ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎದ್ದಳೀಗಿದಕೋ ಶ್ರೀರಮಣಿ || ಎದ್ದಳೀಗಿದಕೋ ಪ ಮುದ್ದು ಶ್ರೀ ಹರಿಯಾ ತೋಳ ತೆಕ್ಕೆಯಾನುಸಳಿ ಶುದ್ಧ ರಾತ್ರಿಲಿ ಹರಿ ರತಿಯೊಳು ಮಲಗಿ ಅ.ಪ. ಸರಸಿಜ ಸಖನ ಮುಂಬೆಳಗವ ಹರಿಯಲು | ಭರದಲಿ ಹಕ್ಕಿಯು ಕಲಕಲವೆನಲು 1 ನಾರದ ತುಂಬುರ ಮಾಡುವ ಪ್ರಾತ:| ಸ್ಮರಣೆಯ ಗಾಯನ ಧ್ವನಿಯನು ಕೇಳಿ 2 ಕರತಳದಲಿಯವಿಗಳನು - ವರೆಸುತಲಿ | ತೆರೆವುತ ಮುಚ್ಚುತ ಅರೆಗಣ್ಣ ನೋಟದಿ 3 ಬಾಯೊಳಗಿನ ತಂಬುಲವ ನುಗುಳುತ | ಅಧರ ವಕೆಂಪವ ನಡಗಿಸುತ 4 ಕಿರಿಬೆಮರವ ಕೊನೆ ಯುಗುರದಿ ಹಾರಿಸಿ | ಕುರುಳು ಗೂದಲು ಬೈತಲು ನೀಟಾಮಾಡುವ5 ಸಡಲಿದ ಅಲರ ಮುಡಿಯಾತಿದ್ದಿ ಬಿಗಿವುತಾ | ಒಡನೆ ಕೊರಳಾ ಭರಣವ ತಿರುಹುತಲಿ 6 ಎಡಬಲ ಕೊಲದ ವಡ್ಯಾಣ ಸರಿಸಿ ಉಟ್ಟಾ | ಉಡಿಗಿಯಾ ನಿರಯಾ ಮುಂದಕ sಸಾಂವರಿಸುತ7 ಪ್ರಕಟದಿದೋರ್ವ ಕುಚದ ನಖಕ್ಷತಗಳ | ಯುಕುತಿಲಿ ಅಡಗಿಸಿ ಪುಟವನು ಬಿಗಿವುತ 8 ತನ್ನನಂಬಿದ ಬಾಲರ ಹೊರಿಯಲುದಯ | ಕಮಠ ನ್ಯಾಯದಲಿ9 ಈರೇಳು ಜಗದ ಜೀವನ ಪಡೆದ ಜನನಿ | ಗುರುಮಹಿ ಪತಿಸುತ ಪ್ರಭುವಿನ ಅರಸಿ10
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನದೀಸ್ತೋತ್ರವು ಕೃಷ್ಣ ಗೋದಾವರೀ ನಂದಿನೀ ನಳಿನೀ ಹೇಮಾವತಿ ಸಿಂಧು ಸರಯು ನೇತ್ರಾವತಿ ಕುಮದ್ವತೀ ಭಾಗೀರಥೀ ಭೋಗವತಿ ಜಾಹ್ನವೀ ಜಯಮಂಗಲಿ ತ್ರಿಜಗತ್ವಾವನೀ ವಿಷ್ಣು ಪಾದೋದ್ಭವೆ ದೇವಿ ಕೃಷ್ಣವೇಣಿ ಅಘನಾಶಿನೀ ಗಂಗಾ ಯಮುನಾ ತ್ರಿವೇಣೀ ದಕ್ಷಿಣ ಪಿನಾಕಿನೀ ನರ್ಮದಾ ಸಾವಿತ್ರೀ ಗಾಯತ್ರೀ ಸರಸ್ವತೀ ಸೀತಾ ಮಾಲತೀ ಚಮಲಾಪಹ ವಾರಾಹೀ ವೈಷ್ಣವೀ ಸುಜ್ಯೋತಿ ಶಿವಗಂಗಾ ಪಂಚಗಂಗೀ ತ್ರಿಪದಗಾಮಿನೀ ಬ್ರಹ್ಮಪುತ್ರಾ ತುಂಗಭದ್ರಾ ಭೀಮರಥೀ ಗೋಮತೀ ಶರಾವತೀ ಸ್ವಾಮಿ ಪುಷ್ಕರಿಣೀ ವರಹ ಪುಷ್ಕರಿಣಿ ಪಾಂಡುತೀರ್ಥ ಪಾಪನಾಶಿನೀ ಆಕಾಶಗಂಗಾಧವಳ ಗಂಗಾ ಶಾಲ್ಮಲೀ ಲೋಕಪಾವನೀ ಕುಮಾರ ತೀರ್ಥ ವಿಷ್ಣುತೀರ್ಥ ನಾರಾಯಣತೀರ್ಥ ಕೌಮೋದಕೀ ಕಪಿಲತೀರ್ಥ ಅಲಕನಂದ ವರದಾ ಪಶ್ಚಿಮವಾಹಿನೀ ಸಿಂಧು ನದಿ ಶೋಣನದಿ ಚಂದ್ರಭಾಗ ಅರ್ಕಾವತೀ ಸುವರ್ಣ- ಮುಖರೀ ಗೋಗರ್ಭ ಶಿಂಶಾಕಾಗಿನೀ ಮಂದಾಕಿನೀ ಪ್ರಾತ:ಕಾಲೇ ಪಠÉೀನ್ನಿತ್ಯಂ ದು:ಖದಾರಿದ್ರನಾಶನಂ ಸ್ಮರಾಮಿ ನಿತ್ಯಂ ಭವದುಃಖ ದೂರಾ ಶ್ರಿ ಕಮಲನಾಭ ವಿಠ್ಠಲೋ ವಿಜಯತೇ ಶುಭಂ
--------------
ನಿಡಗುರುಕಿ ಜೀವೂಬಾಯಿ
ಮನವೆ ಪೇಳುವೆ ಪ ಅಂತರಂಗದಲಿ ಚಿಂತಿಪರಘಶುಲಧ್ವಾಂತ ದಿವಾಕರನಾ ಶ್ರೀವರನಾ ಅ.ಪ ಎಂತು ಸುಕೃತವೂ ಸಿರಿಕಾಂತನುಯನ್ನೊಳು ನಿಂತಿರುವನು ಎನುತ ಪರ್ವತ ಸಂತೋಷದಲಿರುವಂತೆ ತೋರುವದು ಸು- ಕಾಂತ ಶಿಖರದಿಂದ ಛಂದ 1 ವರಶಿಲೆಯೊಳಿರುವ ಹರಿಯ ಶೇವಿಸಲು ಹರುಷದಿ ಸುರನಿಕರ ಭಾಸುರ ತರುಲತೆರೂಪದಿ ಇರುತಿಹರೆನ್ನುತ ಮೆರೆವನು ಗಿರಿರಾಜಾ ಸುತೇಜಾ2 ಗಿರಿನಾಥಾ ತೋರುತ ಅರಳಿದ ಪೂವಿನ ಪರಿಮಳ ಬೀರುವ ಸುರಚಿರ ತರುವ್ರಾತಾ ಶೋಭಿತ3 ಪವನ ಶೇವಿತನು ಭುವನೋದರ ತಾ ದಿವಿಜರಿಂದ ಸಹಿತ ಸೇವಿತ ಅವನಿಧರನು ಮಾಧವನ ತೆರದಿ ತೋ ರು ವೆನೆಂಬುಗರ್ವಾದಿಂದಿರುವ 4 ಸಿದ್ಧಚಾರಣ ತಪೋವೃದ್ಧರಿದೇ ಸ್ಥಳ ಸಿದ್ಧಿದಾಯಕವೆಂದೂ ಬಂದೂ ಪದ್ಮಾಕ್ಷನ ಪದಪದ್ಮವ ಧ್ಯಾನಿಸು- ತಿದ್ದರು ಗುಹೆಗಳಲಿ ಪೂರ್ವದಲಿ5 ಮುನಿ ಮಾರ್ಕಾಂಡೇಯನು ಬಹುದಿನದಲಿ ಘನ ತಪವಾಚರಿಸಿ ಸೇವಿಸಿ ವನಜನಾಭನ ಪದವನಜ ಮಧುಪ ನೆಂ ದೆನಿಸುತಲಿರೆ ಗುಹದಿ ತಪೋನಿಧಿ6 ಗಿರಿಯ ಬಲದಿ ಅಹೋಬಲ ನರಸಿಂಹನ ದರ್ಶನವನು ಕೊಳುತ ನಿರುತ ಇರುತಿರಲೊಂದಿನ ಬರಲಾಷಾಢದ ಹರಿವಾಸರ ವೃತವಾ ಚರಿಸುವ 7 ದ್ವಾದಶಿ ಸಾಧನೆ ಬರಲು ಪ್ರತಿದಿನದಿ ಶ್ರೀದನ ದರ್ಶನದಾ ನೇಮದ ಸಾಧನೆ ವಿಷಯದಿ ಯೋಚಿಸುತಿರೆ ಹರಿ ಮೋದದಿ ಮುನಿಗೊಲಿದಾ ಸೂಚಿಸಿದಾ 8 ಅರುಣೋದಯದಲಿ ಸುರಗಂಗೆಯು ತಾ ವರ ಪುಷ್ಕರಣಿಯೊಳು ಬರುವಳು ತರುರೂಪದಿ ನಾ ಬರುವೆನು ಬಿಡದಿರು ಮರುದಿನದಾ ಚರಣೆ ಪಾರಣೆ9 ಎಂತು ಕರುಣವೊ ನಿರಂತರ ಭಜಿಪರ ಚಿಂತಿತ ಫಲವೀವ ಕೇಶವ ಇಂತು ಹರಿಯ ಗುಣ ಚಿಂತಿಸುತಿರಲು ನಿ ಶಾಂತದಿ ಸರೋವರದಿ ವೇಗದಿ10 ಭಾಗೀರಥಿ ಜಲದಾಗಮ ವೀಕ್ಷಿಸಿ ರಾಗದಿ ವಂದಿಸಿದ ತುತಿಸಿದ ಯೋಗಿವರನುತ ಸ್ನಾನವಮಾಡಿ ಬರುವಾಗಲೆ ಧ್ಯಾನಿಸಿದ ಹರಿಪದ11 ಆ ತರುವಾಯದಿ ಪಾರಿಜಾತ ತರು ವ್ರಾತವ ನೋಡಿದನು ವಂದಿಸಿದನು ಈತನೆ ನರಮೃಗನಾಥನೆನುತ ಮುನಿ ಪ್ರಾತ:ಪಾರಣವ ಮಾಡಿದ ಜವ12 ಮೀಸಲು ಮನದಲಿ ಶೇಷಶಯನಗಾ- ವಾಸಗಿರಿಯ ಸೇವಾ ಮಾಡುವ ಭೂಸುರ ಗಣದಭಿಲಾಷೆಗಳನು ಪೂರೈಸಿ ಪೊರೆವನೀತಾ ಪ್ರಖ್ಯಾತಾ 13 ಶ್ರೀಯುತ ಮಾರ್ಕಾಂಡೇಯರ ಚರಿತೆಯ ಗಾಯನ ಫಲವಿದನು ಪೇಳುವೆನು ಶ್ರೇಯಸ್ಸಾದನ ಕಾಯದಿ ಬಲದೀ- ಮಾನವ 14 ಸುರತರು ಕಾರ್ಪರ ಶಿರಿ ನರಸಿಂಹನೆ ಈತ ಎನ್ನುತ ನಿರುತ ಅನಂತನ ಗಿರಿಯ ಮಹಿಮೆಯನು ಸ್ಮರಿಸುವ ನರಧನ್ಯಾ ಸನ್ಮಾನ್ಯ 15
--------------
ಕಾರ್ಪರ ನರಹರಿದಾಸರು