ಒಟ್ಟು 88 ಕಡೆಗಳಲ್ಲಿ , 34 ದಾಸರು , 73 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಮೇಷ್ಟಿ ರೂಪಿಣೀ ಸ್ಥಿತಿಸುವಗೆ || ಹರಿಹರರೂಪಿಣೀ ವರದ ಸಂಹಾರಗೆ | ವಿರಹಿತವಾದ ಮಹದೇವಗೆ ಮಂಗಳ ಮಂಗಳ ಜಯಮಂಗಳ ಮಹದಾತ್ಮ ಲಿಂಗಗೆ 1 ಉತ್ಪತ್ತಿ ಸ್ಥಿತಿ ಲಯ ಕಾರಣರೂಪಗೆ | ಗುಪ್ತಗೂಢ ಗುಣತ್ರಯ ಸಾಕ್ಷಿಗೆ | ವ್ಯಾಪ್ತನಾಗಿ ತನ್ನೊಳು ತಾನಾದಗೆ | ಪ್ರಾಪ್ತುಳ್ಳ ಪುರುಷರ ಪಾಲಿಪಗೆ ||ಮಂ||2 ಹಂಸ ಪರಮಹಂಸಾಶ್ರಮದೊಳಿಹಗೆ | ಸ್ವಸಾಕ್ಷಿ ಸರ್ವ ದಂಭ ರಹಿತ ಸದೋದಿತಗೆ | ವಾಸವಾಗಿಹನು ತುಂಗಭದ್ರ ನಿಲಯಗೆ | ದಾಸ ಭೀಮಾಶಂಕರನ ಹೃದಯಾಬ್ಜದಾತ್ಮಗೆ || ಮಂ|| 3
--------------
ಭೀಮಾಶಂಕರ
ತತ್ವವಿವೇಚನೆ ಅಂತರಂಗದ ಕದವು ತೆರೆಯಿತಿಂದು ಪ ಎಂತು ಪುಣ್ಯದ ಫಲವು ಪ್ರಾಪ್ತಿ ದೊರಕಿತೊ ಎನಗೆ ಅ.ಪ ಏಸುದಿನವಾಯಿತೊ ಬೀಗಮುದ್ರೆಯ ಮಾಡಿ | ವಾಸವಾಗಿದ್ದರೋ ದುರುಳರಿಲ್ಲಿ || ಮೋಸವಾಯಿತು ಇಂದಿನ ತನಕ ತಮಸಿನ | ರಾಶಿಯೊಳಗೆ ಹೂಳಿ ಕಾಣಿಸುತ್ತಿರಲಿಲ್ಲ 1 ಹರಿಕರುಣವೆಂಬಂಥ ಕೀಲಿ ಕೈ ದೊರಕಿತು | ಗುರುಕರುಣವೆಂಬಂಥ ಶಕ್ತಿಯಿಂದ || ಪರಮ ಭಾಗವತರ ಸಹವಾಸದಲಿ ಪೋಗಿ | ಹರಿ ಸ್ಮರಣೆಯಿಂದಲ್ಲಿ ಬೀಗಮುದ್ರೆಯ ತೆಗೆದೆ 2 ಸುತ್ತಲಿದ್ದವರೆಲ್ಲ ಪಲಾಯನವಾದರು | ಭಕ್ತಿಕಕ್ಕಡವೆಂಬ ಜ್ಞಾನದೀಪ || ಜತ್ತಾಗಿ ಹಿಡಿಕೊಂಡು ದ್ವಾರದೊಳಗೆ ಪೊಕ್ಕೆ | ಎತ್ತನೋಡಿದರತ್ತ ಶೃಂಗಾರಸದನ 3 ಹೊರಗೆ ದ್ವಾರವು ನಾಲ್ಕು ಒಳಗೈದು ದ್ವಾರಗಳು | ಪರ ದಾರಿಗೆ ಪ್ರಾಣ ಜಯವಿಜಯರು || ಮಿರುಗುವ ಮಧ್ಯಮಂಟಪ ಕೋಟಿರವಿಯಂತೆ | ಸರಸಿಜನಾಭನ ಅರಮನೆಯ ಸೊಬಗು 4 ಸ್ವಮೂರ್ತಿಗಣ ಮಧ್ಯ ಸಚ್ಚಿದಾನಂದೈಕ | ರಮೆಧರೆಯರಿಂದಲಾಲಿಂಗಿತ್ವದಿ || ಕಮಲಜಾದಿಗಳಿಂದ ತುತಿಸಿಕೊಳ್ಳುತ ಹೃದಯ- | ಕಮಲದೊಳಗಿರುವ ಶ್ರೀ ವಿಜಯವಿಠ್ಠಲನ ಕಂಡೆ 5
--------------
ವಿಜಯದಾಸ
*ಸುದಿನ ದುರ್ದಿನಮೆಂಬುದವರವರ ಸಂಪ್ರಾಪ್ತಿ ಸುದಿನಮದು ಜನಿಸಿದೊಡೆ ದುರ್ದಿನಮದಳಿಯಲ್ಕೆ ವಿಧಿಲೀಲೆ ಜನನಮರಣಂಗಳೈ ರಕ್ತಾಕ್ಷಿ ಮಧುಮಾಸ ಸಿತಪಕ್ಷದ ಸದಮಲಾನ್ವಿತಮಪ್ಪ ತಾರಗೆಪುನರ್ವಸೂ ವಿಧುವಾರ ಪೂರ್ವಾಹ್ನಮಾಸೂರಿ ನಾಮಮೆದಿ ಮಾಂಗಿರಿಯ ರಂಗಪದಮಂ 1 ಬಂಧುಜನÀಮಿತ್ರರ್ಗೆ ದುರ್ದಾಂತ ದುರ್ದಿನಂ ಸಂದಮಾಂಗಿರಿರಂಗಪದನಳಿನಮಂ ಸೇರ್ದ ಸಿಂಧುಪುತ್ರಂ ಬಳಗದಾಸೂರಿಯಾತ್ಮಮದು ಚಿರಶಾಂತಿಯಂಪಡೆಯಲೈ ಚೆಂದವಹ ಕಮಲಮದು ಕಮನೀಯ ಕಾಂತಿಯಿಂ ದಂದವಡೆದಿರ್ಪುದೇ ನಿಡುಗಾಲಮದು ಬಳಿಕ ಕುಂದದಿರದೇಂ ನಿಜದೆಯಾದರ್ಶಜೀವನಂ ಶ್ರೀರಕ್ಷೆಯಲ್ತೆ ನಮಗೆ 2 ವರಮಹಾಲೆಕ್ಕಿಗರ ಶಾಖೆಯೊಳ್ ಪರಿಣತಿಯ ಕರಣಿಕಂ ತಾನಾಗಿ ವಿಶ್ರಾಮ ಜೀವನದೆ ಸರಸಕಾವ್ಯಾದಿ ಪದರಚನೆಯಿಂ ಗಮಕಿಗಳ ತಣಿಸಿಯಾನಂದಮುಣಿಸಿ ಸಿರಿಲೋಲ ಸುವಿಲಾಸ ಗೋಕರ್ಣಮಹಿಮೆಯಂ ಭರತಮಾರುತಿಭಕ್ತಿಯಾಳ್ವಾರುವೈಭವಂ ಸರಿಸದಲಿ ಕಾವ್ಯಪಂಚಕ ರಚಿಸಿ ಪಂಚತ್ವವೈದಿದರ್ ಧನ್ಯರಲ್ತೆ 3 ಕಿವಿಚುರುಕು ನಿಡುಮೂಗು ದೃಷ್ಟಿಪಾಟವಹೊಳಪು ಸವಿನೆನಪಿನಂಗಳಂ ಬೇವುಬೆಲ್ಲದಪದರು ರವಿಯೆಡೆಗೆ ನಿಟ್ಟಯಿಸಿ ಧೀರ್ಘಾಯುವೆಂದೆನಿಸಿ, ಶರದಶಕಗಳ ಕಳೆದನು ಇವಗೆ ಮಣಿವುದೆ ಬೆಲ್ಲ ಹರಿಚಿಂತನೆಯಬಲ್ಲ ದಿವರಾತ್ರಿ ಸಂತೃಪ್ತಿ ಮಾಳ್ಪಕಾರ್ಯಂಗಳಲಿ ತವಕದಿಂ ಸುತ್ತುವರೆದಿರ್ಪರೈ ಹಿರಿತನದ ನಮ್ರತೆಗೆ ಬೆರಗಾಗುತ 4 ಸುತರತ್ನರೀರ್ವರಂ ಸುತೆಯರಂ ಸೊಸೆಯರಂ ಹಿತಮಪ್ಪಮೊಮ್ಮಂದಿರಂ ನೆಂಟರಿಷ್ಟರಂ ಮಿತವಚನದಿಂ ನಲಿಸಿ ಮನದಳಲಿಗೆಡೆಮಾಡಿ ವೈಕುಂಠಮಂ ಸೇರಿದೈ ಶತಪತ್ರಲೋಚನದ ಪರಿಚರ್ಯೆಯಂ ಗೈದು ಶತವರುಷಮಂ ತುಂಬುಜೀವನವ ತಾಳ್ದೆ ಸ ತ್ಪಥವಿಡಿದು ನಿನಗಾತ್ಮಶಾಂತಿಯುಂಟಾಗಲೈ ತವಕುಲಂ ವರ್ಧಿಸಿರಲೈ5
--------------
ಪರಿಶಿಷ್ಟಂ
ಅಥ ಹನುಮದ್ವ್ರತ ಕಥಾ ಸುಳಾದಿ ಧ್ರುವ ತಾಳ ವೃತವೆ ಉತ್ತಮ ವೃತವೆಂದು ಪೇಳಿಹರು ಅತುಳ ಜ್ಞಾನನಿಧಿ ವಿಜಯಾಖ್ಯ ಗುರುಗಳು | ಸತತ ಅಧ್ಯಾತುಮ ಅನಂತ ವೃತವೆಂದು | ಕ್ಷಿತಿಯೊಳು ಈ ವೃತಕೆÀ ಸರಿಗಾಣೆನೊ | ಪತಿತ ಮಾನವರ ಉದ್ಧಾರಗೋಸುಗವಾಗಿ ದ್ವಿತಿಯ ಉತ್ತಮ ವೃತವು ಹನುಮದ್ಪ್ರತವೂ | ಯತನ ಜ್ಞಾನೇಚ್ಛಾ ಶಕ್ತ್ಯಾದಿಗಳಿಗೆ ನಿರುತ | ಜತೆಯಾಗಿ ಕಾರ್ಯ ಮಾಳ್ಪ ಜ್ಞಾನಾಖ್ಯವೃತವೊ | ಅತಿಶಯವಾದ ಜ್ಞಾನ ಭಕ್ತಿ ವಿರಕ್ತಿವೀವುದು | ಮತಿವಂತರು ಮನಕೆ ತಂದು ತಿಳಿದು | ಕ್ಷಿತಿಪತಿ ಧರ್ಮರಾಜನೆಸಗಿದ ಮಹಾ ವೃತವೊ | ಪತಿಭಕುತಿಯುಕುತಳಾದ ದ್ರೌಪದಿಯು | ಪತಿ ಮೂರ್ಲೋಕದ ಶ್ರೀ ಕೃಷ್ಣನುಪದೇಶದಂತ್ಯೆ | ಮಿತ ಜ್ಯಾನದಿಂದ ಚರಿತ ವ್ರತವೊ | ಹಿತವಂತ ಹನುಮಂತ ಪಿತ ರಾಮನಿಗೆ ಪೇಳೆ ಆ | ಚ್ಯುತನಾದ ರಾಮನುಮತಿವಾನ್ ಹನು | ಮಂತನ ಭಕುತಿಗೊಲಿದು ಮಾಡ್ಡ ವೃತವೊ | ಸತತ ಸೂತರು ಶೌನಕಾದ್ಯರಿಗಿದರ ಮಹಿಮೆ | ಮಿತಿ ಇಲ್ಲದೇ ಪೇಳಿ ಮಾಡಿಸಿದ ವೃತವೊ | ವೃತತಿಜಾಸನ ಪ್ರಿಯ ಸುತ ಸುಂದರ ವಿಠಲನ ಭ | ಕುತಿ ಜ್ಞಾನವೀವ ಮಹಾ ಶ್ರೇಷ್ಠ ವೃತವೊ 1 ಮಟ್ಟತಾಳ ಜಾನ್ಹವೀ ತೀರದಲಿ ಶೌನಕಾದ್ಯ ಮುನಿಗಳು | ಧ್ಯಾನಿ ಸೂತರ ಕುರಿತು ಸಾನುರಾಗದಿ ನಮಿಸಿ | ಮೇಣು ಭಕುತಿಯಿಂದ ಙÁ್ಞನವಂತರೆ ನಿಮ್ಮಿಂ | ನಿತ್ಯ | ಧೇನಿಸುವೆವು ಹರಿಯಾ ಪುನೀತರ ಮಾಡುವಾ | ಕಾಣೋವನ್ಯ ವೃತವು ಆವುದುಪೇಳೆನಲು | ನಿತ್ಯ ಶೂದ್ರಾದಿ ನಾಲ್ಕು | ಜಾಣ ವರ್ಣರಿಂದ ಮಾಡ್ವದಕ್ಕೆ ಯೋಗ್ಯವೊ | ಏನು ಬೇಡಿದರೆ ತಡಿಯದೆ ಕೊಡುವುದೊ | ಜ್ಞಾನಿ ಜನಗಳಿಗೆಲ್ಲ ಮಂಗಳತಮ ವೃತವು | ಪುತ್ರಾದಿಗಳೀವುದು ಶ್ರೇಣಿ ದಿನ ಪ್ರತಿ ದಿನದಲ್ಲಿ ವರವಿದ್ಯ ಪ್ರದವೊ ಹಾನಿ ಲಾಭಗಳಲ್ಲಿ ಹನುಮಂತನ ನೆನಸೆ | ಮಾನನಿಧಿ ಸುತ ಸುಂದರ ವಿಠಲನ | ಧ್ಯಾನ ಧಾರಣವೀವ ಉತ್ತುಮಾಮಹವೃತವೊ 1 ರೂಪಕ ತಾಳ ಒಂದಾನೊಂದು ಸಮಯದಲ್ಲಿ ಶ್ರೀ ವ್ಯಾಸ ಶಿಷ್ಯ | ವೃಂದದಿಂದೊಡಗೂಡಿ ಯುಧಿಷ್ಠರನ ನೋಡಲು | ಅಂದುಳ್ಳ ದ್ವೈತ ವನಕೆ ನಡೆತಂದರು ಏನಂಬೆ | ಚಂದಾದ ನಿರ್ವೈರ ಮೃಗವೃಂದಗಳಿಂ ಕೂಡಿರುವ | ಕುಂದ ಮಂದಾರಾದಿ ಪುಷ್ಪಫಲ ವೃಕ್ಷಗಳಿಂ ಶೋಭಿಪ | ಕುಂದು ದೂರೋಡಿಸಿದ ಜ್ಞಾನಿಗಳ ಸಮೂಹವು | ಛಂದದಲಿ ಕಾವ್ಯಷಡಂಘ್ರಿ ನಿರತರಾಗಿ | ಮುಂದೆ ಅಧ್ಯಯನ ಶ್ರುತಸಂಪನ್ನರಾದವರು | ಒಂದೊಂದು ವೇದ ಋಗು ಯಜು:ಸಾಮಾಥರ್ವಣ ಒಂದೋಂದು ಶಾಖಾಶಾಸ್ತ್ರದಿ ಪ್ರವಚನಾಸಕ್ತರು | ಮಿಂದು ಹರಿಪದಜಲದಿ ಚತುರ ವೇದ ಘೋಷದಿ | ಸಂದೇಹವಿಲ್ಲದಲೇ ಭಗವದ್ಗೀತಾ ಲೀಲಾ | ಎಂದೆಂಬುವ ಹರಿಕಥಾಮೃತ ಪಾನ ಮಾಡುವ | ಸಂದೋಹ ಮುನಿಗಳಿಗೆ ನಿತ್ಯನ್ನದಾನವ ಮಾಡಿ | ಬಂಧುಗಳಿಂ ಸಹಿತ ಇರುವ ಯುಧಿಷ್ಟರನನ್ನು | ಸುಂದರ ವಿಠಲಾತ್ಮಕ ವ್ಯಾಸದೇವನು | ಅಂದು ದ್ವೈತವನದಲ್ಲಿ ಕೃಪಾ ದೃಷ್ಟಿಯಿಂದ ನೋಡಿದನು 3 ಕೃಷ್ಣದ್ವೈಪಾಯನಾ ಮುನಿಗಳಾಗಮ ಕೇಳಿ | ಕೃಷ್ಣೆ ಸಹಿತಾ ಅನುಜರೊಡನೆ ಕೂಡಿ | ಜೇಷ್ಠನಾದ ಯುಧಿಷ್ಠರನು ತಾ ದೂರ ನಡೆತಂದುವಾ | ಸಿಷ್ಟ ಕೃಷ್ಣಗೆ ಸಾಷ್ಟಾಂಗ ಪ್ರಣಾಮಗಳ ಮಾಡಿ ನಿ | ರ್ದಿಷ್ಟವಾದೆಕಾಂತ ಸ್ಥಳಕೆ ಕರೆತಂದು | ಶ್ರೇಷ್ಠವಾದಾಸನದ ಮೇಲೆ ಕುಳ್ಳಿರಿಸಿ | ಜೇಷ್ಟಾದಿಕೃಷ್ಣೇಯೊಡನೆ ಉತ್ಕøಷ್ಠ ಪೂಜೆಯ ಮಾಡೆ ಪರ ಮೇಷ್ಠಿ ಜನಕನು ತಾನು ತುಷ್ಟ ನಾಹೆ | ಶಿಷ್ಟಾಚಾರದಂತೆ ಕುಶಲ ಪ್ರಶ್ನೆಯು ಮಾಡ್ದ ನಿ | ರ್ದುಷ್ಟ ಭೀಮಾರ್ಜುನರೆ ಅಶ್ವಿನಿಯರೇ ಮನ | ಮುಟ್ಟಿ ಹರಿಪಾದ ಭಜನೆಯ ಮಾಡಿ ಸುಖಿಗಳಾಗಿಹ್ಯರೇ? ಧಿಟ್ಟತನದಲೆ ತಪವನೆಸಗಿ ಕಿರಿಟಯು | ನಿಷ್ಠಿಯಲಿ ಮಹರುದ್ರನೊಲಿಸಿ ಪಾಶುಪತವೆಂಬು | ತ್ಕøಷ್ಟಾಸ್ತ್ರ ಸಂಪಾದನೆಯ ಮಾಡಿದದು ಕೇಳಿ | ಹೃಷ್ಟನಾದೆನೊ ನಾನು ನಿಮ್ಮಿಂದಲಿ ಕೂಡಿ | ಕಷ್ಟಬಡುತಿರುವ ನಿನ ದುಃಖ ಶಾಂತ್ಯರ್ಥ | ಇಷ್ಟವೀವುದಕಾಗಿ ಬಂದಿಹನು ರಾಜಾಯು | ದ್ಯಿಷ್ಟರನೆ ಕೇಳುತ್ತಮ ವೃತವು ನಿನಗೋಸುಗ | ನಿಷ್ಠಿಯಿಂದಲಿ ಧರ್ಮತನಯ ನುಡಿದನು 4 ತ್ರಿವಿಡಿ ತಾಳ ನಮೊ ನಮೊ ತಾತ ಮಹಾ ಖ್ಯಾತವಂತರೆ ನಿಮಗೆ | ನಮೊ ನಮೊ ನಮೊ ಎಂದು ಬಿನ್ನೈಸುವೆ | ಶ್ರಮ ಪರಿಹರವೃತವಾವುದದÀರ ಮಹಿಮೆ | ಸುಮನಸರೊಡೆಯನೆ ಪೇಳಯ್ಯಾ ಜೀಯ್ಯಾ | ಕುಮತಿ ಪರಿಹರಿಸುವ ದೇವತೆ ಆರು ಉ | ತ್ತಮ ನಿಯಮ ಆವುದು ಪೂಜಾ ಕ್ರಮವು | ಶಮೆ ದಮೆವೀವ ನಿಯಮ ತಿಥಿ ಆವುದು | ರಮೆ ರಮಣನೆÉ ಆವ ಮಾಸದಲಿ ಮಾಡೋದು | ಶಮಲ ವಿವರ್ಜಿತ ವ್ಯಾಸದೇವನೆ ನಿಮ್ಮಾ | ಗಮನವು ಎಮ್ಮಯ ಕಷ್ಟ ದೊರೋಡಿಸಲು | ಸಮೀಚೀನ ಮತಿಯಿತ್ತು ಭಕ್ತರ ಪಾಲಿಪುದೆನುತ | ಸಮಚಿತ್ತ ಉಳ್ಳ ಮುನಿಗಳ ಕೂಡ ನಮಿಸಲು | ಭ್ರಮಣ ಮತಿಯ ಕಳೆವ ಹನುಮಾನ್ ಹ ನುಮನ್ನಾಮ ಪುನಃ ಪುನಃ ಸ್ಮರಿಸಿ ಶ್ರೀವ್ಯಾಸರು | ಆಮಮ ಪೇಳಲೇನೊ ಹನುಮದ್ವ್ರತವೋ | ಧೀಮಂತ ಹನುಮಂತನ ನಾಮೋಚ್ಚಾರಣೆಯಿಂದ | ಸಮಸ್ತ ಕಾರ್ಯ ಸಿದ್ದಿಪದು ಸಂಶಯ ಬ್ಯಾಡಿ | ಆ ಮಹಾ ದುಷ್ಟ ಗ್ರಹೋಚ್ಛಾಟನ ಜ್ವರಾದಿ | ತಾಮಸ ರೋಗ ನಿವರಣವಾಗುವದು | ಪ್ರೇಮದಿಂದಲಿ ಕೇಳು ಬಹು ವಾಕ್ಯಗಳಿಂದೇನು ? ಸೀಮೆಗಾಣದ ಅಭೀಷ್ಟಪ್ರದಾಯಕವೊ ನೀ ಮರೆಯದಿರು ಹಿಂದೆ ದ್ವಾರಕಿಯಲ್ಲಿ ಶ್ರೀ ಮದ್ವಿಷ್ಣುವೆ ಕೃಷ್ಣ ಪಾಂಚಾಲಿಯನಿ ಸ್ಸೀಮ ಭಕುತಿಗೆ ವೊಲಿದು ಈ ಮಹಾ ಹ ನುಮದ್ವ್ರತವನ್ನು ಉಪದೇಶಿಸಿ | ನೇಮದಿಂದಲೀ ವ್ರತವು ಮಾಡಿರೆನಲು ಕಾಮಿತಫಲವೀವಾ ವ್ರತದ ಮಹಿಮೆ ಆ | ಸ್ವಾಮಿ ಅನುಗ್ರಹದಿ ಸಂಪದೈಶ್ವರ್ಯದಿ ಆ ಮಹಾ ಸ್ತೋಮಗಳು ಪ್ರಾಪ್ತವಾಗಲು ನಿಮಗೆ | ಈ ಮಹಾ ವೃತ ಮಹಿಮೆ ತಿಳಿಯದ ಪಾರ್ಥನು ಪ್ರೇಮದಿಂ ದ್ರೌಪದಿ ಧರಿಸಿದ ದೋರವ ನೋಡಿ ಹೇ ಮಹಿಷಿಯೆ ಇದೆನೆನ್ನಲಾಗಿ | ತಾಮರಸನಯನೆ ಶ್ರೀ ಹನುಮದ್ದೋರವನ್ನೆ | ಆ ಮಹಾ ಐಶ್ವರ್ಯ ಗರ್ವಿಕೆ ಕ್ರೋಧಾದಿ ನಿ ಸ್ಸೀಮ ಪರಾಕ್ರಮಿ ನುಡಿದ ಅರ್ಜುನನು ಕಾಮಿನಿಯೆ ಕೇಳು ಆ ಹನುಮನೆಂಬೊ ಕಪಿ ನಾ ಮುದದಿ ಧ್ವಜದಲ್ಲಿ ಧರಿಸಿರುವೆನು ಈ | ಮರ್ಮವನು ತಿಳಿಯದೆ ಆ ವನಚರ ಶಾಖಾಮೃಗ | ಕಾಮಿತ ಫಲ ಕೊಡಬಲ್ಲದೆ ಕೇಳಿನ್ನು ಪಾಮರ ವ್ರತದಿಂದ ವಂಚಿಸಿದೆಲ್ಲದೇ ನೀನು ಕಾಮಿ ಜನರ ತೆರದಿಂದಲಿ ಅರ್ಜುನನು ಭಾಮೆ ದ್ರೌಪದಿ ಧರಿಸಿದ ತ್ರಯೋದಶ ಗ್ರಂಥಿಯುಕ್ತ ಆ ಮುದದ ದೋರವನು ಹರಿದು ಬಿಸಾಟಲು ಹೇಮಾದಿ ಸಕಲ ಸಂಪದೈಶ್ವರ್ಯ ರಾಜ್ಯವು ಭೂಮಿ ಸಹಿತ ಪ್ರಾಪ್ತವಾದುದೆಲ್ಲ ಪೋಗೆ | ಶ್ರಿಮದಾಂಧದಿಂದ ಪ್ರಾಪ್ತವ್ಯ ದುಃಖ ಫಲವು | ಪರಿಯಂತ | ರಾಮ ಮನೊರಮನು ಇನಿತು ನುಡಿಯೆ | ಸ್ವಾಮಿ ಆಜ್ಞವ ತಿಳಿದ ದ್ರೌಪದಿ ದೇವಿಯು | ಹೇ ಮಹತ್ಮರೆ ಶ್ರೀವ್ಯಾಸರ ನುಡಿ ನಿಜವೋ ನೇಮಗಳೆಲ್ಲಾ ತಿಳಿಯಲೋಶವೆ ಎಂದಿಗು 5 ಧ್ರುವ ತಾಳ ಕೇಳಯ್ಯಾ ಧರ್ಮರಾಜ ಆಲಸ ಮಾಡದೆ | ಪೇಳುವೆ ನಿನಗೊಂದು ಪುರಾತನ ಕಥೆಯು | ಆಲಿಸಿ ಮನಕೆ ತಂದು ಬಾಳು ಚನ್ನಾಗಿ ನೀನು | ಶೀಲೆ ಸೀತೆಯ ನೋಡುವ ಇಚ್ಛಾಉಳ್ಳ ಮಾ ನಿತ್ಯ ಲಕ್ಷ್ಮಣನೊಡಗೂಡಿ | ಮೇಲಾದ ಋಷ್ಯಮೂಕ ಗಿರಿಯ ಮಧ್ಯದಲ್ಲಿ ಶೀಲ ಭಕುತಿಯುಳ್ಳ ಹನುಮಂತನ ದರ್ಶನಾಗೆ ಆಳುವ ಕಪಿ ರಾಜ್ಯ ಸುಗ್ರೀವನ ಸಖ್ಯವನು ಬ ಹಾಳ ಮತಿಯುಳ್ಳ ವಾಯುಜ ಮಾಡಿಸೆ | ಮಾಸ ಮಳೆಗಾಲವು ವಾಸ ಮಾಡ್ಡ | ಕಾಲದಲಿ ಹನುಮನು ರಾಮದೇವಗೆ ನಮಿಸಿ | ನೀಲ ಮೇಘ ಶ್ಯಾಮ ಶ್ರೀ ರಾಮ ನೀನಿನ್ನ | ಬಾಲನ ಬಿನ್ನಪ ಮನಕೆ ತರಲು | ಪೇಳುವೆ ನಿಮ್ಮ ಸನ್ನಿಧಾನದಲೆನ್ನ ನಾಮ ಮಹಿಮೆ ಮೇಲುಸಿಲೆಯನದ್ಧರಿಸಿದ ಶ್ರೀರಾಮ ನೀನಙ್ಞನೆ | ಕಾಲ ಜನನದಲಿ ಇಂದ್ರನಿಂದಲಿ ಎನ್ನ ಮೇಲಾದ ವಜ್ರಾಯುಧದಿಂದ ಹನುಘಾತಿಸಲು ಭೂಲೋಕದಲ್ಲಿ ಅಂದಿನಾರಭ್ಯ ಹನುಮನೆಂದು ಖ್ಯಾತನಾಗಿ | ಕೇಳಯ್ಯಾ ಅಂಜನಾದ್ರಿಯಲ್ಲಿ ಸೂರ್ಯೋದಯ | ಕಾಲಕೆ ಪ್ರಕಟನಾದ ಬಾಲ ರವಿಯ ನೋಡಿ ಹಣ್ಣೆಂದು | ಮೇಲಾಗಿ ಭಕ್ಷಿಪುದಕೆ ಉಡ್ಡಾಣ ಮಾಡಲಾಗಿ | ಈ ಲೀಲೆಯ ತಿಳಿದು ಲೋಕ ಶಿಕ್ಷಣ ಗೋಸುಗ | ಕಾಲವಜ್ರಾಯುಧದಿಂದ ಹೊಡೆಯಲು ಮೂರ್ಛಿತ | ಬಾಲನಂತೆ ಬಿದ್ದವನೆನ್ನ ನೋಡಿ ಸ್ವಾಹಾ | ಲೋಲನ ಸಖನಾದ ವಾಯುದೇವನು ಎನ್ನ | ಮೇಲಿನ ಪ್ರೀತಿಯಿಂದ ಸರ್ವಜೀವರ ಶ್ವಾಸ | ಕಾಲನಾಮಕ ಭಗವಾನಿಚ್ಛೆಯಂತ ತೃಟಿ | ಕಾಲಬಿಡದೆ ಮಾಡ್ವ ಶ್ವಾಸ ನಿರೋಧಿಸೆ ಶಚಿ | ಲೋಲನಿಂದನ್ನ ಪುತ್ರನ ಕೆಡಹಿರಲವನನ್ನು ಈ | ಕಾಲಲವದಲ್ಲಿ ಕೆಡಹೆನೆನಲು ಆ | ಕಾಲದಲಿ ಬ್ರಹ್ಮಾದಿ ದೇವತೆಗಳು ಸಾಕ್ಷಾತ್ಕಾರರಾಗಿ | ಓಲೈಸಿ ಪೆಳ್ದ ಮಾತು ಎನಗೋಸುಗ ಆಂಜನೇಯಾ | ಬಾಲನೆ ಚಿರಜೀವಿಯಾಗು ನೀನೆ ಪರಾಕ್ರಮಿ | ಮೇಲೆನಿಪ ಶ್ರೀರಾಮನ ಕಾರ್ಯಸಾಧಕನಾಗೆನುತ | ಬಾಲ ಹನುಮನ ಪೂಜೆ ಮಾಡ್ಡರು ದೇವತೆಗಳು | ಮೇಲಾದ ಮಾರ್ಗಶಿರ ಶುದ್ಧ ತ್ರಯೋದಶಿ | ಕಾಲ ಅಭಿಜಿನ್ ಮೂಹೂರ್ತದಲ್ಲಿ ಆರು ಪೂಜಿಪರೊ | ಆಲಸವಿಲ್ಲದೆ ಪುರುಷಾರ್ಥ ಹೊಂದುವರೆಂದು | ತಾಳ ಮ್ಯಾಳರೊಡನೆ ವರವ ನೀಡಿ ಪೋದರು | ಆಲಯಾ ಸ್ವರ್ಗ ಸತ್ಯಾದಿ ಲೋಕಕೆ ಅಂದು ಹೀಗೆ | ಪೇಳೆ ಸುಂದರ ವಿಠಲ ರಘುರಾಮನು ನಸುನಗೆ | ಯಾಲಿ ಒಲಿದು ಹನುಮಗೆ ಹಸನ್ಮುಖನಾಗಿ ಇರಲು 6 ಮಟ್ಟತಾಳ ಭಕುತ ವತ್ಸಲ ನೀನು ಭಕುತರಿಚ್ಛವ ನೀನು | ಭಕುತ ಭಾಂಧವ ನೀನು ಭಕುತರೊಡಿಯ ನೀನು | ಭಕುತ ಪಾಲಕನೆಂಬ ಬಿರುದುಳ್ಳವ ನೀನು | ಭಕುತರಿಂದಲಿ ನೀನು ನಿನ್ನಿಂದಲೆ ಭಕುತರು | ಅಕಳಂಕ ಐಶ್ವರ್ಯ ಸತು ಚಿತು ಆನಂದಾತ್ಮಾ | ಮುಕುತಿ ಪ್ರದಾತನೆ ಸರ್ವ ಸ್ವಾಮಿ ನೀನು | ಸಕಲ ಲೋಕಗಳೊಡೆಯ ನಿನ್ನಿಂದಲೆ ಸರ್ವ ವ್ಯಕುತವಾಗ್ವದು ಸತ್ಯ ಸರ್ವಙ್ಞನು ನೀನು | ಭಕುತರ ಮನದಿಂಗಿತ ತಿಳಿಯದವನೆ ನೀನು | ಅಖಿಳ ಬ್ರಹ್ಮಾಂಡÀರಸನೆ ನಮೊ ನಮೊ ನಮೊ ನಮೊ | ಭಕುತರಿಂದಲೇ ನಿನ್ನ ಖ್ಯಾತಿ ಮೂರ್ಲೋಕಕ್ಕೆ ಭಕುತರೇ ನಿನ್ನಯಾ ಮಹಿಮೆಯ ಹೊಗಳುವರು | ಭಕುತರು ನಿನ್ನಿಂದಲೆ ಕೀರ್ತಿವಂತರÀಹರು | ಅಕುಟಿಲ ಪ್ರಭೋ ನೀನು ನಾ ನಿನ ನಿಜ ಭಕ್ತ | ಸಕಲ ಕಾಲದಲ್ಲಿ ನಿನ್ನನಾ ಮರೆಯದಲೇ | ಮಾಳ್ಪದು ನಿಜವಾಗೆ | ಶಕುತನೆ ಎನ ಕೀರ್ತಿ ನಿನ್ನಿಂದಾಗಲಿ ವಿಭೋ | ಉಕುತಿ ಲಾಲಿಸು ಪ್ರಭೋ ತವಚಿತ್ತವ ಧಾರೆ | ಭಕುತ ಹನುಮಂತ ಇನಿತು ವಿಙÁ್ಞಪಿಸಿ ನಿಲಲು | ಪ್ರಕಟಿತ ಅಶರೀರ ವಾಕ್ಯವು ಬಿಡದಲೆ | ಸಕಲ ನುಡಿ ಹನುಮಾ ಸತ್ಯನಾಡಿದನೆನಲು | ಸುಕರ ಏಕಮೇವ ದ್ವಿತಿಯ ಸುಂದರವಿಠಲ ತುಷ್ಟನಾಹೆ 7 ಝಂಪಿತಾಳ ಮಾಸಮಾರ್ಗಶೀರ್ಷ ಶುದ್ಧ ತ್ರೊಯೋದಶಿ | ಆ ಸುಮುಹೂರ್ತ ಜಯಾ ಅಭಿಜಿನ್ ಕಾಲಕೆ | ಶ್ರೀಶರಾಮನು ಹನುಮದ್ವ್ರತವ ಮಾಡ್ಡ ತ್ರಯೋ | ದಶ ಗ್ರಂಥಿüಯುತ ಹರಿದ್ರಾದೋರಗಳಲಿ | ಭಾಸುರಾಮತಿವೀವ ಹನುಮನಾವ್ಹಾನಿಸಿ | ಪೇಶಲಾಪೀತಗಂಧ ವಸ್ತ್ರ ಪುಷ್ಟಿಗಳಿಂದಲೀ | ಶ್ರೀಸೀತೆವಕ್ಷಸ್ಥಳದಿಪ್ಪ ನಿತ್ಯಾವಿಯೋಗಿನಿ | ಆ ಸುಗ್ರೀವ ಲಕ್ಷ್ಮಣಾದಿಗಳೊಡನೆ ನೆಸಗಿದನೇನೆಂಬೆ | ಲೇಶಬಿಡದೇ “ಓಂ ನಮೋಭಗವತೇ ವಾಯುನಂದನಾಯ” | ಈ ಸುಮಂತ್ರವ ಜಪಿಸಿ ತಾ ಸಹಸದಿ ಮಾಡ್ಡನೋ | ದೇಶಪರಿಮಿತ ಪ್ರಸ್ಥತ್ರಯೋಶಗೋಧೂಮವನು | ಆ ಸುದಕ್ಷಣೆ ತಾಂಬೂಲ ಸಹ ದ್ವಿಜರಿಗಿತ್ತದಾನ | ಮೀಸಲಾ ಮನದಿ ಈ ಸತ್ಕಥೆಯನು ಕೇಳಿ | ಭೇಶಮುಖಿ ಸೀತಿಯಳ ಕೊಡ್ದನೆಂಬದು ಖ್ಯಾತಿ | ಆ ಸತ್ಯಲೋಕರಿಗೆ ಆದುದು ಅಚ್ಚರವೆ ಪೂರ್ಣಕಾಮನಿಗೆ | ಕ್ಲೇಶನಾಶನವು ಸುಗ್ರೀವನಿಗೆ ವಿಶೇಷವಾದುದು ಸತ್ಯವೆನ್ನಿ | ತೋಷದಲಿ ವಿಭೀಷಣ ಶ್ರೀರಾಮನಾಙÉ್ಞಯಿಂ ಮಾಡ್ಡು | ದೇಶಲಂಕೆಯ ರಾಜ್ಯವನು ಪಡೆದನು | ಹೇ ಸುಮತಿಯೇ ಕೇಳಂದಿನಾರಭ್ಯ ಭೂಲೋಕಕೆ | ಲೇಸುವಿಶ್ರುತವಾದಿತೈ ಹನುಮದ್ವ್ರತವೂ | ಪರಿಯಂತ ಮಾಡ್ಡುದ ಕೀಸು ಉದ್ಯಾಪನೆಯಯ್ಯಾ ಆದಿ ಮಧ್ಯಾಂತಕೆ | “ಮಾಸಾನಾಂ ಮಾರ್ಗಶೀರ್ಷೋಹಂ” ಎಂದು ಗೀತೆÀಯಲಿ ಆ ಸ್ವಾಮಿ ದಿವ್ಯನುಡಿಯುಂಟು ಕೇಳ್ ಧರ್ಮಜನೆ | ಸ್ತ್ರೀಸಹಿತ ಅನುಜರೊಡನೇ ಈ ವ್ರತವನು | ಮೇಶನಾಜ್ಞೆಯಿದೆಂದು ಮಾಡಲು ನಿನಗೆ ರಾಜ್ಯ | ಕೋಶ ಭಾಂಡಾರಪ್ರಾಪ್ತಿಯಾಗುವದು | ಲೇಶ ಸಂಶಯ ಬ್ಯಾಡೆನಲು ಶ್ರೀ ವ್ಯಾಸ | ಆ ಸುಂದರ ವಿಠಲನ ಭಕುತರು ಮುದಭರಿತರಾಗೆ 8 ರೂಪತಾಳ ರವಿಯು ವೃಶ್ಚಿಕ ರಾಶಿಗೆ ಬರಲಾಗಿ | ಸವೆಯಾದ ಪದವೀವ ವ್ರತವಮಾಡುವದಕ್ಕೆ | ಕವಳಾ ಅಜ್ಞಾನಾಖ್ಯ ರಾತ್ರಿಕಳೆದು | ಸುವಿಮಲಾಜ್ಞಾನಾಖ್ಯ ಪ್ರಾತಃ ಕಾಲದಲೆದ್ದು | ಕವಿವ್ಯಾಸರ ಮುಂದೆ ಮಾಡಿ ಧರ್ಮಜನು | ಸುವಿವೇಕಬುದ್ಧಿಯಿಂ ಸ್ನಾನಾದಿಗಳ ಮಾಡಿ | ಹವಿಷಾದಿ ದ್ರÀ್ರವ್ಯಗಳಲಿ ಹರಿಯಚಿಂತಿಸಿ ಮಾ | ಧವÀನಾಜ್ಞೆಯಂತೆ ಉದ್ಯಾಪನವಂಗೈದು | ಕವ್ಯವಾಹನನಲ್ಲಿ ಮೂಲಮಂತ್ರದಿಂದ | ಲವಕಾಲ ಬಿಡದಲೆ ವೇದಸೂಕ್ತಗಳಿಂ ಹೋಮಿಸಿ | ನವಭಕುತಿಯಲಿ ಹನುಮಂತನ ವ್ರತಾಚರಿಸಲು | ಹವಣಿಸಿ ಸಂವತ್ಸರವು ಪೋಗಲು ಪಾಂಡವರು | ಬವರದಲ್ಲಿ ಕೌರವರಗೆ
--------------
ಸುಂದರವಿಠಲ
ಅನುದಿನ ವಿಷಯ ಸುಖವು ಎಂದು ಕನಸಿಲಾದರು ಸ್ಮರಿಸಲಾಗದು ಮನವೆ ಪ ಘನ ಸಂತೋಷವಿಲ್ಲವಿದು ನಿತ್ಯಾನಿತ್ಯ ಸುಖ ಬಯಸಿ ಮನದಲ್ಲಿ ನೀ ಸ್ಮರಿಸೆ ಹರಿಯೆ | ತೊರೆಯ ಅ.ಪ ಅಶನ ವಸನ ಪಶುವ್ರಾತ ವಶವಿರುವಾಭರಣ ಹಸನಾದ ರಥ ಪದಾತಿಗಳು ಸ್ವಸ್ವರೂಪವಲ್ಲ ಭಿನ್ನ ತಿಳಿಯೊ | ಮಮತೆ ಅಳಿಯೊ 1 ಬುದ್ಧಿ ವಿದ್ಯಾಕುಶಲ ಗತಿ ಅಧ್ವರ್ಯ ಪ್ರಭು ಮನ್ನಣೆ ಶುದ್ಧ ರೂಪ ಲಾವಣ್ಯ ಯೌವನ ಸಿರಿ ಶೌರ್ಯ ಪರಾಕ್ರಮ ವದ್ಯವಾಗಿ ಪೋಪುದು ಸ್ಥಿರವಲ್ಲ | ಸುಳ್ಳಲ್ಲ 2 ಇಚ್ಛೆಯಿಲ್ಲದೆ ನೀನು ಜನರ ಮೆಚ್ಚಿಗಾಗಿ ಮಾಡಿದ ದಾನ ವೆಚ್ಚವಾಗಿ ಪೋಪವೊ ಧನವಲ್ಲದೆ ನಿಚ್ಚಳ ಪುಣ್ಯಬಾರದು ಮನವೆ ಹೆಚ್ಚಿನ ಸ್ತೋತ್ರಕೆ ಮರುಳಾಗಿ ನೆಚ್ಚದಿರು ವಿಹಿತೋಕ್ತಿಯ | ಬಿಡದಿರು ಸನ್ಮತಿಯ 3 ಆರ್ತನಾಗದಲೆ ನೀನು ಕೀರ್ತಿಗೋಸುಗ ಕಥಾಶ್ರವಣ ಕರ್ತಭಾವದಿ ಸತತ ಮಾಡೆ ವರ್ತಿಸುವ ಪುಣ್ಯಪ್ರಾಪ್ತಿ ವೈಷಿಕ ಸುಖವಲ್ಲದೆ ಶಾಸ್ತ್ರಮರ್ಮ ತಿಳಿಯದೊ | ಅಹಂ ಮಮವಳಿಯದೊ 4 ಮಾನಿತನು ನಾನೆಂದು ನಾನಾ ಮತವಾಶ್ರಯಿಸಿ ಜ್ಞಾನಿಗಳಿಗೆ ಶಿರಬಾಗಲೊಲ್ಲಿ ಏನು ಇದರಿಂದೆಂಬ ತ್ರಿಕರಣ ಶುದ್ಧಿಕಾರಣ ದ್ಯುನದಿ ಸ್ನಾನವಾಹವಲ್ಲಾ | ಇದು ಬಿಡಸಲ್ಲಾ 5 ಕೈಗೊಳುವುದೇ ಮಾನ ಅನ್ಯಾಧೀನವೆನ್ನದೆಂಬುದೇ ಲಜ್ಜಾ ಅನುಭವ ಜ್ಞಾನಿಗಳ ಸಹವಾಸ ಸ್ನಾನ ಸಚ್ಛಾಸ್ತ್ರಾಲಾಪ ನಾನು ನನ್ನದು ಬಿಡುವುದೇ ತ್ಯಾಗ | ಇದೇ ಯೋಗ 6 ಕರಣ ವಿಷಯಗಳಲ್ಲಿ ಹರಿಯ ಚಿಂತಿಸುತ ನಿತ್ಯ ವರ ಯೋಗ ಭೋಗದಲ್ಲಿ ವರ ರಾಮಚಂದ್ರವಿಠಲರಾಯನು ನಿನ್ನ ದುರಿತ ಕಳೆದು ಪಾಲಿಸುವ7
--------------
ವಿಜಯ ರಾಮಚಂದ್ರವಿಠಲ
ಅರಿತು ನಡೆಯಲಿ ಬೇಕು ನರಕಾಯವೆತ್ತಿದ ಮೇಲೆಅರಿಯದಿದ್ದರೆ ನರಕವೇ ಪ್ರಾಪ್ತಿ ಪ ಭಂಗ ಹರಿಯೆ 1 ಭಕ್ತಿಹೀನರ ಮನೆಯ ಪಟ್ಟು ಸುಪ್ಪತ್ತಿಗೆಗಿಂತಭಕ್ತರ ಮನೆಯ ಕಡೆಬಾಗಿಲ ಕಾಯುವುದು ಲೇಸುಮುಕ್ತಿಮಾರ್ಗವ ತೋರ್ಪ ಮುರಹರನ ದಾಸರನುಸಕ್ತಿಯಿಂ ಸೇವಿಸುವುದು ಬಲು ಸೌಖ್ಯ ಹರಿಯೆ 2 ಆಶೆಕಾರರ ಮನೆಯ ವಿಲಾಸ ಸುಖಕಿಂತಆಶಾರಹಿತರ ಮನೆಯ ನಿರ್ಗತಿಕ ದೈನ್ಯ ಲೇಸುಭೂಸುರಪ್ರಿಯ ಕಾಗಿನೆಲೆಯಾದಿಕೇಶವನಮೀಸಲಿನ ಪಾದಭಜನೆ ಕಡುಲೇಸು ಮನವೆ 3
--------------
ಕನಕದಾಸ
ಅಸದೃಶಮಹಿಮೆಯನು ಪ ಬಿಸಜಸಖ ಕಿರಣ ತರಂಗ ವಸುಧೀತಳದೊಳು ಇವರ ಸುಶಿತ ಸತ್ಕೀರ್ತಿಯ ಪಸರಿಸಿರುವುದು ಘನ್ನ ಅ.ಪ ಭಕುತಿಪೂರ್ವಕವಾಗಿ ಸತಲಕ್ಷೇತ್ರವ ಸಂಚರಿಸಿ | ನಿಖಿಲ ಭೂದೇವಗಣಕೆ | ವಿಖಿನಾರ್ಚಿನ ಮೂಲ ಲಕುಮೀಶ ದರುಶನದಿ | ಸುಖವಿತ್ತು ಪಾಲಿಸಿದ ಅಕಳಂಕಮಹಿಮ 1 ಭಯ ಭಕುತಿಯಲಿವರ ಸೇವಿಸುವ ನರರಿಗೆ ಆವಾವ ಭಯವಿಲ್ಲವೋ | ಗೋವತ್ಸನ್ಯಾಯದಲಿ ತಾವು ಬೆಂಬಲರಾಗಿ | ಭೂವರಜನದಿ ವಾಸರಿವರಿಗೆ ಜಯವ 2 ಈ ಯತಿಯೊಲುಮೆಯೇ ರಾಯರೋಲಿಮೆಯೋ ಕೇಳೋ ರಾಯರೊಲಿಯಲು ಗುರುವಾಯು ವಲಿವಾ | ವಾಯು ವಲಿದಾ ಮಾತ್ರದಿ | ಕಾಯಜ ಜನಕ ಯಮರಾಯನಂಬಿಸಿ ಬಿಡಿಸಿ ಕಾಯುವನು 3 ಸು ವಿನಲು ಸುಜ್ಞಾನ | ಶೀ ಎನಲು ಶೀಲತ್ವ | ಕಾಯ ಶುದ್ಧಿಯಲಿ ಇಂದ್ರಾ ಎಂದುಚ್ಚರಿಸಲಾ ಇಂದ್ರಲೋಕ ಸುಖವೊ ನಿಜವೋ 4 ವೃಂದಾರ ಕಾಂಶಜರು | ಸಂದೇಹ ವಿಲ್ಲಿವರ ವೃಂದಾ ಮಂದಾಕಿನಿಯೊಳಗೆ ಮಿಂದ ಫಲಸಂಪ್ರಾಪ್ತಿ ಇಂದಿರಾಪತಿ ಶಾಮಸುಂದರನ ಕರಪಿಡಿವ 5
--------------
ಶಾಮಸುಂದರ ವಿಠಲ
ಇದೇ ಪರಮಾರ್ಥ ಪ್ರಾಪ್ತಿಗೆ ಸೋಪಾನ ತಿಳಿ ಇದರಲ್ಲಿ ಬೇಡಿನ್ನು ಅನುಮಾನ ಇದೇ ಬಕುತಿಮಾರ್ಗವೇ ಸುಲಭ ಸೋಪಾನ ತಿಳಿ ವೈರಾಗ್ಯಜ್ಞಾನಾದಿಗಳ ತಾಣಾ ಪ ಸಂಸಾರದೊಳಗಿರ್ದ ಜೀವಂಗೆ ಸುಖದುಃಖದಿ ಬಳಲುವ ಮನುಜಂಗೆ ಕಂಸಾರಿ ಶ್ರೀ ಕೃಷ್ಣನಾಮವೊಂದೇ ಪಾಪ ಸಂಹಾರಿ ಪರಶಿವನಾಮವೊಂದೇ ಈ ಸಂಸಾರ ದಾಂಟುವಾ ನಿಜತಾಣಾ1 ನಿಷ್ಕಾಮ ಮನದಿಂದ ಭಜಿಸಲ್ಕೆ ಬಹು ದುಷ್ಕರ್ಮ ಫಲವೆಲ್ಲ ತೊಲಗಲ್ಕೆ ಶ್ರೇಷ್ಠ ವೈರಾಗ್ಯವು ನೆಲೆಸಲ್ಕೆ ಬಲು ಜಿಜ್ಞಾಸೆ ಮನದಲ್ಲಿ ಜನಿಸಲ್ಕೆ ಈ ಪರಮಾತ್ಮಧ್ಯಾನ ಮಹಾಸಾಧನಾ 2 ಆತ್ಮಜ್ಞಾನದ ಬೋಧನೆಗೊಂಡು ಪರಮಾತ್ಮನ ರೂಪವೆ ತಾನೆಂದೂ ಬರಿ ತೋರ್ಕೆ ಜಗವೆಲ್ಲ ಪುಸಿ ಎಂದೂ ಪರಮಾತ್ಮನೆ ನಿತ್ಯನು ನಿಜವೆಂದೂ ಪರಜ್ಞಾನವ ನೀಡಲ್ಕೆ ಈ ಸಾಧನ 3 ಪರಮಾರ್ಥನುಭವಿಗಳ ಸಂಗ ನೆರೆದೊರಕುತಲಿರುತಿರೆ ಭವಭಂಗ ವರ ಭಕ್ತಿ ಮಾರ್ಗದಿ ದೊರಕುವದೆಂದ ಇದೆ ಪರಮಾರ್ಥ ಪ್ರಾಪ್ತಿಗೆ ಮೂಲವೆಂದ ಇದೆ ಗುರುಶಂಕರಾನಂದಕೃಪೆಯಿಂದ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಇನಿತೆಂದು ಶಾಸ್ತ್ರ ಪೇಳುವವು ಪ ಪುನಹ ಪುನಹ ಭಗವತ್ಪ್ರಾಪ್ತಿ ಬೇಕೆಂಬುವರಿಗೆ ಅ.ಪ. ಅನುಬಂಧಿಗಳಲಿ ಮಮತೆಯನೆ ಬಿಡು ವಿಷಯ ವಾ ಸನೆಯನೀಡಾಡು ಸುಜ್ಞಾನ ಭಕ್ತಿಯ ಬೇಡು ಮನದಲ್ಲಿ ಹರಿಯ ಮೂರ್ತಿಯನೆ ನೆರೆ ನೋಡು ಸುಜ್ಞ ರನು ಕೊಂಡಾಡು ಅಜ್ಞಾನಿಗಳ ಸಹವಾಸ ಸುಡು ವನಜನಾಭನ ಪೂಜೆ ಮಾಡು ಪ್ರತಿ ಕ್ಷಣ ಬಿಡದೆ ಭಗವದ್ಗುಣಗಳ ಕೊಂಡಾಡು 1 ಪರಮಾಣು ಮೊದಲ್ಗೊಂಡು ವ್ಯಕ್ತ ತತ್ತ್ವದೊಳ ಹೊರಗೆ ವ್ಯಾಪಕನಾಗಿ ತದ್ರೂಪ ನಾಮದಿಂ ಕರೆಸುತಲಿ ತದ್ವಿಕಾರಗಳಿಲ್ಲದಲೆ ಸೃಷ್ಟಿ ಪರಿಪಾಲನೆ ಲಯಗಳನೆ ಮಾಡಿ ಮೋದಿಸುತಾ ಪರಮಾತ್ಮನೊಬ್ಬನಿಹನೆಂದು ಹರಿಗೆ ಮರೆಯದಲೆ ಮಹಿಮೆಗಳ ಪೊಗುಳುತಿರು ಮನುಜಾ 2 ಹರಿಭಕ್ತರಿದ್ದೆಡೆಗೆ ಹರಿದು ಹೋಗಲಿ ಬೇಕು ತಿರಿಯ ಕ್ಪುಂಡ್ರಗಳ ನಿಂದಿಸಬೇಕು ಹರಿಯ ನಾಮತ್ರಯಾಂಕಿತರಿಗೆರಗಲು ಬೇಕು ಗುರು ಹಿರಿಯರ ವಗುಣಗಳೆಣಿಸದಿರ ಬೇಕು ಮ ತ್ಸರವ ಬಿಡಬೇಕು ಭಕ್ತರಲಿ ಹೀಗೆ ಒರೆದೊರೆದು ಪೇಳುವರು ಬುಧರು ನಿತ್ಯದಲಿ 3 ನಿತ್ಯ ನೈಮಿತ್ತಿಕ ಸುಕರ್ಮ ಮಾಡಲು ಬೇಕು ಕೃತ್ಯವಲ್ಲದೆ ಲೋಕವಾರ್ತೆಗಳ ಬಿಡಬೇಕು ಚಿತ್ತದಲಿ ಹರಿಪಾದ ಚಿಂತಿಸುತಲಿರಬೇಕು ವಿತ್ತದೇಹಾಗಾರ ಭಗವಂತನದೆಂದು ದೇ ಪರಿಯಂತ ಮಾಳ್ಪ ಕರ್ಮ ಸತ್ಯಸಂಕಲ್ಪಕಿವು ಪೂಜೆ ಎನಬೇಕು 4 ಸೀತೋಷ್ಣ ಸುಖ ದುಃಖ ಮಾನಾಪಮಾನ ಜಯ ಭೀತಿ ನಿರ್ಭೀತಿ ಅಪಜಯ ಜ್ವರಾಪಸ್ಮಾರ ಭೂತ ಬಾಲ ಗ್ರಹ ಮೃಗಸರ್ಪ ನೃಪ ಚೋರ ಯಾತನೆಗೆ ಭಯಪಡದೆ ಸರ್ವತ್ರದಲಿ ಜಗ ನ್ನಾಥವಿಠ್ಠಲನ ಸ್ಮರಿಸುತಿರು ಮಹಾ ಪಾತಕವ ಪರಿಹರಿಸಿ ಪೊರೆವ ದಯದಿಂದಾ 5
--------------
ಜಗನ್ನಾಥದಾಸರು
ಈ ಸಾಧನೆಯ ಈ ಧರ್ಮಗಳ ಗುರಿಯೊಂದÉ ಕೇಳಿರಿ ಇಂದೇ ಪರಮಾತ್ಮಪ್ರಾಪ್ತಿ ಇದರಿಂದೇ ಪ ನಿಷ್ಕಾಮ ಕರ್ಮವ ಮಾಡುವನು ನಿಷ್ಕಾಮ ಬಕುತಿಯ ಮಾಡುವದು ಆ ವೈರಾಗ್ಯ ಆ ಸುವಿವೇಕ ಮನದಲ್ಲಿ ಮೂಡುವದಿಂದೇ ಪರಮಾತ್ಮಪ್ರಾಪ್ತಿ 1 ವಿಷಯಾಭಿಲಾಷಾ ಬಿಡುವುದಕೆ ಮನದಲ್ಲಿ ಸ್ಥಿರತೆಯು ನಿಲುವುದಕೆ ಗುರು ಬೋಧೆಯಲಿ ಮನ ರಮಿಸುತಲಿ ಜಿಜ್ಞಾಸೆ ಮೂಡುವದಿಂದೇ ಪರಮಾತ್ಮಪ್ರಾಪ್ತಿ 2 ಹಗುರಾದ ಸಾಧನವಿದಕೆಲ್ಲ ಜಗದಲ್ಲಿ ಇರುವ ಜನಕೆಲ್ಲ ಅಘನಾಶಕ ಶ್ರೀಶಿವಶಂಕರನೋಳ್ ಘನಪ್ರೇಮ ಬಕುತಿಯಿದೋಂದೇ ಪರಮಾತ್ಮಪ್ರಾಪ್ತಿ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಎಂತು ದೊರೆವುದೋ ಸಂತಸವೆಂತು ದೊರೆವುದೋ ಕಂತುಪಿತನ ಕರುಣವಿಲ್ಲದೆ ಪ ರಣಜಯವು ಹಣಪ್ರಾಪ್ತಿ ವನಿತೆಲಾಭವಿನಿತು ಎಲ್ಲ ವನಜನಾಭನೊಲಿಮೆಯಾಗೋತನಕ ಮಂದಮನುಜನಿಗೆ 1 ಕ್ಷೋಣಿಗೆಲುವ ತ್ರಾಣ ಬಲವು ಮಾಣದಿಹ್ಯ ನಾನಾ ಸೌಖ್ಯ ಜಾನಕೀಶ ಮೆಚ್ಚುವನಕ ಹೀನಭಾಗ್ಯ ಮಾನವನಿಗೆ 2 ಭೂಮಿಜನಕೆ ಬಾಗದಂಥ ಆ ಮಹ ಸುಕ್ಷೇಮ ಲಾಭ ಸ್ವಾಮಿ ಶ್ರೀರಾಮ ಪ್ರೇಮಸದನ ಪ್ರೇಮದೀಯದೆ ಪಾಮರರಿಗೆ 3
--------------
ರಾಮದಾಸರು
ಎಂಥಾ ಸ್ಥಿತಿಯೆ ಶ್ರೀರಾಮಗೆ ಪ ಚಿಂತಿತ ಫಲದಗೆ ಚಿಂತಾಪ್ರಾಪ್ತಿಯೆ ಅ.ಪ. ಲೋಕೈಕನಾಥಗೆ ಈ ಕಪಿನಾಥನು ಸು- ಗ್ರೀವನು ನಾಥನೆಂದೆನಿಸುವ ಪರಿಯೆ 1 ಸಕಲ ಲೋಕ ಶರಣ್ಯಗೆ ಕಕುಲತೆಯಿಂದನ್ಯರಲಿ ದೈನ್ಯವೆ 2 ಯಾವನನುಗ್ರಹ ಬೇಡುವರು ಈ ವಿಭುವಿಗೆ ಸುಗ್ರೀವನ ದಯವೆ 3 ಎಲ್ಲರ ದುಃಖವ ಪರಿಹರಿಸುವನಿಗೆ ಇಲ್ಲಿ ಸುಗ್ರೀವನೊಳ್ ದೈನ್ಯದ ಮೊರೆಯೆ 4 ಕರಿಗಿರೀಶನ ಕಾರ್ಯಕೆ ಕಪಿವರ ಪರಿ ಮಾಡಿಸುವುದೆ 5
--------------
ವರಾವಾಣಿರಾಮರಾಯದಾಸರು
ಏನು ಕರುಣೆಗೈದೆ ನಳಿನಾಕ್ಷ ಪ ಈ ನಿನ್ನ ಭಕ್ತನೊಳೇನು ಮಮತೆಯೋ ನಿನಗೆ ಅ.ಪ. ಹಿಂದೆ ಬಲಿಯು ತಾ ಯಜ್ಞವ ಮಾಡಲು ಇಂದ್ರ ಪದವು ಪ್ರಾಪ್ತಿ ನಿನ್ನಿಂದಲ್ಲದೆ ಇಂದು ಆ ಪದವಿಯನತಿಯುಕ್ತಿಯಿಂದಲಿ ಸಂದೇಹವಿಲ್ಲದೆ ಸೂರೆಗೈದವ ನೀನೆ 1 ಪರಮ ವಿದ್ವಾಂಸರನು ಧೈರ್ಯಶೀಲರನು ನೆರೆಮೋಹಗೊಳಿಸುವುದೈಹಿಕ ಭಾಗ್ಯವು ಪರಮ ಕಾರುಣ್ಯದಿಂದೊಲಿದು ನೀನಿವನನು ಸಿರಿಮೋಹದಿಂದಲಿ ಪಾರುಮಾಡಿದೆ ದೇವ 2 ನೀನಿಂದು ಗೈದುದು ಪರಮೋಪಕಾರವು ನಾನದರೊಳು ಲೇಶದೋಷವೆಣಿಸನಯ್ಯಾ ಶ್ರೀನಿಧಿ ಕರಿಗಿರೀಶನೆ ನಿನ್ನ ಚರಣಕ್ಕೆ ಆನಮಿಸುವೆನಿಂದು ದೀನವತ್ಸಲ ಸ್ವಾಮಿ 3
--------------
ವರಾವಾಣಿರಾಮರಾಯದಾಸರು
ಕಂಡದ್ದು ಬಯಸಿ ಕಂಗೆಡು ಬೇಡಾ ಪಾದ ಬಿಡಬೇಡಾ ಪ ಕಾಲನಿನ್ನದಲ್ಲ ಕಡುಮೂರ್ಖ ಆ ಕಾಲ ಪುರುಷ ಮಾಡಿದನೇಕಾ ಪರಿಗಳಿಂದ ಇನ್ನು ಯಾಲೋಕಾದಲಿ ನಡುವುದಲ್ಲಾ ಸುಖದು:ಖ ಪಾಲಿಗೆ ಬಂದದ್ದು ಬಿಡದನಕಾ ಪ್ರಾಪ್ತಿ ಇದ್ದಷ್ಟೇ ಇಲ್ಲಧಿಕಾ ಶ್ರೀಲೋಲನ ನೀನಿರುವತನಕಾ ಸ್ಮರಿಸದೆ ಇರಬೇಡ ಅವಿವೇಕಾ 1 ಘಣಿಯಲ್ಲಿ ಬರದದ್ದು ತಪ್ಪದಲ್ಲೆ ಜಗ ಭಗವಂತ ನೀ ಮಾಡಿದಲ್ಲೆ--- -------- ನಿನ್ನದಲ್ಲೆ ಅನುಗ್ರಹ ಮಾಡುವ ಭರದಲ್ಲೆ ನಗಧರನಾ ನಾಮ ಬಲದಲ್ಲೆ ಅಘಗಳ ಕಳಿ ನೀ ತೀವ್ರದಲ್ಲೆ 2 ಇಷ್ಟಾರ್ಥ ನೀ ಮಾಡಬೇಕಂದಿ ಸಂಚಿತ ಎಲ್ಲೆಂದಿ ಕಷ್ಟವ ಪಡಕೊಂಡು ನೀ ಬಂದಿ ಕಾಮಕೆ ಸುಖವು ಇಲ್ಲೆಂದಿ ಇಷ್ಟದಿ ಶ್ರೀ ಹರಿ ಪದಹೊಂದಿ ಇರದೆ ನೀ ಇರಬೇಡಾ ಇಬ್ಬಂದಿ ಸ್ಪಷ್ಟದಿ 'ಹೊನ್ನಯ್ಯ ವಿಠ್ಠಲಂದಿ’ ಸಾರ್ವದಿ ಮುಂದಕ ನೀ ಬಂದಿ3
--------------
ಹೆನ್ನೆರಂಗದಾಸರು
ಕಾಯಬೇಕೆನ್ನ ಕರುಣದಲಿ ಧನ್ವಂತ್ರಿ ಶ್ರೀಯರಸ ನರಹರಿಯೆ ಪ್ರಾರ್ಥಿಸುವೆ ನಿನ್ನ ಪ. ಸುರರಿಗೆ ಮರಣ ಕಾಲವು ಪ್ರಾಪ್ತವಾಗಲು ಗಿರಿಯಿಂದ ಶರಧಿಯನು ಮಥಿಸೆ ಪೇಳಿ ಕರುಣದಿಂದಮೃತ ಕರದಿಂದ ಸುರರಿಗೆ ಎರೆದು ಜರೆ ಮೃತ್ಯು ಬಿಡಿಸಿದಗೆ ಇದು ಒಂದು ಘನವೆ 1 ಸಕಲ ನಾಡಿಗಳಲ್ಲಿ ಚೇಷ್ಟಪ್ರದ ನೀನಾಗಿ ಸಕಲ ವ್ಯಾಪಾರಗಳ ನಡೆಸುತಿರಲು ಯುಕುತಿಯಿಂದಲಿ ನಾಡಿ ನೋಡಿ ತಿಳಿಯುವನ್ಯಾರೊ ಮುಕುತಿದಾಯಕ ನಿನಗೆ ಇದು ಒಂದು ಘನವೆ 2 ಅನಾದಿಯಿಂದ ಅಪಥ್ಯದಲಿ ನರಳುವೆನೊ ಈಗ ಪಥ್ಯವ ಮಾಳ್ಪ ಬಗೆ ಯಾವುದೊ ಶ್ರೀನಿವಾಸನೆ ನಿನ್ನ ಧ್ಯಾನವೆ ಔಷಧವೊ ಶ್ರೀ ಗುರುಗಳಾಜ್ಞೆಯೆ ಪಥ್ಯವೆನಗಿನ್ನು 3 ಭಕ್ತಪ್ರಹ್ಲಾದನನು ಯುಕ್ತಿ ಶಕ್ತಿಗಳಿಂದ ಮುಕ್ತಿಮಾರ್ಗವ ತೋರಿ ಸಲಹಲಿಲ್ಲೇ ಭಕ್ತಿಹೀನರನೆ ಕಂಡು ಎನ್ನ ರಕ್ಷಿಸದಿರಲು ಯುಕ್ತವೇ ನಿನಗಿನ್ನು ಭಕ್ತಪಾಲಕನೆ 4 ನಿನ್ನ ದಾಸತ್ವದಲಿ ನೆಲಸಬೇಕಾದರೆ ಬಿನ್ನಣದ ರೋಗಗಳ ಪರಿಹರಿಸಿ ಸಲಹೊ ನಿನ್ನವರಾದ ಮೇಲಿನ್ನು ಕಾಯದೆ ಇಹರೆ ಘನ್ನ ಶ್ರೀ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ