ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ನಿನ್ನಪಾದ ಸನ್ನಿಧಿಯ ಘನ್ನ ದರುಶನದಿಂದಲಿಪ ಮುನ್ನ ದುರಿತಗಳೆಲ್ಲವು ಛಿನ್ನಛಿನ್ನವುಮಾಡಿ ಬನ್ನಬಡಿಸದೆ ಎಮ್ಮ ಸಲಹುವಸ್ವಾಮಿ ಅ.ಪ ಸುಮನಸರೊಡೆಯ ಕಾಲನಾಮಕನಾಗಿಪ್ಪ ಮೋದ ನಾಮ ವತ್ಸರದಿ ವಿಮ¯ ಚೈತ್ರಕೃಷ್ಣಪಕ್ಷದಶಮಿ ಸೌಮ್ಯವಾಸರದಿ ದ್ಯುಮಣಿ ಉದಯಕಾಲದಲಿ ಮಮಕುಲಸ್ವಾಮಿಯೆ ಎನ್ನ ವಂಶಜಾಪ್ತರ ಅಮಿತಶ್ರಮ ಪರಿಹರಿಸಿ ಈಗ ಶ್ರೀಮನೋಹರ ನಿನ್ನ ವಿಶ್ವರೂಪವ ತೋರ್ದೆ ಪ್ರೇಮ ಇಂದಿಗೆ ಆಯಿತೆ ಅಮಿತಜನ ಬಂಧು 1 ನಿನ್ನ ದರುಶನವೆಂದಿಗಂದಿಗಾಗಲಿ ಎಂದು ನಿನ್ನ ಧ್ಯಾನವನೆ ಮಾಡಲು ಸನ್ನುತಾಂಗನೆ ನೀನೆ ಘನ್ನ ಕರುಣವು ಮಾಡಿ ಎನ್ನ ಯತ್ನವು ಇಲ್ಲದೆ ನಿನ್ನ ದರುಶನಕ್ಕಾಗಿ ಅನ್ಯರಿಂದ ಪ್ರೇರಿಸಿ ಎನ್ನಲ್ಲಿ ಮನವು ಪುಟ್ಟಿಸಿದೆ ಪನ್ನಗಾಚಲನಿಲಯ ನಿನ್ನ ಮಹಿಮೆ ಎಂತುಂಟೋ ಎನ್ನನಿಲ್ಲಿಗೆ ತಂದು ಘನ್ನ ದರುಶನವಿತ್ತೆ 2 ಪಂಕಜೋದ್ಭವನಯ್ಯ ಮಂಕುಕವಿಸಿದೆ ಪಯಣ ಶಂಕೆಯ ಪರಿಹರಿಸಿ ಸಂಕಟಹರಿಸಿ ನಿನ್ನ ಕಿಂಕರರೊಳು ಸೇರಿಸಿ ಬಿಂಕದಲಿ ಗಿರಿಯನೇರಿಸಿ ಪಂಕಜನಾಭ ಮುಕುಂದ ಗೋವಿಂದ ಶಂಕರನುತಪೂಜಿತ ಶಂಖತೂರ್ಯಾದಿ ವಾದ್ಯಗಳಿಂದಲಿ ಶ್ರೀ ವೇಂಕಟೇಶ ನಿನ್ನ ನೋಡಿದೆ ಬಿಡದೇ 3
--------------
ಉರಗಾದ್ರಿವಾಸವಿಠಲದಾಸರು
ಭೂಮಿಯನೆ ಬಿಡಿಸೋ ಭೂದೇವಿ ರಮಣಾ ನಾ ಮಾಡುವೆ ನಿನಗೆ ಶರಣಾ ಪ. ಕರಿ ಕರಿಯಾ ಸಂಸಾರ ಥೆರಿಯಾ ಅ.ಪ. ಯನ್ನಿಂದ ದುಷ್ಟಕಾರ್ಯವನು ಮಾಡಿಸಿದಿಯೋ ನೀನು ಇಷ್ಟು ನಾನೀಗ ಉದಾಶೀನಳಾಗಿ ಇರುವೊದುಕಿಂತಾ ವೊಂದಷ್ಟು ಪ್ರಾಣವನು ಬಿಡಿಸೊ ಶ್ರೀಶಾ ಶ್ರೀನಿವಾಸಾ 1 ಸರ್ವಜ್ಞರ ಮತದೊಳಗೆನ್ನ ಪುಟ್ಟಿಸಿದೆಯೋ ಅಜ್ಞಾನ ಅಧಃಪತದಲಿ ಮಗ್ನಳಾಗಿರುವೆನು ಸುಜ್ಞಾನವನು ನಾನರಿಯೆನು ಭವಾಬ್ಧಿಯನು ದಾಟಿಸು ನೀನು 2 ದುರ್ಜನರ ಸಂಗವಾ ಕೊಡಬ್ಯಾಡ ಸಜ್ಜನರ ಸಂಗವ ಕೊಡು ಬ್ಯಾಗ ಮೂರ್ಜಗದೊಡೆಯನೇ ನೀಯನ್ನ ಪಾಲಿಸಯ್ಯ ಕಾಳಿಮರ್ಧನ ಕೃಷ್ಣರಾಯ 3
--------------
ಕಳಸದ ಸುಂದರಮ್ಮ
ಮರೆಯದೆ ಸಲಹೊ ಮಾರುತೀಶ ಎನ್ನ ಶರಣೆಂಬೆನು ನಿನ್ನ ಪ ಶರಣಾಗತರನು ಬಿಡದೆ ಪೊರೆವ ಫನ್ನ- ಗಿರಿ ಅಂಜನೆತನಯಅ.ಪ ವನನದಿಗಿರಿಗುಹೆಗಳಲಿ ನಿನ್ನ ರೂಪ ತೋರುವುದೈ ಭೂಪ ಶರಧಿ ಲಂಘಿಸಿ ರಾವಣನಿಗೆ ತಾಪ ಪುಟ್ಟಿಸಿದೆಯೊ ರಘುಪ- ನಡಿಗಳ ಬಿಡದೆ ಸೇವಿಸುವರ ಪಾಪ ಮಾಡುವಿ ನಿರ್ಲೇಪ ಸಡಗರದಲಿ ನಿನ್ನೊಡೆಯನ ತೋರಪ್ಪ ಘನಗಿರಿ ಹನುಮಪ್ಪ 1 ಊರಿನಲಿ ಊರ್ಹೊರಗು ನಿನ್ನ ಮೂರ್ತಿ ಎಷ್ಟ್ಹೇಳಲಿ ಕೀರ್ತಿ ಪಾಡುತ ಪೊಗಳ್ವರು ನಿನ್ನಯ ಸತ್ಕೀರ್ತಿ ವರ್ಣಿಸುವುದೆ ಅರ್ಥಿ ಪಾಮರನೊಮ್ಮೆ ಪಾಡಲು ನಿನ್ನ ವಾರ್ತೆ ಪರಿಹಾರವೋ ಭೀತಿ ನಾಡೊಳು ನಿನ್ನ ಭಜಿಸುವವರ ಸಂಗ ನೀಡು ಕೃಪಾಪಾಂಗ2 ಕಡಲ ಶಯನನ ಅಡಿಗಳ ಸೇವಿಸುತ ಕಡುಹರುಷವ ಪಡುತ ಬಿಡದೆ ನಿನ್ನಯ ಸೇವಕರಿವರೆನುತ ಶ್ರೀಶಗೆ ಪೇಳುತ್ತ ಕೊಡಿಸುವಿ ಮುಕ್ತಿಯ ಧೃಡಭಕ್ತರಿಗೆ ಸತತ ರಾಮರ ಸ್ಮರಿಸುತ್ತ ಕಮಲನಾಭ ವಿಠ್ಠಲನನು ಸೇವಿಸುತಭಕ್ತರ ಸಲಹುತ್ತ3
--------------
ನಿಡಗುರುಕಿ ಜೀವೂಬಾಯಿ
ನೀನೆಗತಿನೀನೆ ಮತಿ ನೀನೆ ಸ್ವಾಮಿನೀನಲ್ಲದನ್ಯತ್ರ ದೈವಗಳ ನಾನರಿಯೆ ಪನಿನ್ನ ಪಾದಾರವಿಂದದ ಸೇವೆಯನು ಮಾಡಿನಿನ್ನ ಧ್ಯಾನದಲಿರುವ ಹಾಗೆಮಾಡು||ನಿನ್ನ ದಾಸರ ಸಂಗದಿಂದ ದೂರಿಡದೆನಗೆಸನ್ಮಾರ್ಗವಿಡಿಸೊ ಜಗದೀಶ ಅಘನಾಶ 1ಕಮಲನಾಭಿಯೊಳು ಬೊಮ್ಮರ ಪುಟ್ಟಿಸಿದೆ ಹರಿಯೆಕಮಲಸಖಕೋಟಿ ಪ್ರಕಾಶ ಈಶಕಮಲಕರ ತಳದಿ ಅಭಯವನಿತ್ತು ಭಕುತರಿಗೆಕಮಲಾಕ್ಷನೆನಿಸಿದೆಯೊ ಕಮಲಾರಮಣನೆ 2ಶಿಶುಪಾಲ ದಂತವಕ್ತ್ರರ ಶಿರವ ಭೇದಿಸಿದೆಪಶುಪತಿಯ ಆಭರಣ ವೈರಿವಾಹನನೆ ||ಅಸುರಕುಲ ಸಂಹರಿಸಿ ಭಕ್ತಜನರನು ಪೊರೆದೆವಸುಧೇಶಸಿರಿಪುರಂದರವಿಠಲರಾಯಾ3
--------------
ಪುರಂದರದಾಸರು