ಒಟ್ಟು 167 ಕಡೆಗಳಲ್ಲಿ , 47 ದಾಸರು , 147 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೋ ಬಾರೋ ಭವಸುತ ಚರಣನೆ ಸಾರಸುಗುಣ ಪರಿಪೂರಿತ ಕರುಣನೆ ಪ ಚರಣ ಕಮಲಗಳಿಗೆರಗುವೆ ಭಕ್ತಿಯಲಿ ಭರದಲಿ ಯನ್ನನು ಪೊರೆಯಲು ಮುದದಲ್ಲಿ 1 ಅರಿದರ ವರಗಳ ಕರದಲಿ ಪಿಡಿಯುತ ಕರಿಯನು ಪೊರೆಯುವ ತ್ವರೆಯಲಿ ಬಹುವೋಲ್ 2 ಪರಮ ಪುರುಷಫಣುಗಿರಿ ಶಿಖರಾಲಯ ವರದ ವಿಠಲ ಸುಖಕರಕಮಲಾಲಯ 3
--------------
ಸರಗೂರು ವೆಂಕಟವರದಾರ್ಯರು
* ಎಂಥಾದ್ದೊ ಶ್ರೀ ತಿರುಪತಿ | ಎಂಥಾದ್ದೊ ಪ. ಎಂಥಾದ್ದೊ ತಿರುಪತಿ ಕ್ಷೇತ್ರ | ಸ ತ್ಪಾಂಥರಿಗಿಲ್ಲಿ ಸುಗಾತ್ರ | ಆಹ ಕಂತುಪಿತನು ಇಲ್ಲಿ ನಿಂತು ಭಕ್ತರಿಗೆಲ್ಲ ಸಂತಸಪಡಿಸುವನಂತಾದ್ರಿನಿಲಯ ನಿನ್ನೆಂದಾದ್ದೊ ಅ.ಪ. ನಾಗಾದ್ರಿಗಿರಿಯ ಮೆಟ್ಟುಗಳು | ಅ ಯೊಗ್ಯರಿಗಿದು ದುರ್ಲಭಗಳು | ಅಲ್ಲಿ ಭಾಗವತರ ಸಮ್ಮೇಳಗಳು | ಶಿರ ಬಾಗಿ ವಂದಿಪರು ಜನರುಗಳು | ಆಹ ಪೋಗುತ ಗಾಳಿಗೋಪುರವ ಕಂಡೆರಗಿ ಮುಂ ದ್ಯಾಗುತ ಸಜ್ಜನ ನೀಗುವರು ದುಃಖ1 ಹರಿಮಂದಿರ ಮಹಾದ್ವಾರ | ಬಹು ಜ ನರು ಕೂಡಿಹರು ವಿಸ್ತಾರ | ಬೀದಿ ನಡೆದು ಪದ್ರಕ್ಷಿಣಾಕಾರ | ಭೂ ವರಹನ ಸ್ವಾಮಿ ಕಾಸಾರ | ಆಹ ಹರುಷದಿಂದಶ್ವತ್ಥ ತರುವ ಕಂಡೆರಗಿ ಹರಿ ದರುಶನಕಾಗಿ ಹಾರೈಸುವ ಜನತತಿ 2 ಸ್ವಾಮಿಪುಷ್ಕರಣಿಯ ಸ್ನಾನ | ಮನ ಕಾನಂದಪ್ರದ ಸುಜ್ಞಾನ | ಭಾನು ತಾನುದಿಸುವನು ಮುಂದಿನ | ಸುಖ ಕೇನೆಂಬೆ ಹರಿಯ ದರ್ಶನ | ಆಹ ನೀನೆ ಗತಿಯೆಂದು ನಂಬಿದವರ ಪೊರೆವ ಭಾನುಪ್ರಕಾಶ ಹಣ ಕಾಣೀಕೆ ಕೈಕೊಂಬ 3 ಗರುಡ ಸ್ಥಂಭವನೆ ಕಾಣುತ್ತ | ಬಾಗಿ ಕರಮುಗಿದು ಒಳದ್ವಾರ ಪೊಗುತ | ವಿಮಾನ ಗಿರಿ ಶ್ರೀನಿವಾಸಗೆರಗುತ್ತ | ಬಂದು ವರ ತೊಟ್ಟಿ ತೀರ್ಥ ಕೊಳ್ಳುತ್ತ | ಆಹಾ ತರತರದ ಕಾಣಿಕೆ ಕೊಪ್ಪರಿಗೆಗೆ ಸುರಿಯುತ್ತ ನಿರುತ ನೀ ಸಲಹೆಂದು ಮೊರೆಯಿಡೆ ಭಕ್ತರು 4 ಗರುಡನ ಎದುರೊಳು ನಿಂದು | ಸ್ವಾಮಿ ಗರುವ ರಹಿತ ತಾ ಬಂದು | ಬಂದ ವರಭಕ್ತರನೆ ಕಾಯ್ವ ಬಿರುದು | ಇಂಥ ಹರಿಗೆ ಅಮೃತೋದಕವೆರೆದು | ಆಹಾ ಜರಿಯ ಪೀತಾಂಬರ ಉಡಿಸಿ ಸರ್ವಾಭರಣ ಹರಿಗೆ ಶೃಂಗರಿಸಿಪ್ಪ ಪರಿಯ ವರ್ಣಿಸಲಳವೆ 5 ಶಿರದಲಿ ಪೊಳೆವ ಕಿರೀಟ | ಕ ಸ್ತೂರಿ ತಿಲಕವು ಸುಲಲಾಟ | ಸುರ ನರರ ಪಾಲಿಪ ವಾರೆ ನೋಟ | ಕರ್ಣದಿ ಕುಂಡಲ ಮಾಟ | ಆಹ ವರ ಸಂಪಿಗೆಯ ಪೋಲ್ವ ನಾಸಿಕದ ಕದಪುಗಳ್ ಮೆರೆಯೆ ಕನ್ನಡಿಯಂತೆ ಮುಗುಳು ನಗೆಯ ಚೆಲ್ವ 6 ಸಿರಿವತ್ಸ ಕೌಸ್ತುಭಹಾರ | ಕಂಠ ಕರಶಂಖ ಚಕ್ರವಪಾರ | ಸುರ ನರರಿಗಭಯ ತೋರ್ಪಧೀರ | ಕರ ದ್ವರವ ಕೊಡುವಂಥ ಉದಾರ | ಆಹ ತರತರದ ಪುಷ್ಪಗಳ್ ನವರತ್ನ ತುಳಸಿಯ ಮೆರೆವೊ ಹಾರಗಳನು ಧರಿಸಿರ್ಪ ಗಂಭೀರ 7 ವಕ್ಷಸ್ಥಳದಲ್ಲಿ ಲಕುಮಿ | ಹರಿ ಅವನಿ | ಜಗ ರಕ್ಷಿಪ ಮಮಕುಲಸ್ವಾಮಿ | ಸರ್ವ ಸಾಕ್ಷಿಯಾಗಿದ್ದು ತಾ ಪ್ರೇಮಿ | ಆಹ ಪಕ್ಷಿವಾಹನ ಸುರಾಧ್ಯಕ್ಷ ಖಳ ಶಿಕ್ಷ ಪಕ್ಷವಹಿಸಿ ಸುರರ ರಕ್ಷಿಪ ಸರ್ವದ 8 ನಡುವಿನ ನಾಭಿ ವಡ್ಯಾಣ | ಮೇಲೆ ಕುಂದಣ | ನೆರೆ ಪಿಡಿದುಟ್ಟ ಪೀತಾಂಬ್ರವರ್ಣ | ಕಾ ಲ್ಕಡಗ ರುಳಿಯು ಗೆಜ್ಜೆ ಪೂರ್ಣ | ಆಹ ಮಡದಿಯರುಭಯದಿ ಪರಿಶೋಭಿಸುತಿರೆ ಪಾದ ದೃಢಭಕ್ತರನೆ ಪೊರೆವ 9 ನೋಟಕತಿ ಚಲುವ ಗಂಭೀರ | ಭಕ್ತ ಕೂಟದಿ ಮೆರೆಯುತಪಾರ | ಉತ್ಸ ಸಾರ | ಭೋಕ್ತ ಸಾಟಿರಹಿತ ಬರುವ ಧೀರ | ಆಹ ಕೋಟಿದೇವತೆಗಳ ನೋಟದಿಂ ಪೊರೆಯುವ ದಾಟಿಸುವ ಭವನಾಟಕಧರದೇವ 10 ಮಚ್ಛಾದ್ಯನೇಕ ಅವತಾರ | ಬಹು ಇಚ್ಛೆಯಿಂದಲಿ ಭಜಿಸುವರ | ಕಾಯ್ವ ಮೆಚ್ಚುತ ಮನದಲಿ ನಾರ | ಸಿಂಹ ಸ್ವೇಚ್ಛೆÉ್ಛಯಿಂ ಮೆರೆವ ಜಗತ್ಸಾರ | ಆಹ ತುಚ್ಛಕರು ವಸನ ಬಿಚ್ಚಿ ಸೆಳೆಯುತಿರೆ ಇಚ್ಛೆಯರಿತು ಲಲನೆ ರಕ್ಷಿಸೆನಲು ಪೊರೆದ 11 ಎಲ್ಲೆಲ್ಲಿ ನೋಡಲು ಭಕ್ತ | ಜನ ರಲ್ಲಲ್ಲಿ ನೆರೆಯುತ ಮುಕ್ತಾ | ಧೀಶ ನಲ್ಲದಿನ್ನಿಲ್ಲೆಂದು ಸ್ತುತಿಸುತ್ತ | ಶ್ರೀಶ ಇಲ್ಲೆ ಬಾರೆಂದು ಕರೆಯುತ್ತ | ಆಹ ಸೊಲ್ಲು ಲಾಲಿಸೊ ಎನಲು ಬಲ್ಲಿದ ಭಕ್ತರ ಸೊಲ್ಲಿಗೆ ಒಲಿಯುವ 12 ಬುತ್ತಿ ಪೊಂಗಲು ಮಾರುವರು | ಜನ ರರ್ಥಿಯಿಂದದನು ಕೊಂಬುವರು | ಗೀತ ನೃತ್ಯ ವಾದ್ಯಗಳಿಂ ಕುಣಿಯುವರು | ಅನ್ನ ಅರ್ಥಿಯಿಂ ದಾನ ಮಾಡುವರು | ಆಹ ಎತ್ತ ನೋಡಲು ಮನಕತ್ಯಂತ ಆನಂದ ನಿತ್ಯ ಉತ್ಸವಗಳು ಸತ್ಯಾತ್ಮ ಕೈಗೊಂಬ 13 ಇಂತು ಮೆರೆವೊ ಕ್ಷೇತ್ರ ಘನವು | ನೋಡಿ ನಿಂತು ವರ್ಣಿಸಲಸದಲವು | ಜಗ ದಂತರಾತ್ಮಕನ ವೈಭವವು | ಗುರು ಅಂತರ್ಯಾಮಿ ಶ್ರೀನಿಧಿಯು | ಆಹ ಇಂತು ಬ್ರಹ್ಮೋತ್ಸವ ನಿಂತು ರಥದಿ ಬರುವ ಕಂತುಪಿತ ಶ್ರೀ ಭೂಮಿಕಾಂತೇರ ಒಡಗೂಡಿ14 ಶ್ರೀಪತಿ ಜಲದೊಳಾಡೀದ | ಕೂರ್ಮ ರೂಪದಿಂ ಗಿರಿಯನೆತ್ತಿದ | ಬಹು ಪಾಪಿ ಕನಕಾಕ್ಷನ ಕೊಂದ | ನೃಹರಿ ರೂಪ ವಾಮನ ಭೃಗುಜನಾದ | ಆಹ ಚಾಪಖಂಡನ ಕೃಷ್ಣಚರಿಸಿ ಬತ್ತಲೆ ಕಲ್ಕಿ ಗೋಪಾಲಕೃಷ್ಣವಿಠ್ಠಲನ ಮಹಾಕ್ಷೇತ್ರ15
--------------
ಅಂಬಾಬಾಯಿ
ಎಲ್ಲಿ ಜನರೆಲ್ಲನೋಡುವರು ನೋಡುವರು ಗುರುಗಳನಾ | ಪ್ರಹ್ಲಾದನೆಂದು ಹೊಗಳುವರು 1 ದಾಸಜನರೆಲ್ಲ ನೋಡುವರು ಮುನಿಯೆಂದು ಹೊಗಳುವರು 2 ಮಂತ್ರಾಲಯದ ದೊರೆಗಳು ಬಿಡಿಸಿ ಕಳುಹುವರು 3 ಎಂಥ ಕÀರುಣಾಳು ಸಂತಾನಕೊಟ್ಟುಸಲಹುವರು 4 ಬಂದ ಜನರನ್ನು ಪೊರೆಯುವರು ನೆಂತೆಂದು ಕರಿಯುವರು 5 ತೋರಮುತ್ತಿನ ಹಾರವನು ಕೈಯ ಮುಗಿವೇನು 6 ಅಂಗಾರ ಧರಿಸುವರು ಮಂತ್ರಾಕ್ಷತೆಯಿಂದ | ಕುಷ್ಟ ರೋಗಗಳನೆಲ್ಲ ಕಳೆಯುವರು 7 ವಂಧ್ಯುರಿಗೆ ಕಂದರಾಗುವರು ಆಗುವರು ಗುರುಗಳು | ಜನರು ಆನಂಧದಿಂದ ಭಜಿಸುವರು 8 ಆನಂದಕ್ಕೆ ಅಳವಲ್ಲ ಅಳವಲ್ಲ ಗುರುಗಳನ | ನಿಂತು ನೋಡುವರ ನೆಲೆಯಿಲ್ಲ 9 ಎಲ್ಲದುರಿತಗಳ ಪರಿಹಾರ ಪರಿಹರಿಸುವ ಲಕ್ಷ್ಮೀ ವಲ್ಲಭ | ನರಸಿಂಹ ವಿಠಲನ ನೆನೆವೇನೆ 10
--------------
ಓರಬಾಯಿ ಲಕ್ಷ್ಮೀದೇವಮ್ಮ
ಕನಸನು ಕಂಡೆನು ಕೇಳೌ ಘನ ಶ್ರೀ ಗುರು ಬಂದು ಶಾಸ್ತ್ರ ತತ್ವವ ಪೇಳ್ದಂ ಮನಸಿನ ಸಂಶಯವಳಿಯಿಸಿ ತನಯಗೆ ರಾತ್ರಿಯೊಳು ತೋರಿದಂ ಸತ್ಪಥಮಂ ಕಂದ ಕನಸನು ಕಂಡೆನು ಕೇಳೌ ಶ್ರೀಗುರುಭರದಿಂ ತಾ ಬಂದೂ ಪ ತನಯನ ಸಂಶಯವಳಿಯಿಸಿ ಪರತರ ಗತಿಯನು ತಾ ಕೊಡುವ ಅ.ಪ ಶ್ರೀಹರಿ ಪೂಜೆಯು ಸ್ತೋತ್ರವು ಚಿಂತನೆ-ಶ್ರೀಹರಿಮಂತ್ರವನೂ ಶ್ರೀಹರಿ ಲಾಂಛನ ಧರಿಸುತ ಸಂತತ ವಿಠಲನ ಭಜಿಸೆಂದು 1 ಬಂಧುರದೇಗುಲ ವರಕ್ಷೇತ್ರದೊಳಾನಂದವನೋಡುತಲೀ ನಿಂದಿಹ ಪರಿಪರಿ ಸಾಧುವೈಷ್ಣವರಿಗೊಂದನೆಮಾಡೆಂದ 2 ಸತ್ಯಪ್ರಬಂಧವು ಅಷ್ಟಾಕ್ಷರಿಜಪತತ್ವ ಸುದ್ವಯಮಂತ್ರ ನಿತ್ಯಹೃದಯದೊಳು ಸೋಹಂಭಾವದಿ ಭಕ್ತಿಯೊಳ್ಬೆರೆಯೆಂದ 3 ವರಮಹದೇವನ ಪುರಶ್ರೀರಂಗನಚರಣವ ಗುರಿಮಾಡೀ ಮರೆಯದೆ ಧ್ಯಾನಿಸು ನಾನೇ ನಿನ್ನನು ಪೊರೆಯುವೆನೆಂತೆಂದ 4
--------------
ರಂಗದಾಸರು
(2) ಸರಗೂರು ರಂಗನಾಥನೇ ವೋ ರಂಗನಾಥನೇ ಪ ಅಂಗಜಕೋಟೀರನೆ ತಿಂಗಳಥರ ಜಂಗಮಂದಿರ ಮಂಗಳ ಹರಿ ಮಾಧವನೇ 1 ಶ್ರೀವರ ದಾಮೋದರ ನಿಜದೇವ ರಂಗನಾಥ 2 ಶರಣರನ್ನು ಪೊರೆಯುವ ತರುಣೀಮಣಿ ಕರುಣಾಕರ ಶರಣೆಂದೆನು ಸರಗೂರಿನ ರಂಗಾ 3 ವಂದಿಪೆ ಶ್ರೀ ತುಲಶಿರಾಮಾ ಸುಂದರಗಿರಿ ಯೆಂದಿಗೊ ನೀ ಬಾರೆಂದಿಪುದು ಮಂದರಧರ 4
--------------
ಚನ್ನಪಟ್ಟಣದ ಅಹೋಬಲದಾಸರು
(ಉ) ಕ್ಷೇತ್ರವರ್ಣನೆ (1) ಮೇಲುಕೋಟೆ ಹರಿಯೇ ದೈವಶಿಖಾಮಣಿ ಹರಿಯೇ ಸದ್ಭಕ್ತ ಬಂಧು ಹರಿಯೇ ಪೂಜ್ಯಂ ಹರಿಪೂಜೆಯೆ ಪಾಪಕ್ಷಯ ಹರಿಪೂಜೆಯೆ ಪರಮಪುಣ್ಯದಾಲಯಮದರಿಂ ಕಂದ ಹೃದಯದೊಳರ್ಚಿಸುವೆ ಪ ಪರಮಸುಗತಿಯನು ಬೇಡುವೆಸಂತತ- ಮರೆಯದೆ ಪಾಲಿಸು ವರಗಳನು ಅ.ಪ ಹರುಷದಿ ಪರಮನೆ ನೀನೆಂದು ಉರುತರ ಸೌಖ್ಯಗಳನು ಕೊಡುವ 1 ಮನ್ನಿಸಿಭಕ್ತರಪೊರೆಯುವಧೀರನೆ ಅನ್ಯರಕಾಣೆನುನಾನಿನ್ನು ನಿನ್ನನೆ ನಂಬಿದೆ ನರಹರಿಮೂರ್ತಿಯೆ ಇಂದೀ ಸಂಸೃತಿ ಜಾರಿಸುವ 2 ಲೋಕದ ವಾಸನೆ ಶಾಸ್ತ್ರದವಾಸನೆ- ಸಾಕೈದೇಹದ ವಾಸನೆಯ ಈ ಕಡುವಾಸನೆ ಹೆಚ್ಚಿಸುತ 3 ಮಂಗಳ ಯದುಗಿರಿವಾಸ ಪರಮಗುರು ರಂಗನೆ ನಿಜಕೃಪೆದೋರುತಲಿ ಮಂಗಳಶಾಸನ ಗೈವುತ ಸಜ್ಜನ ಸಂಗದೊಳೆನ್ನನು ಸೇರಿಸುವ 4
--------------
ರಂಗದಾಸರು
(ರುದ್ರದೇವರು) ಬಾರೋ ಬ್ಯಾಗನೆ ಗಿರಿಜಾರಮಣನೆ ಪ ನಾರದನುತ ಪಾದಾರವಿಂದ ತೋರಲು ಅ.ಪ ಭಕುತರ ವೃಂದಕೆ ಭಕುತಿ ಮುಕುತಿಯಿತ್ತು ಯುಕುತಿಲೆÉ ಪೊರೆಯುವ ಶಕುತಿಯ ತೋರಲು 1 ಭೂಮಿಯೊಳಿಹ ಸರ್ವ ಪಾಮರ ಜನರಿಗೆ ಕಾಮಿತಫಲವೆಲ್ಲ ಪ್ರೇಮದಿ ಈಯಲು 2 ಮಡದಿಯ ನುಡಿಗೆ ನಿನ್ನಡಿಗೆ ಬಂದಂಥ ಬಡವನ ಪೋದಂತೆ ತಡವ ಮಾಡದೆ ಈಗ 3 ಶಿರಿವತ್ಸಾಂಕಿತನೆಂದು ವರಶ್ರುತಿಗಳು ನಿನ್ನ ಕರೆದು ತ್ರಿಜಗದ ನರಪನೆ ಈಗಲೆ 4
--------------
ಸಿರಿವತ್ಸಾಂಕಿತರು
[ಶ್ರೀ ಪ್ರಾಣದೇವರ ಅನುಗ್ರಹವಿಲ್ಲದೆ ಶ್ರೀ ಹರಿಯು ಎಂದಿಗೂ ಒಲಿಯನೆಂಬ ಪ್ರಮೇಯ. ಪೂರ್ವಜನ್ಮದಲ್ಲಿ ವಾಲಿ ಹನುಮಂತನ ಅನುಗ್ರಹವಿಲ್ಲದ ಕಾರಣ ರಾಮನು ನಿಗ್ರಹಿಸಿದ. ಅರ್ಜುನನಾದಾಗ್ಗೆ ಭೀಮನು ಅಗ್ರಜನಾಗಿ ದಯ ಮಾಡಿದುದಕ್ಕೆ ಕೃಷ್ಣನು ಸಖನಾದ. ಮೂರನೆ ಜನ್ಮ ಜಯತೀರ್ಥರಾದಾಗ್ಗೆ ಜ್ಞಾನವಿತ್ತು ಕುಮತಗಳ ನಿರಾಕರಿಸಿದಿ ಪ್ರಾಣನ ಕೃಪೆಯಿಂದ ಎಲ್ಲ ಸೌಖ್ಯ ಗಂಟು. ಈಗಾದರು ಹಿಂದಿನಂತೆ ಪೊರೆಯೊ ಎಂದು ಪ್ರಾರ್ಥನೆ.] ಧ್ರುವತಾಳ ಹಿತಮಾಳ್ಪ ಜನಕನಾಗಿ ರಕ್ಷಸು ಎಂದೆಂಬೆನೆಪಿತೃ ಸಮಾನ ಜೇಷ್ಠನೆಂದೆಂಬ ವಿಧದಿ ಪಿತನೆ ಸರಿ ಎನಗೆ ಉಪಕಾರವ್ಯಾತಕಿನ್ನುಮಾತರಿಶ್ವನೆ ದೂರ ನೋಳ್ಪದೇನೊಭಾತೃನಾಗಿ ಎನ್ನ ಪಾಲಿಸು ಎಂದೆಂಬೆನೆನೋತ ಪುಣ್ಯಗಳಿಂದ ಹರಿಯು ತಾನೆ ಸ್ವತ ಏವ ಮಾಡಿದ ಈಗ ನುಡಿವದೇನೊಮಾತೃ ನೀನೆ ದೇಹ ಪೊರೆಯುವಲ್ಲಿಅತುಳ ಗುರುವಾಗಿ ಬೋಧಿಸು ಎಂದೆಂಬೆನೆಆತ್ಮ ಗುರುವಿಗೆ ನಿಜ ಗುರುವೆನಿಸಿದೆ ನಿತ್ಯನೂತನವಾಗಿ ಯಿದನು ಬೇಡಿಕೊಂಬುವದೇನುವೀತಿ ಹೋತ್ರನೆ ದೈತ್ಯ ಸಂತತಿಗೆಪ್ರತ್ಯಂತರ ಜನುಮದ್ವಯದಿ ನಿಜ ಮುಖದಿಂದಲೆಮತಿಯು ನೀಡಿದ ಮುಖ್ಯ ಗುರು ನೀನೆ ಪ್ರತಿಯಿಲ್ಲದೆ ಇದ್ದ ಇಷ್ಟನೇನೊ ಎನಗೆಗತಿ ಪ್ರದಾತನು ನೀನೆ ಆವಕಾಲಆಪ್ತನಾಗಿ ನೀನು ಸಲಹಬೇಕೆಂಬೆನೆ ಗತ ಜನ್ಮಗಳಲಿ ನೀನು ಮಾಡಿದುಪ-ಕೃತಿಗಳೆಣಿಸೆ ಈಗ ನಿನಗಿಂದಧಿಕವಾದಆಪ್ತನಾವನು ಎನಗೆ ಅರಸಿ ನೋಡಾಮತಿಯು ರಹಿತವಾದ ಜನುಮಗಳು ಬರಲಿಅತಿ ಹಿತ ನೀನೆ ಎನಗೆ ಇಹ ಪರದಿಅತಿಶಯ ಕೃಪಾನಿಧೆ ಗುರು ವಿಜಯ ವಿಠ್ಠಲರೇಯಅತಿ ಪೀಯನಾಗುವನು ನಿನ್ನ ದಯದಿ 1 ಮಟ್ಟತಾಳ ಬಾಂಧವನು ನೀನೆ ಎರಡು ಬಗೆಯಿಂದ ತಂದೆ ನಿನ್ನುಪಕಾರ ಅನಂತ ಜನುಮದಲಿಮಂದನಾದವ ನನು ತೀರಿಸಬಲ್ಲೆನೆಬಂಧು ಅನಿಮಿತ್ಯ ಗುರು ವಿಜಯ ವಿಠ್ಠಲ ನಿ-ನ್ನಿಂದಲಿ ಎನಗೆ ಅನುಗ್ರಹ ಮಾಡುವನೊ 2 ತ್ರಿವಿಡಿತಾಳ ನಿನ್ನ ಕರುಣಪೇಕ್ಷ ಮಾಡದಲೆ ಒಂದುಜನುಮ ಹರಿ ಕರುಣವಿಲ್ಲದಲೆ ಕಳದೇಅನಂತರದಿ ಎನ್ನ ಪುಣ್ಯ ಸಾಸಿರದಿಂದಅನುಜನಾದೆ ನಿನ್ನ ಕೃಪೆಯಿಂದಲಿಮನುಜ ಕೃತಿಯಾದರು ಪ್ರತಿಮದಲ್ಲಿ ಘನ್ನ ಚೇಷ್ಟಾದಿಗಳು ತೋರಿದಂತೆ ಎನ್ನ ನಾಮಕನಾಗಿ ಎನ್ನ ರೂಪದಿಂದಎನ್ನ ಕೃತ್ಯಗಳೆಲ್ಲ ನೀನೆ ಮಾಡಿಉನ್ನತವಾದ ಕೀರ್ತಿ ತಂದು ಇತ್ತು ಎನ್ನಜನ್ನರ ಮಧ್ಯದಲಿ ಶ್ರೇಷ್ಠನೆನಸಿಪನ್ನಗ ತಲ್ಪನ್ನ ಕರವಶನೆನನಿಸಿದಿನಿನ್ನ ಕರುಣಕೆ ಎಣೆ ಆವದಯ್ಯಾಎನ್ನ ಸ್ವಭಾವದಿಂದ ಹರಿ ತಾನು ಇನಿತಾದ ಮನ್ನಣೆ ಮಾಡುವನೆ ಎಂದಿಗನ್ನನಿನ್ನುಪಕಾರವೆಂಬ ವನ್ನಧಿಯೊಳಗೆ ನಿರುತಮುಣಗಿ ಇಪ್ಪೆನಯ್ಯಾ ತೆರವಿಲ್ಲದೆ ಚನ್ನ ಪ್ರಸನ್ನ ಗುರು ವಿಜಯ ವಿಠ್ಠಲರೇಯನಿನ್ನಿಂದಲೆ ಎನಗೆ ಬಂಧುನಾದಾ 3 ಅಟ್ಟತಾಳ ದುರುಳ ಮತಗಳೆಂಬೊ ಮಾಯಿ ಗೋಮಾಯಿಗಳುಶಿರವೆತ್ತಿ ನೋಡದೆ ಪಲಾಯಧ್ವರಾದರು ಈತೆರವಾದ ಮಹತ್ಮಿ ನಿನ್ನದು ನಿನ್ನದುಮರಳೆ ಮಾತುಗಳನ್ನು ತೋರದಿದ್ದರನಿಗೆ (ರೆನಗೆ)ಕರುಣವಲ್ಲದೆ ಅನ್ಯಾಲೋಚನೆ ಇದಕ್ಕಿಲ್ಲಸುರಲೋಲ ಮಹಧೃತಿ ಗುರು ವಿಜಯ ವಿಠ್ಠಲರೇಯಪೊರೆವನು ನಿನ್ನಯ ಬಲದಿಂದಲಾವಾಗ 4 ಆದಿತಾಳ ಮೂರ್ತಿ ಗುರು ವಿಜಯ ವಿಠ್ಠಲರೇಯನಿನ್ನಿಂದ ಮಾಡಿಸುವ ವಸುಧಿಯ ವ್ಯಾಪಾರ 5 ಜತೆ ನಿಖಿಳ ಸೌಖ್ಯವೆ ಉಂಟುಉನ್ನತ ಮಹಿಮ ಗುರು ವಿಜಯ ವಿಠ್ಠಲ ಒಲಿವ || [ನಳ ನಾಮ ಸಂ|| ಚೈತ್ರ ಬ|| 12 ಆದಿತ್ಯವಾರ]
--------------
ಗುರುವಿಜಯವಿಠ್ಠಲರು
ಅಕ್ಷಯ ಗುಣಪೂರ್ಣ ಲಕ್ಷ್ಮೀರಮಣ ಪ ಕುಕ್ಷಿಯೊಳಗೆ ಜಗವಿಟ್ಟು ರಕ್ಷಿಪ ಸ್ವಾಮಿ ಈಕ್ಷಿಸಿ ಕರುಣ ಕಟಾಕ್ಷದಿ ಸತತ ಅ.ಪ. ಏಸೇಸು ಕಲ್ಪದಲ್ಲೂ ಈಶ ನೀನಿಹುದಯ್ಯ ದಾಸರು ಜೀವರ್ಕಳು ಕೃಪಾಳು ಕ್ಲೇಶ ಸುಖಂಗಳಿಗೆ ನೀನೆ ಸ್ವತಂತ್ರನೆಂದು ಸೂಸಿ ಪೇಳುತ್ತಲಿಹರು ಸಜ್ಜನರು ವಾಸುದೇವನೆ ಸರ್ವಾಸುನಿಲಯನೆ ಏಸೇಸು ಬಂದರು ದಾಸರ ಬಿಡದಿರು ನೀ ಸಲಹದೆ ಉದಾಸೀನ ಮಾಡಲು ಆಸರೆ ಯಾರಿನ್ನು ಶಾಶ್ವತ ವಿಭುವೆ 1 ನಿನ್ನಧೀನನÀವನು ನಿನ್ನ ದಾಸರ ಸೂನು ಎನ್ನುವ ಸಥೆಯಿಂದ ಮುಕುಂದ ನಿನ್ನನೆ ಬೇಡುವೆ ನಿನ್ನನೆ ಕಾಡುವೆ ಅನ್ಯಥಾ ಗತಿಗಾಣೆ ನಿನ್ನಾಣೆ ನಿನ್ನ ದಾಸರ ಪದವನ್ನು ಪಿಡಿದು ನಾ ನಿನ್ನನು ಸ್ತುತಿಸಿದೆನೆನ್ನುತ ಕೃಪೆಗೈದು ಬಿನ್ನಪ ಲಾಲಿಸಿ ಬನ್ನವ ಕಳೆದು ಘನ್ನ ಭಕುತಿಯಿತ್ತು ಧನ್ಯನ ಮಾಡೊ 2 ಶರಣರ ಮಹದೇವ ಶರಣರ ಬಿಡದೆ ಕಾವ ಶರಣರ ಉದ್ಧಾರ ಗಂಭೀರ ಶರಣ ರಕ್ಷಾಮಣಿ ಶರಣ ತ್ರಿದಶ ತರು ಶರಣ ಸುರಧೇನು ಎನಿಸಿನ್ನು ನಿರುತದಿ ಪೊರೆಯುವ ಬಿರುದಗಳರಿತು ಶರಣೆಂದು ನಿನ್ನಯ ಚರಣ ಕಮಲವನು ಮರೆಹೊಕ್ಕೆನು ಕಾಯೊ ಪರಮ ದಯಾಕರ ಕರಿರಾಜವರದ ಶ್ರೀಕಾಂತ ನಿಶ್ಚಿಂತ 3
--------------
ಲಕ್ಷ್ಮೀನಾರಯಣರಾಯರು
ಅಂಗನೇರು ಕೂಡಿ ಸ್ವರ ಸಂಗೀತದಿಂದಲೀಗ ಚಾರು ಚರಣಕೆ ಹರುಷದಿಂ ಬೇಗ ಮಂಗಳಾತ್ಮಕನಾದ ಶ್ರೀ ನರಶಿಂಗ ರಾಯನಿಗೆ ಶೃಂಗಾರದಿಂ ಜಯಮಂಗಳವೆಂದು ಪಾಡಿರೆ 1 ನೀನೆ ಗತಿಯೆಂದ ಮಾನಿನಿಯಳ ಮಾನ ಕಾಯ್ದವಗೆ ಸಾನುರಾಗದಿ ಧ್ಯಾನಿಸುತಲಿ ಶ್ರೀನಿವಾಸನಿಗೆ ಬಲು ಛಂದದಿ ಜಯ ಮಂಗಳವೆಂದು ಪಾಡಿರೆÉ 2 ಪೊಂದಿದ ಜನರನು ತ್ವರದಿ ಪೊರೆಯುವ ನಂದಕಂದನಿಗೆ | ವಂದಿಸಿ ಕರುಣದಿ ಸಿಂಧು ಶಯನಗೆ | ಆನಂದದಿಂದಲಿ ಶ್ರೀ ಶಾಮಸುಂದರಗೆ ಘನ ಮೋದದಿಂ ಜಯ ಮಂಗಳವೆಂದು ಪಾಡಿರೆÉ 3
--------------
ಶಾಮಸುಂದರ ವಿಠಲ
ಅನ್ಯರವಗುಣವ ಪೇಳುವನು ಬಲ್ಲವನೊ ಪ ಭಿನ್ನವಿಲ್ಲದ ನರನೇನ ಪೇಳುವನು ಅ.ಪ ಅನ್ಯರಿಂದಲು ಹೀನ ತಾನಾಗದಿಹನೆ 1 ದುರಿತವನು ತಾನೆ ಹೊರುವವನೆಂಥ ಮರುಳ 2 ಧರೆಯೊಳವನಿಂದಧಿಕ ಪಾಪಿ ಯಾರಿಹರು 3 ದೊರಕುವದು ಎಂದರಿತು ನಡೆವನೆ ಪುಣ್ಯಾತ್ಮ4 ಪೊರೆಯುವ ಸದಾನಂದ ಸುಖದಿ ಪರಮಾತ್ಮ 5
--------------
ಸದಾನಂದರು
ಅಹುದೋ ದೇವ ನೀ ದಯಯುತನೆಂಬುದು ಸಹಜವೋ ಎಲೆ ರಂಗ ಪ ಮಹದುಪಕಾರವ ಗೈವೆ ಜಗಕೆಲ್ಲ ಅಹುದೋ ಅಹುದೋ ಸಲೆ ಸಲಹುವ ಪಿತ ನೀ ಅ.ಪ ಅಜಗೆ ನೇತ್ರವನಿತ್ತೆ ಗಜಕೆ ಪ್ರಾಣವನಿತ್ತೆ ಅಜಮಿಳನಿಗೆ ಮೋಕ್ಷಪದವಿಯನಿತ್ತೆ ಭಜನೆಗೈಯುವ ತುಂಬುರು ನಾರದರಿಂಗೆ ನಿಜಸುಖ ಸಾಮ್ರಾಜ್ಯ ಪದವಿಯನಿತ್ತೆ 1 ತರಳನ ನುಡಿಕೇಳಿ ಕಂಬದೊಳುದಯಿಸಿ ದುರುಳರಕ್ಕಸನಶಿಕ್ಷಿಸಿದೆ ತರಳ ಧ್ರುವನು ಗೈದಾ ತಪಸಿಗೆ ನಲಿಯುತೆ ವರಸುಖಪದವಿತ್ತ ಕರುಣಾಕರನೀ 2 ಭೂತಳದೊಳು ಜನ್ಮವಾಂತಿಹ ಸಾಸಿರ ಚೇತನಾಚೇತನ ವಸ್ತುಗಳನು ನೀ ಪ್ರೀತಿಸಿ ಪೊರೆಯುವ ರೀತಿಯದಾಶ್ಚರ್ಯ ಏ ತೆರ ಪೇಳ್ದೊಡನಂತಮಹಿಮ ನೀ 3 ದೇವದೇವನೆ ನಿನ್ನ ಪಾವನಚರಣವು ದೇವಮುನಿಗಳೆಲ್ಲ ಸೇವಿಸಲರಿದೈ ಭಾವಜಪಿತ ರಾಮದಾಸಾಚೇತ ಸಾಕು ಜನ್ಮವಬಿಡಿಸೊ ಮಾವಿನಕೆರೆರಂಗಾ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಆಧಾರ ನೀನೆ ಶ್ರೀಹರಿ ಕಾಯೊ ದೊರೆ ಪ ಚಾರು ಚರಿತ ಮೂರುಲೋಕಕಾಧಾರ ನೀನೇ ಅ.ಪ ಸ್ವಾರಸ್ಯನೋಡಿ ನಿರಾಶೆಯಿಂದ ದೂರಾಗುವರು 1 ಧನಜನವು ಮನವು ಇಲ್ಲದವರೆಲ್ಲಾವನಜಾಕ್ಷ ನಿನ್ನ ನೆನಪು ಮಾಡದೆ ತೃಣಕೂ ಬಾರರು 2 ಜಾಗುಮಾಡದೆ ಬೇಗಾ ಬಾರಯ್ಯ 3 ಚನ್ನಕೇಶವ ಮನ್ನಿಸೊದೇವ ನಿನ್ನವನಿವ 4 ಪೊರೆಯುವನೀನಲ ಶರಣಜನರ ಪಾಲಕರುಣಾಲವಾಲ ಗುರುರಾಮ ವಿಠಲ ಸಿರಿಲೋಲ 5
--------------
ಗುರುರಾಮವಿಠಲ
ಆವೂರು ಈ ಊರು ಯಾವೂರು ಆದರೇನು ಪ ಕಾವೋರು ಶ್ರೀಹರಿ ಲೇಸಾಗಿ ಇರಲೂ ಅ.ಪ ನೀರಜನಾಭನ ಕಾಳಿಂಗ ಮಥನನ ಪಾರಿಜಾತವ ತಂದ ರುಕ್ಮಿಣಿ ಪತಿಯ ಸಾರುತ್ತ ಪಾಡುತ್ತ ಪೊಗಳುತ್ತಬೇಡುತ್ತ ಚರಣಾವ ನೆರೆನಂಬಿ ತಿರುಗುವ ದಾಸರಿಗೆ1 ಆರು ಆಳಿದರೇನು ಆರು ಅಳಿದರೇನು ಮಾರುವ ಧಾರಣಿ ಏರಿದರೇನು ಇಳಿದರೇನು ಊರೆಲ್ಲ ಎದುರಾದರೇನು ಹಿತವಾದರೇನು ಕರಿರಾಜವರದನ ಕೊನೇರಿ ವಾಸನ ಕರುಣವ ಪಡೆದವಗೆ 2 ಕಾಸು ಎಂದರೆ ಪ್ರಾಣ ಸಾಮಾನ್ಯಜನರಿಗೆ ಈ ಶರೀರವ ಕಷ್ಟದಿ ಬಿಡುವಾಗ ಬಾಹುದೈ ಪಾದ ಸೋಮಶೇಖರ ವಂದ್ಯ ಶೇಷಗಿರೀಶನ ದಾಸಾನು ಎಂತೆಂದು ಕುಣಿವವಗೆ 3 ಮೂರುಲೋಕದ ಅರಸು ಸಾರಂಗ ಪಾಣಿಯು ನೀರಜಭವಾಂಡ ಉದಯಕೆ ಕಾರಣ ಅಷ್ಟಕರ್ತ ಸಿರಿಪದ್ಮಜಾಸನ ವಂದ್ಯ ದೇವಾದಿದೇವನ ಮೀರಿ ನಡೆವುದುಂಟೆ ಈ ಚರಾಚರ ಜಗದೊಳು ಮನವೇ4 ಊರೆಲ್ಲನೆಂಟರು ಉಣಬಡಿಸುವರಿಲ್ಲ ಸಿರಿಯಿದ್ದಕಾಲಕ್ಕೆ ಎಲ್ಲರು ನೆಂಟರಯ್ಯ ಸಿರಿತನ ತಾ ತಪ್ಪಿ ಬಡತನ ಬಂದರೆ ನಡಿನಡಿಯೆಂಬರು 5 ಹರಿ ಊರು ನಮ್ಮೂರು ಹರಿವೋರು ನಮ್ಮೋರು ಹರಿನಾಮ ಬಂಧುವು ಹರಿನಾಮ ಬಳಗ ಹರಿಹರಿ ಎಂದರೆ ದುರಿತವು ಪರಿಹಾರ ಹರಿಗುರು ಚರಣವೆ ಪರಗತಿ ಸಾಧನ ಮನವೇ 6 ಕೋರಿ ಕೋರಿದ ವರವ ನೀಡುವ ಪ್ರಭುವು ಸಿರಿಜಯಮುನಿ ಹೃಸ್ಥವಾಯುಗ “ ಶ್ರೀ ಕೃಷ್ಣವಿಠಲಾ” ಸಾರಿದ ಜನರನು ಪೊರೆಯುವ ಕರುಣದಿ ನೆರೆನಂಬುಮನವೆ ಭಯಬೇಡ ಮನವೇ7
--------------
ಕೃಷ್ಣವಿಠಲದಾಸರು
ಇತ್ತೆ ಏತಕ್ಕೆ ಈ ನರಜನ್ಮವ ಸತ್ಯ ಸಂಕಲ್ಪ ಹರಿ ಎನ್ನ ಬಳಲಿಸುವುದಕೆ ಪ. ಬಂಧುಬಳಗವ ಕಾಣೆ ಇಂದಿರೇಶನೆ ಭವದಿ ಬೆಂದು ನೊಂದೆನೊ ನಾನು ಸಿಂಧುಶಯನ ಬಂದ ಭಯಗಳ ಬಿಡಿಸಿ ನೀನೆ ಪಾಲಿಸದಿರಲು ಮಂದಮತಿಗೆ ಇನ್ನು ಮುಂದೆ ಗತಿ ಏನೊ 1 ಕಾಣದಲೆ ನಿನ್ನನು ಕಾತರಿಸುತಿದೆ ಮನವು ತ್ರಾಣಗೆಡÀುತಲಿ ಇಹುದೊ ಇಂದ್ರಿಯಗಳೆಲ್ಲ ಪ್ರಾಣಪದಕನೆ ಸ್ವಾಮಿ ಶ್ರೀನಿವಾಸನೆ ದೇವ ಜಾಣತನವಿದು ಸರಿಯೆ ಫಣಿಶಾಯಿಶಯನ 2 ಸಾಧನದ ಬಗೆಯರಿಯೆ ಸರ್ವಾಂತರ್ಯಾಮಿಯೆ ಮಾಧವನೆ ಕರುಣದಲಿ ಕಾಯಬೇಕೊ ಹಾದಿ ತೋರದೊ ಮುಂದೆ ಮುಂದಿನಾ ಸ್ಥಿತಿಯರಿಯೆ ಛೇದಿಸೊ ಅಜ್ಞಾನ ಹೇ ದಯಾನಿಧಿಯೆ 3 ಸರ್ವನಿಯಾಮಕನೆ ಸರ್ವಾಂತರ್ಯಾಮಿಯೆ ಸರ್ವರನು ಪೊರೆಯುವನೆ ಸರ್ವರಾಧೀಶ ಸರ್ವಕಾಲದಿ ಎನ್ನ ಹೃದಯದಲಿ ನೀ ತೋರೊ ಸರ್ವ ಸಾಕ್ಷಿಯೆ ಸತತ ಆನಂದವೀಯೊ 4 ಆನಂದಗಿರಿನಿಲಯ ಆನಂದಕಂದನೆ ಆನಂದ ಗೋಪಾಲಕೃಷ್ಣವಿಠ್ಠಲಾ ಆನಂದನಿಲಯ ಶ್ರೀ ಗುರುಗಳಂತರ್ಯಾಮಿ ನೀನಿಂದು ಸರ್ವತ್ರ ಕಾಯಬೇಕಯ್ಯ 5
--------------
ಅಂಬಾಬಾಯಿ