತೀರ್ಥವ |ಓಲೈಸುತ ಸರಿ ನಿರ್ಮಾಲ್ಯ ಪಡೆದೆವು 1 ನಿಟಲಾಕ್ಷನ ಬಿಂಬನು ನೆಲೆಸಿರುವಲ್ಲಿ | ಮತ್ತೊಂದು ಬೆಟ್ಟದಿ ಪಟು ಭಟ ತಾ ಯೋಗಾಸನದಲ್ಲಿ | ಕುಳಿತಿಹನಲ್ಲಿ ಚಟುಲ ವಿಕ್ರಮನ ಧ್ಯಾನಿಸುತಲ್ಲಿ | ಹನುಮಂತನಲ್ಲಿ ಘಟಕಾಚಲದೊಳು ಸೇವಿಸಿ ಭಕುತರ |ತಟಕ ಪೊರಟಿತು ವೆಂಕಟಗಿರಿಗೆ 2 ಹದಿನಾಲ್ಕು ಲೋಕಾಧಿಪನರಸಿ | ಪುರದೊಳು ಪೋಗಿಪದುಮ ಸರಸೋದಕ ಪ್ರೋಕ್ಷಿಸಿ | ಅಲ್ಲಿಂದ ಬಂದುಪದುಮಾವತಿ ಪಾದಾಬ್ಜಕೆ ನಮಿಸಿ | ಕುಂಕುಮಾರ್ಚಿಸಿ ||ಪದುಮೆ ಮನೋಹರ ಗೋವಿಂದ ಪುರಿಯಲಿವದಗಿ ವಸಿಸಿ ನಾವ್ ನಿಶಿಯನೆ ಕಳೆದೆವು 3 ಉದಯವಾಗದ ಮುಂದೇಳುತಲಾಗ | ಮಜ್ಜನವ ಗೈದೂಪದಚಾರಿಗಳಾಗುತಲೀ ಬೇಗಾ | ಒಡಗೂಡಿ ಗಿರಿಯಮುದದಿಂದಲೇರುವ ಯೋಗಾ | ಕೈ ಸೇರಲು ಬೇಗಾ ||ಪದತಲದಲಿ ಪಾಪತ್ಮಕ ತನು ಕ-ಳೆದಾತನ ನೆನೆದು ಸೋಪಾನವ ಕ್ರಮಿಸಿದೆ 4 ಗೋವಿಂದ ಗೋವಿಂದನೆಂಬುವ ನಾಮ | ಅಂಬರವು ತುಂಬೆಅವುಗಳ ಕಾವವನ ಗುಣ ನಾಮಾ | ಕೀರ್ತಿಸಿ ಮುದದಿಭಾವದೊಳ್ ಮೈಮರೆದು ಬ್ರಹ್ಮಾ | ಭವಸುರ ಪಾದ್ಯಾರ ||ಅವಾಗಲು ಅವರವಗುಣವೆಣಿಸದೆಕಾವನು ಎನುತಲಿ ಪಾವಟಿಗೇರೋ 5 ಪರಿ ತಿಳಿದೂತುಳಿದೂ ತುಳಿಯಲಿಲ್ಲವು ನೋಡಾ | ಸಲ್ಲುವುದೀದುತಿಳಿ ವಾದಿರಾಜರಿಗೆ ಗೂಢಾ| ನಾ ಬಲು ಮೂಢಾ |ಮಲವನು ಕಳೆಯುತ ಹುಲು ಮನುಜನ ಭವವಳಿದು ಸಲಹೊ ಹೇ ತಿರುಪತಿ ನಿಲಯ 6 ಮೆಟ್ಟಲು ಮೆಟ್ಟಲುಗಳನೇರುತ್ತಾ | ತಾಳಂಗಳನುತಟ್ಟಿ ಹರಿ ಹರಿ ಎಂದೊದರುತ್ತಾ | ಪಾಪಂಗಳ ತಲೆಮೆಟ್ಟಿ ತಂಬೂರಿಯ ಮೀಟುತ್ತಾ | ಕಾಲೊಳು ಗೆಜ್ಜೆಗಳ ||ಕಟ್ಟುತ ಘಲು ಘಲು ಘಲಿರೆನ್ನುತ ಜಗಜಟ್ಟಿ ಹನುಮನ ನೆನೆಯಲೊ ಮನವೆ 7 ಮೃಗ ಪಕ್ಷಿಗಳ ದಿವ್ಯಾ | ರೂಪಂಗಳ ಧರಿಸಿನಿರುತ ಗೈವರು ತವ ಸೇವೆಯು ಭವ್ಯಾ | ಅವುಗಳ ವರ್ಣಿಸಲು || ಉರಗರಾಜ ತನ್ನ ಸಾಸಿರ ನಾಲಿಗೆಸರಿಯಾಗದು ಎನೆ ಶಿರವನೆ ತೂಗುವ 8 ಏರೋ ಪಾವಟಿಗೆಗಳನು ಏರೋ | ಮೊಳಕಾಲು ಮುರಿಯನೇರೋ ಕುಳಿತೊಮ್ಮೆ ತುತಿಸುತ ಸಾರೋ | ಹರಿಯ ಮಹಿಮೆಯಸಾರೋ ಬಾರಿ ಬಾರಿಗೆ ನೀ ಸಾರೋ | ಗಾಳಿ ಗೋಪುರವ ||ಮೀರಿ ಬರಲು ದಿವ್ಯ ಗೋಪುರ ಕಾಣುತ |ಚೀರೊ ಚೀರೊ ಹರಿ ಗೋವಿಂದನೆನ್ನುತ 9 ಸ್ವಾಮಿ ಪುಷ್ಕರಣಿಯಲೀ ಮಿಂದೂ | ಶ್ರೀ ಭೂವರಹಾಸ್ವಾಮೀಯನೆ ಪ್ರಾರ್ಥಿಸಿ ಬಂದೂ | ಪ್ರಾಕಾರದೊಳಗಿಹವಿಮಾನ ಶ್ರೀನಿವಾಸನ ಕಂಡಂದೂ | ನಮಿಸುತ ಬಂದೂ |ಭೂಮಿಜೆವಲ್ಲಭ ವೆಂಕಟನನು ಕಂಡುಕಾಮಿಸೊ ಜ್ಞಾನ ವೈರಾಗ್ಯ ಭಕುತಿಯ 10 ದೇವಾದಿದೇವಾ ಜಗದ್ಭರ್ತಾ | ವೆಂಕಟನೆ ನಾನಾನಾಜನುಮದ ಸುಕೃತಾ | ಪೊಂದುತಲಿ ನಿನ್ನಸೇವಾ ದೊರಕಿದುದೆ ಪುರುಷಾರ್ಥಾ | ಹರಿಪುದು ಸುಜನಾರ್ತಾ | ಭಾವನ ಕಾಯ್ದ ಸದ್ಭಾವಕೆ ವಲಿವನೆಕಾವುದೆನ್ನ ಗುರು ಗೋವಿಂದ ವಿಠ್ಠಲ 11
--------------
ಗುರುಗೋವಿಂದವಿಠಲರು
ಗುರುಜಗನ್ನಾಥಾರ್ಯ ಕರುಣಿಸಯ್ಯ ಮೊರೆ ಹೊಕ್ಕೆ ತ್ವತ್ವದಕೆ ಮರೆಯದಲೆ ಪಿಡಿಕೈಯ್ಯ || ಪ್ರಹ್ಲಾದನನುಗ್ರಹವು ಎಲ್ಲ ಕಾಲದಲಿ ನಿ ನ್ನಲ್ಲಿ ಸುಂಪೂರ್ಣವಾಗಿರುವದೆಂಬಾ ಸೊಲ್ಲು ಲಾಲಿಸಿ ನಿನ್ನ ಪಲ್ಲವಾಂಘ್ರಿಗೆ ನಮಿಪೆ ಬಲ್ಲಿದನೆ ಹರಿಧ್ಯಾನದಲ್ಲಿ ನಿಲ್ಲಿಸು ಮನವ 1 ಕನಕಾಗ್ರ ಜಾತಾರ್ಯನೆನಿಸಿ ಜನಿಸುತ ಮಂತ್ರ ಮುನಿ ನಿಲಯ ಮುನಿವರ್ಯ ಶ್ರೀರಾಯಾರಾ ಗುಣಸ್ತವನ ವಿರಚಿಸುತ ಪ್ರಣತರಿಗೆ ಪಠಿಸುತ್ತ ಮನದಿಚ್ಛೆ ಪಡೆವದಕ್ಕೆ ಅನುಕೂಲಿಸಿದ ಜ್ಞಾನಿ 2 ಶ್ರೀ ಶಾಮಸುಂದರ ದಾಸವರ್ಯರ ಉಪ ಕೊಂಡ ಉಪವಾಸನೆಯನು ಲೇಸಾಗಿ ಬಿಡಿದೆ ಪ್ರತಿವಾಸರದಿ ಗೈವಂಥ ಭೂಸುರಾಗ್ರಣಿಯಾದ ಕೋಸಿಗೆಯ ದಾಸಾ 3
--------------
ಶಾಮಸುಂದರ ವಿಠಲ
ಪಾಲಿಸು ರವಿತೇಜಾ | ಮಂತ್ರಾಲಯ ಗುರುರಾಜಾ ಪ ಶ್ರೀ ಸುಖತೀರ್ಥ ಮತಾಂಬುಧಿಗೆ ಭೇಶಾ ಭಾಸುರ ವರ ವೃಂದಾವನ ನಿವಾಸ ಭೂಸುರ ಸಂಸೇವಿತ ನತಜನ ಪೋಷಕ ಮುನಿವ್ಯಾಸ 1 ತುಂಗಭದ್ರ ಸುತರಂಗಿಣಿ | ತೀರ ನಿಲಯ ಸಂಗೀತ ಪ್ರಿಯ ಸತ್ಕವಿಜನಗೇಯ ತುಂಗ ಮಹಿಮ ಕಮತ ದ್ವಿರದ ಸಿಂಗನೆ ಪಿಡಿಕೈಯ್ಯ 2 ತಾಮರಸ ಯುಗ್ಮಂಗಳಿಗೆ ಷಟ್ ಚರಣ ಕಾಮಿತ ಶುಭದಾಯಕ ನಿನ್ಸೀಮ ಕರುಣ ಭರಣ 3
--------------
ಶಾಮಸುಂದರ ವಿಠಲ
ಭಾಗಣ್ಣಾ | ಗುರು ನಿನ್ನ ಪೊಗಳುವೆನಯ್ಯಾಕರುಣದಿ ಪಿಡಿಕೈಯ್ಯಾ | ಮುರಹರ ಕುವರಯ್ಯಾ ಪ ನಗಧರ ಮೊಮ್ಮಗ ಮಗನೀ ಯೆನ್ನನುಖಗವರ ವಹ ಪ್ರಿಯ ಪಾಲಿಸೊ ಜೀಯಾ ಅ.ಪ. ಜ್ಞಾನ ಸದ್ಭಕ್ತಿ ವಿರಕ್ತಿಯ ಮೂರ್ತೀ | ಸಾರುವೆ ತವಕೀರ್ತೀಗಾನ ಲೋಲನ ಸೇವಿಸೆ ಜಾಗರ್ತೀ | ಮಾಡುವೆ ಶರಣಾರ್ತೀ |ಘನ್ನ ಮಹಿಮ ಕಾರುಣ್ಯ ಮೂರುತೀಎನ್ನವ ಗುಣ ಮರೆದು ಸಲಹೊ ವಿಶ್ವಂಭರ 1 ಜಲಧಿ ವಿಹಾರನೆಸುಲಭದಿ ಸಾಧನ ಪಾಲಿಸೋ ಜೀಯ 2 ಅರುಹಲೇತಕೊ ಎನದುರಿತ ಸಮೂಹ | ನೀನಲ್ಲವೆ ದುರಿತಹರತುರು ತನ್ನ ಕರುವನೆ ಮರೆವುದೆ ಆಹಾ | ಪಾಲಿಸು ತವನೇಹಾಸಿರಿಪತಿ ಗುರುಗೋವಿಂದ ವಿಠಲನಚರಣಾಂಬುಜದೊಳು ನಿಲಿಸೆಲೊ ಮನವಾ 3
--------------
ಗುರುಗೋವಿಂದವಿಠಲರು
ಮ'ಪತಿ ಸುತ ಕೃಷ್ಣರಾಯ ಕೃಪೆಯಮಾಡೊ ಮಹರಾಯಾಸ'ಸಲಾರೆ ತಾಪತ್ರಯ ಕರುಣದಿ ಪಿಡಿಕೈಯ್ಯಾ ಪನಿನ್ನ ಕರುಳ ಬಳ್ಳಿಯಲಿ ಜನಿಸಿ ನಿನ್ನ ಮರತೆನೆಂದುನೀನು ಮರೆಯಬೇಡಾ ತಾತಾ ಶಿರದಲಿ ಇಡು ವರದಹಸ್ತಾ1ನಿಮ್ಮ ಕೀರ್ತನೆ ಕೇಳುವಾಗ ಮೈ ಮರೆತರು ಸತ್ಯಪೂರ್ಣರುಚಕ್ರಧರನ ನಕ್ರಹರನ ತಂದು ತೋರಿದ ಮಹಾಮ'ಮನೆ 2ಜ್ಞಾನ ಭಕ್ತಿ ವೈರಾಗ್ಯ ತ್ರಿವೇಣಿ ನಿಮ್ಮ ವಾಣಿಶ್ರೀನಿಧಿ ಭೂಪತಿ'ಠ್ಠಲನ ಒಲಿಸಿದ ಹರಿದಾಸ ಸುಮಣಿ 3
--------------
ಭೂಪತಿ ವಿಠಲರು
ಯಾಕೆಮ್ಮನಗಲಿ ಪರಲೋಕ ಸೇರಿದೆ ಗುರು ಐಕೂರು ನರಸಿಂಹಾರ್ಯ ಪ ಲೌಕಿಕವ ಬಿಟ್ಟು ಸುವಿವೇಕ ನಡೆವ ವಾಕು ಪೇಳ್ವರ ಕಾಣೆ ಲೋಕದೊಳು ನಿನ್ಹೊರತು ಅ.ಪ ಅತಿಮಂದರಾದೆಮಗೆ | ಶ್ರುತಿ ಶಾಸ್ತ್ರ ಪುರಾಣ ಕಥೆ ದಾಸ ಕವಿತೆ ಸತತ ಪೇಳಿ ಮತಿವಂತರೆನಿಸಿ ಸ್ಪÀತ್ವಥ ಪಡಿಸಿ ಮುಂದೆ ಸ ದ್ಗತಿ ಕಾಣಿಸದೆ ಜಗದಿ ಹತಭಾಗ್ಯರನು ಮಾಡಿ 1 ಸಾಧುವರ್ಯನೆ ನಿಮ್ಮ ಪಾದವೇ ಗತಿ ಎಂದು ಸಾದರದಿ ನಿರುತ ನೆರೆನಂಬಿದಂಥ ಸೋದರಿಯರು ಪಂಚ ಭೇದ | ತರತಮಜ್ಞಾನ ಬೋಧಿಸುವರಿಲ್ಲೆಂದು ಖೇದದಿಂದಿರುತಿಹರು 2 ಸೂರಿವರ ನಿನ್ನಗಲಿದಾರಭ್ಯ ಧರೆಯೊಳಗೆ ನೀರಿಂದ ದೂರಾದ ಮೀನಿನಂತೆ ಘೋರ ದುಃಖದಿ ಮುಳುಗಿ ಪಾರುಗಾಣದೆ ದಿಕ್ಕು ತೋರದಾಗಿಹುದೀಗ ಬಾರೋ ಮನಮಂದಿರದಿ 3 ತನುವು ತ್ಯಜಿಸಿದರೇನು | ಅನಿಮಿಷಾಂಶನೆ ನಮ್ಮ ಕನಸು ಮನನಿನೊಳಗೆ ಸುಳಿದಾಡುತ ಕೊನೆಯಲ್ಲಿ ಹರಿನಾಮ | ಅನುಗ್ರಹಿಸುವೆವು ಎಂಬ ಘನ ಅಭಯ ನೀಡೆಂದು ಮಣಿದು ಪ್ರಾರ್ಥಿಪೆನಯ್ಯ 4 ಪುಣ್ಯಪುರುಷನೆ ನಮಗೆ ಇನ್ನಾವ ಬಯಕಿಲ್ಲ ಜನ್ಮ ಜನ್ಮಕೆ ನಿನ್ನ ಚರಣಾಬ್ಜವ ಚನ್ನಾಗಿ ಸೇವಿಸುವ ಘನ್ನ ಸುಖಗರಿಯೆಂದು ನಿತ್ಯ 5 ನಿನ್ನಿಂದ ಸತ್‍ಶ್ರವಣ | ನಿನ್ನಿಂದ ಅಘಹರಣ ನಿನ್ನಿಂದ ಶ್ರೀವಾಯು ಹರಿಯಕರುಣ ನಿನ್ನಿಂದ ಉಪದೇಶ \ ನಿನ್ನಿಂದ ಭವನಾಶ ನಿನ್ನಿಂದ ಬಿಂಬ ದರ್ಶನವು ನಮಗಿನ್ನು 6 ಪಾಮರರ ಅಪರಾಧ ನೀ ಮನಕೆ ತಾರದಲೆ ಹೇಮ ಕಾಮಿನಿ ಭೂಮಿ ಈಮೂರರ ವ್ಯಾಮೋಹವನೆ ಬಿಡಿಸಿ | ಶಾಮಸುಂದರ ಭಕ್ತ ಸ್ತೋಮ ಸಂಗದೊಳಿಟ್ಟು ಪ್ರೇಮದಲಿ ಪಿಡಿಕೈಯ್ಯ 7
--------------
ಶಾಮಸುಂದರ ವಿಠಲ
ಸಲಹೊ ಸಂತತ ಸಂತಿಕೆಲವೂರ ನಿಲಯ ಸಲೆ ನಂಬಿದೆನು ನಿನ್ನ ಜಲಜಾಂಘ್ರಿ ಪಿಡಿಕೈಯ್ಯ ಪ ಸೂನು ವೃಕೋದರ ಮೋದ ಮೌನಿ ನಾಮತ್ರಯದಿ ಅವತರಿಸುತಾ ದಾನವರ ಗರ್ವಾಖ್ಯ ಕಾನನಕೆ ಶಿಖಿ ಎನಿಸಿ ಪತಿ ಕೃಷ್ಣ ವ್ಯಾಸರನುಗ್ರಹಪಾತ್ರ 1 ವರದೇಶ ವಿಠಲನ ಚರಣ ಸೇವಕನಿಗೆ ಸ್ಥಿರವಾದ ವೃರಾಗ್ಯ ಜ್ಞಾನ ಭಕುತಿ ಗರೆದು ಪೊರೆಯುವದಕ್ಕೆ ಪುರದ ಹಿಂಭಾಗದಲಿ ಇರುವ ಕಾರಣ ನಿನ್ನ ಮೊರೆ ಹೊಕ್ಕೆ ಮರೆಯದಲೆ 2 ಇಂದು ಬೆಂದು ಪೋದವು ಎನ್ನ ಪಾಪವೆಲ್ಲ ಸಿಂಧುಜಾವರ ಶಾಮಸುಂದರನ ದಾಸರೊಳು ಪೊಂದಿಸೆಂದಡಿಗಡಿಗೆ ವಂದಿಸುವೆ ತ್ವತ್ವದಕೆ 3
--------------
ಶಾಮಸುಂದರ ವಿಠಲ