ಒಟ್ಟು 8 ಕಡೆಗಳಲ್ಲಿ , 7 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಲದೆಲಿಯ ಮ್ಯಾಲ ಮಲಗ್ಯುಂಗುಟ ಚಪ್ಪರಿವನು ನೀನಾರೈ ಮೂಲರೂಪದ ನಿಜದೋರದೆ ಬಾಲಕನಾಗಿಹ ನೀನಾರೈಧ್ರುವ ಚಲುವ ಕಂಗಳ ನೋಡದಲ್ಹೊಳವುತ ಜಲದೊಳಗಾಡುವನಾರೈ ಕಾಲುಡಿಗಿಸಿ ಬೆನ್ನಿಲೆ ಬಲು ಕಠಿಣವ ತಾಳಿದವ ನಿನಾರೈ 1 ಕೋರ್ಹಲ್ಲಿಲಿ ಬೇರನೆ ಅಗಳ್ಯಾಡುತ ದೋರುವ ನೀನಾರೈ ನರಮೃಗರೂಪದಿ ತರಳಗೊಳಿದು ಭರದಲಿ ಬಂದವನಾರೈ 2 ಒಪ್ಪಿಲಿ ಮೂರುಪಾದ ಭೂಮಿಯೊಪ್ಪಿಸಿಕೊಂಡವನಾರೈ ಚಪ್ಪಗೊಡಲಿ ಕೈಯಲಿ ಪಿಡಕೊಂಡು ಇಪ್ಪವ ನೀನಾರೈ 3 ಬಳ್ಳಿಹಿಡಿದು ಕಲ್ಲನೆ ಉದ್ಧರಿಸಿದ ಮಲ್ಲನು ನೀನಾರೈ ಗೊಲ್ಲತೆಯರ ಮೋಹಿನಿ ಎಳಿದಾಡುವ ಚಲುವನು ನೀನಾರೈ 4 ಚದುರನು ನೀನಾರೈ ಕುದುರೆಯನೇರಿ ಹದನದಿ ತಿರವ್ಯಾಡುವ ರಾವುತನಾರೈ 5 ಕುರುಹುದೋರದೆ ನರನಾರಿಯರ ರೂಪದಲ್ಯಾಡಿದವನಾರೈ ಬಡಿಸಿದವ ನೀನಾರೈ 6 ಅಗಣಿತ ಗುಣದಲಿ ಬಗೆ ಬಗೆ ಅಡುವ ಸುಗುಣ ನೀನಾರೆ ೈ ಝಗಝಗಿಸುವ ಜಗನ್ಮನೋಹರನಾಗ್ಯಾಡುವ ನೀನಾರೈ 7 ಖೂನ ಕುರುಹದೋರಿದ ಭಾನುಕೋಟಿ ತೇಜನಹುದೋ ಬಾರೈ ದೀನ ಮಹಿಪತಿ ಸನಾಥಮಾಡಿದ ದೀನೋದ್ಧಾರಹುದಹುದೈ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕತ್ತೆಯು ನೀನಲ್ಲ ಕರುಣಾಕರನಹೆ ಕತ್ತೆಯಾಗಬೇಡ ಕತ್ತೆಸತ್ಯ ಚಿದಾನಂದ ನೀನರೆ ಮರೆತರೆ ಕತ್ತೆನೀನಾಗುವೆ ಕತ್ತೆ ಪ ಬೊಂಬೆಗೆ ಪ್ರಾಣವನಿಟ್ಟು ದೇವರು ಎಂಬೆ ದೇವರು ಅವು ಕತ್ತೆಬೊಂಬೆಗೆ ಪ್ರಾಣ ಪ್ರತಿಷ್ಠೆಯ ಮಾಡಲು ನೀನಾರು ಹೇಳಲೋ ಕತ್ತೆಬೊಂಬೆ ಸತ್ತವಲ್ಲೊ ಪ್ರಾಣ ತೆಗೆದುಕೊಳ್ಳೆ ನೀರ ಮುಳುಗು ನೀನು ಕತ್ತೆಬೊಂಬೆ ಚೇತನ ಸಾಕ್ಷಾತ್ಕಾರವೆ ಇರೆ ದೇವ ನೀನೆಂತಲ್ಲ ಕತ್ತೆ 1 ಹಿಂದಣ ಪುರಾಣ ಹೇಳುವೆ ನೀನೀಗ ನಿನ್ನ ಪುರಾಣವೆಲ್ಲೊ ಕತ್ತೆಬಂದವನಾರೋ ಹೋಗುವನಾರೋ ಎಂಬುದು ತಿಳಿಯಲಿಲ್ಲ ಕತ್ತೆಬಂದೆಯೋ ಅವಿದ್ಯೆ ದೆಸೆಯಿಂದ ರೂಪಿಗೆ ಜೀವ ನೀನೆನಿಸಿ ಕತ್ತೆಎಂದು ಎಂದಿಗೂ ನೀ ಬ್ರಹ್ಮವೆ ಸತ್ಯವು ಯೋಚನೆ ಬಿಡು ನೀ ಕತ್ತೆ 2 ನಮಕ ಚಮಕ ಅಭಿಷೇಕ ಮಾಡುವಿ ಏನಂತ ಮಾಡುವಿ ಕತ್ತೆಸಮನಿಸಲಿಲ್ಲ ವೇದಾಂತದರ್ಥವು ನಿನಗೆ ಸುಡು ನಿನ್ನ ತಿಳಿವಿಗೆ ಕತ್ತೆಕಮಲಮುಖಿಯ ಸುತರನು ನೀನು ನಂಬುವೆ ಪ್ರಪಂಚ ಸತ್ಯವೇನೋ ಕತ್ತೆಭ್ರಮಣಕ್ಕೆ ಸಿಲುಕಿ ನಾನಾ ಭಂಗಪಡುವೆ ಭಾವಿಸಿ ತಿಳಿನೀ ಕತ್ತೆ 3 ಕನಸಿನನುಭವದಂತೆ ಪ್ರಾರಬ್ಧ ತೋರುವುದು ದೇಹದಾರಿಗಳಿಗೆ ಕತ್ತೆಚಿನುಮಯಾತ್ಮಕನಲ್ಲಿ ಪ್ರಾರಬ್ಧ ತೋರಿಯೆ ತನಗೆ ತಾನಡಗುವುದು ಕತ್ತೆನಿನಗದು ಏನಿಲ್ಲ ಮನಸಿನ ಭ್ರಾಂತಿಯೆನಲನುಭವಿಸುವೆ ಕತ್ತೆ 4 ಪಾದ ತಿಳಿ ತತ್ತ್ವಮಸಿಯನ ಕತ್ತೆಬಂಧಿಸಿ ಆಧಾರ ಚಕ್ರವನೇರು ಏರಿ ನಿಂತು ಭ್ರೂಮಧ್ಯದಿ ಕತ್ತೆಮುಂದೆ ಹರಿಯ ನೋಡು ಸಹಸ್ರಾರದ ಪೀಠ ಛಂದದಿ ಅಡರ್ಮೇಲೆ ಕತ್ತೆಸುಂದರ ಚಿದಾನಂದ ನಾಗಿಯ ಥಳಥಳ ಬೆಳಕಲ್ಲಿ ಬೆಳಕಾಗೊ ಕತ್ತೆ5
--------------
ಚಿದಾನಂದ ಅವಧೂತರು
ಬಂದವನಾರಯ್ಯ ನೀನು ಒಂದಿನ ರಾತ್ರಿಲಿ ನಂದನಂದನು|ಹೊರಗಿಂದಲಿ ಬರಲು|ಚೆಂದದಿ ರುಕ್ಷಿಣಿ ಮನದೊಳರಿತು ನುಡಿ|ಎಂದಳು ಸರಸದಲಿ ಈಗ|ನೀನು- ಪ ಇರುಳುಮಧ್ಯದಲಿ ಧೀರತನದಲಿ| ಸಾರಿಸಾರಿಕದನೋತ್ತುತಲಿ| ಧ್ವನಿಯ ದೋರದೆ ಗುರುತವ ಮರೆಯಿಸಿ| ದ್ವಾರದಿಸುಳಿವವನು|ನೀನು 1 ಅಡಿಯಿಡದೆವೆ ಮೈ ಅಡಗಿಸಿಕೊಂಡು| ದೃಢದಲಿ ಅಬಲೆಯಕಂಡು| ಎಡಬಲನೊಡದೆ ಬಾಯ್ದೆರೆದು ಬೇಡುವ| ಪೊಡವಿಹಾರುವನೇನೋ|ನೀನು.....2 ಕೊರಳಗೊಯ್ಕನೋ ವನಚಾರಕನೋ| ತುರುಗಳ ಕಾಯ್ವವನೋ| ಮರುಳು ಮಾಡಿ ನಾರಿಯರ ಠಕ್ಕಿಸಿ| ದುರುಳವಾಜಿಯನೇರಿಪನೋ|ನೀನು....3 ಎಂದಮಾನಿನಿ ನುಡಿ ಬೆಡುಗವ ಕೇಳಿ| ನಿಂದಹರುಷ ತಾಳಿ| ಬಂದೆನಾ ಗುರುಮಹಿಪತಿ ಪ್ರಭು ಎನಲೋಡಿ| ಬಂದೆರಗಿದಳೀಗ|ನೀನು...... 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಂದವನಾವನೋ ನಾ ಕಾಣೆ ಇಂದೀವರ ನೇತ್ರಾ ಸುಗಾತ್ರಾ ಪ ಮೆಲ್ಲಡಿ ಇಡುವ ಮರೆಯಲಿ ನಿಲುವಾ ಕಾಂತಿಯ ಚೆಲ್ಲುವ ನೋಡಲು ನಗುವಾ ಅ.ಪ ಆಕಳ ಕರೆವಾಗ ಸಾಕೆಂದೆನುವಾ ಆಕಳ ಬೆಣ್ಣೆಯೇ ಬೇಕೆನುತಿರುವಾ ಏಕೆಲೊ ಮರೆಯಾಗಿ ನಿಂತಿಹೆ ಪೇಳೆನೆ ನೀ ಕೊಡೆ ನಾ ಬಿಡೆ ಕೇಳೆಂಬಾ 1 ಮೊಸರನು ಕಡೆವಾಗ ಹಸಿವೆಂದೆನುವ ಬಿಸಿಯನ್ನವನಿಡೆ ಹಸುವಿಗೆ ಕೊಡುವಾ ನುಸುಳಿ ಬಂದು ಕೆನೆಮೊಸರನೆ ಮೆಲ್ಲುವ ಕಿಸಿಕಿಸಿ ನಗುತಲಿ ಓಡುವನಾರೋ 2 ಕಣ್ಣು ಮುಚ್ಚಲು ಬೆಣ್ಣೆಯ ಕಳುವ ಹೆಣ್ಣುಗಳೆಡೆಯಲಿ ನಗುತಲಿ ಹುದುಗುವ ಚಿಣ್ಣನು ಮಾಂಗಿರಿರಂಗನೇ ಯೇನೋ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಂದಿಸುವೆನು ರಘುವರನಾ ಸುರವಂದಿತ ಚರಣಾಂಬುಜನ ಪ ತಂದೆ ಮಾತಿಗೆ ವನಕ್ಹೋಗಿ ಬಂದವನಾಸುಂದರ ಸಹ ಸೀತೆಯಿಂದ ಅನುಜನಾ ಅ.ಪ ಚಾಪ ಭಂಜಕನಾ 1 ವಾರಿಧಿ ಸೇತು ಬಂಧಕನಾ ಸೀತಾ -ಚೋರನ ಶಿರವಳಿದವನಾಚಾರು ಸಿಂಹಾಸನವೇರುತ ಸರಯು -ತೀರದ ಅಯೋಧ್ಯಾ ವಿಹಾರ ಸುಂದರನಾ2 ಕೇಸರಿ ಸುತಗೆ ತನುಧನಮಣಿಆಶ್ರಯವನು ಕೊಟ್ಟವನಾಕೋಸಲ ಜನರಿಗೆ ಮೋಕ್ಷವವಿತ್ತವನಾಇಂದಿರೇಶ ಸುಖಾತ್ಮ ನಿರ್ದೋಷ ಪುರುಷನಾ 3
--------------
ಇಂದಿರೇಶರು
ಸಂತೆಯ ನೋಡಲು ಬಂದವನಾ | ಭ್ರಾಂತತನವ ನೋಡಿ ಮಾನವನಾ ಪ ಪರಿ ವಾಸನೆಕಾರರು ವಿಷಯದ | ಸರಕಿನ ಚಟ್ಟೆಯ ರಂಗಡಿಯು | ದುರುಳತ ನವಗುಣ ಭೂಸಿನ ರಾಶಿಯು | ನೆರೆದಿಹ ಸಂದಣಿ ಜನದೊಳಗ 1 ಇಂತಿಹ ನರದೇಹ ಪ್ಯಾಟೆಯ ಸಡಗರ | ಪ್ರಾಂತವ ಕಾಣದೆ ಮರುಳಾಗಿ | ನಿಂತಲ್ಲಿ ನಿಲ್ಲದೆ ನೋಡುತ ತಿರುಗುತ | ಕಂಥಿಯ ಕಳೆದನು ಹೆಗಲಿನಾ 2 ಗುರುಮಹೀಪತಿ ಸ್ವಾಮಿಯ ಗಡಚಿನ | ಶರಣಿರವಳಿಹುಗದೆವೆ ಮರೆದು | ಧರಿಯೊಳು ಉಣಲಿಲ್ಲ ಉಡಲಿಲ್ಲ ಬಂದಿವ | ಬರುದೆವೆ ಮುಮ್ಮಳಿ ಘಳಿಸಿದನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದೇವಿಯನೆತ್ತಿದನಾರೆಲಮ್ಮಾ ನಮ್ಮದೇವ ಸಿರಿಪತಿ ಕಾಣೆಲಮ್ಮಾದೇವಿ ನಮ್ಮ ದೇವರು ಬಂದರು ಕಾಣಮ್ಮ ಪ.ಕಣ್ಣೆವೆ ಇಕ್ಕದೆ ಮಾತಿಗೆ ಮನವಿಟ್ಟಸಣ್ಣದೊಡ್ಡನಾಹನಾರೆಲಮ್ಮಉನ್ಮತ್ತಖಳಸೋಮಕನವೈರಿಹೊಸ ಹೊನ್ನಬಣ್ಣದ ಮಚ್ಛವತಾರಿ ಅಲ್ಲೇನಮ್ಮ 1ಸಾರಿಸಾರಿಗೆ ಉಯ್ಯಾಲಿಡುತಲಿ ಮುಸುಡನುತೋರಿ ಜಾರಿದವನಾರೆಲಮ್ಮಆರಿಗು ಮೀರಿದಮಂದರಬೆನ್ನಲಿಭಾರಾಂತ ಶ್ರೀಕೂರ್ಮನಲ್ಲೇನಮ್ಮ 2ಘರ್ಘರಿಸುತ ಕಾಲಕೆದರಿ ಜಗದಗಲಭೋರ್ಗರೆವುತಲಿಹನಾರೆಲಮ್ಮದುರ್ಘಟ ದೈತ್ಯನ್ನ ದಂಷ್ಟ್ರದಿ ಚುಚ್ಚಿದನಘ್ರ್ಯವರಾಹದೇವನಲ್ಲೇನಮ್ಮ3ಕೂಗುತÀ ಕೊಲ್ಲುತ ಕಿಡಿಯನುಗುಳುತಲಗುಬಗೆದವನಾರೆಲಮ್ಮನೀಗಿದುಷ್ಟನ ಶರಣಾಗತ ಶಿಶುರಕ್ಷಯೋಗಿನರಹರಿ ಅಲ್ಲೇನಮ್ಮ4ಭೂಮಿ ಆಕಾಶಕೆ ಒಬ್ಬನೆ ಹಬ್ಬುತಸೀಮೆಯ ಮುಚ್ಚುವನಾರೆಲಮ್ಮಹೇಮಹೋಮದಿಮತ್ತಬಲಿಯನೊತ್ತ್ಯಾಳಿದಸಾಮದ ವಾಮನನಲ್ಲೇನಮ್ಮ 5ಸಾವಿರ ಕೈಯ್ಯವನಳಿದು ಕಡಿದು ತಾನೆಹೇವದಟ್ಟಿವನಾರೆಲಮ್ಮಈ ವಸುಧೆಯ ಭಾರವಿಳುಹಿದ ವೀರ ಭೂದೇವಕುಲದ ರಾಮನಲ್ಲೇನಮ್ಮ 6ಕರಡಿಕೋಡಗಕೊಂಡು ಕಡಲೊಳಗಾಡಿದಹುರುಡಿಲ್ಲದ ಬಿಲ್ಲನುಳ್ಳನಾರೆಲಮ್ಮಸರಕುಮಾಡಿ ರಕ್ಕಸರನೊದ್ದಸಮೀರಜವರದ ಸೀತಾರಾಮ ಅಲ್ಲೇನಮ್ಮ 7ಬಂಡಿ ಕುದುರಿ ಗೂಳಿ ಹಕ್ಕಿ ಸೀಳಿ ಗೊಲ್ಲಹೆಂಡಿರೊಳಾಡುವನಾರೆಲಮ್ಮಪಾಂಡವಪಾಲ ರುಕ್ಮಿಣಿ ವಿಜಯನುಬಂಡಿಕಾರ ಕೃಷ್ಣನಲ್ಲೇನಮ್ಮ 8ಉಡುಗೆಯನುಡದಂತರಾಟದಿ ಕದ ತಪ? ವಿದ್ದಮಡದೇರ ಕೆಡಿಸಿದನಾರೆಲಮ್ಮಮೃಡಸುರರುಬ್ಬಸಬಡಿಸುವ ಬೌದ್ಧರಕೆಡಿಪ ಮೋಹನ ಬುದ್ಧನಲ್ಲೇನಮ್ಮ 9ವಾಜಿಯನೇರಿ ಠೇವಿಡಿದು ಗಡಬಡಿಸಿಮೂಜಗ ಸುತ್ತುವನಾರೆಲಮ್ಮಮಾಜಿದ ಪುಣ್ಯವನೆತ್ತಿ ಕಲಿಯ ಕೊಂದಸೋಜಿಗದ ಕಲ್ಕಿ ಅಲ್ಲೇನಮ್ಮ 10ಮುಗ್ಧರಾಗಲಿ ಪ್ರೌಢ ಬಂಟರಾಗಲಿ ಕರೆದರೆದ್ದೋಡಿ ಬಂದವನಾರೆಲಮ್ಮಸಿದ್ಧಪುರುಷ ಪ್ರಸನ್ವೆಂಕಟಪತಿಸಾಧಿಸಿ ಪಾಡಿದಲ್ಲಿದ್ದನಮ್ಮ 11
--------------
ಪ್ರಸನ್ನವೆಂಕಟದಾಸರು
ವಾದಿರಾಜಾ ಪಾಲಿಸು ಎನ್ನ ಪಮೋದಪರಾಗವಸಾದರನೀಡಿಅ.ಪಪಾದವ ನಂಬಿದೆ ನೀ ದಯದಲಿ 1ವಾರ್ತದಿ ಬಂದವನಾರ್ತಿಯ ಬಿಡಿಸೋ 2ಬಲ್ಲಿದನೆಂಬೊದು ಬಲ್ಲೆ ಬಲ್ಲೆನು 3ಮರ್ತರೆ ಅನ್ಯ ಸಮರ್ಥರ ಕಾಣೆ 4ಕಾಮಿತನೀಡೈ ಸುರತರುವೇ 5ವೀಕ್ಷಿಸಿ ಮನದಾಪೇಕ್ಷವ ಸಲಿಸೋ 6ನೀತ ಗುರುಜಗನ್ನಾಥವಿಠಲ ದೂತ 7
--------------
ಗುರುಜಗನ್ನಾಥದಾಸರು