ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸು ದೇವದೇವ ಸೆರಗೊಡ್ಡಿ ಬೇಡುವೆನಭವ ಪರಿಹರಿಸು ಎನ್ನ ಕರುಣಾಳು ಲಕ್ಷ್ಮಿಯ ಜೀವ ಪ ಅಂಬುಧಿಶಾಯಿಯೆ ನಿನ್ನ ಭಜಿಪೆ ಪಾವನ್ನ ಅಂಬುಜಸಂಭವಪಿತನೆ ಕಂಬುಕಂಧರಪ್ರಿಯಸಖನೆ ಅಂಬುಧಿಯಸಂಜಾತೆರಮಣ ಬೆಂಬಲಿಸಿ ಕಾಯೊ ಬಡವನ್ನ 1 ಸುಂದರಕಾಯ ಇಂದಿರೆಯ ಪ್ರಾಣಪ್ರಿಯ ಬಂಧನದ ಬಡತನ ಕಳಿಯೊ ವಂದಿಸಿ ಮರೆಹೊಕ್ಕೆ ಜೀಯ 2 ಈಸೀಸಿ ಸಂಸಾರನಿಧಿಯ ಬೇಸತ್ತು ಬಿಡುವೆನೊ ಬಾಯ ಘಾಸಿ ಮಾಡದೆ ಸಲಹಯ್ಯ 3
--------------
ರಾಮದಾಸರು
ಭಜಿಸು ಮಾನಸ ತ್ರಿಜಗದರಸ ಪ. ನಿಜಭಜಕ ಜನಾಶ್ರಯ ಸುಜನಬಾಂಧವ ಅಜಮುಖಾರ್ಚಿತ ಪಾದಪಂಕಜ ಅಜಾಮಿಳವರದನಂಘ್ರಿಯ ಅ.ಪ. ಪವನನಂದನ ಸೇವ್ಯನ ಪದ್ಮಾಕ್ಷನ ಪಾವನಗುಣಶೀಲನ ಪರಮಾತ್ಮನ ಪತಿತಪಾವನ ನಾಮನ ಅಪಾರ ಮಹಿಮನ ಸುರನರೋರುಗ ನಮಿತ ಚರಣನ ತರಣಿವಂಶಾಬ್ಧಿ ಚಂದ್ರಮನ ಪುರವೈರಿ ಪ್ರಿಯಸಖನ ಪರಂತಪ ರಾಘವೇಂದ್ರನ 1 ವಿಕ್ರಮನ ಭಯನಾಶನ ಕಾಕುತ್ಸ್ಧಕುಲದೀಪನ ಸುಗುಣಾ ರಾಮನ ಪಾಕಾರಿವಿನುತ ಸಾಕೇತನಿಲಯನ ರಾಕೇಂದುನಿಭಾಸ್ಯ ಶ್ರೀ ವರನ ಲೋಕಮೋಹನ ಮೇಘ ಶ್ಯಾಮನ ವೈಕುಂಠಪತಿ ಲಕ್ಷ್ಮೀಶ ಕೇಶವನ2 ಪಾಲಲೋಚನನ ಪಂಕಜಾಸನ ಪಾಕಾರಿಮುಖ ನಮಿತ ಚರಣನ ಶ್ರೀಲೋಲ ಶೇಷಾಚಲನಿಲಯ ಶ್ರೀವೇಂಕಟನ3
--------------
ನಂಜನಗೂಡು ತಿರುಮಲಾಂಬಾ