ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆನಂದಾದ್ರಿವಿಠಲ | ನೀನೇ ಪೊರೆ ಇವಳಾ ಪ ಜ್ಞಾನಿಜನವಂದ್ಯ ಹರಿ | ಶ್ರೀನಿವಾಸಾಖ್ಯ ಅ.ಪ. ತರಳೆ ಬಹುನೊಂದಿಹಳೊ | ಕರುಣಾ ಮಾಳ್ಪುದು ದೇವದುರಿತವನ ದಾವಾಗ್ನಿ | ಶರಣಜನರೊಡೆಯಾ | ಮರುತ ಮತದಲ್ಲಿರುತೆ | ನೆರೆ ನಂಬಿಬಂದಿಹಳೊಕರುಣದಿಂ ಕೈಗೊಟ್ಟು | ಪರಿಪಾಲಿಸಿವಳಾ 1 ಅನ್ಯದೇವರ ಪೂಜೆ | ಇನ್ನಾದರು ಬಿಡಿಸಿನನ್ನೆಯಿಂ ನಿನ್ನನ್ನೆ | ಪೂಜಿಸುವ ಭಾಗ್ಯಾಇನ್ನಾದರೂ ಕೊಟ್ಟು | ಪನ್ನಂಗಶಯನಹರಿಮನ್ನಿಸೊ ಇವಳ ಹರಿ | ಅನ್ನಂತ ಮಹಿಮಾ 2 ಸಾಧುಜನ ಸದ್ವಂದ್ಯ | ಸತ್ಸಂಗವನೆ ಕೊಟ್ಟುಮಾಧವನೆ ನೀನಾಗಿ | ಕಾದುಕೊ ಹರಿಯೇಭೇಧಮತ ತತ್ವಗಳ | ಬೋಧಿಸುತ ಇವಳೀಗೆಸಾಧನವ ಗೈಸುವುದೋ | ಬಾದರಾಯಣನೇ 3 ಪತಿಸುತರು ಹಿತರಲ್ಲಿ | ವ್ಯಾಪ್ತ ನೀನೆಂಬಂಥಾಮತಿಯನೇ ಕೊಟ್ಟು ಸ | ದ್ಗತಿಯನೆ ಕರುಣಿಸೋ |ಸತತ ನಿನ್ನಯ ನಾಮ | ರತಿಯನೆ ಕರುಣಿಸುತಮತಿಮತಾಂವರರಂಘ್ರಿ | ಭಕ್ತಿಯನೆ ಈಯೋ 4 ಭಾವಜನಯ್ಯ ಎನೆಓವಿ ಬಿನ್ನವಿಪೆ ಹರಿ | ಸಲಿಸುವುದು ಇವನೇವೆಗುರ್ವಂತ ರಾತ್ಮಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಪ್ರಸನ್ನ ಶ್ರೀನಿವಾಸ ಕಲ್ಯಾಣ ಜಯ ಜಯ ಜಯ ಶ್ರೀನಿವಾಸ ಕೃತಿ ಮಾಯಾ ಶ್ರೀಶ ಭಯಬಂಧಮೋಚಕ ಜೀಯ ಆಹ ಸುಂದರ ಚಿನ್ಮಯಾನಂದ ಜ್ಞಾನಾತ್ಮನೆ ಮಂದಜಭವ ಸುರವೃಂದ ಸಂಸೇವ್ಯ ಜಯ ಪ ಸುರಸರಿತ ತೀರದಿಂದ ಸುರಮುನಿ ಭೃಗು ಬಂದು ನಿನ್ನ ಪರಸಮರಹಿತನೆಂದರಿತ ಆಹ ಸಿರಿಯು ನಿನ ಭಾವವನುಸರಿಸಿ ಬೇಗ ಕರವೀರ ಪುರ ಪೋಗೆ ಗಿರಿಪುತ್ತ ಪೊಕ್ಕೆಯೊ 1 ಮೇರುಸುತನೆ ಹಾಟಕಾದ್ರಿ ವೀರ ಭಕುತ ವೃಷಭಾದ್ರಿ ಸರೀಸೃಪಾವರಿಸಿದ ಸೌರಭ್ಯಗಿರಿಯಿದು ಪರವೇಂಕಟಾದ್ರಿಯು ಹರಿತು ವಿಪ್ರನ ಪಾಪ 2 ನೀನಿದ್ದ ಸ್ಥಳವೇ ವೈಕುಂಠ ನಿನಗಾರು ಸಮರುಂಟೆ ಶ್ರೀಶ ದೀನ ಸುಜನರಿಗೆ ನಂಟ ಆಹ ಧೇನು ಪಾಲ್ಗರೆಯಲು ಪಾಲಕ ಹೊಡೆಯಲು ದೀನರಕ್ಷಕ ನೀನು ಶಿರಸಿತ್ತು ಪೊರೆದೆಯೊ 3 ಏಳು 2ತಾಳದ ಉದ್ದ ರಕ್ತ ತಾಳಲಾರದೆ ಬಿದ್ದ ಗೋಪ ಚೋಳರಾಯಗೆ ಕೊಟ್ಟೆ ಶಾಪ ಆಹ ಪೇಳಬಲ್ಲೆನೆ ನಿನ್ನ ಅತಿಶಯ ಲೀಲೆಯ ಶೀಲ ಸುರರ ಗುರು ಚಿಕಿತ್ಸೆಯನೈದಿದೆ 4 ಸ್ವಗತ ಭೇದವಿಲ್ಲದಂಥ ಸ್ವಚ್ಛ ಚಿತ್ಸುಖಮಯನಂತ ಸ್ವಾನಿರ್ವಾಹಕ ವಿಶೇಷ ಆಹ ಶ್ವೇತವರಾಹನ ಸಂವಾದದಿಂದಲಿ ಸ್ವೀಕರಿಸಿದೀ ಸ್ಥಳ ಮೊದಲು ಪೂಜೆಯ ಕೊಟ್ಟು 5 ಸರಸ್ವತೀ ಸ್ವಾಮಿ ಪುಷ್ಕರಣಿ ಸುರಮುನಿನರರಿಗೆ ಸ್ನಾನ ಪರಸುಖಮಾರ್ಗ ಸೋಪಾನ ಆಹ ಸುರತಟಿನ್ಯಾದಿ ಸುತೀರ್ಥಗಳೆಲ್ಲವು ಸರಿತವಾಗಿರುತವೆ ಈ ಸ್ವಾಮಿ ತೀರ್ಥದಿ 6 ಆದಿಕಾರಣ ನಿನ್ನ 3ಲೀಲಾ ಮೋದಸಂಭ್ರಮವನ್ನು ನೋಡೆ ಕಾದುಕೊಂಡಿಹರು ಕೋವಿದರು ಆಹ ಸಾಧು ಸಂಭಾವಿತ ಬಕುಳಾದೇವಿಯುಗೈದ ನಿತ್ಯ ಸಂತೃಪ್ತ 7 ಮಂಗಳ ಚಿನ್ಮಯ ರಂಗಾ - ನಂಗನಯ್ಯನೆ ಮೋಹನಾಂಗ ತುಂಗ ಮಹಿಮನೆ ಶುಭಾಂಗ ಆಹ ಬಂಗಾರ ಕುದುರೆ ಮೇಲಂಗನೇರಲಿ 4ಬಂದ ಶೃಂಗಾರವೇನೆಂಬೆ ಎಂದಿಗೂ ಸ್ವರಮಣ8 ತೋಂಡಮಾನ ರಾಯನಣ್ಣ ಚಂಡಭೂಪನು ಆಕಾಶ ಕಂಡನು ಕಮಲದೊಳ್ ಶಿಶುವ ಆಹ ಅಖಿಳ ಕೋಟಿ ಅಸಮ ಈ ಶಿಶುವನ್ನು ಹೆಂಡತಿ ಧರಣಿಯು ಕೊಂಡಳು ಮಗಳಾಗಿ 9 ಮೂಲೇಶ ನಿನ್ನಯ ರಾಣಿ ಮೂಲಪ್ರಕೃತಿ ಗುಣಮಾನಿ ಭವ ತಾಯಿ ಆಹ ಶೀಲ ಭೂಪಾಲನ ಸುತೆ ಪದ್ಮಾವತಿಯೆಂದು 5 ಬಾಲೇರ ಸಹ ಪುಷ್ಪವನಕೆ ಬಂದಿಹಳೊ 10 ಮಹಿದೇವಿ ಕಮಲವಾಸಿನಿಯು ಬಹಿನೋಟಕ್ಕೆ ರಾಜಸುತೆಯು ಬಹು ಚಿತ್ರ ಪುಷ್ಪವ ಕೊಯ್ಯೆ ಆಹ ಮಹತಿಪಾಣಿಯು ಬಹು ವಯೋರೂಪದಲಿ ಬಂದು ಅಹಿತಲ್ಪ ಶ್ರೀಶನೆ ಪತಿಯೆಂದು ನುಡಿದ 11 ಹಾಟಕಗಿರಿಯಿಂದ ನೀನು ಬೇಟೆಯಾಡುವ ರೂಪ ತಾಳಿ ಘೋಟಕವೇರಿ ಸಂಭ್ರಮದಿ ಆಹ ಆಟವಾಡುವ ಬಾಲೆ ಬಳಿಯಲ್ಲಿ ಬಂದು ನೀ ನಾಟಕವಾಡಿದ್ದು ಪಾಡಲರಿಯೆನೊ 12 ನಿತ್ಯನಿರ್ಮಲ ಅವಿಕಾರ ಮತ್ರ್ಯರವೋಲು ನೀ 1ನಟಿಸೋ ಕೃತ್ಯಗಳರಿವರು ಯಾರೋ ಆಹ ಭೃತ್ಯವತ್ಸಲ ನೀನು ಬಕುಳೆಯ ಬಳಿ ಪೇಳಿ ಸಂತ್ಯಸಂಕಲ್ಪ ನಿನ ಸಂದೇಶ ಕಳುಹಿದೆ 13 ಪೊಂದಿದೆ ಫುಲ್ಕಸೀ ರೂಪ ಮಂಧಜಭವ ಶಿಶುವಾಗೆ ನಂದಿನಿಧರ ಯಷ್ಟಿಯಾದ ಆಹ ಮಂದಜಭವಾಂಡ ಗುಣಗುಲ್ಮ ಮಾಡಿ ನೀ ಕಂಧರದಲಿ ಗುಂಜ ಕಂಬುಸರವ ತೊಟ್ಟೆ 14 ನಾರಾಯಣಪುರಿಯಲ್ಲಿ ಮಾರನಯ್ಯನೆ ನಿನ್ನ ಸುಗುಣ ವಾರಿಧಿ ಪೊಕ್ಕಳು ಪದುಮೆ ಆಹ ಪುರಿಪ ಧರಣೀದೇವೀ ಪುತ್ರಿಗೆ ಜ್ವರವೆಂದು ಪರಿಪರಿ ಪರಿಹಾರ ಪರದು ನೋಡಿದರಾಗ 15 ಶುದ್ಧ ಸುಂದರ ಸುಖಕಾಯ ವೃದ್ಧ ಫುಲ್ಕಸೀ ವೇಷಧಾರಿ ಬದ್ಧ ಶೋಕರ ಬಳಿ ಪೋದೆ ಆಹ ಇದ್ದ ಸುದ್ದಿಯ ಅಬದ್ಧವಿಲ್ಲದೆ ಪೇಳಿ ಮುದ್ದು ಪದ್ಮೆಗೆ ಅನಿರುದ್ಧನೆ ಪತಿಯೆಂದೆ 16 ವಹಿಸಿ ನಿನ ಶಾಸನ ಬಕುಳ ಮಹದೇವನಾಲಯದಿಂದ ಮಹಿಳೆಯರ ಸಹ ಕೂಡಿ ಆಹ ಮಹಿದೇವಿಯಲಿ ಪೋಗಿ ವಿಹಿತ ಮಾತುಗಳಾಡಿ ಬಹು ಶುಭವಾರ್ತೆಯ ತಂದು ಪೇಳಿದಳೊ 17 ಶುಕಮುನಿ ಕರಪ್ರದವಾದ ಆಕಾಶ ನೃಪ ಲಗ್ನಪತ್ರ ಸ್ವೀಕರಿಸಿದೆ ಬಹು ಹಿತದಿ ಆಹ ವಾಗೀಶ ಶಶಿಧರ ನಾಗೇಶ ಸೌಪರ್ಣ ನಾಕೀಶ ಮೊದಲಾದ ಸುರರನು ಕರೆದೆ 18 ಶಿಷ್ಟ ಸನ್ಮುನಿಜನ ಕೂಟ ತುಷ್ಟ ಸುಮನಸ ಸಮೂಹ ಶ್ರೇಷ್ಠಸುಗಂಧಿ ಆಗಮನ ಆಹ ಸೃಷ್ಟ್ಯಾದಿಕರ್ತೆ ನಿನ ಸುಮಹೋತ್ಸವ ನೋಡಿ ಇಷ್ಟಾರ್ಥ ಪಡೆವರು ಎಷ್ಟೆಂಬೆ ವಿಭುವೆ 19 ಮಾಯ ಜಯೇಶ ಶ್ರೀವತ್ಸ ಛಾಯೇಶಗುಪಾಯ ಪೇಳಿ ತೋಯಜೆಯನು ಕರೆತಂದೆ ಆಹ ಸಿರಿ ಕೃತಿ ಕಾಂತಿ ನಿನ್ನಿಂದ ವಿಯೋಗರಹಿತರು ಎಂದೂ ಎಲ್ಲೆಲ್ಲೂ 20 ಬೃಹದಣುವಿಗೆ ಸತ್ತಾಪ್ರದನೆ ಸುಹೃದ ಸಂತೃಪ್ತ ಮುಖಾಬ್ಧೇ ದೃಢವ್ರತ ಶುಕಮುನಿಗೊಲಿದೆ ಆಹ ಬೃಹತೀ ಫಲಾನ್ನವನುಂಡು ಫೂತ್ಕಾರದಿ ಗೃಹ ಬಹಿರದಿ ಇದ್ದ ಜನರ ತೃಪ್ತಿಸಿದೆ 21 ಸುಜನರಿಗಾನಂದ ದಾತ ದ್ವಿಜರೂಢ ಜಗದೀಶ ನೀನು ಅಜಸುರರೊಡಗೂಡಿ ಬರೆ ಆಹ ಅಜಿತ ಚಿನ್ಮಯ ನಿನ್ನ ಆಕಾರ ನೃಪ ನೋಡಿ ನಿಜವಾಗಿ ಕೃತಕೃತ್ಯ ಧನ್ಯ ತಾನೆಂದ 22 ಅಜರ ಮಂದಿರ ಪೋಲ್ವ ಮನೆಯು ಪ್ರಜುವಲಿಸುವ ದಿವ್ಯ ಸಭೆಯು ನಿಜಭಕ್ತ ಪುರುಜನ ಗುಂಪು ಆಹ ದ್ವಿಜರ ವೇದಗಾನ ವಾದ್ಯ ಘೋಷಿಸಲಾಗ ನಿಜಸತಿ ಪದ್ಮೆಗೆ ಮಾಂಗಲ್ಯ ಧರಿಸಿದೆ 23 ಸುರಮುನಿಜನ ಮೂರು ವಿಧಕೆ ತರತಮ ಯೋಗ್ಯತೆ ಆರಿತು ಪರಿಪರಿ ಸಾಧನವಿತ್ತೆ ಆಹ ನೀರರುಹಜಾಂಡವು ನಿನ್ನಾಧೀನವು ಸಿರಿಭೂದೊರೆಯೇ ಶ್ರೀನಿವಾಸ ದಯಾನಿಧೆ 24 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ಚನ್ನಮಾರುತ ಮನೋಗತನೆ ಆಹ ವನರುಜಹಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 25
--------------
ಪ್ರಸನ್ನ ಶ್ರೀನಿವಾಸದಾಸರು
ಲವಕುಶರ ಹಾಡು ಹರಿಹರ ಬ್ರಹ್ಮ ತ್ರಿಮೂರ್ತಿಗಳ ಬಲಗೊಂಡು *ಗುರುಹಿರಿಯರ ಪಾದಕ್ಕೆರಗೀ | ಅಜನ ಪಟ್ಟದ ಶ್ರೀ ಸರಸ್ವತಿಯನೆ ಬಲಗೊಂಡು ತೊಡಗುವೆ ರಾಮರ ಕಥೆಯಾ 1 ಬಣ್ಣದ ಅಕ್ಷತೆ ಕಣ್ಣು ತುಂಬೆ ಪುಷ್ಪ ಸು ವರ್ಣ ದಕ್ಷಿಣೆ ತಾಂಬೂಲಾ | ಉಮ್ಮಿಯ ಪುತ್ರ ಗಣೇಶಗೆ ಅರ್ಪಿಸಿ ವರ್ಣಿಪೆ ಲವಕುಶರ ಕಥೆಯಾ 2 ಕುಲದ ಸ್ವಾಮಿ ಕದ್ರಿ ನರಸಿಂಹನ ಬಲಗೊಂಡು | ಗುರು ಮಧ್ವರಾಯರ ನೆನೆದು | ಮನದಲ್ಲಿ ವಿಷ್ಣು ದೇವತೆಗಳ ಬಲಗೊಂಡು ತೊಡಗುವೆ ರಾಮರ ಕಥೆಯಾ 3 ವೇದಪಾರಾಯಣ ಅಂತ್ಯದ ಪೀಠಕ ಮಾಧವ ಹರಿ ಸುಗೋತ್ರ | ವೇದ ಮೂರುತಿ ಕೊಂಡಪ್ಪನ ಪುತ್ರಿಕೆಗೆ (?) ಹೇಳಿದಳುಹರಿನಾಮ ಕಥೆಯಾ 4 ಯಗ್ನ ಸಂತತಿಯೂ ಪೀಠಕವೂ | ಅಜ್ಞಾನಿ ಮೂಢಜೀವರಿಗೆ 5 ಹರುವುಳ್ಳ ನಿರಯಾಗಿಗಳೂ | ಹರವುಳ್ಳ ಕೈ(?)ಮುನಿವಳ್ಳೇರು ಜಾಣರು ತಿಳಿವೂದು ಅರ್ಥಸಂದೇಶ 6 ನಾಡನ ಕಥೆಯಲ್ಲ ಬೇಡುಂಬ ಪದನಲ್ಲ ನಾಡೊಳಗೆ ಹರಿನಾಮ ಕೇಳಿದ ಜನರಿಗೆ | ವಿಲ್ಲವಾಗುವುದು 7 ಪ್ರಚಂಡರು ರಾಮಲಕ್ಷ್ಮಣರು | ಇತ್ತಬೇಟೆಯನಾಡುವ ಕ್ರಮಗಳ ಚಂದವಿನ್ನೆಂತು ವರ್ಣಿಸಲೆ 8 ತಾಂಬೂಲ ಶ್ರೀಮೊಗದಿಂದೆ | ಇಂದುವದನೆಯ ಬಿಗಿದಪ್ಪಿ ಮುದ್ದಾಡಿದ ಇಂದುವದನೆ ಗರ್ಭವೆಂದ 9 ನಳಿನನಾಭನು ತನ್ನ ಲಲನೇಯ ಮುಖನೋಡಿ ಲಲನೆ ನಿನ್ನ ಪ್ರೇಮವೇನೆ | ಮುನಿಯು ಆಮುನಿಗಳು ಕೂಡಿದ ನಂತ್ರ ವನಭೋಜನ ತನಗೆಂದ್ಲೂ 10 ಹಲವು ಕಾಲವು ಸೀತೆ ಅಸುರರ ವಡನಾಡಿ ನೆನದಳು ಋಷಿಗಳಾಶ್ರಮವಾ | ಹಸನವಲ್ಲವು ಸೀತೆ ಇನ್ನು ನೀನುಳಿವದು ಋಷಿಗಳಾಶ್ರಮಕೆ ಹೋಗೆಂದಾ 11 ಅಯೋಧ್ಯಾಪುರದ ವಾನರರೆಲ್ಲಾ ಬಿಟ್ಟು ಕೈಹಿಡಿದ ಪುರುಷನ ಬಿಟ್ಟು | ನೆನದಾಳು ಋಷಿಗಳಾಶ್ರಮವ 12 ಅಂದು ಶ್ರೀರಾಮರು ಬೇಟೆಗ್ಹೋದೇವೆಂದು ಇಂದು ಡಂಗುರವ ಸಾರಿದರೂ | ಒಂದು ಗಳಿಗೆ ಮುಹೂರ್ತತಡೆಯಲಾಗದು ಎಂದು ಮಂದಿ ಮಕ್ಕಳ ಕರಸಿದರೂ 13 ಬಂದರು ಮಂತ್ರಿ ಮಾನ್ಯರು ಪ್ರಹಸ್ತರು ಬಂದರು ಪ್ರಧಾನೇರು | ಬಂದರು ರವಿಗುರಿನವಿಗುರಿಕಾರರು (?) ಬಂದರು ವಾಲಗದೋರೊಪ್ಪಿದರು 14 ಆಟಪಾಟದೋರು ನೋಟಕ್ಕೆ ದಾರಾರು ಸೂತ್ರದವರು ಸುವ್ವಿಯವರು | ಪಾಟಕ್ಕೆ ದಾರಾರು ಪೊಗಳುವ ಭಂಟರು ರಘು ನಾಥನೋಲಗದಲೊಪ್ಪಿದರೂ 15 ಹೊನ್ನು ಹಲಗೆಯವರು ಬೆನ್ನಬತ್ತಲೆಯವರು ಚಿನ್ನಬಿನ್ನಾಣನಾಯಕರೂ | ಚೆನ್ನಿಗರಾಮರ ಪೊಗಳುವ ಭಂಟರು ಬಿನ್ನಾಣದಿಂದೊಪ್ಪುತಿಹರೂ 16 ಪಟ್ಟಾವಳಿ ಹೊಸಧೋತರವು ಇಟ್ಟರು ಆಭರಣವನ್ನೂ | ಮಕರಕುಂಡಲ ಕಿರೀಟವೂ ಇಟ್ಟರು ನೊಸಲ ಕಸ್ತುರಿಯಾ 17 ಹಾರಮಾಣಿಕನಿಟ್ಟು ಕಾಲುಪೆಂಡೆಯನಿಟ್ಟು ನ್ಯಾವಳದ ಉಡುದಾರನಿಟ್ಟು ಸೂರ್ಯನ ಕುಲದ ಕುಮಾರರು ನಾಲ್ವರು ಏರಿದರು ಹೊನ್ನ ರಥವಾ 18 ವಾಯುವೇಗ ಮನೋವೇಗವೆಂಬೋ ರಥ ಏರಿದರೆ ರಾಮಲಕ್ಷ್ಮಣರೂ | ಸೂರ್ಯ ತಾನೆ ರಥವ ನಡೆಸೆ ಕೂಡ ಬೇಟೆಗೆ ತೆರಳಿದರು 19 ಅತ್ತಿ ಆಲದ ಮರ ಸುತ್ತ ಹೆದ್ದುಮ್ಮರಿ ಉತ್ತತ್ತಿ ಬೆಳಲು ದಾಳಿಂಬ ಉತ್ತಮ ಅಶ್ವತ್ಥ ಇಪ್ಪಿಯ ವನಗಳು ವಿಸ್ತರವನವೊಪ್ಪುತಿಹವೂ 20 ನಾರಂಗ ಬೆರಸಿದ ಕಿತ್ತಳಿ ಹರಿಸಿಣದ ತೋಪು ಎಲಿತ್ವಾಟ ಅರಸುಮಕ್ಕಳು ರಾಮಲಕ್ಷ್ಮಣರೆಲ್ಲರು ಬೆರಸಿ ಬೇಟೆಯ ನಾಡುತಿಹರೂ 21 ಯಾರಾಡಿಗಿಡಗಳು ಕ್ಯಾದೀಗಿವನಗಳು ನಾಗಸಂಪಿಗೆಯ ತೋಪುಗಳು | ಜೋಡೀಲಿ ಭರತ ಶತ್ರುಘ್ನರೆಲ್ಲರು ಕಾಲಾಳು ಬೇಟೆನಾಡಿದರೂ 22 ಉದ್ದಂಡ ಕೇಕಾಪಕ್ಷಿ ಚಂದಾದ ಬಕನ ಪಕ್ಷಿಗಳೂ | ಅಂದಾದ ಆಲಿವಾಣ ಆಲಹಕ್ಕಿಯು ರಾಮ ಚಂದ್ರನು ಬೇಟೆಯಾಡಿದನು 23 ಬೇಟೆನಾಡಿ ಬಂದು ನಿಂತಾರು ನೆರಳಲ್ಲಿ ಒಂದುಗಳಿಗೆ ಶ್ರಮವ ಕಳೆದು ನಂದನವನದಲ್ಲಿ ತನಿಹಣ್ಣು ಮೆಲುವೋರು ಗಂಗೆಯ ಉದಕ ಕುಡಿಯುವೋರು 24 ನಳಿನನಾಭನು ತಾನು ಬಳಲಿ ಬೇಟೆಯನಾಡಿ ನೆರಳಲ್ಲಿ ತುರಗ ಮೇಯಿಸಿದ ಕಿರಿಯಲಕ್ಷ್ಮಣ ದೇವ ತೊಡೆಯನ್ನೆ ಕೊಡು ಎಂದು ಮಲಗೀದ ಒಂದು ನಿಮಿಷವನೂ 25 ಮುಂದಿನ ಆಗೆಂತ್ರವ(?) ಕಂಡನು ಕನಸಿನಲಿ ರಾಮ ಕಂಗೆಟ್ಟು ಮೈಮುರಿದೆದ್ದಾ | ಕಂದ ಲಕ್ಷ್ಮಣ ಕೇಳೊ ಇಂದೆನ್ನ ಸೊಪ್ನದಲಿ ಬಂದಿಹಳೊಬ್ಬ ತಾಟಕಿಯೂ 26 ಇಂದುವದನೆಮುಡಿ ಪಿಡಿದಳೆವೊ ದುಕಂಡೆ ತುಂಡರಾವಣ ಕುಯೋದು ಕಂಡೆ | ಇಂದು ನೀ ಸೀತೆಯ ಕರೆದೊಯಿದು ಕಾನನದಿ ದಿಂಜಾರಿಳಿಸೋದು ಕಂಡೆ 27 ಮುನ್ನ ಅರಿಯದೆ ನಾವು ಬಂದೆವೋ ಲಕ್ಷ್ಮಣ ಇನ್ನು ಸೀತೆಗೆ ಜಯವಿಲ್ಲಾ | ಅಂದು ಶ್ರೀರಾಮರಾ ಬೇಟೆ ಮೂಲಕದಿಂದೆ ಬಂದಾಳು ಮಾಯದ ಗರತಿ | 28 ಬಂದು ಅಯೋಧ್ಯಾಪುರದ ಬೀದಿಯವಳಗೆ ಚಂದದಿ ಕುಣಿದಾಡುತಿಹಳು | ಅಂದು ಶ್ರೀ ರಾಮರ ಅರಮನೆ ಬಾಗಿಲಿಗೆ ಚಂದುಳ್ಳ ದ್ವಾರಪಾಲಕರೂ 29 ಬಂದು ಅಸುರೆ ನಿನ್ನ ಬಿಡವಲ್ಲೆನೆಂದರೆ ಬಂದಡರಿದಳರಮನೆಗೆ ಕಂಡು ಜಾನಕಿ ತಾನು ಕರಸಿದಳಾಗಲೆ ಬಂದಳು ಮಾಯದ ಗರತಿ 30 ಬಂದು ಪಾದಕ್ಕೆರಗಿ ಕೈಮುಗಿದು ನಿಂತಳು ತಂದಳು ನಾಗ ಸಂಪಿಗೆಯಾ | ಅಂಗನೆ ಜಾನಕಿ ನೀಮುಡಿಯೆಂದು ಕೊಟ್ಟರೆ ಸಂದೇಹ ಬಟ್ಟಳಾ ಸೀತೆ 31 ಈನಾಡ ಗರತಿ ನೀನಲ್ಲ | ದಾರು ಬಂಧುಗಳುಂಟು ದಾರ ಬಳಿಗೆ ನೀ ಬಂದೀ 32 ಈರೇಳು ಲೋಕವ ಸುತ್ತಿ ತಿರುಗಿ ಬಂದೆ ನಾಗಲೋಕಕ್ಕೆ ಬಾಹೆನೆಂದು ನಾಗಲೋಕದಿಂದ ದೇವಲೋಕಕ್ಕೆ ಬಂದೆ ದೇವಿಗೆ ಕಾಣಿಕೆ ತಂದೇ 33 ಹೊನ್ನು ಹಣವನೀವೆ ಅನ್ನವಸ್ತ್ರವನೀವೆ ಇನ್ನು ನೀವಲಿದದ್ದು ಈವೆ | ಇನ್ನು ನೀವಲಿದದ್ದು ಚೆನ್ನಾಗಿ ಕೊಡುವೆನು ಬಿನ್ನವಿಸೆ ಗರತಿ ನೀ ಅಂದ್ಲೂ 34 ಹೊನ್ನು ಹಣವನೊಲ್ಲೆ ಅನ್ನವಸ್ತ್ರವನೊಲ್ಲೆ ನಿನ್ನ ಭಾಗ್ಯವು ನಾನೊಲ್ಲೆ | ಮುನ್ನಿನ ಅಸುರರೂಪ ಇನ್ನು ನೀಬರೆದರೆ ಹರಣ ಹೊರುವೆನು 35 ಮುನ್ನವನು ಕಂಡು ಕೇಳರಿಯ | ಪನ್ನಂಗಧರ ರಾಮ ಬಂದರೆ ಬೈದಾರು ಗಮನ ಮಾಡಂದ್ಲೂ36 ಅಂದರೆ ಸೀತೆ ತನ್ನಂಗಕ್ಕೆ ಬರಲೆಂದು ತಂದು ತೊಡೆದಳು ಭಸುಮವನು | ಅಂದೆನ್ನ ವನಕೆ ಪ್ರದಕ್ಷಿಣೆ ಬರುವಾಗ ಉಂಗುಷ್ಟವನು ಕಂಡುಬಲ್ಲೆ 37 ಉಂಗುಷ್ಟದಂದಕ್ಕೆ ಮುಂದೆ ಪಾದವ ಬರಿ ಹಿಂದೆ ಹಿಂಬುಡ ಮೊಣಕಾಲು | ಹೊಂದಿಸಿ ಬರೆ ಎಂದಳವಳು 38 ಚಂದಾದ ಕಾಗದ ಲೆಕ್ಕಣಿಕೆ ಪಿಡಿದು ತಂದು ಕೊಟ್ಟಳು ಸೀತೆ ಕೈಗೆ | ಒಂದು ಕಾಯಕೆ ಹತ್ತು ಸಿರಗಳ ಬರೆದಳು ಮುಂದೆರಡು ಪಾದವ ಬರೆದಳು 39 ಒಂದರ ಹಿಂದೊಂದು ವರ್ಣಿಸಿ ಬರೆದಳು ತಂದು ನಿಲಿಸಿದಳು ರಾವಣನಾ | ಚಂದವಾಯಿತು ದೇವಿ ವರವಕೊಡೆನುತಲಿ ಎಂದೆಂದಿಗೂ ಅಳಿಯದ್ಹಾಗೇ 40 ಅಳಿದು ಉಳಿಯದಿರು ಉಳಿದು ನೀ ಕೆಡದಿರು ಧರಿಯವಳಗೆ ಅಡಗದಿರು | ಕಿರಿಯ ಲಕ್ಷ್ಮಣದೇವ ಹೊಡೆದರೆ ಮಡಿ ಎಂದು ವರವ ಕೊಟ್ಟಳು ಸೀತೆ ಪಠಕೆ 41 ಮರೆ
--------------
ಹೆಳವನಕಟ್ಟೆ ಗಿರಿಯಮ್ಮ