ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಕ್ಕುವ ತುಪ್ಪಕೆ ಕೈಯಿಕ್ಕುವೆ ನಾನು ಪ ಚಕ್ರಧರ ಪರಮಾತ್ಮನೊಬ್ಬನಲ್ಲದಿಲ್ಲವೆಂದು ಅ.ಪ ಕರಿ ಮೊರೆಯಿಡಲು ಕಂಡುನೆರೆದ ಬೃಂದಾರಕರು ಅಂದು ಪೊರೆದರೆ ಬಂದುಕರದಲೊಪ್ಪುವ ಮುತ್ತಿಗೆ ಕನ್ನಡಿಯ ನೋಡಲೇಕೆಭರದಿ ಗಜೇಂದ್ರನ್ನ ಕಾಯ್ದ ಹರಿಯೆ ಪರದೈವವೆಂದು 1 ಮತಾಂತರದಲ್ಲಿ ಭಗವದ್ಗೀತೆಯನದ್ವೈತವೆಂದುವಾತಗುದ್ಧಿ ಕೈಗಳೆರಡು ನೋಯಿಸಲೇಕೆ‘ಏತತ್ಸರ್ವಾಣಿ ಭೂತಾನ್ಯೆಂ’ಬ ಶೃತ್ಯರ್ಥವ ತಿಳಿದುಜ್ಯೋತಿರ್ಮಯ ಕಿರೀಟಿ ಅಚ್ಯುತಾಂತರ್ಯಾಮಿಯೆಂದು 2 ತಾನೆ ಪರಬ್ರಹ್ಮನೆಂಬ ಮನುಷ್ಯಾಧಮನು ತಾನುಜ್ಞಾನಹೀನನಾಗೆ ಲೋಕದಾನವನೆಂದುಭಾನು ಕೋಟಿ ತೇಜೋತ್ತಮ ವರದ ಶ್ರೀಹರಿಯೆಂಬಜ್ಞಾನವೆ ಕೈವಲ್ಯದ ಸೋಪಾನವೆಂದು ಸಭೆಯಲ್ಲಿ 3 ತಪ್ಪಾದ ವಿಚಾರದಿಂದ ತತ್ತರವ ಪಡಲೇಕೆತಪ್ಪು ಶಾಸ್ತ್ರ ವೋದಿ ದೇಹ ದಂಡಿಸಲೇಕೆಕಲ್ಪ ಕಲ್ಪಾಂತರದಲ್ಲಿ ವಟಪತ್ರಶಯನನಾಗಿಮುಪ್ಪು ಮೊದಲಿಲ್ಲದ ಮುಕುಂದನಲ್ಲದಿಲ್ಲವೆಂದು 4 ಶಕ್ತಿ ಶೂನ್ಯನಿವನೆಂದು ಸಂಶಯವ ಪಡಲೇಕೆಕೃತ್ಯದಿಂದ ನೋಡೆ ಶ್ರೀಕೃಷ್ಣನೊಬ್ಬನೆಹತ್ತಾರು ಸಾಸಿರ ನೂರು ಗೋಪಸ್ತ್ರೀಯರನ್ನು ಆಳಿನಿತ್ಯ ಬ್ರಹ್ಮಚಾರಿಯೆನಿಪ ನಿಷ್ಕಳಂಕನೊಬ್ಬನೆಂದು 5
--------------
ವ್ಯಾಸರಾಯರು
ನಾ ನಿನ್ನ ಮರೆತರೆ ನೀ ಯನ್ನ ಮರೆವರೆ ದೀನ ವತ್ಸಲ ರಂಗ ದಾನವಾಂತಕ ಕೃಷ್ಣ ಪ ಜ್ಞಾನಗಮ್ಯನೆ ನಿನ್ನ ಧ್ಯಾನ ದೊಳಿಟ್ಟೆನ್ನ ಮಾನದಿಂದಲಿ ಕಾಯೋ ಶ್ರೀನಿವಾಸ ಪ್ರಭುವೆ ಅ.ಪ. ದಿನಕರನ ಜನರು ನೆನೆಯದೆ ಬಿಟ್ಟರೆÉ ಜನರನ್ನು ಬೆಳಗದೆ ದಿನಕರ ಬಿಡುವನೆ ಹೀನವಿಷಯದಿ ಮುಳುಗಿ ತೇಲುವ ಎನ್ನ ನೀನಾಗಿ ಪೊರೆದರೆ ಘನತೆಯಲ್ಲವೆ ದೇವಾ 1 ಪೆತ್ತ ಮಕ್ಕಳು ಬಲು ಕತ್ತೆಗಳಾದರು ಹೆತ್ತ ತಾಯಿಯು ತಾನು ಎತ್ತದೆ ಬಿಡುವಳೆ ಮತ್ತನಾನಾದರು ಉತ್ತಮೋತ್ತಮಸ್ವಾಮಿ ವಾತ್ಸಲ್ಯತೋರಯ್ಯ ಹಸ್ತಿವರದ ಧೊರೆಯೇ 2 ಗೋವತ್ಸಹಾಲಿಗೆ ಗೋವಿನಗುದ್ದಲು ತವಕದಿ ಉಣಿಸದೆ ಗೋವು ಬಿಡುವುದೇ ತವಪಾದ ಕಮಲದಿ ಅವಿನೀತನಾದರೆ ಸುವಿವೇಕ ಜ್ಞಾನವ ಈಯದಿರುವರೇನೋ 3 ಕರಿ ಧೃವ ಭಕ್ತರ ಪೊರೆಯಲಿಲ್ಲವೆ ನೀನು ಘೋರಪಾಪಗಳ ತರಿದೆ ಅಜಾಮಿಳಗೇ ವರವಿತ್ತು ವ್ಯಾಧಗೆ ವರಕವಿಯೆನಿಸಿದೇ ಭಾರವೆ ನಾನಿನಗೆ ಕರುಣಾಸಾಗರ ರಂಗ 4 ಜಯಮುನಿ ಅಂತರ ವಾಯುವಿನೊಳಗಿಪ್ಪ ರಾಯ ಶ್ರೀಕೃಷ್ಣವಿಠಲನೆ ನಂಬಿದೆ ಕಾಯವಚ ಮನದಿ ಜೀಯನೆ ಗತಿಯೆಂಬೆ ನೋಯಿಸದೆ ಭವದಿ ದಯಮಾಡಿ ಸಲಹಯ್ಯ 5
--------------
ಕೃಷ್ಣವಿಠಲದಾಸರು
ಸೊಲ್ಲು ಕೇಳುತ ಈಗ ಮೆಲ್ಲನೆ ಎನ್ನ ಮನದಲ್ಲಿ ನಿಲ್ಲೊ ಪ. ಪುಲ್ಲಲೋಚನ ದೇವ ಎಲ್ಲಿಗು ಪೋಗದೆ ಉಲ್ಲಾಸಪಡಿಸುತ ನಿಲ್ಲೊ ಹೃದಯದಲಿ ಅ.ಪ. ಸ್ಥಾವರ ಜಂಗಮ ವ್ಯಾಪ್ತನಾಗಿಹ ದೇವ ದೇವ ಎನ್ನ ಮನದಿ ನಿಲುವುದು ಘನವೆ ಶ್ರೀವರ ನೀನೀಗ ಕಾವನೆಂದರಿತಿರೆ ಸಾವಕಾಶವಿದೇಕೆ ಭಾವಜನಯ್ಯನೆ 1 ಇಷ್ಟು ದಿನವು ನಿನ್ನ ಮುಟ್ಟಿ ಪೂಜಿಸಲಿಲ್ಲ ಸಿಟ್ಟೇನೊ ನಿನಗಿದರ ಗುಟ್ಟು ತಿಳಿಯದೆ ಬಿಂಕ ಕೊಟ್ಟು ಅಭಯ ಸಲಹೊ ಇಷ್ಟ ಸ್ಥಾನದಿ ನಿನ್ನ ಮುಟ್ಟಿ ಪೂಜಿಸಿರುವೆ 2 ಸರಿಯಲ್ಲ ನಿನಗಿದು ಕರೆದರೆ ಭಕ್ತರು ತ್ವರಿತದಿಂದಲಿ ಬರುವ ಬಿರುದಿಲ್ಲೆ ನನಗೆ ಸರಿ ಬಂದರೆ ಬಾರೊ ಬಾರದಿದ್ದರೆ ಬಿಡೊ ಅರಿತು ನಿನ್ನಯ ನಾಮ ಅರುಹುವ ಮತಿ ನೀಡೊ 3 ಕಾರ್ಯಕಾರಣಕರ್ತ ಪ್ರೇರ್ಯಪ್ರೇರಕರೂಪ ಉರ್ವಿಗೊಡೆಯ ಸರ್ವ ನಿರ್ವಾಹಕ ಗರ್ವರಹಿತಳ ಮಾಡಿ ಸರ್ವದಾ ಪೊರೆದರೆ ಸರ್ವಾಧಿಪತಿಯೆಂದು ಸಾರ್ವೆನೊ ನಾನಿಂದು 4 ಸೃಷ್ಟಿ ಸ್ಥಿತಿ ಲಯಗಳಿಗೆ ಕರ್ತನೊಬ್ಬನೆ ನೀನು ಶ್ರೇಷ್ಠನಾಗಿರುವೆಯಾ ಸರ್ವರಿಗೆ ಬಿಟ್ಟಿರುವೆಯೊ ಜಗದ ಅಷ್ಟೂ ವಸ್ತುಗಳಿಂದ ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲದೇವ 5
--------------
ಅಂಬಾಬಾಯಿ