ಒಟ್ಟು 67 ಕಡೆಗಳಲ್ಲಿ , 28 ದಾಸರು , 66 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

1. ಗಜೇಂದ್ರಮೋಕ್ಷ ನಾರಾಯಣ ಎನ್ನಿರೊ ನಾರಾಯಣ ಎನ್ನಿ ನಾರದಾದ್ಯಖಿಳ ಮುನಿವಿನುತಾಯ ಪಾಹಿಮಾಂ ಘೋರ ಭವದುಃಖ ಸಂಹಾರಾಯ ಪ ಪಾಂಡುದೇಶದೊಳು ಇಂದ್ರದ್ಯುಮ್ನನೆಂಬ ಭೂ ಮಂಡಲಾಧಿಪನು ವೈರಾಗ್ಯದಲಿ ಹರಿಪಾದ ಪುಂಡರೀಕಧ್ಯಾನಪರನಾಗಿತಪಸಿಲಿರೆಚಂಡತಾಪಸನಗಸ್ತ್ಯಾ ಹಿಂಡು ಶಿಷ್ಯರ ಬೆರೆಸಿ ಬರಲು ಸತ್ಕರಿಸದಿರೆ ಕಂಡು ಗಜಯೋನಿಯೊಳು ಜನಿಸು ಪೋಗೆಂದು ಉ- ತಾ ಶುಂಡಾಲನಾದನರಸ 1 ಕ್ಷೀರಸಾಗರ ತಡದೊಳೈವತ್ತು ಯೋಜನ ವಿ- ಸ್ತಾರದಿಂದಿರುವ ತ್ರಿಕೂಟಾದ್ರಿ ಶೃಂಗತ್ರಯದಿ ರಾರಾಜಿತ ತಾಮ್ರರಚಿತ ಕಾಂಚನದಿಂದ ಮೇರುಸಮ ಗಂಭೀರದಿ ಪಾರಿಜಾತಾಂಭೋಜ ತುಳಸಿ ಮಲ್ಲಿಗೆ ಜಾಜಿ ಸೌರಭಗಳಶ್ವತ್ಥ ಚೂತ ಪುನ್ನಾಗ ಜಂ ವಾರಣೀಂದ್ರನು ಮೆರೆದನು 2 ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲಾ ಕಾನನವು ತೊಳಲುತ್ತ ಬೇಸಿಗೆಯ ಬಿಸಲಿನಲಿ ಕಂಡಿತು ಪಾನಾಭಿಲಾಷೆಯಿಂದ ನಾನಾ ಪ್ರಕಾರದಿಂ ಜಲಕ್ರೀಡೆಯಾಡುತಿರೆ ಏನಿದೆತ್ತಣ ರಭಸವೆಂದುಗ್ರಕೋಪದಿಂ ನೆಗಳು ಏನೆಂಬೆನಾಕ್ಷಣದೊಳು 3 ಒತ್ತಿ ಹಿಡಿದೆಳೆವುತಿರೆ ಇದೆತ್ತಣಯದೆನುತ ಮತ್ತೆ ಇಭರಾಜನೌಡೆತ್ತಿ ಫೀಳಿಡುತ ಎಳೆ ಸೆಳೆದುದು ಬಿಡದೆ ನೆಗಳವು ಇತ್ತಂಡವಿತ್ತು ಕಾದಿತ್ತು ಸಾವಿರ ವರುಷ ಪೊತ್ತರಿಸಿತ್ತೇನೆಂಬೆ ಮತ್ತಾ ಗಜೇಂದ್ರಂಗೆ ಚಿಂತಿಸುತ ಮತ್ತ್ಯಾರು ತನಗೆನುತಲಿ 4 ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ ದಿಂ ದಿವ್ಯಜ್ಞಾನದಿಂ ಕಣ್ತೆರೆದು ಕೈಮುಗಿದು ಮುಕುಂದ ಮುನಿವೃಂದವಂದ್ಯಾ ಇಂದಿರಾರಮಣ ಗೋವಿಂದ ಕೃಷ್ಣ ಭಕ್ತರ ಬಂಧು ಕರುಣಾಸಿಂಧು ತಂದೆ ಸಲಹೆನ್ನ ನಾ ಮಾಯಾಪ್ರಬಂಧದಿ ನೆಗಳಿನಿಂ 5 ಪರಮಾತ್ಮ ಪರಮೇಶ ಪರಿಪೂರ್ಣ ಪರಾತ್ಪರ ಉರುತರ ಪರಂಜ್ಯೋತಿ ಪರಮಪಾವನ ಮೂರ್ತಿ ಪರಮೇಷ್ಠಿ ಪರಮಪುರುಷಾ ನಿರುಪಮ ನಿಜಾನಂದ ನಿರ್ಭಯ ನಿರಾವರಣ ನಿರಂಜನ ನಿರಾಧಾರ ನಿರವೇದ್ಯ ನಿಶ್ಯಂಕ ನಿತ್ಯನೈಮಿತ್ಯಕಾ ನೀ ಸಲಹೆನ್ನನೆಂದಾನೆ 6 ಗುಪಿತ ಕಂಠಧ್ವನಿಯೊ ಳಂತರಾತ್ಮಕನ ನೆನೆವುತ್ತಳುತ್ತಿರಲಿತ್ತ ಕರುಣದಿಂದಾಕ್ಷಣದೊಳನಂತಶಯನದೊಳೆದ್ದನು ಸಂತವಿಸಿ ಸಿರಿಮುಡಿಯ ಗರುಡವಾಹನನಾಗಿ ಚಿಂತೆಬೇಡವೆನುತ ಅಭಯ ಹಸ್ತ ಕೊಡುತ ಶ್ರೀ ದಂತಿವದನನ ನೆಗಹಿದಾ 7 ನೆಗಳ ಬಾಯನು ಚಕ್ರದಲಿ ಸೀಳಿ ಕರಿವರನ ಉಗುವ ಕರುಣದಿಂ ಮೈದಡಹಲ್ಕೆ ಗಜಜನ್ಮ ಕುಂಡಲದಿಂದ ಮಿಗೆ ಶೋಭಿಸುತಲೆಸೆದನು ವಿಗಡ ದೇವಲ ಋಷಿಯ ಶಾಪದಲಿ ಬಿದ್ದಿಳೆಗೆ ಮಿಗೆನಕ್ರನಾಗಿ ಹೂಹೂ ಎಂಬ ಗಂಧರ್ವ ಅಮರರೊಲುಮೆಗೆ ನೆರೆದನೋಲೈಸುತ 8 ಮಣಿಮಯ ಕಿರೀಟಕುಂಡಲ ಹಾರ ಪದಕ ಕಂ ಕಣ ಕೌಸ್ತುಭೋಜ್ವಲ ಸುಗಂಧ ಭೂಷಣ ಹಸ್ತ ಪಾಣಿಯಾ ಶಂಖಚಕ್ರಾಬ್ಜಧ್ವಜ ಕಸ್ತೂರಿ ತಿಲಕ ಪ್ರಣವ ತಾಕಿದನು [ಝಣ ಝಣಿತನೂ]ಪುರ[ದ] ದಂತ ಪಂಕ್ತಿಯ ಕೃಪೆ ಸಿರಿ ಮೊಗದ ಪೀತಾಂಬರದಾಲಂಕೃತದ ಸುರಸಿದ್ಧ ಸಾಧ್ಯ ಸಂದಣಿಯೊಳಗೆ ಮೆರೆದನು 9 ಹರಿಯನುತಿಗೈದಂಘ್ರಿಗೆರಗಲಾಕ್ಷಣದಲಿ ಭರದಿಂದಲೆತ್ತಿ ಕೇಳ್ಮಗನೆನ್ನನೀ ಶರಧಿ ಗಿರಿಶೃಂಗತ್ರಯ ಸಪ್ತದ್ವೀಪದಲಿ [ಧರಣಿದೇವಿ] ವರಲಕ್ಷ್ಮಿಯೊಳು ಗರುಡ ಶೇಷ ನಾರದ ಪ್ರಹ್ಲಾದ ಧ್ರುವ ರೊಲು ಸಿರಿವತ್ಸ ಶಂಖ ಚಕ್ರಾವತಾರದಲಿ ಸ್ಮರಿಸುವವರ ಕಾಯ್ವೆನೆಂದಾ 10 ಆವನಿದನುದಯ ಕಾಲದೊಳೆದ್ದು ಭಕ್ತಿಯಿಂ ಭಾವಶುದ್ಧಿಯಲಿ ಭಜನೆಯ ಮಾಳ್ಪ ಜನರಿಗ ಫಾವಳಿಯ ಪರಿಹರಿಸಿ ನರಜನ್ಮವನು ಕಳೆದು ಪರಿಶುದ್ಧರಾದಹರೆಂ- ದಾ ವಾಸುದೇವನಾಜ್ಞಾಪಿಸಿದ ಗಜೇಂದ್ರ ಸಹಿ ತಾ ವಿಹಂಗಾಧಿಪನನೇರಿ ಬಿಜಯಂಗೈದ ಆ ವೈಕುಂಠಪತಿಯ ನಂಬಿದ ಸೇವಕರಿಗೇನಿದು ಚೋದ್ಯವೇ11
--------------
ಬೇಲೂರು ವೈಕುಂಠದಾಸರು
ಶ್ರೀಮದ್ರಾಮಾಯಣ ಮಂಗಳಂ ಮಂಗಳಂ ಮಹಾನುಭಾವಗೆ ಮಂಗಳಂ ಲೋಕಮಾತೆ ಸೀತೆಗೆ ಮಂಗಳಂ ಶತ್ರುಘ್ನ ಭರತಗೆ ಮಂಗಳಂ ಸೌಮಿತ್ರಿರಾಮಗೆ ಪ ದಶರಥನ ಉದರದಲಿ ಜನಿಸುವೆನೆಂದು ವರವನಿತ್ತ ರಾಮಚಂದ್ರಗೆ 1 ಭರತಸಹವಾಗಿ ಜನಿಸಿದ ರಾಮಚಂದ್ರಗೆ 2 ಜಾತಕರ್ಮವು ನಾಮಕರಣವು ಚೌಲ ಉಪನಯನಗಳ ಮಾಡಿ ವಿಶ್ವಾ ಮಿತ್ರರೊಡನೆ ಸಕಲ ವಿದ್ಯವ ಕಲಿಯೆ ಪೊರಟ ರಾಮಗೆ3 ಬಲ ಅತಿಬಲವೆಂಬ ವಿದ್ಯವ ವಿಶ್ವಾಮಿತ್ರರೊಡನೆ ಕಲಿತು ಅಶ್ವಿನಿದೇವತೆಗಳಂದದಿ ಬಂದ ಸೌಮಿತ್ರಿರಾಮ್ರಗೆ 4 ಭರದಲಿ ಅನಂಗನಾಶ್ರಮವನು ಪೊಕ್ಕು ಸರಯು ನದಿಯನು ದಾಟಿ ಬರದೂಷಣಜಾ ದೇಶದೊಳಗುಳ್ಳ ತಾಟಕಾಂತಕ ರಾಮಚಂದ್ರಗೆ 5 ಅಸ್ತ್ರವನ್ನು ಗ್ರಹಿಸಿ ಬೇಗನೆ ಸಿದ್ಧಾಶ್ರಮಕ್ಕೆ ನಡೆತಂದು ಸುಭಾಹುವ ನು ಸಂಹರಿಸಿ ಭರದಿ ಮಾರೀಚನ ಹಾರಿಸಿದ ರಾಮಗೆ 6 ವಿಶ್ವಾಮಿತ್ರರ ಯಜ್ಞ ಪಾಲಿಸಿ ಕುಶನ ವಂಶವಿಸ್ತಾರವ ಕೇಳಿ ಆಸರ [ಯು]ನದಿಯ ದಾಟಿ ಭರದದಿತಿಯಾಶ್ರಮಕೆ ಬಂದ ರಾಮಗೆ 7 ಮರುತ್ತ ಜನ್ಮವ ಕೇಳಿ ಅಹಲ್ಯೆಯನ್ನು ಪಾವನ ಮಾಡಿ ಬಂದ ರಾಮಗೆ 8 ಜನಕ ವಂದಿಸಿ ಧನ್ಯನೆನ್ನಲು ವಿಶ್ವಾಮಿತ್ರರು ವೃತ್ತಾಂತ ಹೇಳಿ ಧನುವ ತರಿಸಲು ನೋಡಿ ಕ್ಷಣದಿಮುರಿದಾ ರಾಮಚಂದ್ರಗೆ 9 ಕರವ ಪಿಡಿದು ಪೊರಟ ರಾಮಗೆ 10 [ಬೇಗ]ಮಾತಾಪಿತರ ಮಾತನಡೆಸಿ ಪ್ರೀತಿತೋರಿದ ಸೀತಾರಾಮಗೆ 11 ಕಂಡವರ ಮನದಲ್ಲಿ ರಮಿಸುವ ಪುಂಡರೀಕಾಕ್ಷನಿಗೆ ರಾಜ್ಯವ ಕೊಡುವೆನೆ[ನುತ] ದಶರಥ ವ್ರತವನಾಚರಿಸಿದ ರಾಮಚಂದ್ರಗೆ 12 ಕೈಕೆ ಪೂರ್ವದ ವರವ ಸ್ಮರಿಸಿ ಭರತನಿಗೆ ರಾಜ್ಯವನು ಬೇಡಿ ರಾಮನರ ಣ್ಯಕ್ಕೆ ಪೋಗೆನೆ ಬೇಗ ಪೊರಟ ಶ್ರೀರಾಮಚಂದ್ರಗೆ 13 ಮಾತೆಯನು ಬಹುವಿಧದಿ ಮನ್ನಿಸಿ ಪಿತನ ಪ್ರತಿಜ್ಞೆಯನು ಪಾಲಿಸಿ ಸೀತೆಲಕ್ಷ್ಮಣರೊಡನೆ ವನವಾಸಕ್ಕೆ ಪೊರಟ ರಾಮಚಂದ್ರಗೆ 14 ಪುರದ ಜನರನು ಸಂತವಿಟ್ಟು ಗುಹನ ಸಖ್ಯದಿ ನದಿಯ ದಾಟಿ ಭರದಿ ಭಾರದ್ವಾಜರ ಕಂಡು ಚಿತ್ರಕೂಟಕ್ಕೆ ಬಂದ ರಾಮಗೆ 15 ಅರಸು ಸ್ವರ್ಗವನೈದೆ ಭರತನಕರಸಿ ಕರ್ಮವನೆಲ್ಲ ಕಳೆದು [ವರ] ಮಾತೆಗೆ ಭಾಷೆ ಕೊಟ್ಟು ತಮ್ಮನಾಲಿಂಗಿಸಿದ ರಾಮಗೆ 16 ಭರತನಂಕದೊಳಿಟ್ಟು ಪ್ರೇಮದಿ ಮನ್ನಸಿ ಮೃದುವಾಕ್ಯದಿಂದ ಗುರುಗಳನುಮತದಿಂದ ಪಾದುಕೆಯಿತ್ತು ಕಳುಹಿದ ರಾಮಚಂದ್ರಗೆ 17 ಬೇಗನೆ ಚಿತ್ರಕೂಟವ ಬಿಟ್ಟು ಅತ್ರಿ ಯಾಶ್ರಮಕೆ ಬಂದು ಅಂಗರಾಗಾರ್ಪಣವನೆಲ್ಲ ಅಂಗೀಕರಿಸಿದ ರಾಮಚಂದ್ರಗೆ 18 ದಂಡಕಾರಣ್ಯವನ್ನು ಪೊಕ್ಕು ಉದ್ದಂಡವಿರಾಧನ್ನ ಕೊಂದು ಕಂಡು ಇಂದ್ರನ ಶರಭಂಗರಿಗೆ ಮುಕ್ತಿಯನಿತ್ತ ಶ್ರೀರಾಮಚಂದ್ರಗೆ 19 ಋಷಿಗಳಿಗೆ ಅಭಯವನು ಇತ್ತು ಲೋಕಮಾತೆಯ ನುಡಿಯ ಕೇಳಿ ಋಷಿಮಂಡಲವನು ಪೊಕ್ಕು ಬಂದು ಸುತೀಕ್ಷ್ಣರ ಕಂಡ ರಾಮಗೆ 20 ಅಸ್ತ್ರವನು ಕೊಡಲು ಗ್ರಹಿಸಿ ಪಂಚವಟಿಗೆ ಬಂದ ರಾಮಗೆ 21 ಶೂರ್ಪನಖಿ ರಘುಪತಿಯ ಮೋಹಿಸೆ ಕರ್ಣನಾಸಿಕವನ್ನು ಛೇದಿಸಿ ದುರುಳ ಖರದೂಷಣರ ಕೊಂದು ಸತಿಯನಾಲಿಂಗಿಸಿದ ರಾಮಗೆ 22 ದುರುಳ ಖಳನು ಜಾನಕಿಯ ಕದ್ದೊಯ್ಯೆ ಮಾರಿಚನ್ನ ಕೊಂದು ಬರುತ ಮಾರ್ಗದಿ ಗೃಧ್ರರಾಜಗೆ ಮುಕ್ತಿಯಿತ್ತ ಶ್ರೀರಾಮಚಂದ್ರಗೆ 23 ಕಬಂಧನಾ ವಾಕ್ಯವನು ಕೇಳಿ ಮಾರ್ಗದಲಿ ಅಯಮುಖಿಯ ಭಂಗಿಸಿ ಶಬರಿ ಭಕ್ತಿಯೊಳಿತ್ತ ಫಲವನು ಸವಿದು ಮುಕ್ತಿಯನಿತ್ತ ರಾಮಗೆ 24 ಸೀತೆಯರಸುತ ಮಾರ್ಗದಲಿ ಋಷ್ಯಮೂಕಪರ್ವತವ ಸೇರಿ ಪಂ ಪಾತೀರದಿ ತಮ್ಮನೊ[ಂದಿ]ಗೆ ನಿಂತ ಶ್ರೀರಘುರಾಮಚಂದ್ರಗೆ 25 ಪಂಪಾಪುಳಿನದ ವನವಕಂಡು ಪಂಕಜಾಕ್ಷಿಯ ನೆನೆದು ವಿರಹ [ತಾಪದರೆ] ಬಂದ ಆಂಜನೇಯಗೆ ಸಖ್ಯ ನೀಡಿದ ರಾಮಚಂದ್ರಗೆ 26 ಅಭಯವನು ಇತ್ತು ರವಿಜಗೆ ಏಳು ತಾಳೇಮರವ ಛೇದಿಸಿ ದುಂ ದುಭಿಯ ಕಾಯವನು ಒಗೆದ ಇಂದಿರಾಪತಿ ರಾಮಚಂದ್ರಗೆ 27 ಇಂದ್ರಸುತನು ರವಿಜನೊಡನೆ ದ್ವಂದ್ವಯುದ್ಧವ ಮಾಡುತಿರಲು ಒಂದುಬಾಣದಿಂದ ವಾಲಿಯ ಕೊಂದು ಕೆಡಹಿದ ರಾಮಚಂದ್ರಗೆ 28 ಮುದ್ರೆಯುಂಗುರವಿತ್ತು [ಅ]ಸಾಧ್ಯ ಇವನೆಂತೆಂದ ರಾಮಗೆ 29 ಬೆಳೆದ ಹನುಮಗೆ 30 ಶತ್ರುಪಟ್ಟಣವ ಕಂಡು ಛಾಯೆಯ ಕುಟ್ಟಿ ಸುರಚಿಯುಪಾಯದಿಮನ್ನಿ ಸುತ್ತ ಮೈನಕನ ಭರದಲಿ ಲಂಕಿಣಿಯನಡಗಿಸಿದ ಹನುಮಗೆ 31 [ವೀರ] ಹನುಮಗೆ 32 ದುರುಳ ರಾ ವಣನ ನಿಂದಿಸಿ ಪುರವಸುಟ್ಟಾ ವೀರಹನುಮಗೆ 33 ಸೀತೆಯೊಡನೆ ಗುರುತಕೇಳಿ ಸಮುದ್ರತೀರಕೆ ಬಂದು ಬೇಗನೆ ಜಾಂಬ ವಂತ ಅಂಗದರ ಕೂಡಿ ಮಧುವನವ ಭಂಗಿಸಿದ ಹನುಮಗೆ 34 ಕಂಡೆ ಲೋಕಮಾತೆಯನನ್ನೆನ್ನುತ ಬಂದು ಮುದದಿ ವಂದಿಸಿ ಇತ್ತ ಹನುಮನನಾಲಿಂಗಿಸಿದವಗೆ 35 ಬಂದ ರಾಮಗೆ 36 [ಭಕ್ತ] ವಿಭೀಷಣಗೆ ಅಭಯವನಿತ್ತು ಶರಧಿಗೆ ಸೇತುವೆಯನ್ನು ಬಂಧಿಸಿ ಮುತ್ತಿ ಲಂಕಾಪುರವ ಸಂಧಿಗೆ ಅಂಗದನ ಕಳುಹಿಸಿದ ರಾಮಗೆ 37 ಇಂದ್ರ[ಜಿತ್ತು]ವೊಡನೆ ಕಾದಿ ಸರ್ಪಾಸ್ತ್ರದಿಂದ ಬಿಡಿಸಿಕೊಂಡು [ಆ]ದುರುಳ ರಾವಣನ ನಡುಗಿಸಿ ಕಿರೀಟವನು ಭಂಗಿಸಿದ ರಾಮಗೆ 38 ಕುಂಭಕರ್ಣನ ತುಂಡುತುಂಡಾಗಿ ಕೊಂದುಕೆಡಹಿದ ರಾಮಚಂದ್ರಗೆ 39 ಕೊಂದು ವಜ್ರದಂಷ್ಟ್ರ ಆಕಂಪ ದೇವಾಂತಕ ನರಾಂತಕರನ್ನು ಮ ಹೋದರ ಮಹಾಪಾಶ್ರ್ವ ಅತಿಕಾಯ ತ್ರಿಶಿರಸ್ಸನ್ನು ಕೊಂದ ರಾಮಗೆ 40 ಮಾಯೆಯುದ್ಧದಿ ಮೇಘನಾಥನು [ಅನುಜನ] ಬ್ರಹ್ಮಾಸ್ತ್ರದಲಿ ಕಟ್ಟಲು ವಾಯುನಂದನನಿಂದ ಸಂಜೀವನವ ತರಿಸಿದ ರಾಮಚಂದ್ರಗೆ 41 ಮಾಯಾಸೀತೆಯ ಶಿರವನರಿಯಲು ವಿಭೀಷಣನ ಉ ಪಾಯದಿಂದ ಇಂದ್ರಜಿತ್ತು ಶಿರವಕಡಿದ ತಮ್ಮನಾಲಂಗಿಸಿದ ರಾಮಗೆ 42 ಮೂಲಬಲವನು ಕಡಿದು ರಾವಣನೊಡನೆ ಯುದ್ಧವ ಯೋಚಿಸೆ ಕಡಿದ ರಾಮಗೆ 43 ರಾವಣಾನೆಂಬ ಗಂಧಹಸ್ತಿಯ ರಾಮಕೇಸರಿ ಬಂದು ಮುರಿಯಲು ಸುರರು ಶಿರದಿ ಧರಿಸಿದ ರಾಮಚಂದ್ರಗೆ 44 ವಿಭೀಷಣಗೆ ಪಟ್ಟವನು ಕಟ್ಟಿ ಸೀತೆಯೊಡನೆ ಪ್ರತಿಜ್ಞೆ ಮಾಡಿ ರೆ ಬ್ರಹ್ಮರುದ್ರಾದಿಗಳು ಸ್ತುತಿಸಲು ತಂದೆಗೆರಗಿದ ರಾಮಚಂದ್ರಗೆ 45 ಸೀತೆಯಂಕದೊಳಿಟ್ಟು ಕಪಿಗಳಸಹಿತ ಪುಷ್ಪಕವೇರಿ ಭರದಿ [ಬ ರುತ್ತ] ಭಾರದ್ವಾಜರಿಗೆರಗಿ ಭರತನ ಮನ್ನಿಸಿದ ರಾಮಗೆ 46 ಕೈಕೆಸುತ ಕೈಮುಗಿದು ಕಿಶೋರ ಭಾರವ ತಾಳಲಾಗದೆಂದಾ ಳುತ [ಲಾ]ಯಿತ್ತ ರಾಜ್ಯವನ್ನು ಕೊಡಲು ಗ್ರಹಿಸಿದ ರಾಮಚಂದ್ರಗೆ 47 ಉಟ್ಟ ಮಡಿಯ ಜಟೆಯನುತಾ ಶೋಧಿಸೆ ಸೀತೆ ಸಕಲಾಭರಣ ತೊಟ್ಟು ಸುಗ್ರೀವ ಸಕಲರೊಡನೆ ರಥವನೇರಿದ ರಾಮಚಂದ್ರಗೆ 48 ಸರಮೆಪತಿ ಸೌಮಿತ್ರಿ ಚಾಮರ ಪಿಡಿಯೆ ಶತ್ರುಘ್ನ ಛತ್ರಿಯನು ಭರತ ಸಾರಥ್ಯವನು ಮಾಡಲು ಪುರಕೆತೆರಳಿದ ರಾಮಚಂದ್ರಗೆ 49 ರಾಜಗೃಹವನು ತೋರಿ ರವಿಜಗೆ ಶರಧಿಯುದಕಗಳೆಲ್ಲ ತರಿಸಿ [ವಿ ರಾಜಿಸಿ] ಪೀಠದಿ ಸೀತೆಯೊಡನೆ ವೊಪ್ಪಿದಾ ರಘುರಾಮಚಂದ್ರಗೆ 50 ವಸಿಷ್ಠ ಮೊದಲಾದ ಸಪ್ತ ಋಷಿಗಳು ಲಕ್ಷ್ಮೀಪತಿಗಭಿಷೇಕ ಮಾಡಲು ರಾಮಚಂದ್ರಗೆ 51 ಪಾದ ಪಿಡಿದಿಹ ರಾಮಚಂದ್ರಗೆ
--------------
ಯದುಗಿರಿಯಮ್ಮ
ಅಥ ಹನುಮದ್ವ್ರತ ಕಥಾ ಸುಳಾದಿ ಧ್ರುವ ತಾಳ ವೃತವೆ ಉತ್ತಮ ವೃತವೆಂದು ಪೇಳಿಹರು ಅತುಳ ಜ್ಞಾನನಿಧಿ ವಿಜಯಾಖ್ಯ ಗುರುಗಳು | ಸತತ ಅಧ್ಯಾತುಮ ಅನಂತ ವೃತವೆಂದು | ಕ್ಷಿತಿಯೊಳು ಈ ವೃತಕೆÀ ಸರಿಗಾಣೆನೊ | ಪತಿತ ಮಾನವರ ಉದ್ಧಾರಗೋಸುಗವಾಗಿ ದ್ವಿತಿಯ ಉತ್ತಮ ವೃತವು ಹನುಮದ್ಪ್ರತವೂ | ಯತನ ಜ್ಞಾನೇಚ್ಛಾ ಶಕ್ತ್ಯಾದಿಗಳಿಗೆ ನಿರುತ | ಜತೆಯಾಗಿ ಕಾರ್ಯ ಮಾಳ್ಪ ಜ್ಞಾನಾಖ್ಯವೃತವೊ | ಅತಿಶಯವಾದ ಜ್ಞಾನ ಭಕ್ತಿ ವಿರಕ್ತಿವೀವುದು | ಮತಿವಂತರು ಮನಕೆ ತಂದು ತಿಳಿದು | ಕ್ಷಿತಿಪತಿ ಧರ್ಮರಾಜನೆಸಗಿದ ಮಹಾ ವೃತವೊ | ಪತಿಭಕುತಿಯುಕುತಳಾದ ದ್ರೌಪದಿಯು | ಪತಿ ಮೂರ್ಲೋಕದ ಶ್ರೀ ಕೃಷ್ಣನುಪದೇಶದಂತ್ಯೆ | ಮಿತ ಜ್ಯಾನದಿಂದ ಚರಿತ ವ್ರತವೊ | ಹಿತವಂತ ಹನುಮಂತ ಪಿತ ರಾಮನಿಗೆ ಪೇಳೆ ಆ | ಚ್ಯುತನಾದ ರಾಮನುಮತಿವಾನ್ ಹನು | ಮಂತನ ಭಕುತಿಗೊಲಿದು ಮಾಡ್ಡ ವೃತವೊ | ಸತತ ಸೂತರು ಶೌನಕಾದ್ಯರಿಗಿದರ ಮಹಿಮೆ | ಮಿತಿ ಇಲ್ಲದೇ ಪೇಳಿ ಮಾಡಿಸಿದ ವೃತವೊ | ವೃತತಿಜಾಸನ ಪ್ರಿಯ ಸುತ ಸುಂದರ ವಿಠಲನ ಭ | ಕುತಿ ಜ್ಞಾನವೀವ ಮಹಾ ಶ್ರೇಷ್ಠ ವೃತವೊ 1 ಮಟ್ಟತಾಳ ಜಾನ್ಹವೀ ತೀರದಲಿ ಶೌನಕಾದ್ಯ ಮುನಿಗಳು | ಧ್ಯಾನಿ ಸೂತರ ಕುರಿತು ಸಾನುರಾಗದಿ ನಮಿಸಿ | ಮೇಣು ಭಕುತಿಯಿಂದ ಙÁ್ಞನವಂತರೆ ನಿಮ್ಮಿಂ | ನಿತ್ಯ | ಧೇನಿಸುವೆವು ಹರಿಯಾ ಪುನೀತರ ಮಾಡುವಾ | ಕಾಣೋವನ್ಯ ವೃತವು ಆವುದುಪೇಳೆನಲು | ನಿತ್ಯ ಶೂದ್ರಾದಿ ನಾಲ್ಕು | ಜಾಣ ವರ್ಣರಿಂದ ಮಾಡ್ವದಕ್ಕೆ ಯೋಗ್ಯವೊ | ಏನು ಬೇಡಿದರೆ ತಡಿಯದೆ ಕೊಡುವುದೊ | ಜ್ಞಾನಿ ಜನಗಳಿಗೆಲ್ಲ ಮಂಗಳತಮ ವೃತವು | ಪುತ್ರಾದಿಗಳೀವುದು ಶ್ರೇಣಿ ದಿನ ಪ್ರತಿ ದಿನದಲ್ಲಿ ವರವಿದ್ಯ ಪ್ರದವೊ ಹಾನಿ ಲಾಭಗಳಲ್ಲಿ ಹನುಮಂತನ ನೆನಸೆ | ಮಾನನಿಧಿ ಸುತ ಸುಂದರ ವಿಠಲನ | ಧ್ಯಾನ ಧಾರಣವೀವ ಉತ್ತುಮಾಮಹವೃತವೊ 1 ರೂಪಕ ತಾಳ ಒಂದಾನೊಂದು ಸಮಯದಲ್ಲಿ ಶ್ರೀ ವ್ಯಾಸ ಶಿಷ್ಯ | ವೃಂದದಿಂದೊಡಗೂಡಿ ಯುಧಿಷ್ಠರನ ನೋಡಲು | ಅಂದುಳ್ಳ ದ್ವೈತ ವನಕೆ ನಡೆತಂದರು ಏನಂಬೆ | ಚಂದಾದ ನಿರ್ವೈರ ಮೃಗವೃಂದಗಳಿಂ ಕೂಡಿರುವ | ಕುಂದ ಮಂದಾರಾದಿ ಪುಷ್ಪಫಲ ವೃಕ್ಷಗಳಿಂ ಶೋಭಿಪ | ಕುಂದು ದೂರೋಡಿಸಿದ ಜ್ಞಾನಿಗಳ ಸಮೂಹವು | ಛಂದದಲಿ ಕಾವ್ಯಷಡಂಘ್ರಿ ನಿರತರಾಗಿ | ಮುಂದೆ ಅಧ್ಯಯನ ಶ್ರುತಸಂಪನ್ನರಾದವರು | ಒಂದೊಂದು ವೇದ ಋಗು ಯಜು:ಸಾಮಾಥರ್ವಣ ಒಂದೋಂದು ಶಾಖಾಶಾಸ್ತ್ರದಿ ಪ್ರವಚನಾಸಕ್ತರು | ಮಿಂದು ಹರಿಪದಜಲದಿ ಚತುರ ವೇದ ಘೋಷದಿ | ಸಂದೇಹವಿಲ್ಲದಲೇ ಭಗವದ್ಗೀತಾ ಲೀಲಾ | ಎಂದೆಂಬುವ ಹರಿಕಥಾಮೃತ ಪಾನ ಮಾಡುವ | ಸಂದೋಹ ಮುನಿಗಳಿಗೆ ನಿತ್ಯನ್ನದಾನವ ಮಾಡಿ | ಬಂಧುಗಳಿಂ ಸಹಿತ ಇರುವ ಯುಧಿಷ್ಟರನನ್ನು | ಸುಂದರ ವಿಠಲಾತ್ಮಕ ವ್ಯಾಸದೇವನು | ಅಂದು ದ್ವೈತವನದಲ್ಲಿ ಕೃಪಾ ದೃಷ್ಟಿಯಿಂದ ನೋಡಿದನು 3 ಕೃಷ್ಣದ್ವೈಪಾಯನಾ ಮುನಿಗಳಾಗಮ ಕೇಳಿ | ಕೃಷ್ಣೆ ಸಹಿತಾ ಅನುಜರೊಡನೆ ಕೂಡಿ | ಜೇಷ್ಠನಾದ ಯುಧಿಷ್ಠರನು ತಾ ದೂರ ನಡೆತಂದುವಾ | ಸಿಷ್ಟ ಕೃಷ್ಣಗೆ ಸಾಷ್ಟಾಂಗ ಪ್ರಣಾಮಗಳ ಮಾಡಿ ನಿ | ರ್ದಿಷ್ಟವಾದೆಕಾಂತ ಸ್ಥಳಕೆ ಕರೆತಂದು | ಶ್ರೇಷ್ಠವಾದಾಸನದ ಮೇಲೆ ಕುಳ್ಳಿರಿಸಿ | ಜೇಷ್ಟಾದಿಕೃಷ್ಣೇಯೊಡನೆ ಉತ್ಕøಷ್ಠ ಪೂಜೆಯ ಮಾಡೆ ಪರ ಮೇಷ್ಠಿ ಜನಕನು ತಾನು ತುಷ್ಟ ನಾಹೆ | ಶಿಷ್ಟಾಚಾರದಂತೆ ಕುಶಲ ಪ್ರಶ್ನೆಯು ಮಾಡ್ದ ನಿ | ರ್ದುಷ್ಟ ಭೀಮಾರ್ಜುನರೆ ಅಶ್ವಿನಿಯರೇ ಮನ | ಮುಟ್ಟಿ ಹರಿಪಾದ ಭಜನೆಯ ಮಾಡಿ ಸುಖಿಗಳಾಗಿಹ್ಯರೇ? ಧಿಟ್ಟತನದಲೆ ತಪವನೆಸಗಿ ಕಿರಿಟಯು | ನಿಷ್ಠಿಯಲಿ ಮಹರುದ್ರನೊಲಿಸಿ ಪಾಶುಪತವೆಂಬು | ತ್ಕøಷ್ಟಾಸ್ತ್ರ ಸಂಪಾದನೆಯ ಮಾಡಿದದು ಕೇಳಿ | ಹೃಷ್ಟನಾದೆನೊ ನಾನು ನಿಮ್ಮಿಂದಲಿ ಕೂಡಿ | ಕಷ್ಟಬಡುತಿರುವ ನಿನ ದುಃಖ ಶಾಂತ್ಯರ್ಥ | ಇಷ್ಟವೀವುದಕಾಗಿ ಬಂದಿಹನು ರಾಜಾಯು | ದ್ಯಿಷ್ಟರನೆ ಕೇಳುತ್ತಮ ವೃತವು ನಿನಗೋಸುಗ | ನಿಷ್ಠಿಯಿಂದಲಿ ಧರ್ಮತನಯ ನುಡಿದನು 4 ತ್ರಿವಿಡಿ ತಾಳ ನಮೊ ನಮೊ ತಾತ ಮಹಾ ಖ್ಯಾತವಂತರೆ ನಿಮಗೆ | ನಮೊ ನಮೊ ನಮೊ ಎಂದು ಬಿನ್ನೈಸುವೆ | ಶ್ರಮ ಪರಿಹರವೃತವಾವುದದÀರ ಮಹಿಮೆ | ಸುಮನಸರೊಡೆಯನೆ ಪೇಳಯ್ಯಾ ಜೀಯ್ಯಾ | ಕುಮತಿ ಪರಿಹರಿಸುವ ದೇವತೆ ಆರು ಉ | ತ್ತಮ ನಿಯಮ ಆವುದು ಪೂಜಾ ಕ್ರಮವು | ಶಮೆ ದಮೆವೀವ ನಿಯಮ ತಿಥಿ ಆವುದು | ರಮೆ ರಮಣನೆÉ ಆವ ಮಾಸದಲಿ ಮಾಡೋದು | ಶಮಲ ವಿವರ್ಜಿತ ವ್ಯಾಸದೇವನೆ ನಿಮ್ಮಾ | ಗಮನವು ಎಮ್ಮಯ ಕಷ್ಟ ದೊರೋಡಿಸಲು | ಸಮೀಚೀನ ಮತಿಯಿತ್ತು ಭಕ್ತರ ಪಾಲಿಪುದೆನುತ | ಸಮಚಿತ್ತ ಉಳ್ಳ ಮುನಿಗಳ ಕೂಡ ನಮಿಸಲು | ಭ್ರಮಣ ಮತಿಯ ಕಳೆವ ಹನುಮಾನ್ ಹ ನುಮನ್ನಾಮ ಪುನಃ ಪುನಃ ಸ್ಮರಿಸಿ ಶ್ರೀವ್ಯಾಸರು | ಆಮಮ ಪೇಳಲೇನೊ ಹನುಮದ್ವ್ರತವೋ | ಧೀಮಂತ ಹನುಮಂತನ ನಾಮೋಚ್ಚಾರಣೆಯಿಂದ | ಸಮಸ್ತ ಕಾರ್ಯ ಸಿದ್ದಿಪದು ಸಂಶಯ ಬ್ಯಾಡಿ | ಆ ಮಹಾ ದುಷ್ಟ ಗ್ರಹೋಚ್ಛಾಟನ ಜ್ವರಾದಿ | ತಾಮಸ ರೋಗ ನಿವರಣವಾಗುವದು | ಪ್ರೇಮದಿಂದಲಿ ಕೇಳು ಬಹು ವಾಕ್ಯಗಳಿಂದೇನು ? ಸೀಮೆಗಾಣದ ಅಭೀಷ್ಟಪ್ರದಾಯಕವೊ ನೀ ಮರೆಯದಿರು ಹಿಂದೆ ದ್ವಾರಕಿಯಲ್ಲಿ ಶ್ರೀ ಮದ್ವಿಷ್ಣುವೆ ಕೃಷ್ಣ ಪಾಂಚಾಲಿಯನಿ ಸ್ಸೀಮ ಭಕುತಿಗೆ ವೊಲಿದು ಈ ಮಹಾ ಹ ನುಮದ್ವ್ರತವನ್ನು ಉಪದೇಶಿಸಿ | ನೇಮದಿಂದಲೀ ವ್ರತವು ಮಾಡಿರೆನಲು ಕಾಮಿತಫಲವೀವಾ ವ್ರತದ ಮಹಿಮೆ ಆ | ಸ್ವಾಮಿ ಅನುಗ್ರಹದಿ ಸಂಪದೈಶ್ವರ್ಯದಿ ಆ ಮಹಾ ಸ್ತೋಮಗಳು ಪ್ರಾಪ್ತವಾಗಲು ನಿಮಗೆ | ಈ ಮಹಾ ವೃತ ಮಹಿಮೆ ತಿಳಿಯದ ಪಾರ್ಥನು ಪ್ರೇಮದಿಂ ದ್ರೌಪದಿ ಧರಿಸಿದ ದೋರವ ನೋಡಿ ಹೇ ಮಹಿಷಿಯೆ ಇದೆನೆನ್ನಲಾಗಿ | ತಾಮರಸನಯನೆ ಶ್ರೀ ಹನುಮದ್ದೋರವನ್ನೆ | ಆ ಮಹಾ ಐಶ್ವರ್ಯ ಗರ್ವಿಕೆ ಕ್ರೋಧಾದಿ ನಿ ಸ್ಸೀಮ ಪರಾಕ್ರಮಿ ನುಡಿದ ಅರ್ಜುನನು ಕಾಮಿನಿಯೆ ಕೇಳು ಆ ಹನುಮನೆಂಬೊ ಕಪಿ ನಾ ಮುದದಿ ಧ್ವಜದಲ್ಲಿ ಧರಿಸಿರುವೆನು ಈ | ಮರ್ಮವನು ತಿಳಿಯದೆ ಆ ವನಚರ ಶಾಖಾಮೃಗ | ಕಾಮಿತ ಫಲ ಕೊಡಬಲ್ಲದೆ ಕೇಳಿನ್ನು ಪಾಮರ ವ್ರತದಿಂದ ವಂಚಿಸಿದೆಲ್ಲದೇ ನೀನು ಕಾಮಿ ಜನರ ತೆರದಿಂದಲಿ ಅರ್ಜುನನು ಭಾಮೆ ದ್ರೌಪದಿ ಧರಿಸಿದ ತ್ರಯೋದಶ ಗ್ರಂಥಿಯುಕ್ತ ಆ ಮುದದ ದೋರವನು ಹರಿದು ಬಿಸಾಟಲು ಹೇಮಾದಿ ಸಕಲ ಸಂಪದೈಶ್ವರ್ಯ ರಾಜ್ಯವು ಭೂಮಿ ಸಹಿತ ಪ್ರಾಪ್ತವಾದುದೆಲ್ಲ ಪೋಗೆ | ಶ್ರಿಮದಾಂಧದಿಂದ ಪ್ರಾಪ್ತವ್ಯ ದುಃಖ ಫಲವು | ಪರಿಯಂತ | ರಾಮ ಮನೊರಮನು ಇನಿತು ನುಡಿಯೆ | ಸ್ವಾಮಿ ಆಜ್ಞವ ತಿಳಿದ ದ್ರೌಪದಿ ದೇವಿಯು | ಹೇ ಮಹತ್ಮರೆ ಶ್ರೀವ್ಯಾಸರ ನುಡಿ ನಿಜವೋ ನೇಮಗಳೆಲ್ಲಾ ತಿಳಿಯಲೋಶವೆ ಎಂದಿಗು 5 ಧ್ರುವ ತಾಳ ಕೇಳಯ್ಯಾ ಧರ್ಮರಾಜ ಆಲಸ ಮಾಡದೆ | ಪೇಳುವೆ ನಿನಗೊಂದು ಪುರಾತನ ಕಥೆಯು | ಆಲಿಸಿ ಮನಕೆ ತಂದು ಬಾಳು ಚನ್ನಾಗಿ ನೀನು | ಶೀಲೆ ಸೀತೆಯ ನೋಡುವ ಇಚ್ಛಾಉಳ್ಳ ಮಾ ನಿತ್ಯ ಲಕ್ಷ್ಮಣನೊಡಗೂಡಿ | ಮೇಲಾದ ಋಷ್ಯಮೂಕ ಗಿರಿಯ ಮಧ್ಯದಲ್ಲಿ ಶೀಲ ಭಕುತಿಯುಳ್ಳ ಹನುಮಂತನ ದರ್ಶನಾಗೆ ಆಳುವ ಕಪಿ ರಾಜ್ಯ ಸುಗ್ರೀವನ ಸಖ್ಯವನು ಬ ಹಾಳ ಮತಿಯುಳ್ಳ ವಾಯುಜ ಮಾಡಿಸೆ | ಮಾಸ ಮಳೆಗಾಲವು ವಾಸ ಮಾಡ್ಡ | ಕಾಲದಲಿ ಹನುಮನು ರಾಮದೇವಗೆ ನಮಿಸಿ | ನೀಲ ಮೇಘ ಶ್ಯಾಮ ಶ್ರೀ ರಾಮ ನೀನಿನ್ನ | ಬಾಲನ ಬಿನ್ನಪ ಮನಕೆ ತರಲು | ಪೇಳುವೆ ನಿಮ್ಮ ಸನ್ನಿಧಾನದಲೆನ್ನ ನಾಮ ಮಹಿಮೆ ಮೇಲುಸಿಲೆಯನದ್ಧರಿಸಿದ ಶ್ರೀರಾಮ ನೀನಙ್ಞನೆ | ಕಾಲ ಜನನದಲಿ ಇಂದ್ರನಿಂದಲಿ ಎನ್ನ ಮೇಲಾದ ವಜ್ರಾಯುಧದಿಂದ ಹನುಘಾತಿಸಲು ಭೂಲೋಕದಲ್ಲಿ ಅಂದಿನಾರಭ್ಯ ಹನುಮನೆಂದು ಖ್ಯಾತನಾಗಿ | ಕೇಳಯ್ಯಾ ಅಂಜನಾದ್ರಿಯಲ್ಲಿ ಸೂರ್ಯೋದಯ | ಕಾಲಕೆ ಪ್ರಕಟನಾದ ಬಾಲ ರವಿಯ ನೋಡಿ ಹಣ್ಣೆಂದು | ಮೇಲಾಗಿ ಭಕ್ಷಿಪುದಕೆ ಉಡ್ಡಾಣ ಮಾಡಲಾಗಿ | ಈ ಲೀಲೆಯ ತಿಳಿದು ಲೋಕ ಶಿಕ್ಷಣ ಗೋಸುಗ | ಕಾಲವಜ್ರಾಯುಧದಿಂದ ಹೊಡೆಯಲು ಮೂರ್ಛಿತ | ಬಾಲನಂತೆ ಬಿದ್ದವನೆನ್ನ ನೋಡಿ ಸ್ವಾಹಾ | ಲೋಲನ ಸಖನಾದ ವಾಯುದೇವನು ಎನ್ನ | ಮೇಲಿನ ಪ್ರೀತಿಯಿಂದ ಸರ್ವಜೀವರ ಶ್ವಾಸ | ಕಾಲನಾಮಕ ಭಗವಾನಿಚ್ಛೆಯಂತ ತೃಟಿ | ಕಾಲಬಿಡದೆ ಮಾಡ್ವ ಶ್ವಾಸ ನಿರೋಧಿಸೆ ಶಚಿ | ಲೋಲನಿಂದನ್ನ ಪುತ್ರನ ಕೆಡಹಿರಲವನನ್ನು ಈ | ಕಾಲಲವದಲ್ಲಿ ಕೆಡಹೆನೆನಲು ಆ | ಕಾಲದಲಿ ಬ್ರಹ್ಮಾದಿ ದೇವತೆಗಳು ಸಾಕ್ಷಾತ್ಕಾರರಾಗಿ | ಓಲೈಸಿ ಪೆಳ್ದ ಮಾತು ಎನಗೋಸುಗ ಆಂಜನೇಯಾ | ಬಾಲನೆ ಚಿರಜೀವಿಯಾಗು ನೀನೆ ಪರಾಕ್ರಮಿ | ಮೇಲೆನಿಪ ಶ್ರೀರಾಮನ ಕಾರ್ಯಸಾಧಕನಾಗೆನುತ | ಬಾಲ ಹನುಮನ ಪೂಜೆ ಮಾಡ್ಡರು ದೇವತೆಗಳು | ಮೇಲಾದ ಮಾರ್ಗಶಿರ ಶುದ್ಧ ತ್ರಯೋದಶಿ | ಕಾಲ ಅಭಿಜಿನ್ ಮೂಹೂರ್ತದಲ್ಲಿ ಆರು ಪೂಜಿಪರೊ | ಆಲಸವಿಲ್ಲದೆ ಪುರುಷಾರ್ಥ ಹೊಂದುವರೆಂದು | ತಾಳ ಮ್ಯಾಳರೊಡನೆ ವರವ ನೀಡಿ ಪೋದರು | ಆಲಯಾ ಸ್ವರ್ಗ ಸತ್ಯಾದಿ ಲೋಕಕೆ ಅಂದು ಹೀಗೆ | ಪೇಳೆ ಸುಂದರ ವಿಠಲ ರಘುರಾಮನು ನಸುನಗೆ | ಯಾಲಿ ಒಲಿದು ಹನುಮಗೆ ಹಸನ್ಮುಖನಾಗಿ ಇರಲು 6 ಮಟ್ಟತಾಳ ಭಕುತ ವತ್ಸಲ ನೀನು ಭಕುತರಿಚ್ಛವ ನೀನು | ಭಕುತ ಭಾಂಧವ ನೀನು ಭಕುತರೊಡಿಯ ನೀನು | ಭಕುತ ಪಾಲಕನೆಂಬ ಬಿರುದುಳ್ಳವ ನೀನು | ಭಕುತರಿಂದಲಿ ನೀನು ನಿನ್ನಿಂದಲೆ ಭಕುತರು | ಅಕಳಂಕ ಐಶ್ವರ್ಯ ಸತು ಚಿತು ಆನಂದಾತ್ಮಾ | ಮುಕುತಿ ಪ್ರದಾತನೆ ಸರ್ವ ಸ್ವಾಮಿ ನೀನು | ಸಕಲ ಲೋಕಗಳೊಡೆಯ ನಿನ್ನಿಂದಲೆ ಸರ್ವ ವ್ಯಕುತವಾಗ್ವದು ಸತ್ಯ ಸರ್ವಙ್ಞನು ನೀನು | ಭಕುತರ ಮನದಿಂಗಿತ ತಿಳಿಯದವನೆ ನೀನು | ಅಖಿಳ ಬ್ರಹ್ಮಾಂಡÀರಸನೆ ನಮೊ ನಮೊ ನಮೊ ನಮೊ | ಭಕುತರಿಂದಲೇ ನಿನ್ನ ಖ್ಯಾತಿ ಮೂರ್ಲೋಕಕ್ಕೆ ಭಕುತರೇ ನಿನ್ನಯಾ ಮಹಿಮೆಯ ಹೊಗಳುವರು | ಭಕುತರು ನಿನ್ನಿಂದಲೆ ಕೀರ್ತಿವಂತರÀಹರು | ಅಕುಟಿಲ ಪ್ರಭೋ ನೀನು ನಾ ನಿನ ನಿಜ ಭಕ್ತ | ಸಕಲ ಕಾಲದಲ್ಲಿ ನಿನ್ನನಾ ಮರೆಯದಲೇ | ಮಾಳ್ಪದು ನಿಜವಾಗೆ | ಶಕುತನೆ ಎನ ಕೀರ್ತಿ ನಿನ್ನಿಂದಾಗಲಿ ವಿಭೋ | ಉಕುತಿ ಲಾಲಿಸು ಪ್ರಭೋ ತವಚಿತ್ತವ ಧಾರೆ | ಭಕುತ ಹನುಮಂತ ಇನಿತು ವಿಙÁ್ಞಪಿಸಿ ನಿಲಲು | ಪ್ರಕಟಿತ ಅಶರೀರ ವಾಕ್ಯವು ಬಿಡದಲೆ | ಸಕಲ ನುಡಿ ಹನುಮಾ ಸತ್ಯನಾಡಿದನೆನಲು | ಸುಕರ ಏಕಮೇವ ದ್ವಿತಿಯ ಸುಂದರವಿಠಲ ತುಷ್ಟನಾಹೆ 7 ಝಂಪಿತಾಳ ಮಾಸಮಾರ್ಗಶೀರ್ಷ ಶುದ್ಧ ತ್ರೊಯೋದಶಿ | ಆ ಸುಮುಹೂರ್ತ ಜಯಾ ಅಭಿಜಿನ್ ಕಾಲಕೆ | ಶ್ರೀಶರಾಮನು ಹನುಮದ್ವ್ರತವ ಮಾಡ್ಡ ತ್ರಯೋ | ದಶ ಗ್ರಂಥಿüಯುತ ಹರಿದ್ರಾದೋರಗಳಲಿ | ಭಾಸುರಾಮತಿವೀವ ಹನುಮನಾವ್ಹಾನಿಸಿ | ಪೇಶಲಾಪೀತಗಂಧ ವಸ್ತ್ರ ಪುಷ್ಟಿಗಳಿಂದಲೀ | ಶ್ರೀಸೀತೆವಕ್ಷಸ್ಥಳದಿಪ್ಪ ನಿತ್ಯಾವಿಯೋಗಿನಿ | ಆ ಸುಗ್ರೀವ ಲಕ್ಷ್ಮಣಾದಿಗಳೊಡನೆ ನೆಸಗಿದನೇನೆಂಬೆ | ಲೇಶಬಿಡದೇ “ಓಂ ನಮೋಭಗವತೇ ವಾಯುನಂದನಾಯ” | ಈ ಸುಮಂತ್ರವ ಜಪಿಸಿ ತಾ ಸಹಸದಿ ಮಾಡ್ಡನೋ | ದೇಶಪರಿಮಿತ ಪ್ರಸ್ಥತ್ರಯೋಶಗೋಧೂಮವನು | ಆ ಸುದಕ್ಷಣೆ ತಾಂಬೂಲ ಸಹ ದ್ವಿಜರಿಗಿತ್ತದಾನ | ಮೀಸಲಾ ಮನದಿ ಈ ಸತ್ಕಥೆಯನು ಕೇಳಿ | ಭೇಶಮುಖಿ ಸೀತಿಯಳ ಕೊಡ್ದನೆಂಬದು ಖ್ಯಾತಿ | ಆ ಸತ್ಯಲೋಕರಿಗೆ ಆದುದು ಅಚ್ಚರವೆ ಪೂರ್ಣಕಾಮನಿಗೆ | ಕ್ಲೇಶನಾಶನವು ಸುಗ್ರೀವನಿಗೆ ವಿಶೇಷವಾದುದು ಸತ್ಯವೆನ್ನಿ | ತೋಷದಲಿ ವಿಭೀಷಣ ಶ್ರೀರಾಮನಾಙÉ್ಞಯಿಂ ಮಾಡ್ಡು | ದೇಶಲಂಕೆಯ ರಾಜ್ಯವನು ಪಡೆದನು | ಹೇ ಸುಮತಿಯೇ ಕೇಳಂದಿನಾರಭ್ಯ ಭೂಲೋಕಕೆ | ಲೇಸುವಿಶ್ರುತವಾದಿತೈ ಹನುಮದ್ವ್ರತವೂ | ಪರಿಯಂತ ಮಾಡ್ಡುದ ಕೀಸು ಉದ್ಯಾಪನೆಯಯ್ಯಾ ಆದಿ ಮಧ್ಯಾಂತಕೆ | “ಮಾಸಾನಾಂ ಮಾರ್ಗಶೀರ್ಷೋಹಂ” ಎಂದು ಗೀತೆÀಯಲಿ ಆ ಸ್ವಾಮಿ ದಿವ್ಯನುಡಿಯುಂಟು ಕೇಳ್ ಧರ್ಮಜನೆ | ಸ್ತ್ರೀಸಹಿತ ಅನುಜರೊಡನೇ ಈ ವ್ರತವನು | ಮೇಶನಾಜ್ಞೆಯಿದೆಂದು ಮಾಡಲು ನಿನಗೆ ರಾಜ್ಯ | ಕೋಶ ಭಾಂಡಾರಪ್ರಾಪ್ತಿಯಾಗುವದು | ಲೇಶ ಸಂಶಯ ಬ್ಯಾಡೆನಲು ಶ್ರೀ ವ್ಯಾಸ | ಆ ಸುಂದರ ವಿಠಲನ ಭಕುತರು ಮುದಭರಿತರಾಗೆ 8 ರೂಪತಾಳ ರವಿಯು ವೃಶ್ಚಿಕ ರಾಶಿಗೆ ಬರಲಾಗಿ | ಸವೆಯಾದ ಪದವೀವ ವ್ರತವಮಾಡುವದಕ್ಕೆ | ಕವಳಾ ಅಜ್ಞಾನಾಖ್ಯ ರಾತ್ರಿಕಳೆದು | ಸುವಿಮಲಾಜ್ಞಾನಾಖ್ಯ ಪ್ರಾತಃ ಕಾಲದಲೆದ್ದು | ಕವಿವ್ಯಾಸರ ಮುಂದೆ ಮಾಡಿ ಧರ್ಮಜನು | ಸುವಿವೇಕಬುದ್ಧಿಯಿಂ ಸ್ನಾನಾದಿಗಳ ಮಾಡಿ | ಹವಿಷಾದಿ ದ್ರÀ್ರವ್ಯಗಳಲಿ ಹರಿಯಚಿಂತಿಸಿ ಮಾ | ಧವÀನಾಜ್ಞೆಯಂತೆ ಉದ್ಯಾಪನವಂಗೈದು | ಕವ್ಯವಾಹನನಲ್ಲಿ ಮೂಲಮಂತ್ರದಿಂದ | ಲವಕಾಲ ಬಿಡದಲೆ ವೇದಸೂಕ್ತಗಳಿಂ ಹೋಮಿಸಿ | ನವಭಕುತಿಯಲಿ ಹನುಮಂತನ ವ್ರತಾಚರಿಸಲು | ಹವಣಿಸಿ ಸಂವತ್ಸರವು ಪೋಗಲು ಪಾಂಡವರು | ಬವರದಲ್ಲಿ ಕೌರವರಗೆ
--------------
ಸುಂದರವಿಠಲ
ಎಂತು ಗತಿ ಎನಗಾಗುವದೊ ಶ್ರೀ | ಕಾಂತ ನಿನ್ನ ಭಕುತಿಯ ಕಾಣೆ ಪ ಸಂಸಾರ ಎಂಬುದು ಸುಖವೆಂದು ನಾನು | ಹಂಸನಂತೆ ನಲಿಯುತ್ತಲಿದ್ದೆ | ಕಂಸಾರಿ ನಿನ್ನ ನಾಮಸ್ಮರಣೆ ಒಳ್ಳೆ | ವಂಶರ ಕೂಡ ನಲಿಯಲಿಲ್ಲಾ 1 ಪಾತ್ರರ ಕಂಡರ ಪರಿಹಾಸ್ಯ ಕು | ಪಾತ್ರರ ನೋಡಲವರ ಶಿಷ್ಯಾ | ಕ್ಲೇಶ ಎನ್ನ | ಗಾತ್ರಗೋಸುಗ ಪೋಗೆ ಬಲು ತೋಷಾ 2 ವಿರಕ್ತಿ ಕೇಳಲು ತಲೆಶೂಲೆ ವಿ | ಹಾರ ಮಾಡುವಲ್ಲಿ ಅನುಕೂಲೆ | ವಾರಿಜಾಕ್ಷ ನಿನ್ನ ಕಥೆ ಬಿಡುವೆ ಬಹು | ಚಾರುವಾಕರ ಕೂಡ ಸುಖಬಡುವೆ 3 ಕಾಸು ಪ್ರಾಪುತವಾಗಿ ಬಚ್ಚಿಡುವೆ ಅದೆ | ಕಾಸು ಬೇಡಿದರೆ ಪ್ರಾಣವ ಕೊಡುವೆ | ಮೋಸ ಬುರುವದು ಕಾಣೆನಲ್ಲಾ ದು | ರಾಶೆಯಿಂದಲಿ ಬಾಳಿದೆನಲ್ಲಾ 4 ವೈಕುಂಠದಾಸರು ಬರೆ ಕುಗ್ಗುವೆನೊ | ಕುಂಟತನಕೆ ಬಹು ನಲಿದಾಟಾ ಗತಿ | ಉಂಟಾದದಕೆ ಉಚ್ಚಾಟ5 ತಂದೆ ತಾಯಿಗಳಲ್ಲಿ ವಂಚನೆ ಹೀನ | ಮಂದಿಕೂಡಾಪ್ತಾಲೋಚನೆ | ಕುಂದು ನುಡಿದೆ ಸಜ್ಜನರಿಗೆ ಆ | ನಂದ ಬಡಿಸುವೆ ದುರ್ಜನರಿಗೆ 6 ಹೆಂಡತಿ ಮುನಿದರೆ ಬೇಡಿಕೊಂಬೆ ಹರಿ | ಕೊಂಡರು ಮುನಿದರೆ ಪೋಗಲೆಂಬೆ | ಕೊಂಡು ಬಾಹ್ಯನೆ ಪರರವಡಿವೆ | ಪರರ ಕಂಡರೆ ಬೇಡವೆಂದು ನುಡಿವೆ 7 ಮಕ್ಕಳು ಹಸ್ತರೆ ಬಳಲುವೆನೊ ಭೂದೇ | ವಕ್ಕಳು ಹಸ್ತರೆ ನಗುವೆನೊ | ಮುಕ್ತಿಗಾಗುವ ನಾನಾ ಶ್ರವಣ ನೀಚ | ಉಕ್ತಿಗೆ ಮಾಡಿದೆ ಅನುದಿನಾ 8 ಜೀವನಕ್ಕೆ ಬೇಕಾದದೆ ಮಾಣಿದು | ಅಭಾವಾ ಮಾಡೆನು ನೀಚರ ಸೊಲ್ಲು9 ಹರಿ ನಿನ್ನ ಶುಚಿಮಾಡೆ ಹೀನ ನರರ ದೊಂಬಲು ತೆಗಿಯದೆ ಬಿಡೆ | ಅಗ್ರೋದಕ ತಾರೆ ನೀರು | ಹೊರುವೆನೊ ಹಣವೆಂದರೆ ಮಾರೆ 10 ಗಂಡಿಕಿಸಿಲಿ ತೊಳೆಯಲಿ ಮಿಡಿಕಿ ನಾನು | ಅಂಡವಲಿವೆ ಅಶನ ಹುಡುಕಿ | ಅಂಡಜವಾಹನ ನಿನ್ನ ಸೇವೆ ಕೈ | ಕೊಂಡು ಮಾಡದೆ ಪೋದೆ ಹೀಗೆವೆ11 ಗಂಧವ ತೆಗೆ ಎಂದರೆ ಅಳುವೆ | ಬಿದ್ದ | ಮಂದಿರಕೆ ಕದಡುತಳುವೆ | ಒಂದು ತುಲಸಿದಳ ತರಲಾರೆನೆಂದು | ಸಂದಿಗೊಂದಿ ಸುತ್ತಿದೆನೊ ದೊರೆ 12 ಧೂಪಾರತಿ ಏಕಾರುತಿ | ಮೂರ್ತಿ | ಪಾಪಾತಿಶಯದಿಂದಾ ನೋಡಲಿಲ್ಲ ಬಹು | ತಾಪತ್ರಯದಿಂದ ನೊಂದೆನಲ್ಲಾ 13 ಸಿರಿ | ದೇವನಿಗೆ ಯಿತ್ತು ಸುಖಬಟ್ಟು | ಆವಾವ ರುಚಿಗಳ ಭುಂಜಿಸದೆ ನಾನು | ಪಾವನಮತಿಯಾಗದೆ ಪೋದೆ 14 ಎಳೆದುಲಸಿ ನಿರ್ಮಾಲ್ಯವಾಸವಾ || ಬಳಿಯಲ್ಲಿಯಿಟ್ಟು ಕೈವಲ್ಯವಾ | ಘಳಿಸಿಕೊಳ್ಳದೆ ಬಲು ದುರ್ಗಂಧ ಬಂದು | ಭವ ಬಂಧಾ 15 ಹರಿಕಥೆಗೆ ಮೊಗ ತಿರುಹುವೆನೊ | ................................................... ಸ್ಮರಣೆ ಮಾಡುವಲ್ಲಿ ಅತಿ ಹೇಯಾ ದುರಾ | ಚರಿತೆಯ ಮಾಡುವಲ್ಲಿ ಬಲು ನ್ಯಾಯಾ 16 ಹರಿದಾಸರನಪ್ಪಿಕೊಳ್ಳದೆ ಪಾ | ಮರ ಸತಿಯೊಳನಪ್ಪ ತಾ ಪೊಳದೆ | ಧರೆಯೊಳು ನಾನು ನಡಿವಂಥ ಇಂಥಾ | ದುರುಳಾಟಕೇನೆಂಬೆ ಗುಣವಂತಾ 17 ನಿನ್ನಂಘ್ರಿಗೆ ಅಡ್ಡಬೀಳದೆ ತುತ್ತು | ಅನ್ನಕೆ ಎರಗುವೆ ಸೋಲದೆ | ಅನ್ಯಾಯ ಮಾಡುವಲ್ಲಿ ಆನಂದಾ ಸತಿಸ | ತ್ಪುಣ್ಯ ಮಾಡುವಲಿ ನಿಭಂಧಾ 18 ಸಾಧುಗಳೊಡನೆ ತಾಳುವೆ ದ್ವೇಷಾನಿತ್ಯ | ಕ್ರೋಧರ ಕಂಡರೆ ಬಲು ಹರುಷಾ | ಓದನಕೆ ವೇದವನೋದಿ ತಂದು | ವಾದಿಸುವೆನು ಸಭೆಯಲಿ ಕಾದಿ 19 ಸತಿಯಳ ಸಂಬಂಧಿಗಳ ಸಾಕುವೆನೊ ಮಾತಾ | ಪಿತರ ಕಡೆಯವರ ನೂಕುವೆನೊ | ಕರ್ಮ ಮಾಡೋರ ನೋಡಿ ಹೀನ | ವಕ್ರದವರು ಕಂಡು ಬಲು ಪಾಡಿ 20 ಪರಿ ಪರಿ ಹೊಸ | ಕೌತುಕ ಪೇಳೂವೆ ನೋಡಿರಿ | ಶ್ರಾತಾದಿಗಳು ಎಲ್ಲಿ ಧಿಕ್ಕರಿಸಿ ಯಿಂಥ | ಭೌತಿಕ ನೆಚ್ಚಿದೆ ಅನುಕರಿಸಿ 21 ಒಡಿವಿ ಮಾಡಿಸಿ ಮಡದಿಗೆ ಇಡದೆ ಅನ್ಯ | ಮಡದಿಯರಿಗೆ ಧನ ಸೂರೆವಿಡಿದೆ | ಬಡವರ ಕಂಡರೆ ಅಣಕಿಸುವ ಭಾಗ್ಯ | ಪಡದವರಿಗೆ ಬಾಗಿ ನಮಿಸುವೆ 22 ಧರ್ಮಕ್ಕೆ ಅಸೂಯಾ ಬಡುವೆ ಅ | ಧರ್ಮಕೆ ಹಿಗ್ಗಿ ಸುಖವ ಬಡುವೆ | ಷ್ಕರ್ಮಿಗಳ ಕೂಡಾಮಾನತನಾ 23 ವಿಧಿ ನಿಷೇದವನೆಣಿಸದಲೆ ನಾನು | ಉದರ ತುಂಬಿದೆ ಭೀತಿ ಗಣಸದಲೆ | ವದಗಿ ಬೀಳುವ ನರಕದ ಬಾಧೆ ಕೇಳಿ | ಹದುಳಕ್ಕೆ ಮನಮಾಡದೆ ಪೋದೆ 24 ಯಜಮಾನ ನಾನೆಂದು ಪೇಳಿಕೊಂಡು ದೋಷ | ವ್ರಜದಲಿ ಚರಿಸದೆ ದು:ಖವುಂಡು | ಇಂದು | ಸಿಂಧು 25
--------------
ವಿಜಯದಾಸ
ಎಂಥವ ನಿವನಮ್ಮಾ ಬಾಲಕನಂತಿಹ ಗೋಪೆಮ್ಮಾ ಎಂಥವನಿವ ತನ್ನಂತತ ನ್ನಂತದೋರ ಗುಡದ ನಂತ ಮಹಿಮ ನರಕಾಂತಕ ದೇವಾ ಪ ವಾರಿಯೊಳಗ ಮನವಾರಿ ಕ್ರೀಡಿಸುತಿರೆ ಘೋರ ಪ್ರವಾಹದಿ ತೀರದಲೆಮ್ಮಾ ಆರು ಅರಿಯದಂತೆ ಸೀರೆನೆಗೆದು ಕೊಂಡು ಗಾರು ಮಾಡಿದ ಮರ ಸೇರಿದ ಕಾಣಮ್ಮಾ ನಾರೇರೆಲ್ಲರು ಕೂಡಿ ಸೀರೆ ಬೇಡಲು ಬಿಟ್ಟು ನೀರ ಮುಗಿದು ಕೈಯ್ಯದೋರೆರಡೆನವಾ 1 ಪುಣ್ಯ ಚರಣೆಸಳ ಗಣ್ಣ ಜಲಧರದ ಬಣ್ಣದ ಲೋಪ್ಪವ ಸಣ್ಣಪನೆಂದು ಬಣ್ಣಿಸಿ ಕರುವುತ ಹೆಣ್ಣೆಂದೊಪ್ಪುವ ತಿಣ್ಣ ಮೊಲೆಗಳನು ಉಣ್ಣೆಂದೂಡಿದಾ ಸಣ್ಣಿಸಿ ಕಳೆದ ಮುಕ್ಕಣ್ಣನ ಸಹಿನು2 ಇಂದು ವದನೆಯರು ಮುಂದಕ ಕದವನು ತಂದಿಕ್ಕಿ ಪೋಗೆರೆ ಮಂದಿರದಿಂದಾ ಸಂದಿಸ್ಯಾಗಳೆ ಆಂದದಿ ಗೋವಳ ವೃಂದ ನೆರಹಿಕೊಂಡು ಬಂದು ನೋಡಮ್ಮಾ ಛಂದದಿ ಬೆಣ್ಣೆಯನಿಂದು ಸೇವಿಸುತಿಹ ತಂದೆ ಮಹಿಪತಿ ನಂದನೋಡಿಯನು3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಸಳುಗಂಗಳ ಕಾಂತಿ ಹೊಳೆವ ಮುಖದ ಢಾಳಶಶಿಮುಖಿ ಚೆಲುವಿಕೆಯ ಪ ಕುಸುಮನಾಭನ ಕೂಡೆನೆಂಬೋ ಭರದಿಂದಬಿಸಿ ಹಾಲನೆ ಹೊತ್ತಳು ಅ ಮಾನಿನಿ ರನ್ನೆಕೇಳೀದ್ದು ಕೊಡುವೆನೆಂದ 1 ಕಮ್ಮನೆ ಕಾದಿಹ ಎಮ್ಮೆಯ ಹಾಲಿಗೆಒಮ್ಮನ ಹೊನ್ನೆಂದಳುಬೆಣ್ಣೆಗಳ್ಳ ಕೃಷ್ಣ ಕಣ್ಣು ಸನ್ನೆಯ ಮಾಡಿನಿನ್ನ ಮೋಹಿಪೆನೆನ್ನಲು 2 ಕೆಟ್ಟೆ ಕೆಟ್ಟೆನೊ ಕೃಷ್ಣ ಇತ್ತಲೇತಕೆ ಬಂದೆಅತ್ತೆ ಮಾವಂದಿರುಂಟುಥಟ್ಟನೆ ಕಂಡರೆ ಬಿಟ್ಟು ಬಿಡರು ನಿನ್ನಮುಟ್ಟದಿರೆಂದಳಾಕೆ3 ಎಂದ ಮಾತಿಗೆ ನಾನಂಜುವನಲ್ಲವೆಇಂದಿನ ದಿನದೊಳಗೆಮಂದಿರದೊಳಗಿದ್ದು ಮರುದಿನ ಪೋಗೆಂದುಮುಂಗೈಯ ಪಿಡಿದುಕೊಂಡ4 ಗಂಡನುಳ್ಳವಳ ಮುಂಗೈಯ ಪಿಡಿವಂಥಪುಂಡುತನವು ಸರಿಯೆಪುಂಡರೀಕಾಕ್ಷಿ ಕೇಳ್ ದುಂಡುಮಲ್ಲಿಗೆ ಹುವ್ವಕಂಡರೆ ಬಿಡುವರೇನೆ 5 ಬಾಳುವ ಹೆಣ್ಣಿನ ತೋಳನೆ ಪಿಡಿವುದುನ್ಯಾಯವೇನೋ ನಿನಗೆಫುಲ್ಲನಯನೆ ಕೇಳೆ ಆಯ್ದ ಮಲ್ಲಿಗೆ ಹುವ್ವಬಲ್ಲವರು ಬಿಡುವರೇನೆ6 ಬೈಗಾಯಿತು ಬೈದಾರು ಮನೆಯಲ್ಲಿಬಿಡು ಬಿಡು ಎಲೊ ಗೋವಳಐಗಾರ ನಾ ಕಾಣೆ ಜಗದಲ್ಲಿ ಜೀವರಹಿಡಿದು ಬಿಡುವನಲ್ಲವೆ 7 ಸಕ್ಕರೆ ಚಿಲಿಪಾಲು ಅರ್ಥಿ ಆಯಿತೆಂದುಎತ್ತಿಕೊಂಡು ಕುಡಿದಅಕ್ಕರೆಯಿಂದಲಿ ಬೇಡು ನೀ ಕೇಳಿದವಸ್ತುವ ಕೊಡುವೆನೆಂದ8 ವಸ್ತುವೇತಕೆ ಪರವಸ್ತುವೆ ನಾ ನಿನ್ನಮೆಚ್ಚಿ ಬಂದೇನೆಂದಳುಭಕ್ತರ ಸಿರಿಕೃಷ್ಣ ಕುಕ್ಷಿಯೊಳಗೆ ಇಟ್ಟುರಕ್ಷಿಸು ಎಂದಳಾಕೆ 9
--------------
ವ್ಯಾಸರಾಯರು
ಏನ ಪೇಳಲಿ ಹರಿಯ ವ್ಯಾಪಾರ ಮಹಿಮೆ ಪ ಆನಂದ ಆಶ್ಚರ್ಯ ಆಗುವುದು ಎನಗೆ ಅ.ಪ. ಮರಳಿಗೋಸುಗ ಪೋಗೆ ಮಾಣಿಕ್ಯ ದೊರೆಯಿತು ಅಮೃತ ಕಳಶವಾಯ್ತು ಇರುಳು ಕತ್ತಲೆಯೊಳಗೆ ಮಣಿದೀಪ ಮಿರುಗಿತು ಕಮಲ ಮಾಲಿಕೆಯಾಯ್ತು 1 ಪಾಪ ಕಾರ್ಯವ ಕೊಳಲು ಪುಣ್ಯ ಸಾಧನವೀವ ಪಾಪ ಸಾಧನವೀವ ಪುಣ್ಯ ಕಾರ್ಯದಲಿ ಪಾಪ ಬೀಜದ ಪುಣ್ಯ ಪುಣ್ಯ ಬೀಜದ ಪಾಪ ಶ್ರೀಪತಿಯ ವ್ಯಾಪಾರ ಈ ಪರಿಯಲಿಹುದು2 ಮೃಗಯಾ ವಿಹಾರದಲಿ ಮನವಿಟ್ಟು ನಾ ಬರಲು ಮೃಗಲಾಂಛನವನ ಕಳೆಯ ಮೀರುವಂಥ ಮಿಗೆ ತೇಜದೀ ಮಗುವು ಎನಗೆ ದೊರೆತುದು ನರ ಮೃಗರೂಪಿ ಕರಿಗಿರೀಶನ ಕರುಣವಿಲ್ಲದಲೆ 3
--------------
ವರಾವಾಣಿರಾಮರಾಯದಾಸರು
ಕರುಣಿಸಬಾರದೇನು ಶರಣೆಂಬೆ ನಾನು ಕರುಣಿಸ ಬಾರದೆ ಮೊರೆಯ ಹೊಕ್ಕವನ ಶರಣಾಗತ ಪಂಜರನೆಂಬೊ ಬಿರುದಿರೆ ಪ ಸ್ತಂಭದಿ ನೀ ಬಂದು ದೈತ್ಯನ ಬೇಗ ಶೀಳಿಕೋಪದಿಂದ ಇರಲು ಆಗ ಬ್ರಹ್ಮೇಂದ್ರ ರುದ್ರ ವೃಂದ ಬೆದರಿ ಪೋಗೆ ಪ್ರಹ್ಲಾದನಾಗ ಇಂದಿರಾವರ ಗೋವಿಂದ ಕೃಪೆಯ ಮಾಡೆಂದು ಸ್ತುತಿಸೆ ಆನಂದದಿ ಕಾಯ್ದತಿ ಸುಂದರಮೂರ್ತಿ ಮುಕುಂದ ಧರಣಿಧರ ಸಿಂಧುಶಯನ ಅರವಿಂದನಯನ ಹರಿ 1 ದಶರಥ ಸುತನೆನಸಿ ಮುನಿಯಧ್ವರ ಕುಶಲದಿನ್ನುದ್ಧರಿಸಿ ಪಶುಪತಿ ಧನು ಭಂಜಿಸಿ ಸೀತೆಯ ಕೋರಿ ದಶರಥನಾಜ್ಞೆ ವಹಿಸಿ ಕಾನನದಿ ಚರಿಸಿ ಕುಶನಿಧಿಯನು ಬಂಧಿಸಿ ರಾವಣನ ದಶ ಶಿರಗಳ ಭರದಿಂದಲಿ ಖಂಡಿಸಿ ಅವನನುಜಗ ನಿಶದೊಳ್ ಶಿರಿಲಾಲಿಸಿ ಪೊರೆದ ಶ್ರೀಶಶಿಧರನÀು ಹರಿ 2 ನಕ್ರ ಭಂಗಬಡಿಸೆ ಗಜಗಳರಸ ರಂಗ ಮುರಾರಿ ದೇವೋತ್ತುಂಗ ಶ್ರೀ ಶ್ಯಾಮಲಾಂಗ ಭಕ್ತಾಭಿಮಾನಿ ಮಂಗಳಾರಸತ್ಸಂಗ ಜಗದಂತರಂಗ ವಿಹಂಗ ಸಿರಿ ನರಸಿಂಹ ಬಂದು ಶಾಪಂಗಳ ತರಿದೆ ಭುಜಂಗತಲ್ಪ ಕಾನಂಗಪಿತ 'ಹೆನ್ನೆರಂಗ' ಶರಣು ರಣರಂಗ ಭೀಮ ಹರಿ 3
--------------
ಹೆನ್ನೆರಂಗದಾಸರು
ಕಾಲ ಸಜ್ಜನರಿಗನ್ನಕಿಲ್ಲದ ಸಾವಕಾಲ ಪ ಅರಮನೆಯ ಬಾಗಿಲನು ಕಾದು ಕೊಂಡಿರ್ದು ನೃಪ ವರನೊಡನೆ ಮಾತುಕಥೆಗಳ ನಡೆಸುತ ವರಮಂತ್ರಿಯಾಗಿ ರಾಜಾಧಿ ಕಾರಂಗಳನು ಕಾಲ 1 ಅಡಗಡಿಗೆ ಮಂತ್ರಿಗಳನಾಶ್ರಯಿಸಿ ಕೋವಿದರು ಗಡಿಗಳನು ಕೊಡಿಸೆನಗೆ ತನಗೆನ್ನುತ ಕಾಲ 2 ಮತ್ತಿವರನಾಶ್ರಯಿಸಿ ಕೆಲರು ಮಣಿಹಂಗಳನು ಪೊತ್ತು ಸೀಮೆಯ ಗ್ರಾಮಗಳ ನೋಡುತ ಇತ್ತ ಕುಳ ಸ್ಥಳ ವಂಚನೆಗಳೆಂದು ಬಂದ ಕಾ ಕಾಲ 3 ಬುಡಗಳನ್ನು ಗೈದೆ ಹಾಳ್ಮಾಡಿ ಕೊಂಡಿರ್ದರಿಗೆ ಕಡ ಮೊದಲುಗಳ ಕೊಟ್ಟು ಪೋಗೆಂಬರು ಅಡೆಯಂಚು ಮೂಲೆಗೆಳಗೈದು ಕುಳದೆರಿಗೆಯನು ಕಾಲ ಕಾಲ 4 ಚಾಡಿ ಕೋರರು ಹೆಚ್ಚಿ ಕೆಡಿಸಿವರ ರಾಜ್ಯವನ್ನು ರೂಢಿ ಪತಿಗಳಿಗೆಲ್ಲ ಕಿವಿಯೇ ಕಣ್ಣು ನೋಡಿದರೆ ಮರುತ ಸುತ ಕೋಣೆ ಲಕ್ಷ್ಮೀರಮಣ ನಾಡಿಸಿದ ವೋಲು ಜಗವಾಡುತಿಹುದು 5
--------------
ಕವಿ ಪರಮದೇವದಾಸರು
ಕೇಳಿಪೇಳಮ್ಮ ನಮ್ಮಮ್ಮ ಲಕುಮೀ ಪ ಕೇಳಿಪೇಳೆ ಹರಿಯಲಿ ಪೋಗಿ ಬಹಳ ಸೋಕಿನವ ಗೋಪಿಬಾಲೀಯರಿಗೆ ಮೆಚ್ಚಿ ಬಹು ಜಾಲವ ಮಾಡಿದ ಕೃಷ್ಣನ ಅ.ಪ. ಪ್ರಳಯ ಕಾಲದಲ್ಲಿ ಆಲದೆಲೆ ಮೇಲೆ ಮಲಗಿಪ್ಪನುಒಲುಮಿಗಳ ಒಲುಮಿಕಾಂತ ಲಲನೆ ನೀನು ಕಮಲಾದೇವಿ 1 ನಿತ್ಯಮುಕ್ತೆ ನಿತ್ಯತೃಪ್ತೆ ನಿತ್ಯಾವಿಯೋಗಿನಿ ಹರಿಗೆಭೃತ್ಯನಲ್ಲೆ ನಾನು ಸ್ವಲ್ಪ ಚಿತ್ತವಿಟ್ಟು ನೋಡೆ ತಾಯಿ 2 ನಿನ್ನ ಹೊರತು ಆತನನ್ನು ತೋರುವರ ಕಾಣೆನಮ್ಮಸನ್ನುತಾಂಗಿ ಸಾರಸಾಕ್ಷಿ ಎನ್ನೊಳು ಕರುಣವ ಮಾಡೇ 3 ಎಲ್ಲ ದಿವಿಜರಲ್ಲಿ ಪೋಗೆ ಬಲುಬಗೆ ಪೇಳಿಕೊಂಡೆಫುಲ್ಲನಾಭನಲ್ಲಿ ಒಂದು ಸೊಲ್ಲನಾಡೋ ಶಕ್ತಿಯಿಲ್ಲ 4 ಪಾದ ಬಾಲ್ಯದಿಂದ ಸೇರಿದ್ದಕ್ಕೆನೀರಜಾಕ್ಷನನ್ನು ತೋರೆ ಭಾರಿ ಫಲವಾಯಿತೆಂಬೆ 5 ನಿಮ್ಮ ಮಾತು ಮೀರ ಶೂರ ನಮ್ಮ ಮಾರಜನಕ ಕೃಷ್ಣಅಮರ ತರುವ ಕಿತ್ತಿ ನಿಮ್ಮ ಮನೆಯೊಳ ಹಚ್ಚಿದನಂತೆ 6 ಸುಂದರಿ ಸೌಭಾಗ್ಯವಂತೆ ಮಂದಿರದೋಳಿಪ್ಪನನ್ನುಇಂದಿರೇಶನನ್ನು ತೋರೆ ನಂದ ಬಾಲ ಮಹಿಳೆ ಅಂಬಾ 7
--------------
ಇಂದಿರೇಶರು
ಕೊಡು ಕೃಷ್ಣನೇ ಎನ್ನ ಸಾಲವ ಬೇಗ ಕೊಡದಿದ್ದರೆ ಬಿಡೆನೊ ಪ. ತಡ ಮಾಡಿದೊಡೆ ನಿನ್ನಾಟದ ಬೆಡಗನು ಪೊಡವಿಗೆ ತಿಳಿಸುವೆನು ಜೋಕೆ ಅ.ಪ. ನೀರ ಪೊಕ್ಕರು ಬಿಡೆ ನಿನ್ನ ಭವ ವಾರಿಧಿ ದಾಟಿಸುವೆಂಬೆ ಭಾರ ಪೊತ್ತರೆ ನೀನೇ ಎನ್ನ ಸಂಸಾರ ಭಾರಕೆಂಬೇ ದೇವ ಕೋರೆ ತೋರಲು ಅಂಜುವೆನೆ ಭೂಮಿಯ ಮೇರೆ ಸಿಲಿಕದೋಡಿದರೂ ದೃಢವನು ಕೊಡದಿದ್ದರೂ ಬಿಡೆ ನಾ 1 ಕಂಬದೊಳಡಗಲು ಬಿಡೆನು ನಿನ್ನ ಡಿಂಬ ಭಜಿಪೆ ನರಹರಿಯೆ ಸಂಭ್ರಮದೊಳು ಬ್ರಹ್ಮಚಾರಿಯಾಗಲು ನಿನ್ನ ಹಂಬಲು ಬಿಡೆ ಕೊಡಲಿಯನು ತೋರಲು ಕದಂಬ ಬಾಹು ಛೇದಿಸಲು ರಾಮ ಕೊಡದಿದ್ದರೆ ದೃಢನಾ ದೇವ 2 ಒಂದು ಸ್ಥಳದಿ ಪುಟ್ಟಿ ತಿಳಿಸದೆ ಇ ನ್ನೊಂದು ಸ್ಥಳಕೆ ಪೋಗೆ ಕೃಷ್ಣಾ ಅಂದದ್ವಸನ ಬಿಟ್ಟು ಸುಂದರಿಯರ ವ್ರತ ಛಂದದಿ ಕಳೆದುನೀ ತೇಜೀಯೇರಲು ಸುಂದರ ಶ್ರೀ ಶ್ರೀನಿವಾಸ ನಿನ್ನಡಿ ದೃಢ ಕೊಡದಿದ್ದರೆ ಬಿಡೆನಾ 3
--------------
ಸರಸ್ವತಿ ಬಾಯಿ
ಗೊಲ್ಲರಾ ಮನೆಯ ಪೊಕ್ಕುಗುಲ್ಲು ಮಾಡುವುದೇನಲ - ಬಲುಲಲ್ಲೆ ಮಾಡುವುದೇನಲ ಪ ಹಾಲು ಮೊಸರು ಘೃತವು ನೆಲುವಿನಮೇಲೆ ಇಟ್ಟ ಬೆಣ್ಣೆಯಬಾಲಕರಿಗಿಲ್ಲದಲೆ ಸುರಿದುಹಾಲುಗಡಿಗೆಯನೊಡೆದಲ 1 ಸಣ್ಣ ಮಕ್ಕಳ ಕಣ್ಣ ಮುಚ್ಚಿಹುಣ್ಣಿಮೆ ಬೆಳುದಿಂಗಳಲಿಬಣ್ಣ ಬಣ್ಣದ ಮಾತನಾಡಿಸಣ್ಣ ಕೆಲಸಕ್ಕೆಳೆದಲ 2 ಸುದತಿಯೊಬ್ಬಳು ದಧಿಯ ಮಥಿಸುತಒದಗಿದ ಬೆಣ್ಣೆಯ ತೆಗೆಯಲುಮದನ ಕದನಕೆ ಕೆಡಹಿ ಮಾನಿನಿಒದರಿದರು ನೀ ಬಿಡೆಯಲ 3 ಕಿಟ್ಟ ನಾ ನಿನಗೆಷ್ಟು ಹೇಳಲಿದುಷ್ಟ ಬುದ್ಧಿಯ ಬಿಡೆಯಲಇಷ್ಟು ಹರಳಿಸಿ ರಟ್ಟು ಯಾತಕೆಬಿಟ್ಟು ಮಧುರೆಗೆ ಪೋಗೆಲ4 ಕೇಶವ ವಿಠ್ಠಲ ನಿನ್ನನುಕೂಸು ಅಂದವರ್ಯಾರಲೊ - ಹಸುಗೂಸು ಅಂದವರ್ಯಾರಲೊದೇಶದೊಳಗೆ ವಾಸವಾಗಿಹ ಬೇಲೂರು ಚೆನ್ನಕೇಶವ 5
--------------
ಕನಕದಾಸ
ಚೈತ್ರದುತ್ಸವ ಗೀತೆ ಚೈತ್ರಮಾಸದ ಕೃಷ್ಣಪಕ್ಷ ಷಷ್ಠಿಯಲಿ ಕಟ್ಟಿ[ದರು] ಕಂಕಣವನು ಸೃಷ್ಟಿಗೀಶ್ವರಗೆ ಪ. ಮೊದಲು ದಿವÀಸದಿ ಧ್ವಜಪಟವನೇರಿಸಿ ಸುರರು 1 ಯಾಗಶಾಲೆಯ ಪೊಕ್ಕು ಯಾತ್ರದಾನವ ಬೇಡಿ ಸೂತ್ರ ಧರಿಸಿದರು 2 ಸರ್ಪಮೊದಲಾದ ಅಲ್ಲಿರ್ಪ ವಾಹನವೇರಿ ಕಂ ದರ್ಪನಪಿತ ಬಂದ ಚಮತ್ಕಾರದಿಂದ 3 ಬೆಂಡಿನ ಚಪ್ಪರ ಬೆಳ್ಳಿಕುದುರೆಯನೇರಿ ಪುಂಡರೀಕಾಕ್ಷ 4 ರೇವತಿ ನಕ್ಷತ್ರದಲಿ ಏರಿ ರಥವನ್ನು [ತಾ] ವೈಯ್ಯಾರದಿಂದಲೆ ಬಂದ ವಾರಿಜನಾಭ 5 ಗೋವಿಂದ ಗೋವಿಂದಯೆಂದು ಪ್ರಜೆಗಳು [ತಾವಾ]ನಂದದಿಂದ ನೋಡಿ ಪಾಡುತ್ತ 6 ಗೋವುಗಾಣಿಕೆಯನ್ನು ಗೋಪಾಲರು ತಂದು ನೀ ಲಾವರ್ಣನಿಗಿತ್ತರು ನೇಮದಿಂ ಪೂಜೆಯ 7 ಧ್ವಜಮಂಟಪದಲ್ಲಿ ಹರಿಭಜನೆಗಳ ಮಾಡು[ತ್ತಿರೆ] ಭುಜಗಶಯನನು ವರವಿತ್ತು ಕಳುಹಿದನು 8 ಸಪ್ತಾವರಣವ ಸುತ್ತಿ ತೀರ್ಥವನಿತ್ತು ಅರ್ಥಿಯಿಂದಲೆ ಬಂದ ಭಕ್ತವತ್ಸಲನು 9 ಬೊಂಬೆ ಅಂದಣವೇರಿ[ದ] ಅಂಬುಜನಾಭ ಕುಂಭಿಣಿಗಧಿಕವೆಂತೆಂಬ ಶ್ರೀರಂಗ 10 ಚಿತ್ರರಥ[ದ] ವಿಚಿತ್ರಮೂರುತಿಯ ನೋಡಿ ಪ ವಿತ್ರರಾದರು ಧಾತ್ರಿ[ಯ] ಉತ್ತಮರೆಲ್ಲ 11 ಬಂದ ಪ್ರಜೆಗಳು ಎಲ್ಲ ಆನಂದದಿ ಪೋಗೆ ಬಂದು ಆಸ್ಥಾನದಿ ನಿಂದ ಶ್ರೀರಂಗ 12 ಸೃಷ್ಟಿಯಲಿ ಪುಟ್ಟಿದ ದುಷ್ಟಪ್ರಾಣಿಗಳ [ನೆಲ್ಲ] ಶ್ರೇಷ್ಠ ಮಾಡಲಿ [ನಮ್ಮ] ವೆಂಕಟರಂಗ 13
--------------
ಯದುಗಿರಿಯಮ್ಮ
ಜೋಜೋ ಶ್ರೀ ಗೋಪಾಲಕೃಷ್ಣ ಮೂರುತಿಯೆ ಪತಿ ಲೋಕ ದೊರೆಯೆ ಜೋಜೋ ಈ ಲೋಕದೊಳು ನಿನಗಿನ್ನು ಸರಿಯೆ ಜೋಜೋ ಶ್ರೀ ಗುರುಕರಾರ್ಚಿತದಿ ಬಂದ್ಹರಿಯೆ ಪ. ತಂದೆ ಮುದ್ದುಮೋಹನರು ಕೊಟ್ಟ ಅಂಕಿತದಿ ಪೊಂದಿದ್ದ ರೂಪ ಗ್ರಹದಲ್ಲಿ ಹೊಂದಿ ಮುಂದೆಂಟು ವತ್ಸರಕೆ ಎನ್ನೊಡನೆ ಬಂದಿ ತಂದೆ ಮುದ್ದುಮೋಹನರ ಕರಸ್ಪರ್ಶ ಪೊಂದಿ 1 ನಮ್ಮ ಹಿರಿಯರ ಪೂಜೆ ಒಮ್ಮೊಮ್ಮೆ ಎಂದು ಒಮ್ಮೆ ದುರುಳನು ಮುಟ್ಟೆ ಮಲಿನಾದೆನೆಂದು ನಮ್ಮ ಗುರು ಕರಸ್ಪರ್ಶದಿಂ ಪುನಃ ಬಂದು ಪತಿ ಎನ್ನ ಕರಪೂಜೆ ಬೇಕೆಂದು 2 ಘನ್ನ ಗುಣರು ನಿನ್ನ ಪೂಜಿಸಿ ಪೋಗಲಂದು ಮನೆ ಪೆಟ್ಟಿಗೆಯೊಳ್ ಸುಮ್ಮನಿರಲಾರೆನೆಂದು ಮನಕೆ ಪ್ರೇರಿಸೆ ದುರುಳರಿಗೆ ಕದ್ದು ಒಯ್ದು ಘನ ಮೂರ್ತಿಗಳು ಪೋಗೆ ನೀನೊಬ್ಬ ಬಂದು 3 ಬಹುದಿವಸ ಮಲಿನವಾಗಿರುತಿರಲು ನೀನು ಮಹಮಹಿಮೆ ಅರಿಯಲಿಲ್ಲಾಗ ನಾನಿನ್ನು ಅಹಹ ನಮ್ಮ ಗುರುಗಳೆರೆಯಲು ಜ್ಞಾನವನ್ನು ಮಹಿಯೊಳೆನ್ನ ಪೂಜೆಯನು ಬಯಸಿದೆಯೊ ನೀನು 4 ಮನದಲ್ಲಿ ಪ್ರೇರಿಸಲು ಘನವಲ್ಲವೆಂದು ಕನಸಿನಲಿ ಎನ್ನ ಹಸ್ತದೊಳ್ ಬಂದು ನಿಂದು ಸನುಮತದಿ ಹರುಷದಲಿ ನಿನ್ನ ನಾ ತಂದು ಘನ ಮಹಿಮ ಗುರುಗಳಿಗೆ ಒಪ್ಪಿಸಲು ಅಂದು 5 ಅಂತರಾತ್ಮನ ಗುರುವು ವಿಗ್ರಹದೊಳಿಟ್ಟು ಸಂತೋಷದಿಂದ ಮನಮುಟ್ಟಿ ಕೊಡಲಷ್ಟು ಅಂತಾಯ್ತು ಮಲಿನ ಕುಂದಿತು ತೇಜವೆಷ್ಟು ನಿಂತೆನ್ನ ಕೈಲಿ ಪೂಜೆಯಗೊಂಬ ಗುಟ್ಟು 6 ದಿನದಿನಕೆ ಭಜನೆ ಪೂಜೆಯನೆಗೊಂಬ ಚಂದ ಘನಭಕ್ತರನು ಪೊರೆವ ಬಿರುದು ಆನಂದ ಮುನಿಜನರ ಮೋಹಕನೆ ಸಚ್ಚಿದಾನಂದ ಎನಗೊಲಿದೆ ಗೋಪಾಲಕೃಷ್ಣ ಗೋವಿಂದ 7 ರಮೆ ಬ್ರಹ್ಮ ಸುರರಿಗೆ ಸರಿ ಪೂಜಿಸುವೆನೆ ಕಮಲಾಕ್ಷ ಅಣು ನಾನು ನಿನ್ನ ಒಲಿಸುವೆನೆ ರಮಣೀಯವಾದ ವಸ್ತುಗಳ ನಾ ತಹೆನೆ ಕ್ಷಮಿಸು ನಿನ್ನ ದಾಸಿ ನನ್ನಪರಾಧಗಳನೆ 8 ಅಂತರಂಗದಲಿಪ್ಪ ಬಿಂಬ ಮೂರುತಿಯೆ ನಿಂತು ಈ ವಿಗ್ರಹದಿ ಈ ರೀತಿ ಮೆರೆಯೆ ಸಂತೋಷ ನೋಳ್ಪರಿಗೆ ಕೊಡು ಭಕ್ತಿ ಹರಿಯೆ ಕಂತುಪಿತ ಕಮಲಾಕ್ಷ ಕಾಯೊ ಸಿರಿದೊರೆಯೆ 9 ಪೂಜ್ಯಪೂಜಕನೆಂದು ಪೂಜೆ ಮಾಡುವೆನೊ ಮೂರ್ಜಗತ್ಪತಿ ನಿನ್ನ ಲಾಲಿ ಪಾಡುವೆನೊ ಪೂಜ್ಯ ಶ್ರೀ ಗೋಪಾಲಕೃಷ್ಣವಿಠ್ಠಲ ನೀನು ಗೋಜು ಬೇಡನ್ಯರದು ಪೊರೆಯೊ ದಾಸರನು 10
--------------
ಅಂಬಾಬಾಯಿ
ತಂದು ತೋರೆ ಮಂದರಧರ ಮು -ಕುಂದ ಮುರಹರನ ಪ. ಬೇಗದಿ ಪೋಗೆ ನೀ ಸಾಗರದೊಳಗೆಭೋಗಿ ಭೋಗದೊಳಿಪ್ಪ ಸೊಬಗುಮೂರುತಿಯ 1 ಸಾರಿದ ಸುಜನರ ಸಲಹುವ ಧೀರನನೀರೆ ನಿಗಮಸ್ತೌತ್ಯ ನಿರ್ಮಲರೂಪನ 2 ಮಂಗಳಮೂರುತಿ ಸಿರಿಹಯವದನನಸಂಗಿಸು ಎನ್ನೊಳು ಸಖಿ ಸುಖಮಯನ3
--------------
ವಾದಿರಾಜ