ಒಟ್ಟು 15 ಕಡೆಗಳಲ್ಲಿ , 13 ದಾಸರು , 15 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ನೋಡಿದೆ ನಂದತೀರ್ಥ ಮು - ನೀಂದ್ರವಂದಿತ ಚರಣನಾ ಪ ವಂದಿಸುವ ಭಕುತರಿಗೆ ನಿತ್ಯಾ - ನಂದಫಲದ ಮುಕುಂದನಾಅ.ಪ ತಮನವೈರಿಯ ಮಂದರಧರ ಕಮಠರೂಪವ ಪೊತ್ತನಾ ಕಮಲಸಂಭವಭವನಕಶಿಪು ದಮನ, ವಾಮನಮೂರ್ತಿಯಾ 1 ಭೂಮಿಪರ ಸಂಹಾರಿ, ದಶರಥ ರಾಮನಾಮದಿ ಮೆರೆದನಾ ಸೋಮಪಾಧಿಪಸುತಗೆ ಒಲಿದು ಸಂ - ಗ್ರಾಮದಲಿ ರಕ್ಷಿಸಿದನಾ 2 ಬುದ್ಧರೂಪದಿ ತ್ರಿಪುರಸತಿಯರ ಬುಧ್ಧಿ ಭೇದವ ಮಾಳ್ದನಾ ಬುದ್ಧರಲಿ ಕಲಿಮುಖ್ಯಯವನರ ಗೆದ್ದ ಗಾನವಿಲೋಲನಾ 3 ದೇವಕೀವಸುದೇವತನಯನ ದೇವಗಣ ಸಂಸೇವ್ಯನಾ ಈ ವಸುಂಧರೆಯೊಳಗೆ ಮಧ್ವಸ - ರೋವರದಲಾವಾಸನಾ 4 ಪೋತವೇಷನ ವೀತಶೋಕನ ಪೂತನಾದಿವಿಘಾತನಾ ಮಾತರಿಶ್ವಪ್ರಿಯಾ ಗುರುಜಗ ನ್ನಾಥವಿಠಲರಾಯನಾ 5
--------------
ಗುರುಜಗನ್ನಾಥದಾಸರು
ಅವತಾರ ಸಿರಿವರ ಘನ ಕರುಣಾಕರ ಪೊರೆಯೈ ಪ. ನಿಗಮಚೋರನನ್ನು ಕೊಂದು ನಗವಪೊತ್ತನೆ ವಿಗಡದೈತ್ಯನನ್ನ ಸೀಳಿ ಜಗವನಾಂತನೇ 1 ಘುಡುಘುಡಿಸಿ ಕಂಬವನು ಒಡೆದುಬಂದನೆ ಪಿಡಿದು ಖಳನ ಕರುಳಬಗೆದು ಕೊರಳೊಳಾಂತನೆ2 ಇಂದ್ರಗನುಜನಾಗಿ ದಾನವೇಂದ್ರ ಗೊಲಿದು ನೀಂ ನಿಂದು ಬಾಗಿಲಕಾವ ಗೊಲ್ಲನಂದಮೇನಿದೈ 3 ಹಡೆದತಾಯ ಶಿರವಪಿಡಿದು ಕಡೆದ ಭಾರ್ಗವ ಮಡದಿಚೋರನನ್ನು ಕೊಂದ ಒಡೆಯ ರಾಘವ 4 ಮಾವ ಕಂಸನ ಕೊಂದ ವಸುದೇವನಂದನ ಮಾಧವ 5 ಮತ್ತೆ ತ್ರಿಪುರ ಸತಿಯರ ಚಿತ್ತಕಲಕಿದ ಉತ್ತಮಾಶ್ವವನ್ನೆ ಹತ್ತಿ ಕಲ್ಕಿಯೆನಿಸಿದ 6 ಉರಗಶಯನ ಗರುಡಗಮನ ಪರಮಪಾವನ ವರದ ಶೇಷಶಿಖರಧಾಮ ಶ್ರೀನಿಕೇತನ 7
--------------
ನಂಜನಗೂಡು ತಿರುಮಲಾಂಬಾ
ಈತ ಲಿಂಗದೇವ ಶಿವನು ಆತ ರಂಗಧಾಮ ವಿಷ್ಣು ಮಾತ ಕೇಳೊ ಮಂಕು ಮನುಜ ಮನದ ಅಹಂಕಾರ ಬಿಟ್ಟು ಪ. ವೇದಕ್ಕೆ ಸಿಕ್ಕಿದನೀತ ವೇದನಾಲ್ಕು ತಂದನಾತ ಬೂದಿ ಮೈಯೊಳು ಧರಿಸಿದನೀತ ಪೋದಗಿರಿಯ ಪೊತ್ತನಾತ 1 ವ್ಯಾಧನಾಗಿ ಒಲಿದನೀತ ಮಾಧವ ಮಧುಸೂದನನಾತ ಮದನನ್ನ ಉರಿಹಿದನೀತ ಮದನನಪಡೆದಾತನಾತ 2 ಗಂಗೆಯ ಪೊತ್ತವನೀತ ಗಂಗೆ ಪದದಿ ಪಡೆದನಾತ ತುಂಗ ಹೆಳವನಕಟ್ಟೆ ಲಿಂಗ ಅಂತರಂಗ ರಂಗನಾಥ 3
--------------
ಹೆಳವನಕಟ್ಟೆ ಗಿರಿಯಮ್ಮ
ಏನು ಪೇಳಲಿ ಹರಿಯ ಚರ್ಯ ಎಂತು ಪೊಗಳಲಿ ಪ ಗಾನಲೋಲ ಜ್ಞಾನಪೂರ್ಣ ಶ್ರೀನಿವಾಸನ ಅ.ಪ ಭಾರ ಪೊತ್ತನ ಖಳನ ಮಡುಹಿ ವೇದರಾಶಿ ಅಜಗೆಯಿತ್ತನ 1 ಕರದಿಕೊಡಲಿ ಪಿಡಿದು ಅಡವಿ ಚರಿಸಿದಾತನ 2 ಪುಣ್ಯ ಮೂರುತಿ ಕಲ್ಕಿ ಗುರುರಾಮವಿಠಲನ 3
--------------
ಗುರುರಾಮವಿಠಲ
ಕನಸಿನಲಿ ಕಂಡೆನಾ-ಶ್ರೀನಿವಾಸನಾ ಕಾಣದಾತನ ||ಕನಸಿನಲಿ|| ಪ ಶರದಾಭಗಾತ್ರನ-ಶಂಪಾಭೋಜ್ವಲ ಕರಪೀತವಸ್ತ್ರನ ಸಾರಸಾಕ್ಷನ ಶರದಿಂದುವಕ್ತ್ರನ ಸಿರಿಯನುರದಿತಾನಿರಿಸಿಕರಗಳಿಂ ದರಚಕ್ರಗಳನು ಧರಿಸಿರ್ಪಾತನ 1 ಕಾಮನಂ ಪೆತ್ತನ ಕಾಕುಸ್ಥನಿಗೆ ಕಾಮಿತವಿತ್ತನ ಕೌಸ್ತುಭಮಣಿ-ಧಾಮವಂ ಪೊತ್ತನ ಹೇಮ ಸೂತ್ರಮಣಿ ದಾಮಭೂಷಣ ಸ್ತೋಮ ದಿವ್ಯಗುಣರಾಮಣೀಯನ ||ಕನಸಿನಲಿ || 2 ಸುರವೃಂದಾನಂದದಿ-ಸ್ತುತಿಸುತ್ತ ಬರುತಿರೆ ತೂರ್ಯಾರವದಿ ಸಿತಛತ್ರಾದ್ಯುರುತರ ರಾಜ ಚಿಹ್ನದಿ ಗರುಡನೇರಿ ನಿಜ ಶರಣರ ಪೊರೆಯುವ ವರದಪುಲಿಗಿರಿ ವರದವಿಠಲನ ||ಕನಸಿನಲಿ|| 3
--------------
ಸರಗೂರು ವೆಂಕಟವರದಾರ್ಯರು
ಕಂಬು ಕಂಧರ ಸತತ ಬಿಡದೆ ರಕ್ಷಿ ಸಂಬೋಜೋಧ್ಭವನ ತಾತ ಪ ಜಂಭಾರಿ ವೈರಿಕುಲಾಂಬುಧಿ ಕುಂಭಜ ಕುಂಭಿಣಿಸುರ ನಿಕÀರುಂಬ ಪೋಷಕದೇವ ಅ.ಪ ನಳಿನಾಕ್ಷ ನರಕೇಸರಿ ನಂಬಿದೆ ನಿನ್ನ | ಶೌರಿ || ಸಿರಿ | ನಿಲಯ ನಿತ್ಯಾನಂದ ಎಲರುಣಿ ವರಶಾಯಿ ಕಲುಷಸಂಹಾರಕ ಜಲದರಿಪುವಿನ ತನಯಾನನುಜನ ಕಲಹದೊಳು ಜೈನಿದನ ತಾತನ ಕುಲವಿರೋಧಿಯ ಧ್ವಜನ ಜನಕಗೆ ಒಲಿದು ಬೆಂಬಲನಾದ ಕೇಶವ 1 ನಿಗಮ ರಕ್ಷಕ ಕೂರ್ಮಕೀಟ ಮಾನವ ಮೃಗವಟು ಪರಶುರಾಮ ಅಗಜೇಶ ಶರಕಾಲ | ನಗಪತಿ ವರದನೆ ಅ(ಗ)ಗಜರಾಜನ ಮಗಳಿಗೋಸುಗ ನಗುತ ಮಡದಿಯನಗಲಿ ಬಂದು ಜಗದಿ ಪೊತ್ತನ ನಗದಿ ನೆಲಸಿದ ತ್ರಿಗುಣ ವರ್ಜಿತ ಖಗವರೂಧನೆ 2 ಮಂದರೋದ್ಧರ ವಿಶಾಲಮಹಿಮನಾದ ಸಿಂಧೂರ ಪರಿಪಾಲ | ಕಂದರ್ಪಪಿತ ಶಾಮಸುಂರವಿಠಲನೆ ವಂದಿಸುವೆನು ಎನ್ನ | ಬಂಧನ ಬಿಡಿಸಯ್ಯ ಫಣಿ ಪತಿ ಪತಿ ವಿರೋಧಿ | ಪು ರಂದರಾರ್ಯರ ವೃಂದ ವಂದಿತ ನಂದ ಸುತ ಗೋವಿಂದ ಗೋಪತಿ 3
--------------
ಶಾಮಸುಂದರ ವಿಠಲ
ಪತಿಮಂದಿರದಲಿ ನೀ ಸುಖವಾಗಿ ಬಾಳು ನಿನ್ನ ಪತಿಗಹಿತಕರ ಸಂಗ ತ್ಯಜಿಸಮ್ಮ ಮಗಳೆ ಪ ಉದಯ ಪೂರ್ವಕೆ ಎದ್ದು ಹರಿಯ ಸ್ಮರಣೆಯ ಮಾಡು ಮುದದಿ ಗುರುಹಿರಿಯರಿಗೆ ವಂದನೆಯ ಮಾಡು ಮದನನಯ್ಯನ ಭಜಕರನು ಕಂಡು ನಲಿದಾಡು ಪದುಮನಾಭಗೆ ಪಟ್ಟದರಸಿಯಾಗಮ್ಮ1 ರತ್ನಾಕರನು ತಂದೆ ಎನುತ ಗರ್ವಿಸಬೇಡ ಮತ್ತೆನಗೆ ಸರಿಯಾರು ಎಂದೆನಲು ಬೇಡ ಚಿತ್ತಜನಯ್ಯನ ಮನವರಿತು ನಡೆಯಮ್ಮ ಹೊತ್ತು ಹೊತ್ತಿಗೆ ಪತಿಯ ಸೇವೆ ನಿರತಳಾಗಿ2 ಬಿಟ್ಟಕಂಗಳು ಮುಚ್ಚದವನು ಎಂದೆನಬೇಡ ಬೆಟ್ಟ ಬೆನ್ನಿಲಿ ಪೊತ್ತನೆನಲು ಬೇಡ ಗಟ್ಟಿ ನೆಲವನು ಕೆದರಿ ಅಲಸಿದನೆನಬೇಡ ಹೊಟ್ಟೆಯ ಕರುಳನು ಬಗೆದವ ನೆನೆಬೇಡ 3 ಕಡುಲೋಭಿದಾನ ಬೇಡಿದನು ಎಂದೆನಬೇಡ ಪೊಡವಿಪಾಲಕರ ಕೆಡಹಿದನು ಎನಬೇಡ ಮಡದಿಯ ತಂದ ಕಪಿವಡೆಯನು ಎನಬೇಡ ತುಡುಗತನದಿ ಪಾಲ್ಬೆಣ್ಣೆ ಚೋರನೆಂದೆನಬೇಡ 4 ಉಡಿಗೆ ಉಡದ ಮಾನಗೇಡಿ ಇವನೆನಬೇಡ ತುಡಗತನದಿ ರಾಹುತನಾದನೆನಬೇಡ ಕಡಲಶಯನ ಕಮಲನಾಭ ವಿಠ್ಠಲನ ಗುಣ ಒಡೆದು ಪೇಳದೆ ಗುಟ್ಟಾಗಡಗಿಸಿ ನಡೆಯಮ್ಮ 5
--------------
ನಿಡಗುರುಕಿ ಜೀವೂಬಾಯಿ
ಭೋರನೆ ನಿಜಪರಿವಾರವೆಲ್ಲವೂ ಸೇರಿ ಪ. ಮಕರಕುಂಡಲಧರ ವಿಕಸಿತ ಮುಖಪದ್ಮ ಕೌಸ್ತುಭ ಶುಭ ವನಮಾಲಿ ಭಕುತ ವತ್ಸಲನೆಂಬ ಬಿರುದು ತೋರುತ ನಮ್ಮ ಶಕುತಿಗೆ ಸರಿಯಾದ ಸೇವೆ ಕೊಳ್ಳುವೆನೆಂದು 1 ಒಡೆಯನೀ ಗತಿಯೆಂಬ ಬಡವ ಭಕ್ತರನೆಲ್ಲು ಬಿಡನೆಂದು ಭವಸಿಂಧು ಪೊತ್ತನಿಂದು ತಡವ ಮಾಡದಲೆ ಸಂಗಡ ಬಂದೀ ನಿಲಯದಿ ನಡು ಮನೆಯಲಿ ನಿಂದು ಕೊಡುವೆ ಸೌಖ್ಯವನೆಂದು 2 ತುಳಸಿಧಾಮ ಸುಶೋಭಿತ ನಮಗೆ ಬೆಂ- ಬಲವಾಗಿರುವ ಸರ್ವ ಸ್ಥಳಗಳಲಿ ಅಲಸನಾಗದೆ ಶೇಷಾಚಲವಾಸನು ಶ್ರೀಭೂ- ಲಲನೆಯರೊಡಗೂಡಿ ನಲಿವ ಸಂಭ್ರಮದಿಂದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮಾಕಾಂತೆಯರಸನ ತೋರೆನಗಮ್ಮ ಸಾಕುವ ಸರಸನ ತೋರೆ ಪ. ಕಣ್ಣೆರಡು ಸಾಸಿರುಳ್ಳವನಂಗದಿ ಕಣ್ಣಮುಚ್ಚಿ ಮಲಗಿಪ್ಪನ ಹೊನ್ನು ಮಣ್ಣಿನ ರಾಶಿಯಿಂದ ಕೂಡಿಪ್ಪನ ಮಣ್ಣ ಕೂಡಿದ ದಿವ್ಯಕಾಯನ 1 ಮಣ್ಣಿನ ದೇವರ ಮುಖದಿಂದ ಮಣ್ಣಿಗೆ ಸೆಣಸುವರ ಭುಜದಿಂದ ಮಣ್ಣ ಪಾ(ನಾ?)ಡುವರ ತೊಡೆಯಲ್ಲಿ ಮೂಡಿ ಮತ್ತೆ ಮಣ್ಣ ಚರಣದಿ ಪುಟ್ಟಿಸಿದನ 2 ಕಣ್ಣ ಮುಚ್ಚದನ ಕಣ್ಣ ತೋರದನ ಹೆಣ್ಣಾಳಿನುರುಬಿನಲಿ ಮುಕ್ಕಣ್ಣನ ಮಣ್ಣನಳೆದು ಮಣ್ಣಿನರಸನೊರೆಸಿದ ಮಣ್ಣಿನ ಮಗಳನಾಳಿದನ 3 ಮಣ್ಣ ಪೊತ್ತನಧರಿಸಿದ ಚಿಣ್ಣನ ಮಣ್ಣ ಮೆದ್ದ ಸಣ್ಣ ಬಾಯೊಳು ಮಣ್ಣನೆ ತೋರಿದ ನಂದನರಾಣಿಗೆ ತಲ್ಲಣ ಹಬ್ಬವ ಕೊಟ್ಟ ಧೀರ4 ಕನ್ನಗಳ್ಳರ ಕೊಂದು ಕಣ್ಣಿಲ್ಲದವರಿಗೆ ಕಣ್ಣ ತರಿಸಿಕೊಟ್ಟ ಚದುರನ ಕಣ್ಣಿಲ್ಲದವನಿಗೆ ಕಣ್ಣ ಕೊಟ್ಟನಂತ ಕಣ್ಣುಳ್ಳ ರೂಪವ ತೋರ್ದನ 5 ಹೆಣ್ಣ ಮೋಹಿಸುವನ ಸುಟ್ಟುರಿ- ಗಣ್ಣನ ಮರುಳು ಮಾಡಿದನ ಹೆಣ್ಣನುಂಗುಟದಿ ಪಡೆದು ತಮ್ಮಣ್ಣನ ಮಣ್ಣಿನೊಡೆಯ ಮಾಡಿಸಿದನ 6 ಮಣ್ಣಿಗಾಗಿ ಬಂದ ಮಣ್ಣನಾಳಿದ ದುರ್ಜನ ದಾನವರ ಕೊಂದನ ಹೆಣ್ಣು ಮಣ್ಣೊಲ್ಲದ ವಾದಿರಾಜನಿಗೆ ಪ್ರಸನ್ನನಾದ ಹಯವದನನ 7
--------------
ವಾದಿರಾಜ
ಮಾಧವ ನಮ್ಮ ಶ್ರೀಧವ ಬಾಧೆಪಡಿಸದೆ ತನ್ನ ಪಾದದಾಸರ ಕಾಯ್ವ ಪ ನಿರುತ ನೀರೊಳು ನಿಂದ ಈತ ಚಾರು ನಿಗಮಗಳ ತಂದ ಬಲು ಭಾರ ಪೊತ್ತನು ಬೆನ್ನಲಿಂದ ಆಹ ಕೋರೆದಾಡೆಯಲಿಂದ ಘೋರದೈತ್ಯನ ಸಂ ಹಾರವ ಮಾಡಿ ಭೂಭಾರವನಿಳುಹಿದ 1 ಅರಮನೆಕಂಬದಲಿಂದ ಕಡು ಘೋರ ರೂಪವ ತಾಳಿ ಬಂದ ಮಹ ದುರುಳನುದರ ಬಗಿದುಕೊಂದ ಆಹ ಧರೆಯನೀರಡಿ ಮಾಡಿವ ದನುಜನ ತುಳಿದು ಚರಣದಾಸರ ಮನದೊರವಿತ್ತು ಸಲಹಿದ 2 ವೀರತನದಿ ಕೊಡಲಿಪಿಡಿದ ಧರೆಯ ಸಾರಕ್ಷತ್ರಿಯಮೂಲವಳಿದ ದೇವ ಧಾರುಣಿಯೊಳು ನರನಾದ ಅಹ ತೋರಿ ವಿಪಿನವಾಸ ಮೀರಿದಸುರನ ಕೊಂದು ಮೂರುಲೋಕದ ಕಷ್ಟ ದೂರಮಾಡಿದ ಶೂರ 3 ಗೊಲ್ಲಕುಲದಿ ಜನಿಸಿದ ಪುಂಡ ಬಿಲ್ಲಿನಾಟವ ರಚಿಸಿದ ವೀರ ಖುಲ್ಲ ಕಂಸನ ಮದ ಮುರಿದ ಆಹ ನಲ್ಲೇರ್ಹದಿನಾರು ಸಹಸ್ರಬಲ್ಲಿದತನದಾಳಿ ಎಲ್ಲ ಭಕ್ತರ ಇಷ್ಟಸಲ್ಲಿಸಿ ಪೊರೆದನು 4 ಸಾರಿಬತ್ತಲೆ ಕದಲಿದ ಪರಮ ನಾರಿಯರ ವ್ರತ ಭಂಗಿಸಿ ಮೆರೆದ ಮೂರುಪುರದ ಗರ್ವಮುರಿದ ಆಹ ಪಾರುಮಾಡಿದ ಸುರರ ಘೋರಕಂಟಕದಿಂದ ಏರಿದ ಹಯ ನಮ್ಮ ಧೀರ ಶ್ರೀ ಗುರು ರಾಮ 5
--------------
ರಾಮದಾಸರು
ಮುಖ್ಯಪ್ರಾಣನೀತಾ | ನಮಗೆ | ಮುಖ್ಯ ಪ್ರಾಣನೀತ ನಮಗೆ ಮೂಲ ಗುರುವಿತ ಸತತಾ | ಸೌಖ್ಯವನು ಕರುಣಿಸಿ ನಮ್ಮ ಸಖ್ಯನಾಗಿ ಪೊರೆವನೀತಾ ಪ ನಿಗಮವೇದ್ಯನೀತಾ ನಂಬಿಕೆಯನೀವ ಚರಣ | ದುರಿತ ರಾಗಗಳ ಕಳೆನೀತಾ | ವಿಗಡ ವಿಷವನುಂಡನೀತಾ | ಹಗಲ ವಲ್ಲಭನಲ್ಲಿ ಸಂಮೊಗದವನಾಗಿ | ಓದಿದನೀತಾ | ಅಗಣಿತಾದವಿದ್ಯನೀತಾ 1 ಜಗವ ಪಾಲಕನೀತಾ ಚತುರ | ಯುಗದಿ ಬಲುದಿಟ್ಟನೀತಾ | ಪೆಗಲಿಲಿ ಭೂಮಿ ಮಗಳ ಪತಿಯ | ಜಗಳದಲ್ಲಿ ಪೊತ್ತನೀತಾ | ಹಗೆಯ ದುಶ್ಶಾಸನ್ನ ವಡಲ ಬಗೆದು ಮುಂದೆ ಚತುರ | ಮೊಗದವನಾಗಿ ವಾನರ ಬಲವ | ನಗವ ತಂದೆತ್ತಿದವನೀತಾ 2 ವರ ವೃಕೋದರನೀತಾ ಸಕಲ ಸುರರೊಳು ಬಲು ಪ್ರಬಲನೀತಾ | ಪರಮ ಮಂಗಳ ಪದದಿ ಭವದ | ಶರಧಿ ಬತ್ತಿಪನೀತಾ | ಒಮ್ಮೆ ಸ್ಮರಿಸಿದಾಕ್ಷಣ ಬರುವನೀತಾ | ಮರುತಾವತಾರನೀತಾ ತನ್ನ | ಶರಣ ಜನರ ಪೊರೆವನೀತಾ 3 ಅಸಮ ಸಾಹಸನೀತಾ ಭಕ್ತರ ವಶವಾಗಿ ವೊಳಗಿಪ್ಪನೀತಾ | ನೋಡಿ ಪೊರೆವನೀತಾ | ಅಸುರ ಲಿಂಗಭಂಗವ ಮಾಡಿ | ಬೆಸನೆ ಮತವ ಕಟ್ಟುವನೀತಾ | ಹಸನಾದ ಮುನಿ ಈ ರಕ್ಕಸರೆದೆಯ ಶೂಲನೀತಾ 4 ಜ್ಞಾನ ಪೂರ್ಣನೀತಾ ಶ್ರೀಮದಾನಂದತೀರಥನೀತಾ | ದಾನ ಧರ್ಮ ಪ್ರೇರಕನೀತಾ | ಪ್ರಾಣನೀತಾ ನಾಶವಿಲ್ಲದೆ ನಾನಾ ಮಹಿಮನೀತಾ | ನಮಗೇನೇನು ಕೊಡುವನೀತಾ | ಗಾನವಿಲೋಲ ವಿಜಯವಿಠ್ಠಲ ಧ್ಯಾನ ಮಾಳ್ಪನೀತಾ 5
--------------
ವಿಜಯದಾಸ
ಯಾದವರರಸಿಲ್ಲೆ ಸಿಕ್ಕಿದನಲ್ಲೆ ಪ. ಸಿಕ್ಕಿದನಲ್ಲೇ ದಕ್ಕಿದನಲ್ಲೆಅ.ಪ.ಗೋಪಿಯ ಕಂದನೆ ಬೆಣ್ಣೆಯ ತಿಂದನೆಪೂತಣಿಯ ಕೊಂದನೆ ಮಧುರೆಗೆ ಬಂದನೆ 1 ಮಾಧವನಿವನೇ ವೇದಕೆ ಸಿಲುಕನೆಸಾಧುಗಳರಸನೆ ಸಜ್ಜನಪೋಷನೆ 2 ಜಾಣರಜಾಣನೆ ಗಾನಕೆ ಪ್ರೀಯನೆಮುನಿಗಳ ವಂದ್ಯನೆ ಮನ್ಮಥಪಿತನೆ 3 ಕಾಮಿತವೀವೋನೆ ಭಾಮಾಪ್ರೀಯನೆನೇಮದಿಭಜಿಪರ ಸದನಕ್ಕೆ ಬರುವನೆ 4 ವೇದವ ತಂದನೆ ಗಿರಿಯ ಪೊತ್ತನೆಬೇರನು ತಿಂದನೆ ಕಂಬದಿ ಬಂದನೆ 5 ದಾನವ ಬೇಡನೆ ಕ್ಷತ್ರೇರ ಕೊಂದನೆವನಕೆ ಪೋದನೆ ದುರುಳರ ಕೊಂದನೆ6 ಕಾಳೀಯ ಭಂಜನೆ ಬತ್ತಲೆ ನಿಂದನೆಹಯವನೇರ್ದನೆ ಹಯವದನನೆ7
--------------
ವಾದಿರಾಜ
ಶ್ರೀಲೋಲನಲ್ಲೆ ಭಾಮೆ ಅವಲೋಲನಲ್ಲೆ ಭಾಮೆ ಪ ಲೋಲನೊ ಬಾಲನೊ ಗೋಪಾಲನೊ ನಾನರಿಯೆ ಅ.ಪ. ಇಂದು ತಮನ ಕೊಂದು ವೇದವ ತಂದವನಲ್ಲೆ ಭಾಮೆ ಅವತಂದವನಲ್ಲೆ ಭಾಮೆ ತಂದವನೊ ಬಂದವನೊ ಅದರಂದವನು ನಾನರಿಯೆ 1 ಅರ್ಥಿಯಿಂದಲಿ ಗಿರಿಯ ಬೆನ್ನಿಲಿ ಪೊತ್ತವನಲ್ಲೆ ಭಾಮೆ ಅವ ಪೊತ್ತನಲ್ಲೆ ಭಾಮೆ ಪೊತ್ತವನೊ ತೆತ್ತವನೊ ಅದರರ್ಥವನು ನಾನರಿಯೆ 2 ವರಾಹ ಸ್ವಾಮಿಯಲ್ಲೆ ಭಾಮೆ ಅವ ಸ್ವಾಮಿಯಲ್ಲೆ ಭಾಮೆ ಸ್ವಾಮಿಯೊ ಪ್ರೇಮಿಯೊ ಬಹು ಕಾಮಿಯೊ ನಾನರಿಯೆ3 ತರಳ ಪ್ರಹ್ಲಾದನಿಗೊಲಿದ ನರಹರಿಯಲ್ಲೆ ಭಾಮೆ ಅವ ನರಹರಿಯಲ್ಲೆ ಭಾಮೆ ನರಹರಿಯೊ ಸಿರಿದೊರೆಯೊ ಆ ಉರವಣಿಗೆಯ ನಾನರಿಯೆ4 ನೆಲನ ಈರಡಿ ಮಾಡಿ ಅಳೆದ ಚೆಲುವನಲ್ಲೆ ಭಾಮೆ ಅವ ಚೆಲುವನಲ್ಲೆ ಭಾಮೆ ಚೆಲುವನೊ ಮಲೆವನೊ ಅಂಡಲೆವನೊ ನಾನರಿಯೆ 5 ಕೊಡಲಿ ಮಸೆದು ರಾಯರನೆಲ್ಲ ಕೆಡಹಿದನಲ್ಲೆ ಭಾಮೆ ಅವ ಕೆಡಹಿದನಲ್ಲೆ ಭಾಮೆ ಕೆಡಹಿದನೊ ಮಡುಹಿದನೊ ಆ ತೊಡರವನು ನಾನರಿಯೆ 6 ಸೀತಾ ಚೋರನ ಕೊಂದ ರಘುನಾಥನಲ್ಲೆ ಭಾಮೆ ಅವ ನಾಥನಲ್ಲೆ ಭಾಮೆ ನಾಥನೊ ಖ್ಯಾತನೊ ಆ ಮಾತನು ನಾನರಿಯೇ 7 ಮಾವನ ಕೊಲಲು ಮಧುರೆಗೆ ಪೋದ ದೇವನಲ್ಲೆ ಭಾಮೆ ಅವ ದೇವನಲ್ಲೆ ಭಾಮೆ ದೇವನೊ ಭಾವನೋ ಗೋ ಕಾವನೊ ನಾನರಿಯೆ8 ತ್ರಿಪುರಾಂಗನೆಯರ ವ್ರತವನಳಿದ ಚಪಳನಲ್ಲೆ ಭಾಮೆ ಅವ ಚಪಳನಲ್ಲೆ ಭಾಮೆ ಚಪಳನೊ ವಿಪುಳನೊ ಆ ವಿಪರೀತವ ನಾನರಿಯೆ 9 ಓಜೆಯಿಂದ ತೇಜಿಯನೇರಿದ ರಾಜನಲ್ಲೆ ಭಾಮೆ ಅವ ರಾಜನಲ್ಲೆ ಭಾಮೆ ರಾಜನೊ ಭೋಜನೊ ಆ ಸೋಜಿಗವ ನಾನರಿಯೆ 10 ಸೃಷ್ಟಿಗೆ ಕರ್ತನು ವಿಜಯವಿಠ್ಠಲನಲ್ಲೆ ಭಾಮೆ ಅವ ವಿಠ್ಠಲನಲ್ಲೆ ಭಾಮೆ ವಿಠ್ಠಲನಾದರೆ ಇಷ್ಟೊಂದ್ಯಾತಕೆ ದಟ್ಟಡಿಗಳಿಗೊಂದಿಸುವೆ 11
--------------
ವಿಜಯದಾಸ
ಸ್ಮರಿಸೆನ್ನ ಮನವೇ ಯಾದವ ರಾಯನಾ| ಸರಸಿಜೊವನುತ ಭಕುತರ ಪ್ರೀಯನಾ ಪ ವರನಿಗ ಮೋಯಿದವನಾ ಶೀಳಿ ಎಳಹಿದವನಾ| ಶರಧಿ ಮಥನ ಗೋಸುಗನ ಪೊತ್ತನಾ ಧರಣಿಯಾ ತನ್ನ ಕೋರೆ ದಾಡಿಲಿರಿಸಿದಿಹನಾ| ಶರಣ ಪ್ರಲ್ಹಾದನ ಸುಸ್ಮರಣೆ ಗೊಲಿದನಾ1 ಭೂಸುರೋತ್ತಮನಾಗಿ ದಾನವ ಬೇಡಿದನಾ| ಹೇಸದೇ ಕ್ಷತ್ರಿಯರ ಕುಲ ಕೊಂದನಾ| ವಾಸು-ಕ್ಯಾ ಭರಣನ ಧನುವ ಮುರಿದವನಾ| ವಾಸವಾತ್ಮಜ ಮಿತ್ರ ದೇವಕಿ ಕಂದನಾ2 ಪತಿವೃತೆ ನಾರಿಯರ ವೃತಭಂಗ ಮಾಡಿದನಾ| ಸಿತ ಹಯವೇರಿದ ಶ್ರೀ ಜಗದೀಶನಾ| ಪತಿತ ಪಾವನನಾದಾ ಅನಂತಾವತಾರನ| ನುತ ಗುರು ಮಹಿಪತಿ ನಂದನ ಪ್ರೀನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಡಲದಾಟಿದ ಬಲುಧೀರನೆ ಬಂದುಒಡಲ ಹೊಕ್ಕವರಿಗುದಾರನೆ ಪ.ಬಿಡದೆ ಭಕ್ತರ ಕೈಯವಿಡಿದು ರಕ್ಷಿಸುವ ಎನ್ನೊಡೆಯ ಹನುಮರಾಯ ಅಡವಿಯನಿಲಯಅ.ಪ.ದೃಢದಿಂದ ಲಂಕೆಯ ಪೊಕ್ಕನೆ ದೇವಮೃಡನಿಂದ ಪೂಜೆಗೆ ತಕ್ಕನೆಪೊಡವಿಯ ಮಗಳನು ಕಂಡನೆ ಕಿತ್ತುಗಿಡ ವನಗಳ ಫಲ ಉಂಡನೆಅಡಿಗಡಿಗೊದಗಿದ ಕಿಡಿಗೇಡಿ ರಕ್ಕಸರ್ಹೊಡೆದು ಪುರವನೆಲ್ಲ ಕಿಡಿಗಂಜಿಸಿದ ಧೀರ 1ತಡೆಯದೆ ಸುದ್ದಿಯ ತಂದನೆ ಜಗದೊಡೆಯ ರಾಮನ ಮುಂದೆ ನಿಂದನೆಪಿಡಿದೆತ್ತಿ ತರುಗಿರಿ ಪೊತ್ತನೆ ಕಪಿಗಡಣಕ್ಕೆ ಒಬ್ಬನೆ ಕರ್ತನೆಜಡಧಿ ದಾರಿಯಕಟ್ಟಿನಡೆದು ರಾವಣನೆದೆಒಡೆಗುದ್ದಿಕಾಳಗಜಡಿದುಮಾಡಿಸಿದೆ2ಪೆಡಕಿಲಾಸನವಿತ್ತು ದಾತಗೆತುಷ್ಟಿಬಡಿಸಿದೆ ಶ್ರೀರಘುನಾಥಗೆಕಡುವೇಗ ಸಂಜೀವ ಸಲಿಸಿದೆ ನೊಂದುಪುಡಿವಟ್ಟ ಕಟಕವ ನಿಲಿಸಿದೆಬಡವರಾಧಾರಿ ನಿನ್ನಡಿಗೆರಗುವೆ ಲೇಸಕೊಡು ಪ್ರಸನ್ವೆಂಕಟ ಒಡೆಯನನಿಲಯ3
--------------
ಪ್ರಸನ್ನವೆಂಕಟದಾಸರು