ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣವ ಬೀರು ಚೆನ್ನ ಕಾಯಬೇಕೋ ಎನ್ನಮರೆತಿರೆ ಕಾವರ ಕಾಣೆಪ. ಸೊಪನ ಜಾಗರದಲ್ಲಿ ನಿನ್ನ ಧ್ಯಾನವೆ ಬಂದುತೃಪ್ತನಾಗಿ ನಾನು ಜೀವಿಸುವೆಕಪಟದ ನುಡಿಯಲ್ಲ ನೀನೆ ಬಲ್ಲೆವಿಪತ್ತುಗಳನೆ ಬಿಡಿಸಯ್ಯ 1 ಕಡಲಮಗಳ ಗಂಡ ಕಾಮಧೇನು ನೀ ಕಂಡ್ಯಾಬಡವ ನಿನ್ನಡಿಗೆ ಪೊಡಮಡುವೆಒಡಲ ಬಳಿಯ ನೆಳಲಂತೆ ಬಿಡದೆ ನಿನ್ನದೃಢವಾಗಿ ನಾನು ಕೂಡುವೆನು 2 ತಂಡ ತಂಡದ ವ್ಯಾಧಿಯ ಉಂಡು ಉಂಡು ಬಳಲಿದೆಕಂಡ ಕಂಡವರ ಬೇಡಿ ನೊಂದೆಹಿಂಡುಹಿಂಡುಗಟ್ಟಿ ಬಂದ ಚಂಡ ದಂಡಧರನವರುತುಂಡು ತುಂಡು ಮಾಡಿ ಕಾಡುವರು 3 ಘೋರತರ ವ್ಯಾಧಿಗಳ ತೋರಿ ತೋರಿ ನರಕದಿಮುರಹರನುಣಿಸದೆ ಬಿಡನುಮೀರಿ ಮೀರಿ ಬಹ ಮೃತ್ಯು ಆರನಂಜಿಸುವುದುಭಾರಿ ಭಾರಿ ಗಳಿಸಿದ ಪಾಪ 4 ಹರಿ ನಿನ್ನ ಚರಣದ ಸ್ಮರಣೆ ಒಂದಿರೆ ಸಾಕುಮರಣಗಿರಣಕಂಜೆನಯ್ಯಶರಣಜನರು ನಿನ್ನ ಪ್ರಾಣಕ್ಕೆ ಸರಿಯೆಂಬೆಸಿರಿರಮಣನೆ ಸಲಹೆನ್ನ 5 ಶರಧಿಯೊಳಾಡುವ ಮಂದರಧರ ವರಾಹನೆಹಿರಣ್ಯಾಕ್ಷವೈರಿ ವಾಮನನೆಪರಶುರಾಮನೆ ರಘುರಾಮ ಕೃಷ್ಣ ಬೌದ್ಧನೆಧುರದಿ ಕಲ್ಕಿಯಾಗಿ ಮೆರೆದೆ 6 ಕರಕರ ಮತತತ್ವವ ಒರದೊರೆದು ಪೇಳುವೆಥÀರಥರದ ಹಿರಿಯರನೆಲ್ಲಮಿರಿ ಮಿರಿ ಮಿಂಚುತಿಹ ಮುರಹರನ ಭಜಿಸದೆಹರಿಹರಿಯೆಂದು ಪೇಳೆನೊಮ್ಮೆ 7 ಮನೆಮನೆವಾರ್ತೆಗೆ ಧನಂಗಳ ಗಳಿಸಿದೆಚಿನಿಚಿನಿಯಂಬರಕೆ ಮರುಳಾಹೆಮನೆಮನೆ ಮಹಿಮೆಯ ಕಾಣೆ ಕಾಣೆ ಕೆರೆಗಳನೆನೆನೆನೆದಾಡುತ್ತ ನಾ ಭಜಿಸಿ 8 ತನು ಜೀರ್ಣವಾಯಿತು ಕರಣ ಎನ್ನಿಚ್ಛೆಯೊಳಿಲ್ಲಮನವೆನ್ನ ಮಾತು ಕೇಳದಯ್ಯಇನಿತು ಸಂಕಟದವ ಇನ್ನು ನಾನೆಂತರ್ಚಿಪೆವನಜನಾಭನೆ ಹಯವದನ9
--------------
ವಾದಿರಾಜ
ಪರಮದಯಾಕರೆ ಪೊರೆಯೆನ್ನನು ಜನನಿ ಪ. ಪಂಕಜಾಕ್ಷಿ ಪಂಕಜಾಸ್ಯೆ ಪಂಕಜಾಶ್ರಯೆ ಪಂಕಜೋದ್ಭವಾದಿಜನನಿ ಪಂಕಜಾಲಯೇ 1 ಪಾಕಶಾಸನಾದಿವಿನುತೆ ಲೋಕವಿಶ್ರುತೇ ಶೋಕಹರಣೆ ಸಾಕುಯೆಮ್ಮ ಕೋಕಿಲರವೇ 2 ಇಂದು ಸೋದರಿ ಮಂದಹಾಸಿನಿ ಕುಂದರದನೆ ವಂದಿಸುವೆನು ಮಂದಗಾಮಿನೀ 3 ಪೊಡವಿಯಣುಗಿ ಪೊಡಮಡುವೆ ನಿನ್ನಡಿಯೊಳೀಪರಿ ಕಡುನೇಹದೆ ಪಿಡಿದುಕರವ ಬಿಡದಿರೌ ಸಿರಿ4 ದೋಷರಹಿತ ಶೇಷಗಿರಿಯ ವಾಸನರಸಿಯೆ ಶೇಷಭೂಷಣ ನಮಿತಚರಣೆ ಪೋಷಿಸೌ ಜಯೆ5
--------------
ನಂಜನಗೂಡು ತಿರುಮಲಾಂಬಾ
ಬಾರಮ್ಮ ಇಂದಿರಮ್ಮ ಪ ನೀರೇಜ ಪದಯುಗಕೆ ಸಾರಿ ವಂದಿಪೆನಮ್ಮ ಹಾರಗಳನರ್ಪಿಸುವೆ ಸ್ವೀಕರಿಪುದಮ್ಮ ಅ.ಪ ಆವ ತೆರದಲಿ ನಿನ್ನನರ್ಚಿಸಿದರೂ ಕೊರೆಯೆ ಭಾವಶುದ್ಧಿಯಲಿ ಪೂಜೆಗೈವೆನಮ್ಮ ಓವರಿಗೆ ದಯಮಾಡು ದೇವಗಂಗಾ ಜಲದಿ ಪಾವನ ಪಾದಾಂಬುಜವ ತೊಳೆವೆನಮ್ಮಾ 1 ತವದಿವ್ಯ ಭೂಷಣವ ನವರತ್ನ ಹಾರಗಳ ಸುವಿಲಾಸದಿಂದಿತ್ತು ಮಣಿವೆನಮ್ಮ ಪವಳಪದುಮಾಸನ ವಿಶ್ರಾಂತಳಾಗಮ್ಮ ನವಪುಷ್ಪ ಕುಂಜಗಳ ಧರಿಪೆನಮ್ಮ 2 ಅಗರು ಚಂದನ ಧೂಪಮಿಗೆ ದಿವ್ಯ ಗಂಧಗಳ ಬಗೆಬಗೆಯ ದೀಪಗಳ ನೀಡುವೆನಮ್ಮಾ ಸೊಗಸಾದ ಭಕ್ಷ್ಯ ಭೋಜ್ಯಂಗಳನು ಅರ್ಪಿಸುವೆ ನಗುನಗುತ ಸ್ವೀಕರಿಸಿ ಪಾಲಿಸಮ್ಮ3 ದೇವಕನ್ಯೆಯರೆಲ್ಲ ದಿವ್ಯಗಾನವ ಪಾಡಿ ದೇವಿ ತವಕರುಣೆಯನು ಬೇಡುತಿಹರು ಶ್ರೀವನಿತೆ ನಾನೀವ ತಾಂಬೂಲವನು ಸವಿದು ಜೀವಕೋಟಿಗೆ ಸುಖವನೀವುದಮ್ಮಾ 4 ಪೊಡಮಡುವೆ ನಿನ್ನಡಿಗೆ ಕೊಡು ಭಕ್ತಿಭಾಗ್ಯವನು ಎಡೆಬಿಡದೆ ಹರಿಪಾದ ಸೇವೆಗೈದು ಕಡುಮುದದಿ ನಿನ್ನ ಸಂಕೀರ್ತನೆಯ ಪಾಡಿಸು ಬಡವರಾಧಾರಿ ಮಾಂಗಿರಿಯೊಡೆಯನ ರಾಣಿ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀಹರಿಸ್ತುತಿ ಮಂಗಳಾಚರಣೆ ಉಡುಪ ವಂಶಜ ಹರಿಯು ಉಡುಪತಿಯ ತಪದೆಡೆಯೊ ಳುಡುಪ ಶೇಖರನನ್ನು ತನ್ನ ಬಳಿಯಿರಿಸಿ ಕಡೆಗೋಲು ನೇಣುಗಳ ಪಿಡಿದು ನಿಂತಿರುವ 1 ಬೆನಕ ದೇವನೆ ನಿಜದಿಯಾಗಸಕೆ ಒಡೆಯನವ ನಾದವಾಹಿನಿಯನ್ನು ತನ್ನಲ್ಲಿಯಿರಿಸಿ ಗುರುಗಳುಪದೇಶದಿಂ ಜ್ಞಾನವೊದಗಿಪ ಜನಕೆ ಪೊಡಮಡುವೆನವನಡಿಗೆ ಯೆಡರು ಬರದಂತೆ 2 ಸರಸತಿಯೆ ನೀ ನನ್ನ ರಸನೆಯಲಿ ನೆಲೆನಿಂತು ನಿನ್ನ ಮಾವನ ಪೊಗಳಲೆನಗೆ ಮತಿತೆತ್ತು ಅವನೊಲುಮೆಯಿಂದೆನಗೆ ಮುಕುತಿಯನು ಪಡೆವಂತೆ ಹರಸು ನೀನ್ ಭಗವತಿಯೆ ನಿನ್ನ ವಂದಿಸುವೆ 3
--------------
ನಿಡಂಬೂರು ರಾಮದಾಸ
ಬಾರೋ ವಾರಣವದನಾ ತ್ರೈಲೋಕ್ಯ ಸನ್ಮೋಹನತೋರೋ ಕಾರುಣ್ಯ ಸದಾನಂದಾ ಪಮಾರಹರನ ಪರಿವಾರಕಧೀಶನೆನಾರಿ ಗಿರಿಜೆ ಸುಕುಮಾರನೆ ಧೀರನೆ ಅ.ಪಪೊಡಮಡುವೆನು ನಿನ್ನಯಾ ಚರಣಕ್ಕೆ ದೇವಾಎಡಬಿಡದೀಗಲೆನ್ನಯಾತೊಡರ್ಕಿ ಅಡವಿಯ ಕಡಿಕಡಿದಡಸುತಕಡುಬಡವಗೆ ತಡವಿಡದ್ವರ ಕೊಡುವಂತೆ 1ಝಗಝಗಿಸುವ ಪೀಠದಿ ಮಂಡಿಸಿಕೊಂಡುಸೊಗಸೊ ಸಾಗಿ ಊಟದೀಬಗೆಬಗೆ ಭಕ್ಷವ ತೆಗೆತೆಗೆದು ಮೊಗೆವಂತೆಮೃಗದೃಗಯುಗವರ ನಗೆಮೊಗ ಸುಗುಣನೆ 2ಫಣಿಶಾಯಿ ಗೋವಿಂದನಾ ದಾಸರ ವಂದ್ಯತ್ರಿನಯನಮೂರ್ತಿ ನಂದನಾಕಣುದಣಿ ನೋಡುವೆಮಣಿಗಣಭೂಷಣಝಣಝಣ ಕುಣಿಂiÀುುತ ಗುಣಮಣಿ ಗಣಪತಿ 3
--------------
ಗೋವಿಂದದಾಸ