ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಥನಾತ್ಮಕ ಹಾಡುಗಳು ಉದ್ಭವಿಸಿದ ಕಂಬದಿ | ಶ್ರೀ ನಾರಸಿಂಹ ಉದ್ಭವಿಸಿದ ಕಂಬದಿ ಪ. ಉದ್ಭವಿಸಿದ ಬೇಗ ಪದ್ಮಸಂಭವಪಿತ ಮುದ್ದು ಬಾಲಕನ ಉದ್ಧರಿಸುವೆನೆಂದು ಅ.ಪ. ದುರುಳನು ಪ್ರಹಲ್ಲಾದನು | ಪರಿಪರಿಯಿಂದ ಕರಕರಪಡಿಸೆ ಕುವರನ ನರಹರಿ ಎನ್ನನು ಪೊರೆ ಎಂದು ಮೊರೆಯಿಡೆ ಸುರರು ನೋಡುತಿರೆ ಭೋರ್ಗರೆಯುತ ಆ ಕ್ಷಣ 1 ಎಲ್ಲಿರುವನು ಹರಿ ಎಂದು | ದೈತ್ಯನು ಮಗನ ಇಲ್ಲಿ ಸ್ಥಂಭದಿ ತೋರೆಂದು ಖುಲ್ಲನು ಹಿಂಸಿಸೆ ಸರ್ವತ್ರದಿ ಶ್ರೀ- ನಲ್ಲನಿರುವನೆಂದು ಸಾಧಿಸೆ ಭಕ್ತನು 2 ತನಯನ ನುಡಿ ಉಳಿಸಲು | ನರಹರಿ ಹೊಸಲೊಳ್ ಇನನು ತಾ ಮುಳುಗುತ್ತಿರಲು ದನುಜನ ತೊಡೆಯ ಮೇಲಿಟ್ಟು ನಖದಲಿ ಕನಲಿ ಸೀಳಿ ಕರುಳ್ಮಾಲೆ ಧರಿಸುತ 3 ಸುರರು ಜಯ ಜಯವೆನ್ನುತ | ಪೊಗಳುತ್ತಲಿರೆ ನರಹರಿ ಉಗ್ರ ತಾಳುತ ಸುರರು ಬೆದರಿ ಪ್ರಹ್ಲಾದನ ಕಳುಹಲು ಕರಿಗಿರಿ ನರಹರಿ ಶಾಂತನೆನಿಸಿದ 4 ತಾಪವಡಗಿತು ಜಗದಲಿ | ವರ ಭಕ್ತನಿಂದ ಶ್ರೀಪತಿ ಲಕುಮಿ ಸಹಿತಲಿ ಗೋಪಾಲಕೃಷ್ಣವಿಠ್ಠಲ ಗುರುವರದ ಈ ಪರಿಯಿಂದ ಭಕ್ತರ ಪೊರೆಯಲು5
--------------
ಅಂಬಾಬಾಯಿ
ಜೋ ಜೋ ಜೋನಂತ ಸದ್ಗುಣಧಾಮಾ ಜೋ ಜೋ ಜೋ ಯದುವಂಶಲಲಾಮ ಜೋ ಜೋ ಸಕಲ ಮಲಾಪಹ ನಾಮ ಜೋ ಜೋ ಸಮಾಲಿಂಗಿಹ ಸತ್ಯಧಾಮ ಪ. ನಿಗಮತತಿಗಳೆಲ್ಲ ಪೊಗಳುತ್ತಲಿಹನ ನಗಚಾಪ ಪಿತನನ್ನು ನಗುತ ಪೆತ್ತವನ ಸ್ವಗತ ಭೇದಶೂನ್ಯ ಖಗಪ ವಾಹನನ ಮಗುವೆಂದು ಕೂಗುವ ಮಾರಜನಕನ 1 ಮೂರು ಗುಣಂಗಳ ಮೀರಿದ ಸಿರಿನಲ್ಲ ಚೋರತನದಿ ಬೆಣ್ಣೆ ಮೆಲುವರೆ ಬಲ್ಲ ಈರೇಳು ಭುವನವ ಮೂರಡಿ ಮಾಡಿದ ಧೀರಗೆ ತಕ್ಕ ತೊಟ್ಟಿಲ ಕಾಣೆನಲ್ಲ 2 ಜಾಗ್ರತ್ಸ್ವಪ್ನ ಸುಷುಪ್ತಿ ಭಾವಗಳು ಭೋಗಿ ಶಯನತ್ವದಧೀನವಾಗಿರಲು ವಾಗೀಶವಾಯುಗಳರ್ಚಿಪ ನಿನ್ನನು ತೂಗುವ ರಾಗವ್ಯಾವದೊ ಪೇಳೊ ರನ್ನ 3 ಆದರು ಕಲುಷಾವನೋದನ ನಿನ್ನಯ ಪಾದಕಮಲಗಳ ಪೊಗಳಿ ಪಾಡುವರ ಕಾದುಕೊಳ್ಳುವೆನೆಂಬ ವೇದ ಸಾರವನ್ನು ನೀ ದಯ ಮಾಡಿದರೋದುವೆನಿದನು 4 ನೀರೊಳಗಾಡಬ್ಯಾಡೆಂದರೆ ಕೇಳದೆ ಮಂದರ ಪೊತ್ತು ಬೇರನೆ ಕಿತ್ತಿ ಘೋರ ದೈತ್ಯನ ಸೀಳಿ ತೋರಿ ವಾಮನ ಮೂರ್ತಿ ಧಾರುಣೀಶರ ಕೊಂದ ಧೀರ ರಾಘವನೆ 5 ಚಿಕ್ಕತನದಿ ಬಹು ರಕ್ಕಸ ಕುಲವ ಧಿಕ್ಕರಿಸುತ ಕೈಗೆ ಸಿಕ್ಕದೆ ಓಡಿ ಮಕ್ಕಳಾಟಿಕೆಯಿಂದ ಫಕ್ಕನೆ ಮಾವನ ಸೊಕ್ಕ ಮುರಿದು ನೆಲ ತಿಕ್ಕಿದ ಹರಿಯೆ 6 ಘೋರ ಜರಾಸಂಧ ಸಾಲ್ವೈಕಲವ್ಯರ ಗಾರಗೆಡಿಸಿ ದ್ವಾರಕಾ ಪುರ ರಚಿಸಿ ಕೌರವನೊಶದಲಿ ಸೇರಿದ ಧರಣಿಯ ಮಾರುತಿಯಲಿ ಪ್ರೇಮದೋರಿ ಪಾಲಿಸಿರಿ 7 ಎರಡು ಹೆಂಗಳನಾಳುವುದೆ ಬಹು ಘೋರ ಎರಡೆಂಟು ಸಾವಿರ ಮತ್ತೆಂಟು ನೂರ ನೆರಹಿಕೊಂಡರೆ ನಿನಗಾಗದೆ ಭಾರ ಪರಮಾತ್ಮ ನಿನಗಿದು ಲೀಲಾವತಾರ 8 ಬತ್ತಲೆ ತಿರುಗಿದರಾಗದೆ ದೃಷ್ಟಿ ಕರವಾಳ ಮುಷ್ಟಿ ಸುತ್ತ ತಿರುಹಿ ಪಾಪಿಗಳ ಕೊಂದ ಜಟ್ಟಿಯ ನಿತ್ಯ ನಂಬಿದಪರಿಗಾನಂದ ಪುಷ್ಟಿ 9 ಅಣುಗಳಿಗೆ ಪರಮಾಣುವಾಗಿ ನಿಲುವಿ ಘನಕಿಂತ ಘನವಾಗಿದನುಜರ ಕೊಲುವಿ ಕನಡಿಲಿ ಪ್ರತಿಫಲಿಸುವ ವೋಲಿರುವಿ ಕನಲುತ ಭಕ್ತರು ನೆನೆವಲ್ಲಿ ಒಲಿವಿ 10 ಜೋಗಿ ಜನರ ಸಹವಾಸ ಬೇಡೆಂದರೆ ಪೋಗಿ ಪೋಗಿ ಅವರ ಮನದೊಳಗಿರುವಿ ಶ್ರೀ ಗುರು ಮಧ್ವಮುನಿಯ ಮೇಲೆ ಕರುಣದಿ ಸಾಗಿ ಬಂದಿರುವೀಗ ರೌಪ್ಯ ಪೀಠದಲಿ 11 ಶೃಂಗಾರ ವಾರುಧಿ ಶ್ರೀ ಕೃಷ್ಣಜೀಯ ಮಂಗಳ ದೇವಿಯ ಮೋಹಿಪಕಾಯ ಗಂಗೆಯ ಪಡದಂಗುಷ್ಠವನಿಟ್ಟಪಾಯ ರಂಗನಾಥ ಶ್ರೀ ವೆಂಕಟರಾಯ 12
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ಮರಿಸಿ ಬೇಡುವೆ ಹರಿಯ ಮುರಾರಿಯ ಸ್ಮರ ಕೋಟಿತೇಜನ ಸುರಮುನಿವಂದ್ಯನ ಪ ಮನ್ಮಥಕೋಟಿ ಲಾವಣ್ಯರೂಪದಿ ಮೆರೆವ ಮನ್ಮಥಯ್ಯನ ಪೊಗಳುತ್ತಲಿ ಚಿನ್ಮಯರೂಪನ ಚಿದ್ರೂಪನಾದನ ಹೃನ್ಮನದಲಿ ಪಾಡಿಪೊಗಳಿ ಕೊಂಡಾಡುತ ಅ.ಪ ಮನ್ಮನÀದೊಳು ಸ್ಮರಿಸಿ ಸ್ಮರಿಪ ಭಾಗ್ಯವು ಮುನ್ನ ಕರುಣಿಸಿ ಸಲಹು ಬಲು ಸಂ- ಪನ್ನ ನಿನಗೆದುರಿಲ್ಲ ಧರೆಯೊಳು ಪನ್ನಗಾದ್ರಿ ನಿವಾಸ ಶ್ರೀಶನ1 ವಿಶ್ವವ್ಯಾಪಕ ನೀನೆ ವಿಶ್ವಮೂರುತಿ ನೀನೆ ವಿಶ್ವ ನೀನೆ ಶ್ರೀ- ವಿಶ್ವವಸುನಾಮ ಸಂವತ್ಸರದೊಳು ಮೆರೆವ ವಿಶ್ವಮೂರುತಿ ಶ್ರೀ ಸರ್ವೇಶ್ವರ ನೀನೆಂದು2 ವಿಶ್ವಮಯ ವಿಶ್ವೇಶ ಶ್ರೀಹರಿ ವಿಶ್ವನಾಮಕ ವಿಮಲ ಸುಖಮಯ ವಿಶ್ವವನು ಉದರದೊಳು ಧರಿಸಿದ ವಿಶ್ವವನು ವದನದಲಿ ತೋರ್ದನ 3 ಕಮಲದಳಾಕ್ಷನ ಕಮನೀಯ ರೂಪನ ಕಮಲ ಸಂಭವನ ಪೆತ್ತಿಹ ಧೀರನ ಕಮಲಮುಖಿಯ ಕರಕಮಲದಿ ಪೂಜ್ಯನ ಕಮಲೆಯೊಡಗೂಡುತ ನಲಿವನ 4 ಕಮಲ ಕರದೊಳು ಪಿಡಿದ ಕಮಲೆಯ ಕಮಲನಾಭನ ಪಿತನೆ ಮುದದೊಳು ಕಮಲೆಯನು ಕೈಪಿಡಿದು ಮೆರೆಯುವ ಕಮಲನಾಭವಿಠ್ಠಲನ ಪ್ರತಿದಿನ5
--------------
ನಿಡಗುರುಕಿ ಜೀವೂಬಾಯಿ