ಒಟ್ಟು 662 ಕಡೆಗಳಲ್ಲಿ , 85 ದಾಸರು , 532 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನನ್ನದೇನಿದೆಯೊ ದೇವ ನಿನ್ನದೆ ಎಲ್ಲವೂ ಪ ಪನ್ನಗಾಸನ ಧೊರೆಯೆ ಸನ್ನುತಾಂಘ್ರಿಯ ಹರಿಯೆ ಅ.ಪ. ಅವನಿಯೊಳು ಪುಟ್ಟಿಸುವ ಭವದೊಳಗೆ ನೂಕುವವಕಿವಿ ಮೂಗು ಕಣ್ಣಿವದನವ ತ್ವಚೇಂದ್ರಿಯದಿ ಅವಿತು ವ್ಯಾಪ್ತತನಾಗಿ ವ್ಯವಹರಿಸುವವ ನೀನೇಅವಸರದಿ ಕಾಯುವ ದೇವ ನೀನೆಯೊ 1 ತಿಳಿಯುವವ ನೀನೆಯೊ ತಿಳಿಸುವವ ನೀನೆಯೊಗಳಿಸುವವ ನೀನೆಯೊ ಬಳಸುವವ ನೀನೆಯೊಬೆಳಿಸುವವ ನೀನೆಯೊ ಕಳೆಯುವವ ನೀನೆಯೊಕೊಳುವವನು ನೀನೆಯೊ ಕಸಿಯುವವ ನೀನೆಯೊ 2 ಅಂತರಂಗದಿ ಅಡಗಿನಿಂತು ಪ್ರೇರಿಸುವನಂತದ್ವಂದ್ವದ ನಟನೆ ಸ್ವಂತತನವೆನಗೆಲ್ಲಿಸಂತರನು ಉದ್ಧರಿಸಲಿಂತು ಭೂಮಿಗೆ ಬಂದುನಿಂತ ಗದುಗಿನ ವೀರನಾರಾಯಣನು ನೀನೆ 3
--------------
ವೀರನಾರಾಯಣ
ಎನ್ನ ಬಿನ್ನಪ ಕೇಳೊ ಘನ್ನ ಮಹಿಮನೆ ಭವ ಬನ್ನ ಬಡಿಸುತಲಿಹುದೋ ಸ್ವಾಮಿ ಪ ಇನ್ನು ನೀ ಪೊರೆಯೊ ಅಪನ್ನಜನರಾಪಾಲ ಮನ್ನಿಸಿ ಕಾಯೊ ಸ್ವಾಮೀ ಪ್ರೇಮೀ ಅ.ಪ ಆಗಾಮಿಸಂಚಿತಭೋಗಂಗಳು ಎನ್ನ ಯೋಗ ಮಾರ್ಗಕೆ ಪೋಗದಂತೆ ಹೇಗೆ ಮಾಡಿ ಙÁ್ಞನನೀಗೆ ನಿನ್ನಲಿ ಮನಸು ಯೋಗವನು ಮಾಡಗೊಡದೇ ಜಾಗುಮಾಡುತ ಪರಮಭಾಗವತರಲಿಸದಾ ಆಗಮಗಳ ತಿಳಿಯದೇ ಹೀಗಾಗಿ ನಾನು ಅಯೋಗ್ಯನೆನಿಸೀ ಜಗದಿ ಕಾಗಿಯಾಗಿ ತಿರುಗಿದೇ ಸ್ವಾಮಿ 1 ಹೆತ್ತ ಈ ಮೊದಲು ಮತ್ತಾರು ಜನರಿಲ್ಲ ಹೊತ್ತಿಗೇ ಕರೆದನ್ನವೀವರಿಲ್ಲಾ ಗೊತ್ತು ಸ್ಥಳಗಳು ಇಲ್ಲ ವೃತ್ತಿ ಸ್ವಾಸ್ಥ್ಯಗಳಿಲ್ಲ ಚಿÉತ್ತ ಶುದ್ಧಿಯು ಮೊದಲೆ ಇಲ್ಲಾ ಎತ್ತ ಪೋದರೆನ್ನ ಇತ್ತ ಬಾಯೆಂತೆಂದು ಹತ್ತಿರ ಕರೆವೊರಿಲ್ಲ ಎತ್ತ ಪೋದರೆನ್ನ ಮತ್ತೆ ಪಾಲಿಪರ್ಯಾರೊ ಉತ್ತಮನೆ ನೀನೆ ಕಾಯೋ ಸ್ವಾಮೀ 2 ಗರ್ಭವಾಸದಕಿಂತ ದುರ್ಭರಾಭವತಾಪ ನಿರ್ಭರಾವಾಗಿಹುದೋ ಅರ್ಭಕಾಮತಿಯಿಂದ ಅಭರ್Àಟಾ ಕಾರ್ಯವನು ನಿರ್ಭಯದಿ ಮಾಡಿದೆನೊ ಗರ್ಭ ನಾ ದೂತ ನೀ ನಿರ್ಭಯವ ಕೊಡದಿರಲು ಲಭ್ಯವೇ ಸರ್ವಕಾರ್ಯಾ ಲಭ್ಯ ಶ್ರೀಪತಿ ನೀನು ಲಭ್ಯನಾಗದಿರೆ ವೈ ದÀರ್ಭಿರಮಣಾ ಕಷ್ಟವೋ ಸ್ವಾಮಿ 3 ಉಡುವ ವಸ್ತ್ರಗಳಿಲ್ಲ ಒಡಲಿಗಶನವು ಇಲ್ಲ ಕೊಡುವ ಧನ ಮೊದಲೆ ಇಲ್ಲ ಪೊಡವಿಯೊಳು ನಾನತೀ ಬಡವನಲ್ಲದೆ ಮಹಾ ಕಡು ಪಾಪಿಯಾದೆನಲ್ಲೋ ತುಡುಗುತನದಲಿ ಪರರ ಮಡದಿಯರ ನಾ ಬಲು ದೃಢಮನಸಿನಿಂದ ಬಯಸಿ ಧೃಢ ಭಕುತಿಯಿಂದ ಅಡಿಗೆರಗದಲೆ ನಾನು ಪೊಡವಿಭಾರಾದೆನಲ್ಲೋ ಸ್ವಾಮೀ 4 ಓದಿ ಬರೆಯಾಲಿಲ್ಲ ವೇದ ಪಠಿಸಾಲಿಲ್ಲ ಮೋದತೀರ್ಥರ ಶಾಸ್ತ್ರ ತಿಳಿಯಲಿಲ್ಲಾ ವಾದಶಾಸ್ತ್ರಗಳಿಲ್ಲ ಭೇದಪಂಚಕವಿಲ್ಲ ಸಾಧನದ ಮಾರ್ಗವಿಲ್ಲ ಖೇದಗೊಳಿಸುವ ಭವದ ಹಾದಿ ತಿಳಿಯದೆ ನಾನು ಮೋದಕÀರವೆಂದು ಅಲ್ಲೀ ಸಾದರದಿ ಬಿದ್ದು ಆಮೋದಬಡುತಲಿ ದ್ವಿ ಪಾದಪಶು ನಾನಾದೆನಲ್ಲೋ ಸ್ವಾಮೀ 5 ಸತಿಸುತ ಮೊದಲಾದ ಅತಿಹಿತ ಜನರೆನ್ನ ಸತತ ಸಂತ್ಯಜಿಸಿಹರೋ ವಿತತವಾಗಿಹ ಮಹಾಪತಿತದಾರಿದ್ರ್ಯನ್ನ ಅತಿಬಾಧೆ ಬಡಿಸುತಿಹದೋ ಇತರ ಜನರೂ ಎನ್ನ ಅತಿದÀೂರದಲಿ ನೋಡಿ ಅತಿಹಾಸ್ಯ ಮಾಡುತಿಹರೋ ವ್ರತತಿಜಾಂಬಕÀ ನಿನ್ನ ನತಿಸಿ ಬೇಡಿಕೊಂಬೆ ಸತತ ನೀ ಪಾಲಿಸೆಂದೂ ಸ್ವಾಮೀ 6 ತಂದೆ ತಾಯಿಯೂ ನೀನೆ ಬಂಧು ಬಳಗವು ನೀನೆ ಇಂದು ಸಿಂಧು ಒಳಗೆ ಬಿದ್ದೆ ಮುಂದಕ್ಕೆ ಕರೆದು ಕಾಯೋ ಸುಂದರಾಂಗನೆ ಕೃಪಾಸಿಂಧು ನೀ ಬಿಡೆ ಎನ್ನ ನೊಂದದಲೆ ಸಲಹೊರ್ಯಾರೋ ಸ್ವಾಮಿ 7 ಹೊಟ್ಟೆಗಿಲ್ಲದೆ ನಾನು ಬಟ್ಟೆ ಹಾಸೀ ನರರಿ ಗ್ವಟ್ಟರಿಸಿ ಒದರುತಿಹೆನೋ ಪುಟ್ಟದಿರಲೂ ಅನ್ನ ಸಿಟ್ಟಿನಿಂದಾ ನಾಯಿ ಬೆಟ್ಟಕ್ಕೆ ಒದರಿ ತಾನೂ ಹೊಟ್ಟೆಯುಬ್ಬೀ ಕೊನೆಗೆ ಹೊರಳಿ ಹೊರಳಿ ತಾನು ಸುಟ್ಟ ಬೂದಿಲಿ ಬೀಳ್ವ ತೆರದೀ ಒಟ್ಟು ಮಾತಿದು ಕೃಪಾವಿಟ್ಟು ನೀ ಎನ್ನನು ಥsÀಟ್ಟನೇ ಕರಪಿಡಿದು ಕಾಯೋ ಸ್ವಾಮೀ 8 ನಿನ್ನ ದಾಸನು ಆಗಿ ಅನ್ಯರನ ಬೇಡಿದರೆ ಘನ್ನತೆಯು ನಿನಗುಂಟೇ ಘನ್ನ ಜನಪನ ತನುಜ ಇನ್ನು ದೈನ್ಯದಿ ತಾನೆ ಅನ್ಯರನು ಬೇಡುವುದು ಉಂಟೇ ಚೆನ್ನ ಸುಮನಸ ಧೇನು ಮುನ್ನ ಮನೆಯೊಳಿರೆ ಗೋ ವನ್ನು ಬಯಸುವರುಂಟೇ ಇನ್ನು ಪೇಳುವದೇನು ಎನ್ನಭವಣೇ ತಿಳಿದು ಇನ್ನು ಕಾಯಲಿ ಬೇಕೋ ಸ್ವಾಮೀ ಶುದ್ಧಮಾರ್ಗವ ಬಿಟ್ಟು ಬದ್ಧ ಭವಸಾಗರವೆ ಉದ್ಧಾರ ಮಾಳ್ಪದೆಂದೂ ಶಿದ್ಧಜನರಾ ಸೇವೆಗೆ ಬದ್ಧನಾಗದೆ ದುರಾ ರಾಧ್ಯ ಜನರನ್ನು ಭಜಿಸೀ ಉದ್ಧರಿಸುವೊ ಶ್ರೀ ಮಧ್ವಸಿದ್ಧಾಂತದ ಸೂ ಪದ್ಧತಿಯನ್ನೆ ಬಿಟ್ಟೂ ಸಿದ್ಧಮೂರುತಿ ಎನ್ನ ¥ದ್ಧಗಳ ಎಣಿಸದಲೆ ಉದ್ಧಾರಮಾಡೊ ಸ್ವಾಮೀ ಪ್ರೇಮೀ 10 ದಾತ ನೀನೇ ಎನ್ನ ಮಾತುಲಾಲಿಸಿ ಭವದ ರತಿಯನ್ನೇ ಬಿಡಿಸಿ ಕಾಯೋ ಪೊತನಲ್ಲವೆ ನಿನಗೆ ಆತುರದಿ ನಾನೀ ರೀತಿಯಿಂದಲಿ ಪೇಳಿದೆ ಯಾತರಾ ಮಾತೆಂದು ನೀ ಪ್ರೀತಮನಕೇ ತರದೆ ತಾತನೂಕೀ ಬಿಟ್ಟರೆನ್ನಾ ಸೋತುಬಂದಾ ನಿನಗೆ ಆತುರಾವ್ಯಾಕೆಂದು ನೀತವಾಗೀ ಕಾಯ್ವರಾರೋ ಸ್ವಾಮೀ 11 ಮಾತೆ ಮಕ್ಕಳಿಗೆ ವಿಷದಾತೆಯಾಗೇ ತಂದೆ ಪೋತರ ಮಾರಿದಾರೆ ದಾತನಾದಾ ರಾಜ ಆತುರಾದಿಂದಲಿ ನಿಜ ದೂತರರ್ಥಪಹಾರಮಾಡೆ ನೀತಸತಿಯು ತನ್ನ ನಾಥನಾಯು ತಾನೆ ಘಾತವನೆ ಮಾಡಿದಾರೆ ನೀತವೇ ನಿನಗಿದಕೆ ಯಾತರಾ ಚಿಂತೆ ಈ ಮಾತಿನಂತೆ ನಿನಗೆ ಪ್ರೀತೇ ಸ್ವಾಮೀ ಎಷ್ಟು ಪೇಳಲಿ ಎನ್ನ ಕಷ್ಟರಾಶಿಗಳೆಲ್ಲ ಶ್ರೇಷ್ಟವಾಗಿರುತಿಹವೊ ಸ್ವಾಮೀ ದುಷ್ಟನಾದರು vನ್ನ ಭ್ರಷ್ಟಮಗನನು ತಾಯಿ ಅಟ್ಟೀಸೂವಳೆ ಅಡವಿಗೆ ಎಷ್ಟು ಕೆಟ್ಟವ ನಾನಾರಿಷ್ಟನಾದರು ಕೃಪಾ ದೃಷ್ಟಿಯಿಂದಲಿ ನೋಳ್ಪಳೋ ನಷ್ಟದೈವ ನಾನರಿಷ್ಟ ಅಙÁ್ಞನಿ ಕರುಣಾ 13 ದೃಷ್ಟಿ ಯಿಂದಲಿ ನೋಡಿ ಸಲಹೋ ಸ್ವಾಮೀ ಕುಟಿಲ ಖಳಮತಿಯು ನಟಿನೆಮಾಡುತ ಭವಲಂ ಪಟದೊಳಗೆ ಬಿದ್ದಿಹೆನೂ ಸ್ವಾಮೀ ಶಠÀತರನು ನಾನತಿಕಠಿಣಮನಸೀನಿಂದ ಧಿಟಜ್ನಾನಿದ್ರೋಹಗೈದೆ ದಿಟರಿಲ್ಲ ಎನಗೆಂದು ನಟಿಸುತ್ತ ಸರ್ವದ ಅಟನೆಮಾಡಿದೆ ಸರ್ವರಲ್ಲಿ ಪಟುತರನು ನಾನೆಂದು ಧಿಟಗುರುಜಗನ್ನಾಥ ವಿಠಲ ದೇವಾ ನಿನ್ನ ಮರೆದೆ ಸ್ವಾಮೀ 14
--------------
ಗುರುಜಗನ್ನಾಥದಾಸರು
ಯಾಕೆನ್ನ ದೂರುವರೆ ಪೇಳಮ್ಮಯ್ಯ ಪೋಕಬುದ್ಧಿಯ ಗೊಲ್ಲತಿ ಪೋಕ ಲೋಕಲೋಕದಿ ನೋಡೆ ನಾಕಾಣೆನೆಲ್ಲೆಲ್ಲೂ ಪ ಅಮ್ಮಯ್ಯ ನೀನಿಡುವೊ ಪಾಲ್ಬೆಣ್ಣೆಯ ಕಣ್ಣಿಂದ ನೋಡುವೆನೆ ಅಣ್ಣ ರಾಮರ ಕೇಳೆ ಎನ್ನಾಣೆ ಹುಸಿಯಲ್ಲ ಎನ್ನ ಪಣೆಯ ಲಿಖಿತ ಮುನ್ನ ಮಾಡಲಿ ಏನೆ 1 ದುಷ್ಟಹೆಂಗಳೇರಾಡುವೊ ಮಾತೊಂದು ನೀ ಗೊತ್ತು ಹಿಡಿಯ ಬ್ಯಾಡಮ್ಮ ಚಟ್ಟಿಗೆ ಬೆಣ್ಣೆಯ ಮೆಲುವೋದುಂಟಾದರೆ ಪುಟ್ಟಕೂಸಿನ ಹೊಟ್ಟೆಗೆ ದೃಷ್ಟಿತಾಗದು ಏನೆ 2 ಚೆಂಡನಾಡುವಾಗ ಇವರು ಎನ್ನ ಮುಂಗೈಯ ಪಿಡಿದುಕೊಂಡು ಗಂಡರಂಜಿಕೆಯಿಲ್ಲ ಗಾಡಿಕಾರ್ತಿಯರೆಲ್ಲ ಬಂಡು ಮಾತುಗಳಾಡಿ ಬಂದು ದೂರಿದರೇನೆ 3 ಸಣ್ಣ ಮಕ್ಕಳೊಡನೆ ಅಂಗಳದಿ ನಾ- ಚಿಣ್ಣಿಯನಾಡುವಾಗ ಬೆಣ್ಣೆಕೊಡುತೇವೆಂದು ಬಣ್ಣ ಬಣ್ಣದಿ ಎನ್ನ ಕಣ್ಣು ಸನ್ನೆಯ ಮಾಡಿ ಕರೆದರ್ಯಾತಕೆ ಕೇಳೆ 4 ಗೋಲಿ ಗುಂಡುಗಳಾಡುತ ನಿಂತಿರಲೆನ್ನ ಲೀಲೆಯಿಂದಲಿ ನೋಡುತ ಭೀಮೇಶಕೃಷ್ಣ ಬಾರೆಂದೆನ್ನ ಬಿಗಿದಪ್ಪಿ ಬಾಯ ತಂಬುಲಗಳ ಬೇಡಿ ಮಾತಾಡೋರು 5
--------------
ಹರಪನಹಳ್ಳಿಭೀಮವ್ವ
ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ 1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ಶ್ರೀಪತಿ
(ಒ) ಭಾರತೀ ದೇವಿ ಏನು ಮರುಳಾದೆಮ್ಮ ಯೆಲ ಭಾರತೀ | ನಿಕರ ಶ್ರೇಷ್ಠನಾದವಗೆ ಪ ನಿನ್ನ ತೊರೆದು ಬ್ರಹ್ಮಚಾರಿಯಾಗಿ || ಹಣ್ಣಿಗಾಗಿ ಹೋಗಿ ವನವ ಕಿತ್ತೀಡ್ಯಾಡಿ | ಉಣ್ಣ ಕರದರೆ ಎಂಜಲೆಡೆವೈದ ಕಪಿಗೆ 1 ಪುಟ್ಟಿದನು ಗುರುತಲ್ಪಕನ ವಂಶದಲಿ | ನಟ್ಟಿರುಳೆ ಒಬ್ಬ ಅಸುರಿಯ ಕೂಡಿದಾ || ಹೊಟ್ಟೆಗಾಗಿ ಪೋಗಿ ಭಿಕ್ಷದನ್ನವನುಂಡ | ಅಟ್ಟು ಹಾಕುವನಾದ ಕುಲವ ಕೊಂದವಗೆ 2 ಮಂಡೆ ಬೋಳನಾಗಿ ಭೂಮಂಡಲ ಚರಿಸುವ | ಕಂಡವರಾರು ಈತನ ಗುಣಗಳಾ || ಪುಂಡರೀಕಾಕ್ಷ ವಿಜಯವಿಠ್ಠಲನ್ನ | ಕೊಂಡಾಡುತ ತಾ ಬೋರೆ ಗಿಡದ ಕೆಳಗಿಪ್ಪ 3
--------------
ವಿಜಯದಾಸ
* ಚಿರಂಜೀವಿಯಾಗು ಗುರುವರ ಕುಮಾರಿ ಪರಮಪ್ರಿಯ ಶ್ರೀ ಗುರುಪದಧೂಳಿ ಕರುಣದಲಿ ಪ. ಶುಕ್ಲಪಕ್ಷದ ಚಂದ್ರನಂತೆ ಆಭಿವೃದ್ಧಿಸುತ ಅಕ್ಲೇಶಳಾಗಿ ಅನುಗಾಲದಲ್ಲಿ ಚಿಕ್ಕತನದಿಂದ ಗುರು ಬೋಧಾಮೃತವ ಸವಿದು ಅಕ್ಕರೆಯಿಂದ ಪಿತ ಮಾತೆ ಪೋಷಿತಳಾಗಿ 1 ಭೂ ಕಲ್ಪತರುವೆನಿಪ ಗುರುಗಳಿತ್ತಂಕಿತವ ನಿತ್ಯ ಪಠಣಗೈದು ಏಕಾಂತ ಭಕ್ತಿಯಿಂ ಇಂದಿರೇಶನ ಸ್ತುತಿಸಿ ಶ್ರೀಕಾಂತ ಹರಿಯ ಮಂಗಳ ಕೃಪೆಯ ಪಡೆಯುತಲಿ 2 ಪುಟ್ಟಿದಾ ಗೃಹಕೆ ಚಿಂತಾಮಣಿಯು ಎಂದೆನಿಸು ಪತಿ ಗೃಹಕೆ ಗೃಹಲಕ್ಷ್ಮಿ ಎಂದೆನಿಸು ಅಷ್ಟು ಬಂಧು ಜನಕೆ ಅಮೃತವಾಣಿಯು ಎನಿಸು ಕೃಷ್ಣ ಭಕ್ತರನು ಪೂಜಿಸುತಲಿರು ಸತತ 3 ಇಂದು ಗುರುಕೃಪೆಗೈದ ಆಶೀರ್ವಾದದುಡುಗೆಯನು ಚಂದದಿಂ ಧರಿಸಿ ಮಂಗಳಕರಳು ಎನಿಸಿ ಒಂದು ಕ್ಷಣ ಬಿಡದೆ ಫಣಿರಾಜಶಯನನ ಸ್ಮರಣೆ ಮುಂದೆ ಸತ್ಪುತ್ರ ಪೌತ್ರರ ಪಡೆದು ಸುಖದಿ 4 ನಾಗಶಯನನ ಭಕ್ತನಾದ ಪತಿಯನೆ ಸೇರಿ ಭೋಗಿಸುತ ಇಹಪರದ ಸುಖಭಾಗ್ಯವ ಭಾಗವತಪ್ರಿಯ ಗೋಪಾಲಕೃಷ್ಣವಿಠ್ಠಲನ ಬಾಗಿ ನಮಿಸುತ ಸುಮಂಗಳೆಯಾಗಿ ನಿತ್ಯದಲಿ 5
--------------
ಅಂಬಾಬಾಯಿ
* ನೋಡಬಲ್ಲಿರೆ ದಿವ್ಯ ಉಡುಪಿ ಕ್ಷೇತ್ರ ಸತ್ಪಾತ್ರ ಪ. ಶ್ರೇಷ್ಠ ಸದ್ಗುರು ಚರಣ ಕಮಲಗಳಿಗಭಿನಮಿಸಿ ಅಷ್ಟು ದೇವತೆಗಳಿಗೆ ಅಭಿವಂದಿಸಿ ಮುಟ್ಟಿ ಹಿರಿಯರ ಚರಣ ಮಹದಾಜ್ಞೆ ಸ್ವೀಕರಿಸಿ ಪಟ್ಟ ಬ್ರಹ್ಮನ ಪದಕೆ ಸಿರಿಹರಿಗೆ ಎರಗಿ 1 ಎಷ್ಟು ಜನ್ಮದ ಫಲವೊ ಈ ಯಾತ್ರೆ ಕೈಕೊಳಲು ಶ್ರೇಷ್ಠ ಶ್ರೀ ಮಧ್ವಮುನಿ ಮತದಿ ಜನಿಸಿ ದಿಟ್ಟ ವೈಷ್ಣವರಾದ ಭಕ್ತಸಂಗವ ಕೂಡಿ ಬಿಟ್ಟು ಮನ ಕಲ್ಮಷಗಳೆಲ್ಲ ಮುಂದೋಡಿ2 ಭರತಖಂಡದಿ ಪುಟ್ಟಿ ವಾಯುಮತ ಪೊಂದಿದಕೆ ಹರುಷದಲಿ ಈ ಯಾತ್ರೆ ಗೈದಲ್ಲದೆ ಹರಿದು ಪೋಗದು ಜೀವದಜ್ಞಾನದಂಧತೆಯು ಪರಮ ಸುಜ್ಞಾನದಾತನ ನೋಡಬನ್ನಿ 3 ಮಧ್ವರಾಯರ ಕರುಣ ಮುದ್ದು ಕೃಷ್ಣನ ಕತೆಯು ಸದ್ವೈಷ್ಣವರ ಸಂಗ ಸನ್ಮೋದ ಲಾಭ ಹೃದ್ವನಜದಲಿಪ್ಪ ಹರಿಯ ಕಾಣಲು ಮಾರ್ಗ ಗೆದ್ದು ಭವದಬ್ಧಿ ದಾಟುವಿರಿ ನೀವಿನ್ನು 4 ಶ್ರೀ ಪತಿಯು ಬಾಲರೂಪದಿ ಇಲ್ಲಿ ನೆಲಸಿಹನು ಗೋಪಿಕಾಜನಪ್ರಿಯ ಗೋಪಿಬಾಲ ಗೋಪಾಲಕೃಷ್ಣವಿಠ್ಠಲನ ನೋಡುವ ಪುಣ್ಯ ಈ ಪರಮ ಪುರುಷನೇ ತಂದಿತ್ತನೆಂದೂ 5
--------------
ಅಂಬಾಬಾಯಿ
* ಪಶ್ಚಿಮಕೆ ತಿರುಗಿದಾ ಪರಿಯದೇನೋ ಅಚ್ಯುತಾನಂತ ಗೋವಿಂದ ಗೋಪಾಲ ಪ. ಪರಿ ಪರೀ ಸ್ತುತಿಗೈದು ಪೂರ್ವಾಭಿಮುಖವಾಗಿ ಸ್ಥಾಪಿಸಿರಲೂ ಆವಕಾಲಕು ಪವನ ಮತದಂತೆ ನಟನೆಯವ ಈ ವಿಧದಿ ಅವರ ಮನಮೀರಿ ತಿರುಗಿಹುದೂ 1 ಕ್ಷೀರ ಸಾಗರ ಜಾತೆ ನೋಡುವಳೆಂದು ನಾರಿ ಹಂಬಲನೆನಸಿ ಕಡಲ ಕಡೆಗೇ ಸೇರಬೇಕೆಂದು ವೈಕುಂಠವನು ತಿರುಗಿದ್ಯಾ ಕಾರಣವದೇನೈಯ್ಯ ನಾರದ ಸ್ತುತನೇ 2 ಕ್ಷೀರಸಾಗರ ಮಧ್ಯೆ ತೋರುವೋ ದಿವ್ಯಪುರ ಸೇರಿದಾ ಮುಕ್ತ ಸ್ತುತಿಯನಾಲೈಸಿ ಹಾರಿಹೋಗಲು ಮನಸು ಹಾರಿತೇ ಮಮತೆಯಲಿ ದ್ವಾರಕಿಯ ನೆನಪಾಯಿತೇನೋ ಕೃಷ್ಣಯ್ಯ 3 ದುರ್ಜನಕೆ ದುರ್ಮನಸು ಮರುಕಲಿ ಪುಟ್ಟಲೂ ಸರ್ಜನಕೆ ಸರ್ವೇಶ ನೀನೇನಿಸಲೂ ಮೂರ್ಜಗದಿ ನಿನ್ನ ಮೀರಿದರಿಲ್ಲವೆನಿಸಲೂ ಅಬ್ಜಭವಪದರಲ್ಲಿ ಸಲುಗೆ ಬಹಳಿರಲೂ 4 ಎಲ್ಲ ಕಾರಣವಿರಲಿ ಬಲ್ಲ ಕನಕನು ಬರಲು ಗುಲ್ಲು ಮಾಡುತ ಕುರುಬನೆಂದೊಳಗೆ ಬಿಡದೇ ನಿಲ್ಲಿಸಲು ಕಲ್ಲೊಡೆದು ಪಶ್ಚಿಮಕೆ ತಿರುಗಿ ನೀ ಅಲ್ಲೆ ಕನಕಗೆ ದಿವ್ಯ ದರುಶನ ಕೊಡಲೂ 5 ಸಿರಿಬೊಮ್ಮ ಸುರರ ಲೆಕ್ಕಿಸದೆ ಸದ್ಭಕ್ತರಾ ಗರುವ ರಹಿತರ ಸ್ತುತಿಗೆ ಮೈದೋರುವಾ ಪರಿಯ ತೋರಲು ಇತ್ತ ತಿರುಗಿದ್ಯಾ ಪೇಳಿನ್ನು ಪರಿ ತಿಳಿವರಾರೈ6 ಆನಂದ ಗುಣಪೂರ್ಣ ಆನಂದ ಮುನಿವರದ ಆನಂದ ಕಂದ ಪಶ್ಚಿಮ ತಡಿಯವಾಸಾ ಆನಂದ ಗೋಕುಲದಿ ಆನಂದ ತೋರಿದಾ ಆನಂದ ಗೋಪಾಲಕೃಷ್ಣವಿಠಲೈಯ್ಯಾ 7
--------------
ಅಂಬಾಬಾಯಿ
* ಮುತ್ತೈದೆಯಾದೆ ನಾ ಮುರವೈರಿ ದಯದಿ ನಿತ್ಯತೃಪ್ತನು ಎನ್ನ ನಿಜಕರವ ಪಿಡಿಯೆ ಪ. ಗುರುಗಳುಪದೇಶಾಂಬುಧಿಯಲಿ ಪುಟ್ಟಿದ ಎನ್ನ ಕರೆದರು ಕಮಲಾಭಿದಾನದಿಂದ ವರುಷವೆಂಟಾಗೆ ಗುರುಜನಕ ಎನ್ನನುದಯದಿ ಸಿರಿವರನೆ ಪೊರೆ ಎಂದು ಒಪ್ಪಸಿದ ಕತದಿಂ1 ಗುರು ಕೊಟ್ಟ ಅಂಕಿತವೆ ಮಾಂಗಲ್ಯವಾಯ್ತೆನಗೆ ಗುರುವಿಟ್ಟ ನಾಮವೆ ತಿಲುಕವಾಯ್ತು ಗುರುಕರುಣವೆಂಬ ಕವಚವ ತೊಟ್ಟೆ ಹರುಷದಲಿ ಗುರು ಪ್ರೀತಿ ಎಂಬ ವಸನವನುಟ್ಟು ಮುದದಿ 2 ಗುರುವು ಬೋಧಿಸಿದ ಭಕ್ತಿ ಜ್ಞಾನ ವೈರಾಗ್ಯ ಸರಿ ಮಾಡಿ ಮೂರು ಕಾಲಿನ ಜಡೆಯನು ಪರಿಪರಿಯ ತತ್ವಗಳೆ ಚೌರಿ ರಾಗುಟಿ ಗೊಂಡ್ಯ ಗುರುವಾಜ್ಞೆ ಎಂಬ ಪುಷ್ಪವ ಧರಿಸಿ ಶಿರದಿ3 ಗುರುವಾಕ್ಯ ಶ್ರವಣವೇ ಕರ್ಣಕುಂಡಲವಾಯ್ತು ಗುರುವಿನ ನಿರ್ಮಾಲ್ಯವೇ ನಾಸಿಕಾಭರಣ ಗುರುನಾಮಗಳೆ ರತ್ನ ಪರಿಪರಿಯ ಹಾರಗಳು ಗುರುಭಕ್ತಿ ಎಂಬ ನಡು ಒಡ್ಯಾಣ ಧರಿಸಿ 4 ಗುರುವು ಪೇಳಿದ ಸದ್ಗುಣಗಳೆ ಪಾದಾಭರಣ ಗುರುವಿನ್ವಾತ್ಸಲ್ಯವೆ ಪರಿಮಳ ದ್ರವ್ಯ ಗುರು ಅನುಗ್ರಹವೆಂಬೊ ಮಂಗಳ ದ್ರವ್ಯಗಳು ಗುರು ಮಾತೆ ಎನ್ನ ಪೋಷಿಸಿ ಹರಿಗೆ ಕೊಡಲು 5 ಹೃದಯವೆ ಲಗ್ನ ಮಂಟಪ ದಿವ್ಯ ಶೃಂಗಾರ ಪದುಮಭವ ಸುರರೆ ನೆರದಿಹ ಬಂಧು ಬಳಗ ಒದಗಿ ಬಹ ಸುಜ್ಞಾನ ಸಂಬಾರ ಸಲಕರಣೆ ಮದನ ಪಿತನೆದುರಿಗೆ ನಿಲಿಸಿ ಧಾರೆಯನೆರೆಯೆ 6 ಗುರುವೆ ಜನನಿ ಜನಕ ಗುರುವೆ ಪುರೋಹಿತರು ಗುರುವಚನವೆಂಬ ಅಕ್ಷತೆ ಎರಚುತಿರಲು ಪರಮ ಜೀವಚ್ಛಾದಿ ಕದ ಪರದೆ ತೆಗೆಯುತಿರೆ ಹರಿಗೆ ಗುಣನಾಮ ಜೀರಿಗೆ ಬೆಲ್ಲ ಎರಚೆ 7 ಸುಮನೊ ವೃತ್ತಿಗಳೆಂಬ ಕಮಲದ್ಹಾರವನ್ಹಾಕಿ ಕಮಲನಾಭನ ಪದಕೆರಗಿ ನಿಲಲೂ ಕಮಲಹಸ್ತವ ಶಿರದ ಮೇಲಿಟ್ಟು ಶ್ರೀ ಕೃಷ್ಣ ಕಮಲೆ ನಿನ್ನನು ಪೊರೆವೆನೆಂಬ ಅಭಯ ಕೊಡಲು 8 ಸೂತ್ರ ಬಂಧಿಸಲು ಮುಕ್ತರಾರಾಧ್ಯ ಲಕ್ಷ್ಮೀಕಾಂತನು ಮುಕ್ತರಾರಾಧ್ಯ ಜಗದ್ಭರ್ತೃ ಮುನಿಜನವಂದ್ಯ ವ್ಯಕ್ತನಾಗಲು ಮನದಿ ಗುರು ಕಟಾಕ್ಷದಲಿ 9 ಗುರು ತಿಳಿಸಿದಂಥ ಸ್ವರೂಪದರ್ಪಣ ನೋಡಿ ಪರಮ ಸೌಭಾಗ್ಯ ಆನಂದಪಡುವೆ ಗುರುಗಳಂತರ್ಯಾಮಿ ಗೋಪಾಲಕೃಷ್ಣವಿಠ್ಠಲ ಗುರುಬಿಂಬನೇ ಎನಗೆ ಸುಖವ ಪಾಲಿಸಲಿ 10
--------------
ಅಂಬಾಬಾಯಿ
ಪಾರ್ವತಿರಮಣನಾ ನೋಡಿದೆನು | ನೋಡಿದೆನು | ಪರ್ವತ ಮಲ್ಲೇಶನಾ 1 ಆಟವಾಡುತ ಪಾಟ ಪಾಡುತ | ಕೋಟಿ ಜನರ ಸಹಿತಾಗಿ ಸಾಟಿಯಿಲ್ಲದ ಪರ್ವತ | ನಾಗಾ ಲೋಟಿಯನೆ ನಾ ನೋಡಿದೆ 2 ಅಲ್ಲಿದ್ದ ಜನರ ಸಹಿತಾಗಿ ಪೆದ್ದ ಚೆರುವನ್ನೆದಾಟಿದೆ | ಪುಟ್ಟ ಬೆಟ್ಟಗಳೇರಿ ಇಳಿಯುತ ಕೃಷ್ಣಧ್ಯಾನವ ಮಾಡುತ ದಿಟ್ಟ ಮಲ್ಲಿಕಾರ್ಜುನನ ಮನ ಮುಟ್ಟಿ ಸ್ನರಣೆಯ ಮಾಡುತ 3 ಶ್ರೀಭೌಮನ ಕೊಳ್ಳ ನೇಮದಿಂದಲಿ ದಾಟಿದೆ4 ಆ ಶೈಲ ಕೈಲಾಸ ಧಾಮರೆ | ಸೋಂಪಿನಿಂದಲಿ ಬಂದೆನೂ ಸಾಕ್ಷಿಗಣಪಗೆ ಕೈಯ ಮುಗಿದೂ | ಶ್ರೀ ಶೈಲಶಿಖರವ ಕಂಡೆನು5 ಭಂಗಾರ ಗೋಪುರದ ಮ್ಯಾಲೆ | ಶೃಂಗಾರವನು ನಾ ನೋಡಿದೆ ನಂದಿ ಭೃಂಗಿ ಮೊದಲು ಮಾಡಿ ಸಕಲ ತೀರ್ಥವ ನೋಡಿದೆ6 ಅಲ್ಲಿ ಸ್ನಾನವ ಮಾಡಿನಾನು | ಬಲ್ಲಿದನ ಬಲದಿಂದಲಿ ಎಲ್ಲ ಫಲ ಪುಷ್ಪಧರಿಸಿದ ಮಲ್ಲಿಕಾರ್ಜುನನ ನೋಡಿದೆ 7 ಪಂಚಾಮೃತವ ಮಾಡಿನಾನು | ಸಂಚಿತಾಗಮ ಕರ್ಮವು ವಂಚನಿಲ್ಲದೆ ಕರೆದು | ನಿಶ್ಚಿಂತೆ ಮನವನು ಮಾಡಿದೆ 8 ಜನಿತ ಪಾತಾಳಗಂಗಿ ಉದಕವು ತಂದು ಗಂಗಾಧರಗೆ ಎರೆದು ನಾನು | ಕಂಗಳಿಂದಲಿ ನೋಡಿದೆ 9 ಥೂಪ-ದೀಪ-ನೈವೇದ್ಯದಾರುತಿ | ಅನೇಕ ಭಕ್ತಿಲಿ ಮಾಡಿದೆ ಪ್ರೀತಿಯ ತೋರೆಂದು ಶಿವಗೆ | ಪ್ರೀತಿಲಿ ಕರಮುಗಿದೆನು 10 ಮುದ್ದು ಕೋಟಿಲಿಂಗಗೆ ನಾನು | ವಿಧ್ಯುಕ್ತದಿ ನಮಿಸಿದೆ ವೃದ್ಧ ಮಲ್ಲೇಶ್ವರನ ನೋಡಿ | ಅಲ್ಲಿದ್ದದೇವರ ಭಜಿಸಿದೆ 11 ಅಮರರಿಂದರ್ಚಿಸಿಗೊಂಬ | ಭ್ರಮರಾಂಬನ ನೋಡಿದೆ ಭ್ರಮೆಯು ಬ್ಯಾಡೆಂದು ಸಂಸಾರದ | ಬ್ಯಾಗದಿಂದಲಿ ಬೇಡಿದೆ 12 ಥಟ್ಟನೇ ಪಂಚಾ ಮಠವನೋಡಿ | ಅಟಕೇಶ್ವರಕೆ ಬಂದೆನು ಶಿಖರೇಶ್ವರನ ದರ್ಶನ ಮಾಡಿ | ಹಾಟಕೇಶ ಪುರ ನೋಡಿದೆ13 ಭಾರತಿಯ ಶೈಲಿ ವಿಸ್ತಾರ ಪತ್ರಿ ಪುಷ್ಪಗಳ ಫಲಗಳ ನಾರಸಿಂಹ ವಿಠಲಗರ್ಪಿಸಿ | ಧಾರೆ ಎರೆದು ಬಂದೆನು 14
--------------
ಓರಬಾಯಿ ಲಕ್ಷ್ಮೀದೇವಮ್ಮ
ವರಪುಣ್ಯಬೇಡುವೆನಾಂ ಗುರುವರ್ಯನ ಚರಣ ಪಿಡಿದು ಮುಕ್ತಿಯಪಥದೊಳ್ ಪರಿಕಿಸಿ ಶೀಘ್ರದಿಘನತರ ಪರತತ್ವಪಡೆದು ಮರಣ ಜನನವ ತೊರೆವೇಂ ಕಂದ ಸನ್ನುತಗುರುವರತತ್ವ ಬೋಧಿಸಿ- ಮಂಗಳಾಶಾಸನಗೈಯುತಲೀ ಪ ಎನ್ನನೆ ಯಜಿಸುತ ಸುಮ್ಮನೆಯಿದ್ದರೆ- ಬೇಡಿದವರಗಳ ಕೊಡುವೆನುತ ಅ.ಪ ಕೊಟ್ಟರು ದ್ರವ್ಯವ ನಿನ್ನಪರಾಧವ ಕೊಡದಿದ್ದರು ನಾ ಮನ್ನಿಸುವೆ ನಿಷ್ಠೆಯೊಳ್ಪರಮನ ಸನಿಯದೊಳಿದ್ದರೆ ಬಿಟ್ಟೆನೆಯೆಂದಿಗು ನಂಬೆನುತ 1 ಸಾಧಿಸಿ ವಿರತಿಯ ಸಂಶಯಗೈಯದೆ- ಭೇದವ ಛೇದಿಸಿ ನಿರ್ಮಲದಿ ನಾದವ ಕೇಳುತ ಚಿತ್ಕಳೆ ನೋಡುತ ಮೋದದಿ ಶ್ರೀಹರಿ ನೀನೆನುತ 2 ಮೌನವ ಧರಿಸಿರಲು ಕರೆದು ಲೋಕಸಾರಂಗಮುನಿಗಳಂ- ಕಳುಹಿಸಿಕರುಣದಿ ಪೊರೆದಂತ 3 ಬೇಡಿಕೊ ಎನ್ನಲು ನಿನ್ನಂತ ಕುಕ್ಷಿಯೊಳ್ಪುಟ್ಟಿದೆ ಮನ್ನಿಸುತ 4 ಅಂತರಂಗದಿಂ ಧ್ಯಾನಿಸಲು ಇಷ್ಟದಿ ಸೀರೆಯ ಕೊಟ್ಟಂತ 5 ನಿತ್ಯವು ಕೃಪೆಯನು ತೋರುತಲಿ ಅರ್ಥಿಲಿ ರಂಗನ ಪಿಡಿದಂತ 6
--------------
ರಂಗದಾಸರು
ವಿಶೇಷಸಂದರ್ಭಗಳ ಹಾಡುಗಳು ತಿಳುಪಿದೆನು ಪರಮ ದಯದಿಂದ ತಿಳುಪಿದೆನು ಪರಮ ದಯದಿಂದ ಮುಂದಣ ಕಾರ್ಯ ಒಳಿತು ಬಿನ್ನಪವÀ ಲಾಲಿಸಲಿಬಹುದಯ್ಯ ಪ ಸಕಲ ದೇಶ ಕಾಲದಲ್ಲಿಪ್ಪ ಸಜ್ಜನರ ಸಕಲ ಪರಿಯಲಿಂದ ಪೊರೆವ ದಾತ ಅಕಳಂಕ ನರಸಿಂಹ ಹೊರತಿಲ್ಲೆಂದು ಸಕಲರೂ ಪೇಳಲು ಕೇಳ ಬಲ್ಲೆ 1 ಇನ್ನಾರು ತರುವಾಯ ದಶಮತಿಯ ರಾಗಮವ ಚನ್ನಾಗಿ ಪೇಳುವೆನೆಂಬುದೊಂದು ನಿನ್ನ ವಚನಂಗಳು ಪುಸಿಯಾಗಬಾರದು ಮನ್ನದಲ್ಲಿ ನೋಡಿಕೋ ಕರುಣ ಸಿಂಧೋ 2 ಬಡವಗೆ ಮಾತುಗಳು ಕೊಟ್ಟಿನ್ನು ತಾವಾಗಿ ಒಡೆಯರೇ ತಪ್ಪಿದರೆ ಏನಂಬರೊ ಮಡಿಯ ಹೊರಳುವೆ ನಿನ್ನ ಅಡಿಗೆ ಬೀಳುವೆ ಸ್ವಾಮಿ ಕಡೆ ಹಾಯಿಸೊ ರಂಗ ಎನ್ನಂತರಂಗ 3 ಜನನಿ ಕಾಣಳು ಕಣ್ಣು ಕಿವಿಯು ಕೇಳದು ಅಣ್ಣ ತನಯರು ಇಂದಿಗೂ ಜನಿಸಲಿಲ್ಲ ಮನದಲ್ಲಿ ಹಲವು ಹಂಬಲಗಳೋಲ್ಯಾಡುತಿವೆ ಜನಕ ಜನನೀ ತನಯ ನೀ ಎನಗೆ 4 ಆಸು ಲೋಕಗಳೆಲ್ಲ ನಿನ್ನವೆ ಸರಿ ಸ್ವಾಮಿ ವಾಸುದೇವವಿಠಲ ಬಹುಕಾಲದಿ ಭೂಸುರನ ಮಾಡಿ ಪುಟ್ಟಿಸಿದರೆ ಚಿರಕಾಲಈ ಸುಧಾಪಾನ ನೀ ಮಾಡಿಸೆನಗೆ
--------------
ವ್ಯಾಸತತ್ವಜ್ಞದಾಸರು
ಶ್ರೀವೇಂಕಟೇಶ ಸುಪ್ರಭಾತ ಶ್ರೀವೆಂಕಟೇಶಂಗೆ ಜಯ ಸುಪ್ರಭಾತ ದೇವಾದಿದೇವಂಗೆ ನವಸುಪ್ರಭಾತ ಪ ಪಾವನ ಶರೀರಂಗೆ ಜಯ ಸುಪ್ರಭಾತ ದೇವಪರಮಾತ್ಮಂಗೆ ನವಸುಪ್ರಭಾತ ಅ.ಪ ಅಂದು ಕೌಸಲ್ಯೆಯಣುಗ ರಾಮಾ ಏಳು ಎಂದಿನಂತೆ ಆಹ್ನಿಕವ ಮಾಡೆಂದು ನುಡಿಯಾ ಮುಂದೆ ವಿಶ್ವಾಮಿತ್ರ ಮುನಿ ರಾಮಭದ್ರಂಗೆ ಮಂದಹಾಸದಿ ಪೇಳ್ದ ಸರಯೂಬಳಿಯಲ್ಲಿ 1 ಎದ್ದೇಳು ಗೊವಿಂದ ಗರುಡಧ್ವಜಸ್ವಾಮಿ ಉದ್ಧರಿಸ ಬೇಕಯ್ಯ ಕರುಣಾಂತರಂಗ ಎದ್ದೇಳು ಚೈತನ್ಯ ಪುಣ್ಯದಾತ [ಎದ್ದೇಳು ಕಮಲಾಕಾಂತರಂಗ] 2 ಮಧುಕೈಟಭಾರಿಯಾ ವಕ್ಷಸ್ಥಲದಲಿ ನಿಂದ ಹದಿನಾಲ್ಕು ಲೋಕಗಳ ಮಾತೆಯೆನಿಸಿ ಪದುಮಾಕ್ಷಿ ಲಕ್ಷ್ಮೀಗೆ ಜಯಸುಪ್ರಭಾತ 3 ಸರ್ವಭುವನೇಶ್ವರಿ ಸರ್ವ ಭಕ್ತಂಕರಿ ಸರ್ವಲೋಕ ವಿಖ್ಯಾತೆ ಜಾತೆ ವಿನೀತೇ ಸರ್ವಲೋಕೇಶನ ರಾಣಿ ಕಲ್ಯಾಣಿ ಸರ್ವಸನ್ನುತೆ ನಿನಗೆ ಸುಪ್ರಭಾತ 4 ಸಪ್ತರ್ಷಿ ಮಂಡಲವು ಔಪಾಸನೆಯಾಗೆ ತೃಪ್ತರಾಗಿರುತಿಹರು ನಭದ ನದಿಯೊಳು ವ್ಯಾಪ್ತವಾದಖಿಳ ಕರಪುಷ್ಪಗಳ ಅರ್ಪಿಸಿ ಒಪ್ಪಿರ್ಪರೇಳೇಳು ವೆಂಕಟೇಶ 5 ಅಜ ನಿರಂಜನ ಸ್ಮರಿಸಿ ತ್ರೈವಿಕ್ರಮನ ಚರಿತೆಗೇಳು ಶಿರಬಾಗಿ ವಂದಿಪರು ಗುರು ಶುಭವ ಪೇಳುವನು ವರದರಾಜ ಏಳು ವೇಂಕಟೇಶ 6 ಈಗ ವಿಕಸಿತವಾದ ಕಮಲಸೌರಭದೊಡನೆ ರಾಗ ರಸ ತಂಪಿಂಪು ಮಿಳಿತಮಾಗಿ ಸಾಗುತಿದೆ ತಂಗಾಳಿ ಉಲ್ಲಾಸಮಂ ಬೀರಿ ತ್ಯಾಗಿ ನೀನೇಳಯ್ಯ ವೇಂಕಟೇಶ 7 ಕದಳಿ ಖರ್ಜೂರಗಳ ರಸಯುಕ್ತ ಪಾಯಸ ಮುದದಿ ಸಂಸೇವಿಸುತ ಉತ್ಸಾಹದೀ ಮಧುರ ಗಾನವ ಪಾಡಿ ಶುಕಪಿಕಗಳುಲಿಯುತಿವೆ ಪದುಮನಾಭ ಏಳು ವೇಂಕಟೇಶ 8 ದೇವರ್ಷಿನಾರದನು ಮಹತಿ ವೀಣೆಯ ನುಡಿಸಿ ದೇವದೇವನೆ ನಿನ್ನ ನುತಿಸುತಿಹನು ಭಾವರಸಯುತವಾದ ಗಾನಕೇಳುತಿಹುದು ಪಾವನಾತ್ಮನೇ ಏಳು ವೇಂಕಟೇಶ 9 ಸುರಿವ ಮಕರಂದವನು ಹೀರಿ ಹೀರಿ ಅರುಣನುದಯವ ತಿಳಿದು ಅರಳುತಿಹ ಕಮಲದಿಂ ಸರಸರನೆ ಝೇಂಕರಿಸಿ ಬರುತಿರ್ಪುವೈ ಸಿರಿಯ ದುಂಬಿಗಳೇಳು ವೆಂಕಟೇಶ 10 ಮಡದಿಯರು ಕೆನೆಮೊಸರನಾಂತ ಭಾಂಡಗಳಲ್ಲಿ ಕಡೆಗೋಲಿನಿಂ ಮಥಿಸಿ ಹಾಡುತಿಹರು ಅಡಿಗಡಿಗೆ ಜಯ ಘೋಷ ಕೇಳುತಿದೆಯಯ್ಯ ಪೊಡವೀಶ ನೀನೇಳು ವೇಂಕಟೇಶ 11 ಕಮಲದಿಂದೈತಂದ ದುಂಬಿಗಳು ಸುತ್ತಲಿನ ಕುಮುದಗಳ ಮೈಗಪ್ಪಿ ಝರಿಝರಿ ಗರ್ವದಿ ಅಮರ ದುಂದುಭಿಯಂತೆ ಝೇಂಕರಿಸುತಿವೆಯಿದೋ ವಿಮಲಾಂಗ ನೀನೇಳು ವೇಂಕಟೇಶ 12 ಶ್ರೀರಮೆಯ ನಿತ್ಯಯೋಗಸ್ಥಾನ ಹೇಸ್ವಾಮಿ ಭೂರಿಭಕ್ತರ ಕಾಯ್ವ ಕರುಣಾನಿಧೇ ಸ್ವಾಮಿ ಮೂರು ಲೋಕವನಳೆದು ಪಾಲಿಸುವ ಸ್ವಾಮಿ ಮಾರಮಣ ನೀನೇಳು ವೇಂಕಟೇಶ 13 ಅಜ ರುದ್ರ ಸನಕಾದಿ ಪರಮ ಭಕ್ತರ ಬಂಧು ಭಜಿಸಿ ತವ ದರ್ಶನವ ಕಾಯುತಿಹರು ವಿಜಯ ಜಯರೀರ್ವರು ತಡೆಯುತ್ತಲಿಹರಯ್ಯ ಗಜವಿನುತ ನೀನೇಳು ವೇಂಕಟೇಶ 14 ಶೌರಿ ನಿನ್ನಾವಾಸ ತಾಣ ವೈಕುಂಠದಿಂದ ನಾರಾಯಣಾದ್ರಿ ಗರುಡಾದ್ರಿ ಎಂತೆಂಬ ಆರೇಳು ನಾಮಗಳ ಪೇಳ್ವರಿದು ಶೇಷಾದ್ರಿ ಸಾರತರ ನಾಮವೈ ವೇಂಕಟೇಶ 15 ಭುವಿಯ ಗೋಪಾಲಕರು ಅನುಮತಿಯ ಬೇಡುವರು ರವಿಯಗ್ನಿಯುಕ್ತ ನವಗ್ರಹಗಳು ಕಾದಿಹರು ಭವದೂರನೇ ನಿನಗೆ ಸುಪ್ರಭಾತ 16 ದಿವಿಮೋಕ್ಷ ಬೇಡ ತವದರ್ಶನವು ಸಾಕೆಂದು ನವಭಕ್ತಿಯಿಂ ತಳೆದು ಭಜನೆ ಮಾಡುತಿಹರು ಪವಮಾನನುತ ನಿನಗೆ ಸುಪ್ರಭಾತ 17 ನಿನ್ನ ಧಾಮದ ಶಿಖರ ವೀಕ್ಷಣೆಯೊಳಾನಂದ ವನ್ನು ಪಡುತಿಹರೆಲ್ಲ ಶರಣ ಜನರು ನಿನ್ನ ದರ್ಶನವೊಂದೆ ಪರಮ ಪದವದನು ಸನ್ನುತಾಂಗನೆ [ತೋರೇಳು]ಸುಪ್ರಭಾತ 18 ಭೂಮಿಪತಿ ಕರುಣಾಂಬುಸಾಗರನೆ| ಧೀರ ಶೂರಾನಂತ ಗರುಡ ವಿಷ್ವಕ್ಸೇನ ರಾರಾಜಿಸುತ್ತಿಹರು ನಿನ್ನ ದರ್ಶನಕಾಗಿ ನಾರಾಯಣಾ ನಿನಗೆ ಸುಪ್ರಭಾತ|| 19 ಕಮಲನಾಭ ದೇವ ಪುರುಷೋತ್ತಮಾ ಸ್ವಾಮಿ ಅಮಲಸದ್ಗುಣಧಾಮ ಕೃಷ್ಣ ವೈಕುಂಠ ಸುಮಬಾಣಕೋಟಿ ಸೌಂದರ್ಯನುತ ಮಾರಮಣ ಕಮಲನಯನಾ ನಿನಗೆ ಸುಪ್ರಭಾತ|| 20 ದೀನರಕ್ಷಣೆಗಾಗಿ ಹತ್ತುಜನ್ಮದಿ ಬಂದೆ ಮಾನವ ಶ್ರೇಷ್ಠರೂ ಆಕಾಶಗಂಗೆಯಲಿ ನಾನಾ ಸುಗಂಧಗಳ ಬೆರೆಸಿ ಕಾಯುತ್ತಿಹರು ಭಾನುತೇಜನೆ ನಿನಗೆ ಸುಪ್ರಭಾತ 21 ದಿನಪನುದಯಿಸುತ್ತಿಹನು ಕಮಲವರಳುತ್ತಿಹುದು ಬನದ ಪಕ್ಷಿಗಳೆಲ್ಲ ಹಾಡುತ್ತಲಿಹವು ಘನವೈಷ್ಣವರು ಮಂಗಳಂಗಳಂ ಪಾಡುವರು ಮನುಜಪುಂಗವ ನಿನಗೆ ಸುಪ್ರಭಾತ 22 ಕಮಲಜಾದ್ಯಮರರೂ ಸಪ್ತರ್ಷಿಯೋಗಿಗಳು ವಿಮಲ ಮಾನಸರಾಗಿ ನಿನಗಾಗಿ ಕಾದಿಹರು ತಿಮಿರಸಾಗರವನ್ನು ದಾಟಿಸುವ ಪರಮಾತ್ಮ ಕಮನೀಯಗುಣ ನಿನಗೆ ಸುಪ್ರಭಾತ|| 23 ಭಾವನೆಯೊಳೀಯದ್ರಿ ವೈಕುಂಠವಾಗಿಹುದು ಮಾವನಿತೆಯುಪಚಾರದಭ್ಯರ್ಥಿಯಾಗಿಹಳು ಶ್ರೀವೈಷ್ಣವ ಕೇಳು ಕೈಮುಗಿದು ಕಾದಿಹರು ಕಾವಕಾರುಣ್ಯನಿಧಿ [ನಿನಗೆ ಸುಪ್ರಭಾತ] 24 ಅರುಣೋದಯದೊಳೆದ್ದು ಈ ಸುಪ್ರಭಾತವನು ಪರಮ ಭಕ್ತಿಯೊಳೊಮ್ಮೆ ಪಾಡುವರಿಗೆ ಪರಮಪುರುಷನು ದಿವ್ಯತಾಣವನು ನೀಡುವನು ಹಿರಿಯರಾ ವಚನವಿದು ಪರಮ ಚರಿತಾರ್ಥ25 ಶರಣಾಗತಿ ಒಂದೆರಡು ಮೂರು ನಾಲ್ಕೈದಾರು ಮೊಗದವರು ಬಂದು ವಂದಿಸುತಿಹರು ಪುರುಷೋತ್ತಮ ಬಂಧುರ ಶರೀರನೀ ಪಾಲಿಸೆಮ್ಮ ವೆಂಕಟೇಶ 26 ನಾನಾಪರಾಧಗಳ ಮಾಡಿರುವೆನಯ್ಯ ನೀನೆಲ್ಲವನು ಕ್ಷಮಿಸಿ ಪರಿಪಾಲಿಸಯ್ಯ ನೀನೇ ಸರ್ವಾಧಾರ ಕರುಣಾಂತರಂಗನು ದಾನಶೀಲಾ ಸ್ವಾಮಿ ಶ್ರೀವೇಂಕಟೇಶ 27 ಗೋಪಿಕಾ ಪರಿವೃತನೆ ಪರವಾಸುದೇವನೆ ಗೋಪಿಕಾ ಗೀತಗುಣ ಸಂಪೂಜ್ಯ ದೇವನೆ ಗೋಪಿಕಾ ಮನ್ಮಥನೆ ದೈತ್ಯಾರಿ ಶ್ರೀಕೃಷ್ಣ ನೀ ಪೊರತು ಬೇರೆ ದೇವರ ಕಾಣೆ ವೆಂಕಟೇಶ28 ದಶರಥನ ಸುತನಾಗಿ ಜಾನಕಿಯ ಕರವಿಡಿದು ದಶಮುಖಾದ್ಯಸುರರನು ಸಂಹರಿಸಿದಾತ ಶಶಿಮೌಳಿ ವಂದ್ಯನೆ ಲೋಕಮೋಹನ ಸ್ವಾಮಿ ಕ್ಲೇಶಗಳ ಸಹಿಸಿ ಶಾಶ್ವತ ಸುಖವ ನೀಡಯ್ಯ ವೆಂಕಟೇಶ 29 ಕಂಜಾಯತಾಕ್ಷಿಯೆ ಸರ್ವಲೋಕ ಶರಣೇ ಕಂಜವದನೆಯೆ ಸರ್ವವಾತ್ಸಲ್ಯ ಪೂರ್ಣೇ ಕಂಜನಾಭನ ದಿವ್ಯ ವಕ್ಷಸ್ಥಲಾವಾಸಿ ಕಂಜಸರ್ವಾಂಗಿ ಪೊರೆ ಪುಣ್ಯಚರಿತೆ ಶ್ರೀಯೆ 30 ಸರ್ವಲೋಕ ಶರಣ್ಯ ಸರ್ವಗುಣ ಸಂಪೂರ್ಣ ಸರ್ವದೇವರದೇವ ವೇದವಂದಿತ ಸರ್ವಕಾರುಣ್ಯನಿಧಿ ಸರ್ವಾತ್ಮ ಸಂಚಾರಿ ಸರ್ವಪೂಜಿತ ನಿನಗೆ ಶರಣು ವೆಂಕಟೇಶ 31 ರಕ್ಷಿಸು ಜಗನ್ಮಯ ರಕ್ಷಿಸು ದಯಾಮಯ ರಕ್ಷಿಸು ಮನೋಮಯಾ ಮಾಯ ನಿರ್ಮಾಯ ರಕ್ಷಿಸೈ ಸರ್ವಜ್ಞ ಸರ್ವಲೋಕಾಧ್ಯಕ್ಷ ರಕ್ಷಸೈ ಹರಿ ನಿನ್ನ ಚರಣ ವೆಂಕಟೇಶ 32 ಆವನಾದಿಯನಂತನೆಂದೆನಿಪನೊ ವರವ ಈವ ಕರುಣಾಳುವೋ ಜೀವರಾಶಿಯನೆಲ್ಲ ಕಾವನೋ ಸಹಸ್ರಾಕ್ಷನೆಂದೆನಿಪ ದೇವನಾ ಶ್ರೀವನಜ ಪದವೆನಗೆ ಶರಣು ವೆಂಕಟೇಶ 33 ವೇದಗಳ ತಂದು ಮಂದರವೆತ್ತಿ ಹರಿಯ ಮೇದಿನಿಯ ನಳೆದ ಭಾರ್ಗವನಾದ ರಾಮನೀ ನಾದೆ ಕಂಸನಕೊಂದೆ ಗೋಪಾಲಕೃಷ್ಣ ನಾದ ಕಲ್ಕೀ ನಿನ್ನ ಚರಣ ವೆಂಕಟೇಶ34 ಮೂರು ವೇಣಿಗಳುಳ್ಳ ಗಂಗೆ ಪುಟ್ಟಿದ ಪಾದ ಮೂರು ಲೋಕವನಳೆದ ಸುಪ್ರಸಿದ್ಧದ ಪಾದ ಮೂರು ಕಣ್ಣಾಂತವನು ಜಪಿಸುತಿರುವ ಪಾದ ಚಾರುತರ ಪದವೆನಗೆ ಶರಣು ವೆಂಕಟೇಶ 35 ಕಾಳಿಂಗನಾ ಹೆಡೆಯ ತುಳಿದು ಕುಣಿದಾ ಪಾದ ಖೂಳ ಶಕಟನನೊದ್ದು ಕೊಂದ ಪಾದ ಚೋಳರಾಯನು ತೊಳೆದು ವಂದಿಸಿದ ಪಾದ ನಾಳೀಕ ಪದವೆನಗೆ ಶರಣು ವೆಂಕಟೇಶ36 ಕ್ಷೀರವಾರಿಧಿತನುಜೆಯೊಪ್ಪಿ ವೊತ್ತುವ ಪಾದ ನಾರದಾದಿಗಳೆಲ್ಲ ಪಿಡಿದು ನಲಿವಾ ಪಾದ ಶ್ರೀರಮಣಿ ಮುದದಿಂದ ಕಣ್ಗೊತ್ತುವ ಪಾದ ಮಾರಮೋಹಕ ನಿನ್ನ ಚರಣ ವೆಂಕಟೇಶ37 ಮಂಗಳ ಕಲ್ಯಾಣ ರೂಪಂಗೆ ಅದ್ಭುತಾಕಾರಂಗೆ ಮಾಲ್ಯಪೀತಾಂಬರಾಂಗದ ಶೋಭಿತಂಗೆ ಶಾಲ್ಯನ್ನ ಸಂಪ್ರೀತ ಶ್ರೀ ವೇಂಕಟೇಶಂಗೆ ಬಾಲ್ಯಕುಂದದವಂಗೆ ಜಯಮಂಗಳ 38 ಭಕ್ತಪರಿಪಾಲಂಗೆ ಜಗದಾದಿ ಮೂಲಂಗೆ ಭಕ್ತಿದಾತಾರಂಗೆ ರಮೆಯರಸಂಗೆ ಮುಕ್ತಿ ಸೌಖ್ಯವನೀವ ಶ್ರೀವೇಂಕಟೇಶಂಗೆ ಶಕ್ತಿ ಸ್ವರೂಪಂಗೆ ಶುಭಮಂಗಳ 39 ಶೇಷಾದ್ರಿ ವಾಸಂಗೆ ದಿನಕರ್ತ ಭಾಸಂಗೆ ಕ್ಲೇಷದಾರಿದ್ರ್ಯಾದಿ ಪರಿಹಾರ ಕರ್ತಂಗೆ ಶೇಷ ಪಂiÀರ್iಂಕಂಗೆ ಶ್ರೀ ಶ್ರೀನಿವಾಸಂಗೆ ದೋಷಾಪಹಾರಂಗೆ ಜಯಮಂಗಳ 40 ಅರವಿಂದ ವದನಂಗೆ ಅರವಿಂದ ಲೋಚನಗೆ ಅರವಿಂದನಾಭನಿಗೆ ಅರವಿಂದ ಗಾತ್ರಗೆ ಅರವಿಂದ ಪಾದನಿಗೆ ಅರವಿಂದ ಭೂಷನಿಗೆ ಅರವಿಂದ ಹಸ್ತಂಗೆ ಶುಭಮಂಗಳಂ 41 ಹಿಂದಿನಾಚಾರ್ಯರಿಗೆ ಮುನಿಮುಖ್ಯಭಕ್ತರಿಗೆ ಇಂದಿನಾ ಭೂದೇವಿ ನೀಳಾದಿ ವಧುಗಳಿಗೆ ಮಂದಾಕಿನೀಧರಗೆ ಇಂದ್ರ ದಿಕ್ಪಾಲರಿಗೆ ವಂದಿಪೆನು ಮಂಗಳಾಚರಣೆ ಮಾಡಿ 42 ಫಲಶ್ರುತಿ ಹನ್ನೆರಡು ಮಾಸವು ತಪ್ಪದೆ ಹಾಡಿದರೆ ಮುನ್ನಮಾಡಿದ ಪಾಪವೆಲ್ಲ ಕಳೆಯುವುದು ಪನ್ನಗಾರಿಧ್ವಜನ ಕರುಣೆಯೊದಗುವುದು ಬನ್ನಗುಡುವನರಕಬಾಧೆ ತಪ್ಪುವುದು 43 ಶ್ರಾವಣಾಶ್ವೀಜದಲಿ ಮಾರ್ಗಶಿರ ಮಾಸದಲಿ ಭಾವಭಕ್ತಿಯಲಿಂತು ಹಾಡುವರಿಗೆ ನೋವು ಕಾಲನಭಟರ ಕಾಟನಶಿಪುದು ಹರಿಯ ಭಾವುಕರು ಸತ್ಕರಿಸಿ ಕರೆದೊಯ್ವರು 44 ಅಪ್ಪ ಮಾಂಗಿರಿರಂಗನಪ್ಪಣೆ ಪಡೆದಿದನು ಒಪ್ಪಿಸುವೆನೈ ನಿನಗೆ ವೇಂಕಟೇಶ| ತಪ್ಪು ನೆಪ್ಪುಗಳನ್ನು ಮನ್ನಿಸೈ ಜಗದೀಶ ಒಪ್ಪದಿಂ ಸಕಲರನು ಪೊರೆ ವೇಂಕಟೇಶ|| 45
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
(ಅಃ) ಕಾಮದೇವ ಕರುಣದಿಂದಲಿ ಒಲಿದು ಕಂಡನಾತುರದಲಿ ಪ ಇಂದ್ರಸಮಾನ ದೇವತೆಯೆ ರತಿಪತಿಯೇ | ಮಾರ || ಬಂದು ಕಲ್ಪದಲಿ ಸುಂದರನೆನಿಸಿಕೊಂಡಿರ್ದ | ಬಂಧುವೇ ಅಹಂಕಾರ ಪ್ರಾಣನಿಂದಧಿಕನೆ 1 ವನಜ ಸಂಭವನು ಸೃಷ್ಟಿ ಸೃಜಿಪಗೋಸುಗ | ಮನದಲ್ಲಿ ಪುಟ್ಟಿಸೆ ಚತುರ ಜನರ || ಮುನಿಗಳೊಳಗೆ ನೀ ಸನತ್ಕುಮಾರನಾಗಿ ಜನಿಸಿ | ಯೋಗ ಮಾರ್ಗದಲ್ಲಿ ಚಲಿಸಿದ ಕಾಮಾ 2 ತಾರಕಾಸುರನೆಂಬ ಬಹು ದುರುಳತನದಲ್ಲಿ | ಗಾರುಮಾಡುತಲಿರಲು ಸುರಗಣವನು || ಗೌರಿಮಹೇಶ್ವರರಿಗೆ ಪುತ್ರನಾಗಿ ಪುಟ್ಟಿ | ಧಾರುಣಿಯೊಳಗೆ ಸ್ಕಂದನೆನಿಸಿದೆ 3 ಮತ್ಸ್ಯ ಉದರದಲಿ | ಪೊಕ್ಕು ಶಿಶುವಾಗಿ ಸತಿಯಿಂದ ಬೆಳೆದು || ರಕ್ಕಸ ಶಂಬರನೊಡನೆ ಕಾದಿ ಗೆದ್ದು ಮರಳಿ | ಚಕ್ಕನೆ ಸಾಂಬನೆನಿಸಿದೆ ಜಾಂಬವತಿಯಲ್ಲ 4 ಜನಪ ದಶರಥನಲ್ಲಿ ಭರತನಾಗಿ ಪುಟ್ಟಿದೆ | ಮನೋ ವೈರಾಗ್ಯ ಚಕ್ರಾಭಿಮಾನಿ || ಎನಗೊಲಿದ ವಿಜಯವಿಠ್ಠಲರೇಯನಂಘ್ರಿ | ಅರ್ಚನೆ ಮಾಡುವ ಸುಬ್ರಮಣ್ಯ ಬಲು ಧನ್ಯ 5
--------------
ವಿಜಯದಾಸ
(ಈ) ಯತಿವರ್ಯರು ಶ್ರೀ ವ್ಯಾಸರಾಯರ ಸ್ತುತಿ ಇದಿರ್ಯಾರೊ ಗುರುವೆ ಸರಿಯಾರೊ ಯತಿಗೆ ಸಮರ್ಯಾರೊ ಪ ದುರುಳ ವಾದಿಗಳನ್ನು ಮರುಳು ಮಾಡೋರನ್ನ ತರಿದಟ್ಟಿ ಚಂದ್ರಿಕೆ ಗ್ರಂಥವ ರಚಿಸಿ ಧರಣಿ ಸುರರ ಪರಿವೃಢರ ಸುನಿಕರಕೆ ಪರಿಪರಿಯಲಿ ಉಪದೇಶಿಸುತಿಪ್ಪಗೆ 1 ಕನಕ ಕಶಿಪುತನಯನ ಘನ ಅಂಶದಿ ಫಣಿಗಣ ರಮಣನಾವೇಶದಿ ಪೊಳೆಯುತ ದಿನದಿನದಲಿ ಹರಿಮನ ತಣಿಸುತಲಿಹ ಘನ ಮಹಿಮನೆ ಶ್ರೀ ಯತಿಕುಲತಿಲಕಾ 2 ಉದ್ದಂಡ ವಿತಂಡಕೆ ಗಂಡುಸಿಂಹ ತರ್ಕದೆ ತಾಂಡವ ಯುಕ್ತಿಯ ದಂಡುಗಳನೆ ಕಟ್ಟಿಕೊಂಡು ತಾರ್ಕಿಕರ ಷಂಡಗಳನೆ ಖಂಡಿಸುತಿಹ ಯತಿಯೆ 3 ಬ್ರಹ್ಮಣ್ಯತೀರ್ಥರ ಕರಕಮಲದಿ ಪುಟ್ಟಿ ಬ್ರಹ್ಮಜನಕ ನರಸಿಂಹ ಮೂರುತಿಯ ಹೃ- ದ್ಗಂಹ್ವರದಲಿ ಧ್ಯಾನಿಸುತಿಹ ವ್ಯಾಸರಾ ಹೃದಯಾಂಬುಧಿಯೊಳು ಮೆರೆವಗೆ 4 ದಶದಿಶೆಯಲಿ ದಶರಥಸುತ ಮಹಿಮೆಯ ಕುಶಲದಿಂದಲಿ ಸಭೆಯೊಳಗೆ ಸ್ಥಾಪಿಸುತ ಹೊಸ ಹೊಸ ಬಿರುದು ಸಂದ್ಹೆಸರುವೆತ್ತಿರುವಂಥ ವಸುಧಿಯೊಳಗೆ ಸುಕರ ಸುಚರಿತೆಗೆ 5 ಹೊಳೆಯುತಲಿರುವ ರುಕ್ಮಿಣಿಪತಿ ಕೃಷ್ಣನು ನಲಿಯುತ ಕುಣಿಕುಣಿದಾಡುತಲಿಪ್ಪನು ಥಳಥಳಿಸುವ ರಾಮ ವೇದವ್ಯಾಸರು ನಿಮ- ಗಿಳೆಯೊಳಮೂಲ್ಯ ಪ್ರಸಾದವನೀವರು 6 ಅಡಿಗಡಿಗತಿ ದೃಢತರ ಯುಕ್ತಿಗಳಿಂದ ಸಡಗರದಿಂದಲಿ ಬಿಡದೆ ನುಡಿಯುತ ನಡದದ್ವೈತದಡವಿಯೊಳಗೆ ಪೊಕ್ಕು ಕೆಡಗುತಿಹ ನ್ಯಾಯಾಮೃತಾಚಾರ್ಯರಿಗೆ 7 ಶ್ರೀದವಿಠಲಗತಿ ಪ್ರೀಯರಾದ ಶ್ರೀ- ಪಾದರಾಯರಲಿ ಓದಿ ಗ್ರಂಥಗಳ ವಾದಿರಾಜ ವಿಜಯೀಂದ್ರ ಪ್ರಮುಖರಿಗೆ ಆದರದಲಿ ಪಾಠ ಹೇಳುತಲಿಪ್ಪಗೆ 8
--------------
ಶ್ರೀದವಿಠಲರು