ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಿಳಿವುದನ್ನಮಯ ಕೋಶಗಳನು ಇಳೆಯೊಳಚ್ಯುತನ ದಾಸರು ನಿತ್ಯದಲಿ ಪ ಮೇದಿನಿ ಸಲಿಲನ್ನಮಯ ವಿಹಾಯಸ ವಾಯು ಮುಖ್ಯಪ್ರಾಣ ಮನೋಮಯಕೆ ಆದುದು ಮನ ಅಹಂಕಾರ ವಿಜ್ಞಾನಮಯ ವೇದ್ಯ ತತ್ತ್ವಾನಂದ ಮಯಕೆ ಅವ್ಯಕ್ತವನು1 ಕೃತಿ ಸಂಕರು ವಾಸುದೇವ ಮಾಯಾ ಘನ ಸುಲಕ್ಷಣ ಲಕ್ಷ್ಮೀ ನಾರಾಯಣರು ಮುಖ್ಯ ರೆನಿಸುವರು ಪಂಚಕೋಶದಲಿ ಎಂದೆಂದೂ 2 ಪ್ರಾಣಾಪಾನ ವ್ಯಾನೋದಾನ ಸಮಾನ ಪಂ ಚಾನಿಲರೂ ಅಲ್ಲಿಹರು ಮತ್ತು ದಾನವಾದಿಗಳಿಹರು ಭೂತ ಮಾತ್ರ ಕರ್ಮ ಜ್ಞಾನೇಂದ್ರಿಯಗಳು ತನ್ನಿಷ್ಟವಾಗಿಹವಲ್ಲಿ 3 ಅಬುಜ ಭವಾಂಡ ಪಿಂಡಾಂಡಕ್ಕೆ ಈ ತತ್ತ್ವ ಒಂಬತ್ತು ಆವರಣವೆಂದೆನಿಪವು ಕಂಬುಪಾಣಿಯ ರೂಪ ಲಕ್ಷ್ಮೀ ರೂಪವು ಪಂಚ ಇಂಬುಗೊಂಡಿಹವು ಚಿಂತಿಪುದು ಭೂಸುರರು 4 ಭೂಶನೇಶ್ವರ ವರುಣ ಸುರನದಿಗಳನ್ನಮಯ ಕೋಶದೊಳಗಿರುತಿಹರು ಪ್ರಾಣಮಯದಿ ಮೇಷವಾಹನ ಪ್ರವಹವಾಯು ಪ್ರಾವಹಿ ಮಹಾ ಕಾಶಾಧಿಪತಿ ಗಣಪರಧಿಪರೆಂದೆನಿಸುವರು 5 ಕಾಮೇಂದ್ರ ಶಿವ ರತೀಂದ್ರಾಣಿ ಪಾರ್ವತಿ ಮುಖ್ಯ ಈ ಮನೋಮಯಕಧಿಪರೆನಿಸುತಿಹರು ತಾಮರಸಭವ ವಾಯು ವಾಣಿ ಭಾರತಿ ಮುಖ್ಯ ಸ್ವಾಮಿಗಳೆನಿಸುವರು ವಿಜ್ಞಾನಕೋಶದಲಿ 6 ಆನಂದಮಯ ಕೋಶಕಭಿಮಾನಿ ಶ್ರೀನಿವಾಸನು ಪಂಚರೂಪಾತ್ಮಕಾ ಈ ನಿರ್ಜರರೊಳಿದ್ದು ತತ್ತದಾಹ್ವಯನಾಗಿ ಪಾನೀಯಜಾಂಡದೊಳಿಪ್ಪ ಕರುಣೀ 7 ಪೃಥಿವಿ ಗಂಧ ಘ್ರಾಣೋಪಸ್ಥಪ್ಪುರ ಸಂಜೀವಾ ಪ್ರಥಮ ಕೋಶದಿ ವಾಯು ಅಷ್ಟತತ್ತ್ವ ದ್ವಿತೀಯ ಕೋಶದಿ ತೇಜರೂಪ ಚಕ್ಷುಪಾದ ಪ್ರಥಮಾಂಗ ಸ್ಪರ್ಶ ತ್ವಕು ಪಾಣಿ ತತ್ವಗಳಿಹವು 8 ಆಕಾಶ ಶಬ್ದ ಶ್ರೋತ್ರವು ಪಿಂತೆ ಪೇಳ್ದಷ್ಟು ವಾಕು ಪ್ರಾಣಾದಿ ತತ್ತ್ವ ದ್ವಾದಶ ಕಾಮ ಶ್ರೀ ಕಂಠ ತತ್ವ ಮನ ಮನೋಮಯದಿ ವಿಜ್ಞಾನ ಕಮಲ ಭವ ನಂದ ಮಯತೆ ಅವ್ಯಕ್ತವನು 9 ಸ್ಥೂಲ ದೇಹಕೆ ಇನಿತು ಲಿಂಗ ತನುವಿನಲಿ ತತ್ತ ್ವ ಜಾಲ ಸೂಕ್ಷ್ಮಗಳಿಹವು ಗುಣ ಭೇದದಿ ಪೇಳುವೆನು ಅವ್ಯಕ್ತ ಮಹದಹಂಕಾರ ಮನ ಮೇಳೈಸಿಹವು ಸತ್ವಪರಿ ಭೇದದಲಿ 10 ರಜೋಪರಿಚ್ಛೇದದಲಿ ಜ್ಞಾನ ಕರ್ಮೇಂದ್ರಿಯವು ರಜನೀ ಗುಣದ ಮಾತ್ರ ಭೂತ ಇಹವು ಯಜಿಸು ಈ ತತ್ತ್ವ ಮಾನಿ ದಿವಿಜರನರಿತು ವೃಜಿನವರ್ಜಿತನಾಗಿ ಸುಪದವೈದುವಿ ಮನುಜ11 ಭೂಮ್ಯಭ್ರನ್ನ ಮಯನಳನೀಳಾಗಸ ಪ್ರಾಣ ಮಯ ಮ ನೋಮಯ ಮಹಾ ಅವ್ಯಕ್ತ ಸಮ್ಯಗಾನಂದ ವಿಜ್ಞಾನಮಯನೆನಿಸಿ ಗುರು ಸಮೀರನೊಳಗಿದ್ದು ಪಾಲಿಸುವ ಜಗವಾ 12 ಪಂಚಕೋಶದ ವಿವರ ತಿಳಿದ ಮಹಾತ್ಮರಿಗೆ ಕಿಂಚಿತಾದರು ದೋಷ ಬರಲರಿಯದು ಮಾರ್ಗಣ ಪಿತ ಜಗನ್ನಾಥ ವಿಠಲನು ಸಂಚತಾಗಾಮಿ ಕರ್ಮಗಳ ಫಲ ಬಿಡಿಸುವನು 13
--------------
ಜಗನ್ನಾಥದಾಸರು
ರಂಗನಂಘ್ರಿಯಂಗುಷ್ಠೆ ಸಂಗೆ ಭವಭಂಗೆ ಪ ಉಪೇಂದ್ರ ಭಗವಂತ ಪಟುರೂಪ ಧರಿಸಿ ಚಂದ್ರಮಂಡಲ ಮೀರಿ ಬೆಳದಜಾಂಡವನೊಡಿಯೆ ಸಾಂದ್ರಗುಣದಿಂದ ಉದ್ಭವಿಸಿದೆ ಜನನಿ 1 ಕಮಲವನು ತೊಳಿಯಲಾವೇಗದಿಂದ ವಿಮಲಗತಿಯಲಿ ಬಂದು ಮಂದಾಕಿನಿ ಎನಿಸಿ ಸುಮನ ಸಾವನಿಯಲ್ಲಿ ಪರಿದೆ ಸ್ವರ್ಣನದಿಯೇ2 ಧ್ರುವಲೋಕಕಿಳಿದು ಅಮರಾಲಯವ ಸಾರಿದೆ ತವಕದಿಂದಲಿ ಧುಮುಕಿ ಚತುರಭಾಗವಾದೆ ಭವ ಪರಿಹರಿಸಿ ಭಾಗೀರಥಿ ಎನಿಸಿದೆ 3 ಭವದೊರೆ ಭಗೀರಥಗೆ ಒಲಿದು ಬರುತ ಜವನ ಮನಿಯ ಕೊಡ ಮಣಿಕರ್ಣಿಕೆ ನೆರದೆ4 ಅಳಕನಂದನೆ ನಿನ್ನ ಸ್ಮರಣೆ ಮಾಡಿದ ಜನಕೆ ಕುಲಕೋಟಿ ಉದ್ಧಾರ ನಿಃಸಂದೇಹಾ ಮಜ್ಜನ ಪೊಳೆವ ವೈಕುಂಠಪುರ ಅವನ ಹೃದಯದಲಿ5 ಕುಲಪ್ರವಹವಾಗಿದ್ದ ಜೀವರ ಪುಣ್ಯವನು ಹೇಳಿ ಕೇಳುವವನಾರು ಮೂಲೋಕದಿ ಸೀಲಗುಣ ಸಂಪನ್ನೆ ವರುಣನರ್ಧಾಂಗಿನಿ ಕಾಲ ಕಾಲಕೆ ನಿನ್ನ ಧ್ಯಾನದಿಂದಲ್ಲಿರಿಸು 6 ದೇಶದೇಶದಲಿಂದ ಬಂದ ಸುಜನರ ಪಾಪ ಮಾಧವ ಚಲುವ ಶ್ರೀನಿವಾಸ ಯದುಪತಿ ವಿಜಯವಿಠ್ಠಲನ ಸುತೆ ಖ್ಯಾತೇ 7
--------------
ವಿಜಯದಾಸ
ವಾದಿಗಳೆದೆಶೂಲಾ | ಗುರುವೆ | ವಾದಿರಾಜ ಶೀಲಾ ಪ ಬೋಧಿಸಿ ದಶಮತಿ | ಬೋಧರ ಶಾಸ್ತ್ರವಐದಿಸು ಸದ್ಗತಿ | ಯಾದವೇಶನ ಪ್ರೀತಿ ಅ.ಪ. ಸೋದೆ ಪುರದಲಿರುವಾ | ವೃಂದಾವನಮೋದದಿ ದರ್ಶಿಸುವಾ ||ಸಾಧುಗಳಘನೀಗಿ | ವೇದವಿನುತ ಹರಿಪಾದವ ತೋರಿಸಿ | ಮೋದವ ಕೊಡಿಸುವ 1 ಧವಳಾಭಿದ ಗಂಗಾ | ಅಲ್ಯುದುಭವಿಸಿರ್ಪುದು ತುಂಗಾ ||ಸವನ ಮೂರಲಿ ಸ್ನಾನ ಕವಿದಿಹ ಅಜ್ಞಾನಸ್ರವಿಸಿ ಶ್ರೀಹರಿ ಜ್ಞಾನ | ಪ್ರವಹವ ಸೃಜಿಸುಪುದು 2 ಪಂಚ ವೃಂದಾವನದೀ | ಇಹ ಹರಿಪಂಚ ಸುರೂಪದಲೀ ||ಅಂಚೆಗಮನ ಹರಿ | ಮಂಚಯೋಗ್ಯ ಮುಖಪಂಚವಿಂಶತಿ ಸುರ | ವಾಂಛಿತ ಪಡೆವರು 3 ವಾಗೀಶ ಕರಜಾತಾ | ಸೇವಿತನಾರಾಯಣ ಭೂತ ||ಭೋಗಿ ಪುರೀಶನ | ರೋಗವ ಹರಿಸಿದೆಆಗಮಜ್ಞ ಗುರು | ನಾಗಶಯನ ಪ್ರಿಯ 4 ಬದರಿಯೊಳಿದ್ದವನಾ | ತರಿಸಿದಿವಿಧಿನುತ ತ್ರಿವಿಕ್ರಮನಾ ||ಮುದದಿ ನಿಲ್ಲಿಸುತ | ವಿಧವಿಧ ವೈಭವವಿಧಿಸೆ ನಿನ್ನಯ ಜನ | ಒದಗಿ ಚರಿಸುವರು 5 ಮೋದ ||ಸುಜನ ಸುರದ್ರುಮ | ಭಜಿಸೆ ಹರಿಸಿ ಭ್ರಮಅಜ ಜನಕನ ತೋರ್ವೆ || ಋಜು ಲಾತವ್ಯರೆ 4 ಪ್ರಾಕೃತ ಪದಪದ್ಯಾ | ರಚಿಸುತಅ - ಪ್ರಾಕೃತ ನಿರವದ್ಯಾ ||ಅ - ವ್ಯಾಕೃತ ಗುರು ಗೋವಿಂದ ವಿಠ್ಠಲಸ್ವೀಕೃತ ನಿಜ ಭಕ್ತ | ಪ್ರಾಕೃತ ಕಳೆವಂಥ 5
--------------
ಗುರುಗೋವಿಂದವಿಠಲರು