ಒಟ್ಟು 19 ಕಡೆಗಳಲ್ಲಿ , 12 ದಾಸರು , 19 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಅ) ಭಗವಂತನ ಸಂಕೀರ್ತನೆ ಅಪ್ರಮೇಯ ಆದರಿಸೋ ಎನ್ನ ಪ ಸ್ವಪ್ರಕಾಶಾನಂದರೂಪನೆ ಅ.ಪ ತಪ್ಪುಗಳೆಣಿಸದೆ ದಾಸನೆಂತೆಂದು 1 ನಿನ್ನದರುಶನದಿಂದಾ ಧನ್ಯರಾಗುವರುಜನರು ಪುಣ್ಯವಂತರಾಗಿಹವರವ ಪಡೆವರು 2 ಮಾರಜನಕ ಗುರುರಾಮ ವಿಠಲ 3
--------------
ಗುರುರಾಮವಿಠಲ
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ) ಶ್ರೀನಿವಾಸಾಯ ನಮೋ ಪ. ಶ್ರೀನಿವಾಸಾಯ ಶತಭಾನುಪ್ರಕಾಶಾಯ ಶ್ರೀನಿವಾಸಾಯ ನಿಜ ಭಕ್ತಜನಪೋಷಾಯ ಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ. ದೋಷಗಂಧವಿದೂರ ಕೇಶಿಮುಖದಾನವ ವಿ- ನಾಶವಿಧಿಭವಸುಖನಿವಾಸ ವಾಸುಕಿಶಯನ ವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷ ದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ- ಭೂಷ ಭೂತಾತ್ಮ ಭವಪಾಶಹರ ಪರತರ ದ- ಕೇಶವಾಯ ನಮೋನಮಃ 1 ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶ ಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತ ಸನ್ನುತ ಪಾದನೀರರುಹದ್ವಂದ್ವನೆ ಸುರರು ತಿಳಿಯರು ನಿನ್ನ ಭೂರಿಮಹಿಮೆಗಳ ಸಾಕಾರವನು ಬಣ್ಣಿಸುವ ನಾರಾಯಣಾಯ ನಮೋ 2 ವೇದವೇದ್ಯನೆ ದುರಿತಶೋಧನೆ ದೈತ್ಯಗಣ- ಛೇದಕನೆ ಸುರಸುಪ್ರಸಾದಕನೆ ಭಕ್ತಜನ- ಸಮಾನಾಧಿಕ್ಯರಹಿತ ಸತತ ಆದಿತ್ಯ ಶತಕೋಟಿತೇಜೋವಿರಾಜ ಮಹ- ದಾದಿಕಾರಣ ಮಧುವಿರೋಧಿ ಮಂಗಲಸುಖಾಂ- ಮಾಧವಾಯ ನಮೋನಮಃ 3 ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು- ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ- ಸನ್ನುತ ಮಹೇಂದ್ರ ವಂದಾರುಜನತ್ರಿದಶಮಂದಾರ ಕೋಮಲಿತ ವೃಂದಾವನವಿಹಾರ ಕಂದರ್ಪಜನಕ ಬಾ- ತುಭ್ಯಂ ನಮಃ 4 ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷ ಮುಷ್ಟಿಕಾಸುರವೈರಿ ಮುನಿಜನಮನೋಹಾರಿ ಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇ ಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆ ತುಷ್ಟಿಯನು ನೀನಿತ್ತು ಸಲಹೊ ಸಾಮಜವರದ ತುಭ್ಯಂ ನಮೋ 5 ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತ ಬುಧಜನಪ್ರಿಯ ಭೂತಭಾವನ ಜಗನ್ನಾಥ ಮದನಕೋಟಿಸ್ವರೂಪ ವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ- ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸ ಮಧುಸೂದನಾಯ ನಮೋ 6 ಅಕ್ರೂರವರದ ಸದತಿಕ್ರಮರ ಗೆಲಿದ ಹಯ- ವಕ್ತ್ರ ವೈಕುಂಠಾಖ್ಯ ಪುರವಾಸ ಜಗದೀಶ ಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನು ಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ- ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿ ತ್ರಿವಿಕ್ರಮಾಯ ನಮೋನಮಃ 7 ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು- ದಾಮಸಖ ಪರಿಪೂರ್ಣಕಾಮ ಕೈರವದಳ- ಸುಜನಸ್ತೋಮಸುರಕಾಮಧೇನು ಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ- ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ- ಪ್ರಾಜ್ಞ ವಾಮನಾಯ ನಮೋನಮಃ 8 ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ- ರಾಧಭಂಜನ ಭವಾಂಬೋಧಿಕುಂಭಜ ಭಜಕ- ಚತುಷ್ಟಾದ ಪಾವನಚರಿತನೆ ಗಾಧಿಜಾಧ್ವರಪಾಲ ಗರುಡಧ್ವಜ ದಯಾಳು ನಾದಬಿಂದು ಕಲಾತೀತ ರುಕ್ಮಿಣಿನಾಥ ಶ್ರೀಧರಾಯ ನಮೋನಮಃ 9 ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ- ಕಾಶ ಪಾಲಿತನಿಖಿಳಭೂಸುರವ್ರಜ ಮಂದ- ದೂಷಣಾದ್ಯ ಸುರಹರನೆ ಈಶಪತಿಸೇವ್ಯಾಂಬರೀಶನೃಪವರದ ಪರ- ಮೇಶ ಕೋವಳಪೀತವಾಸ ಕರ್ದಮಶುಕಪ- ಹೃಷೀಕೇಶಾಯ ತುಭ್ಯಂ ನಮೋ 10 ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲ ಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ- ಬುದ್ಧ ಬುಧಜನಸುಲಭ ಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇ ತದ್ವೀಪವೈಕುಂಠಮಂದಿರತ್ರಯ ಸಾಧು- ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11 ಸಾಮಗಾನವಿನೋದ ಸಾಧುಜನಸುಖಬೋಧ ಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತ ಸಮರಂಗ ಭೀಮ ನಾಮಧಾರಕರ ಪರಿಣಾಮರೂಪಕ ಸುಜನ- ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣ ದಾಮೋದರಾಯ ನಮೋ 12 ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯ ವೆಂಕಟಾಚಲಸದಾಲಂಕಾರ ಶೇಷಪರಿ- ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗ ಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತ ಓಂಕಾರನಿಧನ ಸಾಮಕಭಕ್ತರಾನೇಕ ಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ 13 ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದು ಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯ ನೀ ಸಲಹೊ ದೇವದೇವ ಭೂ ಸಲಿಲ ಪಾವಕಾಕಾಶಾದಿ ಭೂತಾಧಿ- ವಾಸ ರಾಕ್ಷಸವನಹುತಾಶ ನಾನಾ ರೂಪ- ವಾಸುದೇವಾಯ ನಮೋ 14 ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲ ವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರ ಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನ ರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ- ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ- ಪ್ರದ್ಯುಮ್ನಾಯ ತುಭ್ಯಂ ನಮಃ 15 ಉದ್ಧವಾದಿ ಸಮಸ್ತ ಭಾಗವತಜನಕಮಲ- ಮಧ್ಯಚರರಾಜಹಂಸಾಯ ಮಾನಸದ ಶ್ರೀಹರಿಯೆ ವೈದ್ಯನಾಥವಿಧಾತನೆ ಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ- ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆ ಅನಿರುದ್ಧಾಯ ತುಭ್ಯಂ ನಮಃ 16 ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾ ಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷ ಮಂಗಲರಿತ ಗುರುತಮ ಗುಣಧ್ಯಕ್ಷನೆ ಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದ ಶರಭಂಗ ಮುನಿಪಾಲ ಶಮಿತದಾನವಜಾಲ ಪುರುಷೋತ್ತಮಾಯನ್ನಮೋ 17 ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್- ವಿಶ್ವತೋಮುಖ ವಿಶ್ವತೋಬಾಹು ಕರುಣಾಕ- ದಯಮಾಡು ಶ್ರೀವಕ್ಷಸ್ಥಲನಿವಾಸನೆ ಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ- ಮೋಕ್ಷದಾಯಕ ಯಜ್ಞಮೂರ್ತಿ ರೂಪತ್ರಯ ಮ- ಅಧೋಕ್ಷಜಾಯ ನಮೋನಮಃ 18 ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು- ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ- ಶಿರಪ್ರಕರಧೀರ ಪ್ರಹ್ಲಾದಾಭಿವರದ ಭೂರೀಕರರೂಪ ಭೂಮಕೀರ್ತಿಕಲಾಪ ಸಾರವಜ್ರಸ್ತಂಭದಿಂ ಬಂದ ನಂದ ಸುಕು- ನಾರಸಿಂಹಾಯ ನಮೋ 19 ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತ ಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ- ನಿರ್ಮಿಸುವ ಆಶ್ಚರ್ಯಕೃತ ಸಲೀಲ ಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯ ಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ- ಶ್ರೀಮದಚ್ಯುತಾಯ ನಮೋನಮಃ 20 ಚೈದ್ಯಮಥನ ಮನೋಜ್ಞಶುದ್ಧಾತ್ಮ ಸರ್ವಜ್ಞ ಹೊದ್ದಿಸಿದ ಪಾರ್ಥನಿಂಗೆ ಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ- ವಿದ್ದ ಮಾನಸವ ಪಾದದ್ವಯದೊಳಿರಿಸೈ ದ- ಜನಾರ್ದನಾಯ ನಮೋನಮಃ 21 ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದ ನಂದಗೋಪನ ಕಂದನೆನಿಸಿ ಬಾಲಕತನದ ಸುಂದರೀರಮಣ ಜಯತು ತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ- ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ- ಉಪೇಂದ್ರಾಯ ತುಭ್ಯಂ ನಮಃ 22 ಸ್ಥಿರಚರಾತ್ಮಕ ಧೇನುಚರ ದೇವಕೀಜಠರ- ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥ ದುರಿತದೂರ ಗಭೀರನೆ ನಿರತಿಶಯ ನಿಜನಿರ್ವಿಕಲ್ಪ ಕಲ್ಪಾಂತಸಾ- ಗರದಿ ವಟಪತ್ರಪುಟಶಯನ ಪುಣ್ಯಶ್ರವಣ ಹರಯೇ ನಮೋನಮಸ್ತೇ 23 ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ- ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ- ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾ ದುಷ್ಟ ನರಕಾದಿದಾನವರ ಮರ್ದಿಸಿದ ಜಗ- ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ- ಹರೇ ಕೃಷ್ಣಾಯ ತುಭ್ಯಂ ನಮಃ 24 ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆ ಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ- ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜ ಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು- ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ- ಲಕ್ಷ್ಮೀನಾರಾಯಣಾಯ ನಮೋ 25
--------------
ತುಪಾಕಿ ವೆಂಕಟರಮಣಾಚಾರ್ಯ
ಎಂತು ಬಿನ್ನೈಸಲೊ ಮುರಾರಿ ಸಾರಿಗೆ ಸಾರಿ | ಸಂತ ಜನರ ಆಧಾರಿ ಪ ಶ್ಲೋಕ - ಘನ ಅನವರತÀ ಕಾಯಾ | ಸ್ವಾಮಿ ಲಕ್ಷ್ಮೀ ಸಹಾಯ | ಅನಿಮಿಷ ಮುನಿಗೇಯಾ ಹೇಯ ಧರ್ಮ ವಿಹಾಯ | ನಗರ ನಿಲಯಾ | ಅಮಿತÀ ಆನಂದ ಕಾಯಾ | ನಾಗ ತಲ್ಪೋರು ಗಾಯಾ 1 ಪದ - ಶರಣು ಶರಣು ಶಾರಣ್ಯನೆ | ಗುಣ ಗುಣ್ಯನೆ | ನಮಗಾನನ್ಯನೆ | ನಿರುತರಂತರ ಕಾರುಣ್ಯನೆ ಪ್ರದದಾನ್ಯನೆ | ಅಪ್ರತಿ ಧನ್ಯನೆ | ಪರಮ ಪುರುಷ ಅಸಮಾನ್ಯನೆ | ಮಹ ಪುಣ್ಯನೆ | ಪ್ರಳಯ ಕನ್ಯೆನೆ | ಕರುಣ ಸಾಕ್ಷಿಗನೆ ಲಾವಣ್ಯನೆ | ಅನುಗಣ್ಯನೆ ಪ್ರಾಕೃತ ಶೂನ್ಯನೆ 1 ಶ್ಲೋಕ - ಪರಿಪರಿ ಹೇಯ ಗಾತ್ರಾ ತೆತ್ತನೊ ಇಷ್ಟ ಮಾತ್ರಾ | ಚರಿಸಿದೆ ವಿಷಯ ಯಾತ್ರಾ | ಪಾರಗಾಣೆನೋ ಮಿತ್ರಾ | ಕೊರಳಿಗೆ ಮಮತೆ ಸೂತ್ರಾ | ಉರುಲು ಬಿದ್ದಿದೆ ಚಿತ್ರಾ | ಸುರಕು ಬಡಿಪ ತನುತ್ತಾ | ಕಮಲ ನಿನೇತ್ರಾ | 2 ಪದ - ನರಕ ನರಕ ಉಂಡು ಬೆಂದೆನೊ | ಇಲ್ಲಿ ನಿಂದೆನೊ | ಗತಿಗೆ ಮುಂದೇನೊ | ಕುರುಡ ಕಿವುಡನಾಗಿ ನೊಂದೆನೊ | ಇನ್ನೊಂದೇನೊ | ಉಪಾಯವಂದೆನೊ | ಮರಹು ಸಾಗರದೊಳು ಸಂದೆನೊ | ಅಂದು ಹಿಂದೆನೊ | ಸುಜನರಿಗಂದೇನೊ 2 ಶ್ಲೋಕ - ಸುಲಲಿತ ರುಚಿರಪಾಂಗಾ | ಶುದ್ದ ಸ್ವಭಾವÀ ರಂಗಾ | ಪಲಿಪರಮಾಣು ಸಂಗಾ | ಪಾವನ ಕೋಮಲಾಂಗಾ | ವೊಲಿಸಿದವರ ಭಂಗಾ | ಪರಿಸುವ ಶಿಂಗ ಶಿಂಗಾ | ವರಬಲಗುಣ ತರಂಗಾ | ಸರಸಿಜ ಹೃತ್ಪುಂಗಾ3 ಪದ - ಚಿಂತಿಸುವೆನೊ ನಿನ್ನ ವಿಗ್ರಹಾ | ಮನೋನಿಗ್ರಹಾ | ವಾಗಲಿ ಅನುಗ್ರಹಾ | ಸಂತತ ಎನಗಿದೆ ಸಂಗ್ರಹಾ | ದೇಹವೈಗ್ರಹಾ | ದುರುಳರ ಪ್ರತಿ ಗ್ರಹಾ | ಮುಂತೆ ಕೈಕೊಂಬ ದುರಾಗ್ರಹಾ | ಯೈವ ವಿಗ್ರಹಾ | ಮಾಣಿಸು ಶಿರಿಗ್ರಹಾ | ಸಂತೈಸು ಕರುಣವಾರುಣಗ ಅನಿಗ್ರಹಾ 3 ನವನೀತ ಗೋಪಿ ವಸ್ತ್ರಾಪಹಾರಾ | ಕಾಲ ಧಾರಾ | ಕಂಸದಾನವ ಸಂಹಾರಾ | ಧ್ರುವ ಬಲಿಕರಿ ಉದ್ಧಾರಾ | ನಾನವತಾರ ಧೀರಾ | ಪವನ ಮನಮಂದಿರಾ ಪಾಲಿಸೊ ವಾರಂ ವಾರ4 ಪದ - ವಿಜಯನಗರಾಧೀಶ ಸರ್ವೇಶಾ | ಮಣಿಮಯ ಭೂಷಾ | ಸೂರ್ಯ ಕೋಟಿ ಪ್ರಕಾಶಾ | ತ್ರಿಜಗದೊಳಗೆ ನೀನೆ ನಿರ್ದೋಷಾ | ಶಕ್ತಿ ವಿಶೇಷಾ | ಐಶ್ವರ್ಯ ವಿಲಾಸಾ | ಋಜುಜ್ಞಾನ ಕೊಡುವದೊ ಮನೋತ್ತರಿಸಾ | ಮಂಜುಳ ಭಾಷಾ | ಭೂದಾ ರಜವಾಸಾ | ನಿರ್ಜರ ಕೋಶಾ | ಹೃದಯ ಕಾಶಾ | ನಾಮಕ ಮಹಿದಾಸಾ 4
--------------
ವಿಜಯದಾಸ
ಎನ್ನ ಪಾಲಿಸುವುದಾನಂತ ಶಯನ | ಚನ್ನ ಗರುಡವಾಹನಾ | ಮುನಿಗೊಲಿದನಂತ ಗುಣಾರ್ಣವಾ ಪ ದೇವಾ ನಂಬಿದವರ ನೋವ ಕಳೆದು ಬಿಡದೆ | ಕಾವ ಬೇಡಿದ ವರವ ನೀವ ಮೂರು | ಭುವನ ಜೀವ ವಿಮಲರಾ | ಜೀವ ನಯನ ವಸುದೇವ ದೇವಕಿತನು | ಭವನೆ ಭವದೂರ ದುರ್ಜನ ಸಂಹಾರ | ದೇವತಾ ವರ ಸಂಜೀವಾ ಪ್ರಭಾವಾ1 ಸೂರ್ಯಕೋಟಿ ಪ್ರಕಾಶಾ | ಚಾರ್ಯನಾ ನಾಯಕಾಧೀಶಾ | ಧೈರ್ಯವುಳ್ಳ ಸರ್ವೇಶಾ | ಕಾರ್ಯರೊಳು ವಿಶೇಷಾ | ಕಾರ್ಯವಂತನೆ ಈಶಾ | ತುರ್ಯಮಹಿಮಾ ಸುರ ಮರ್ಯಾದಿಯಲಿ ಬಲು | ವೀರ್ಯದಲಿ ಮತಿ | ಧಾರ್ಯನ ಮಾಡೋದು | ನಿರ್ಯಾಣ ಸಮಯಕ್ಕೆ 2 ಬಂದು ಮತ್ಸ್ಯಾದಿ ತೀರ್ಥ | ಬಂದು ಬಲು ಸಮರ್ಥ | ಇಂದು ಕರುಣಿಸು ಕರ್ತಾ | ಬೆಂದು ಪೋಗಲಾರ್ಥ | ಮುಂದುಣಿಸು ಸುಧಾರ್ಥ | ತಂದು ನೀನೆ ಮುಕ್ತ್ತಾರ್ಥ | ಬಂದು ವೈತಿರುವಾ ನಂದು ರೂಪವನೆ | ಸಿಂಧುಶಯನ ಆ ನಂದ ವಿಜಯವಿಠ್ಠಲೆನ್ನ ಪಾಲಿಸೋ3
--------------
ವಿಜಯದಾಸ
ಎಷ್ಟೆಂದು ಸಾರುವೆ ನಿಮ್ಮ ನಾಮ ಮಹಿಮಾ| ಶ್ರೀ ಪರಬೊಮ್ಮಾ ಶಿಷ್ಟ ಜನರ ಸಂಭ್ರಮಾ ಪ ಹರಿಹರಿಯಂದೊದರೆ ಮರೆದರಿದೊಮ್ಮಾ| ಹರದ್ಹರ ದೋಹುದುಪಾಪ ಪುಣ್ಯವು ಮೋಪಾ| ತಿರು ತಿರುಗಿ ಯಾತ್ರೆಗಳಾ ಮಾಡಿದ ಫಲಾ| ಪರತರಾಸುಖ ನೀವುದು ರಕ್ಷಿಸುವುದು 1 ರಮ ರಾಮಯಂದು ಕಾಮಿಕಾಮಿ ಅಂದು| ನಾಮಾ ನೇಮದಿ ನುಡಿಯೆ ಗಿಳಿಯ ಕರಿಯೆ| ಪ್ರೇಮ ಪ್ರೇಮಕರ ತಂದೆ ಗತಿ ನೀಡದೇ| ಸೋಮ ಸೋಮಾರಿ ಕುಲೇಶ ಕೋಟಿ ಪ್ರಕಾಶಾ 2 ಪರಿ ಪರೀವದಾನಂದಾ| ಕರೆ ಕರೆದುಂಡು ನಲಿದರು ನಾರದಾದ್ಯರು| ತರಿಸಿ ತಾರಿಸುತಿಹರು ಸಾಧು ಸಂತರು| ಗುರುವರ ಮಹಿಪತಿ ಜನು ಧನ್ಯನಾದನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಗತ್ಪಾಲಾ ಸದ್ಗುಣಶೀಲಾ ರಮಾಲೋಲಾ ಪ ನಿತ್ಯ ವಿಮಲಾ ಬಹುಗುಣ ಶೀಲಾ ಪಾಹಿ ಕೃಪಾಲಾ1 ನಿತ್ಯಾನಂದಾ ದೇವಕಿಕಂದಾ ಕಂಸನ ಕೊಂದಾ ಬಾಲ ಗೋವಿಂದ ನೀ ದಯದಿಂದಾ ಪಾಹಿ ಮುಕುಂದಾ 2 ಅಮರಾಧೀಶಾ ಅಸುರನಾಶಾ ಪರಮ ಪ್ರಕಾಶಾ ಗೋಕುಲವಾಸಾ ಭಕ್ತಪೋಷಾ ಶ್ರೀಹನುಮೇಶವಿಠಲ 3
--------------
ಹನುಮೇಶವಿಠಲ
ಜಯಜಯಾ ಶ್ರೀನಿವಾಸಾ ಜಗದೀಶಾ ವೆಂಕಟೇಶಾ ದಯದಿಂದಲಿ ಪಾಲಿಸೆನ್ನಾ ದೋರಿನಿಜ ಪ್ರಕಾಶಾ ಪ ಉರಗಾದ್ರಿಯಲ್ಲಿ ಬಂದು ಭೂವೈಕುಂಠಿದೇಯಂದು ಕರದಿಂದ ಮಹಿಮೆದೋರಿ ತಾರಿಸುವ ಜನದಿಂದು 1 ಧರ್ಮಾರ್ಥ ಕಾಮ್ಯ ಚತುರ್ವಿಧಮುಕ್ತಿಗಳು ಧರ್ಮವರಿತೆಸಾಧುರಿಗೆ ನೀಡುತಿಹೆ ದಯಾಳು 2 ಕುಲಧರ್ಮದಿಂದಲೆನೆಗೆ ಮಾನ್ಯತಾನಬಂದ್ಹಾಂಗೆ ವಲಮೆಯಿಂದ ಪರಗತಿಗೆ ಕುಡುಮಾನ್ಯತೆನವೀಗ 3 ಮಂದರೊಳು ಮಂದನಾನು ಜ್ಞಾನಭಕ್ತಿಯರಿಯೆನು ತಂದೆ ಮಹಿಪತಿಸ್ವಾಮಿ ಇಂದು ಉದ್ಧರಿಸುನೀನು 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬಿದೆ ನಿನ್ನ ಪಾದವ ಕಾಣಬೇಕೆಂದು ಹಂಬಲಿಸಿದೆ ಮಾಧವ ಬೆಂಬಲವಾಗು ಪೀತಾಂಬರಧರ ಕುಟುಂಬಿ ಪಾಲಾ ಕಮಲಾಂಬಕ ರಂಗಾ ಪ ಚಂದಿರಹಾಸ ಸರ್ವೇಶ ಚಂಡ ಪ್ರಕಾಶಾ ಇಂದಿರಾ ಮನೋವಿಲಾಸ ವೃಂದಾರಕರ ನಿಜಕೋಶಾ ಮಂದರಧರ ವಸುಂಧರಪತಿ ಪುರಂದರ ವಂದಿತ ಸುಂದರಾಂಗ ಕಂಬು ಇಂದೀಗ ತೊಂದರೆಕಿಡದಿರು 1 ತಂದಿತಾಯಿಗಳವರಾರೊ ತಾವಳಿದು ಸತಿ ನಂದನರೊ ಬಂಧುಬಳಗ ಮತ್ತಾರೊ ಬರಿದೆ ಊರು ಪೊಂದದೆನಲೊ ಇಳಿಜಾರು ಎಂದೆಂದಿಗಿದರ ಗಂಧದೊಳಗೆ ನಾ ಬಂದು ಬಳಲಿ ಸಂ ಬಂಧದೊಳುರಳಿದೆ ಮುಂದಾದರು ದಾರಿ ಒಂದಾದರು ಕಾಣೆ ತಂದೆ ತಾಯಿ ಸರ್ವಂದವು ನೀನೆ 2 ನೊಂದೆನೊ ನಾನಾ ಜೀವಿಲಿ ನೋಡು ನೋವಿನಲಿ ಕುಂದಿದೆ ಎಲ್ಲ ಕಾವಿಲಿ ಬೆಂದೆನೋ ಬಲು ಕೋವಿಲಿ ಅಂದದರ್ಚನೆಯಿಂದ ಮಾಡಿದ ಪಾಪಗೊಂದಿಗೆಳೆದು ಎನ್ನ ಇಂದು ಚರಣರವಿಂದವ ತೋರಿಸುವ ಬಂಧು ವಿಜಯವಿಠ್ಠಲೆಂದಹುದೆಂದು 3
--------------
ವಿಜಯದಾಸ
ನವನೀತ ತಸ್ಕರಾಯ ಜಯಮಂಗಳಂ ಪವಮಾನ ವಂದಿತಾಯ ಶುಭಮಂಗಳಂ ಪ ವಿಶ್ವ ಪರಬ್ರಹ್ಮ ಅಚ್ಯುತಾಯ ಶರನಿಧಿ ಮಂದಿರಾಯ ಜಯಮಂಗಳಂ ಪರವಸ್ತ ಪರಪರಂಜ್ಯೋತಿ ಪ್ರಕಾಶಾಯ ಸಿರಿದೇವಿ ಅರಸಾಯ ಶುಭಮಂಗಳಂ 1 ಈಶಾ ಇಂದ್ರಾ ವಂದಿತಾಯ ವಿಶ್ವನಯನಾಯ ವಾರಾ ಣಾಸಿ ಕ್ಷೇಮ ಸ್ಥಾಪಿತತಾಯ ಜಯಮಂಗಳಂ ಆಶಾ ದೋಷಾ ಕ್ಲೇಷಾ ಪಾಶಾ ನಾಶಾ ನಾರಾ ಪೋಷಕಾಯ ಶೇಷರಾಜ ಶಯನಾಯ ಶುಭಮಂಗಳಂ 2 ವಾಣೀಪತಿ ಜನಕಾಯ ವೇಣು ನಾದಾ ವಿನೋದಾಯ ಮಾಣಿಕ್ಯ ಹೀರಾ ಹಾರಾಯ ಜಯಮಂಗಳಂ ಬಾಣ ಬಾಹು ಖಂಡನಾಯ ಬಲಿ ಸದನವಾಸಾಯ ಚಾಣೂರ ಮರ್ಧನಾಯ ಶುಭಮಂಗಳಂ 3 ವಿಶ್ವ ಕುಟುಂಬಿ ಪಾಲಾಯ ವಿಷ್ಣು ಸರ್ವೋತ್ತಮಾಯ ಜಯ ಮಂಗಳಂ ಶಿಷ್ಯ ಜನ ವರದಾಯ ಸಿದ್ಧ ಪ್ರಸಿದ್ಧ ರೂಪಾಯ ಮುಷ್ಟಿಕಾ ಸುರವಧಾಯ ಶುಭಮಂಗಳಂ 4 ಬಂಧು ಬಂಧನಾಯಾ ಮಹಸಿಂಧು ನರ ರಕ್ಷಕಾಯ ಸಿಂಧುರಾಜಾ ಹರಣಾಯ ಜಯಮಂಗಳಂ ವೃಂದಾವನ ಸಂಚಾರಾಯ ವಿಜಯವಿಠ್ಠಲರೇಯಾಯ ಮಾಧವ ದೇವಾಯ ಶುಭಮಂಗಳಂ5
--------------
ವಿಜಯದಾಸ
ಪಾವನೀ ಆವಹಿ ಮಾಂ ಪ ಪಾವನಿ ಪಾತಕಾರಣ್ಯ ಮಹಾ ಪಾವಕÀ ನೀನಾದ್ಯೊ ಘನ್ನ ಆಹಾ ಆವಕಾಲದಲ್ಲಿ ಭಾವಜಜನಕನ ಸೇವೆಯೊಳಿರುವಂಥ ಭಾವ ಪಾಲಿಸೊ ದೇವ ಅ.ಪ ಪ್ರಾಣಾದಿ ಪಂಚರೂಪಕನೆ ಸುರ ಗಣ ಕರಾರ್ಚಿತ ಪಾದಯುಗನೆ ಗುಣ ಗಣನಿಧಿ ಬಾರತೀಧವನೇ ಜಗ ತ್ರಾಣ ಕಾರಣನೆ ಮಾರುತನೇ ಆಹಾ ಚಾರು ಚ ರಣ ವಂದಿಪೆ ಜಗತ್ಕಾರಣಕರ್ತನೇ 1 ಖದ್ಯೋತ ಶತ ನಿಭ ಚರಣಾ ಅನಾದ್ಯ ಹರಣ ಸದ್ಯ ವಿದ್ಯೋತ ವೇದಾಂತಾಭರಣಾ ಅನ ವಧ್ಯ ಸ್ವಭಕ್ತಾಂತಃ ಕರಣಾ ಆಹಾ ವಿದ್ಯಾರಮಣ ನೀನೆ ಸದ್ಯೋಜಾತಗೆ ಸು ವಿದ್ಯಾ ಪೇಳಿದ್ಯೋ ಪ್ರದ್ಯುಮ್ನನ ತೋರಿಸೋ 2 ಶ್ರೀನಾಥನಿಗೆ ಪ್ರತೀಕಾ ಬಾಲ ಭಾನುಕೋಟಿ ಪ್ರಕಾಶಾ ಏನು ಕರುಣಾಳೊ ಭಕ್ತಾಭಿsಲಾಷಾ ಅನು ಸಾರದಿ ಪೂರ್ತಿಪ ಈಶಾ ಆಹಾ ಹನುಮದಾದಿರೂಪ ಘನವಾಗಿ ಧರಿಸಿ ನೀ ವನಧಿ ಲಂಘಿಸಿ ಹರಿ ವನಿತೆಯ ತಂದಿತೆÀ್ತ 3 ಸೂತ್ರನಾಮಕ ಶುಭಗಾತ್ರಾ ಚಿತ್ರ ಚಂiÀರ್i ಪಿತಾಮಹಪುತ್ರಾ ಗೋತ್ರ ಧರಮುಖ ದ್ಯು ಸ್ವಕÀಲತ್ರಾ ಮಿತ್ರ ತಾಡನ ಹರ್ತ ಅರ್ಥಗಾತ್ರಾ ಆಹಾ ಸುತ್ರಾಮ ಮುಖ ತ್ರಿನೇತ್ರಾಂತ ಸುರಕೃತ ಸ್ತೋತ್ರ ಪದಾಂಬುಜ ಮದಂತ್ರದಿ ನಿಲಿಸಯ್ಯಾ 4 ಘೋಟ ಖೇಟ ಕಂಠೀರವ ವದನಾ ಭವ ಕಾಟ ತಪ್ಪಿಸಿ ಪೊರಿ ಎನ್ನಾ ಕಿಟ ಮ ರ್ಕಟ ರೂಪನೆ ನಿನ್ನಾ ಭಕ್ತ ಕೋಟಿಯೊಳಗೆ ಸೇರಿಸೆನ್ನಾ ಆಹಾ ದಿಟ್ಟ ಮಹಿಮ ಗುರು ಜಗನ್ನಾಥ ವಿಠಲನ್ನ ಮುಟ್ಟ ಭಜಿಪ ದಿವ್ಯ ದÀೃಷ್ಟಿಯ ಪಾಲಿಸೋ 5
--------------
ಗುರುಜಗನ್ನಾಥದಾಸರು
ವರ್ಣಿಸಲರಿಯೆ ನಿನ್ನ | ವರ್ಣಿಸಲರಿಯೆ ಗು | ಣಾರ್ಣವ ಹರಿಯೆ ಸೂ | ವರ್ಣ ಗಿರೀಶ ಸು | ಗಮನ ರಂಗಾ ಪ ಕುಂಡಲ ಮಿನುಗುವ ಹಸ್ತ ಕಂಕಣ ಬೆರಳುಂಗರ | ಕೌಸ್ತುಭ ಕಂಬು ಸೂದರು | ಶನ ಭುಜಕೀರ್ತಿ ಭೂ | ಷಣವಾದ ಶಿರ ಉರುವ ಒಪ್ಪಲು ಕಿಂ | ಕಿಣಿ ಕನಕಾಂಬರವ ಪೂಸಿದ ಗಂಧ | ಪುನುಗು ಜವ್ವಾದಿಯಿಂದೆಸೆವ ಸುರತರುವೆ 1 ಕಾಂಚಿದಾಮ ಥಳಿ | ಥಳಿಸುವ ಪದಕ ನ್ಯಾ | ತುಂಬಲು ಸೂಸುತಿರೆ ದಂತಾ | ಮಾತಾರಗಿಳಿಯಂತೆ ಶೋಭಿಸಿ | ಕಪೋಲ ಸುತ್ತಲು ಬೆಳಗುವ ಕಂಗಳ ನಾಸಕಾಂತಿ | ಸಿರಿ ತಿರುವೆಂಗಳಾ2 ಕಟಿ ಕರ ಎರಡೇಳು ಲೋಕ ಜಠರದೊಳಡಗಿರೆ | ಕರಿ ಪಲ್ಲಿನಂತೆ ಸುಂದರ ಜಂಘೆ ಗುಲ್ಫ ವಿ | ಪಾದ ನಖ ಪರಿ ಪರಿ ರೇಖೆಗಳ ಕಾಲಿಂದಿಗೆ | ನಿತ್ಯ ಮಂಗಳಾ 3 ನಿರಯ ತ್ತಮ ಜನ ಮನೋರಥ | ಗಮ ಸಿದ್ಧಾಂತನೆ ವಿ | ಕ್ರಮದಾನವ ಹರ | ಕೋಟಿ ಪ್ರಕಾಶಾ | ವೆಂಕಟೇಶಾ | ಅಪ್ರಾಕೃತ | ಪ್ರಮೆಯಭರಿತನಾದ | ಕುರುವಂಶ ವಿನಾಶಾ 4 ಭೂಗೋಳದೊಳಗಿದರಾಗಮ ತಿಳಿ | ದುರಗ ಗಿರಿ ಯಾತ್ರಿಗೆ | ಭೋಗದಾಶೆಯ ಬಿಟ್ಟು | ವೇಗದಿಂದಲಿ ನಿಜ | ಭವ ಸಾಗಿ ಬರಲು ಚನ್ನಾಗಿ ಜ್ಞಾನವ ನೀವುತ್ತ ಸಾಕುವಂಥ | ಶ್ರೀ ಗುರು ವಿಜಯವಿಠ್ಠಲ ಭಕ್ತರ ದಾತಾ5
--------------
ವಿಜಯದಾಸ
ಶಂಕರ ಶಿವಶಂಕರ ಶಿವಶಂಕರ ಶಿವಶಂಕರ ಕಿಂಕರೇಷ್ಟಪ್ರಧಾನಶೀಲ ವೃಷಾಂಕ ಮಹಲಿಂಗೇಶ್ವರ ಪ. ವ್ಯೋಮಕೇಶ ಭವಾಬ್ಧಿತಾರಕ ರಾಮನಾಮೋಪಾಸಕ ಸಾಮಜಾಜಿನವಸನಮಂಡನ ಸ್ವಾಮಿ ತ್ರಿಜಗನ್ನಾಯಕ ಭೀಮಬಲ ಸುತ್ರಾಮಮುಖ ಸುರಸ್ತೋಮ ವಿನುತಪದಾಂಬುಜ ಸೋಮಸೂರ್ಯಾನಲಯನ ನಿಸ್ಸೀಮ ಮಹಿಮ ಮಹಾಭುಜ1 ಭಜಕಜನಸೌಭಾಗ್ಯದಾಯಕ ವಿಜಯಪಾಶುಪತಾಸ್ತ್ರದ ಭುಜಗಭೂಷಣ ಭುವನಪೋಷಣ ರಜತಗಿರಿಶಿಖರಾಸ್ಪದ ವೃಜಿನಹಾಮಲ ಸ್ಫಟಿಕಸನ್ನಿಭ ಕುಜನವಿಪಿನದವಾನಲ ವಿಜಿತಕಾಮ ವಿರಾಗಿಯೋಗಿ ವ್ರಜಕುಟುಂಬ ಮಹಾಬಲ 2 ನೀಲಕಂಠ ನಿರಾಮಯಾಭಯಶೂಲಧರ ಸುಮನೋಹರ ಶೈಲರಾಜಸುತಾಧರಾಮೃತಲೋಲ ಲೋಕಧುರಂಧರ ಕರುಣಾಲವಾಲ ಮಹೇಶ್ವರ ಪಾಲಿತಾಖಿಳಸಿದ್ಧ ಮುನಿಜನಜಾಲ ಜಾಹ್ನವಿಶೇಖರ 3 ಕೃತ್ತಿವಾಸ ಗಿರೀಶ ಶ್ರುತಿತತ್ತ್ವಾರ್ಥಬೋಧ ಗುಣೋದಯ ದೈತ್ಯಮೋಹಕ ಶಾಸ್ತ್ರಕೃತ್ಪ್ರಮಥೋತ್ತಮ ವಿರತಾಶ್ರಯ ಸತ್ಯಸಂಕಲ್ಪಾನುಸಾರ ನಿವೃತ್ತಿಮಾರ್ಗ ಪ್ರವರ್ತಕ ಮೃಡ ನಮೋ„ಸ್ತು ಸುಮನನಿಯಾಮಕ 4 ಪಂಡಿತೋತ್ತಮ ಪವನಶಿಷ್ಯ ಮೃಕಂಡುತನಯಭಯಾಪಹ ಚಂಡಿಕಾಧವ ಶಿವ ದಯಾರ್ಣವ ಖಂಡಪರಶು ಸುರಾರಿಹ ಚಂಡಭಾನುಶತಪ್ರಕಾಶಾಖಂಡವೈರಾಗ್ಯಾಧಿಪ ಕುಂಡಲೀಂದ್ರ ಪದಾರ್ಹನಗ ಕೋದಂಡವಿದೃಶ ಮಹಾನ್‍ತಪ 5 ಮಂಗಲಪ್ರದ ದಕ್ಷಕೃತಮುಖಭಂಗ ಭಾಗವತೋತ್ತಮ ಜಂಗಮಸ್ಥಾವರಹೃದಿಸ್ಥ ಶುಭಾಂಗ ಸತ್ಯಪರಾಕ್ರಮ ಲಿಂಗಮಯ ಜಯಜಯತು ಗಿರಿಜಾಲಿಂಗಿತಾಂಗ ಸದೋದಿತ ಸಂಗರಹಿತಾಚ್ಯುತಕಥಾಮೃತ ಭೃಂಗವತ್ಸೇವನರತ 6 ಭರ್ಗ ಭಾರ್ಗವ ಋಷಿಪ್ರತಿಷ್ಠಿತ ಸ್ವರ್ಗಮೋಕ್ಷ ಫಲಪ್ರದ ನಿರ್ಗತಾಖಿಲದುರಿತ ಭೂಸುರವರ್ಗಪಾಲನಕೋವಿದ ದುರ್ಘಟಿತಧುರಧೀರ ಭವಸಂಸರ್ಗದೂರ ಸನಾತನ ನಿರ್ಗುಣೈಕಧ್ಯಾನಪರ ಸನ್ಮಾರ್ಗಭಕ್ತಿನಿಕೇತನ 7 ಚಾರುಪಾವಂಜಾಖ್ಯಕ್ಷೇತ್ರಾಧಾರದಾಂತದಯಾಕರ ನೀರಜಾಸನತನಯ ಲಕ್ಷ್ಮೀನಾರಾಯಣಕಿಂಕರ ವಾರಿನಿಧಿಗಂಬೀರ ದೀನೋದ್ಧಾರ ಧಾರ್ಮಿಕಜನಹಿತ ವಾರಣಾಸ್ಯಕುಮಾರಗುರು ಗೌರೀರಮಣ ಸುದೃಢವ್ರತ 8
--------------
ತುಪಾಕಿ ವೆಂಕಟರಮಣಾಚಾರ್ಯ
ಶರಣರ ಪರಿಪಾಲಾ ಶ್ರೀಲೋಲಾ ಪರಮ ಸುಂದರ ಬಾಲಾ ಪ. ರುಕ್ಮಿಣಿ ರಮಣಾ ರಕ್ಕಸ ಹರಣಾ ಶಕ್ರಾದಿನುತ ಚರಣಾಭರಣಾ 1 ಮಧ್ವ ಮುನೀಶಾ ಶುದ್ಧ ಪ್ರಕಾಶಾ ಪದ್ಮನಾಭ ಮನಶುದ್ಧಿಯ ನೀಡೋ 2 ಕಾಮಿತ ಫಲದಾ ಕೋಮಲ ಪಾದಾ ಶ್ರೀ ಮನೋಹರ ಸುರ ಕಾಮ್ಯ ಪ್ರದಾತಾ 3 ಮೃಡ ಸುರ ಪ್ರೀಯಾ ಧೃಡಮನ ಕೊಡು ನಿನ್ನಡಿಯಲಿ ಜೀಯಾ 4 ಗೋಪಿಯ ತನಯಾ ನೀ ಪಿಡಿ ಕೈಯ್ಯಾ ಗೋಪಾಲಕೃಷ್ಣವಿಠ್ಠಲ ಹೇ ಜೀಯ್ಯಾ 5
--------------
ಅಂಬಾಬಾಯಿ
ಶ್ರೀ ಗೌರೀವರೇಂದ್ರನೇ ನಮೋ ನಮೋ ನಮೋ ಯೋಗಮಯನೆ ಭೋಗದಯನೆ ನಾಗಾಭರಣನೆ ಭೋಗೀ ಭೂಷಣ ವ್ಯಾಘ್ರವಸನನೆ ಪ ವಾಸುದೇವ ಪ್ರಿಯನೇ ಸದಾ ಶಿವಾ ಶಿವಾ ಶಶಾಂಕಧರನೇ ಕ್ಲೇಷಹಾರನೇ ದೋಷನಾಶನೇ ಭಾಸುರ ಪ್ರಕಾಶಾ ತೋಷದಾತನೇ 1 ಪಂಚ ಪ್ರಾಣಧಾರನೇ ಪರಾತ್ಪರಾವರಾ ಸಂಚಿತ ಅಘದೋಷಹರಣ ಸರ್ವಸುಖಕರಾ ಪಂಚವದನಾ ಪಂಚಶರಹರಾ 2 ಜ್ಞಾನಮಯ ಸುಚೇತನಾ ಕೃತಾಘನಾವನಾ ಸ್ವಾನುಭವ ಸ್ವಶಾಂತಿದಾತ ಧ್ಯಾನಿಪಾಜನಾ ದೀನೋದ್ಧಾರಕಾ ವಿಜ್ಞಾನಮಯನೇ 3
--------------
ಶಾಂತಿಬಾಯಿ
ಶ್ರೀ ಪಾರ್ವತಿ ಸ್ತುತಿಗಳು ಶಂಭೋಮಹಾನಂದ ಸಂದಾಯಕ ಪ ಕುಂಭೋದ್ಭವಾನತ ಜಂಭಾರಿವಂದಿತ ಅಂಭೋಜ ಭವನುತ ತ್ರಿಲೋಚನಾ ಜಗದಂಬಾ ಅ.ಪ ಈಶ ಪರೇಶ ಗಿರೀಶ ಮಹೇಶಾ ಕ್ಲೇಶವಿನಾಶಾ ದಿನೇಶಪ್ರಕಾಶಾ ಪಾಶ ತ್ರಿಶೂಲಾಲಂಕಾರ ಕಲುಶವಿನಾಶಾ ನಮಿಪೆ ಮಾಂಗಿರೀಶ ಶಿವ ಜಗದಂಬಾ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್