ಒಟ್ಟು 14 ಕಡೆಗಳಲ್ಲಿ , 12 ದಾಸರು , 14 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕನಸನು ಕಂಡೆನು ಕೇಳೌ ಘನ ಶ್ರೀ ಗುರು ಬಂದು ಶಾಸ್ತ್ರ ತತ್ವವ ಪೇಳ್ದಂ ಮನಸಿನ ಸಂಶಯವಳಿಯಿಸಿ ತನಯಗೆ ರಾತ್ರಿಯೊಳು ತೋರಿದಂ ಸತ್ಪಥಮಂ ಕಂದ ಕನಸನು ಕಂಡೆನು ಕೇಳೌ ಶ್ರೀಗುರುಭರದಿಂ ತಾ ಬಂದೂ ಪ ತನಯನ ಸಂಶಯವಳಿಯಿಸಿ ಪರತರ ಗತಿಯನು ತಾ ಕೊಡುವ ಅ.ಪ ಶ್ರೀಹರಿ ಪೂಜೆಯು ಸ್ತೋತ್ರವು ಚಿಂತನೆ-ಶ್ರೀಹರಿಮಂತ್ರವನೂ ಶ್ರೀಹರಿ ಲಾಂಛನ ಧರಿಸುತ ಸಂತತ ವಿಠಲನ ಭಜಿಸೆಂದು 1 ಬಂಧುರದೇಗುಲ ವರಕ್ಷೇತ್ರದೊಳಾನಂದವನೋಡುತಲೀ ನಿಂದಿಹ ಪರಿಪರಿ ಸಾಧುವೈಷ್ಣವರಿಗೊಂದನೆಮಾಡೆಂದ 2 ಸತ್ಯಪ್ರಬಂಧವು ಅಷ್ಟಾಕ್ಷರಿಜಪತತ್ವ ಸುದ್ವಯಮಂತ್ರ ನಿತ್ಯಹೃದಯದೊಳು ಸೋಹಂಭಾವದಿ ಭಕ್ತಿಯೊಳ್ಬೆರೆಯೆಂದ 3 ವರಮಹದೇವನ ಪುರಶ್ರೀರಂಗನಚರಣವ ಗುರಿಮಾಡೀ ಮರೆಯದೆ ಧ್ಯಾನಿಸು ನಾನೇ ನಿನ್ನನು ಪೊರೆಯುವೆನೆಂತೆಂದ 4
--------------
ರಂಗದಾಸರು
ಇಂದ್ರಾಕ್ಷಿ ಸಲಹೆ ಬಂದು | ಸಂರಕ್ಷಿಸಿ ಇಂದ್ರಾಕ್ಷಿ ಸಲಹೆ ಬಂದು ಪ ಚಂದ್ರಶೇಖರನಂಕ ಸಂಸ್ಥಿತೆ ಚಂದ್ರ ಬಿಂಬಾನನೆ ದಯಾನ್ವಿತೆ ಇಂದ್ರ ಮುಖ ಸುರಗಣ ಸಮರ್ಚಿತೆ ತಂದ್ರ ಪರಿಹೃತೆ ಭಕ್ತತತಿ ಹಿತೆ ಅ.ಪ. ಅರಿಯದ ತರಳನಮ್ಮ | ನಿನ್ನಂಘ್ರಿ ಸೇವಿಪ ಮೆರೆವ ಭಾಗ್ಯವ ನೀಡಮ್ಮ | ಮರೆಯದಿರಮ್ಮಾ ಶರಣ ಜನರನು ಪೊರೆವೆನೆನ್ನುತ ಕರದಿ ಪಿಡಿದಿಹೆ ಬಿಡದೆ ಉನ್ನತ ದರವಿಯನು ಸಿದ್ದಾನ್ನ ಪಾತ್ರೆಯ ಕರುಣಿ ತ್ರಿಜಗಜ್ಜನನಿ ಸುಗುಣಿಯೆ 1 ನಿತ್ಯಾನಂದಿನಿ ಮೋಹಿನಿ | ಸುಗತಿ ಪ್ರದಾಯಿನಿ ಭೃತ್ಯಾನುಗ್ರಹ ಕಾರಿಣಿ | ಬುಧ್ಯಾಭಿಮಾನಿ ನಿತ್ಯಮಂಗಳೆ ಭೃತ್ಯವತ್ಸಲೆ ಸತ್ಯರೂಪಿಣಿ ಮೃತ್ಯುನಾಶಿನಿ ನಿತ್ಯತ್ವತ್ಪದ ಭಜಿಪ ಸಂಪದ- ವಿತ್ತು ಪಾಲಿಸೆ ಶ್ರೀ ಕಾತ್ಯಾಯಿನಿ 2 ಭೀಮಾ ಭೈರವನಾದಿನಿ | ಕುಮಾರ ಜನನಿ ಕಾಮನಿಗ್ರಹನ ರಾಣಿ | ವರವರ್ಣಿನಿ ಬ್ರಾಹ್ಮಿ ವೈಷ್ಣವಿ ಬ್ರಹ್ಮಚಾರಿಣಿ ಚಾಮುಂಡೇಶ್ವರಿ ಕೋಲರೂಪಿಣಿ ಭ್ರಮರಿ ಶಾಕಾಂಬರಿ ನೃಸಿಂಹಿಣಿ ಅಮಿತರೂಪಿಣಿ ಅಹಿತ ಮಾರಿಣಿ 3 ಸರ್ವಮಂಗಳ ಮಾಂಗಲ್ಯೆ | ಸರ್ವಾರ್ಥದೆ ಶಿವೆ ಶರ್ವನರ್ಧಾಂಗಿಯೆ | ಪರ್ವತನ ತನಯೆ ಶರ್ವಬ್ರಹ್ಮರ ವರದಿ ಕೊಬ್ಬಿ ಸು- ಪರ್ವರನು ಕಂಗೆಡಿಸೆ ದನುಜರು ಸರ್ವಶಕ್ತಳೆ ಮುರಿದು ಖಳರನು ಉರ್ವಿಭಾರವ ನಿಳುಹಿ ಪೊರೆದೌ 4 ಅಜಿತೆ ಭದ್ರದೆ ಆನಂದೆ | ನಿನ್ನನು ಬಿಡದೆ ಭಜಿಪರ ಪೊರೆವಳೆಂದೆ | ನಾನಿಂದು ಬಂದೆ ಕುಜನಮರ್ಧಿನಿ ಕುಟಿಲ ಹಾರಿಣಿ ಗಜಗಮನೆ ಗಂಭೀರೆ ಗುಣಮಣಿ ವೃಜಿನ ಪರಿಹರೆ ವಿಘ್ನಸಂಹರೆ ನಿಜ ಪದಾಂಬುಜ ಭಜಕನೆನಿಸಿ 5 ಶಿವದೂತಿ ಪರಮೇಶ್ವರಿ | ರುದ್ರಾಣಿ ಚಂಡಿಕೆ ಶಿವೆ ಭವೆ ಜ್ಞಾನೇಶ್ವರಿ | ಸೌಂದರ್ಯಲºರಿ ಭುವನ ಮೋಹಿನಿ ದೈತ್ಯನಾಶಿನಿ ತಾಪ ಜ್ವರ ನಿವಾರಿಣಿ ಕವಿಭಿರೀಡಿತೆ ದೇವ ಪೂಜಿತೆ ವಿವಿಧ ಫಲಗಳ ಒಲಿದು ಕೊಡುವಳೆ 6 ಶೃತಿ ಸ್ಮøತಿ ಶ್ರದ್ಧೆ ಮೇಧಾ | ವಿದ್ಯಾಸರಸ್ವತಿ ಧೃತಿ ಶಾಂತಿ ಕಾಂತಿ ವಾದಾ | ಎನಿಸುತ್ತ ಮೆರೆವ ವಿತತ ಮಹಿಮಳೆ ವಿಶ್ವತೋಮುಖೆ ಅತುಳ ಭುಜಬಲೆ ಭದ್ರಕಾಳಿಯೆ ಪಾವನಿ ಸತ್ವಶಾಲಿನಿ ಸತಿ ಶಿವಪ್ರಿಯೆ ನೀಡಿ ಸುಮತಿಯ 7 ಅರಿದರಾಂಕುಶ ಮುಸಲ | ಮುದ್ಗರಚಾಪ ಮಾರ್ಗಣ ಪಾಶ ಪರಶು ಘಂಟಾ ಶಕ್ತಿ ಪಾತ್ರೆಯು ವರಗದಾಭಯ ಕರದೊಳೊಪ್ಪುತ ದುರುಳರನು ಸಂಹರಿಸಿ ಸಂತತ ಸುರನರೋರಗರನ್ನು ಪೊರೆಯುವ 8 ಮಾರಿ ಮಸಣಿ ಹೆಮ್ಮಾರಿ | ಕರೆಕರೆದುಗೊಳಿಸುವ ಕ್ರೂರ ಶಾಕಿನಿ ಡಾಕಿನಿ | ಪೂತಣಿಯೆ ಮುಖರು ಘೋರ ರೂಪದಿ ಬಂದು ಪೋರರ ಗಾರುಗೊಳಿಸುತ್ತಿರಲು ತವಪದ ಸಾರಿ ನೆನೆದರೆ ತೋರಿ ಹಿಮ್ಮಡಿ ದೂರ ಸರಿವರು ಮುಗಿದು ಕರಗಳ 9 ತಾಪತ್ರಿತಯ ತಪ್ತರ | ಆಹ್ಲಾದಪಡಿಸಲು ಗೋಪತಿ ಮುಖವ ತೋರ | ಕೃಪಾಂಬುನಿಧಿಯೆ ತಾಪಸಾರಾಧಿತ ಪದಾಂಬುಜೆ ಶ್ರೀಪತಿಯ ಸೊದರಿಯೆ ನೀ ನಿಜ- ರೂಪುದೋರಲು ಪಾಪತಾಪ ಪ್ರ- ಳಾಪ ಮಾಡದೆ ರಾಪುಗೈವುದೆ 10 ದುರ್ಗಮ ಸಂಕಟದಿ | ಬಿದ್ದಿಹೆನಮ್ಮಾ ನಿರ್ಗಮ ಕಾಣೆನಮ್ಮಾ | ಉದ್ಧರಿಸಮ್ಮಾ ದುರ್ಗದಿಂತಾರಿಸುವೆ ಭಕ್ತರ ದುರ್ಗೆ ನಾಮಾಂಕಿತದಿ ಎಂಬರು ಕರವ ಸು- ಮಾರ್ಗ ತೋರಿಸೆ ದುರ್ಗೆ ಜನನಿಯೆ 11 ಸುರಾಸುರ ಸಂಗ್ರಾಮದಿ | ಮುರವೈರಿ ದಯದಿ ಸುರರು ಗೆಲ್ಲರು ಮುದದಿ | ಗರ್ವಿಸಲು ಭರದಿ ಹರಿಯ ರೂಪಾಂತರದಿ ತೃಣವನು ಧರೆಯೊಳಿರಿಸುತ ಬಲ ಪರೀಕ್ಷಿಸಿ ಸುರರು ಜಯಿಸದೆ ಮರುಳರಾಗಲು ಬರದೆ ಪರತತ್ವವನು ಕರುಣದಿ 12 ಕಿಂಕರ ಶಂಕರಿಯೆ | ಶತ್ರು ಭಯಂಕರೆ ಓಂಕಾರೆ ಹೂಂಕಾರೆಯೇ | ಸ್ಮಿತ ಅಟ್ಟಹಾಸೆ ಪಂಕಜಾಂಬಕಿ ರಕ್ತನಯನ ಕ ಳಂಕಮುಖಿ ಅತ್ಯುಗ್ರವದನೆ ನಿ ಶ್ಯಂಕ ಬಿಂಕದಿ ಬಂದೆ ಕಾಲದಿ ಮಂಕುಹರೆ ಸಂಕಟದೆಯೆನಿಸುವೆ 13 ರಕ್ತಬೀಜಾಸುರನ | ರಕ್ತವನು ಹೀರಿದ ಶಕ್ತಳೆಂದೆನುತ ನಿನ್ನ | ನಂಬಿದೆನು ಎನ್ನ ಉಕ್ತಿಲಾಲಿಸಿ ಒತ್ತಿ ವಿಘ್ನವ ಇತ್ತು ಜ್ಞಾನ ವಿರಾಗ ಭಕ್ತಿಯ ಮುಕ್ತಪಾವನ ಮಾಡಿ ಸಂತತ ಮುಕ್ತಿಕಾಂತನ ಸ್ಮರಣೆ ಪಾಲಿಸಿ14 ಮಹಿಷನ ಸಂಹರಿಸಿ | ಮಹಿಯನ್ನು ಪಾಲಿಸಿ ಮಹಿಸೂರೆ ನೆಲೆಯೆನಿಸಿ | ಪತಿಸಹಿತವಸಿಸಿ ಮಹಿಪತಿಗಳಾದಿಯಲಿ ಸರ್ವರಿಂ ಅಹರಹರ್ ಸೇವೆಯನು ಕೊಳುತ ಮಹಿಮೆ ತೋರುತಿರುವೆ ಪ್ರತಿದಿನ ಅಹಹ ಬಣ್ಣಿಸಲೊರೆವೆ ನರರಿಗೆ 15 ಚಂಡ ಮುಂಡರ ಮರ್ದಿಸಿ | ಚಾಮುಂಡಿಯೆನಿಸಿ ಖಂಡೆಯವನು ಝಳಪಿಸಿ | ಪುಂಡರನು ವಧಿಸಿ ಖಂಡ ಪರುಶುವಿನಂತೆ ಅದÀಟರ ರುಂಡಮಾಲೆಯ ಕೊಂಡು ಭೂತಗ- ಳ್ಹಿಂಡು ಡಿಂಡಿಮ ಡಂಡೆಣಿಸಲು ತಾಂಡವಾಡಿದ ಚಂಡಕಾಳಿಯೆ 16 ಶುಂಭ ನಿಶುಂಭರನು | ಕುಂಭಿಣಿಗೆ ಕೆಡಹೆ ಸುರರು | ಕುಂದುಭಿಯ ಹೊಡೆಯೆ ಡೊಂಬ ಕೊಳಾಸುರನ ಸೂಕರ ಡಿಂಬ ತಾಳುತ ಸೀಳಿ ದೈತ್ಯ ಕ- ದಂಬವೆಲ್ಲಕೆ ಕಂಭ ಸಂಭವ ನಿಂಬು ರೂಪವ ನಂಬಿ ತೋರಿದೆ 17 ಸಕಲ ಶಕ್ತ್ಯಾತ್ಮಕಳೆ | ಭುವಿಯಲಿ ಈ ಪರಿ ಪ್ರಕಟಳಾಗುತ ಖಳರ | ಕಟಕವನು ತರಿದು ಭಕುತವರ್ಗಕೆ ಬಂದ ಸಂಕಟ ನಿಕರ ಪರ್ವತ ವಜ್ರವೆನಿಸುತ ಮುಕುರದಂದದಿ ಪೊಳೆದು ಪೊರೆಯುವೆ ವಿಕಟನಾಮದಿ ನಿಕಟದಿರುತ 18 ಜ್ಞಾನೇಚ್ಚಾ ಕ್ರಿಯ ರೂಪಳೆ | ನಿನ್ನನು ನುತಿಸಿ ಆನತಿಸಿದವರಿಗೆ | ಪ್ರಸನ್ನಳಾಗಿ ಮಾನ ಸತಿಸುತ ಧ್ಯಾನ ಧನಮನೆ ಜ್ಞಾನ ಭಕ್ತಿ ವಿರಕ್ತಿ ಮುಂತವ ದೇನು ಬೇಡಲು ಕೊಡುವೆ ನಿನ್ನ ಸಮಾನರಾರನು ಕಾಣೆ ಜಗದೊಳು 19 ಅಂಗನಾಮಣಿಯರಿಗೆ | ಮಾಂಗಲ್ಯವೃದ್ಧಿಗೆ ಮಂಗಳಗೌರಿಯೆಂದು | ಪ್ರಸಿದ್ಧಿಗೊಂಡು ರಂಗುಮಾಣಿಕದ್ಹಸೆಯ ಪೀಠದಿ ಮಂಗಳದ್ರವ್ಯಗಳಿಂದೊಪ್ಪುತ ಮಂಗಳೇಕ್ಷಣದಿಂದ ಕುಳಿತಿಹೆ 20 ವೈದ್ಯ ಜ್ಯೋತಿಷ ಪುರಾಣ | ವೇದಾಂತ ಮುಂತಹ- ಗಾಧ ಗ್ರಂಥಗಳನು | ನಿಜಪತಿಯ ಮುಖದಿ ಸಾಧಿಸಿದೆ ಸಜ್ಜನರಿಗೋಸುಗ ಬೋಧಿಸಿದೆ ಗುಹ ಗಣಪ ಮುಖರಿಗೆ ಆದಿದೇವನ ಒಲಿಮೆ ಪಡೆಯಲು ಹಾದಿ ತೋರಿದೆ ಹೇ ದಯಾನಿಧೆ 21 ಅಷ್ಟಬಾಹುಗಳಿಂದಲಿ | ಅಷ್ಟಾಯುಧಂಗಳ ದಿಟ್ಟತೆಯಿಂ ಧರಿಸಿ | ಅಷ್ಟಾತ್ಮನಂವೆರಸಿ ಶಿಷ್ಟ ನಾಲ್ಮಡಿ ಕೃಷ್ಣ ಭೂಪನ ಇಷ್ಟದೇವತೆಯಾಗಿ ನೆಟ್ಟನೆ ಬೆಟ್ಟದಲಿ ರಂಜಿಸುವೆ ಭಕ್ತರಿಷ್ಟ ಹರಿಸುತ ಕೊಟ್ಟಭೀಷ್ಟವ 22 ಸಂತರ ನುಡಿಗಳು | ನಾನಾಂತು ನಿನ್ನಯ ಚಿಂತಿತಾರ್ಥದ ಪದವ | ಸ್ವಾಂತದಲಿ ತಂದು ಇಂತು ತುತಿಸಿದೆನರಿಯೆನನ್ಯಯಥ ಪಂಥವನು ಎನ್ನಂತರಂಗವ ನಂತು ತಿಳಿದಿಹೆ ಜನನಿ ಕೊಡು ಶ್ರೀ- ಕಾಂತ ಭಕ್ತಿಯ ಮುಂತೆ ಕರುಣದಿ 23
--------------
ಲಕ್ಷ್ಮೀನಾರಯಣರಾಯರು
ಎಂದಿಗೀಪದ ಕರುಣಮಾಡುವೆಯೋ ನಿಮ್ಮ ಧ್ಯಾನಾ ನಂದ ಅಮೃತಪಾರ ನವಿನುಡಿಯ ಪ ಎಂದಿಗೀಪದ ಕರುಣಮಾಡಿ ಕರವ ಪಿಡಿದು ಮಂದಮತಿಯ ತರಿದು ಪೊರೆಯುವೆ ಸಿಂಧುಶಯನ ತಂದೆ ಶ್ರೀಹರಿ ಅ.ಪ ವಿಷಮಸಂಸಾರ ಮೋಹವನು ಬಿಡಿಸಿ ನಿಮ್ಮ ಭಜನ ಅಸಮ ಸುಖದೆನ್ನ ಮನವ ನಿಲ್ಲಿಸಿ ವ್ಯಸನ ಏಳರ ಕಾಟ ತಪ್ಪಿಸಿ ಬಿಡದೆ ಎನ್ನ ರಸನೆಮೇಲ್ನಿಮ್ಮ ನಾಮ ಸ್ಥಾಪಿಸಿ ವಸುಧೆ ಜನರ ಸುದ್ದಿ ಮರೆಸಿ ನಶಿಪ ಲೌಕಿಕದಾಸೆ ಕೆಡಿಸಿ ಕುಶಲಮತಿಯಿತ್ತು ಪಾಲಿಸುವ ಮಹ ಅಸಮಶುಭದಿನ ಕುಸುಮನಾಭ 1 ಹತ್ತು ಇಂದ್ರಿಯ ಮೂರು ಬಾಧೆ ತೊಲಗಿಸಿಬಿಡದೆ ಎನ್ನ ನೇತ್ರದೊಳು ತವಮೂರ್ತಿ ನಿಲ್ಲಿಸಿ ಸುತ್ತಿ ಕೊಲುವ ಮಾಯ ಮುಸುಕು ಹಾರಿಸಿ ನಿತ್ಯದೆನ್ನ ಚಿತ್ತದೊಳು ನಿಜಜ್ಞಾನ ಸ್ಥಿರಪಡಿಸಿ ಸತ್ಯ ಸನ್ಮಾನ್ಯಕ್ತನೆನಿಸಿ ನಿತ್ಯ ನಿರ್ಮಲ ನಿಮ್ಮ ಭಕ್ತರ ಉತ್ತಮ ಸಂದರುಶನವಿತ್ತು ತವ ಭೃತ್ಯನೆನಿಸೆನ್ನ ಸಲಹುವಂಥ 2 ಕ್ಲೇಶ ಪಂಚಕದುರುಲು ಪರಿಹರಿಸಿ ಅನುಮೇಷ ನಿಮ್ಮ ದಾಸಜನರಾವಾಸದೆನ್ನಿರಿಸಿ ಮೋಸಮರವೆಯ ಜಾಲ ಛೇದಿಸಿ ನಿಶಿದಿವದಿ ನಿಮ್ಮ ಧ್ಯಾನದೊಳೆನ್ನ ಮನವಐಕ್ಯೆನಿಸಿ ಮೋಸ ಪಾಶಗಳೆಲ್ಲನಾಶಿಸಿ ದೋಷರಾಶಿಯಿಂ ಮುಕ್ತನೆನಿಸಿ ಶ್ರೀಶ ಶ್ರೀರಾಮ ನಿಮ್ಮ ಚರಣ ದಾಸನೆನಿಸಿ ಪೋಷಿಸುವಂಥ 3
--------------
ರಾಮದಾಸರು
ಏನು ಪುಣ್ಯವ ಮಾಡಿ ನಾನಿಂದು ನಿನ್ನ ಕಂಡೆ ದೀನ ವತ್ಸಲ ಸ್ವಾಮಿ ಕೃಷ್ಣ ಪ ಜ್ಞಾನಗಮ್ಯನೆ ನಿನ್ನ ಕಾಣಲು ಮನದಲ್ಲಿ ನಿತ್ಯ ಧ್ಯಾನವ ಮಾಡುವರಯ್ಯ ಅ.ಪ. ಶ್ರುತಿ ಶಾಸ್ತ್ರಗಳನೋದಿ ಮಥನವ ಮಾಡುವ ಮತಿಸಾಧನದಿಂದ ನಿನ್ನರಸುವರೊ ಪತಿತಪಾವನ ನಿನ್ನ ಕರುಣವೊಂದಿಲ್ಲದಿರೆ ಇತರ ಸಾಧನವೆಲ್ಲ ಗತಿದೋರದೋ ಸ್ವಾಮಿ 1 ನಿನ್ನ ಭಕ್ತರು ಮಾಳ್ಪ ಸಾಧನಂಗಳಿಗೆಲ್ಲ ನಿನ್ನ ಕಾರುಣ್ಯವೇ ಕಾರಣವಲ್ಲವೆ ನಿನ್ನ ನುತಿಸ ಬಂದ ನರರ ಕ್ಷೇಮದ ಭಾರ ನಿನ್ನದೆಂದು ತಿಳಿದು ನೀನಾಗಿ ಪೊರೆಯುವೆ 2 ಏನೊಂದು ಸಾಧನವರಿಯದ ಎನಗೀಗ ನೀನಾಗಿ ದಯಮಾಡಿ ಮೈದೋರಿದೆ ಏನು ಧನ್ಯನೊ ನಾನು ಆನಂದಕೆಣೆಗಾಣೆ ದಾನವಾಂತಕ ಸ್ವಾಮಿ ಕರಿಗಿರೀಶನೆ ಕೃಷ್ಣ 3
--------------
ವರಾವಾಣಿರಾಮರಾಯದಾಸರು
ಕರಿಗಿರೀಶ ನಿನ್ನ ಬೇಡುವೆನೀಗ ಪರಿಪಾಲಿಸೊ ಸತತ ಪ. ನರಹರಿ ಭಕ್ತರ ಪೊರೆಯುವೆ ನೀನೆಂ- ಇಂದು ಅ.ಪ. ನಾರಸಿಂಹ ನಿನ್ನ ಸಾರಿ ಭಜಿಸುವೆನು ತೋರೊ ನಿನ್ನ ಪದವ ಬಾರಿಬಾರಿಗೆ ಸ್ತುತಿಸಲು ಬಾಲನು ಘೋರ ದೈತ್ಯನ ಸೀಳಿ ಪೊರೆದೆಯೊ 1 ಶೇಷಾಂತರ್ಗತ ನಾರಸಿಂಹ ವಿ- ಶೇಷ ಮಹಿಮೆ ತೋರೊ ಶೇಷಶಯನ ಮಹರುದ್ರಾಂತರ್ಗತ ಪೋಷಿಸೊ ಭಕ್ತರ ಶಾಂತರೂಪದಿ 2 ಲೀಲೆಯಿಂದ ಶ್ರೀ ಲಕುಮಿ ಹಿತದಿ ವ್ಯಾಳಶಯನನಾಗಿ ಪಾಲಿಸಬೇಕೆನ್ನನು ಸತತದಿ ಗೋ- ಪಾಲಕೃಷ್ಣವಿಠ್ಠಲ ನೀ ದಯದಿ 3
--------------
ಅಂಬಾಬಾಯಿ
ಕರುಣಿಸಲಾರೆಯಾ ಇನ್ನಷ್ಟು ನೀ ಸಿರಿಪತಿಯಾ ಪ ಕರುಣಿಸಲಾರೆಯಾ ಕರುಣಾಕರನೆಂಬೊಬಿರುದನುಳಿಸಿಕೊಳ್ಳಲಾರೆಯಾ ನೀನರಿಯಾ ಅ.ಪ. ಬುವಿಯೊಳು ನಿನ್ನ ದಯವಿರದಿರೆ ಕಣಲವಸಹ ಸರಿಯದಯ್ಯಾಭವದೊಳು ದೇವ ನಿನ್ನ ಕೃಪೆಯಾಗಲುಜವದೊಳೀಗಿನ ಸುಖ ಸ್ರವಿಸಿ ಪೋಗುವದಯ್ಯಾ 1 ಈಗೆಲ್ಲ ನಿನ್ನದಯೆದಿಂದೀ ಬಾಳ್ವೆಸಾಗಿದೆ ಬಲ್ಲೆನಯ್ಯಾಹೋಗಿಸಿ ಸಂಸಾರ ಬೇಗುದಿಯನು ನೀನುಬೇಗ ನಿನ್ನ ಧ್ಯಾನಭೋಗವ ನೀಡಯ್ಯಾ 2 ತುಷ್ಟಿಹೊಂದಲು ನೀ ಜೀಯಾ ಕಷ್ಟದ ಪರಿಯಾನಷ್ಟಮಾಡಲು ಅರಿಯಾಸೃಷ್ಟಿಯ ಜೀವಿಗದೃಷ್ಟ ಎಷ್ಟೆಷ್ಟೆಂಬಸ್ಪಷ್ಟ ಸಂಕಲ್ಪವ ಬದಲಿಸಲರಿಯಾ 3 ಎಲ್ಲವು ನಿನ್ನಧಿವಲ್ಲವೇ ಹರಿಯೇಸಲ್ಲದ ಅನುಮಾನಖುಲ್ಲ ದೈವವ ತಿರುವ ಬಲ್ಲೆಯಲ್ಲವೇ ನೀನುಬಲ್ಲೇಕೆ ಮನವನು ಕಲ್ಲು ಮಾಡಿದೆಯಾ 4 ಶರಣೆಂಬ ಜನ ಕೈಯ್ಯಾ ಎಂದೂ ಬಿಡದೆಪೊರೆಯುವೆ ಎಂಬರಯ್ಯಾಧರೆಯೊಳು ಗದುಗಿನ ವೀರನಾರಾಯಣಮರೆಯದೆ ಸಲಹಯ್ಯಾ ಕೇಳ್ವೆನ್ನ ಮೊರೆಯಾ 5
--------------
ವೀರನಾರಾಯಣ
ಕಾಮಕೋಟಿ ಸುಂದರಾ | ತಿರುಪತಿಯಸ್ವಾಮಿ ತೀರ್ಥಮಂದಿರಾ ಪ ಕಾಮಜನಕ ಭಕ್ತಪ್ರೇಮಿ ಭವಾಟವಿಧೂಮಕೇತು ಹೃತ್ | ಧಾಮದಿ ನೆಲಿಸೋ ಅ.ಪ. ವೃಷಭಾಚಲಾ | ಸನ್ನಿಲಯನೆವೃಷಭಾ - ಬಲಾ ||ಒಸೆದು ಪರಿಕಿಸುತ || ಅಸುರನ ಸವರುತಅಸಮಗಿರಿಗೆ ನೀ | ಅಸುರನ ಪೆಸರಿತ್ತೆ 1 ಭಂಜನ ಶರದಿಜೆಕಂಜಜಾಕ್ಷಿ ಪ್ರಿಯ | ಅಂಜನಿವರದಾ 2 ಶೇಷಾ _ ಭೂಧರಾ | ಮನಸಿನ ಬಹುಕ್ಲೇಶಾ _ ಅಪಹರ ||ಶೇಷದೇವ ಮದ | ಲೇಸು ಹರಿಸಿ ಅವನಾಶೆ ಸಲಿಸಿ ಹರಿ | ಶೇಷಾಚಲನಾದೇ 3 ವೆಂಕಟಾಚಲಾ | ಮಾಧವನಾಸಂಕಟಾಗಳಾ ||ಅಂಕುರಿಸದೆ ನಿ | ಷ್ಪಂಕನೆಂದೆನಿಸಿಕಿಂಕರ ತನಯಳ | ಕಂಕಣ ಕಟ್ಟಿದೆ 4 ಶ್ರೀವರ - ಭೂವರಾ | ಪೊರೆಯುವೆ ನೀಜೀವರಾ - ಅಂತರಾ ||ಜೀವನಾಮಕನಾಗಿ | ಜೀವ ಭಿನ್ನ ಹರಿಕೈವಲ್ಯದ ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ನಾನೇನ ಮಾಡಿದೆ ತಪ್ಪುಗಳನ್ನ ನಾನೇನ ಮಾಡಿದೆ ದೇವರದೇವ ಪ ನಿನ್ನ ದಾಸರ ತಪ್ಪನೆಣಿಸದೆ ಪೊರೆಯುವೆ ನಾನೊಬ್ಬ ದಾಸನೆಂದರಿದು ನೀ ಪೊರೆಯೊ 1 ಭೃಗುವಂತೆ ನಿನ್ನಯ ಎದೆಗೆ ತುಳಿಯಲಿಲ್ಲ ನಗವೈರಿಯಂತೆ ಯುದ್ಧವ ಮಾಡಲಿಲ್ಲ 2 ಅಂಗಾಧಿಪತಿಯಂತೆ ಕೊಂದೆನೆಂದರಿತಿಲ್ಲ ಗಂಗೆಯ ಸುತನಂತೆ ಫಣಿಗೆ ಹೊಡೆಯಲಿಲ್ಲ 3 ನಿನ್ನ ಬಿಟ್ಟನ್ಯ ದೇಶಕೆ ಪೋಗಲಿಲ್ಲಾ 4 ಭಾವದಿ ನುಡಿದಂತೆ ನಿನಗೇನು ಪೇಳಿಲ್ಲ 5 ನಿನ್ನಾ ಕುವರರು ಸುಭದ್ರೆಯ ಮದುವೆಯ ಚೆನ್ನಾಗಿ ತಡೆದಂತೆ ತಡೆಯಲಿಲ್ಲವೊ ನಾನು6 ವಸುದೇವ ದೇವಕಿ ಮುಖ್ಯರಂತೆ ನಿನ್ನ ಮಾ- ನುಷನೆಂದು ನಾನೇನು ತಿಳಿದುಕೊಂಡಿಲ್ಲ 7 ಮೌಲಿಯ ಕದ್ದಂತೆ ಕದ್ದುಕೊಂಡಿಲ್ಲ8 ರಾಜೇಶಹಯಮುಖ ಭಜಕರೊಳಗೆ ಮತ್ತೆ ನಿತ್ಯ ಭಕ್ತರಾರಿಹರು 9
--------------
ವಿಶ್ವೇಂದ್ರತೀರ್ಥ
ಪಂಚರೂಪಾತ್ಮಕ ನೀನೇ ಈ ಪಾಂಚಭೌತಿಕ ದೇಹದಿ ಸಂಚರಿಸೂವೆ ಪ ಸ್ಥೂಲರಸವನು ಇತ್ತು ಸಲಹೂವೆ ಅ.ಪ ರಸಪಾಯುಆಪಜಿಹೆÀ್ವನಾಸಿಕ ಗಂಧ ಪೃಥುವಿ ಉಪಸ್ಥಯುಕ್ತ ಕೋಶವಹುದಯ್ಯ ಆ ಶನೈಶ್ವರ ವರುಣ ಭೂದೇವಿಯಿಂದಲಿ ಸೇವಿಪ ಸತತ ಲೇಶವಾದರು ಬಿಡದೆ ತಾ ಖಂಡಾಖಂಡ ರೂಪದಿ ದೇಶ ಕಾಲಗಳಲ್ಲಿ ನೆಲೆಸಿ ಕೋಶಕಾರ್ಯವ ಗೈವೆ ಪ್ರಾಣನಿಂ ಉಭಯಪಕ್ಷಗಳು ಧೇನಿಸುತಿಹರು ಭುಜದ್ವಯ ಶ್ರೀಶ ನಿನ್ನಯ ಮಧ್ಯದೇಶವೆ ಈ ಶರೀರದÀ ಮಧ್ಯಭಾಗವು ಪ್ರಸಿದ್ಧ ಪುರುಷನೆ ನಿನ್ನಿಂದೋಷಧಿಗಳು ಓಷಧಿಗಳಿಂದನ್ನವೆಲ್ಲವು ಪೋಷಣೆ ಎಲ್ಲ ಅನ್ನದಿಂದಲೆ ದೋಷದೂರ ನೀನನ್ನದನ್ನದಾ1 ಪಾಣಿತ್ವಗ್ವಾಯು ಸ್ಪರ್ಶ ನೇತ್ರ ತೇಜ ಪಾದರೂಪಗಳಿಂದಲಿ ಕಾಣಿಸಿಕೊಳ್ಳುವುದು ಪ್ರಾಣಮಯದ ಕೋಶವು ತಾನಲ್ಲಿಹ ಪ್ರದ್ಯುಮ್ನ ಮೂರುತಿ ಸತತ-ಗಣಪತಿ ಅಗ್ನಿ ವಾಯು ಮರೀಚಿಗಳೆಲ್ಲರೂ ಸನ್ನುತಿಪರೋ ಪ್ರಾಣಾಧಾರನಾಗಿಹೆ ತ್ರಾಣ ನಿನ್ನಿಂದ ಸ್ಥೂಲದೇಹಕೆ ಅ- ಪಾನ ನಿಂದೊಡಗೂಡಿ ನೆಲೆಸಿಹೆ ಪ್ರಾಣಪತಿ ಪ್ರದ್ಯುಮ್ನ ನಿನ್ನಯ ಶಿರದ ಸ್ಥಾನವು ಪ್ರಾಣನಲ್ಲಿಹುದೋ ದಕ್ಷಿಣೋತ್ತರಪಕ್ಷವಿರುತಿಹುದೋ ಕಾಣಿಪುದು ಮಧ್ಯದೇಶವು ಆಗಸದೊಳು ಉ- ದಾನ ವಾಯುವಿನಲ್ಲಿ ಇರುತಿಹುದೋ ಧೇನಿಪೋರು ಪೃಥುವಿಯು ಪಾದವೆಂಬುದು ಸ- ಮಾನ ವಾಯುವಿನಲಿ ಇರುತಿಹುದು ಜ್ಞಾನ ರೂಪದಿ ಈ ಪರಿಯಲಿ ರೂಪವಿರುತಿಹುದು ಪ್ರಾಣಿಗಳಿಗಾಯುಷ್ಯವಿತ್ತು ಪ್ರಾಣಪ್ರೇರಕನಾಗಿ ಪೊರೆಯುವೆ ಪ್ರಾಣಧಾರಣೆ ನಿನ್ನದಯ್ಯಾ ಪ್ರಾಣನುತ ಪ್ರದ್ಯುಮ್ನಮೂರುತೆ2 ತತ್ವಯುತವಾಕ್ಯೋಕ್ತಾಗಸ ಶಬ್ದ ಈತೆರ ಯುಕ್ತವಾದೀ ಕೋಶವು ಇದಕೆ ಖ್ಯಾತವಾದ ಮನೋಮಯ ಕೋಶದೊಳು ಸತತ ರುದ್ರೇಂದ್ರಾದಿ ಸುರರೆಲ್ಲರು ವಂದಿಸುತಿಹರು ಖ್ಯಾತ ಸಂಕÀರುಷಣನೆ ಖಂಡಾಖಂಡರೂಪದಿ ನೆಲೆಸಿ ಕೋಶದಿ ಪ್ರೀತಿಯಿಂದಲಿ ವ್ಯಾನನೊಡಗೂಡಿ ನೀನೆ ಯಜ್ಞಭುಕುವು ಯಜುರ್ವೇದವೆ ನಿನ್ನ ಶಿರವಹುದು ಶ್ರುತಿಗಳೊಳು ಭುಜದ್ವಯಂಗಳಾಗಿಹುದು ನುತಿಪ ಪಾಂಚರಾತ್ರಾಗಮ ವೆಂಬುದೆ ನಾಮಕಂಗಳೆನಿಪುದೆ ನಿನ್ನ ಪಾದದ್ವಯಂಗಳು ಖ್ಯಾತ ನಿನ್ನಯ ರೂಪ ಮಹಿಮೆಯ ತಿಳಿಯಲಸದಳವೋ ಜಾತರಹಿತ ನಿನ್ನ ವರ್ಣಿಸೆ ಮಾತು ಮನಸಿಗೆ ನಿಲುಕದಂತಿಹೆ ಖ್ಯಾತ ನೀನಹುದೊ ಮನೋಮಯ ಪ್ರೀತಿಯಿಂದಲಿ ಸಲಹೋ ಎನ್ನನು 3 ಮಹತ್ತತ್ವ ಪ್ರಾಚುರ್ಯದಿಂದಿಹ ಈ ವಿಜ್ಞಾನಮಯಕೋಶದಿ ಶ್ರೀಹರಿ ವಾಸುದೇವಾ ನೀನೆ ನೆಲೆಸಿಹೆ ಅಹರಹ ಬ್ರಹ್ಮ ವಾಯುಗಳಿಂದಲಿ ಮಹಾಪೂಜೆ ವಂದನೆಗೊಳುತಿಹೆ- ಖಂಡಾಖಂಡದಿ ತುಂಬಿಹೆ ದೇಹದೊಳು ಉದಾನನಿಂದೊಡಗೂಡಿ ಸಹಾಯನಾಗಿಹೆ ಜೀವಿಗಳಿಗೆ ಬಾಹ ದುರಿತದಿಂ ಪಾರುಗಾಣಿಸೋ ದೇಹ ದೇಹಿಯ ರೂಪ ನೀ ಸ್ವಗತಭೇದವಿವರ್ಜಿತನೆ ಶಿರವೆ ನಿನ್ನಯ ಶ್ರದ್ಧವೆಂಬೊರು ಮಹಾ ಭುಜಂಗಳೆ ಋತುಸತ್ ಎಂದೆನಿಸಿಕೊಳುತಿಹುದು ಇಹುದು ಮಧ್ಯದೇಶವೆ ಜಗಕೆ ಆಶ್ರಯವೆನಿಪ ಯೋಗಾವು ಮಹವೆಂಬುದೆ ಪಾದವೆನಿಸಿತು ಸೂರ್ಯತೇಜದೊಳು ಮಹಾ ಪ್ರಳಯದಿ ಉದರದೊಳಿಟ್ಟು ಇಹಪರದಿ ರಕ್ಷಿಸುವೆ ದೇವ4 ನಂದಮಯ ಕೋಶವು ತನ್ಮಯ ಅವ್ಯಕ್ತತತ್ವದಿಂದಲಿ ನನ್ನೀಯಿಂದ ಆನಂದಮಯ ಮೂರುತಿ ನಾರಾಯಣನೀ ಕೋಶಾಂತರ್ಗತನು ನೀನೆ ಸಮಾನನೊಡಗೂಡಿಹೆ ಅನಾದಿಲಿಂಗವ ಭಂಗಗೈಸುವಳೋ ಘನಮಹಿಮ ನಿನ್ನ ಅನುಸರಿಸಿ ತಾನಿಪ್ಪಳೋ ಛಿನ್ನ ಭಕ್ತರಿಗೊಲಿಯಳೋ ಅವಿ ಚ್ಛಿನ್ನ ಭಕ್ತರ ಜನನಿ ಎನಿಪಳೋ ಪ್ರಾಪ್ಯನು ಎಂದು ಪ್ರಿಯವೆಂದು ಘನ ದಕ್ಷಿಣೋತ್ತರ ಪಕ್ಷವೆನಿಪೋವು ತನ್ನ ಮಧ್ಯದ ಪ್ರದೇಶವೆಂಬೋದು ಜ್ಞಾನ ಸುಖ ಆನಂದ ಪಾದಗಳು ಬ್ರಹ್ಮನಾಮಕ ವಾಯುವೆಂಬುವರೋ ಆನಂದಮೂರುತಿ ಮಹಿಮೆ ಎಂತಿಹುದೋ ಭಿನ್ನನಾಮದಿ ಕರೆಸುತಲಿ ತಾ ಅ ಭಿನ್ನನಾಗಿ ಚರಿಸಿ ಕೋಶದಿ ಘನಕಾರ್ಯವ ನಡೆಸುತಿರ್ಪೆ ಪನ್ನಗಾದ್ರಿ ಶ್ರೀ ವೇಂಕಟೇಶನೆ 5
--------------
ಉರಗಾದ್ರಿವಾಸವಿಠಲದಾಸರು
ರಾಘವೇಂದ್ರರು ಸುಂದರ ಗುರು ರಾಘವೇಂದ್ರರೆಂತೆಂಬುವೋ ಕರ್ಮಂದಿಗಳರಸನೆ ವಂದಿಸುವೆ ಪ ಸನ್ನುತ ಮಹಿಮರೆಂದು ನಾ ಬೇಡುವೆ ಅ.ಪ. ಪರಮ ಕರುಣೀ ನಿಜ ಚರಣ ಸೇವಕರನ್ನು ಉದ್ಧರಿಸುತಲನುದಿನ ಪೊರೆವನೆಂದೂಕರವ ಪಿಡಿದು ತ್ವರ ಪರಿಪರಿಯಲಿ ನಿನ್ನಾತಪೊರೆಯುವೆ ಕೈ ಪಿಡಿಯೆಂದು ಕರೆಯುವೆಧರೆಯೊಳಗೆ ನಿಮ್ಮಯ ಸರಿ ಧ್ವರೆಗಳ ಕಾಣೆ ಮ-ದ್ಗುರುವೆ ಯನ್ನಂಥ ಪಾಮರ ನರನ ಕಾಯೋದು ನಿಮಗಾಶ್ಚರ್ಯವೇವರಯೋಗಿವರ್ಯನೆ ನಿರುತ ಬೃಂದಾವನದಿ ರಾಜಿಪೊಮೆರೆವ ಮಂಗಳ ಚರಣ ತವಪದಸ್ಮರಿಪೆ ಸಂತತ ನೀಡು ತ್ವರಿತದಿಹರುಷದಲಿ ನಿರ್ಜರರ ತರುವೆ 1 ಪಾದ ಚಾರು ಭೂರಿ ಕಿಟೀತಜಧೀರ ನಿನ್ನನು ಸಾರಿದವರನು ಪಾರುಗಾಣಿಪನೆಂದು ಡಂಗುರಸಾರುತಲಿದೆಯದು ವೀರಸಲಿಸೊ 2 ಏಸೇಸು ಜನ್ಮದಿ ಕ್ಲೇಶವನನುಭವಿಸಿಘಾಸಿ ಮಾಡೆನೊ ಮನದಾಶೆಯಿಂದಾಹೇಸಿ ವಿಷಯಂಗಳು ಲೇಸುತಿಳಿದು ಮರೆಮೋಸಾದಿ ದುಷ್ಟರ ಸಹವಾಸದಿ ಸೇರಿದೆಮಂದಹಾಸಾದಿ ಸಂತೈಸು ರವಿ ಸಂಕಾಶಜನಹೃದೋಷ ಸಾಗರದಿಕಾಷಾಯವಸನ ಭೂಷಿತಾಂಗ ವ್ಯಾಸಮುನಿ ಭರದೀಗಜರಾಮಪುರದೀಶ ಮುಖರಿಗೆ ತೋಷ ನೀ ಗರದಿಈ ಸಮಯ ಸ್ತುತಿಸುವೆನುಶ್ರೀ ಸಮೀರ ಮತಾಬ್ಧಿ ಚಂದಿರಈಶಗೆದುರ ರತೀಶ ಸನ್ನುತಶ್ರೀಶ ಗುರು ಇಂದಿರೇಶನಂಘ್ರಿಗೆದಾಸ್ಯ ಭಾವ ರಹಸ್ಯ ತೋರಿದೆ 3
--------------
ಗುರುಇಂದಿರೇಶರು
ರಾಜೀವದಳನೇತ್ರ ರಾಮಚಂದ್ರನೆ ಶುಭ- ನಾಮಧೇಯನೆ ನಿನಗಾನಮಿಸುವೆನು ಪ ರಾಮರಾಕ್ಷಸಕುಲ ಭಯಂಕರ ರಾಮದಶರಥ ಪುತ್ರನೆ ವರ ಸಾಮಗಾನ ವಿಲೋಲ ಶ್ರೀವರ ರಾಮ ಭರತ ಶತ್ರುಘ್ನ ಪಾಲಕ ಅ.ಪ ಸುರರೆಲ್ಲ ನೆರೆದು ಋಷಿವರರೆಲ್ಲ ಒಂದಾಗಿ ವರ ಕ್ಷೀರಾಂಬುಧಿಯ ಸಾರುತ ವೇಗದಿ ಪರಮಾತ್ಮ ನಿನ ಕಂಡು ಪರಿಪರಿ ಸ್ಮರಿಸುತ ನೆರೆದರು ದೇವ ಗಂಧರ್ವ ನಾರದರೆಲ್ಲ ಗರುಡ ಗಮನನೆ ಉರಗಶಯನನೆ ಪರಮ ಪುರುಷನೆ ಪುಣ್ಯಚರಿತನೆ ತ್ವರದಿ ಎಮ್ಮಯ ಮೊರೆಯ ಕೇಳೆಂದು ಭರದಿ ಪ್ರಾರ್ಥನೆ ಮಾಡುತಿಹರು 1 ಖೂಳ ದೈತ್ಯರು ನಮ್ಮ ಬಾಳಗೊಡರೊ ದೇವ ಭಾಳ ವ್ಯಾಕುಲರಾಗಿ ದು:ಖಿಪೆವು ಕೇಳಿ ತಡಮಾಡದೆ ಪಾಲಿಸಿ ಸಲಹಯ್ಯ ಶ್ರೀಲೋಲ ಶ್ರೀವರ ಶ್ರೀವತ್ಸಲಾಂಛನ ಶ್ರೀಶ ಶ್ರೀ ಭೂದೇವಿ ರಮಣನೆ ಮಾತುಳಾಂತಕ ಮದನಜನಕನೆ ವಾಸುದೇವನೆ ಭಜಿಪ ಭಕ್ತರ ಸೋಸಿನಲಿ ರಕ್ಷಿಸುತ ಪೊರೆಯುವೆ 2 ಭಕ್ತವತ್ಸಲ ಸ್ವಾಮಿ ಭಕ್ತರ ಸುರಧೇನು ಯುಕ್ತ ಮಾತುಗಳಾಡಿ ಸಂತಯಿಸಿ ಸತ್ಯ ಸಂಕಲ್ಪನು ಮತ್ತವರನು ಕಳುಹಿ ಸತ್ಯಸಂಧನ ದಶರಥನುದರದಿ ಪುಟ್ಟಿ ಮತ್ತೆ ವಿಶ್ವಾಮಿತ್ರ ಬರಲು ಅರ್ಥಿಯಲಿ ಯಾಗವನೆ ನಡೆಸಲು ಸುತ್ತಿ ಬರುವ ಸುರರನೆ ಸದೆದು ಮತ್ತೆ ಯಾಗ ನಿರ್ವಿಘ್ನ ಮಾಡಿದ 3 ಸೀತಾಸ್ವಯಂವರಕ್ಕಾಗಿ ಬರುತಿರಲಾಗವರು ಗೌತಮ ಸತಿಯ ಶಾಪಹರಿಸಿ ಪಾತಕಿ ತಾಟಕಿಯನು ಕೊಂದು ಹರುಷದಿ ನಿ- ರ್ಭೀತನಾಗಿ ಮಿಥಿಲಾಪುರಕೆ ಸೇರಲು ಬಂದು ಆತ ಲಕ್ಷ್ಮಣನೊಡನೆ ಶಿವಧನು ನೀತಿಯಿಂದೆತ್ತುತಲಿ ಸೀತೆಯು ಪ್ರೀತಿಯಲಿ ವನಮಾಲೆ ಹಾಕಲು ಆಕೆಯ ಕೈಪಿಡಿದ ರಾಮನೆ 4 ರಾಮಲಕ್ಷ್ಮಣ ಭರತ ಶತ್ರುಘ್ನರಿಗೆ ಲಗ್ನ ನೇಮದಿಂದಲಿ ಮಾಡಿ ಕಳುಹಲಾಗ ಸಾಮಜವರ ಅಯೋಧ್ಯಾಪುರದಿ ಭಕ್ತ- ಸ್ತೋಮವನೆರಹಿ ರಾಜ್ಯಾಭಿಷೇಕವ ನಡಸೆ ಆ ಮಹಾಮುನಿ ಸ್ತೋಮ ಸುರಗಣ ರಾಮನಿಗೆ ಪಟ್ಟವೆನುತ ಹರುಷಿಸೆ ಆ ಮಹಾಕೈಕೆ ವರವ ಬೇಡುತ ರಾಮನಿಗೆ ವನವಾಸವೆನಲು 5 ವನವನ ಚರಿಸುತ ಘನರಕ್ಕಸರ ಕೊಂದು ವನಜಾಕ್ಷಿ ಮಾಯಾಮೃಗವೆ ಬೇಡಲು ವನಮೃಗ ಬೆನ್ನಟ್ಟಿ ತರುವೆನೆನುತ ಪೋಗಿ ಬಣಗು ರಾವಣ ಸೀತಾಹರಣವ ಮಾಡಲು ಕುರುಹು ಕಾಣದೆ ಸೀತೆಯ ವನವನದಿ ಚರಿಸುವ ಸಮಯದಲಿ ಕಪಿ ವರರ ಸೈನ್ಯವ ಕಳುಹಿ ಮುದ್ರಿಕೆ ಇತ್ತು ಜನಕ ಜಾತೆಯ ನೋಡಿ ಬರಲು 6 ಕಡಲ ಕಟ್ಟುತ ಸೈನ್ಯ ನಡಿಸಿ ಯುದ್ಧವ ಮಾಡೆ ಬಿಡದೆ ರಾವಣ ಸಹಿತೆಲ್ಲರನು ಕೊಂದು ಕಡು ಭಕ್ತನಿಗೆ ಲಂಕಾಪುರದಲಿ ಪಟ್ಟವ ಕಟ್ಟಿ ಮಡದಿ ಸಹಿತ ಪುಷ್ಪಕವನೇರಿ ಬರುತಿರೆ ಸಡಗರದಿ ಹನುಮಂತ ಭರತಗೆ ಒಡೆಯ ಬರುತಿಹನೆಂದು ಪೇಳಲು ಕಡುಹರುಷದಿ ಅಯೋಧ್ಯೆಯನಾಳಿದ ಕಡಲೊಡೆಯ ಕಮಲನಾಭ ವಿಠ್ಠಲನೆ 7 ಬಂದ ಶ್ರೀರಾಮಚಂದ್ರ ಭಾಗವತರ ಕೂಡಿಇಂದಿರೆ ಜಾನಕಿ ಸೌಮಿತ್ರಿ ಸಹಿತದಿ
--------------
ನಿಡಗುರುಕಿ ಜೀವೂಬಾಯಿ
ವಿಷ್ಣು ಮೂರ್ತಿಯೆ ಪಾಹಿ ಭುಕ್ತಿಪುರೇಶ ಜಿಷ್ಣು ನಂದನಸೂತ ವೃಷ್ಟಿಕುಲೇಶ ಪ ಮೃಷ್ಟಾನ್ನ ಭೋಜನವಿತ್ತ ಸಜ್ಜನರಿಗೆ ಕಷ್ಟವ ಪರಿಹರಿಸೀಷ್ಟವ ಕೊಡುವಿ | ಇಷ್ಟವ ಕೊಡದೇನೆ ದೂರ ಕೂಡಿಸುವಿ 1 ಭಕ್ತರಭೀಷ್ಟವ ಪೂರ್ತಿಗೊಳಿಸುವಿ | ಶಕ್ತ ಅಶಕ್ತನು ಎಂಬ ಭೇದಗಳಿಲ್ಲ ಭಕ್ತನೆಂದರೆ ಸಾಕು ಪಾಲಿಸುತಿರುವಿ 2 ಬಾಲಕನಾದರು ಕೊಟ್ಟ ನೈವೇದ್ಯವ ಬಾಲಕ ಪಿತ ಬಂದು ಪಾತ್ರವ ಕೇಳಲು ಜಲದೊಳಗುಂಟೆಂದು ಸ್ವಪ್ನದಿ ನುಡಿದಿ 3 ಬೇಸಿದ ಮಾವಿನ ಫಲದೊಳು ಪ್ರೇಮವೊ ಬಾಲನ ನುಡಿಯೊಳಗಾಯ್ತೇನೊ ಪ್ರೇಮ | ದಾಸರೊಳ್ನಿನಗಿಪ್ಪ ಪ್ರೇಮವ ಜಗಕೆಲ್ಲ ಬಾಲನಿಂದಲಿ ತೋರ್ದೆ ವಿಷ್ಣುಮೂರುತಿಯೆ 4 ರಾಜೇಶ ಹಯಮುಖಕಿಂಕರಾಗ್ರಣಿ ವಾದಿ- ರಾಜರಾಯರಿಗಿಷ್ಟವಿತ್ತು ಪಾಲಿಸಿದಿ | ಇಷ್ಟದ ಶಿಶುಗಳು ಬೇಡದಿದ್ದರು ಮಾತೆ ಇಷ್ಟವಿತ್ತಂತೆ ನೀ ಪೊರೆಯುವೆ ದೊರೆಯೆ 5
--------------
ವಿಶ್ವೇಂದ್ರತೀರ್ಥ
ಶೌರಿ ಅಡಿಗಳನು ಧ್ಯಾನಿಸುವ ಮತಿ ಕೋರಿ ಪ ಮೃಡ ಪುರಂದರರೊಡೆಯ ಶ್ರೀಹರಿ ಕಡಲಶಯನನ ಬಿಡದೆ ಭಜಿಪರ ಸಡಗರದಿ ಸನ್ಮಾರ್ಗ ತೋರುವ ಬಡವರ ಆಧಾರಿ ನರಹರಿ ಅ.ಪ ನಿನ್ನ ದಾಸರ ಸಂಗದೊಳಿರಿಸೆನ್ನ ಬೇಡುವೆನು ನಿನ್ನ ನಿನ್ನ ನಾಮಸ್ಮರಣೆ ಅನುದಿನ ನಿನ್ನ ಚರಣವ ಭಜಿಪ ಭಕ್ತರನು ಕೊಂಡಾಡುವಂಥ ಅ- ಚ್ಛಿನ್ನ ಭಕ್ತರ ಕೂಟದಲಿರಿಸೆನ್ನ ಸನ್ನುತಾಂಗನೆ ಸರ್ವವ್ಯಾಪಕ ನಿನ್ನ ಮೊರೆ ಹೊಕ್ಕಿರುವೆ ಪಾಲಿಸು ಪನ್ನಗಾದ್ರಿವಾಸ ವೆಂಕಟ ಆ- ಪನ್ನ ಜನರನು ಪೊರೆವ ಕರುಣಿಯೆ 1 ಗಜ ನೀ ಕೇಳಿ ತ್ವರದೊಳು ಬಿಡದೆ ರಕ್ಷಿಸಿ ಪೊರೆದ ಕರುಣಾಳು ಬಡವ ವಿಪ್ರಗೆ ಒಲಿದೆ ಕ್ಷಿಪ್ರದೊಳು ಸೌಭಾಗ್ಯವಿತ್ತೆ ಹುಡುಗ ತಪವಿರೆ ಅಂದು ಅಡವಿಯೊಳು ತಡೆಯದಲೆ ನೀನೊಲಿದೆ ಭಕುತಿಗೆ ಒಡೆಯರೈವರ ಮಡದಿ ಮೊರೆ ಕೇಳಿ ಬಿಡದೆ ಅಕ್ಷಯವೆಂದು ಸಲಹಿದೆ ದೃಢ ಭಕುತರನು ಬಿಡದೆ ಪೊರೆಯುವೆ 2 ರಂಗನಾಥ ನಿನ್ನಂಘ್ರಿ ಕಮಲಗಳ ಭಜಿಸುವವರ ಭವ ಹಿಂಗಿಸುತ ಪೊರೆದಂಥ ಚರಿತೆಗಳ ಸಂಗರಹಿತನೆ ಬಿಡಿಸು ಬಂಧಗಳ ಸಲಹೆಂದು ಪ್ರಾರ್ಥಿಪೆ ಅಂಗಜನಪಿತ ತರಿದೆನ್ನಪರಾಧ ಮಂಗಳಾಂಗ ಪ್ಲವಂಗ ವತ್ಸರ ಗಂಗಾಜನಕ ನಿನ್ನಂಘ್ರಿ ಭಜಕರ ಹಿಂಗದಲೆ ಪಾಲಿಸುತ ಪೊರೆ ಕೃಪಾ-ಪಾಂಗ ಕಮಲನಾಭ ವಿಠ್ಠಲನೆ 3
--------------
ನಿಡಗುರುಕಿ ಜೀವೂಬಾಯಿ
ಸರಿ ಯಾರೊ ನಿನಗೆ ಪರಮ ಕರುಣಾನಿಧೆ ಪ ಸರಿ ಯಾರೊ ನಿನಗೆ ಗರುಡವಾಹನ ನಿನ್ನ ಸ್ಮರಿಸುತಿರುವರನು ಕರುಣದಿ ಪೊರೆಯುವೆ ಅ.ಪ. ಕರಿರಾಜ ಕೂಗಲು ಭರದಿಂದ ಪೋದೆಯೊ ಸರಸಿಜ ಭವನುತ ಸುರಗಣ ಸೇವಿತ 1 ಕಂದನ ಮಾತನು ಛಂದದಿಂ ಕೇಳುತ ಬಂದು ಸಂತೈಸಿದ ಇಂದಿರ ರಮಣನೆ 2 ದುಷ್ಟರ ಸದೆಯುತ ಶಿಷ್ಟರ ರಕ್ಷಿಸುವ ದಿಟ್ಟ ರಂಗೇಶವಿಠಲರಾಯನೆ 3
--------------
ರಂಗೇಶವಿಠಲದಾಸರು