ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಪ್ರಾಕೃತ ಕಾಯಾ ಪ ಶ್ರೀಕರಾರ್ಚಿತಪಾದ ಲೋಕೇಶ ವಂದಿತ ಅ- ವ್ಯಾಕೃತಾಕಾಶದೊಡೆಯನೆ ವಾಸುಕೀಶಯನ ಸರ್ವೇಶ ನೀನೆ ಪ್ರಾಕೃತ ಸಜ್ಜಮಜ್ಜನ ಕಾರ್ಯಕೆ ಕಾರಣನಯ್ಯ ಏಕೋ ನಾರಾಯಣ ಅ.ಪ ಪ್ರಳಯಕಾಲದಿ ಜೀವರ ನಿಲಯಾ ಕಲ್ಪಿಸಿ ತತ್ತ ನಾಲ್ಕುವಿಧಗಳ ರೂಪಗಳನು ಧರಿಸಿ ಪ್ರಳಯದೊಳಿಂಬಿಟ್ಟು ಎಳೆಸಿದ ಕಟಾಕ್ಷವೀಕ್ಷಣದಿಂದಲಿ 1 ಅಳವು ಇಲ್ಲದ ಸೃಷ್ಟಿಯನೆಸಗಿದೇ ಸಾಧುಜೀವರು ತಮ್ಮ ಸಾಧನ ಪೊರೈಸಿ ಸ್ವದೇಹದೊಳು ಬಂದ ಮೋದದಿಂದಲಿ ನೋಡಿ ಬಾಧಿಪ ಲಿಂಗಭಂಗವೈದಿಹ ಪ್ರಾರಬ್ಧನಾಶನವಿಹ ವಿ- ವಿಧ ಸುಜೀವರ ಮೋದಪಡಿಸಿ ನಿ- ಉದರದೊಳಿಟ್ಟ್ಯಯ್ಯ ಸದಮಲಮೂರುತಿ ಅದುಭುತಮಹಿಮ ಶ್ರೀ ವಾಸುದೇವನೆ2 ಸಂಚಿತ ನೀಗಿ ಪ್ರಾರಬ್ಧ ಶೇಷ ಭೋಗ ಉಳ್ಳವರೆಲ್ಲ ಆಗದೆ ಪೂರ್ಣ ಸಾಧನೆ ನೀಗದೆ ಲಿಂಗಭಂಗ ಆಗ ಬಿಂಬನ್ನ ನೋಳ್ಪರ ನಾಗಶಯನ ನಿನ್ನಂಗದೊಳಿಂಬಿಟ್ಟೆ ಜಾಗುಮಾಡದೆ ನೀನಾಗಲೆ ಜೀವರ ಭೋಗವ ತರಲು ಭಾಗವಗೈಸಿ ಭೂಭಾಗದ ಸಾಧನ ಮಾಳ್ಪ ಜೀವಗಣ ಭಾಗವ ಕಾಯ್ದೆ ಸಂಕರುಷಣ ಮೂರುತೆ 3 ನಿತ್ಯಸಂಸಾರಿಗಳಿಗೆ ಇತ್ತೆ ನಿನ್ನುದರದೊಳು ಮುಕ್ತರೊಡೆಯ ದೇವ ಶಕ್ತನಹುದೋ ನೀ ಮೊತ್ತ ಮೊದಲು ನೀನಿತ್ತು ಪೊರೆದೆ ಬರಲಿತ್ತ ಕಾರಣ ಪ್ರ- ಸುತ್ತಿ ಸುತ್ತಿರುವೆ ಬಿತ್ತರಿಸಲೇನನಿರುದ್ಧಮೂರುತೇ 4 ಅಣುವಿಗೆ ಅಣುವಾಗಿ ಘನತೆ ಘನತಮನಾಗಿ ತೃಣಜೀವರಾದಿ ಬ್ರಹ್ಮಗಣರೆಲ್ಲರೊಳು ಗಣನೆ ಇಲ್ಲದ ಕಾರ್ಯ ಕ್ಷಣಬಿಡದಲೆ ನಡೆಸಿ ಎಣೆಯಿಲ್ಲದಿಹ ಸುಗುಣ ಸಾಂದ್ರನೆ ಪ್ರಣವದೊಳು ಪ್ರತಿಪಾದ್ಯನಾಗಿಹೆ ತ್ರಿಗುಣರಹಿತ ಮುಖ್ಯ ಪ್ರಾಣಾಂತರ್ಗತ ಪ್ರಣತಕಾಮದ ಪೂರ್ಣ ಸಂಪೂರ್ಣ5 ಮುಕ್ತಾಮುಕ್ರಾಶ್ರಯ ಭಕ್ತಪರಾಧೀನ ಶಕ್ತಾನೆ ಸರ್ವವೇದೋಕ್ತ ಮಹಿಮಾತೀತ ಉಕ್ತನಾಗಿಹೆ ಪುರುಷಸೂಕ್ತಾದೊಳಪ್ರಮೇಯ ಶಕ್ತಿಯನರಿಯರು ಅಜಭವಾದ್ಯರು ಶಕ್ತನೆ ಜೀವನ್ಮುಕ್ತರೌಘ ಸಕ್ತರಾಗಿ ನಿನ್ನ ಸ್ತೋತ್ರವ ಮಾಳ್ಪರು 6 ಶ್ರೀಶಾ ಸರ್ವೋತ್ತಮ ವಾಸ ವೈಕುಂಠಾಧೀಶ ವಾಸವಾದಿ ವಂದಿತ ಭಾಸುರಾಂಗನೆ ವಿಶ್ವಾಸ ನಿನ್ನೊಳಿಟ್ಟ ದಾಸ ಜನರ ಕಾಯ್ವ ಈಶಾವ್ಯಾಸಮಿದಂಸರ್ವಂ ಎಂದೆಂದು ಎಂದು ಉಸುರುವ ವೇದಗಳ್ ಏಸುಕಾಲಕು ಸಾಕಲ್ಯದಿ ವರ್ಣಿಸ ಲೀಶ ಕೋಟಿ ಪ್ರವಿಷ್ಟೆಗೆ ಅಸದಳ 7 ಅಂಗಜಪಿತ ರಂಗ ಮಂಗಳಾಂಗನೆ ಮಾ- ತಂಗವರದ ದೇವ ಗಂಗಾಜನಕ ಕಾಳಿಂಗನಾ ಮದ ಮೆಟ್ಟಿ ಭಂಗಾಗೈಸಿದ ಭುಜಂಗಶಯನ ಎನ್ನಂತಾ- ರಂಗದಿ ನಿಲ್ಲೋ ಇಂಗಿತ ಬಲ್ಲೆ ಶ್ರೀರಂಗಶಾಯಿ ಸಾ- ರಂಗಪಾಣಿ ಕೃಪಾಂಗ ಎನ್ನಯ ಭವಭಂಗಗೈಸಿ ಸ- ತ್ಸಂಗವೀಯೋ ಯದುಪುಂಗವ ಮಂಗಳಮೂರುತಿ ಶೌರೇ8 ಕಾಲ ಜಾಲವ ತಂದೆ ಪಾಲಿಪ ಸಲಹಿಪ ಕರ್ತ ನೀನಲ್ಲದಿ- ನ್ನಿಲ್ಲವಯ್ಯ ಶ್ರೀ ವೇಂಕಟೇಶ ಪ್ರಭೋ 9
--------------
ಉರಗಾದ್ರಿವಾಸವಿಠಲದಾಸರು
ಓಂ ನಮೋ ನಾರಾಯಣಾಯ ತೇ ನಮೋ ನಮೋ ನಮೋ ಪ ಓಂ ನಮೋ ಓಂಕಾರಾದಿ ನೀ ಘನ್ನ ಮಹಿಮ ಅಷ್ಟಾಕ್ಷರಾತ್ಮಕನೆ ಅ.ಪ ಪ್ರಣವ ಪ್ರತಿಪಾದ್ಯ ನೀ ಅಷ್ಟಾಕ್ಷರದೊಳು ವಿಶ್ವತÉೈಜಸ ಪ್ರಾಜ್ಞ ತುರ್ಯಾತ್ಮ ಅಂತರಾತ್ಮ ಪರಮಾತ್ಮ ಜ್ಞಾನಾತ್ಮ ವರ್ಣಾತ್ಮಕ ನೀ ಓಂಕಾರದೊಳು ಅಉ ಮನಾದಬಿಂದು ಘೋಷ ಶಾಂತ ಅತಿಶಾಂತದೊಳು ಪ್ರತಿಪಾದ್ಯಮೂರುತಿ ಹರೆ1 ಪ್ರಣವದೊಳು ಆದಿವರ್ಣದಿಂದಭಿವ್ಮಕ್ತಿ ಕಾಲಗಳ್‍ವ್ಯಕ್ತವೊ ಪ್ರಾಣ ಲಕುಮಿಯಭಿಮಾನಿಗಳನಂತ ವೇದಗಳಿಂ ವಿಶ್ವಮೂರುತೀ ಹರೆ2 ವಯ್ಯ ಕವರ್ಗ ವರ್ಗವೈದು ಪಂಚಭೂತಗಳಂ ವರ್ಣದೊಳಭಿಮಾನಿಗಳ್ ಭೂತಕ ಗಣಪ ಪ್ರಹವವಾಯು ತೈಜಸ ಮೂರುತೇ3 ಪ್ರತಿಪಾದ್ಯನೆ ಮಕಾರ ವಾಚ್ಯ ಶ್ರೀ ಪ್ರಾಜ್ಞ ನಿನ್ನಿಂದಭಿ- ವ್ಯಕ್ತಿ ಚವರ್ಗ ಪಂಚಕ ಜ್ಞಾನೇಂದ್ರಿಯ ವೈದು ಸೂರ್ಯ ಪ್ರಾಣ ದಿಗ್ದೇ- ವತೆಗಳಿಹರು ಪ್ರತಿಗಾಣಿನೊ ಶ್ರೀ ಪ್ರಾಜ್ಞಮೂರುತಿ ಹರೆ4 ನಾದವಾಚ್ಯಪ್ರತಿಪಾದ್ಯ ತುರ್ಯನೆ ಅಭಿವ್ಯಕ್ತ ಪಂಚವರ್ಣ ಟವರ್ಗ ಕರ್ಮೇಂದ್ರಿಯಗಳ್ ಶ್ರೀ ತುರ್ಯ ಮೂರುತೆ 5 ಬಿಂದುವಾಚ್ಯ ಪ್ರತಿಪಾದ್ಯ ನೀನಾತ್ಮ ಬಿಂದುವಿಂದ ತವರ್ಗ ಪೊಂದಿಕೊಂಡಿಹುದು ತನ್ಮಾತ್ರಪಂಚಕ ಪಂಚವಾಯುಗಳಿಹರಯ್ಯ ಬಂಧ ಮೋಚಕ ನೀ ಕಾರಣ ಹರೆ 6 ಘೋಷದಿಂದಲಭಿವ್ಯಕ್ತಿ ಪಂಚಮನೋ ವೃತ್ತಿಗಳದರಭಿಮಾನಿ ಓಷಧೀಧರ ಖಗಪ ಶೇಷೇಂದ್ರ ಕಾಮರು ಪಕಾರ ಪಂಚವರ್ಣ ದೋಷರಹಿತ ಮನೋಧಾಮದಿ ನೀ ದೊರೆ 7 ಕಾರಾದಿ ಸಪ್ತವರ್ಣ ಸಪ್ತಧಾತುಗಳಲ್ಲಿ ಪರಿ ಅರಿಯೆನೊ ಹರಿಯೆ 8 ಅತಿ ಶಾಂತದೊಳು ಪ್ರತಿಪಾದ್ಯನಾಗಿಹೆ ಜ್ಞಾನಾತ್ಮ ಹಕಾರಾದಿ ತ್ರೈವರ್ಣ ಅದರಿಂದ ಗುಣಕ್ರಿಯವೊ ತತುಕ್ರಿಯ ಜಾಗೃತ ಸ್ವಪ್ನ ಸುಷುಪ್ತಿ ವಿಶ್ವಾದಿರೂಪದಿಂದ ಉರಗಾದ್ರಿವಾಸವಿಠಲ ಮೂರುತೇ 9
--------------
ಉರಗಾದ್ರಿವಾಸವಿಠಲದಾಸರು
ವಂದಿಸುವೆನು ನಿತ್ಯದೊಳು ವಂದಿಸುವೆನು ಪ ವಂದಿಸುವೆ ಗುರುಮಧ್ವರಾಯನಷ್ಟಾಂಗದೊಳು ನಿಂದಿರ್ದ ವೈಷ್ಣವಮತಚಂದ್ರವಾರಿಧಿಗೆ ಅ.ಪ ಕ್ರೋಧವರ್ಜಿತನಾಗಿ ವೈರಾಗ್ಯವನು ತೊಟ್ಟು ಬಾಧಿಸುವ ಇಂದ್ರಿಯಂಗಳನೆಲ್ಲ ಬಲಿದು ಆಧರಿಸಿ ಕ್ಷಮೆ ದಮೆ ಶಾಂತ ಸದ್ಗುಣದಿಂದ ಮಾಧುರ್ಯದೊಳು ಜನರ ಪ್ರೀತಿಕರನಾದವಗೆ 1 ಭಯವಿವರ್ಜಿತನಾಗಿ ಬಹುಲೋಭವನು ತೊರೆದು ಕ್ಷಯ ಮಾಡಿ ಮೋಹವನು ಹಿಂದುಗಳೆದು ನವವಿಧದ ಜ್ಞಾನವನು ದಶಲಕ್ಷಣಗಳಿಂದ ನಿಯತವತಿ ಕೈಕೊಂಡನಕ್ಷರ ತ್ರಯದೊಳು 2 ಏಳು ಕೋಟಿಯ ಮಹಾ ಮಂತ್ರ ಬಾಹ್ಯದ ಕೋಟೆ ನಾಲಿಗೆ ವಶಮಾಡಿ ನವದ್ವಾರಗಳು ಮೂಲಾಗ್ನಿಯಿಂ ಸುಟ್ಟು ದಶವಾಯುಗಳ ಕದವ ಸಾಲು ನಾದಗಳೆಂಬ ಕಹಳೆವಿಡಿದವಗೆ 3 ದಶವಿಧದ ಘೋಷಗಳ ಬಿಂದು ಪ್ರತಾಪದಿಂ ದಶಮನಾಗಿಯೆ ಮುಂದೆ ಡೆಂಕಣಿಯ ಹಾರಿ ಗಸಣಿಯನು ಬಿಟ್ಟು ಕಳೆಯಿಂದೇಳು ಧಾತುಗಳ ಎಸೆವ ದುರ್ಗಾಂತರಕೆ ತಾಗಲಿಟ್ಟವಗೆ 4 ಒಂದು ಮುಹೂರ್ತದಲಿ ವ್ಯಸನಗಳನು ಹೂಳಿ ಬಂಧಿಸಿಯೆ ಚಂದ್ರಾರ್ಕ ವೀಧಿಗಳ ಪ್ರಣವದೊಳು ಮುಂದೆ ಮೂಲಾಧಾರವೆಂಬ ಅರಮನೆ ಪೊಕ್ಕು ನಿಂದು ನಿಯಮದಿ ಸುಲಿದನದಿಷ್ಠಾನದರಮನೆಯ 5 ಪ್ರತ್ಯಾಹಾರದಿಂ ಮಣಿಹಾರಕದ ಮನೆಯ ಕಿತ್ತು ಕಿಚ್ಚಂ ಹಾಕಿ ಧ್ಯಾನ ಯೋಗದಿ ಬಂದ ಮತ್ತೆ ಸಂಶುದ್ಧ್ದವೆಂಬರಮನೆಯ ಕೋಲಾಹಲದಿ ಉತ್ತಮದ ಅಂಬಿಕಾ ಯೋಗದಿಚ್ಛೆಯೊಳು 6 ಜ್ಞಾನ ಮಂಟಪವೆಂಬ ರಾಜ ಮನೆಯೊಳು ನಿಂತು ಮನದೊಳು ಮೂಲ ಬಂಧದಿ ಆರು ಶಕ್ತಿಗಳ ಹೀನವಾಗಿಹ ಗುಣತ್ರಯವೆಂಬ ಗೊಲ್ಲರನು ವ- ಡ್ಯಾಣ ಬಂಧದಿ ಇರಿವುತಲಿ ಕ್ಷಿಪ್ರದಲಿ 7 ಖೇಚರಿಯ ಯೋಗದಿಂ ಕರಣ ಚತುಷ್ಟಯದ ನೀಚ ಪ್ರಧಾನಿಗಳ ನೆಗಳವನಿಕ್ಕಿ ಕಾಲ ಕರ್ಮದ ಕಣ್ಣುಗಳ ಕಿತ್ತು ಯೋಚನೆಯ ಮಾಡಿದನು ವೀರಾಸನದೊಳು 8 ಮಾಯಾ ಪ್ರಪಂಚವೆಂಬನ್ಯಾಯ ನಾಯಕರ ಕಾಯ ಉಳಿಸದೆ ಸವರಿ ವಾಸ್ತಿಯಿಂದನುಗೈದು- ಪಾಯದಿಂದಾರು ವಿಕಾರಗಳ ಕೈಗಟ್ಟಿ ಬಾಯ ಹೊಯ್ದ ಗುರುವಿಗೆರಗುವೆನು ನಾನು 9 ಇಪ್ಪತ್ತೊಂದು ಸಾವಿರವಾರು ನೂರಾದ ಉತ್ಪವನ ಉಶ್ವಾಸ ನಿಶ್ವಾಸಗಳನೆಲ್ಲ ತಪ್ಪಿಸದೆ ಕುಂಭಕದಿಂದ ಬಂಧಿಸಿಕೊಂಡು ಒಪ್ಪುವನು ಅರೆನೇತ್ರದಿಂದ ಬೆಳಗುವನು 10 ಮುನ್ನೂರ ಅರುವತ್ತು ವ್ಯಾಧಿಗಳ ಲವಳಿಯಿಂ ಬೆನ್ನ ಬೆಳೆಸಿ ಕಪಾಲ ಭೌತಿಯಿಂದಷ್ಟಮದ ವರ್ಣಾಶ್ರಮಂಗಳನು ಏಕವನು ಮಾಡಿಯೆ ನಿರ್ಣಯಿಸಿಕೊಂಡು ತಾ ನೋಡುವವಗೆ 11 ನುತಿಕರ್ಮದಿಂದಷ್ಟ ಆತ್ಮಕರ ಆಸನವ ಜೊತೆಗೂಡಿ ಜಾತ ಮಧ್ಯದ ದೃಷ್ಟಿಯಿಂದ ಅತಿವೇಗದೊಳು ನಡೆವ ಅವಸ್ಥಾತ್ರಯವೆಂಬ ಕೃತಿ ಕುದುರೆಗಳ ಯುಕುತಿಯಲ್ಲಿ ಪಿಡಿದವಗೆ 12 ನಾದದಿಂ ಪಂಚಕ್ಲೇಶ ಪ್ರಭುಗಳನು ಹೊಯ್ದು ಕಾದು ಇರುತಿಹ ಹರಿಗಳಾರು ಬಿಂದುವಿನಿಂ ಸಾಧಿಸುತ ಮಂತ್ರಭ್ರಮಣದಿಂದ ಮಲತ್ರಯದ ಆದಿ ಕರಣಿಕನನ್ನು ಹಿಡಿದವನಿಗೆ13 ದಾತೃತ್ವದಿಂ ಸತ್ಯಲೋಕವನು ತಾ ಕಂಡು ಕಾತರದಿ ಆಕಾರದುರ್ಗವನು ಹತ್ತಿ ಓತಿರುವ ತಿರಿಕೂಟವೆಂಬ ಬಾಗಿಲ ದಾಟಿ ಈ ತೆರದ ಮಹಾದುರ್ಗವನು ಕಂಡವಗೆ 14 ಅಣು ಮಾತ್ರ ಸೂಕ್ಷ್ಮದೊಳು ನೋಡಿ ತಾ ಜ್ಞಾನದೊಳು ಕುಣಿಯೊಳಗೆ ಆ ಪರಂಜ್ಯೋತಿ ಆಗಿರುತಿಪ್ಪ ಗುಣನಿಧಿಯು ವರಾಹತಿಮ್ಮಪ್ಪರಾಯನನು ಕಣು ಮನದಿ ದೃಢವಾಗಿ ನೋಡಿ ಸುಖಿಯಾದವಗೆ 15
--------------
ವರಹತಿಮ್ಮಪ್ಪ