ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಾರಮ್ಮಯ್ಯಾ ರಘುಕುಲ ರಾಮಚಂದಿರನ ಪ ಈರೇಳು ವರುಷವು ಮೀರಿ ಪೋಗುತಲಿದೆಸೇರದನ್ನೋದಕ ಮಾರಪಿತನ ಕರೆ ಅ.ಪ. ಪರ್ಣ ಶಾಲೆಯಂತೆ ಅಲ್ಲಿ ಸು-ವರ್ಣದ ಮೃಗವಂತೆ ||ಕನ್ಯೆ ಸೀತಾಂಗನೆ ಬಯಸಿದಳಂತೆಸ್ವರ್ಣಾಂಬರ ಬೆನ್ಹತ್ತಿ ಪೋದನಂತೇ 1 ಲಕ್ಷ್ಮಣ ಅಲ್ಲಿಂದ ಪೋಗಲುತಕ್ಷಣ ಖಳ ಬಂದ ||ಲಕ್ಷ್ಮಿಯಾಕೃತಿಯ ಕೊಂಡು ಪೋಗೆ ಕಮ-ಲೇಕ್ಷಣ ಪೊರಟನು ತೀಕ್ಷಣವಲ್ಲಿಗೆ 2 ಅಂಜನೆ ಸುತ ಬಂದ ಹರಿಪದಕಂಜಕೆರಗಿ ನಿಂದಾ ||ಕುಂಜರಗಮನೆಯ ಕುರುಹು ಪೇಳೆನೆ ನಿ-ರಂಜನ ಮೂರ್ತಿಗೆ ಅಂಜದೆ ಬೆಸಸಿದ 3 ಶರಧಿಯನೇ ಹಾರಿ ಉಂಗುರಧರಣಿಸುತೆಗೆ ತೋರೀ ||ತರು ಪುರ ಗೋಪುರ ಉರುಹಿ ಚೂಡಾಮಣಿಹರಿಗೆ ಸಮರ್ಪಿಸಿ ಹರುಷದಲಿಹನಂತೆ 4 ಸೇತುವಿಯನೆ ಕಟ್ಟಿ ಖಳಕುಲನಾಥನ ತರಿದೊಟ್ಟೀ ||ಸೀತೆ ಸಹಿತ ಮೋಹನ್ನ ವಿಠ್ಠಲ ಜಗ-ನ್ನಾಥ ಹೊರಟನಂತೇ ಕಾಂತೇ 5
--------------
ಮೋಹನದಾಸರು
ಲಕ್ಷ್ಮೀಶ ಪಾಲಿಸು ಎನ್ನ ಲಕ್ಷ್ಮೀಶ ಪ. ಲಕ್ಷ್ಮೀಶ ಪಾಲಿಸೊ ಎನ್ನ | ಜಗ ದ್ರಕ್ಷಕ ಪರಮಪಾವನ್ನ ಈಕ್ಷಿಸು ಕರುಣ ಕಟಾಕ್ಷವ ಬೀರುತ ಕುಕ್ಷಿಯೊಳಗೆ ಜಗ ರಕ್ಷಿಸುತಿಪ್ಪನೆ ಅ.ಪ. ನಾಗರಾಜನ ಗಿರಿವಾಸ | ಭೋಗ ಆಗುಮಾಡೆಲೊ ಸರ್ವೇಶ | ನಿನಗೆ ಬಾಗಿ ನಮಿಸುವೆ ಜಗದೀಶ | ಭವ ರೋಗ ಹರಿಸು ಕ್ಲೇಶನಾಶ | ಆಹ ಕೂಗಿದರು ನಿನಗೀಗ ಕೇಳಿಸದೇನೊ ಜಾಗುಮಾಡದೆ ನೀಡೊ 1 ಸೃಷ್ಟಿಗೆ ಎನ್ನನು ಕರೆದೆ | ಭವ ಕಷ್ಟದಿ ಬಂಧಿಸಿ ತಂದೆ | ಇನ್ನು ಘಟ್ಯಾಗಿ ಕಾಪಾಡು ಎಂದೆ | ಮೊರೆ ಮುಟ್ಟದೆ ನಿನಗಿನ್ನು ತಂದೆ | ಆಹ ಎಷ್ಟು ಬೇಡಿದರು ಸೊಟ್ಟ ತಿರುಗಿ ಮೊಗ ಅಟ್ಟಕೆ ಏರುವಿ ಬೆಟ್ಟದೊಡೆಯ ಹರಿ 2 ಕರ್ಮಬಂಧನಗಳ ಕಡಿಯೊ | ಶ್ರೀಶ ನಿರ್ಮಲರೂಪ ಕೈಪಿಡಿಯೊ | ಬೇಗ ಧರ್ಮ ಅಧರ್ಮವ ತಿಳಿಯೊ | ಜಗ ತ್ಕರ್ಮ ಸಾಕ್ಷಿಯೆ ಬೇಗ ಪೊರೆಯೊ | ಆಹ ಧರ್ಮವಲ್ಲವೊ ಹೀಗೆ ಮರ್ಮವ ನುಡಿವುದು ಪೆರ್ಮೆಯಿಂದಲಿ ಅಂತರ್ಮರ್ಮವರಿತು ಕಾಯೊ 3 ಶ್ರೀನಿವಾಸ ಬಾರೊ ಬೇಗ | ನಿನ್ನ ನಾನು ನಂಬಿದೆನೊ ಶ್ರೀ ಭೋಗ | ನೀಗು ನೀನೆ ತ್ರಿಕರ್ಮದ ಭೋಗ | ಬೇಗ ಭವ ರೋಗ | ಆಹ ಪೋಗುತಲಿದೆ ದಿನ ಜಾಗುಮಾಡಲು ಸಲ್ಲ ನಾಗಶಯನ ಎನ್ನ ಬೇಗನೆ ರಕ್ಷಿಸೊ 4 ಕಣ್ಣು ಬಿಟ್ಟಿರುವೆಯೊ ನೀನು | ನಿನ್ನ ಬೆನ್ನ ಭಾರವಿದಿನ್ನೇನು | ಕೋರೆ ಮಣ್ಣು ಆರ್ಭಟಿಸುವೆ ನೀನು | ವಟು ಚಿಣ್ಣ ಭಾರ್ಗವ ನೀನು | ಆಹ ಮನ್ನಿಸಿ ಕಪಿಗಳ ಬೆÉಣ್ಣೆ ಕಳ್ಳನೆನಿಸಿ ಬಣ್ಣಗೆಟ್ಟು ಹಯವನ್ನೇರಿದ ಧೀರ 5 ನಿತ್ಯ ತೃಪ್ತನೆ ಎನ್ನ ಮನದಿ | ಸರ್ವ ತತ್ವಾಧಿಪತಿಗಳು ಮುದದಿ | ಜಗ ತ್ಕರ್ತನೆ ಕಾಯ್ವ ದಯದಿ | ಬೇಗ ಇತ್ತು ಮತಿಯ ಸಲಹೊ ದೃಢದಿ | ಆಹ ಸತ್ಯರೂಪನೊ ನೀ ಸತ್ಯ ಸಂಕಲ್ಪನೊ ನಿತ್ಯ ನಿಂತು ಕಾಯೊ 6 ಗೋಪಾಲಕೃಷ್ಣ ವಿಠ್ಠಲ | ಭವ ಕೂಪದಿಂದೆತ್ತೊ ಶ್ರೀ ನಲ್ಲ | ಎನ್ನ ರಾಪು ಮಾಡುವುದುಚಿತಲ್ಲ | ಜಗ ದ್ವ್ಯಾಪಕ ಭಕ್ತವತ್ಸಲ | ಆಹ ಈ ಪಯೋಜಜಾಂಡದಿ ರೂಪ ರೂಪಾಂತರದಿ ವ್ಯಾಪಾರ ನಡೆಸುವ ಗೋಪಕುವರ ಕಾಯೊ 7
--------------
ಅಂಬಾಬಾಯಿ
ಹರಿ ನಿನ್ನ ದಾಸರ ಸೇವೆಯ ಕರುಣಿಸೆನಗೆ ಸುರಪತಿಯ ನಾನೊಲ್ಲೆನೈ ಪ ಸ್ಮರನ ಹಾವಳಿ ಬಿಡಿಸಿ ಗುರುಭಕ್ತಿಯನು ಕೊಟ್ಟು ನಿರುತವು ನಿನ್ನ ನಾ ಸ್ಮರಿಸುವಂದದಿ ಮಾಡು ಅ.ಪ ಎಷ್ಟು ಸ್ಥಿರ ಮಾಡಿದಾಗ್ಯು ಎನ್ನ ಮನ ಬಟ್ಟ ಕುಚೆಯರ ಬಲೆಗೆ ಸಿಲುಕುತಲಿ ಬಿಟ್ಟು ನಿನ್ನಯ ಧ್ಯಾನ ಕೆಟ್ಟುಪೋಗುತಲಿದೆ ದಿಟ್ಟ ನಿನ್ನ ಮಗನ ಬಲುಹಿನ್ನೆಷ್ಟೆಂದು ಪೇಳಲೊ 1 ಕುಸುಮಗಂಧಿಯರ ಓರೆನೋಟವೆಂಬ ಮಸೆದ ಕಣೆಯ ತಾನು ಪೂಡುತಲಿ ಎಸೆ ಮೋಹತಿಗೆ ನಾ ಸೈರಿಸಲಾರೆನೋ ಬಿಸಜನಾಭನೆ ನಿನ್ನ ಸುತಗೆ ಪೇಳೋ ಬುದ್ಧಿ 2 ಅಂಗನೆಯರ ಸವಿ ನುಡಿಗಳಿಗೆ ನಾ ಮರುಗಿ ಭೃಂಗದಂತವರ ಬಲೆಗೆ ಬೀಳದಂತೆ ಸಂಗ ಸುಜನರಲ್ಲಿ ಇತ್ತು ಕಾಯೊ ದೇವ ಅಂಗಜಪಿತ ಶ್ರೀ ರಂಗೇಶವಿಠಲನೇ 3
--------------
ರಂಗೇಶವಿಠಲದಾಸರು