ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರಗತನಾಗಿರಲು ಶ್ರೀಕೃಷ್ಣನು ಪ ಪುರಜನಗಳಿಗಿನ್ನು ಕೊರತೆಗಳುಂಟೆ ಅ.ಪ ಪರಮದಯದಿ ತನ್ನ ನೆರಳಿನೊಳೆಲ್ಲರ ಪೊರೆಯುತಿರುವ ನಮ್ಮ ಸಿರಿವಲ್ಲಭನು 1 ನಾಡಿನ ಭಕುತರ ಕೂಡಿಸಿ ಮುದದಲಿ ಬೇಡಿದ ವರಗಳ ನೀಡುವ ದೊರೆಯು 2 ಬಿಡಿಬಿಡಿ ನಿಮ್ಮಯ ಕಡು ಕ್ಲೇಶಗಳೆಂದು ಗಡಗಡ ದುಂದುಭಿ ಹೊಡೆಸುವ ಧೀರನು 3 ಪತಿತ ಪಾವನೆಂದು ಪ್ರಥೆಯನು ಪೊಂದಿಹ ಕ್ಷಿತಿಸುರರೊಡೆಯನು ಅತಿಸುಲಭದಿಲಿರೆ 4 ಎನ್ನನು ಸೇವಿಸಿ ಧನ್ಯರಾಗಿ ಎಂದು ಸನ್ನೆಯನೀವ ಪ್ರಸನ್ನ ಶ್ರೀಮಾಧವ 5
--------------
ವಿದ್ಯಾಪ್ರಸನ್ನತೀರ್ಥರು
ಸಕಲ ಕಲ್ಯಾಣ ಗುಣಾಢ್ಯಗೆ ಮಂಗಳಂ ನಿಖಿಲ ದೋಷದೂರಗೆ ಮಂಗಳಂ ಭಕುತರ ಸಂತತ ಪೊರೆಯುತಿರುವ ನಮ್ಮ ರುಕುಮಿಣಿ ಭಾಮಾರಮಣಗೆ ಮಂಗಳಂ 1 ಯಾದವ ಕುಲಭೂಷಣನಿಗೆ ಮಂಗಳಂ ಸಾಧು ಸುಧಾಮ ಸಖಗೆ ಮಂಗಳಂ ಪಾದ ಸೇವಕರಿಗೆ ಮೋದವ ನೀಡುವ ಮಾಧವನಿಗೆ ಸಂತತ ಶುಭಮಂಗಳಂ 2 ವಿವಿಧ ಸೌಭಾಗ್ಯ ಸಂಪನ್ನಗೆ ಮಂಗಳಂ ರವಿಶತ ಸಮತೇಜಗೆ ಮಂಗಳಂ ಸುವಿನಯದಲಿ ಬೇಡುವರಿಗೆ ಶುಭಗಳ ಜವದಲಿ ಕೊಡುವ ಪ್ರಸನ್ನಗೆ ಮಂಗಳಂ 3
--------------
ವಿದ್ಯಾಪ್ರಸನ್ನತೀರ್ಥರು