ಒಟ್ಟು 36 ಕಡೆಗಳಲ್ಲಿ , 21 ದಾಸರು , 35 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾತುಮಾತಿಗೆ ಮರೆಯಬೇಡ ಸೀತಾರಾಮನ ಪ ಮಾತರಿಶ್ವನಾಥನು ಪ್ರೀತನಾಗುವ ಅ.ಪ. ಹನುಮ ತಾನು ಭಕ್ತಿಯಿಂದ ನೆನೆದು ಸುಖಿಸುತ ವನಜ ಸಂಭವ ಪದವಿ ಪೊಂದಿದ ಘನತರನ ಮಾತ 1 ಅಬಲೆಯನ್ನು ಕುಲಕೆ ತಂದ ಪ್ರಬಲನ ಮಾತ ಶಬರಿಯೆಂಬ ಭಕ್ತಳಿಗೆ ಅಭಯವಿತ್ತನ ಮಾತ 2 ಅಂಗಜವೈರಿ ಶ್ರೀ ಶಿವನು ಹಿಂಗದೆ ಭಜಿಪ ರಂಗೇಶವಿಠಲನೆಂಬುವ ಮಂಗಳನ ಮಾತ 3
--------------
ರಂಗೇಶವಿಠಲದಾಸರು
(ಕಾಲಜ್ಞಾನ) ಮೈಯ್ಯವ ಮರಿಯ ಬ್ಯಾಡಿರೋ | ಮತ್ರ್ಯದೊಳಗ ಕಲಿರಾಯ ನರಸುತನ | ಪ್ರಬಲ ವಾಯಿತು ಕೇಳಿರೋ ಪ ಬೀಳು ಬಿದ್ದಾವೋ ಧರ್ಮದಾ ಭೂಮಿಯು | ಅಧರ್ಮವೇ ಹೆಚ್ಚೀತು | ಹೇಳಲಿನ್ನೇನವಗುಣಿಗಳು ಪ್ರಕಟಿಸಿ | ಕೇಡು ತಂದಾರು ಜಗಕೆ | ಖೂಳರ ಹಿರಿತನವು ಒಳ್ಳೆವರಾ |ಮಾನ ಮನ್ನಣೆ ಹೋದಾವು | ಮನೆಯ ಕೊಂಡುಂಬುವರು 1 ಮರ್ಯಾದೆಗಳ ಬಿಟ್ಟಾರೋ | ಕುಲಕ ಮಾತವ ತಾಹರು | ಹಗೆ ಹಾರೋ | ಹುಸಿನುಡಿದು ಮನೆ ದೈವವನೇ ಮಾರಿ | ಹದಗೆಟ್ಟು ಹೋಗುವರೋ 2 ಒಡಲು ಕಾಮಾಟಿಕೆಯಾ ಎರಡರಿಂದ | ಕೋಣ-ನಂದದಿ ಬಗಿದು | ಪಡಿ ಕೊಟ್ಟು ಸಲಹುವ ಒಡಿಯ ನೆಚ್ಚರ ವಿಲ್ಲಾ | ಮರಹು ಕತ್ತಲೆ ಮುಸುಕಿ | ಪೊಡವಿಲಿ ಭಕುತಿ ಮಾರ್ಗ ಮುಗ್ಗಿತು | ಎಲ್ಯಾರಿದ್ದರ ಹೋಲಿಕೆಯು 3 ಕಡಲ ಶಯನನ ದಾಸನೆಂದರೆ ಬಾಗರು | ನೀಚರಿಗೆರಗುವರು ಕನ್ಯರೈದು ವರುಷಕ ಗಂಡನ | ಸಂಗವ ಬಯಸುವರು | ಇನ್ನೇನು ಏಳು ಬರುಷದ ಬಾಲೇರು | ಗರ್ಭವ ಧರಿಸುವರು | ಅಣ್ಣಾ ತಂಗಿಗೆ ಮದುವೆ ಮುಂದಕ | ಆದಾವೋ ಜಗದೊಳಗ | ಜಾತಿ ಸಂಕರ ವಾಹುದು 4 ಯಾತ್ರೆಯು ನಿಲ್ಲುವವು | ನೀರು ತೋರವೆಲ್ಲಿ 5 ಶಾಸ್ತ್ರಗಳು ಮರೆವುದು | ಸಾರಿದಾ ಬೋಧವಿದು6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
101. ಹರಿಹರ ಧ್ರುವತಾಳ ಹರಿಹರರಿಬ್ಬರು ಒಂದೇ ರೂಪವ ಧರಿಸಿ | ದುರುಳ ಗುಹಾಸುರನ ಕೊಂದರೆಂದೂ | ಮರಳು ಮಾನವರು ತಿಳಿಯಾದೆ ನುಡಿವರು | ಹರಿಹರರೀರ್ವರು ಏರವಾದರೆ ಅಂದು | ಹರನು ಮೈಮರೆದು ನಿಂದನ್ಯಾತಕೆ | ಧಾರುಣಿಯೊಳಗೆ ಹಿರಣ್ಯಕಶಿಪು ದೈತ್ಯ | ಸುರರ ಓಡಿಸಿ ಪ್ರಬಲನಾಗಿರೆ | ಪರಮ ಪುರುಷ ಹರಿ ನರಹರಿರೂಪವನ್ನು | ಧರಿಸಿ ರಕ್ಕಸನ್ನ ಕೊಲ್ಲುವಾಗಲಿ, ಕೇ | ಸರಿಯಾ ಬಳಿಗೆ ಪೋಗಿ ಮಾರೆಯಾ ಬೇಡಿಕೊಂಡು | ಮೆರದಾನೇನೋ ಅವತಾರ ಮಾಡಿ | ಹರಿಯ ಅದ್ಭೂತ ಶಕ್ತಿ ನಾನಾ ಲೀಲಾ ವಿನೋದ | ಚರಿಸೂವ ಪರಬೊಮ್ಮ ಗುಣಪೂರ್ಣ ನೂ | ತುರಗವದನ ಮತ್ಸ್ಯಕೂರ್ಮಸೂಕರ ವೇಷ | ಧರಿಸಿದಾತನು ಕಾಣೋ ಯುಗಯುಗದೀ | ಕರುಣಾಸಿಂಧು ನಮ್ಮ ವಿಜಯವಿಠಲರೇಯಾ | ಹರಿಹರ ರೂಪ ಧರಿಸಿದ ಕಾಣಿರೋ 1 ಮಟ್ಟತಾಳ ದೀಪದ ಉಪಕಾರ ದಿನಪಗೆ ಏನಾಹದು | ಭೂಪತಿಗಾಳಿನ ಅನುಸುಣ್ಯಾತಕೆ | ಕೋಪವನು ತಾಳಿ ಭೃಗುಮುನಿ ಕೈಯಿಂದ | ಶಾಪನ ಕೈಕೊಂಡನಂದು ಭಸ್ಮಾ ಸುರನ | ಆ ಪತ್ತಿಗಾರದೆ ಮೊರೆ ಇಡಲು ಕೇಳಿ | ಶ್ರೀಪತಿ ಮೊಗದಲಿ ಕಾಯದದ್ದು ಕಾಣದೆ | ಗೋಪಾಲ ವಿಜಯವಿಠಲ ಹರಿಹರ | ರೂಪವು ತಾನಾದ ಅನೇಕ ರೂಪನೊ 2 ತ್ರಿವಿಡಿತಾಳ ಕಂತು ಜನಕ ಶಿವನ ಬೇಡಿಕೊಂಡದ್ದು ಪುರಾ | ಣಾಂತರದಲ್ಲಿ ಪೇಳುತಿವೆ ನೋಡಿಕೊ | ಎಂತಾಹದೀ ನುಡಿ ಸಿದ್ಧವಲ್ಲವೊ ಶ್ರೀ | ನಖ ಮೌಳಿ ಅಭೀದಾನು | ವೈರಿ ಅರ್ಧಂಗವನೆ ತಾಳಿ | ನಿಂತಿಪ್ಪ ಶ್ರೀ ಹರಿಯಾ ಕೂಡಾ | ನಂತಾ ಕಲ್ಪರೆ ನಿಗಮಾ ಗೋಚರ ಸರ್ವ | ಸ್ವತಂತ್ರನು ಒಬ್ಬಾರ ಹಂಗಿಗಾನೆ | ಚಿಂತಾಮಣಿಯಾ ಬಳಿಯಾ ನಾಡ ಹರಳನೆ ತಂದು | ಸಂತತವಿಟ್ಟರೆ ಸರಿಯಾಗೋದೆ | ಸಂತೋಷ ಪೂರ್ಣಗೆ ದೈತ್ಯನ ಕೊಲ್ಲುವುದಕೆ | ಚಿಂತೆಮಾಡಿದನೆಂಬೊ ವಾರ್ತಿಯೇನೂ | ನಿತ್ಯ ಮೇಹಕವನೆ ತೋರಿ | ಅಂತು ಗಾಣದ ನರಕಕ್ಕೆ ಹಾಕೂವ | ದಂತಿ ವರದ ದೇವ ವಿಜಯವಿಠಲ ಜಗ | ದಂತರಿಯಾಮಿಗೆ ಅಸಾಧ್ಯ ಬಂದಿಲ್ಲ 3 ಅಟ್ಟತಾಳ ಹರಗೆ ಈ ಪ್ರತಿಪ ಉಳ್ಳರೆ ಭಸುಮಾ | ಸುರಗಂಜಿ ಹರಿಗೆ ಮೊರೆ ಇಡುವನೇನೊ | ಜರಸಂಧನಿಗೆ ಇತ್ತಾವರ ಮತ್ತೇನಾಯಿತು | ಮರಳಿ ರಾಮನಕೂಡ ಶರಧನು ಪಿಡಿದು ಮೈ | ಮರೆದು ನಿಂದದ್ದು ಸರ್ವ ಜಗ ವೆಲ್ಲ ಬಲ್ಲದು | ಕರಿ ರಾಜಾ ಆ ಮೂಲಾವೆಂದು ಕರೆವಾಗ | ಪರಮೇಷ್ಠಿ ಶಿವನೊ ಮತ್ತಾವನೊ ಕಾಯ್ದವ | ಸುರರೊಳಗೀತಾ ಗಿಂದಧಿಕ ದೇವರು ಇಲ್ಲಾ | ಹರಿಹರರೂಪಾ ಶ್ರೀ ವಿಜಯವಿಠಲರೇಯಾ | ಚರಿತೆಯ ತೋರುವ ಅವರ ಯೋಗ್ಯತಾದಷ್ಟು 4 ಆದಿತಾಳ ತ್ರಿಶೂಲ ಡಮರುಗ ಭಸಿತ ರುದ್ರಾಕ್ಷಿಯು | ಪಶುವಾಹನನಾಗಿ ಇಪ್ಪದಿದೆ | ಅಸುರಾರಿಯಲ್ಲದೆ ಅನ್ಯರೂಪಗಳಲ್ಲ | ಹಸನಾಗಿ ತಿಳಿದು ಈತನ ಮಹಿಮೆ ಕೊಂಡಾಡಿ | ಕೆಸರು ಕಸ್ತೂರಿಯಾದರೆ ಕೌತುಕವಲ್ಲವೇನೊ | ಶಶಿಧರ ಹರಿರೂಪ ದೊ[ಳು]ಕೂಡುವನೆ | ವಶವಾಗಿ ಇಪ್ಪನು ತದ್ರೂಪಾದಂತೆ ಕಾಣೊ | ಕುಶನ ಬಯಸುವನು ಸಮನಾಗಿ ನಿಲ್ಲುವನೆ | ಪಶುಗಳ ಕಾಯ್ದ ನಮ್ಮ ವಿಜಯವಿಠಲ ಪ | ರಶುರಾಮ ಕ್ಷೇತ್ರದಲಿ ಹರಿಹರ ರೂಪನಾದಾ 5 ಜತೆ ತುಂಗಮಹಿಮೆ ದೇವೋತ್ತುಂಗಾ ತುಂಗಾವಾಸ | ರಂಗ ವಿಜಯವಿಠಲ ಹರಿಹರ ಮೂರುತಿ 6
--------------
ವಿಜಯದಾಸ
ಅರಸಕೇಳಲೈ ಸರಸಿಯೊಳಗೆ ತಾ ಸರಸವಾಡುತಾ ಕರಿವರನಿರೆÉ ಪರಮ ಭೀಕರ ಪ್ರಬಲ ನಕ್ರವು ಕರಿಯ ಕಾಲನು ಪಿಡಿದು ಸೆಳೆಯಿತು 1 ಚಕಿತನಾಗುತ ಚತುರ ದ್ವಿಪವರ ಮಕರಿ ವದನದಿಂ ಮುಕ್ತನಾಗಲು ಸಕಲ ಸಾಹಸಗೈದನಕ್ಕಟ ವಿಕಲವಾಯಿತಾ ಯತ್ನವೆಲ್ಲವು 2 ನಕ್ರ ಸೆಳೆತವು ಪ್ರಬಲವಾಗಲು ದಿಕ್ಕು ತೋರದೆ ಕೂಗಿಕೊಂಡನು ಮಿಕ್ಕ ಗಜಗಳು ಕೂಡಿ ಬಿಡಿಸಲು ಶಕ್ತಿಮೀರಿ ಸಾಹಸಗೈದುವು 3 ಆನೆಗಳು ಒಂದೆಡೆ ಎಳೆಯಲು ನೆಗಳು ಒಂದೆಡೆ ಎಳೆಯಲು ಏನನೆಂಬೆ ಹೋರಾಟವೀ ಪರಿ ಏನು ನಡೆದರೂ ವಿಫಲವಾಯಿತು 4 ಹಿಂಡು ಬಳಗಗಳೆಲ್ಲ ನೋಡುತ ದಂಡೆ ಮೇಲೆ ತಾವ್ ನಿಂತುಬಿಟ್ಟವು ಜೊಂಡು ಹುಲ್ಲು ತಾ ಪಿಡಿದು ತನ್ನಯ ಶುಂಡಾಲ ಗೆದ್ದನು 5 ನಕ್ರಬಾಧೆಯು ಬಿಡಿಸಲಾರಿಗೂ ಶಕ್ಯವಾಗದೆ ಹೋಯಿತಕ್ಕಟ ದಿಕ್ಕುಗೆಟ್ಟು ತಾ ದೈನ್ಯದಿಂದಲೇ ದುಃಖಪಡುತ ಭೋರಿಟ್ಟು ಕೂಗಿದ 6 ಉದಿಸಿತಾಗ ಸುಜ್ಞಾನವವನೊಳು ಸುದತಿ ಮಕ್ಕಳು ಸಲಹರೆಂಬುದು ಬದಲು ಬಯಸದ ಬಂಧು ಕರಿಗಿರಿ ಸದನನೆಂದು ತಾನಂಬಿ ನೆನೆದನು 7
--------------
ವರಾವಾಣಿರಾಮರಾಯದಾಸರು
ಆ ಹರಿ ನಾನೆಂಬ ಕುಮತವ ಸುಡು ಸುಡು ದೇಹಿಯುಣವುಣದವನ ನೋಡುತಲಿಹ ಪ. ನೀರೊಳು ಬಹುಕಾಲ ಪೊಕ್ಕು ಮುಳುಗಿದವ ಭಾರದ ಗಿರಿಯನುದ್ಧರಿಸಿರುವ ಈರೇಳು ಲೋಕದ ಹೊರೆಯನೆಲ್ಲವ ಹೊತ್ತು ಹಾರುವ ಹಕ್ಕಿಯ ಹೆಗಲನೇರಿ ಬಹ 1 ಜಲಚರ ಸ್ಥಲಚರ ಯಾಚಕನೆನಿಸಿ ಮ- ತ್ತಲಸದೆ ಮಾತೃವಧೆಯ ಮಾಡಿದ ಛಲದಿಂದಸುರರ ಕೊಂದು ಸಿಂಧುವ ದಾಟಿ ಬಲುಗಳ್ಳನೆನಿಸಿ ಮಾವನ ಸೀಳ್ದವ 2 ಸತಿಯರ ವ್ರತವ ಕೆಡಿಸಿ ಕುಮಾರ್ಗವ ತೋರಿ ಕ್ಷಿತಿಯೊಳು ಯುಗದ ರಾಯರ ಕೊಲ್ಲುವ ಶ್ರುತಿನಿಷಿದ್ಧಪಥದಿ ನಡೆದು ಪಾಪಕಂಜದೆ ಯತಿಶ್ರುತಿತತಿಗಳೆಲ್ಲರ ಹೊಂದಿದ 3 ಸಾವಿರ ಫಣದ ಫಣಿಯೊಳ್ಕಟ್ಟುವಡೆದಾಗ ಹಾವಿನ ಮೈಮೇಲೆ ಒರಗಿದವ ಜೀವರೆಲ್ಲರ ಕೊಂದು ಧರೆಯನೆಲ್ಲವ ನುಂಗಿ ಸ್ಥಾವರದೊಂದೆಲೆಯನೆ ಪೊಂದಿಹ 4 ಉರಿವ ಕಿಚ್ಚ ನುಂಗಿ ಜ್ವಲಿಸುವಗ್ನಿಯೊಳು ಸ್ಥಿರವಾದ ಪ್ರಬಲದೈತ್ಯರ ವೈರವ ಸಿರಿ ಹಯವದನನ್ನ ದಾಸರ ದಾಸನು ಚರಣಸೇವಕನೆಂಬ ಮತವೆ ಲೇಸು 5
--------------
ವಾದಿರಾಜ
ಕಂಡೆ ಕಂಡೆನು ಸ್ವಾಮಿಯ ಸುಪ್ರೇಮಿಯಾ ಪ ಕಂಡೆ ಕಂಡೆನು ಕೃಷ್ಣರಾಯನ ಪುಂಡರೀಕ ದಳಾಯತಾಕ್ಷನ ಪಾಂಡವಪ್ರಿಯ ಪಾರ್ಥಸಖನ ಉ ದ್ದಂಡ ಮಹಿಮ ಸುರೇಂದ್ರವಂದ್ಯನ ಅ.ಪ. ಕನಕ ನವಮಣಿ ಖಚಿತ | ವಾಗಿಹ ಸಿಂಹಾ ಸನದೊಳು ಸಲೆ ಶೋಭಿತ | ಸುರುಚಿರ ದಿವ್ಯ ಘನನೀಲನಿಭರಂಜಿತ | ನಿರ್ಮಲಗಾತ್ರ ಕುಂಡಲ ಮಣಿ ಗಣದ ಹಾರಾದಿ ಬಹು ಭೂ ಷಣಗಳನುಪಮ ಕಾಂತಿಯಿಂದಲಿ ಮಿನುಗುವತಿ ಲಾವಣ್ಯ ಮೂರ್ತಿಯ 1 ಕೋಟಿ ಮನ್ಮಥರೂಪನ | ಶ್ರೀಕೃಷ್ಣನ ಹಾಟಕಾಂಬರಧಾರನ | ಕರುಣಾಮಯ ಕಂಬು ಕಂಠನ ಆಟಮಾತ್ರದಿ ಪ್ರಬಲ ದೈತ್ಯ ಮ ಹಾಟವಿಯ ನಿರ್ಧೂಮಗೈದನ ಖೇಟವಾಹನನೆನಿಪ ತ್ರಿಜಗದಿ ಸಾಟಿಯಿಲ್ಲದ ದೇವದೇವನ 2 ಮೆರೆವ ದ್ವಾರಕಾಧೀಶನ | ದ್ರೌಪದಿದೇವಿ ಮೊರೆ ಕೇಳಿ ಸಲಹಿದನ | ಭಜಿಪರ ಅವ ಸರಕೊದಗುವ ದೇವನ | ಶ್ರೀ ಕೃಷ್ಣನ ತರಳತನದಲಿ ಗೋಕುಲದಿ ತಾ ಪರಿಪರಿಯ ಲೀಲೆಗಳ ತೋರಿದ ಪರಮ ಪುರುಷನ ಕರಿಗಿರೀಶನ ಸರಿಯಧಕರಿಲ್ಲದ ಸುರೇಶನ 3
--------------
ವರಾವಾಣಿರಾಮರಾಯದಾಸರು
ಕಂಡೆನೋ ನಿನ್ನ ಚರಣ ಕಮಲವ ಸೊಂಡಿಲಿಂದಿಹ ಗಣಪತಿ ಕೊಡು ವರವ ಪ ಮಣಿ ಕುಂಡಲ ಭೂಷಾ ಉಂಡಲಿಗೆ ಚಕ್ಕುಲಿಯೊಳಗೆ ಸಂತೋಷ ಚಂಡ ಪ್ರಬಲನಲ ಅಖಂಡ ಪ್ರಕಾಶ ಭೂ ಮಂಡಲದೊಳು ನಿನ್ನ ಕೀರ್ತಿ ವಿಶೇಷ 1 ಚಂದನಾಗರು ಧೂಪ ದೀಪಾವಳಿಯಿಂದಾ ನಂದದಿಂದಲಿ ಪೂಜಿಪೆ ಭಕ್ತಯಿಂದ ನಂದಿವಾಹನನಿಗೆ ಮೋಹದ ಕಂದ ಮಂದಮತಿಯ ಬಿಡಿಸೈಯ್ಯ ನೀ ಮುದದಿಂದ 2 ಚಿಕ್ಕ ಮೂಷಿಕವೇರಿ ಗಕ್ಕಾನೆ ಬರುವೆ ಅಕ್ಕರಿಂದಲಿ ಭಕ್ತರೆಲ್ಲಾರ ಪೊರೆವೆ ಮಿಕ್ಕ ಮಾತುಗಳೇನೋ ಪೊಗಳಲೆನ್ನಳವೇ ಇಕ್ಕೇರಿಯೊಳು ಟೆಂಕಸಾಲೆಯೊಳಿರುವೆ 3
--------------
ಕವಿ ಪರಮದೇವದಾಸರು
ಚಿಂತೆಯಾತಕೆ ಮನವೆ ನಿನಗಿದು ಸತತ ಸಲ್ಲದು ಕಾಣೊ ಪುರಂದರ ದಾಸರನುದಿನ ಇಂತು ಬಗೆಯಲಿ ಪಾಲಿಸೊ ಪ ಅಗ್ರ ಬುದ್ಧಿಯ ತಾಳು ನಿನಗೆ ಸಾ ಮಗ್ರಿ ಆಲೋಚನಿ ಯಾತಕೆ ಸ ಮಗ್ರ ಸೋಪಸ್ಕರವನು ಅನುಗ್ರಹವನು ಮಾಡುತಾ ಉಗ್ರ ಮನುಜರ ಕೂಡಿಸದೆ ಪಾ ಅಂದು ಪೊಗಳಲು ಶೀಘ್ರದಲಿ ನಿಂದಿಹರೊ 1 ಹರಿಗುರುಗಳ ಸಂಕಲ್ಪ ತಪ್ಪದು ಗಿರಿಗಹ್ವರದೊಳಗಿದ್ದರು ಅದು ಬರಿದೆಯಾಗದು ಕೇಳು ಸ್ಮರಿಸಿ ಬಳಲಿ ನಲಿದಾಡಿ ಪರಿದ ಕಾಲಕೆ ಬಿಡದೆ ಅಹಿಕದ ಚರಿತೆ ಅವರಿಗೆ ಗಣಣೇನೊ2 ತೆತ್ತಗಿನ ಸ್ವಭಾವ ಆವದೊ ಎತ್ತಲಟ್ಟಿದರತ್ತ ತೊಲಗದೆ ಹೊತ್ತುಹೊತ್ತಿಗೆ ಪೋಗಿ ಬಾಗಿ ತೊತ್ತಿನಂದದಿ ಪ್ರಯೋಜನ ಹೊತ್ತು ಮೀರದೆ ಮಾಳ್ಪುದು ಧರ್ಮ ಮೊತ್ತವಲ್ಲದೆ ಇನ್ನೊಂದಿಲ್ಲವೊ ಇತ್ತ ಭಾಗ್ಯವಿತ್ತ ನಿರ್ಮಳ ಚಿತ್ತದಲಿ ಅರ್ಪಿಸುತಿರು3 ನೀನು ಮಾಡಿದ ಪುಣ್ಯಗಳಿಗೆ ತಾ ನಡದು ಬರುವುದೇ ಮರುಳೆ ನಾನಾ ಪರಿಯಲಿ ತಿಳಿದು ನೋಡು ಧ್ಯಾನದಿಂದಲಿ ದಿನಪ್ರತಿ ಜ್ಞಾನನಿಧಿ ನಿಜಗುರು ಶಿರೋಮಣಿ ಅನಂತಾನಂತ ಜನುಮದಲೀಗ ಗಾನಮಾಡಿದ ನಿಷ್ಟ ಪುಣ್ಯವು ತಾನೊಲಿದು ಫಲವಿತ್ತದೋ4 ಕಲ್ಲು ಕರಗಿಸಿ ಬೆಣ್ಣಿ ತೆಗುವಂಥ ಬಲ್ಲಿದರು ನಿನ ಗೊಲಿದಿರಲು ಎಲ ಎಲ್ಲಿ ಇಲ್ಲವೆಂಬೊ ಸೊಲ್ಲುಗಳಲ್ಲದೆ ಇದು ಸಲ್ಲದೊ ಸಕಲ ಮನೋಭೀಷ್ಟಾ ತುಲ್ಯ ವಲ್ಲಭ ಮಲ್ಲದಲ್ಲಣ ನಿಲ್ಲದಲೆ ವೊಲಿದಿಹನೊ 5 ನೂನ್ಯಪೂರ್ಣವು ಅವರನ ಕೂಡಿ ತನ್ನ್ಯೋಪಾಯವು ಯಾಕೆ ನಿನಗೆ ಕಣ್ಣೆವೆ ಇಡುವನಿತರೊಳು ಕಾರುಣ್ಯವರುಷಗರೆದು ಬಿಡುವ ದೈನ್ಯವೃತ್ತಿಯ ಬಿಡಿಸಿ ನಿಷ್ಕಾಮ ಪುಣ್ಯವನಧಿಯೊಳಿಡುವರೊ 6 ಊರ್ವಿಗೀರ್ವಾಣರಿಗೆ ಉಣಿಪುದು ಗರ್ವವನು ತಾಳದಲೆ ಚೆನ್ನಾಗಿ ಸರ್ವಬಗೆಯಲಿ ನಾನು ಎಂಬೊ ದುರ್ವಚನಗಳ ನುಡಿಯದೆ ಪೂರ್ವತನೆ ಬಯಸುತಾರಾಧಿಸು ಶರ್ವಸನ್ನುತ ವಿಜಯವಿಠ್ಠಲ ಪೂರ್ವನೆಂತ ಪ್ರಬಲನೆ7
--------------
ವಿಜಯದಾಸ
ದಯ ಮಾಡೊ ಪ್ರೀಯಾ ದಾಸರ ಶುಭೋ-ದಯ ವಿಜಯರಾಯ ಸಾ |ಹಯವಾಗಿ ಒದಗುವೋಭಯ ನಿವಾರಣ ಮಾಡಿ ಪ ಪ್ರಬಲವಾಗಿಹ ಮೋಹ ನಿಬಿಡವಾದದರಿಂದಅಭಯದಾಯಕ ನಿನ್ನ ಶುಭವಾದ ಪಾದಕ್ಕೆಅಭಿವಂದಿಸದಲೆ ಅಲ್ಪರ ಸೇರಿಅಬಲನಾಗುತಲೆ ಪಾಪದ ವನಧಿUಭೀರ ನೋಡದಲೆ ಬಾಳಿದೆ ಯನ್ನಅಭಿಮಾನದೊಡೆಯನೆ ಅಗಡು ಮಾಡದಲೆ 1 ದುರಿತ ಪರಿ ವರಗಳ ಗರೆವ ಕಾರಣ ನಿನ್ನಬಿರಿದು ನಾ ಬಲ್ಲೆ ಎನ್ನಯ ಭಾರಸರಿ ನಿನ್ನದಲ್ಲೆ ಲೌಕೀಕದಪರಿ ಮತ್ತೊಂದೊಲ್ಲೆ ಇಹಪರದಲ್ಲೆ ಪರಮ ಸೌಖ್ಯಕೆ ನಿನ್ನ ಸ್ಮರಣೆ ವಂದಲ್ಲೆ 2 ಪಾಮರ ಜನರಿಗೆ ಸುಮಾರ್ಗಗೋಸುಗಶ್ರೀಮನೋಹರ ನಿನ್ನ ಪ್ರೇಮದಿಂದಲಿ ಸೃಜಿಸಿಭೂಮಿಯೊಳಿಡಲೂ ಹರಿಯ ದಿವ್ಯನಾಮ ನಾ ಬಿಡಲು ದುರ್ವಿಷಯವಕಾಮಿಸಿ ಕೆಡಲೂ | ಸುಮ್ಮನಿರದೆಯಾಮ ಯಾಮಕೆ ನಿನಗೆ ನಾ ಮೊರೆಯಿಡಲೂ 3 ಜಗದಂತರ್ಯಾಮಿಯ ಹಗಲು ಇರುಳು ಬಿಡದೆಸುಗುಣ ಮಾರ್ಗದಲಿದ್ದು ಬಿಗಿಯಾದ ಕವನಕ್ಕೆಬಗೆ ತೋರಿದವನೆ ಹರಿಯ ಕ್ಷಣ ಅಗಲದಿದ್ದವನೆ ಕಾಮದ ಬಲಿಗೆಸಿಗದೆ ನಡೆವವನೆ ಅನುನಯದಿ ಕರವಮುಗಿದು ಬೇಡುವರಲ್ಲಿ ಮುದದಿಂದ ನಲಿವನೆ 4 ಎನ್ನೊಬ್ಬಗಲ್ಲ ಈ ಬಿನ್ನಪ ಕರುಣಾಳೆನಿನ್ನ ಪೊಂದಿದವರ ಮನ್ನಿಸಿ ಸಲಹಯ್ಯಾಬೆನ್ನು ಬಿಡದಲೆ ವ್ಯಾಸ ವಿಠ-ಲನ್ನ ಪಾಡುತಲೆ ಕಾಲವ ಕಳೆವ ಸನ್ಮಾರ್ಗವನೆ ತೋರೋ ತಡಮಾಡದಲೆ 5
--------------
ವ್ಯಾಸವಿಠ್ಠಲರು
ದೇವದೇವನಾ ಭಜಿಸು ಜಾನಕಿ ಪ್ರೇಮನಾ ಬಿಡದೆ ಇನ್ನು ಪ ಇಂದಿರೇಶನಾ ಸಕಲ ವಿಶ್ವನಾಥನಾ ಸುಂದರ ರೂಪನ ಸುಗುಣ ಸುಜನವಂದ್ಯನಾ ಸಿಂಧು ಶಯನನಾ ಚೆಲುವ ಶ್ರೀನಿವಾಸನಾ ಮಂದರಾದ್ರಿಯನೆ ಪೊತ್ತ ಮಹಿಮಾನಂದನ 1 ವಾರಿಜನಾಬನಾ ಘನ ವಾಸುಕಿಶಯನನಾ ನೀರಜ ನಯನನಾ ಕೃಷ್ಣಾ ನಿಗಮಗೋಚರನಾ ನವನೀತ ಚೋರನಾ ಪಾರಮಾರ್ಥಿಕ ಜ್ಞಾನದಲ್ಲಿ ಪ್ರಬಲವಾಗಿ ಮನವು ನಿಲ್ಲಿಸಿ2 ಪನ್ನಗ ಭೂಷಣನಾದ ಪಾರ್ವತೀಶನಾ ಮನ್ನಿಸಿ ಪೊರೆದನ ಮಹಾಮಹಿಮೆಯುಳ್ಳನಾ ಚಿನ್ಮಯ ರೂಪನಾ ಪರಮ ಚಿದ್ವಿಲಾಸನಾ ಹೆನ್ನ ತೀರನಿಲಯ ಸುಪ್ರಸನ್ನ 'ಹೆನ್ನ ವಿಠ್ಠಲ’ ನಾದ 3
--------------
ಹೆನ್ನೆರಂಗದಾಸರು
ದ್ವಾರಪಾಲಕರಿಗಾನಮಿಪೆ ನಿತ್ಯ ಶ್ರೀ ರಮಣ ನಾರಯಣನ ಪುರತ್ರಯದೊಳಿಹ ಪ ಜಯ ವಿಜಯ ಬಲಪ್ರಬಲ ಚಂಡ ಪ್ರಚಂಡ ನಿ ರ್ಭಯ ನಂದ ಸುನಂದ ಕುಮುದ ಕುಮುದಾ ಧಾಮ ಸುಧಾಮ ಸಂ ಪ್ರಿಯ ತಮನ ಆಜ್ಞಾಧಾರಕರೆಂದೆನಿಸುವ 1 ಲಸದೂಧ್ರ್ವಪುಂಡ್ರ ದ್ವಾದಶನಾಮ ಶಂಖ ಸುದ ರುಶನ ಸುಗದಾ ಪದ್ಮ ನಾಮ ಮುದ್ರಾ ಕುಸುಮ ಮಾಲಿಕೆ ಧರಿಸಿ ನಸುನಗುತಹರ್ನಿಶಿಗಳಲಿ ಹರಿಯ ತುತಿಪಾ 2 ಕುಂಡಲ ಹಾರ ಪದಕ ಕಂ ಕಣ ನಡುವಿನೊಡ್ಯಾಣ ಪೀತಾಂಬರ ಕ್ವಣಿತನೂಪುರ ಗೆಜ್ಜೆ ಚರಣಾಭರಣ ಸುಲ ಕ್ಷಣರಾದ ಸರ್ವಾಂಗ ಸುಂದರರೆನಿಸುವಾ 3 ಕರದೊಳೊಪ್ಪುವ ಗದಾಯುಧ ಕುಂದರದನ ಕ ಸ್ತುರಿನಾಮ ಮಾಣಿಕಕ್ಷತೆಯ ಧರಿಸಿ ಕುಸುಮ ಕೇಸರಿ ಗಂಧದಿಂ ಭಯಂ ನಿತ್ಯ 4 ಮೂರು ಬಾಗಿಲಲಿ ಶ್ರೀ ದೇವಿಯಿಪ್ಪಳು ವಾಯು ಭಾರತಿ ಆಜ್ಞದಿಂದೀ ದೇವರು ವೀರಜಯ ವಿಜಯಾದಿಗಳಿಗೆ ವಿಷ್ವಕ್ಸೇನ ಪ್ರೇರಕನು ತಾನಾಗಿ ಶ್ರೀಶನರ್ಚಿಪನೆಂದು 5 ಹೃದಯ ಶ್ರೋತ್ರ ಚಕ್ಷುವದನಾದಿ ಕರಣದೊಳು ನದನದಿಗಳೊಳು ಮಹೋದಧಿಗಳೊಳಗೆ ಉದಿತ ಭಾಸ್ಕರ ಮಂಡಲದಿ ದೇವಗೃಹದಿ ಸದಸದ್ವಿಲಕ್ಷಣ ಸುದತಿಸಹ ಪೂಜಿಸುವ 6 ದ್ರುಹಿಣ ಮೊದಲಾದ ಸುಮನಸ ಪೂಜ್ಯ ಚರಣಾಬ್ಜ ಮಹಿಮ ಮಂಗಳಚರಿತ ಸುಗುಣ ಭರಿತ ಅಹಿರಾಜ ಶಯನ ಜಗನ್ನಾಥವಿಠಲನ ಸ ನ್ಮಹಿಮೆಗಳ ತಿಳಿಸಿ ತೋರಿಸಲಿ ಮನ್ಮನದೀ 7 ತೀರ್ಥಕ್ಷೇತ್ರ
--------------
ಜಗನ್ನಾಥದಾಸರು
ನಾರಿಯರಲಿ ಮಾದರಿಯೆಂದೆನಿಸಿರಮ್ಮ ಮೂರುಕುಲಕೆ ಕೀರುತಿಯನು ತನ್ನಿರಮ್ಮ ಸೇರಿದ ಪತಿಮಂದಿರವನುದ್ಧರಿಸಿರಮ್ಮ ಬೇರೆ ಜನಕೆ ಸೋದರಿಯೆಂದರಿಯಿರಮ್ಮ ಅಬಲೆಯರಿರಬಹುದು ದೇಹ ಶಕುತಿಯಲಿ ಪ್ರಬಲಸ್ಥಾನ ನಿಮಗಿಹುದು ಸಮಾಜದಲ್ಲಿ ಶುಭಪರಂಪರೆಗಳ ಪತಿಗೆ ಕೋರಿರಮ್ಮ ಲಭಿಸುವುದತಿಸುಲಭದಿ ಪರಲೋಕವಮ್ಮ ಗೃಹಿಣಿಯೇ ಗೃಹವೆಂಬ ಮಾತನರಿಯಿರಮ್ಮ ಗಹನದ ಸಂಸಾರಪಥವ ಜರಿಯಬೇಡಿರಿ 10 ವಹಿಸಿರಿ ಗೃಹಕೃತ್ಯಗಳನು ಆದರದಲ್ಲಿ ಸಹಿಸಿರಿ ಸುಖದು:ಖಗಳನು ಖೇದವಿಲ್ಲದೆ ಶ್ರದ್ಧೆಯಿರಲಿ ಗೃಹಿಣಿಯ ಕಾರ್ಯದಲಿ ಸರ್ವದ ಸ್ಪರ್ಧೆಯ ಮಾಡಬೇಡಿ ಪುರುಷಗುಚಿತ ಕಾರ್ಯದಿ ತಿದ್ದಿರಮ್ಮ ವಿನಯದಿಂದ ಪತಿಯ ದೋಷವÀ ಹದ್ದಿನಂತೆ ಕಾಯಿರಮ್ಮ ಪತಿಯ ಶ್ರೇಯವ ದೈವದತ್ತವಿಹುದು ನಿಮ್ಮ ಮುಖದ ಕಾಂತಿಯು ಸೇರಿಸಿ ಫಲವೇನು ವಿವಿಧ ಸುಣ್ಣಬಣ್ಣವ ಹೂವುಗಳನು ಕಸಕಲದರ ಗಂಧವಿರುವುದೆ ಯಾವ ಕೃತಕ ಬೇಕಿದೆ ಸ್ವಭಾವ ಶೋಭೆಗೆ 20 ಅನುಗಾಲವು ಊರಿಗೆ ಉಪಕಾರಿಯಾದರು ಮನೆಗೆ ಮಾರಿಯಾಗಬೇಡಿರಮ್ಮ ಎಂದಿಗು ವಿನಯವಿರಲಿ ನಡೆನುಡಿಯಲಿ ಸರ್ವ ಜನರಲು ಪ್ರಣಯ ಸರಸ ಬೇಡಿರಮ್ಮ ಬಂಧು ಜನರಲಿ ದುಡಿದು ದಣಿದು ಉಶ್ಶೆನುತಲಿ ಬರುವ ಪತಿಯಲಿ ಕಿಡಿಕಿಡಿಯಾಗಲಿ ಬೇಡಿರಿ ತರಲು ಮರೆತರೆ ಬಡತನವಿರಬಹುದು ಸದ್ಯ ನಿಮ್ಮ ಪಾಲಿಗೆ ಅಡಿಗಡಿಗದನಾಡಬೇಡಿ ಒಡೆಯನೆದುರಲಿ ನೆರೆಮನೆ ವೆಂಕಮ್ಮನೊಂದು ಸೀರೆ ಕೊಂಡರೆ ಗುರು ಗುರುಗುಟ್ಟುತಲಿ ನೋಡಬೇಡಿ ಪತಿಯನು 30 ಮರುಕದಿ ಸಂತೈಸಲವನು ಮನವು ಕರಗದೆ ಸೆರೆಸೆರೆ ಕಣ್ಣೀರುಗಳನು ಸುರಿಸಬೇಡಿರಿ ತುಳಸಿಯ ಪೂಜೆಯನು ಮಾಡ ಮರೆಯಬೇಡಿರಿ ಕೆಲಸಗಳನು ದಿಟ್ಟತನದಿ ಮಾಡಿ ಮುಗಿಸಿರಿ ಕಲಿಯಿರಿ ಸಂಸಾರದಲಿ ನೆಪ್ಪು ನೇರವ ಹಳಿಯಬೇಡಿರಮ್ಮ ನೀವು ನೆರೆ ಹೊರೆ ಜನರ ಉಳಿಸಿ ಬಳಸಿರಮ್ಮ ತಂದ ಧಾನ್ಯವ ತಿಳಿಸಬೇಡಿ ಮನೆಯ ಗೋಪ್ಯ ಪರರಿಗೆಂದಿಗು ಕಾಲ ಕಳೆಯಬೇಡಿ ಕೆಲಸವಿದ್ದರೆ ಪ್ರಳಯ ಮಾಡಬೇಡಿ ಸಣ್ಣ ಪುಟ್ಟ ಮಾತಿಗೆ 40 ಸೊಟ್ಟ ಬೈತಲೆಯನು ತಗೆಯಲಿಷ್ಟಪಡದಿರಿ ಅಷ್ಟವಕ್ರದುಡುಪುಗಳನು ಧರಿಸಬೇಡಿರಿ ರಟ್ಟು ಮಾಡಬೇಡಿರಮ್ಮ ರೂಪು ರಚನೆಯ ಸಿಟ್ಟು ಮಾಡಬೇಡಿ ಮುದಿಯ ಬುದ್ಧಿವಾದಕೆ ಶ್ರವಣ ಮಾಡಿರಮ್ಮ ಹರಿಯ ಕಥೆಗಳನುದಿನ ಶ್ರವಣ ಮಾಡುವಾಗ ಹರಟೆ ನಿದ್ರೆ ಬೇಡವು ಕಿವಿಯ ಕಚ್ಚಬೇಡಿರಮ್ಮ ಪರರ ವಾಕ್ಯಕೆ ಲವಲವಿಕೆಯು ಬೇಡಿರಮ್ಮ ಚಾಡಿ ಚುದ್ರದಿ ರೂಢಿಯಿಲ್ಲದಿರುವ ನಡತೆ ಬೇಡಿರೆಂದಿಗು ಮೂಢರೆನಿಸಬೇಡಿ ಹಾಡುಹಸೆಯ ಕಲಿಯದೆ 50 ಪಾಡುಪಡುತ ಪತಿಗೆ ಹರುಷನೀಡಿ ಗೃಹದಲಿ ಪ್ರೌಢವಿದ್ಯೆ ಕಲಿತು ದುಡಿಯಬೇಡಿ ಪರರಿಗೆ ಬಣ್ಣವಿಲ್ಲದಿರುವುದು ಬಂಗಾರವಲ್ಲವು ಕಣ್ಣಿಗೆ ಹಿತವಲ್ಲದು ಶೃಂಗಾರವಲ್ಲವು ಉಣಲು ತಾ ದೊರೆಯದಿರಲು ಸಂಪತ್ತಲ್ಲವು ಅನ್ನ ಮಾಡಲರಿಯದಿರಲು ಹೆಣ್ಣದಲ್ಲವು ದುಂದುಗಾರಿಕೆಯನು ಕಲಿಯಬೇಡಿರೆಂದಿಗು ಮುಂದೆ ಕಾಲಚಕ್ರಗತಿಯನು ಮನದಿ ಯೋಚಿಸಿ ಬಂದ ಮಾತುಗಳನು ಬಾಯಿತಡೆದು ಆಡಿರಿ ನಂದಗೋಕುಲವನೆ ಮಾಡಿ ಗೃಹವ ನಗುತಲಿ 60 ಬಳಕೆಯಲ್ಲದಿರುವ ಕಲೆಯ ಕಲಿಯಬೇಡಿರಿ ಕಲಿಸಿರಮ್ಮ ಕೆಲಸಕಾರ್ಯ ಮಕ್ಕಳುಗಳಿಗೆ ಗಳಿಸಿರಮ್ಮ ಪುಣ್ಯಕೀರ್ತಿ ತಿಳಿಯಮನದಲಿ ಸುಲಭವು ಸಾಧನವು ನಿಮಗೆ ಪುಣ್ಯಲೋಕಕೆ ಮನವತಿ ಚಂಚಲತೆಯನ್ನು ಹೊಂದಬಿಡದಿರಿ ಅನುಮತಿ ಕೊಡಬೇಡಿ ದುಷ್ಟ ಜನರ ಬೋಧೆಗೆ ಘನಮತಿಯನು ಪೊಂದಿ ಸತಿಯ ಮಾರ್ಗ ತೋರಿರಿ ಗುಣವತಿಯೆಂದೆನಿಸಿರಮ್ಮ ಹಿರಿಯ ಜನರಲಿ ದುಡುಕಿನ ಹೆಣ್ಣೆಂದು ಹೆಸರು ಪಡೆಯಬೇಡಿರಿ ಸಿಡುಕಿನ ಮೋರೆಯನು ತೋರಬೇಡಿ ಜನರಿಗೆ 70 ಒಡಕಿನ ಬಾಯವಳು ಎಂದು ಎನಿಸಬೇಡಿರಿ ಕೆಡುಕ ಕೋರಬೇಡಿ ಕೋಪದಿಂದ ಪರರಿಗೆ ಧ್ವನಿಯು ಮಧುರವಿರಲಿ ನಿಮ್ಮ ಮಾತುಕಥೆಯಲಿ ಕೆಣಕಬೇಡಿ ಮರೆತುಬಿಟ್ಟ ಜಗಳ ಕದನವ ಇಣಕಿ ನೋಡಬೇಡಿ ಪರರ ನಡೆನುಡಿಗಳನು ಸಾರಥಿಯೆಂದೆನಿಸಿರಿ ಸಂಸಾರ ರಥದಲಿ ವೀರರಮಣಿಯೆಂಬ ದಿವ್ಯ ಕೀರುತಿ ಬರಲಿ ನಾರಿಯರಲಿ ಮಾದರಿಯನು ಪಡೆದು ತೋರಿದ ಭಾರತ ಭೂಮಾತೆಗೆ ಪ್ರತಿಬಿಂಬವೆನಿಸಿರಿ 80 ದೇಶಸೇವೆಯೆಂದು ರಾಜಕೀಯ ಬೇಡಿರಿ ಮೋಸ ಹೋಗಬೇಡಿ ಆಸೆ ತೋರುವ ನುಡಿಗೆ ಕಾಯ ಕ್ಲೇಶ ಬೇಡಿರಿ ಭಾಷಣ ಬಹಿರಂಗದಲ್ಲಿ ಭೂಷಣಲ್ಲವು ಸಿರಿರಮಣಗೆ ತುಳಸಿಗಿಂತ ಪುಷ್ಪವಿಲ್ಲವು ಹಿರಿಯತನಕೆ ಸತ್ಯಕ್ಕಿಂತ ಯುಕ್ತಿಯಿಲ್ಲವು ಅರಸಿ ನೋಡೆ ತಾಯಿಗಿಂತ ನಂಟರಿಲ್ಲವು ಕರಿಮಣಿ ಸಮ ನಾರಿಜನಕೆ ನಗಗಳಿಲ್ಲವು ದಾಸರ ನುಡಿ ಧರ್ಮಗಳ ಪ್ರಕಾಶ ಮಾಡಿತು ಸ್ತ್ರೀ ಸಮೂಹದಿಂದ ನಾಶವಾಗದುಳಿದವು 90 ಆ ಸುಧಾಮ ಸತಿಯರೆ ಈ ದೇಶದ ಸೊಬಗು ಮಾಸದಂತೆ ರಕ್ಷಿಸಿ ಪ್ರಾಚೀನ ನಡತೆಯ ನುಡಿಯಬೇಡಿರಮ್ಮ ಪರರ ವಂಚನೆನುಡಿಯ ಕೊಡಲಿ ಹಾಕಬೇಡಿರಮ್ಮ ಕುಳಿತ ಕೊಂಬೆಗೆ ಇಡಲಿಬೇಡಿ ಮತ್ಸರವನು ದೀರ್ಘ ಕಾಲದಿ ಪುಡಿಯನಿಡಲಿಬೇಡಿರಮ್ಮ ಪುಣ್ಯ ಕಾರ್ಯಕೆ ಸಣ್ಣನುಡಿಗಳೆಂದು ತಿಳಿಯಬೇಡಿರಿವುಗಳ ಭಿನ್ನ ಭಿನ್ನ ದೇಶಕಾಲದನುಭವಗಳಿದು ಬಣ್ಣವತಿಶಯೋಕ್ತಿಯಲ್ಲ ಅರಿತು ನೋಡಿರಿ ಘನ್ನ ಸುಗುಣಭರಿತ ಶ್ರೀ ಪ್ರಸನ್ನ ಸಲಹುವ 100
--------------
ವಿದ್ಯಾಪ್ರಸನ್ನತೀರ್ಥರು
ನಿಖಿಳ ಗುಣಪೂರ್ಣ ಪ ಭಾರತೀಶ ಸಕಲಪ್ರಾಣಿಗಳ ಹೃದಯಾಬ್ಜ ವಾಸ ಸುರೇಶಅ.ಪ ವಾತಸುತನಾಗಿ ರಘುನಾಥ ಪ್ರಿಯ ದೂತ ಬಲುಯೂಥ ಲಂಕೆಯ ಪೊಕ್ಕು ಖ್ಯಾತಿಯನು ಪಡೆದೆಸೀತೆಗುಂಗುರವಿತ್ತು ವೀತಿಹೋತ್ರಗೆ ಪುರವಪ್ರೀತೆನಿಸಿದಾತ ದಿತಿಜಾತರಿಗೆ ಭೀತಿಕರ 1 ಲಂಡ ಕೀಚಕ ಬಕರ ಮಂಡೆಯನು ಒಡೆದು ಉ-ದ್ದಂಡ ಮಗಧಾಧಿಪನ ದಂಡವನು ಸೀಳಿಭಂಡ ಕೌರವರ ಶಿರ ಚೆಂಡಾಡಿ ಪ್ರಬಲ ರಣ-ಮಂಡಲದಿ ಚಂಡರಿಪು ದಂಡೆಗಳ ಖಂಡಿಸಿದೆ 2 ಭೃಂಗ ಮೂಜ್ಜಗದೊಳಗೆತುಂಗ ಭವಭಂಗ ದಯಾಪಾಂಗ ಯತಿಪುಂಗವನೆ3
--------------
ವ್ಯಾಸರಾಯರು
ನಿನ್ನ ಭಕ್ತರು ಬಹಳ ಬಲವಂತರಹುದೈ ಜನ್ಮಜನ್ಮಕೂ ಚರಣಶರಣನ್ನ ಮಾಡೈ ಪ ಹಾರಿದನು ಹನುಮಂತ ಕಡಲ ಕಾಲುವೆಯಂತೆ ಸಾರಿ ಸೇತುವೆಯ ಕಟ್ಟಿ ನೀ ದಾಟಿದೇ ಮಾರುತಿಯು ಬಲ್ಲಿದನು ಎಂದು ನಾಂಪೇಳಲೇ ಸಾರಸಾಕ್ಷನೆ ಸಾಕ್ಷಿ ಯೇತಕೈ ಬೇರೆ 1 ಭೀಷ್ಮನನು ಬೆದರಿಸಲು ತೋರಚಾಪವ ತೊಟ್ಟ ಸೂಕ್ಷ್ಮದಿಂಹಾರಿಸಿದ ಸಂಗರದಲವನು ತೀಕ್ಷ್ಣಸಾಹಸಿಯಾತನೆಂದು ನೀಂತಿಳಿಯತೈ ಶ್ರೇಷ್ಠ ಮಾರುತಿಕೈಯ ಪರಶುವಂ ಕೇಳು 2 ಶಬರ ಶಂಕರನೊಡನೆ ಕಾದಿ ಕಡೆಯಲಿ ಗೆಲ್ದು ಪ್ರಬಲನೆನ್ನಿಸಿ ಪಾಶುಪತವನ್ನೆ ಪಡೆದಾ ಪ್ರಭುವೆ ನಿನ್ನು ಪದೇಶ ಪಡೆದ ಪಾರ್ಥನ ಕೇಳು ಸುಬಲರೈ ಜಾಜೀಶ ದಾಸರೀ ಜಗದಿ 3
--------------
ಶಾಮಶರ್ಮರು
ನೋಡಿದೆ ಗಿರಿಯ ತಿರ್ಮಲನ ನಿತ್ಯ ಮೂಡಲ ದಿಕ್ಕಿನಲಿಪ್ಪ ನಿರ್ಮಲನಾ ಪ ನೀರೇರ ಕೂಡಾಡಿದವನಾ ದೇವ ನೀರೊಳಗೆ ಸದನವ ಬಿಗಿದವನಾ ನೀರದ ಶ್ಯಾಮ ವರ್ಣನನಾ ಭವ ನೀರಜ ಭವವಂದ್ಯಾ ದಯಾಸಾಗರನಾ 1 ನೀರು ಪಾದದಲಿ ಪೆತ್ತವನಾ ಮಹಾ ನೀರು ದಾಟಿ ಮಕ್ಕಳ ತೋರಿದವನಾ ನೀರಧಿ ಬಿಗಿದ ಪ್ರಬಲನಾ ಅಂದು ನೀರುಪತಿಯ ಭಂಗವ ಮಾಡಿದವನಾ 2 ನೀರು ಕಟದ ನಿಃಸಂಗನಾ ಸರ್ವ ನೀರು ಸೇದುವನಾಗಿ ಜಗವ ಸುತ್ತುವನ ನೀರೊಳಗಾಡುವ ನಿಜನಾ ಓರ್ವ ನೀರೇಳ ನಾರಿಯ ಮಾಡಿದ ಗುಣನಾ 3 ನೀರಜೋದರ ನಿರ್ಮೋಹನನಾ ಏಳು ನೀರಜ ದಳದಲ್ಲಿ ಪೊಳೆವ ಚನ್ನಿಗನಾ ನೀರು ಬಯಲು ಮಾಡಿದವನಾ ಅನ್ನ ನೀರೊಳಗಿದ್ದು ಜಗವ ಪೊತ್ತವನಾ 4 ನೀರಜಪಾಣಿ ವಲ್ಲಭನಾ ತೇಜ ನೀರನ್ನ ತತ್ವ ವ್ಯಾಪಿಸಿಕೊಂಡವನಾ ನೀರೆ ಗತಿಯ ಮಾಡಿದವನಾ ನಮ್ಮ ನೀರಜಾದ್ರಿ ತಿಮ್ಮ ವಿಜಯವಿಠ್ಠಲನಾ 5
--------------
ವಿಜಯದಾಸ