ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದಿಗಾದರೂ ನಾನು ಮರೆಯೆ ಗುರುವಿನತಂದು ಪೂಜಿಸು ತ್ರಿನಯನ ಪ್ರಾಣದೊಡೆಯನ ಪ ಅಂಬು ಹೂಡಿದ |ತಾಮಸದ ಗುಣಗಳನು ಕಡೆಗೆ ಮಾಡಿದರಾಮ ರಾಮ ಎಂಬ ಬೀಜ ಮಂತ್ರ ನೀಡಿದ 1 ಕಾಣ ಬಂತು ಜಗವು ಎನಗೆ ರಾಮರೂಪವುತಾನು ತಾನೆ ಉದಯವಾಯ್ತು ಜ್ಞಾನದೀಪವು |ಏನು ಪೇಳಲಿ ಕರಗಿ ಹೋಯ್ತು ಮನದ ತಾಪವುಸ್ವಾನುಭಾವದಲಿ ನಾಸ್ತಿ ಪುಣ್ಯಪಾಪವು 2 ಎರಡು ಪಕ್ಷ ಮೀರಿಹ ಗುಣಾತೀತನಪರಬ್ರಹ್ಮ ಪರಂ ಜ್ಯೋತಿ ಸದೋದಿತನ |ಕರುಣಸಿಂಧು ತಂದ ಜ್ಞಾನಬೋಧ ತಾತನಹರುಷ ಪೂರ್ಣವಾಗಿ ಸುಖವ ಕೊಡುವ ದಾತನ 3
--------------
ಜ್ಞಾನಬೋದಕರು
ಕಂಡಿರ್ಯಾ ನೀವು ಕಂಡಿರ್ಯಾ ಮಂಡಲದೊಳು ನಿಜ ಕಂಡಿರ್ಯಾ ಧ್ರುವ ಮಂಡೆಯ ಮರೆಯಲ್ಯ ಖಂಡವಾಗಿಹುದು 1 ಪಿಂಡಬ್ರಹ್ಮಾಂಡಕೆ ಭೇದದೋರದಿದು 2 ಹಿಂಡದೈವಕ ತಾಪ್ರಚಂಡನಾಗಿಹುದು 3 ಕಂಡವರಾಶ್ರಯ ಪಂಡಿತರಿಗೆ ಪ್ರಿಯ 4 ಕಂಡವರಕಂಡು ಕೂಡಿಕೊಂಬುದಿದು 5 ನೋಡಿದವರ ಕೂಡ ನೋಟಮಾಳಾಹುದು6 ಮೂಢ ಮಹಿಪತಿ ಪ್ರಾಣದೊಡೆಯನಾಗಿಹ್ಯ ನಿಜ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು