ಒಟ್ಟು 5 ಕಡೆಗಳಲ್ಲಿ , 1 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಇರದ ಎರಡು ದಿನದ ಸಂಸಾರಜ್ಞಾನದಲಿ ದಾನಧರ್ಮವ ಮಾಡಿರಯ್ಯ ಪ.ಹಸಿದು ಬಂದವರಿಗೆ ಅಶನವೀಯಲು ಬೇಕುಶಿಶುವಿಗೆ ಪಾಲ್ಬೆಣ್ಣೆಯುಣಿಸಬೇಕುಹಸನಾದ ಭೂಮಿಯನು ಧಾರೆಯರೆಯಲು ಬೇಕುಪುಸಿಯಾಡದಲೆ ಭಾಷೆ ನಡೆಸಲೇಬೇಕು 1ಕಳ್ಳತನಗಳ ಮಾಡಿ ಒಡಲ ಹೊರೆಯಲು ಬೇಡಕುಳ್ಳಿರ್ದ ಸಭೆಯೊಳಗೆ ಕುಟಿಲ ನಡಿಸಲು ಬೇಡಒಳ್ಳೆಯವ ನಾನೆಂದು ಬಲು ಹೆಮ್ಮಲಿರಬೇಡಬಾಳ್ವೆ ಸ್ಥಿರವೆಂದು ನೀನಂಬಿ ಕೆಡಬೇಡ 2ದೊರೆ ತನವು ಬಂದಾಗ ಕೆಟ್ಟ ನುಡಿಯಲು ಬೇಡಸಿರಿ ಬಂದ ಕಾಲಕ್ಕೆ ಮರೆಯಬೇಡಸಿರಿವಂತನಾದರೆ ಪುರಂದರವಿಠಲನಚರಣ ಕಮಲವ ಸೇರಿ ಸುಖಿಯಾಗು ಮನುಜ 3
--------------
ಪುರಂದರದಾಸರು
ನಂಬಬೇಡ ನಾರಿಯರನುಹಂಬಲಿಸಿ ಹಾರಯಿಸಬೇಡಅಂಬುಜಾಕ್ಷಿಯರೊಲುಮೆ ಬಯಲುಡಂಬಕವೆಂದು ತಿಳಿಯಿರೊ ಪ.ನೋಟವೆಲ್ಲ ಪುಸಿಯು - ಸತಿಯರಾಟವೆಲ್ಲ ಸಂಚು - ಸನ್ನೆಕೂಟವೆಲ್ಲ ಗನ್ನ - ಘಾತುಕನೋಟವೆಲ್ಲ ವಂಚನೆವಾತಬದ್ಧ ಹೆಂಗಳಲ್ಲಿಕೋಟಲೆಗೊಂಡು ತಿರುಗಬೇಡಮಾಟಗಾತಿಯರೊಲುಮೆ ಬಯಲುಬೂಟಕವೆಂದು ತಿಳಿಯಿರೊ 1ಸೋತನೆಂದು ವಿಟಗೆ ದೈನ್ಯಮಾತನಾಡಿ ಮರುಳಗೊಳಸಿಕಾತರವ ಹುಟ್ಟಿಸಿ ಆವನಮಾತೆ - ಪಿತರ ತೊಲಗಿಸಿಪ್ರೀತಿ ಬಡಿಸಿ ಹಣವ ಸೆಳೆದುರೀತಿಗೆಡಿಸಿ ಕಡೆಯಲವನಕೋತಿಯಂತೆ ಮಾಡಿ ಬಿಡುವಚಾತಿಕಾರ್ತಿ ಹೆಂಗಳೆಯರ 2ಧರೆಯ ಜನರ ಮೋಹಕೆಳಸಿಭರದಿ ನೆಟ್ಟು ಕೆಡಲುಬೇಡಎರೆಳೆಂಗಳ ಹೆಂಗಳೊಲುಮೆಗುರುಳೆ ನೀರ ಮೇಲಿನಮರೆಯಬೇಡ ಗುರುಮಂತ್ರವಸ್ಥಿರವಿಲ್ಲದ ಜನ್ಮದಲ್ಲಿಕರುಣನಿಧಿ ಪುರಂದರವಿಠಲನಚರಣಸ್ಮರಣೆ ಮಾಡಿರೊ3
--------------
ಪುರಂದರದಾಸರು
ವೃಂದಾವನವೇ ಮಂದಿರವಾಗಿಹಇಂದಿರೆಶ್ರೀ ತುಳಸಿ ||ನಂದನಂದನ ಮುಕುಂದಗೆ ಪ್ರಿಯಳಾದ |ಚೆಂದದ ಶ್ರೀ ತುಳಸಿ ಪತುಳಸಿಯ ವನದಲಿ ಹರಿಯಿಹನೆಂಬುದ |ಶ್ರುತಿಸಾರುತಲಿದೆಕೇಳಿ|ತುಳಸೀದರ್ಶನದಿಂದ ದುರಿತಗಳೆಲ್ಲವುದೂರವಾಗುವುವುಕೇಳಿ||ತುಳಸೀ ಸ್ಪರ್ಶವ ಮಾಡೆ ದೇಹ ಪಾವನವೆಂದುತಿಳಿದಿಲ್ಲವೇನು ಪೇಳಿ |ತುಳಸೀಸ್ಮರಣೆ ಮಾಡಿ ಸಕಲೇಷ್ಟಗಳ ಪಡೆದುಸುಖದಿಂದ ನೀವು ಬಾಳಿ 1ಮೂಲಮೃತ್ತಿಕೆಯನು ಮುಖದಲಿ ಧರಿಸಲುಮೂಲೋಕ ವಶವಹುದು |ಮಾಲೆ ಕೊರಳಲಿಟ್ಟ ಮನುಜಗೆ ಮುಕ್ತಿಯಮಾರ್ಗವು ತೋರುವುದು ||ಕಾಲಕಾಲಗಳಲಿ ಮಾಡುವ ದುಷ್ಕರ್ಮಕಳೆದು ಬೀಸಾಡುವುದು |ಕಾಲನ ದೂತರ ಕಳಚಿ ಕೈವಲ್ಯದಲೀಲೆಯ ತೋರುವುದು 2ಧರೆಯೊಳು ಸುಜನರ ಮರೆಯದೆ ಸಲಹುವವರಲಕ್ಷ್ಮಿ ಶ್ರೀ ತುಳಸಿ |ಪರಮಭಕ್ತರ ಪಾಪಗಳನೆಲ್ಲ ತರಿದು ಪಾ-ವನಮಾಡುವಳು ತುಳಸಿ ||ಸಿರಿಆಯು ಪುತ್ರಾದಿ ಸಂಪದಗಳನಿತ್ತುಹರುಷವೀವಳು ತುಳಸಿ |ಪುರಂದರವಿಠಲನಚರಣಕಮಲಗಳಸ್ಮರಣೆಯೀವಳು ತುಳಸಿ 3
--------------
ಪುರಂದರದಾಸರು
ಹರಿಕಥಾ ಶ್ರವಣ ಮಾಡೊ - ನಿರಂತರಪರಗತಿಗಿದು ನಿರ್ಧಾರ ನೋಡೊ ಪ.ಸರಸಿಜನಾಭನ ಸರ್ವದಾ ಹೊಗಳುತದುರಿತದೊರಕೀಡಾಡೊ -ಮನುಜಾ1ಜಾÕನ - ಭಕುತಿ - ವೈರಾಗ್ಯವೀವ ನಮ್ಮಆನಂದತೀರ್ಥರ ಪಾಡೊ ಮನುಜಾ 2ಪರಮ ಪುರುಷ ಶ್ರೀ ಪುರಂದರವಿಠಲನಚರಣ ಕಮಲಗಳ ಕೂಡೊ - ಮನುಜಾ 3
--------------
ಪುರಂದರದಾಸರು
ಹಿಗ್ಗುವೆಯೇಕೊ - ಏ ಮನುಜಾಹಿಗ್ಗುವೆಯೇಕೊ ಅಹಿಗ್ಗುವ ತಗ್ಗುವ ಮುಗ್ಗುವ ಕುಗ್ಗುವಅಗ್ನಿಯೊಳಗೆ ದಗ್ಧವಾಗುವ ದೇಹಕೆ ಅಪಸತಿ ಪುರುಷರು ತಮ್ಮ ರತಿಕ್ರೀಡೆಗಳ ಮಾಡೆಪತವಾದಿಂದ್ರಿಯ ಪ್ರತಿಮೆಯ ದೇಹಕೆ 1ತೋರುವುದೊಂಬತ್ತು ದಾರಿಯ ಮಲವಾದನೀರಿಲ್ಲದಿದ್ದರೆ ನಾರುವ ದೇಹಕೆ 2ಆಗದ ಭೋಗದ ಆಗು ಮಾಡುತಲಿಪ್ಪರೋಗಬಂದರೆ ಬಿದ್ದು ಹೋಗುವ ದೇಹಕೆ 3ನರರ ಸೇವೆಯಮಾಡಿ ನರಕ ಭಾಜನನಾಗಿಮರಳಿ ಮರಳಿ ಹುಟ್ಟಿ ನರಳುವ ದೇಹಕೆ 4ಪುರಂದರವಿಠಲನಚರಣ ಕಮಲಕೆಎರಗದೆ ಇರುತಿಪ್ಪ ಗುರುವಿನ ದೇಹಕೆ 5
--------------
ಪುರಂದರದಾಸರು