ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಭಾಗ್ಯಾದ ಲಕ್ಷ್ಮಿ ಹೋಗಮ್ಮ ದೊಡ್ಡಮ್ಮ ನೀ ಪ ಪೀಡೆಕಾಲುಗಳ ಮುಚ್ಚುತ ನೀವೋ ಡÉೂೀಡಿ ಪೋಗುತಲಿ ನಿಲ್ಲದೆ ವ್ಯಾಜ್ಯಗ- ಳಾಡುವ ಸ್ಥಳದಲಿ ನೆಲೆಯಾಗುತ ಹಾಳ ಗೋಡೆಯೊಳಿರುತಿಹ ಕತ್ತೆಯಂತೆ 1 ದೀಪದ ನೆರಳಲಿ ಕೋಪಿಯಮನದಲಿ ಲೋಪವಾದಕರ್ಮದಿ ಸಂತತವು ನಾಪರನೆಂಬುವ ಮಾಢನಲ್ಲಿ ನಿ- ವ್ರ್ಯಾಪಾರಿಯ ಚಿತ್ತದಿ ಯಾವಾಗಲು 2 ಪಾದ ಗದರಿಸುತಾಡುವ ಬಿರುನುಡಿಯಲಿ ನಿಂ- ದ್ಯದ ಮಾತಾಡುವವರÀ ಬಾಯಲಿನೀ ಮುದದೊಳಿದ್ದು ಅಜ್ಞಾನವ ಪಾಲಿಸೆ 3 ಪ್ರತಿದಿನದಲಿ ಅಳುತಿಹ ಸಂಸಾರದಿ ನೀ ಪತಿಯೊಡನವರೊಳಿರುತ ಮೂರ್ಖರಲಿಯ- ನೃತವಾಡಿಸಿ ನರಕವ ಪೊಂದಿಸಲು 4 ಮರವೆ ಸುಷುಪ್ತಿಯು ಬಹುವಿಧ ಮೋಹವು ನೆರೆನಂಬಿದವರಿಗೀವುತ ನೀಹಗ- ಲಿರುಳು ಕಲಿಯೊಡನೆ ಯೆಡೆಬಿಡದಲ್ಲಿಗೆ 5 ಹಾಳುಮಾಡಿಕೊಂಬುವ ಜನಗಳು ನಿ- ವೂಳಿಗವನು ಕೈಕೊಳ್ಳುತ ಬಿಡದೆ 6 ಗುರುರಾಮ ವಿಠಲನ ಶರಣ ಜನರ ಕ- ಣ್ದೆರದು ನೋಡದಿರು ಬೇಡುವೆ ನಿನ್ನನು ನಿರುತವು ನಿರ್ದಯ ಮಾಡುತ ದುರುಳರ ಪರಮ ಕೃಪಾದೃಷ್ಟಿಯಲಿ ನೋಡಲು 7
--------------
ಗುರುರಾಮವಿಠಲ
ಇಂದು ಇಂದುಧರನ ಪಾದದ್ವಂದ್ವಗಳನು ದಿನವು | ಎಂದೆಂದಿಗೆ ಬಿಡದೆ | ಪೊಂದಿದ್ದ ಪಾಪಗಳು | ನಿಂದಿರದಲೆ ಓಡಿ ಬೆಂದು ಪೋದವು ನೋಡಾ ಪ ಸತಿಗೆ ಅಧರ್Àಕಾಯ ಹಿತದಿಂದಲಿ ಇತ್ತು | ಚತುರತನದಲಿಳೆಯೊಳು ಪತಿತ ಮಾನವರಿಗೆ | ಮತಿಬಾಹದೊ ಮಾನಸ ಸತತ ದೃಢವನೀವ | ಪ್ರತಿದಿನದಲಿ ಕಾಯ್ವಾ 1 ವಿಷವ ಧರಿಸಿ ಸುಮನಸರ ನಡುವೆ ಮೆರೆದೆ | ಪಶುವಾಹನ ಪರಮೇಶ ಅಸುರಾರಿಗಲ್ಲದ | ಅಸುರರ ಕೊಲ್ಲುವ ರಂಜಿಸುವಾ | ಶಶಿ ಜಟಾ ಕಮನೀಯ ಮಣಿಮಕುಟಾ 2 ಕಡಲ ತಡಿಯವಾಸ | ವೊಡಿಯ ರಾಮನ ದಾಸ | ಮೃಡರುಂಡ ಮಾಲಾಭೂಷಾ || ಬಿಡದೆ ಸೇತುಬಂದ ವಿಜಯವಿಠ್ಠಲನ | ಅಡಿಗಡಿಗೆ ನೆನೆಸುವ ಶಿವರಾಮಲಿಂಗಾ 3
--------------
ವಿಜಯದಾಸ
ಪರಿ ನಿರ್ದಯಗೈದಿರಿ ತಂದೆ ಶ್ರೀ ಗುರುವೆ ಪೇಳಿ ಪ. ನೊಂದೆನು ಈ ದಿನ ನಿಮ್ಮ ವಾರ್ತೆ ತಿಳಿಯದೆ ಕುಂದೇನು ತೊರಿತೋ ಎನ್ನಿಂದ ಕ್ಷಮಿಸಿರಿ ಅ.ಪ. ಪ್ರತಿದಿನದಲಿ ನಿಮ್ಮ ಹಿತವಾರ್ತೆ ಕೇಳುತ ಅತಿಶಯಾನಂದವ ಪಡುತಲಿದ್ದೆ ಇಂದು ಅತಿಶಯದ ನಿಮ್ಮ ಹಿತವಾರ್ತೆ ತಿಳಿಯದೆ ಮತಿ ಹೀನಳಾಗಿಹೆ 1 ಉಲ್ಲಾಸಗೊಳಿಸುವ ಪುಲ್ಲನಾಭವ ಮಹಿಮೆ ಸೊಲ್ಲು ಸೊಲ್ಲಿಗೆ ನುಡಿಸಿ ಭವದಾಟಿಸಿ ಒಲ್ಲೆನು ನಾನೊಂದು ಇಹಪರ ಸೌಖ್ಯವು ನಿಲ್ಲಲಿ ಎನ್ನಮನ ನಿಮ್ಮ ಪಾದದಿ ನಿರುತ 2 ತನುಮನ ಒಪ್ಪಿಸಿ ಮನದಿ ಧ್ಯಾನಿಸುವುದು ಘನಮನಕಿನ್ನೀಗ ಬರಲಿಲ್ಲವೆ ವನಜಜಾಡಂಡದೊಳಿನ್ನು ಎನ್ನ ರಕ್ಷಿಸುವರ ಮನದಿ ನಾ ಕಾಣೆನು ವನಜಾಕ್ಷ ಬಲ್ಲನು 3 ಮೊರೆಯ ಕೇಳುತಲೀಗ ತ್ವರಿತದಿಂ ಬನ್ನಿರಿ ಸರಸಿಜಾಕ್ಷನ ತೋರಿ ಹರುಷವಿತ್ತು ದುರಿತವ ತೊಲಗಿಸಿ ಕರಕರಗೊಳಿಸದೆ ಪರಮಪ್ರಿಯರು ಎಂಬೊ ಬಿರುದುಳ್ಳ ಶ್ರೀ ಗುರುವೆ 4 ತಡಮಾಡದೆ ಭವಕಡಲ ದಾಟಿಸಿ ಈಗ ಮೃಡಸಖನನು ತೋರಿ ದೃಢ ಮನದಿ ಒಡೆಯ ಶ್ರೀ ಗೋಪಾಲಕೃಷ್ಣವಿಠ್ಠಲ ಜಗಕೆ ಬಿಡದೆ ಪೊರೆಯುವನೆಂಬೊ ದೃಢವೆನಗೆ ಕರುಣಿಸಿ 5
--------------
ಅಂಬಾಬಾಯಿ
ಪಾರ್ವತೀ ಪತಿಪಾಹಿ ಹರಹರ ಪಪಾರ್ವತೀಪತಿ ನೀನೊಲಿದು ಮನಸಿನೊಳುತೋರ್ವದು ಕೇಶವನ | ಹರಹರ ||ಅ. ಪ||ವಿಜಯನಿನ್ನೊಳಗಂದು ವಿಜಯಿಸಲಸ್ತ್ರವ |ತ್ರಿಜಗವರಿಯ ಕೊಟ್ಟ ||ಮಜ ಭಾಪುರೆಅಂಬುಜಸುತ ನಂದನ |ಗಜಚರ್ಮಾಂಬರನೆ | ಹರಹರ 1ಜಾತವೇದಸಶಶಿತರಣಿನಯನ |ಮಾತರಿಶ್ವತನಯ ||ಭೂತ ಗಣಪ ಗುಣವ್ರಾತ ನಿನ್ನವರೊಳು |ಪ್ರೀತಿಯಿಂದಲೆ ಕೂಡಿಸು | ಹರಹರ 2ಕ್ಷಿತಿಧರ ಶರ ಮನ್ಮಥಪುರಹರಣ| ಪ್ರಮಥಾಧಿಪ ಹರಿಣಾಂಕ ||ನತಿಸುವೆ ನಿನ್ನನು ಪ್ರತಿದಿನದಲಿ | ಸನ್ಮತಿ ಕರುಣಿಸು ತ್ವರಿಯಾ || ಹರಹರ3ಸುರಸೇವಿತ ಪದ ಅರವಿಂದಅನಘ|ಮುರರಿಪುಸುಖಕಪರ್ದಿ||ಚರಣವ ನಂಬಿದವರ ಭಯವಾರಿದ |ಮರುತಕುಶನಂದನನೆ || ಹರಹರ4ಖಟವಪಾಣಿಖಳಆಟವಿವಹ್ನಿಧೂ |ರ್ಜಟ ಹರ ಪ್ರಾಣೇಶ ||ವಿಠಲನ ಭಜನೆಯು ಘಟಿಕ ತಪ್ಪದಲೆ |ಘಟನೆ ಮಾಡಿಸುವುದೋ || ಹರಹರ 5
--------------
ಪ್ರಾಣೇಶದಾಸರು