ಒಟ್ಟು 14 ಕಡೆಗಳಲ್ಲಿ , 9 ದಾಸರು , 14 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೆಲಿಯಬಲ್ಲವರಾರು ಮೂಜಗದಿ ಪಣೆಯ ಬರಹ ಗೆಲಿಯಬಲ್ಲವರಾರು ಮೂಜಗದಿ ಪ ಗೆಲಿಯಬಲ್ಲವರಾರು ಮೂಜಗದೊಳಗೆ ಬಲ್ಲಿದರೆಂಬರೆಲ್ಲರು ಜಲಜಪೀಠನ ಲಿಪಿಗೆ ಸಿಲ್ಕಿ ತೊಳಲಿ ಬಲಳಿದರ್ಹಲವು ಪರಿಯಲಿ ಅ.ಪ ಒಂದೇ ಧರ್ಮದಿಗೂಡಿ ತಾ ನಡೆದ ವಿಕ್ರಮನೆಂಬುವ ಒಂದೆ ಕೊಡೆಲಿಡೀಭುವನವಾಳಿದ ಸದ್ಧರ್ಮ ತನದಿಂ ದೊಂದೆ ಆ ಸುಮರೂಪ ಪ್ರಜರ ಪಾಲಿಸಿದ ಉದ್ದಂಡನೆನಿಸಿದ ಒಂದು ಪಾಪಾಚರಣೆಗೈಯದೆ ಒಂದು ಬಿಡಿದಖಿಲ್ವಿದ್ಯವರಿದ ಒಂದು ಅರಿಯದೆ ತನ್ನ ಕೈಕಾಲು ಒಂದೇ ಮಾತಿಗೆ ಕಳೆದುಕೊಂಡ 1 ಎರಡುಹೊತ್ತು ಸತ್ಯಮಂ ಬಿಡದ ಸುಚಿಂತದಿರುವ ಎರಡನೇ ಗುಣ ಸ್ವಪ್ನದರಿಯದ ನಳಚಕ್ರವರ್ತಿ ಎರಡು ತಿಳಿಯದೆ ಜೂಜನಾಡಿದ ಮಹವಿಪಿನಕೈದಿದ ಎರಡು ಮಕ್ಕಳ ವನದಿ ಅಗಲಿದ ಎರಡನರಿಯದೆ ಮಲಗಿದರಸಿಯ ಎರಡನೆಬಗೆದಡವಿಯಲಿ ಬಿಟ್ಟು ಎರಡನೇರಾಯನಶ್ವ ತಿರುವಿದ 2 ಮೂರು ಜಗ ಅರೆಲವದಿ ತಿರುಗುವ ದಿನದಿನವುಬಿಡದೆ ಮೂರುಮೂರ್ತಿದರ್ಶನವ ಪಡೆಯುವ ಆ ಪರಮಪಾವನ ಮೂರು ಕಾಲದ ಜ್ಞಾನ ಬಲ್ಲವ ನಾರದನೆಂಬುವ ಮೂರುಮಂದಿ ಶಕ್ತಿಯರಿಗೆ ಮೂರು ಬಟ್ಟೆಯ ಸುದ್ದಿ ಪೇಳಿ ಮೂರು ಮೂರ್ತಿಗಳುಪಾಯನರಿಯದೆ ಮೂರಿಪ್ಪತ್ತು ಮಕ್ಕಳ್ಹಡದ 3 ನಾಲ್ಕುಯುಗ ಪ್ರಮಾಣಗಳ ತಿಳಿದ ಬ್ರಹ್ಮನುಬಿಡದೆ ನಾಲ್ಕುವೇದಗಳ್ಹಸ್ತದೋಳ್ಪಿಡಿದು ವಿಧವಿಧದಿ ಎಂಭತ್ತು ನಾಲ್ಕುಲಕ್ಷಜೀವರಾಶಿಗಳ ಬರಿದೆ ಉತ್ಪತ್ತಿಗೈದು ನಾಲ್ಕುಭುಜನ ಸುರನೆಂದೆನಿಸಿ ನಾಲ್ಕು ವಿಧ ಮತಿವಂತನಾದವ ನಾಲ್ಕು ಒಂದು ಮುಖ ಮೊದಲಿಗಿರ್ದನು ನಾಲ್ಕೆ ಮುಖದವನೆನಿಸಿಕೊಂಡು 4 ಐದುಬಾಣನಪಿತನಸಖನಾದ ಉರಿನೇತ್ರ ಬಿಟ್ಟು ಐದುಬಾಣನ ಭಸ್ಮ ಮಾಡಿದ ಅಪಾರ ಶಂಭೋ ಐದು ಒಂದು ಮುಖದವನ ತಾ ಪಡೆದ ಹರಿಕರುಣದಿಂದ ಐದು ಒಂದು ಮುಖದವನಿಂ ತಾರಕ ನೈದುವಂದುದಲ್ಲೆ ಸೀಳಿಸಿ ದೈದುತತ್ವಕಾಲಯೆನಿಸಿದ ಐದುಮುಖಸ್ಮಶಾನ ಸೇರಿದ 5 ಆರು ಎರಡೈಶ್ವರ್ಯಗಳಲೊಳ ವೈಕುಂಠನಾಯಕ ಆರು ಎಂಟುಲೋಕಗಳ ಪರಿಪಾಲ ಬಿಡದೇಳು ಇಪ್ಪತ್ತು ಆರುಕೋಟಿ ಅಮರಾದಿಗಳ ಮೂಲ ಮಹಮಂತ್ರ ಜಾಲ ಆರುನಾಲ್ಕು ಭುಜನ ಮೊರೆ ಕೇ ಳಾರುನಾಲ್ಕು ಶಿರನ ವಧಿಸಿದ ಆರುನಾಲ್ಕರಗಧಿಕನೆನಿಸಿ ಆರುನಾಲ್ಕವತಾರ ತಾಳಿದ 6 ಆರಿಗಾದರು ಬಿಡದೀ ಬರವಣಿಗೆ ಬಿದ್ದಂತೆ ಫಲಿಸಿತು ತೀರಲಿಲ್ಲದಂತಂಥ ಹಿರಿಯರಿಗೆ ಸಾಧ್ಯದಪ್ಪಿ ಮಹ ಘೋರ ಬಡಿಸಿತು ಸರ್ವ ಶಕ್ತರಿಗೆ ಬ್ರಹ್ಮನಸುಡಗಿ ವಾರಿಜನು ಬರೆದ ಬರೆಹ ಮೀರಿ ನಡೆದೇನೆಂದರಿನ್ನು ಸಾರಮೋಕ್ಷಕ್ಕಧಿಪ ನಮ್ಮ ಧೀರಪ್ರಭು ಶ್ರೀರಾಮ ಬಲ್ಲ 7
--------------
ರಾಮದಾಸರು
ಕಂಡೆ ಫಂಡರಿರಾಯನ ಸಿರಿಮನ ಪ್ರಿಯನಾ ಪ ಚಂಡವಿಕ್ರಮ ಕರದಂಡ ಮುನಿಪನೊಲಿ ದಂಡಜಾಧಿಪ ಪ್ರಕಾಂಡ ಸುಪೀಠನ ಅ.ಪ. ಮಣಿಮಯ ಮಕುಟ ಮಧುಪನವಿರಪ್ಯರೇ ಪಣೆಯೊಳಿಟ್ಟ ಕಸ್ತೂರಿ ತಿ¯ಕಾ ವನÀರುಹ ಉಪಮ ಲೋಚನಯುಗ ಚಂಪಕ ಸುನಾಸ ವಕುಂಡಲವ ವಿಕಾಸವ ಕದಪಿನ ವಿಲಾಸವ ಮೊಗದ ಮಂದಹಾಸವ 1 ಕುಂದ ಕೋರಕ ದಶನಾವಳಿಯ ಬಿಂಬಾ ಅಧರ ಕಳೆಯ ಕಂಧರ ತ್ರಿವಳಿ ಪುರಂದರ ಇಭಕರ ಪೋಲುವ ಭುಜಯುಗ ವಿಶಾಲವಾ ಕರತಳರಸಾಲವ ನಖರ ಮಲ್ಲಿಕಾಸವ 2 ಅತಿವಿಸ್ತøತ ವಕ್ಷಸ್ಥಳವಾ ಸಿರಿ ಸತಿ ಸದನಾರ್ಕನಂದದಿ ಪೊಳೆವಾ ಕೌಸ್ತುಭ ದೀಧಿತಿ ವಿಲಸಿತ ವೈಜಯಂತಿಯ ಉದರ ರೋಮ ಪಂಕ್ತಿಯಾ ಕುಕ್ಷಿತ್ರಿವಳಿ ಕಾಂತಿಯಾ ನಾಭಿವಲ್ಮೀಕ ದಂತಿಹ 3 ಮುಂಬಿಸಿಲಿನಂತೆ ಕನಕ ಚೈಲಾ ಸುನಿ ತಂಬದಿ ಪೊಳೆವ ಗೋಲಿಯ ಚೀಲಾ ಕುಂಬು ಕೋಕನದ ವಿಡಂಬ ಮೇಖಲ ಕದಂಬವ ಊರು ಕದಳೀ ಜಾನುಗಳಿಂದು ಬಿಂಬನಾ ಆಚರಿಪ ವಿಡಂಬನಾ 4 ಮಾತಂಗಕರವ ಜಂಘೆಗಳ ಗುಲ್ಫ ಜಾತಿಮಣಿಕಾಂಗುಲಿ ಸಂಘಗಳ ಜ್ಯೋತಿ ಬೆಳಗೆ ಜಗನ್ನಾಥ ವಿಠಲ ನಂಘ್ರಿ ಪುಷ್ಕರಾ ಉದಿತ ಶತ ಭಾಸ್ಕರಾ ಗಭಸ್ತಿ ತಿರಸ್ಕರ ಸುಜನರಿಗೆ ಶ್ರೇಯಸ್ಕರ 5
--------------
ಜಗನ್ನಾಥದಾಸರು
ಕೂಗಳತಿ ಎಂಬೊ ಸಂಶಯಸಲ್ಲಾಪ ಸಮಚಿತ್ತದಲ್ಲಿ ಇದ್ದು | ಸಮ ವಿಷಮ ತಿಳಿದೆದ್ದು | ಕುಮತ ಮತವನು ವದ್ದು | ಬಲು ಉಬ್ಬೆದ್ದು | ಕಮಲ ಪೀಠನ ಹೊದ್ದು | ಕ್ರಮಣಿ ಯೋಪಾದಿಯಲಿದ್ದು | ತಮಕ್ಕೆ ಹರಿನಾಮ ಮದ್ದು | ಶ್ರಮ ಕಳುಕದವಗೆ1 ಭಾಗವತರ ನೋಡಿ | ವೇಗ ಮನಸನು ಮಾಡಿ | ಬಾಗಿ ಸಿರವನೆ ನೀಡಿ | ನಲಿದು ಪಾಡಿ | ಯೋಗವಾಗದೆ ಕೂಡಿ | ಭೋಗವನು ಈಡಾಡಿ | ತೂಗಿ ಮೈಯಲಾಡಿ ಪುಣ್ಯದನವನಿಗೆ 2 ಹರಿ ಭಕುತಿಯ ಬೇಕು | ನರಹರಿಯ ಸ್ಮರಣೆ ಬೇಕು | ಹರಿಕಥಾ ಬೇಕು | ಹರಿ ಎನಲಿ ಬೇಕು | ಹರಿಯ ಭಜಿಸಲಿ ಬೇಕು | ಹರಿವೊಲಿಮೆ ಇರಬೇಕು | ಹರಿಯಲ್ಲದಿಲ್ಲೆಂದು ಹರಿದು ನುಡಿದವನಿಗೆ 3 ಆಸಿಯನು ಕಳೆದು | ದುರ್ವಾಸನೆ ಹಮ್ಮು ಕಳೆದು | ಕ್ಲೇಶವನು ಅಳಿದು | ತೋಷದಲಿ ಬೆಳೆದು | ದೋಷರಾಶಿಗೆ ಮುಳಿದು | ದೂಷಕರನೆ ಅಳಿದು | ಭೇಷಜವನೆ ಅಳಿದು | ದಾಸರ ಬಳಿಗೆ ಸುಳಿದವಗೆ 4 ಆಚಾರವನು ಪಿಡಿದು | ಸೂಚನೆ ಅರಿತು ನಡೆದು | ವಾಚಗಳ ಮಿತಿ ನುಡಿದು | ನಾಮಗುಡಿದು | ಸಿರಿ ವಿಜಯವಿಠ್ಠಲರೇಯನ | ಯೋಚನಿಂದಲಿ ಬಿಡದೆ | ದಿನವ ಹಾಕುವನಿಗೆ 5
--------------
ವಿಜಯದಾಸ
ನಿಗಮ ಸನ್ನುತ ಪ ವೀತ ಶೋಕ ಭಯ ವಿದೂರ ಮದನ ಜನಕ ಅ.ಪ. ಆದಿಮಧ್ಯಾಂತರಹಿತ - ವೇದ ಪೀಠನ ಜನಕನೀತ ಅಚ್ಯುತ ಅಪ್ರಮೇಯ ಅಮರವಂದಿತ 1 ನಿತ್ಯತೃಪ್ತ ನಿಖಿಲವ್ಯಾಪ್ತ ಸತ್ಯಸಂಕಲ್ಪ ಸ್ವರತ ಹಸ್ತಿವರದನಾದಪರ ವಸ್ತುವೆನಿಸಿದ ಖ್ಯಾತ 2 ಸೃಷ್ಟಿಸ್ಥಿತಿಲಯಾದಿಕರ್ತ, ದುಷ್ಟದಮನ ಗೈಯುತಲೀತ ಕೃಷ್ಣರೂಪದಿಂದಲೆಸೆವ ಶ್ರೇಷ್ಠದೈವ ಶ್ರೀ ಕರಿಗಿರೀಶ 3
--------------
ವರಾವಾಣಿರಾಮರಾಯದಾಸರು
ಪರದೇಶಿ ನೀನು ಸ್ವದೇಶಿ ನಾನು ಪ ಪರಮ ಭಾಗವತರ ಬಾ ಹೋಗಿ ಕೇಳೋಣಅ ಎನಗೆ ಜನಕನು ನೀನು ನಿನಗಾವ ಜನಕನೊ ಜನನಿ ಇಂದಿರೆದೇವಿ ನಿನಗಾವಳೊ ವನಜಪೀಠನು ಭ್ರಾತ ನಿನಗಾವ ಭ್ರಾತನೊ ಇನ ಸೋಮ ಮಾತುಳರು ನಿನಗಾವ ಮಾತುಳನೊ 1 ಸುರನದೀ ಅಗ್ರಜಳು ನಿನಗೆ ಅಗ್ರಜಳಾರು ಶರನಿಧಿ ಭಾವ ನಿನಗಾರು ಭಾವ ಸ್ಮರನು ಕಿರಿ ಸಹಭವನು ನಿನಗೆ ಸಹಭವನಾರೊ ಸುರರು ಬಂಧುಗಳೆನಗೆ ನಿನಗಾರು ಬಾಂಧವರೊ 2 ವರ ಇಳಾ ಸಾಮಾತೆ ನಿನಗೆ ಸಾಮಾತೆ ಯಾರೊ ಮರುತ ದೇವರು ಗುರು ನಿನಗಾರು ಗುರುವೊ ಸಿರಿಯರಸ ವಿಜಯವಿಠ್ಠಲರೇಯನೆ ನಿನ್ನ ಚರಣ ಸೇವಕ ನಾನು ನೀನಾರ ಸೇವಕನೊ 3
--------------
ವಿಜಯದಾಸ
ಪಾಂಡುರಂಗನೆ ಪಾಲಿಸೆನ್ನನು ಬೇಡಿಕೊಂಬೆನು ವರವ ನೀಡಯ್ಯ ನೀನು ಪ. ಸುರರು ನಿರುತ ನಿನ್ನನು ಬಿಡರು ಕರಗಳನೆ ಜೋಡಿಸುವರು ವರಗಳನೆ ನೀಡೆಂಬರು ಭರದಿ ಹದಿನಾಲ್ಕು ಜಗದ ಉದರದಿ ಇಂಬಿಟ್ಟ ಭೋಜ ಸಿರಿಸ್ತುತಿಗೆ ಸಿಲ್ಕ ರಾಜವರ ರವಿಶತರ ತೇಜ ಭೀಮರಥಿಯ ತೀರದಲ್ಲಿ ಮಹಾನಂದ ಭರಿತ ನಂದನ ಕಂದ ಪೂರ್ಣಸುಖವನ್ನೆ ಕೊಟ್ಟು ಅನುದಿನ ಸೇರಿಸೊ ವೈಕುಂಠ 1 ಇಂದು ನಾ ಮಾಡ್ದ ಪುಣ್ಯ ಬಂದು ಕೈಸೇರಿತಿನ್ನ ಸುಂದರಾಂಗನೆ ಎನ್ನ ಬಂಧ ಪರಿಹರಿಸಿ ಬೇಗದಿಂದ ಉದ್ಧರಿಸೋ ಈಗ ನಂದನ ಕಂದ ರಂಗ ಬಂಧುವೇ ಪಾಂಡುರಂಗ ಕಮಠ ವರಹ ವೇಷಧಾರಕನೆ ನಾರಸಿಂಹನೆ ದೈತ್ಯಸಂಹಾರಿ ಗಂಗಾಪದಧಾರಿ ಕ್ಷತ್ರಿಯ ಕುಲವೈರಿ ಪೊಗಳಲು ಜೀಯಾ ಶೇಷಗೊಶವಲ್ಲವಯ್ಯಾ 2 ಪುಟ್ಟ ಧ್ರುವರಾಯಗಿನ್ನ ಕೊಟ್ಟೆ ಸ್ಥಿರ ಪಟ್ಟವನ್ನ ಎಷ್ಟು ವರ್ಣಿಸಲಿ ನಿನ್ನ ಇಷ್ಟ ಫಲದಾಯಕನ್ನ ಇಟ್ಟಿಗೆ ಪೀಠನಿಲಯ ದಿಟ್ಟ ಶ್ರೀ ಕೃಷ್ಣರಾಯ ಕಷ್ಟಪರಿಹರಿಸು ಗೋಪಾಲಕೃಷ್ಣವಿಠ್ಠಲ ಜೀಯ ಪಾಡಲಿ ಹಗಲಿರುಳು ಕೊಡದಿರು ವಿಠ್ಠಲಯ್ಯ ಬಲವಂತÀ ರಕ್ಷಿಸೆನ್ನ ವಸಂತ ಶ್ರೀದ ಕೈಯ ಮುಗಿವೆ ಸರ್ವದಾ 3
--------------
ಅಂಬಾಬಾಯಿ
ಬಂದ-ಬಂದ _ ಇಂದಿರೇಶ ನಂದನಂದನಾ ನಿಖಿಳ ಜನಕ ಕಂಧರಾಶ್ರಯಾ ಪ ಬಂದ ಬಂದ ಭಜಕ ಬಂಧು ಮಂದರಾದ್ರಿಧರ ಅರ- ವಿಂದನಯನ ಸುಂದರಾಂಗ ಸಿಂಧುಶಯನ ನಳಿನನಾಭ ಅ.ಪ. ನೀಲಮೇಘ ಶ್ಯಾಮಸುಂದರಾತನಿಗೆ ಮೇಲುಸಮರು ಇಲ್ಲವೆನಿಸಿದ ಲೀಲೆಯಿಂದ ಜಗವ ಸೃಜಿಸಿ ಪಾಲಿಸುತ್ತ ಮತ್ತೆ ಅಳಿಸಿ ಆಲದೆಲೆಯಮೇಲೆ ಸಿರಿ ಲೋಲನಾಗಿ ಮೆರೆವ ಕೃಷ್ಣ 1 ಐದು ರೂಪದಿಂದ ಕ್ರೀಡಿಪಾ ಪ್ರಕೃತಿ ಬೋಧ್ಯ ಸಿರಿಗುನಾಥ ನಾಯಕಾ ಆದಿಮಧ್ಯ ಅಂತ್ಯ ಶೂನ್ಯ ಮೋದಪೂರ್ಣ ಜ್ಞಾನಕಾಯ ಮೋದ ಮುನಿಯ ಹೃದಯಸದನ ಗೋಧರಾತಪತ್ರ ಶ್ರೀಪ 2 ಆದಾನಾದಿ ಕರ್ತ ಬ್ರಹ್ಮನೂ ದಿವಿಜ ಸಾಧುಸಂಘ ಸೇವೆ ಗೊಂಬನೂ ವೇದವೇದ್ಯ ವೇದ ವಿನುತ ವೇದ ಭಾಗಗೈದು ಪೊರೆದ ಛೇದ ಭೇದರಹಿತ ಗಾತ್ರ ಸಾಧು ಪ್ರಾಪ್ಯ ಬಾದರಾಯಣ 3 ದಾಸಜನಕೆ ಮುಕ್ತಿನೀಡುವ ಮಹಿ- ದಾಸಕಪಿಲ ಪೂರ್ಣ ಕಾಮನೂ ದೋಷ ದೂರ ನಾಶರಹಿತ ವಾಸುದೇವ ಕ್ಲೇಶವಿದೂರ ಈಶವಿಧಿಗಳನ್ನು ಕುಣಿಪ ಕೇಶವಾದ್ಯನಂತ ರೂಪ4 ಮೊತ್ತಜಗಕೆ ಸತ್ತೆನೀಡುವಾ ನಿಖಿಳ ಸತ್ಯ ಜಗದ ಚೇಷ್ಟೆನಡೆಸುವಾ ಮೊತ್ತಶಬ್ದ ಘೋಷವರ್ಣ ಮತ್ತೆ ಪ್ರಣವ ಮಂತ್ರಗಣದಿ ನಿಖಿಳ ಯಜ್ಞ ಭೋಕ್ತನಾಥ ಅಂಗಭೂತ 5 ಜಿಷ್ಣುಸೂತ ಕೃಷ್ಣೆಕಾಯ್ದವಾ ಸ್ವರತ ವಿಷ್ಣು ಪುರುಷಸೂಕ್ತ ಸುಮೇಯಾ ವಿಶ್ವಕರ್ತ ವಿಶ್ವಭೋಕ್ತ ವಿಶ್ವರೂಪ ವಿಶ್ವಭಿನ್ನ ವಿಶ್ವವ್ಯಾಪ್ತ ಶಶ್ವದೇಕ ತೈಜಸ ಪ್ರಾಜ್ಞತುರ್ಯ 6 ಸತ್ಯಧರ್ಮಗಳನು ಕಾಯುವಾ ದುಷ್ಟ ದೈತ್ಯತತಿಯ ದಮನಗೈಯ್ಯುವಾ ಮತ್ಸ್ಯಕೂರ್ಮ ಕೋಲ ಚರಿತ ಭೃತ್ಯಭಾಗ್ಯ ನಾರಸಿಂಹ ಸತ್ಯಶೀಲ ಬಲಿಯವರದ ಕ್ಷಿತಿಪದಮನ ಕ್ಷಾತ್ರವೈರಿ ಪರಶುಧಾರಿ7 ವಿಶ್ವ ಬಿಂಬನು ರಾ ಜೀವಪೀಠನನ್ನು ಪಡೆದನೂ ರಾವಣಾರಿ ಕೃಷ್ಣ ಬುದ್ಧ ಭಾವಿಕಲ್ಕಿ ನಿತ್ಯಮಹಿಮ ಭಾವಜಾರಿ ಪ್ರೀಯ ಸಖನು 8 ಹಯಗ್ರೀವ ದತ್ತ ಋಷಭನೂ ಅಪ್ರ- ಮೇಯ ಹಂಸ ಶಿಂಶುಮಾರನು ಜಯಮುನೀಂದ್ರ ವಾಯುಹೃಸ್ಥ ಜಯೆಯ ರಮಣ ಕೃಷ್ಣವಿಠಲ ದಯದಿ ಪೊರೆಯಲೆಮ್ಮನೀಗ ಜಯವು ಎನುತ ನಲಿದು ನಲಿದು 9
--------------
ಕೃಷ್ಣವಿಠಲದಾಸರು
ಬಾದರಾಯಣ ಮದದಿ ಮರೆತೆನೊ ಸದಯದಿಂ ಮುದ ಪಾಲಿಸೊ ಪ ಬೋಧ ಮೂರುತೆ ಭಕ್ತರಾ ನುಡಿ ಸಾದರದಿ ನೀನಾಲಿಸೋ ಅ.ಪ ವೇದಭಾಗವ ಮಾಡಿ ವೇದವ್ಯಾಸನೆಂದೆನಿಸಿದಿ ಸದಮಲಾಭಾವದಲಿ ನಿನ್ನಯ ಪಾದಕಮಲವ ತೋರಿದಿ 1 ಗಾತ್ರ ಎನ್ನಯ ಖೇದ ಭಾವವನೋಡಿಸೊ ಮೋದತೀರ್ಥ ಹೃದಾಬ್ಜ ಮಂದಿರ ಸಾಧು ಸಂಗವ ಮಾಡಿಸೋ 2 ತರ್ಕಮುಧ್ರಾಧರನೆ ಎನ್ನ ಕುತರ್ಕ ಬುದ್ಧಿಯನೋಡಿಸೋ ಅರ್ಕಸನ್ನಿಭ ಬ್ರಹ್ಮ ಸುತರ್ಕ ಮಾರ್ಗವ ಬೋಧಿಸೋ 3 ಅಭಯಪ್ರದಕರ ಎನ್ನಭವ ಭಯ ತ್ರಿಭುವನೇಶ್ವರ ಓಡಿಸೀ ಇಭವರದ ಮಧ್ವೇಶ ಸಂತತ ಸಭೆಯ ಸಹನೀ ತೋರೆಲೊ4 ಯೋಗ ಪೀಠನೆ ನೀಗಿಸೆನ್ನಯ ಭೋಗಬುದ್ಧಿಯ ಸರ್ವದಾ ಯೋಗಿಕುಲವರ ಬಾಗಿ ನಮಿಸುವೆ ಯೋಗಮಾರ್ಗವ ತೋರಿಸೊ5 ಮಾ ಕಮಲಜ ಭವೇಂದ್ರವಂದಿತ ಮಾಕಳತ್ರ ನಮೋಸ್ತುತೇ ಯಾಕೆ ಎನ್ನಲಿ ನಿರ್ದಯವು ನೀ ಸಾಕಲಾರದ ಪಾಪಿಯೇ 6 ಸನ್ನುತಿಸಿ ನಾ ನಿನ್ನ ಬೇಡುವೆ ಸನ್ನುತಾಂಘ್ರಿಯ ಸೇವೆಯಾ ಸನ್ಮುನೀವರ ಶ್ರೀ ನರಹರೆ ದಾಸದಾಸರ ದಾಸ್ಯವಾ 7
--------------
ಪ್ರದ್ಯುಮ್ನತೀರ್ಥರು
ಬಾರೊ ಭಾಗ್ಯದ ನಿಧಿಯೆ, ದಯಾಂಬುಧಿಯೆ ಪ ಸಾರಿದವರ್ಗಿತ್ತೆ ಸುಧೆವಾರಿಜಾರಿ ಕೌಮುದಿವಾರಿಜಧರ ಮುದದಿಸಾರಸ ಹೃದಯದಿಕೇರಿ ಕೇರಿಯಲಿ ಶೃಂಗಾರದಿ ಮೆರೆವ ಅಪಾರ ದಯಾನಿಧಿ ಅ ಪಾದ ಸಾರಥಿ ಪರ ರವಿಜನ ನೀ ಸೋಲಿಸಿತ್ರಿಜಗ ವಿಜಯ ವೇಷ ವಿಜಯಗಿತ್ತು ಮೆರೆದೆವಿಜಯ ಮೂರುತಿಯೆ 1 ದಶಶಿರ ಸಂಹರದಶರೂಪದಲಿ ಖಳದಶನ ಮೂರುತಿಯೆಂದುಹೆಸರು ಹೇಳುವರು2 ಪದುಮನಾಭ ಪದ್ಮೇಶ ಪದುಮಮಾಲಿ ಪದ್ಮಾಕ್ಷಪದುಮ ಪಾಣಿ ಪದ್ಮಾಂಘ್ರಿ ಪದುಮಸಖ ತೇಜಿಪದುಮ ಕಲ್ಪದಿ ನಾಭಿ ಪದುಮದಿ ಚತುರ್ಮುಖಪದುಮ ಜನ ಪಡೆದು ಪದುಮಜಾಂಡವಡೆದಿಪದುಮ ಪೀಠನ ಹೃತ್ಪದುಮದಿ ನಿನ್ನಪದುಮ ತೋರುತ ಬಾರೊ ಕಾಗಿನೆಲೆಯಾದಿಕೇಶವಹದುಳದಿಂದ ಬಾರೊ ಭಾಗ್ಯದ ನಿಧಿಯೆ 3
--------------
ಕನಕದಾಸ
ಭಳಿಭಳಿರೆ ಶನಿರಾಜ ನೀನೆ ಬಲ್ಲಿದನೊ ಇಳೆ ಮೂರರಲಿ ನಿನಗಿಂ ಬಲ್ಲಿದರ ಕಾಣೆ ಪ ಧರೆಗೆಲ್ಲ ಒರ್ವನೆ ದೊರೆಯಾದ ನಳನನ್ನು ಪರರಾಯನಾಳೆನಿಸಿ ತಿರುವಿಸಿದಿ ಅಶ್ವ ವರ ಸತ್ಯ ಹರಿಶ್ಚಂದ್ರನ್ಹೊಲೆಯನಾಳೆನಿಸವನಿಂ ನಿರುತದಿಂ ಕಾಯ್ಸಿದೆಯೊ ಸುಡುಗಾಡವ 1 ಭೂಪತಿ ವಿಕ್ರಮಗೆ ಕಳ್ಳನೆಂದೆನಿಸವನ ತಾಪಬಡಿಸೆದೆಯೊ ಕೈಕಾಲುಗಳ ಕಡಿಸಿ ರೂಪಗೆಡಿಸಿದಿಂದ್ರಿನ ಮೈಯಲ್ಲಿ ತೂತ್ಹಾಕಿ ಶಾಪಕೊಡಿಸಿಂದುವಿನ ಕಳೆಯುಗುಂದಿಸಿದಿ 2 ಕುರುರಾಯನೊಂಶವಂ ನಿರ್ಮೂಲ ಮಾಡಿದೆಯೊ ತಿರಿದುಣಿಸಿದಿ ಆ ಮಹ ಪಾಂಡುನಂದನರ ಪರಮ ಸುಖಿಗಳ ಸುಖಕೆ ಕಿಡಿಯಿಟ್ಟು ನೋಡಿದಿ ವರ ತಪಸ್ವಿಗಳ ತಪಸ್ಸು ಭಂಗಪಡಿಸಿದೆಯೊ 3 ಒದಗಿ ಯಮದೇವನನ್ವಧೆ ಮಾಡಿಸಿದೆಯೊ ನೀ ಪದುಮಪೀಠನದೊಂದು ಮಸ್ತಕವ ಕಳೆದಿ ಮುದ ಕೃಷ್ಣ ಗಿಡದಡಿಯಸುವ ಬಿಟ್ಟನೆನಿಸಿದಿ 4 ಇಂತಿಂಥ ಮಹಿಮರನು ಈ ಪಾಡ ಪಡಿಸಿದಿ ನ ಮ್ಮಂಥ ನರಜನರ ಪಾಡೇನು ನಿನಗೆ ಕಂತುಪಿತ ಶ್ರೀರಾಮನನುಮತಿಯ ಪಡೆದು ಬಲ ವಂತನಿನಿಸಿದೆಯೋ ನೀ ಮೂಲೋಕದೊಳಗೆ 5
--------------
ರಾಮದಾಸರು
ವಂದೇ ಮುಕುಂದ ನಮೊ | ನಂದ ಮೂರುತಿ ಪರಮಾನಂದ ನರಸಿಂಹಾ ಪ ಬಿಸಿಜಪೀಠನ ವರವ ಪಡೆದು ಮಹಾರಾಜೇಂದ್ರ | ವಸುಮತಿಗೆ ತಾನೆ ಸ್ವಾಮಿ ಎಂದು || ಹಸುಳೆಯನು ಬಾಧಿಸಲು ಮೊರೆಯಿಡಲಾಕ್ಷಣ | ಮಿಸಣಿಪ ಕಂಭದಿ ಬಂದ ಭಳಿರೆ ನರಸಿಂಹಾ 1 ರೋಷವನೆ ತಾಳಿ ನಿಟ್ಟುಸುರಗೈಸಿಕೊಳುತಾ | ಸೂಸಿ ಕಿಡಿಗಳನುದುರೆ ಕುಪ್ಪಳಿಸುತ ಕಮ || ಲಾಸನಾದ್ಯರ ಪಾಲಿಸಿದ ನರಸಿಂಹಾ 2 ಅಜವಾಣಿ ನೆಲೆಯಲ್ಲಿ ವಾಸವಾಗಿದ್ದ ನರ | ಗಜಪಗೀಯ ಮೊಗನೆ ಆನಂದ ಮಗನೇ || ಭಜಿಸುವನು ಗತಿ ಕೊಡುವ ಜನಮೇಜಯ ನೃಪವರದ | ವಿಜಯವಿಠ್ಠಲ ವರದಾತೀರ ನರಸಿಂಹ 3
--------------
ವಿಜಯದಾಸ
ಸಾರಿದ ಸಿರಿವರ ಸಡಗರದಿಂದಲಿ ಕೌರವಪುರಕೆ ಪ ಧೀರ ಪಾಂಡವರ ಕೋರಿಕೆ ಸಲ್ಲಿಸಲು ಸಾರಸ ನಯನನು ಅ.ಪ. ಪ್ರಾತರಾಹ್ನೀಕವ ತಾ ತೀರಿಸಿ ವರ ಪೀತ ವಸನ ಧರಿಸಿ ವೀತರಾಗ ಸಂಪ್ರೀತಿಯಲಿ ಫಾಲದಿ ತಾ ತಿಲಕವ ಧರಿಸಿ ಹೇಮ ಮಕುಟೋತ್ತಮಾಂಗದಿ ಧರಿಸಿ ಜ್ಯೋತಿರ್ಮಯಗತಿ ಪ್ರೀತಿಯಿಲಿ ತರುಣಿರಾ ರುತಿ ಬೆಳಗಲು ತಾ ಸುಮುಹೂರ್ತದಿ 1 ಅಂಡಜಾಧಿಪನು ಪ್ರಕಾಂಡ ಪೀಠನುದ್ದಂಡರಥವ ತರಿಸಿ ಚಂಡಗದಾ ಕೋದಂಡಾದ್ಯಾಯುಧ ಬಂಡಿಗೆಯೊಳಗಿರಿಸಿ ಮಾರ್ತಾಂಡನಂತೆ ಮೆರೆಸಿ ಹಿಂಡುಬಳಗಗಳ ಕಂಡಾದರಿಸುತ ಪಾಂಡುಸುತರ ಬೀಳ್ಕೊಂಡು ಭರದಲಿ 2 ಸುಖದಿ ಪ್ರಯಾಣ ಬೆಳಸಿ ಪ್ರಕಟ ಪಥದಿ ಮುನಿನಿಕರಂಗಳ ಮನವಿಕಸಿತಗೊಳಿಸಿ ಶುಕಪಿಕಾದಿ ಖಗಪಿಕರಂಗಳರವ ಸುಖವ ಮನದಿ ನಿಲಿಸಿ ಸಕಲಾಂತರ್ಗತ ಕರಿಗಿರೀಶ ತಾ ಯುಕುತಿಯಿಂದ ಸಂಧಾನವ ನಡೆಸಲು 3
--------------
ವರಾವಾಣಿರಾಮರಾಯದಾಸರು
ಸ್ವಾಮಿ ಕ್ಷೇಮೇಂದ್ರರ ಪ್ರೇಮ ಭಜಕ ಶ್ಯಾಮಸುಂದರ ಪ ಅಷ್ಟಭೋಗ ಪಟ್ಟಾರೋಹಣ ನಿಷ್ಟಜನರ ಕಷ್ಟಹರಣ ಸೃಷ್ಟಿ ಈರೇಳು ಇಟ್ಟು ಹೃದಯದಿ ಮುಟ್ಟಿರಕ್ಷಿಪ ಅಷ್ಟಮೂರುತಿ 1 ಕಮಲನಾಭ ಕಮಲವದನ ಕಮಲಪಾಣಿ ವಿಮಲಚರಿತ ಕಮಲಪೀಠನಯ್ಯ ಸುದಯ ಕಮಲನೇತ್ರ ಕಮಲಪ್ರಿಯಾ2 ಭಕ್ತಜನರ ಪ್ರಾಣಧವ ನಿತ್ಯ ನಿರ್ಮಲ ಮುಕ್ತಿಪದವ ಭಕ್ತಗಿತ್ತು ನೀಡು ಕ್ಷೇಮ ನಿತ್ಯ ನಿರ್ಮಲಾತ್ಮ ಶ್ರೀರಾಮ 3
--------------
ರಾಮದಾಸರು
ಯಾವ ಭಯವು ನಮಗೆ |ಶಂಕರ ದೇವನೊಲಿದು ಕಡೆಗೆ ಪಸಾವಧಾನದಿ ಸರ್ವಭಕ್ತ ಜನರಕಾವ|ದೇವ ದೇವೇಶ ಸರ್ವೇಶ ನೀನೊಲಿದರೆ ಅಪದುರಿತದ ಭಯವೇನಲೇ | ಶಂಕರ ನಿನ್ನ |ಸ್ಮರಿಸಲು ದೂರವಲೇ |ಮರಣದ ಭಯವೆನೆ | ಅಂತಕಾಂತಕ ನೀನು ||ಉರಗನ ಭಯವೆನೆ | ಗರಳಕಂಧರನೂ 1ಚೋರರ ಭಯವೇನೂ | ದಧಿಘೃತ |ಚೋರ ನಿನ್ನಯ ಸಖನೂ ||ನಾರೀ ಚೋರನ ದೇವ | ಧೀರಕೈರಾತನೀ |ಘೋರರಕ್ಕಸರೆನೆ | ತ್ರಿಪುರಸಂಹಾರ2ಮೃಗಪಕ್ಷಿ ಭಯವೆನಲೇ |ಸತಿಸುತಸಖ|ಖಗಮೃಗವೇರ್ದರೆಲೇ |ಜಗದೊಡತಿಯು ಲಕ್ಷ್ಮೀ | ಗಗ್ರಜನೆನಿಸಿಹೆ ||ಭಗಪೀಠನು ಧನ | ಮಾನಾಭಿಮಾನಕೇ 3ವಸನಕ್ಕೆ ಚರ್ಮಾಂಬರನೂ |ಸಂಸಾರವೆಂಬ ವ್ಯಸನಕೆ ದಿಗಂಬರನೂ ||ತೃಷೆಗೆ ಗಂಗಾಧರ | ಅಶನಕ್ಕೆ ಬಿಕ್ಷುಕನೀ |ಅಂಗ ಶೃಂಗಾರಕೆ | ಭಸ್ಮಲೇಪನನೂ 4ಪೊಗಳಲಳವೇ ನಿನ್ನಾ | ಮಹೇಶ್ವರ |ಜಗದಿ ಭಕ್ತರ ಸಂಪನ್ನಾ ||ಭೃಗುಲಾಂಛನಧರ ಗೋವಿಂದದಾಸನ |ಹಗಲಿರುಳೆನ್ನದೆಪೊರೆಯೋ ಮಹಾದೇವ 5
--------------
ಗೋವಿಂದದಾಸ