ವೇದಾಂತ ಸಾಮ್ರಾಜ್ಯ ರಾಜಾಧಿರಾಜ
ತೇಜೋಮಯರ ಪಾದಾಬ್ಜನೇ ಶರಣಪ
ರಾಜಾಧಿರಾಜ ಕರಾರ್ಚಿತ ಚರಣ
ಪ್ರಾಜ್ಯಪ್ರಜ್ಞರ ಶುದ್ಧಕುಲ ದಿವ್ಯಾಭರಣ ಅ.ಪ
ಭ್ರಾಂತಿಗೆ ನಿಧನ ಸುಖಶಾಂತಿಗೆ ಸದನವೇ
ದಾಂತಿಯ ಮಾನಸ ಕಾಂತಿಗೆ ಸಾಧನ 1
ಇಂದಿರಾಪತಿಯ ಆನಂದಾದಿ ಸದ್ಗುಣ
ವೃಂದ ತೋರಿದ ಶೇಷಚಂದ್ರಿಕಾಚಾರ್ಯ 2
ಹಿರಿದು ನಿಮ್ಮಯ ವ್ಯಾಪ್ತಿ ಕಿರಿದು ಎಮ್ಮಯ ಶಕ್ತಿ
ಪರಮ ಪ್ರಸನ್ನ ಶ್ರೀಗುರು ಸಾರ್ವಭಾಮ 3