ಒಟ್ಟು 27 ಕಡೆಗಳಲ್ಲಿ , 17 ದಾಸರು , 26 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣು ಶರಣು ಪ ಶರಣು ಶರಣರ ಪೊರೆವ ಕರುಣಿಗೆ ಶರಣು ಸುರವರ ದೇವಿಗೆ ಅ. ಪ. ಶ್ರಧ್ಧೆ ಭಾರತಿ ಭಾಗ್ಯ ಸಂಪನ್ನೆ ಪದ್ಮ ಮಂದಿರ ನಂದನೆ ಬುದ್ಧಿ ವರದಾಯಕಳೆ ಕರುಣಾಬ್ಧಿಯೆ ಭಕ್ತರ ಪ್ರಿಯಳೆ 1 ಪನ್ನಗ ಗಿರಿಶರಿಂದಲಿ ಮಿಗಿಲೆನಿಪೆ ಶತಗುಣದಲಿ ಮೃಗನ ನಾಭಿ ನೊಸಲಿಗೊಪ್ಪುವ ಮೃಗಕಲಾನನೆ ದೇವಿಯೆ2 ಇಂದ್ರಸೇನಳೆ ವಿಪ್ರಕನ್ನಿಕೆ ಚಂದ್ರಾಧಿಷ್ಠನ ವಾಸಳೆ ಸಿರಿ ವಿಜಯವಿಠ್ಠಲನ ವಂದಿಪ ದ್ರೌಪದಿ ದೇವಿಯೆ3
--------------
ವಿಜಯದಾಸ
ಪುರಾಣವಿಷಯ ಶ್ರೀವೆಂಕಟೇಶ ಕಲ್ಯಾಣ ಇನ್ನೆಂದಿಗೋ ನಿನ್ನದರುಶನ ಶೇಷಾದ್ರಿವಾಸ ಪ ಪನ್ನಂಗಶಯನ ಪ್ರಸನ್ನರ ಪಾಲಿಪ ಘನ್ನಮಹಿಮ ನೀನೆನ್ನನುದ್ಧರಿಸೂಅ.ಪ ವರ ಸುರಮುನಿಗಳ ವೃಂದ ನೆರಹಿದ ಯಾಗಗಳಿಂದ ಪರಮಾದರದಿಂದಿರುವ ಸಮಯದಿ ನಾರದ ಮುನಿ ಬಂದೊದಗಿ ನಿಂದ ಇ- ಸುರಮುನಿವಚನದಿ ಭೃಗುಮುನಿವರ ಪೋಗಿ ಹರುಷದಿ ಶ್ರೀಹರಿ ಉರಗಶಯನನಾಗಿ ಹರುಷದಿ ಮುನಿಪಾದ ಕರದಲಿ ಒತ್ತುತ ಕರುಣದಿ ಸಲಹಿದೆ ದುರಿತವ ಹರಿಸಿ ಹರಿಭಕುತರ ಅಘಹರಿಸಿಕಾಯುವಂಥ ಕರುಣಿಗಳುಂಟೇ ಶ್ರೀಹರಿ ಸರ್ವೋತÀ್ತುಮಾ 1 ಸ್ವಾಮಿ ನೀನಿಜಧಾಮವನೇ ತೊರೆದೂ ಸ್ವಾಮಿಕಾಸಾರ ತೀರದಿ ನಿಂದೂ ಧಾಮವನರಸಿ ವಲ್ಮೀಕವನೆ ನೋಡಿ ಸನ್ಮುದವನ್ನೇ ತೋರುತ ಕಮಲ ಭವಶಿವ ತುರುಕರುರೂಪದಿ ಕಾಮಧೇನು ಪಾಲ್ಗರೆಯುತಾ ಈ ಮಹಿಮೆಯನ್ನೇ ಬೀರುತಾ ಭೂಮಿಗೊಡೆಯ ಚೋಳನೃಪಸೇವಕನು ಧೇನುವನ್ನು ತಾ ಹೊಡೆಯಲು ಕಾಮನಯ್ಯ ನೀನೇಳಲು ಭೀಮವಿಕ್ರಮವ ತೋರಲು ಕ್ಷಮಿಸಿದೆ ನೃಪನ ದಯಾಳು ಅಮಿತ ಸುಗುಣಪೂರ್ಣ ಅಜರಾಮರಣ ನೀ ಮಸ್ತಕಸ್ಪೋಟನ ವ್ಯಾಜವ ತೋರಿ ಪ್ರೇಮದಿ ಗುರುಪೇಳ್ದೌಷಧಕಾಗಿ ನೀ ಮೋಹವ ತೋರಿದೆ ವಿಡಂಬನಮೂರ್ತೇ 2 ಮಾಯಾರಮಣನೆ ಜೀಯಾ ಕಾಯುವೆ ಜೀವನಿಕಾಯಾ ತೋಯಜಾಂಬಕ ಹಯವನೇರಿ ಭರದಿ ತಿರುಗಿತಿರುಗೀ ವನವನೆÀಲ್ಲ ಮೃಗನೆವನದಿ ನಿಂದು ನೋಡಿದೇ ಪ್ರಿಯಸಖಿಯರ ಕೂಡಿ ಪದುಮಾವತಿಯು ತಾ ಹಯದಿ ಕುಳಿತ ನಿನ್ನ ನೋಡಲು ಪ್ರಿಯಳಿವಳೆನಗೆಂದು ಯೋಚಿಸಿ ಕಾಯಜಪಿತ ನಿನ್ನ ಹಯವನೆ ಕಳಕೊಂಡು ಮಾಯದಿಂದ ನೀ ಮಲಗಿದೆ ತೋಯಜಮುಖಿಯಳ ಬೇಡಿದೇ ಆ ಯುವತಿಯನ್ನೇ ಸ್ಮರಿಸುತಾ ಶ್ರೀಯರಸನೆ ನೀನು ಸ್ತ್ರೀರೂಪದಿ ಹೋಗಿ ಶ್ರೀಯಾಗಿಹಳಿನ್ನು ಶ್ರೀಹರಿಗೀಯಲು ಶ್ರೇಯವೆಂದು ಆಕಾಶನನೊಪ್ಪಿಸಿ ತಾಯಿಯಭೀಷ್ಟವನಿತ್ತೆ ಸ್ವರಮಣಾ 3 ಸಕಲಲೋಕೈಕನಾಥಾ ಭಕುತರಭೀಷ್ಟಪ್ರದಾತಾ ಭಕುತನಾದ ಆಕಾಶನೃಪತಿಯು ಬಕುಳೆ ಮಾ- ತ ಕೇಳಿ ಅಭಯವಿತ್ತು ಮನ್ನಿಸಿ ಪದುಮಾವತಿಯ ಪರಿಣಯ ಶುಕರ ಸನ್ಮುಖಹಲ್ಲಿ ಅಕಳಂಕ ಮಹಿಮ- ಗೆ ಕೊಟ್ಟನು ತಾ ಲಗ್ನಪತ್ರಿಕಾ ಸ್ವೀಕರಿಸುವದೀ ಕನ್ನಿಕಾ ಈ ಕಾರ್ಯಕೆ ನೀವೆ ಪ್ರೇ ಸಕಲಸಾಧನವಿಲ್ಲಿನ್ನು ಲೋಕೇಶಗರುಹಬೇಕಿನ್ನು ಲೋಕಪತಿಯೆ ಸುರಕೋಟಿಗಳಿಂದಲಿ ಈ ಕುವಲಯದಿ ನಿನ್ನಯ ಪರಿಣಯವೆಸಗಲು ಭಕುತಜನಪ್ರಿಯ ಶ್ರೀವತ್ಸಾಂಕಿತ 4 ಖಗವರವಾಹನ ದೇವಾ ಅಗಣಿತಮಹಿಮ ಗೋಮಯನೆನಿಸಿ ಸುರರ ಪೊರೆಯುತಾ ಅಗಣಿತ ಸುರಗಣ ಕಿನ್ನರರು ಸಾಧ್ಯರು ತರು ಫಲ ಖಗಮೃಗ ರೂಪವ ಬಗೆಬಗೆ ಇಹೆ ಪೊಗಳಲಳವೇ ಗಿರಿವರವು ಹಗಲು ಇರುಳು ಭಗವಂತನೆ ನಿನ್ನನ್ನು ಪೊಗಳುತಿಹರು ನಿನ್ನ ಭಕುತರು ಮೊಗದಲಿ ನಿನ್ನ ದಾಸರು ಗೋವಿಂದ ಮುಕುಂದ ಎನ್ನುತಾ ಯುಗ ಯುಗದೊಳು ನೀನಗದೊಳು ನೆಲಸಿಹೆ ಜಗದ ದೇವ ರಾಜಿಸುವವನಾಗಿಹೆ ಮಿಗಿಲೆನಿಸಿದ ಶ್ರೀ ವೆಂಕಟೇಶಾ ಸದ್ಗುಣ ಸಚ್ಚಿದಾನಂದ ಮುಕುಂದ ಗೋವಿಂದಾ 5
--------------
ಉರಗಾದ್ರಿವಾಸವಿಠಲದಾಸರು
ಇಂದಿರಾ ಪಾಲಿಸು ಎನ್ನ ಇಂದಿರಾ ಪ ಇಂದಿರಾ ದೇವಿಯೆ ನಿನ್ನ | ಪಾದಪೊಂದಿದೆ ಸಲಹಬೇಕೆನ್ನಾ | ಆಹಕಂದರ್ಪ ಇಂದ್ರ ಫಣೀಂದ್ರ ಗರುಡ ಕಂದುಕಂಧರ ಬ್ರಹ್ಮಾದಿ ವಂದ್ಯಳೆ ಪಾಲಿಸು ಅ.ಪ. ಕೃತಿ ಶಾಂತಿ | ದುರ್ಗೆಭೂಮಿ ಶ್ರೀದೇವಿ ಜಯಂತಿ | ಲಕ್ಷ್ಮೀರಮೆ ದಕ್ಷಿಣೆ ಗುಣವಂತಿ | ಸತ್ಯಭಾಮೆ ರುಕ್ಮಿಣಿ ಮಹಾಕಾಂತಿ | ಆಹಈ ಮಹಾನಂತ ರೂಪ ನಾಮಗಳುಳ್ಳಕೋಮಲ ಗಾತ್ರಿಯೆ ಕಾಮಜನನಿ ಕಾಯೆ 1 ಶ್ರೀಭಾಗ ಮಹಾ ಪ್ರಳಯದಲ್ಲಿ | ಪದ್ಮನಾಭಾಗೆ ಬಹು ಭಕ್ತಿಯಲ್ಲಿ | ದಿವ್ಯಆಭರಣಗಳಾಕಾರದಲ್ಲಿ | ಮಿಕ್ಕವೈಭವನೇಕ ರೂಪಾದಲ್ಲಿ | ಆಹಸ್ವಾಭಿಮಾನದಿ ಬಹು ಶೋಭನ ಪೂಜೆಯಲಾಭಗಳೈದಿದ ಶೋಭನವಂತಳೆ 2 ದೇಶಕಾಲಾದಿಗಳಲ್ಲಿ | ಜೀವರಾಶಿ ವೇದಾಕ್ಷರದಲ್ಲಿ | ಇದ್ದುವಾಸುದೇವನ ಬಳಿಯಲ್ಲಿ | ಸರಿಸೂಸಿ ವ್ಯಾಪ್ತಿ ಸಮದಲ್ಲಿ | ಆಹಲೇಸಾಗಿ ಒಪ್ಪುತ್ತ ಈಶ ಕೋಟಿಯೊಳುವಾಸಾಳೆ ಎನ್ನಭಿಲಾಷೆ ಸಲ್ಲಿಸಬೇಕು3 ಭವ ಬಂಧಾ | ಆಹನೀನೆ ಕಳೆದು ದಿವ್ಯ ಜ್ಞಾನ ಭಕುತಿಯಿತ್ತುಪ್ರಾಣಪತಿಯ ಪಾದವನ್ನು ತೋರಿಸಬೇಕು 4 ನಿತ್ಯ ಭಾಗ್ಯವು ನಿನಗೊಂದೆ | ಅಲ್ಲರತ್ನಾಕರನು ನಿನ ತಂದೆ | ತಾಯಿರತ್ನಗರ್ಭಳು ಕೇಳು ಮುಂದೆ | ಪತಿಗತ್ಯಂತ ಪ್ರಿಯಳಾದೆ ಅಂದೆ | ಆಹಸತ್ಯಬೋಧರು ಮಾಳ್ಪ ಅತ್ಯಂತ ಪೂಜೆಯಿಂಯುಕ್ತೆ ಶಿರಿಯೆ ನಿನಗೆತ್ತ ಕತ್ತಲು ಕಾಣೆ 5 ಲೋಕ ಜನನಿಯು ಎಂದು ನಿನ್ನಾ | ಕೀರ್ತಿಸಾಕಲ್ಯವಾಗಿದೆ ಘನ್ನಾ | ಎನ್ನಸಾಕಲಾರದೆ ಬಿಡಲಿನ್ನಾ | ಮುಂದೆಯಾಕೆ ಭಜಿಸುವುದು ನಿನ್ನಾ | ಆಹಸಾಕಾರವಾಗಿನ್ನು ಬೇಕಾದ ವರಗಳನೀ ಕರುಣಿಸಿ ಎನ್ನ ಜೋಕೆ ಮಾಡಲಿ ಬೇಕು 6 ಆವ ಜನ್ಮದ ಪುಣ್ಯಫಲದಿ | ನಿನ್ನಸೇವೆ ದೊರಕಿತೊ ಈ ಕ್ಷಣದಿ | ಎನಗೀವ ಭವ್ಯ ಕೇಳು ಮನದಿ | ಆಹಶ್ರೀ ವ್ಯಾಸ ವಿಠಲನ್ನ ಸೇವಿಪ ಯತಿಗಳ ಸಹವಾಸವನೆ ಇತ್ತು ಭಾವ ಶುದ್ಧನ ಮಾಡು 7
--------------
ವ್ಯಾಸವಿಠ್ಠಲರು
ಇಂದಿರೆ ಪ ನೀರಜ ನಿಲಯೆ ಅ.ಪ ಬಾರೆನ್ನಯ ಭವನಕೆ ಭಾಗ್ಯದ ನಿಧಿ ಪೂರಗೊಳಿಸೆ ಮನ ಕೋರಿಕೆಗಳನು1 ಕೊಳಲೂದುವ ಗೋವಳನಿಲ್ಲಿರುವನು ತಿಳಿನಗುಮೊಗದಲಿ ಬೆಳಗೆಲೆ ಭವನವ 2 ಚಿನ್ನದ ಹೊಗೆಯಾಡಿಸೆ ಈ ಮಂದಿರ ನಿನ್ನದೇ ಭಕುತ ಪ್ರಸನ್ನನ ಪ್ರಿಯಳೆ3
--------------
ವಿದ್ಯಾಪ್ರಸನ್ನತೀರ್ಥರು
ಏನೆಂದು ಬಣ್ಣಿಸುವೆನೊ ನಾನು | ಶ್ರೀನಾಥ ಪ್ರಿಯಳಾದ ಶ್ರೀ ತುಳಸಿ ಮಹಿಮೆಯನು ಪ ಅಮೃತ ಕಲಶ ಬರೆಕಂಡು ಅತಿ | ಜಲಜಾಂಬಕನ ಪ್ರೇಮಾಂಜಲ ಉದರಲು | ಇಳಯೊಳದಿರಿಂದುದಿಸಿ ಬೆಳೆದು ನಿಂದಿರೆ ನೋಡಿ | ಒಲಿದು ಕೋಮಲ ಮುಗುಳು ತಳೆದ ಶ್ರೀಹರಿ ತಾನು 1 ಹರಿಯು ಧರಿಸಿದ ಕಂಡು ಸುರರೆಲ್ಲ ವಂದಿಸುತ | ಶಿರದಲಾಂತರು ಪರಮ ಹರುಷದಿಂದ | ಸಿರಿಸರಸ್ವತಿ ಗಿರಜೆ ನಿರುತ ನಿನ್ನಯ ವ್ರತದಿ | ಧರೆಯೊಳಗೆ ತಮ್ಮ ತಮ್ಮ ಅರಸರೊಲಿಸಿದರೆಂದು 2 ದುರಿತ ಕುಲ ಓಡುವವು ತನುವ ನೀ ಡಾಡಿ ಜಲನೀಡಿ ಕೊಂಡಾಡಿ ನಿಂದು | ಕೂಡೆ ಮೃತ್ತಿಕೆ ಫಣಿಗೆ ತೀಡಿದರೆ ಭಕುತಿಯಲಿ | ಬೇಡಿದಿಷ್ಟಾರ್ಥ ಕೈಗೂಡಬಹುದಿಳೆಯೊಳಗೆ 3 ತುಲಸಿ ಭಕುತಿಲ್ಲದವ ಕಲಿವಂಶದನುಜನವ | ತುಲಸಿ ಧರಿಸಿದ ತನುವು ಸಲೆಮುಕ್ತಿ ಮಂಟಪವು | ತುಲಸಿ ಬೆಳೆಹದಿ ಮನೆಯು ಬಲಿದ ಪುಣ್ಯದ ಖಣಿಯು | ತುಲಸಿ ಇಲ್ಲದ ಗೇಹ ಕಲುಷಾಲಯ 4 ಮೂಲದಲಿ ಬ್ರಹ್ಮ ತಾ ನೀಲಕಂಠನು ನಡುವೆ | ಮೇಲುತುದಿಯಲಿ ವಿಷ್ಣು ಲೋಲಾಡುವಾ | ಸಾಲಕೊಂಬೆಗಳಲಿ ವಿಶಾಲದೇವತೆಗಳಿಹರು | ತಾಳಿ ಪ್ರೇಮವನು ಮಹೀಪತಿ ನಂದನಾಜ್ಞೆಯಲಿ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕುತ್ಸ್ಸಿತರೊಲ್ಲದ ಮತ್ಸರವಿಲ್ಲದ ಸತ್ಸಭೆ ಕೇಳಲೀ ಕೃತಿಯ ಪ. ಈ ಯುಗದವರಿಗೆ ಕಲಹ ಮಂಡಿಸಿದಗೆ ಆ ಯುಗದವರುಕ್ತಿ ಬೇಕು ನ್ಯಾಯದವರ ಕೇಳು ಪೂರ್ವಶಾಸನ ಸಾಕ್ಷಿ ಹೇಯವೆಂದಾರು ಪೇಳುವರು1 ನಿಮ್ಮವರಾಗಮ ನಮ್ಮವರಿಗೆ ಸಲ್ಲ ನಮ್ಮೋಕ್ತಿ ನಿಮಗೆ ಮೆಚ್ಚಲ್ಲ ಇಮ್ಮನದವರಿಗೆ ಇನ್ನೊಬ್ಬ ಹಿರಿಯರ ಸಮ್ಮತಿ ಬೇಕು ನಿರ್ಣಯಕೆ2 ಯುಕ್ತಿ ಮಾತ್ರವ ನಂಬಿ ನಡೆವುದುಚಿತವಲ್ಲ ಯುಕ್ತಿ ಸರ್ವತ್ರ ಬಂದಿಹುದು ಕುತ್ಸಿತ ದೇಹಬಂಧವ ಬಿಡಿಸುವ ನರ- ರುತ್ತಮರೆಂದರೇನೆಂಬೆ 3 ಹಿಂಸೆ ಸಲ್ಲದು ಗಡ ಕರದ ಚಿಮುಟಿಯಿಂದ ಏಸು ಕೂದಲ ಕೀಳುತಿರಲು ಏಸೋ ಜೀವಗೆ ನೋವು ಅದು ಹಿಂಸೆ ದೋಷದ ಒಂದಂಶಕ್ಕೆ ಸರಿ ಬಂದಿಹುದೆ 4 ಕೇಶ ಆಚ್ಛಾದನ ಸಂಕಟದಿಂದೆಂದ ಕ್ಲೇಶ ಸೂಸುವ ನಯನಾಂಬುಧಾರೆ ಆ ಸಮಯದಿ ಪರಮಸುಖವೆಂಬ ಮಾತು ಸತ್ಯವ್ರತಕೆ ಎಂತೊಪ್ಪಿಹುದೊ 5 ವೇದಶಾಸ್ತ್ರವ ಬಲ್ಲ ಹಾರವನಲ್ಲ ಹು- ಟ್ಟಿದ ದಿವಸ ಮೊದಲಾಗಿ ಪಾತಕಿ ತಮ್ಮೊ - ಳಾದನೆಂಬುದು ಬಲು ಚೋದ್ಯ6 ಪಾಪ ಸಲ್ಲದು ಗಡ ಪರನಿಂದೆಯಿಂದಾದ ಪಾಪವೆ ತಾವು ಶುದ್ಧರೆಂಬ ಪರಿ ಆತ್ಮಸ್ತುತಿಯಿಂದೊಂದಾ ಪಾಪ ಲೇಪಿಸದಿಹುದೆ ತಮ್ಮವರ 7 ಸ್ಥಾವರಜೀವರ ಸಾವಿರ ಕೋಟಿಯ ಆವಾಗ ಕೊಂದು ತತ್ತನುವ ಜೀವಿಪೆನೆಂದು ಬೇಯಿಸಿ ತಿಂಬ ಪಾಪವ ಆವ ನಿಮಗೆ ಅಹುದೆಂದ 8 ಇಂದ್ರಿಯಹತ್ತಿಲ್ಲದವರ ಕೊಲ್ಲುವುದಕ್ಕೂ ಹಾ- ಗೆಂದ ಗುರುವ ನಾನೇನೆಂಬೆ ಅಂದಚೆಂದಗಳ ಮೂಕರ ಪಕ್ಷ್ಷಿಯಂಡದ ನಿಂದ್ಯ ಹಿಂಸೆಯ ಸಲಿಸುವರೆ 9 ಸಂಗೀತಶ್ರವಣದಿ ಧೂಪಾಘ್ರಾಣದಿ ಮೂಲ ಹಿಂಗೂಡಿದುದಕ ಸ್ವಾದನಾದಿ ಅಂಗನೆ ಈಕ್ಷಣ ಸ್ಪರ್ಶನದಿಂ ಸ್ಥಾವ- ರಂಗಳು ಜಂಗಮದಂತೆ 10 ತಮ್ಮ ಕರ್ಮದಿ ತಾವೆ ಸಾವರೆಂಬ ಮತದಿ ಕಮ್ಮಿಯಾದ ವ್ರಣಕ್ಕೆ ಮದ್ದನಿಕ್ಕಲು ನಿರ್ಮಾಯನದೊಳಗೇಸೊ ಹಿಂಸೆ 11 ಅಕ್ಕಿಯ ಕುಟ್ಟಲು ಬಕ್ಕು ಜೀವರ ಹಿಂಸೆ ಮಕ್ಕಳುಂಬುದು ಮಾಂಸ ಪ್ರಿಯಳ ಚೆಂದುಟಿ ಮಾಂಸ ಇಕ್ಕು ಬಾಯೊಳು ದಂತದೆಲುವೆ 12 ಕರದ ತುಂಬವಿದೇನು ಕೊರಳ ಹಾರವಿದೇನು ಚರಣದ ನಖಪಂಕ್ತಿಯಿದೇನು ಖರ ಭೂತಪಂಚಕ ಅನ್ನ ಮಾಂಸಗಳೊಳು ಬರಿದೆ ನಿಂದಿಸಲೇಕೆ ಪರರ 13 ಉಪ್ಪಿನೊಳಗೆ ತೋರ್ಪ ಚಿಪ್ಪ ನೋಡದೆ ಪರ- ರಲ್ಪ ದೋಷಗಳರಸುವರೆ ಒಪ್ಪುವುದೆಂತೊ ಶತ್ರುಗಳ ನಿಂದನೆ ಕೊಲು- ತಿಪ್ಪ ನೃಪಗೆ ಜಿನಮಾರ್ಗ 14 ಬಸ್ತಿಯ ಕಟ್ಟಲು ಭೂಸ್ಥ ಜೀವರ ಹಿಂಸೆ ಸುತ್ತ ಯಾತ್ರೆಯ ಮಾಡಲೇಸೊ ತತ್ತಜ್ಜೀವರ ಹಿಂಸೆ ತೈಲಸ್ನಾನದಿ ಹಿಂಸೆ ವಸ್ತ್ರ ಒಗೆಯಲೇಸೋ ಹಿಂಸೆ 15 ಸಲ್ಲದ ಹಿಂಸೆಯ ಸಲಿಸಿದರೆಂಬರ ಬಲ್ಲವಿಕೆಯ ನಾನೇನೆಂಬೆ ಬಲ್ಲಿದ ಹಿಂಸೆಗೆ ಒಳಗಾದರು ಎಲ್ಲ ತಾ- ಕೈವಲ್ಯ ಸಾಧಕರು 16 **** ತೊಳೆಯದ ಬಲುಹಿರಿಯರ ನಾತಕ್ಕೆ ಸೋತು ಬೆಂಬಿಡದೆ ಆತುರದಿಂ ಬಪ್ಪನೊಣಗಳ ಗೀತವ- ನೋತು ಕೇಳುವ ಶಿಷ್ಯ ಧನ್ಯ 17 ಮೂತ್ರ ದ್ವಾರದ ಮಲ ಶ್ರೋತ್ರನೇತ್ರದ ಮಲ ಗಾತ್ರ ನಾಸಿಕದ ಮಲ ಯಾತ್ರೆಯ ಮಾಡುವರಕ್ಷಿಗೆ ಕೌತುಕ ಪಾತ್ರವಾಯಿತು ಬಲು ಚಿತ್ರ 18 ******************* 19 ಏಕ ಭಾಗದೊಳು ಸ್ತ್ರೀ ವಾಸ ಏಕಾಂತದಿಪ್ಪುದು ಲೋಕಸಲ್ಲದೆಂಬರ ಈ ಕಾಮನೆಂತು ಬಿಟ್ಟಿಹನು 20 ಬಸ್ತಿಯ ಪ್ರತಿಮೆಯಲಿಪ್ಪ ದೇವನದಾರು ಮುಕ್ತರಿಗೀಭೋಗ ಸಲ್ಲ ಮುಕ್ತರÀಲ್ಲದ ಜೀವ ದೇವರೆಂತಹರೆಂದು ವ್ಯರ್ಥವಾಯಿತು ನಿನ್ನುತ್ಸಾಹ 21 ನೋಡುವ ನಯನಕ್ಕೆ ಮಾಡುವ ಪೂಜೆಗೆ ಕೂಡಿದ ಬಹುವಿತ್ತ ವ್ಯಯಕ್ಕೆ ಈಡಾಯಿತಂಶ ಕೇವಲ ಬೊಂಬೆ ಶಿವಶಿವ ಆಡುವ ಶಿಶುಗಳ್ಪೇಳಿದರೆ 22 ಹೆಂಡಿರೆ ಸಂಸಾರವಾದರೆ ಹಸಿತೃಷೆ ಉಂಡು ಮಲಗುವುದು ಮುಕ್ತರಿಗೆ ಮಂಡೆಯ ಬೋಳಿಸಿ ದೇಹದಂಡನೆ ಮಾಡಿ ಕೈ- ಕೊಂಡ ಮಾತ್ರದಿ ಮುಕ್ತರಹರೆ 23 ಮತ್ರ್ಯ ದೇಹವಿರಲು ಮುಕ್ತರೊಬ್ಬರು ಅಲ್ಲ ಸತ್ತಮೇಲೇನಾದರೆಂತೊ ಅತ್ತು ಕಾಡುವ ಶಿಷ್ಯರೆಂತರು ಕಾಂಬರು ಸರ್ವ- ಕರ್ತೃ ಶ್ರೀಹರಿ ತಾನೆ ಬಲ್ಲ 24 ದುಃಖವೆ ಸಂಸಾರ ದುಃಖವಿಲ್ಲದ ಸುಖ ಮುಕ್ತಿಯೆಂಬುದು ಬುಧರ್ಗೆ ಮಾತ್ರ ಮಿಕ್ಕದೆ ದುಃಖವಿತ್ತರೆ ಭವವೆನಿಪುದು ದುಃಖವೆ ದೂರ ಮುಕ್ತರಿಗೆ 25 ಪುನರ್ಭವವೆÉನ್ನೆ ಶ್ರುತಿ ಅಮೃತವುಂಡರೆ ಮೋಕ್ಷ ಜನನ ಮರಣವಿಲ್ಲದಖಿಳ ಜನರ ದುಃಖವನವತರಿಸಿ ಕಳೆವ ನಾರಾ- ಯಣನೆ ನಿರ್ದೋಷ ನಿತ್ಯಸುಖಿ 26 ಪಾತಕ ವ್ರತವ ಕೈಗೊಂಡ ಸ್ತ್ರೀ- ಜಾತಿಯ ಮುಟ್ಟಲ್ಲೆಂಬುವನು ಖ್ಯಾತ ಶ್ರೀಹರಿಗೆ ಪಾತಕಮುಟ್ಟದೆಂಬರ ಮಾತನದೇಕೆ ಮನ್ನಿಸನು 27 ಕೆಸರ ತೊಳೆದ ನೀರು ಕೆಸರ ಬಾಧಿಪುದೆ ತಾ- ವೈರಿ ಸೂರ್ಯನೊಳು ತಮವೆ ವಿಷಹರ ಗರುಡಗೆ ವಿಷ ಲೇಪಿಸುವುದೆ ಕ- ಲುಷ ಮುಟ್ಟುವುದೆ ಪಾಪಾಂತಕನ 28 ಸುಡುವಗ್ನಿ ಕಡಿವಸ್ತ್ರ ಕಡುಕೋಪಿ ಸರ್ಪನ ತಡೆಯಬಲ್ಲರೆ ತುಡುಕುವರೆ ಬಿಡು ಮನಭ್ರಾಂತಿಯ ಹಯವದನನೆ ಜಗ- ದೊಡೆಯ ಸರ್ವತ್ರ ನಿರ್ದೊಷ 29
--------------
ವಾದಿರಾಜ
ಚಿಂತೆಯಾತಕೆ ನಿನಗೆ ಎಲೆ ಪ್ರಿಯಳೆ | ಸಂತತ ತಿಳುಪುವೆನು ಭಕುತಿಯಿಂದಲಿ ಕೇಳು ಪ ಈ ಭೋಗ ನಮಗೆ ಯಾಕೆಂದು ನೀ ಕೇಳುವಿಯಾ | ಲಾಭವಲ್ಲದ ಇದು ನೋಡುವದಕೆ ಶ್ರೀ ಭೂರಮಣ ತಾನೆ ತಂದಿತ್ತ ವಿಚಿತ್ರ ವೈಭೋಗವಲ್ಲೆನೆಂದರೆ ಬಿಡದು ರಮಣೀ 1 ಹಿರಿಯರು ಈರ್ವಗೆ ಮಾಡಿದ ನಿಷ್ಠೆ ವಿ ಪರಿ ಸೌಖ್ಯವ ಹಿರಿದಾಗಿ ಕೊಟ್ಟು ನಮ್ಮನು ಪಾಲಿಸುವುದು ಬಲು ಮೊರೆಯಿಟ್ಟರೆ ಕೇಳು ಹರಿಯ ಮಹಿಮೆಗೆ ನಮೋ 2 ಕ್ಷೀರಸಾಗರದೊಳಗೆ ಓಲ್ಯಾಡುವವನ ವಿ ಚಾರಮಾಡದೆ ತಂದು ಹೃದಯಮಧ್ಯ ಸೇರಿಸುವಂದದಿ ಎನಗೆ ಇಲ್ಲಿಹ್ಯುದು ಸಂ ಸಾರದೊಳಗಿದ್ದ ಸುಖವಿನಿತುಂಟು ರಮಣೀ 3 ಸಂತಾನವಿಲ್ಲೆಂದು ಈರ್ವರೂ ಚಿಂತಿಪದ್ಯಾಕೆ ಪಿಂತೆ ಕಾಂತಾರದಲಿ ಬಾಲಮೃಗನ ಅಂತಕನ ಪುರಿಗೆ ಅಟ್ಟಿದ ದೋಷದಿಂದ ನಮ- ಗಿಂತು ತೋರಿತು ಗುಟ್ಟು ಪೇಳಬಾರದು ರಮಣೀ 4 ಈ ಜನ್ಮ ಬಂದದಕೆ ಇನ್ನಾದರೆಚ್ಚೆತ್ತು ಮಾಜಿಕೊಂಡಿದ್ದು ಜನರಂತೆ ನಡದು ಸಿರಿ ವಿಜಯವಿಠ್ಠಲನ ಸ ರೋಜ ಚರಣವನು ಪೂಜಿಸುವೆನು ರಮಣೀ 5
--------------
ವಿಜಯದಾಸ
ತುಳಸಿಯ ಸೇವಿಸಿ ಪ ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ ಗಾತರದ ಮಲವಳಿದು ಮಾತೆ ಯೆಂಬನಿತರೊಳು ಮಾಡುವಳು ಯಾತಕನುಮಾನವಯ್ಯ ಅ.ಪ. ಸುಧೆಗಡಲ ಮಥಿಸುವ ಸಮಯದಲಿ ವೈದ್ಯನಾಗಿ | ಪದುವನಾಭನು ತಾನು ಉದುಭವಿಸಿ ಬರಲಂದು | ಉದಕವುತ್ಸಹದಿಂದಲದೆ ತುಳಸಿ ನಾಮನಾಗೆ || ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರು | ಒದಗಿ ಸುಜನರು ತಮ್ಮ ಸದನದಲಿ ನಿತ್ಯ ತಿಳಿದು ವೃಂದಾವನ ರಚಿಸಿದರೈಯ1 ಮೂಲದಲಿ ಸರ್ವ ತೀರ್ಥಗಳುಂಟು ತನ್ಮದ್ಯೆ | ಕಾಲ ಮೀರದೆ ಸರ್ವ ನದನದಿಗಳಮರಗಣ | ಮೂರತಿಯು ವಾಲಯವಾಗಿಪ್ಪುದು || ಮೂರ್ಲೋಕಗಳ ಧರ್ಮ ವ್ರತಕೆ ಮಿಗಿಲೆನಿಸುವುದು | ನೀಲಮೇಘಶ್ಯಾಮಗರ್ಪಿಸಿದ ತುಳಸಿ ನಿ | ಧರಿಸಿದ ಮನುಜ ಕಾಲನಾಳಿಗೆ ಶೂಲನೊ2 ಉದಯದೊಳಗೆದ್ದು ನೀರೆರೆದು ಮಜ್ಜನಗೈದು | ತುದಿ ಬೆರಳಿನಿಂದ ಮೃತ್ತಿಕೆಯ ಫಣಿಯೊಳಗಿಟ್ಟು | ತದನಂತರದಲಿ ಭಜನೆ || ವದನದೊಳು ಗೈಯೆ ಧರೆಯೊಳಗಿದ್ದ ಸರ್ವವದ | ನದಿಗಳಿಗೆ ನೂರ್ಮಡಿ ಯಾತ್ರೆ ಮಾಡಿದ ಫಲ | ಜನ್ಮಗಳಘವ ತುದಿ ಮೊದಲು ದಹಿಪುದಯ್ಯ3 ಆವವನ ಮನೆಯಲ್ಲಿ ತುಳಸಿ ಸಾಲಿಗ್ರಾಮ | ಆವವನ ಮನೆಯಲ್ಲಿ ಹರಿದಾಸರಾ ಕೂಟ | ಪಾವಮಾನಿಯ ಮತದೊಳು || ಆವವನು ಕಾಂತ್ರಯವ ಕಳೆವ ನಾವಲ್ಲಿ | ವಾಸುದೇವ ಮುನಿ ದೇವಾದಿಗಣ ಸಹಿತ | ಭಾವಿಸಿರಿ ಭಾವಙ್ಞರು 4 ಕಂಡರೆ ದುರಿತಕ್ಕೆ ಕೆಂಡವನು ಬೀರುವುದು | ಕೊಂಡಾಡಿದರೆ ಪುಣ್ಯವ ಪರಿಮಿತವುಂಟು ಮೈ-| ಜನನವಿಲ್ಲ ಸಲೆ ದಂಡ ವಿಟ್ಟವ ಮುಕ್ತನೊ || ಚಂಡಾಲ ಕೇರಿಯೊಳು ಇರಲು ಹೀನಯವಲ್ಲ | ಪಾಂಡುರಂಗ ಕ್ಷೇತ್ರ ಸರಿಮಿಗಿಲು ಎನಿಸುವುದು | ಯೋಗ್ಯ ಫಲ ಕಂಡವರಿಗುಂಟೆ ಅಯ್ಯ5 ಚಿತ್ತ ಶುದ್ದನು ಆಗಿ ಮುಂಝಾನೆಯೊಳು ತುಳಸಿ | ಸ್ತೋತ್ರವನೆ ಮಾಡುತ್ತ ದಿವ್ಯಾವಾಗಿಹ ತ್ರಿದೊಳ | ತುಂಬಿ ವಿತ್ತಾದಿಯಲಿ ತಾರದೆ || ಮತ್ತೆ ವಸ್ತ್ರದಿ ಹಸ್ತ ಶಿಲೆಯರ್ಕ ಏರಂಡ | ಪತ್ರದಲಿ ತಾರದಲೆ ಭೂಮಿಯೊಳಗಿಡದೆ ಪೂ - | ತರಬೇಕು ಹೊತ್ತು ಮೀರಿಸಲಾಗದೊ6 ಕವಿ ಮಂಗಳವಾರ ವೈಥೃತಿ ವ್ಯತೀಪಾತ ರವಿ ಶಶಿಯ ಸಂಗಮ ಪರ್ವಣಿ ಪುಣ್ಯಕಾಲ ಇವುಗಳಲಿ ತೆಗೆಯಾದಿರಿ ನವವಸನ ಪೊದ್ದು ಊಟವ ಮಾಡಿ ತಾಂಬೂಲ- ಸವಿಯುತ್ತ ಮುಟ್ಟದಿರಿ ಯುವತಿ ಶೂದ್ರರಿಂ ತರಿ ಕೊಂಡಾಡುತಿರಿ ದಿವಸಗಳೊಳಯ್ಯ 7 ದಳವಿದ್ದರೇ ವಳಿತು ಇಲ್ಲದಿದ್ದರೆ ಕಾಷ್ಟ ಎಲೆ ಮೃತ್ತಿಕೆಗಳಿಂದ ಪೂಜೆ ಮಾಡಲಿಬಹುದು ತೊಳೆ ತೊಳೆದು ಏರಿಸಲಿಬಹುದು ತುಳಸಿ ಒಣಗಿದ್ದರೂ ಲೇಶದೋಷಗಳಲ್ಲಿ ತುಳಸಿ ವಿರಹಿತವಾದ ಪೂಜೆಯದು ಸಲ್ಲದು ಮಾಡಿ ಜಲಜಾಕ್ಷನರ್ಚಿಸಿರೈಯ್ಯ 8 ಸದನ ಹೊಲೆಮಾದಿಗರ ಸದನ ತುಳಸಿ ಇಲ್ಲದ ಬೀದಿ ನರಕಕೆಳಸುವ ಹಾದಿ ವ್ಯರ್ಥ ತುಳಸಿ ಬಲು ಪ್ರಾಧಾನ್ಯವೊ ತುಳಸಿ ಮಿಶ್ರಿತವಾದ ನೈವೇದ್ಯ ಗತಿಸಾದ್ಯ ತುಳಸಿ ಧರಿಸಿದ ದೇಹ ಪರಮ ಸಾರ್ಥಕವಯ್ಯ ನೆಲೆಯ ನಾ ಕಾಣೆನಯ್ಯ9 ಸತಿ ಪ್ರಹ್ಲಾದ ನಾರದ ವಿಭೀಷಣನು ಧ್ರುವ ಅಂಬರೀಷ ಶಶಿಬಿಂದು ರುಕ್ಮಾಂಗದನು ವಿವರವನು ತಿಳಿದರ್ಚಿಸಿ ತವಕದಿಂ ತಂತಮ್ಮ ಘನ ಪದವನೈದಿದರು ಭುವನದೊಳಗುಳ್ಳ ನಿರ್ಮಲ ಜನರು ಭಜಿಸಿದರು ನೀಗಿ ಭವದೊರರಾದರೈಯ 10 ಉದಯಕಾಲದೊಳೆದ್ದು ಆವನಾದರು ತನ್ನ ಹೃದಯ ನಿರ್ಮಲನಾಗಿ ಭಕುತಿಪೂರ್ವಕದಿಂದ ಸ್ತೋತ್ರಮಾಡಿದ ಕ್ಷಣಕೆ ಮದ ಗರ್ವ ಪರಿಹಾರವೊ ಇದೆ ತುಳಸಿ ಸೇವಿಸಲು ಪೂರ್ವದ ಕಾವೇರಿ ನದಿಯ ತೀರದಲೊಬ್ಬ ಭೂಸುರ ಪದಕೆÉ ವ್ಯೋವ ಸಿರಿ ಪ್ರಿಯಳಾದ ಮದನತೇಜಳ ಭಜಿಸಿರೈದು 11
--------------
ವಿಜಯದಾಸ
ದೂರದಿ ನಿಲ್ಲೆಲೆ ಬಾಲೆ ಎನ್ನ ಜಾರನು ಎಂದು ತಿಳಿದೆಯಾ ಜಾರೆ ಅಹಲ್ಯೆಯ ನಾರಿ ಮಾಡಿದ ಬ್ರಹ್ಮಚಾರಿಯೆಂದರಿತೆನೊ 1 ಅಂಗಸಂಗ ಯಾಚಿಸಲು ಎನ್ನ ಅ ನಂಗನೆಂದು ಭ್ರಮಿಸಿದೆಯಾ ಸಂಗದಿಂದ ಪಾಪಭಂಗ ಮಾಡುವ ಅ ನಂಗಜನಕನೆಂದರಿತೆ 2 ಪತಿಯನು ಬಿಟ್ಟು ನೀ ಬಂದು ಬಾಲೆ ಪತಿತಳಾಗದಿರು ಇಂದು ಪತಿತ ಪಾವನ ಜಗತ್ಪತಿಯು ಎನಗೆ ನೀನೆ ಪತಿಯೆಂದು ತಿಳಿದು ಬಂದಿರುವೆ 3 ನಿಂದಿಸರೇ ನಿನ್ನ ಜನರು ಬಾಲೆ ಹಿಂದು ಮುಂದು ನುಡಿಗಳಲಿ ಮುಕುಂದನೆ ಪ್ರಿಯಳನು ನಿಂದಿಪ ಜನರೆಲ್ಲ ಮಂದಮತಿಗಳಲ್ಲವೇನೊ 4 ನಿನ್ನ ನಡತೆ ತರವಲ್ಲ ಬಾಲೆ ಚೆನ್ನಾಗಿ ಯೋಚಿಸು ಎಲ್ಲ ಇನ್ನು ತಾಳಲಾರೆ ಕನ್ಯೆಯ ಮೇಲೆ ಪ್ರ ಸನ್ನನಾಗೋ ಶ್ರೀಕೃಷ್ಣ 5
--------------
ವಿದ್ಯಾಪ್ರಸನ್ನತೀರ್ಥರು
ಮಹಾಲಕ್ಷ್ಮಿ ಏನಂತಿ ಕಮಲನಾಭನ ಪ್ರಿಯಳೆ ಜಗ- ದಾನಂತ ಪದುಮನಾಭನ ಭಾರ್ಯಳೆ ಪ ಸಿರಿ ಎನ್ನ ಮೊರೆ ಕೇಳೆ ಸಿದ್ಧವಾಗೆನಗ್ಹೇಳೆ ಶುದ್ಧ ಮಾರ್ಗವ ತೋರೆ ಬುದ್ಧಿಪೂರ್ವಕವಾಗಿ ಭುವನದೊಡೆಯನ ಪಾದ- ಪದ್ಮದಲ್ಲಾಸಕ್ತೆ ಬುದ್ಧಿ ಕೇಳುವೆ ಶಾಂತಿ1 ಜನಕಾತ್ಮಜಳೆ ನೀ ಜಗದೇಕ ಸುಂದರಿ ಜಗದಾಧಿಪತಿ ವಕ್ಷಸ್ಥಳ ಆಶ್ರಯಳೆ ಕೃತಿ ಸರ್ವಮಂಗಳಕಾರಿ ಪರಮ ಕರುಣದಿ ನೋಡೆ ವರಲಕ್ಷ್ಮಿ ದಯಮಾಡೆ ವರಗಳನೀಡ್ಯಾಡೆ 2 ಭೀಷ್ಮಕನ ಪುತ್ರಿ ಬಿರುದೇನೆ ಸರಸಿಜನೇತ್ರೆ ಮೃಡ ಬ್ರಹ್ಮರೊಡೆಯ ಭೀಮೇಶಕೃಷ್ಣನ ಮಿತ್ರೆ ಪೊಡವಿಗಧಿಕಳೆ ಜಯ ಮೂಡಲಗಿರಿವಾಸಿ ಬಿಡದೆ ಕೈ ಹಿಡಿದೆನ್ನ ಕಡೆಹಾಯ್ಸೆ ಕಮಲಾಕ್ಷಿ 3
--------------
ಹರಪನಹಳ್ಳಿಭೀಮವ್ವ
ರಾಮನಾಮದಿ ಪಾಮರರಿಗೆ ಪ್ರೇಮ ಪುಟ್ಟುವುದೆ ಪ. ಭೃತ್ಯ ನ್ಯಾಯವರಿಯದ ಕಾಮಿಗಿದರೊಳು ನೇಮ ಬಪ್ಪುದೆ ಅ.ಪ. ದಾಶರಥಿ ಎನಿಸಿ ಜಗದೊಳು ಶ್ರೀಶನವತರಿಸೆ ಕೌಶಿಕನ ಮಖ ಘಾಸಿಗೈಯ್ಯುವ ದೋಷಿಗಳ ತಾ ನಾಶಗೈಸಿದ 1 ಶಿಲೆಯ ಪೆಣ್ಗೈದು ಲಲನೆ ಸೀತೆಯ ಒಲುಮೆಯಿಂ ವರಿಸಿ ಕುಲವನಳಿದನ ಛಲವ ಭಂಗಿಸಿ ಲಲನೆ ಸಹಿತದಿ ನೆಲಸೆ ಪುರದಲಿ 2 ಅನುಜ ಸ ಹಿತ ವನಕೆ ಬರೆ ಖ್ಯಾತಿ ರಾವಣನಾ ತಳೋದರಿ ಪ್ರೀತಿಸಲು ವಿಘಾತಿಗೈಸಿದ 3 ಮಾಯಾಮೃಗ ಕಂಡು ಪ್ರಿಯ ನೀಡೆನೆ ಸಾಯಕವನೆಸೆಯೆ ಕಾಯ ಬಿಡುತಿರೆ ಹೇಯ ರಾವಣ ಪ್ರಿಯಳನುಯ್ಯೆ ನೋಯ್ದ ಮನದಲಿ 4 ಬೆಟ್ಟವನೆ ಕಂಡು ಕುಟ್ಟಿ ವಾಲಿಯ ಪಟ್ಟ ಕಪಿಗಿತ್ತು ಶ್ರೇಷ್ಠ ಹನುಮಗೆ ಕೊಟ್ಟು ಉಂಗುರ ಪಟ್ಟದರಸಿಗೆ ಮುಟ್ಟಿಸೆಂದ 5 ಕೇಳಿ ಶ್ರೀ ವಾರ್ತೆ ತಾಳೀ ಹರುಷವ ಬೀಳು ಕೊಂಡಲ್ಲಿಂ ತಾಳೆ ಕೋಪವ ಕೇಳಿ ವನಧಿ ಸೀಳು ಆಗಲು ಶಿಲೆಯ ಬಿಗಿದ 6 ದುಷ್ಟ ರಾವಣನ ಕುಟ್ಟಿ ಶಿರವನು ಪಟ್ಟದರಸಿ ಕೂಡಿ ಶ್ರೇಷ್ಠ ಭರತಗೆ ಕೊಟ್ಟು ದಶರ್Àನ ಪಟ್ಟವಾಳಿದ ದಿಟ್ಟಯೋಧ್ಯೆದಿ 7 ರಾಮ ರಾಮನೆಂಬಾ ಹನುಮಗೆ ಪ್ರೇಮದಿಂದೊಲಿದು ಧಾಮ ಅಜಪದ ನೇಮಿಸಿ ಮುಂದೆ ಸೋಮನೆನಿಸಿದ ಭಾನು ವಂಶಕೆ8 ಬೆಟ್ಟದೊಡೆಯನ ಇಷ್ಟು ಮಹಿಮೆಯ ಮುಟ್ಟಿಮನ ಭಜಿಸಿ ದಿಟ್ಟ ಗೋಪಾಲಕೃಷ್ಣವಿಠ್ಠಲ ಶ್ರೇಷ್ಠನೆನ್ನುವ ಶ್ರೇಷ್ಠಗಲ್ಲದೆ 9
--------------
ಅಂಬಾಬಾಯಿ
ವಾರಿಧಿ ಈರೇಳು ಲೋಕನಾಯಿಕೆ ಪ ದೂರ ನೋಡದಲೆ ಅಪ ನಿತ್ಯ ಕಲ್ಯಾಣಿ ವೇದವತಿಯೆ ರುಕ್ಮಿಣಿ ವೇದ ವೇದಾಂತದಭಿಮಾನಿ ವಾರಿಜ ಪಾಣಿ ಆದಿ ಮಧ್ಯಾಂತ ಗುಣಮಣಿ ಭೇದಗೊಳಿಪ ಕಾಮಕ್ರೋಧಗಳೋಡಿಸಿ ನೀ ದಯದಿಂದಲೆ ಮುಂದೆ ಗತಿಗೆ ಪಂಚ ಮಾಧವ ಪ್ರಿಯಳೆ 1 ಮಾಯಾ ಕೃತಿ ನಾಮದೊಳಪ್ಪ ಗುಣವಂತೆ ಕೋಮಲವಾದ ವೈಜಯಂತೆ ಧರಿಸಿದ ಶಾಂತೆ ಸೋಮಾರ್ಕ ಕೋಟಿ ಮಿಗೆ ಕಾಂತೆ ತಾಮರಸಾಂಬಕೆ ರಮೆ ಲಕುಮಿ ಸತ್ಯ ಭಾಮೆ ಭವಾರಣ್ಯ ಧೂಮಕೇತಳೆ ಯಾಮ ಯಾಮಕೆ ಹರಿ ನಾಮವ ನುಡಿಸಿ ಉತ್ತಮರೊಡನೆ ಪರಿ ಣಾಮವನೀಯುತ 2 ಅನೇಕಾಭರಣ ಭೂಷಿತೆ ಧರಣಿಜಾತೆ ಜ್ಞಾನಿಗಳ ಮನೋಪ್ರೀತೆ ಆನಂದಲೀಲೆ ವಿಖ್ಯಾತೆ ಆದಿದೇವತೆ ಕಾಣೆನೆ ದಾನಿ ಇಂದಿರಾದೇವಿ ನಾನಾ ಪರಿಯಲಿ ಶ್ರೀನಿಧಿ ವಿಜಯವಿಠ್ಠಲನ ಮೂರುತಿಯಧ್ಯಾನದೊಳಿಡುವಂಥ ಜ್ಞಾನ ಭಕುತಿ ಕೊಡು3
--------------
ವಿಜಯದಾಸ
ವೃಂದಾವನದೊಳು ಶೋಭಿಸುತಿರುವಳು ಸುಂದರ ಶ್ರೀ ತುಳಸಿ ಪ ನಂದನಂದನ ಗತಿ ಪ್ರಿಯಳೆಂದೆನಿಸುತ ಭವ ಬಂಧವ ಬಿಡಿಸುತ ಅ.ಪ ನಿತ್ಯವು ಪ್ರಾತಃಕಾಲದೊಳೆದ್ದು ಪವಿತ್ರ ಚಿತ್ತದಲಿ ಭಕ್ತಿಯಲಿ ಸ್ತೋತ್ರವ ಗೈಯುತ ಸುತ್ತಿ ಪ್ರದಕ್ಷಿಣೆ ಮತ್ತೆ ನಮಿಪರಘ ಬತ್ತಿಸಿ ಸಲಹುತ 1 ತುಳಸಿ ವೃಂದಾವನ ಮಹಿಮೆಯ ಮನದಲಿ ನಿಲಿಸಿ ಸೇವಿಸುವ ಸಜ್ಜನರ ಕಲಿದೋಷಗಳನು ಕಳೆದು ಸತತ ಶ್ರೀ ನಿಲಯನÉೂಳ್ ಭಕ್ತಿಯ ಕೊಡುವೆನೆಂದೆನುತ 2 ತುಳಸಿ ದಳದಿ ಶ್ರೀ ಕರಿಗಿರೀಶನ ವಿಲಸಿತ ಪೂಜೆಯ ಮಾಡುವರ ಸುಲಲಿತ ಸತ್ಪಥದೊಳು ನಡೆಸುತ ನಿ ರ್ಮಲಮತಿ ಕರುಣಿಸಿ ಸಲಹುವೆನೆನ್ನುತ 3
--------------
ವರಾವಾಣಿರಾಮರಾಯದಾಸರು
ಶುಕ್ಕುರವಾರದಿ ಭಕ್ತಿಲಿ ಭಜಿಸುವೆ ಲಕ್ಕುಮಿ ದೇವಿಯನುರುಕ್ಮಾಭರಣ ವಿಲಕ್ಷಣ ಶೋಭಿಪ ಸುಲಕ್ಷಣ ಮೂರ್ತಿಯನುರಕ್ಕಸರಿಪು ಬಲಪಕ್ಕದಿ ಕೂತಿಹ ರುಕ್ಮಿಣಿ ದೇವಿಯನು ಪ ಸಂತತ ಭಜಿಸುವ ಸಂತರ ಹತ್ತಿರ ನಿಂತು ರಕ್ಷಿಸುತಿಹಳುಶಾಂತಳು ಸದ್ಗುಣವಂತಳು ಕಮಲಾಕಾಂತನ ಸುಪ್ರಿಯಳೂ ಕರವೀರಪ್ರಾಂತ್ಯದೊಳಿರುತಿಹಳು ಹೃತ್ಕಮಲಂಚಳ ಸಂಸ್ಥಿತಳು 1 ಮಾಧವ ಭೂಮಿಯ ಮಂಗಳ ಮೂರ್ತಿಯು ಸುಖರಾಶಿ2 ಆಸ್ಯಾಂಬುಜತನು ಹಾಸಸುಕುಂತಳೆ ಭೂಷಿತ ಬಿಂಬೋಷ್ಠೀಕೂಸಿಗೆ ಕೊಡು ಇಂದಿರೇಶನ ಸಹಜಗದೀಶಳೆ ತವ ಭೆಟ್ಟಿ3 ಅಗಣಿತ ಮಹಿಮನಸುಗುಣದೊಳಾಡುವ ಮಿಗೆ ಹರುಷವ ಕೊಡುನಗೆಮುಖದವಳೇ 4 ಸಂದರವದನೆ ಸಿಂಧುರಗಮನೆ ಕುಂದದ ಅಸುರರನೆಮಂದರಮಾಲಾ ಭೂಷಿತವೇಣಿ ಇಂದಿರೇಶನ ಪಾದದ್ವಂದ್ವತೋರಿಸು ನಿನಗೊಂದಿಸುವೆನು ಶರದಿಂದು ಸುಮನಸೆ 5
--------------
ಇಂದಿರೇಶರು
ಶ್ರೀ ತುಳಸಿ ಇಂದಿರೆ ವಂದೆ ಆನಂದೀ ತುಳಸೀದೇವಿ ನಂಬಿದೆ ಸುರಸುಂದರಿ ಪ ಎಂದೆಂದಿಗೂ ನಾ ನಿನ್ನಧೀನವೆ ಮಾತೆ ಸಿಂಧುಶಯನ ಪ್ರಿಯೆ ವರದೆ ಆನಂದದೆ ಅ.ಪ ಆದಿಕಾರಣ ವಿಷ್ಣು ಪ್ರಿಯಳೆ ಶ್ಯಾಮಲೆ ಕೋಮಲೆ ವಿಧಿಶರ್ವವಂದಿತೆ ವಿದ್ಯಾಧರಾದಿ ಅರ್ಚಿತೆ ಆದರದಲಿ ನಿನ್ನ ಪಾದಪಂಕಜಗಳ ಪ್ರತಿದಿನ ಸ್ಮರಿಪೆನೆ ವೃಂದಾವನಸ್ಥಿತೆ ತುಳಸಿ ಸುರೇಶ್ವರಿ1 ಈರಾರು ಅಕ್ಷರ ಮಂತ್ರ ಸುಪ್ರತಿಪಾದ್ಯೆ ನಾರದನುತೆ ನಾರಾಯಣ ಮನಃಪ್ರಿಯಳೆ ಪಾತಕ ಬಹು ಪಾಪಹಾರಿಣಿ ನಿನ್ನ ಎನ್ನ ವರದೆ ತುಳಸೀದೇವಿ 2 ನಿನ್ನ ಸ್ಮರಣೆ ಮಾಡೆ ಸರ್ವತ್ರ ವಿಜಯವಹುದೆ ನಿನ್ನ ಸಂದರ್ಶನದಿ ಸರ್ವಪಾಪವು ಪೋಪುವೆ ಪಾತಕ ತಾಪಾದಿ 1 ಗಳಳಿಯೆ ಘನ್ನ ಪ್ರಸನ್ನ ಶ್ರೀನಿವಾಸನ ನಿಜಸತಿ ವಿರಜೆ ತುಳಸೀಮಾತೆ 3
--------------
ಪ್ರಸನ್ನ ಶ್ರೀನಿವಾಸದಾಸರು