ಒಟ್ಟು 4 ಕಡೆಗಳಲ್ಲಿ , 3 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಡುಪಿಯ ಶ್ರೀಕೃಷ್ಣ ನುಡಿಯ ಲಾಲಿಸು ಮಾಧವ ನುಡಿಯ ಲಾಲಿಸು ಪಾಲಕಡಲಶಯನ ದೇವ ಕಡಗೋಲ ಪಿಡಿದ ನಮ್ಮುಡುಪಿಯ ಶ್ರೀಕೃಷ್ಣ ಪ. ಮಾನವ ಮದವನ್ನು ಮಸರಂತೆ ಮಥಿಸಿದ ಭಾವನ ತೋರುವಿಯೊ ಹಾಗಲ್ಲದಿದ್ದರೆ ದೇವತಗಳಿಗಮೃತವನುಣಿಸಿದನೆಂಬ ಸೋವನು ಸೂಚಿಪೆಯೊ ಸೌಭಾಗ್ಯ ಸಿರಿಯೊ ಸೇವಕರ ಸೇವಾನುಗುಣಫಲ ನೀವ ತರತಮ ಭಾವವೊ ಭವ ನಾವ ನಡೆಸುವ ನಿಪುಣತೆಯೊ ದುರಿ ತಾವಳಿಯ ದೂರೋಡಿಸುವೆಯೊ1 ಕಲಿಯ ಬಲದಿ ಜ್ಞಾನಕಲೆಯಡಗಲು ದೇವ- ರ್ಕಳು ಬಂದು ಸ್ತುತಿಸಲಂದು ಸಕಲಸುರ ತಿಲಕ ವಾಯುವಿನ ಭೂವಲಯದೊಳವ- ಗೊಳುವರೆ ಪೇಳ್ವೆನೆಂದು ನೀ ಮನಕೆ ತಂದು ಹಲವು ಭವದಲಿ ಭಜಿಪೆ ಸಜ್ಜನ ಕುಲಕೆ ಮೋಕ್ಷಾಂತದ ಚತುರ್ವಿಧ ಫಲವ ನೀಡುವೆನೆಂದು ಪವನನಿ- ಗೊಲಿದು ಬಂದೀ ನಿಲಯದೊಳಗಿಹೆ 2 ಸರ್ವಜ್ಞ ಮುನಿಕೃತ ಸಕಲ ಪೂಜೆಗಳನ್ನು ನಿವ್ರ್ಯಾಜದಲಿ ಕೊಳ್ಳುತ ನಿರ್ವಾಹಗೊಳುತ ದುರ್ವಾದಿಪಟಲಾದ್ರಿ ಗರ್ವಾಪಹರ ಶತ ಪರ್ವ ಶಾಸ್ತ್ರವ ಕೇಳುತ ಸಂತೋಷಪಡುತಾ ಪೂರ್ವಸುಪರ್ವ ರಿಪುಗಳ ನಿರ್ವಿಯೊಳಗಡಿಯಿಡಗೊಡದ ಸುರ ಸಾರ್ವಭೌಮ ಶುಭೋನ್ನತಿ ಪ್ರದ 3 ಶ್ರೀನಿಕೇತನ ಸರ್ವ ಪುರುಷಾರ್ಥದಾಯಿಯೆ ನೀನೆಲ್ಲೆ ನೆಲೆಯದೋರಿ ಇರಲಿನ್ನು ಭಜಿಸದೆ ನಾನಾ ದೈವಗಳ ಸೇರಿ ಹಲ್ಲುಗಳ ತೋರಿ ಏನನುಸುರುವೆ ಕೃಷ್ಣ ಬುದ್ಧಿ ವಿ- ಹೀನತೆಯನದನೊ ಮಾನಿಸೆನ್ನ ಕಡಪಾನಿಧಿಯೆ ಪವ- ಪಾದ ಪಲ್ಲವ 4 ದ್ವಾರಾವತಿಯೊಳು ಸಂಸಾರಿ ಭಾವವನೆಲ್ಲ ತೋರಿದ ಕಾರಣದಿ ಅಲ್ಲಿಂದ ಭರದೀ ವಾರುಧಿ ಮಾರ್ಗದ ಸ್ವಾರಿಯ ನೆವನದಿ ಪಾರಿವ್ರಾಜರ ಸೇರಿದಿ ತದ್ಭಕ್ತಿಗೊಲಿದಿ ದೂರ ಭಯದಲಿ ವೆಂಕಟಾದ್ರಿಗೆ ಬಾರದಿಹ ಸಜ್ಜನರ ಮೇಲ್ಕರು- ಣಾರಸಾಮೃತ ಸೂಸುತ್ತಿಲ್ಲಿ ಸರೋರುಹಸ್ಮಿತ ಮುಖ ತೋರುವಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ದಯದಿ ಪಾಲಿಸೋ ವಾದಿರಾಜ ಗುರುವೇ | ನತಜನ ಸುರತರುವೇ ಪ ಹಯಮುಖ ಪದ ಸದ್ವನಜ ಸುಭೃಂಗಾ | ಪಾಲಿಸು ದಯಾಪಾಂಗಾ ಅ.ಪ. ರಜತ ಪೀಠದೊಳು ಕೃಷ್ಣ ಪೂಜೆಗಳನ್ನು | ಪರಿಪರಿ ರಚಿಸಿನ್ನೂ |ಕುಜನರ ಭೇದಿಪ ಭಜನೆ ಪದಗಳನ್ನೂ | ಸುಜನಕಿತ್ತೆ ನೀನೂ ||ಭಜಿಸೆ ಬಂದವರಿಗನ್ನೋದಕಗಳನೂ | ಏರ್ಪಡಿಸಿನ್ನೂ |ನಿಜ ಜನರ ಪೊರೆವ ಸುವ್ಯವಸ್ಥೆಗಳನ್ನೂ | ರಚಿಸಿ ಮೆರೆದೆ ನೀನೂ 1 ಅಂತರಂಗದಿ ಪೂಜಿಪೆ ಹಯವದನನ್ನ | ಭಾವಿ ಮರುತ ಎನ್ನ|ಅಂತರಂಗದೊಳು ನೆಲಿಸುತ ನೀಯೆನ್ನ | ಸಂಚಿತಾದಿಯನ್ನ ||ಅಂತಗಾಣಿಪ ಶ್ರೀ ಅಂತರಾತ್ಮನನ್ನ | ಚಿಂತೆ ಪಾಲಿಸು ಮುನ್ನ |ಯೆಂತು ವರ್ಣಿಸಲಿ ತವ ಮಹಿಮೆಗಳನ್ನ | ನಿಂತು ನಲಿ ವದನದೊಳೆನ್ನ 2| ಭರತ ಖಂಡದಿ ತೀರ್ಥ ಕ್ಷೇತ್ರ ಚರಿಸೀ | ತತ್ಪ್ರಂಬಂಧ ರಚಿಸೀ |ವಿರಚಿಸಿದೆಯೋ ರುಕ್ಮಿಣೀಶ ಕಾವ್ಯಾ | ಯುಕ್ತಿಮಲ್ಲಿಕೇಯಾ ||ಸುರಸ ಪದಗಳಲಿ ತತ್ವ ಪುಂಜವನ್ನ | ರಚಿಸಿ ಮೆರೆದೆರನ್ನ |ನಿರಣಯಾದಿಗಳ ಭಾವಗಳನ್ನ | ಕನ್ನಡದಿ ರಚಿಸದೆ ಘನ್ನ 3 ಸ್ವಾದಿ ಪುರದಿ ಬಲು ಮುದದಲಿ ಮೆರೆದಾ | ಬಿರಿದು ಪೊತ್ತ ಶೈವಾವಾದಿಸೆ ನಿನ್ನೊಳು ಸೋತು ನಿಂತನವ | ಪಾದದಿ ಬಿದ್ದು ಅವ || ಮೇದಿನಿಯೊಳ್ ನಿಮಗೆ ಸಮರು ಆವ | ಎಂದೊಪ್ಪಿಸಿದನು ಅವ |ಮೋದದಿಂದಲಿ ಬಸವ ಚಿನ್ಹಿತನಾದ | ತವ ಚರಿತೆ ಆಗಾಧಾ 4 ಪಂಚ ಸುವೃಂದಾವನಗಳ ರಚಿಸುತ್ತಾ | ತಾವ್ನಡುವಿರ ಬೇಕೆನುತಾ |ಅಂಚೆಗಮನ ಪ್ರಾಣ ಗಂಗಾಧರನಾ | ಗುರು ಗೋವಿಂದ ವಿಠಲನಾ ||ಸಂಚಿಂತಿಸಿ ನಿಲಿಸುತ ನಾಲ್ಕರಲ್ಲೀ | ಚತುರ ದಿಕ್ಕಿನಲ್ಲೀ |ಪಂಚರೂಪಿ ನಿಷ್ಕಿಂಚಿನ ಪ್ರಿಯ ಹರಿಯಾ | ಪುರವ ಸೇರಿದಯ್ಯಾ 5
--------------
ಗುರುಗೋವಿಂದವಿಠಲರು
ದರ್ಭಶಯನ ಶ್ರೀರಾಮದೇವರ ಸ್ತೋತ್ರ ಪಂಕ ಕಳೆಯೊ ಎನ್ನ | ಕರುಣಾರಸ ಪೂರ್ಣ ಪ ಲಂಕೇಶನನು ಜಗ್ವೊಲಿದ ಹರಿಯೇ | ಆಶ್ರಿತರಿಗೆ ಧೊರೆಯೇ ಅ.ಪ. ಭವ ವಿಮುಕ್ತನಹನೂಕವಿ ಜನ ನುತ ಸತ್ಪ್ರವರ ನಿನ್ನ ಲೀಲಾ | ಲೋಕ ಶಿಕ್ಷೆಗನುಕೂಲ |ತವಕದಿ ಗೈದೆ ವಿವಿಧ ಪೂಜೆಗಳನ್ನ | ನವ ಪಾಪಾಣಗಳನ್ನ 1 ಶರಧಿ ಸಿಂಧು ಪತಿಯ ನೋಡೀ | ದರ್ಭಶಯನ ಮಾಡೀಕಪ್ಪುಗೊರಳ ಸಖ ಕುಪಿತನಾಗೆ ನೀನೂ | ಬೆದರಿ ಬಿನ್ನವಿಸಿದನೂಒಪ್ಪಿ ಬಂಧಿಸಿದೇ ಸೇತುವೆಯನ್ನಾ | ಭಕ್ತರಿಗೆ ಪ್ರಸನ್ನಾ 2 ಸಿರಿ ಮಾಧವ ಶ್ರೀನಲ್ಲಾ | ಗುರು ಗೋವಿಂದ ವಿಠ್ಠಲ |ಮಾತು ಮಾತಿಗೆ ಕೊಡು ತವ ಲೀಲಾ | ಉಚ್ಚರಿಸುವ ಸೊಲ್ಲಾ 3
--------------
ಗುರುಗೋವಿಂದವಿಠಲರು
ಮಂಗಳ ಜಯ ಜಯ ಮಂಗಳ ತುಳಸಿಗೆ ಮಂಗಳ ಜಯ ಜಯ ರಂಗನಾಯಕಗೆ ಪ ವಾರಿಧಿ ಮಥÀನದಿ ವಾರಿಜನಾಭನ ವಾರಿಜನೇತ್ರನ ವಾರಿಗಳಿಂದ ತೋರಿದ ತುಳಸಿಯು ಸೇರಿದಳೆಲ್ಲ ಶ- ರೀರವ ಪಾವನ ಮಾಡಬೇಕೆನುತ 1 ತುಳಸಿಯ ನಾಮವ ಬೆಳೆಸಿಯೆ ಲೋಕವ ಬಳಸಿಕೊಂಡಿರುವೆನು ಎನುತಲೆ ಬಂದು ಕಳಸಿದ ಮನುಜರ ಉಳಿಸಬೇಕೆನುತಲೆ ಕಳಸದ ತೆರನಂತೆ ಉದಿಸಿದಳು ತುಳಸಿ 2 ಸಾಲಿಗ್ರಾಮವು ಇಲ್ಲದಾತನ ಮನೆಯೊಳು ಕಾಲೂರಿ ನಿಲ್ಲಳು ಹರುಷದೊಳಿವಳು ಪಾಲಿಪ ಹರಿಶಿಲೆಯಿರುವಂಥ ಸ್ಥಳದೊಳು ಓಲಗವಾಗಿಯೆ ತೋರುತ್ತಲಿಹಳು3 ಎಲ್ಲಿಯು ತುಳಸಿಯು ಅಲ್ಲಿಯೆ ಶ್ರೀಹರಿ ವಲ್ಲಭೆ ಸಹವಾಗಿ ಇರುತಿಪ್ಪ ಬಿಡದೆ ಫುಲ್ಲನಾಭನು ಕೃಷ್ಣ ಆಡಿದ ಪರಿಯನು ಗೊಲ್ಲತಿಯರು ಕಂಡು ನಾಚಿ ಹಿಗ್ಗಿದರು 4 ಬಂದಳು ಭಕ್ತರ ಮಂದಿರದೆಡಗೆ ಗೋ- ವಿಂದನ ಕಂಡಿರೆ ಎಂದು ಕೇಳಿದಳು ವೃಂದಾವನದೊಳು ನಿಂದಳು ತುಳಸಿಯು ಚಂದವು ನಿಮ್ಮಯ ಭವನದೊಳೆನುತ 5 ಗೋವಿನ ತುಪ್ಪದಿ ದೀವಿಗೆಯಿರಿಸಿಯೆ ಭಾವ ಶುದ್ಧತ್ವದಿ ಬಲವಂದರವಳು ಕಾವಲು ಪೋಗಿಯೆ ಕರ್ಣದ ಒಳಗಿದ್ದು ಜೀವಿತ ಮುಕ್ತಿಯ ತೋರುವೆನೆನುತ 6 ಸರ್ವತೀರ್ಥಗಳನ್ನು ಮೂಲದಿ ಧರಿಸಿಯೆ ಸರ್ವ ದೇವರ್ಕಳ ಮಧ್ಯದೊಳಿರಿಸಿ ಸರ್ವ ವೇದಂಗಳ ಶಿರದೊಳು ಧರಿಸಿಯೆ ಸರ್ವವ ಕಾಲಗೆ ನಿರ್ವಹಿಸುತಿಹಳು 7 ಅಂಗಳದೊಳಗಿಹ ಮಂಗಳ ಮಹಿಮಗೆ ರಂಗುವಲ್ಲಿಯನಿಕ್ಕಿ ಶೃಂಗಾರವಾಗಿ ಸಾಂಗ್ಯದೊಳಿಹ ಒಂದು ಮಂಗಳ ಬರೆದರೆ ಬಂಗಾರ ಮನೆಯನ್ನು ತೋರುವಳಿವಳು 8 ಮೂಲದ ಮೃತ್ತಿಕೆ ಮೂಲ ಪಣೆಯೊಳಿಟ್ಟು ಕಾಲದಿ ಸ್ನಾನವ ಮಾಡಿದ ನರರು ಭಾಳವಾಗಿಹ ಅಘರಾಶಿಯನೆಲ್ಲವ ಚಾಳಿಸಿ ಕಳೆವರು ಕಾಲನ ಗೆಲಿದು 9 ತನ್ನ ಕಾಷ್ಟವ ತಂದು ಚಿನ್ನದಿ ಸುತ್ತಿಸಿ ಕರ್ಣದಿ ಧರಿಸಿದ ಮನುಜರಿಗೆಲ್ಲ ಉನ್ನತ ಪದವಿಯ ತೋರುವೆನೆನುತಲೆ ಪನ್ನಗಶಯನಗೆ ಪ್ರೀತಿಯಾಗಿಹಳು 10 ಉತ್ತಮವಾಗಿಹ ಕಾರ್ತಿಕ ಮಾಸದಿ ಅರ್ತಿಯಿಂದಲೆ ನಲಿನಲಿಯುತ್ತ ದೇವಿಯ ಕರ್ತನ ಕೀರ್ತನೆ ರಚಿಸುವ ಮನದಿ 11 ಬ್ರಾಹ್ಮಿ ಮುಹೂರ್ತದಿ ಸ್ನಾನ ತರ್ಪಣವನ್ನು ನಿರ್ಮಲ ತೀರದಿ ತಿದ್ದಿಯೆ ಕೊಂಡು ಧರ್ಮಕ್ಕೆ ಯೋಗ್ಯಳ ಪೂಜೆಯ ಮಾಡಲು ಕರ್ಮ ಬಂಧಗಳೆಲ್ಲ ಕಡಿದುಕೊಳುವುದು 12 ಸಾಯಂಕಾಲದಿ ದೀವಿಗೆ ಹಚ್ಚಲು ಮಾಯಗಳೆಲ್ಲವು ಮರುಗಿ ಪೋಗವುವು ದಾಯವಾಗಿಯೆ ಸುರರಾಯನೊಳರ್ಥವ ಬೇವಿನವರು ಕಂಡು ಹೊರಸಾರುತಿಹರು 13 ಸರ್ವದಾನಗಳನ್ನು ಸರ್ವಪೂಜೆಗಳನ್ನು ಸರ್ವರು ಋಷಿ ಪಿತೃ ತರ್ಪಣಗಳನು ಸರ್ವಥಾ ತುಳಸಿಯ ತಪ್ಪಿಸಬೇಡೆಂದು ನಿರ್ವಾಹವಾಗಿಯೆ ಶ್ರುತಿಯು ಪೇಳಿದುದು 14 ಅಂಗದೊಳಗಿಹ ಮಂಗಳ ಮಹಿಮಗೆ ಸಾಂಗ್ಯದೊಳಿದನು ಪಠಿಸಿ ಪೇಳಿದರೆ ಗಂಗೆ ಗೋದಾವರಿ ತುಂಗಭದ್ರೆಯ ಮಿಂದು ರಂಗನ ಕ್ಷೇತ್ರವ ನೋಡಿದ ಫಲವು 15 ಅಂಗಳ ತುಳಸಿಯ ದಿನ ದಿನದಿ ತಾವೆದ್ದು ಹಿಂಗದೆ ನೋಳ್ಸ ಶ್ರೀರಂಗನ ಭಕ್ತರಿಗೆ ಬಂಗಾರಗಿರಿವಾಸ ವರಾಹತಿಮ್ಮಪ್ಪನ ಮಂಗಳಮೂರ್ತಿಯ ನೋಡಿದ ಫಲವು 16
--------------
ವರಹತಿಮ್ಮಪ್ಪ